ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಕೆಯ್ಯೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ

Posted by Vidyamaana on 2023-06-12 10:26:23 |

Share: | | | | |


ಕೆಯ್ಯೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪುತ್ತೂರು: ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದೇವೆ ನಮಗೊಂದು ಮೂರು ಸೆಂಟ್ಸ್ ಜಾಗ ಕೊಡಿ ಎಂದು ಅನೇಕ ಅರ್ಜಿಗಳು ಗ್ರಾಮೀಣ ಭಾಗದಿಂದ ಬಂದಿದ್ದು ಪ್ರತೀ ಗ್ರಾಮದಲ್ಲಿ ಎರಡರಿಂದ ಮೂರು ಎಕ್ರೆ ಜಾಗ ಗುರುತಿಸಿ ಅದನ್ನು ಮನೆ ಇಲ್ಲದ ಬಡವರಿಗೆ ಹಂಚಿಕೆ ಮಾಡುವಲ್ಲಿ ಕ್ರಮಕೈಗೊಳ್ಳಲಿದ್ದೇನೆ ಈ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಿದ್ದು ಈಗಾಗಲೇ ಜಾಗ ಹುಡಕುವಂತೆ ಕಂದಾಯ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.

ಕೆಯ್ಯೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಎ ಕೆ ಜಯರಾಮ ರೈ ಅವರ ನಿವಾಸದಲ್ಲಿ ಜೂ. ೧೨ ರಂದು ನಡೆದ ಕೆಯ್ಯೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಬೂತ್ ಮಟ್ಟದಲ್ಲಿ ಪಕ್ಷವನ್ನು ಕಟ್ಟುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡಬೇಕಿದೆ. ಅಭಿವೃದ್ದಿ ಕೆಲಸ ನಾನು ಮಾಡುತ್ತೇನೆ ಅದನ್ನು ಪ್ರಚಾರ ಮಾಡುವ ಮತ್ತು ಇದು ಕಾಂಗ್ರೆಸ್ ಸರಕಾರ ಮಾಡಿದ ಕೆಲಸ ಎಂಬುದನ್ನು ಗ್ರಾಮದ ಮನೆಮನೆಗೂ ತಲುಪಿಸುವ ಕೆಲಸವನ್ನು ಎಲ್ಲಾ ಕಾರ್ಯಕರ್ತರು ಮಾಡಬೇಕು. ಬಾಕಿ ಇರುವ ೯೪ ಸಿ, ಅಕ್ರಮಸಕ್ರಮ ಕಡತಗಳನ್ನು ಶೀಘ್ರ ವಿಲೇವಾರಿ ಮಾಡಲಿದ್ದು ಗ್ರಾಮಗಳಲ್ಲಿ ಅರ್ಜಿಗಳು ಬಾಕಿ ಇರುವ ಫಲಾನುಭವಿಗಳು ಸ್ಥಳೀಯ ವಲಯ ಮತ್ತು ಬೂತ್ ಅಧ್ಯಕ್ಷರನ್ನು ಸಂಪರ್ಕಿಸಿ ಅವರಲ್ಲಿ ಮಾಹಿತಿ ನೀಡಬೇಕು. ಪಕ್ಷ ಬೇದವಿಲ್ಲದೆ ಎಲ್ಲರ ಅರ್ಜಿಗಳನ್ನು ನಯಾ ಪೈಸೆ ಲಂಚವಿಲ್ಲದೆ ಮಾಡಿಕೊಡುತ್ತೇನೆ ಎಂದು ಹೇಳಿದ ಅವರು ವಲಯ ಮತ್ತು ಬೂತ್ ಅಧ್ಯಕ್ಷರ ಮೂಲಕವೇ ಫಲಾನುಭವಿಗಳು ಕಡತಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಸೂಚನೆಯನ್ನು ನೀಡಿದರು.

ಮುಂದಿನ ದಿನಗಳಲ್ಲಿ ಪ್ರತೀ ಬೂತ್ , ವಲಯ ಮಟ್ಟದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ. ಅಭಿವೃದ್ದಿ ಕೆಲಸಗಳು ಏನಾಗಬೇಕು ಎಂಬುದರ ಬಗ್ಗೆ ಮಾಹಿತಿ ನೀಡುವ ಕೆಲಸವನ್ನು ವಲಯಾಧ್ಯಕ್ಷರುಗಳು ಮಾಡಬೇಕು.ಕಟ್ಟಕಡೇಯ ಕಾರ್ಯಕರ್ತನಿಗೂ ಸರಕಾರದ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ನಾನು ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಜನರ ಶಾಸಕ. ಬೇರೆ ಪಕ್ಷದ ಕಾರ್ಯಕರ್ತರು ಅರ್ಜಿಯನ್ನು ನೀಡಿದರೂ ಅದನ್ನು ಸ್ವೀಕರಿಸಬೇಕು ಅಭಿವೃದ್ದಿಯಲ್ಲಿ ರಾಜಕೀಯ ಮಾಡಬಾರದು. ಅಭಿವೃದ್ದಿ ಮತ್ತು ಜನರ ಸೇವೆ ಮಾಡುವ ಮೂಲಕ ನಾವು ಪಕ್ಷವನ್ನು ಗಟ್ಟಿಗೊಳಿಸಬೇಕು. ಮುಂದಿನ ೨೫ ವರ್ಷಗಳ ಕಾಲ ಪುತ್ತೂರಿನಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರೇ ಇರುವಲ್ಲಿ ನಾವು ಈಗಲೇ ತಯಾರಿ ಮಾಡಬೇಕು ಎಂದು ಕಾರ್ಯಕರ್ತರಿಗೆ ಸೂಚನೆ ನೀಡಿದರು.

ಬೂತ್ , ವಲಯ ಅಧ್ಯಕ್ಷರಿಗೆ ಶಕ್ತಿ ಬಂದಿದೆ: ಹೇಮನಾಥ ಶೆಟ್ಟಿ

ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಮಾತನಾಡಿ ಪುತ್ತೂರಿನಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾದ ಮೇಲೆ ಇಲಾಖೆಗಳಲ್ಲಿ ಅಭೂತಪೂರ್ವ ಬದಲಾವಣೆ ಆರಂಭವಾಗಿದೆ. ಲಂಚವಿಲ್ಲದೆ ಅಧಿಕಾರಿಗಳು ಕೆಲಸ ಮಾಡಲು ಆರಂಭಿಸಿದ್ದಾರೆ ಇದು ಒಳ್ಳೆಯ ಬೆಳವಣಿಗೆಯಾಗಿದೆ. ಬೂತ್ ಮತ್ತು ವಲಯ ಅಧ್ಯಕ್ಷರಿಗೆ ಶಾಸಕರು ಶಕ್ತಿ ತುಂಬುವ ಕೆಲಸವನ್ನು ಶಾಸಕರು ಮಾಡುತ್ತಿದ್ದು ಇದರಿಂದ ಪಕ್ಷದ ಕಾರ್ಯಕರ್ತರಿಗೆ ಹುಮ್ಮಸ್ಸು ಬಂದಿದೆ. ಇದೇ ಕಾರ್ಯ ಎಂದೆಂದೂ ಮುಂದುವರೆಯಬೇಕಿದೆ ಎಂದು ಹೇಳಿದರು. ಅಭಿವೃದ್ದಿ ವಿಚಾರದಲ್ಲಿ ಒಲವು ಮತ್ತು ಪಕ್ಷಾತೀತವಾಗಿ ಎಲ್ಲರನ್ನೂ ಒಗ್ಗೂಡಿಸಿ ಕೊಂಡೊಯ್ಯುವ ಶಕ್ತಿ ಶಾಸಕರಲ್ಲಿದೆ ಎಂದು ಹೇಳಿದರು.

ಏನೂ ಇರಲಿಲ್ಲ ಈಗ ಶಕ್ತಿ ಬಂದಿದೆ: ಎಂ ಬಿ

ಮೊನ್ನೆಯ ತನಕ ನಮಗೆ ಯಾವುದೇ ಶಕ್ತಿ ಇರಲಿಲ್ಲ, ಅಶೋಕ್ ರೈ ಕಾಂಗ್ರೆಸ್ ಶಾಸಕರಾಗಿ ಅಯ್ಕೆಯಾದ ಬಳಿಕ ನಮಗೆ ಶಕ್ತಿ ಬಂದಿದೆ. ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಎಲ್ಲೆಲ್ಲೂ ಗೌರವ ಸಿಗುತ್ತಿದೆ. ನಮ್ಮದೇ ಸರಕಾರ ರಾಜ್ಯದಲ್ಲಿದೆ. ಕಾರ್ಯಕರ್ತರು ಧೈರ್ಯವಾಗಿ ಇಂದು ಮಾತನಾಡುವ ವಾತಾವರಣ ನಿರ್ಮಾಣವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಹೇಳಿದರು. ಮುಂದಿನ ದಿನಗಳಲ್ಲಿ ಅಭಿವೃದ್ದಿಯ ಜೊತೆಗೆ ಪಕ್ಷವನ್ನು ಕಟ್ಟುವ ಕೆಲಸವನ್ನು ಎಲ್ಲರೂ ಜೊತೆಯಾಗಿ ಮಾಡಬೇಕಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಅಮಲರಾಮಚಂದ್ರ, ಫಾರೂಕ್ ಬಾಯಬ್ಬೆ, ದಾಮೋದರ ಪೂಜರಿ,  ಕಾಂಗ್ರೆಸ್ ಮುಖಂಡರುಗಳಾದ ಸಂತೋಷ್ ರೈ ಇಳಂತಜೆ, ಮೌರಿಶ್ ಮಸ್ಕರೇನಸ್, ಬಟ್ಯಪ್ಪ ರೈ ದೇರ್ಲ, ಗ್ರಾಪಂ ಸದಸ್ಯ ಹನೀಫ್ ಕೆ ಎಂ, ಅಬ್ದುಲ್ ಖಾದರ್ ಮೇರ್ಲ, ವಿಶ್ವನಾಥ ಪೂಜಾರಿ, ಜಗನ್ನಾಥ ಶೆಟ್ಟಿ ನೆಲ್ಲಿಕಟ್ಟೆ, ಗ್ರಾಪಂ ಸದಸ್ಯರಿಗಳಾದ ಜಯಂತ ಪುಜಾರಿ, ಸೇಸಪ್ಪ, ಅಮಿತಾ, ಸೇದು ನಾಯರ್, ಬೋಳೋಡಿ ಚಂದ್ರಹಾಸ ರೈ, ಶೀನಪ್ಪ ರೈ, ಆದರ್ಶ ರೈ ಕೆಯ್ಯೂರು, ಪುರಂದರ್ ರೈ ನಿಶ್ಮಿತಾ, ಮೆಲ್ವಿನ್ ಮೊಂತೆರೋ ಕುಂಬ್ರ, ಲ್ಯಾನ್ಸಿ ಮಸ್ಕರೇನಸ್ ಪುತ್ತೂರು ಮೊದಲಾದವರು ಉಪಸ್ಥಿತರಿದ್ದರು. ವಲಯ ಕಾಂಗ್ರೆಸ್ ಅಧ್ಯಕ್ಷ ಎಕೆ ಜಯರಾಮ ರೈ ಸ್ವಾಗತಿಸಿ ವಂದಿಸಿದರು.  ದಾಮೋದರ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.

ಸೆಲ್ ಝೋನ್ ಗ್ರೇಟ್ ಫೆಸ್ಟಿವಲ್ ಸೇಲ್ ನಲ್ಲಿ ಗಮನ ಸೆಳೆಯುವ ಆಫರ್ ಗಳು

Posted by Vidyamaana on 2023-09-19 17:28:51 |

Share: | | | | |


ಸೆಲ್ ಝೋನ್ ಗ್ರೇಟ್ ಫೆಸ್ಟಿವಲ್ ಸೇಲ್ ನಲ್ಲಿ ಗಮನ ಸೆಳೆಯುವ ಆಫರ್  ಗಳು

ಪುತ್ತೂರು: ಮೊಬೈಲ್ ಕ್ಷೇತ್ರದಲ್ಲಿ 2003ರಿಂದ ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸೆಲ್ ಝೋನ್ ಇದೀಗ ಗ್ರೇಟ್ ಫೆಸ್ಟಿವಲ್ ಸೇಲ್ ಅನ್ನು ಗ್ರಾಹಕರ ಮುಂದಿಟ್ಟಿದೆ.

ಗ್ರೇಟ್ ಫೆಸ್ಟಿವಲ್ ಸೇಲ್’ನಲ್ಲಿ ಗ್ರೇಟ್ ಎಕ್ಸ್’ಚೇಂಜ್ ಆಫರನ್ನು ಜನತೆಯ ಮುಂದಿಡಲಾಗಿದೆ. ಮುನ್ನಡೆಯಿರಿ ಹೊಸ ತಂತ್ರಜ್ಞಾನದೆಡೆಗೆ 5ಜಿ ಫೋನಿಗೆ ಅಪ್’ಗ್ರೇಡ್ ಆಗಿರಿ ಎನ್ನುವ ಸಂದೇಶದೊಂದಿಗೆ ತಂತ್ರಜ್ಞಾನದ ಪ್ರಸ್ತುತತೆಯನ್ನು ಗ್ರಾಹಕರಿಗೆ ನೀಡುವ ಕಾಯಕವೂ ಇಲ್ಲಿ ಆಗುತ್ತಿದೆ.

ಇದರೊಂದಿಗೆ, ಸ್ಮಾರ್ಟ್ ಫೋನ್ ಖರೀದಿಸಿದರೆ, ಹೀರೋ ಬೈಕ್ ಸಹಿತ ಹತ್ತು ಹಲವು ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ನೀಡಲಾಗಿದೆ. ನಿಮ್ಮ ಬಜೆಟಿಗೆ ಫಿಟ್ ಆಗೋ ಸುಲಭ ಕಂತುಗಳೊಂದಿಗೆ ಆಕ್ಸೆಸರೀಸ್ ಮೇಲೆ ಶೇ. 50ರಷ್ಟು ಆಫ್ ಕೊಡಲಾಗಿದೆ. ಪ್ರತಿ ಖರೀದಿಗೂ ಖಚಿತ ಉಡುಗೊರೆಯನ್ನು ಗ್ರಾಹಕರು ಪಡೆದುಕೊಳ್ಳಬಹುದು.

ಈ ಗ್ರೇಟ್ ಫೆಸ್ಟಿವಲ್ ಸೇಲ್’ನ ಇನ್ನೊಂದು ವಿಶೇಷವೇನೆಂದರೆ, ಮಲ್ಟಿ ಬ್ರಾಂಡ್ ಸ್ಮಾರ್ಟ್ ವಾಚ್’ಗಳ ಎಕ್ಸ್’ಕ್ಲೂಸಿವ್ ಸಂಗ್ರಹ ಎಂದು ಸೆಲ್ ಝೋನ್ ಪ್ರಕಟಣೆ ತಿಳಿಸಿದೆ.

ಇಡಿ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ; ಖತರ್ನಾಕ್‌ ಗ್ಯಾಂಗ್‌ ಅರೆಸ್ಟ್‌

Posted by Vidyamaana on 2024-08-10 05:11:01 |

Share: | | | | |


ಇಡಿ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ; ಖತರ್ನಾಕ್‌ ಗ್ಯಾಂಗ್‌ ಅರೆಸ್ಟ್‌

ಬೆಂಗಳೂರು : ಜಾರಿ‌ನಿರ್ದೇಶನಾಲಯದ ಹೆಸರು ಬಳಸಿ ಹತ್ತಾರು ಜನರು ಕೋಟ್ಯಾಂತರ ಹಣ ವಂಚನೆ ಮಾಡಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಪನ (47) ಬಂಧಿತ ಆರೋಪಿಯಾಗಿದ್ದು, ಕಳೆದ ಎರಡು ವರ್ಷಗಳಿಂದ ಈಕೆ ತನ್ನ ಸಂಬಂಧಿಕರೂ ಸೇರಿದಂತೆ ಹಲವರಿಗೆ ವಂಚಿಸಿದ್ದಳು.

ಇ.ಡಿ( ಜಾರಿ‌ನಿರ್ದೇಶನಾಲಯ) ಸೀಜ್ ಮಾಡಿರುವ ಹಣ ಬರಲಿದೆ. ನಿಮ್ಮ ಹಣವನ್ನು ದುಪ್ಪಟ್ಟು ಮಾಡಿಕೊಡುತ್ತೇವೆಂದು ಹೇಳಿ ಜನರನ್ನು ನಂಬಿಸುತ್ತಿದ್ದ ಕಲ್ಪನಾ, ಸೀಜ್ ಆಗಿರುವ ಹಣ ಬರಲಿಕ್ಕೆ ಇನ್ವೆಸ್ಟ್ ಮಾಡಬೇಕಿದೆ ಎಂದು ಹೇಳಿ ವಸೂಲಿ ಮಾಡುತ್ತಿದ್ದಳು. ಇದೇ ರೀತಿಯಾಗಿ ಹೆಬ್ಬಾಳದ ನಿವಾಸಿಯೊಬ್ಬರಿಗೆ ಎರಡು ಕೋಟಿಗೂ ಅಧಿಕ ಹಣ ವಂಚಿಸಿ ಪರಾರಿಯಾಗಿದ್ದಳು. ಕಳೆದ ಮೇ ತಿಂಗಳಿನಲ್ಲಿ ಆರ್‌ಬಿಐ ಮತ್ತು ಇ.ಡಿ ಯಲ್ಲಿ ಸೀಜ್ ಆಗಿರುವ ಅಮೌಂಟ್ ಇದೆ. ಒಂದು ಲಕ್ಷಕ್ಕೆ ಡಬಲ್ ತ್ರಿಬಲ್ ಹಣ ಕೊಡುತ್ತೇವೆ. ಮಾತ್ರವಲ್ಲದೇ ಜಮೀನು ಕೊಡಿಸುತ್ತೇವೆ ಎಂದು ನಂಬಿಸಿ ಹಲವರಿಂದ ಹಣ ಪಡೆದು ನಾಮ ಇಟ್ಟಿದ್ದಳು.

ಪುತ್ತೂರು: ರಸ್ತೆಗಳ ಬದಿಯಲ್ಲಿ ಬೆಳೆದಿರುವ ಗಿಡಗಂಟಿಗಳ ತೆರವು ಮಾಡಿ

Posted by Vidyamaana on 2023-11-01 08:45:26 |

Share: | | | | |


ಪುತ್ತೂರು: ರಸ್ತೆಗಳ ಬದಿಯಲ್ಲಿ ಬೆಳೆದಿರುವ ಗಿಡಗಂಟಿಗಳ ತೆರವು ಮಾಡಿ

ಪುತ್ತೂರು: ನಗರ ಸಭೆಯ ವ್ಯಾಪ್ತಿಯ ರಸ್ತೆಗಳ ಬದಿಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ಹಾಗೂ ರಸ್ತೆಗಳೇ ಕಾಣದಂತೆ ಬೆಳೆದಿರುವ ಗಿಡಗಂಟಿಗಳನ್ನು ಮತ್ತು ಪೊದೆಗಳನ್ನು ಅತಿ ಶೀಘ್ರದಲ್ಲಿ ತೆರವು ಮಾಡಬೇಕು ಇಲ್ಲವಾದಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್ ಮಹಮ್ಮದ್ ಆಲಿಯವರ ನಿಯೋಗ ನಗರಸಭೆ ಪೌರಾಯುಕ್ತರಿಗೆ ಎಚ್ಚರಿಕೆ ನೀಡಿದ್ದಾರೆ.


ಪುತ್ತೂರು ನಗರಸಭೆಯ ವಾರ್ಡುಗಳ ರಸ್ತೆಗಳ ಬದಿಗಳಲ್ಲಿ ಮೊರೆಗಳು ಹಾಗೂ ಗಿಡಗಂಟಿಗಳು ಬೆಳೆದು ಕೆಲವು ಕಡೆ ರಸ್ತೆಗಳೇ ಕಾಣದಂತಾಗಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ನಡೆದಾಡಲು ತುಂಬಾ ತೊಂದರೆಯಾಗುತ್ತಿದೆ. ಬೆಳೆದಿರುವ ಪೊದೆಗಳಲ್ಲಿ ಹಾವುಗಳು ಇರುವ ಅಪಾಯವಿದ್ದು, ಇಲ್ಲಿ ನಡೆದಾಡುವ ನಾಗರಿಕರಿಗೆ ಹಾಗೂ ಮಕ್ಕಳಿಗೆ ಹಾವುಗಳಿಂದ ಅಪಾಯವಾಗುವ ಸಂಭವವಿರುತ್ತದೆ. ಆದುದರಿಂದ ರಸ್ತೆ ಬದಿಗಳಲ್ಲಿ ಬೆಳೆದಿರುವ ಪೊದೆಗಳು ಹಾಗೂ ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸುವುದು ಬಹಳ ಆಗತ್ಯವಿರುತ್ತದೆ. ಆದರೆ ನಗರಸಭೆಯಲ್ಲಿ ಪೊದೆಗಳನ್ನು ಸವರಲು ಹಾಗೂ ಗಿಡಗಂಟಿಗಳನ್ನು ಕಡಿಯಲು, ಕಟ್ಟಿಂಗ್ ಮೆಷಿನ್‌ಗಳಿದ್ದರೂ ಸಹ ಗಿಡಗಂಟಿಗಳನ್ನು ಕಡಿಯುವಂತಹ ಕೆಲಸ ಕಾರ್ಯ ಮಾಡಲು ನಗರಸಭೆಯ ಆರೋಗ್ಯ ನಿರೀಕ್ಷಕರುಗಳು ನಿರ್ಲಕ್ಷ್ಯ ವಹಿಸಿರುವುದು ಎದ್ದು ಕಾಣುತ್ತಿದೆ. ಆದ್ದರಿಂದ ನಗರಸಭಾ ವ್ಯಾಪ್ತಿಯ ರಸ್ತೆ ಬದಿಗಳ ಗಿಡಗಂಟಿಗಳನ್ನು ಕಡಿಯುವ ಹಾಗೂ ಪೊದೆಗಳನ್ನು ತೆರವು ಮಾಡುವ ಕೆಲಸವನ್ನು ತಕ್ಷಣವೇ ಕೈಗೆತ್ತಿಕೊಳ್ಳಬೇಕೆಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ. ಇದರ ಜೊತೆಗೆ ವಾರ್ಡುಗಳ ಚರಂಡಿಗಳ ಹಾಗೂ ದೊಡ್ಡ ತೋಡುಗಳ ಹೂಳೆತ್ತುವ ಕಾಮಗಾರಿಯನ್ನು ಈಗಾಗಲೇ ‘ಗುತ್ತಿಗೆ ನೀಡಿದ್ದು, ಗುತ್ತಿಗೆದಾರರು, ಕೆಲವೇ ಕೆಲವು ವಾರ್ಡುಗಳಲ್ಲಿ ಮಾತ್ರ ಅಲ್ಪ ಸ್ವಲ್ಪ ಭಾಗ ಚರಂಡಿಗಳ ಹೂಳೆತ್ತುವ ಕೆಲಸವನ್ನು ಮಾಡಿರುತ್ತಾರೆ. ಆದರೆ ದೊಡ್ಡ ತೋಡುಗಳ ಹೂಳೆತ್ತುವ ಕಾಮಗಾರಿಯನ್ನು ಈವರೆಗೂ ನಡೆಸಿರುವುದಿಲ್ಲ. ಮಳೆಗಾಲ ಮುಗಿಯುತ್ತಾ ಬಂದಿರುವುದರಿಂದ ಇನ್ನೂ ಹೂಳೆತ್ತುವ, ಆವಶ್ಯಕತೆ ಕೂಡಾ ಇರುವುದಿಲ್ಲ. ಆದುದರಿಂದ ಹೊಳೆತ್ತುವ ಕಾಮಗಾರಿಯ ಬಗ್ಗೆ ತಾವು ಸರಿಯಾದ ಪರಿಶೀಲನೆ ಮಾಡಿ ಆಗಿರುವ


ಕಾಮಗಾರಿಗೆ ಮಾತ್ರ ಬಿಲ್ಲು ಪಾವತಿಸಬೇಕು. ಮಳೆಗಾಲ ಮುಗಿದಿರುವುದರಿಂದ ಇನ್ನು ಯಾವುದೇ ಹೂಳೆತ್ತುವ ಕಾಮಗಾರಿಯನ್ನು ನಡೆಸದೇ ಅದನ್ನು ಸ್ಥಗಿತಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.


ಇದಕ್ಕೆ ತಪ್ಪಿದಲ್ಲಿ ನಗರ ಕಾಂಗ್ರೇಸ್‌ ವತಿಯಿಂದ ನಗರಸಭೆಯ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದುದೆಂದು ಅವರು ಎಚ್ಚರಿಕೆ ನೀಡಿದ್ದಾರೆ. ಮುಂದಿನ ಮಳೆಗಾಲದ ಪೂರ್ವದಲ್ಲಿ ನಗರಸಭೆ ವ್ಯಾಪ್ತಿಯ ಚರಂಡಿಗಳ ಹೂಳೆತ್ತುವ ಕಾಮಗಾರಿಯ ಗುತ್ತಿಗೆ ನೀಡದೆ ನಗರಸಭೆಯಲ್ಲಿರುವ ಹಿಟಾಚಿ ಮತ್ತು ಜೆಸಿಬಿ ಯಂತ್ರವನ್ನು ಬಳಸಿ ಹೂಳೆತ್ತುವ ಕೆಲಸವನ್ನು ಮಾಡುವ ಮೂಲಕ ನಗರಸಭೆಯ ಸಾರ್ವಜನಿಕ ತೆರಿಗೆ ಹಣ ಪೋಲಾಗುವುದನ್ನು ತಪ್ಪಿಸಬೇಕಾಗಿ ಅವರು ಮನವಿಯಲ್ಲಿ ತಿಳಿಸಿದ್ದಾರೆ.

ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿ ನೇತೃತ್ವದ ಕಾಂಗ್ರೆಸ್ ನಿಯೋಗ ನಗರ ಸಭಾ ಪೌರಾಯುಕ್ತ ಮಧು ಎಸ್ ಮನೋಹರ್ ಗೆ ಮನವಿ ಸಲ್ಲಿಸುತ್ತಿರುವುದು, ನಿಯೋಗದಲ್ಲಿ ನಗರಸಭಾ ಮಾಜಿ ಅಧ್ಯಕ್ಷೆ ಶ್ರೀಮತಿ ಜಯಂತಿ ಬಲ್ನಾಡ್,ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಗಳಾದ ರೋಶನ್ ರೈ ಬನ್ನೂರು, ರಾಮಚಂದ್ರ ನಾಯ್ಕ್ ಮಂಜಲ್ಪಡ್ಪು, ಸಿರಿಲ್ ರೋಡ್ರಿಗಸ್ ನಗರ ಕಾಂಗ್ರೆಸ್ ಪ್ರದಾಧಿಕಾರಿಗಳಾದ ವಿಕ್ಟರ್ ಪಾಯ್ಸ್, ಕೆಮ್ಮಿ0ಜೆ, ಇಸ್ಮಾಯಿಲ್ ಬೊಳುವಾರ್,ವಾಲ್ಟರ್ ಸಿಕ್ವೆರಾ, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳಾದ ವಿಜಯಲಕ್ಷ್ಮಿ ಕೆ, ಸಾಯಿರಾ ಭಾನು ಬನ್ನೂರು, ಬ್ಲಾಕ್ ಎಸ್ ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಮೋನು ಬಪ್ಪಳಿಗೆ,, ಕೃಷ್ಣನಗರ ಬೂತ್ ಅಧ್ಯಕ್ಷ ಹರೀಶ್ ಆಚಾರ್ಯ, ಯಂಗ್ ಬ್ರಿಗೇಡ್ ನ ಜಯಂತ ನಗರ ಮುಂತಾದವರು ಉಪಸ್ಥಿತರಿದ್ದರು

ಪೋಷಕರೇ ಮಗಳ ಮದುವೆ ಸಮಯಕ್ಕೆ 25 ಲಕ್ಷ ಪಡೆಯಲು ಸುಕನ್ಯಾ ಯೋಜನೆ ಯಲ್ಲಿ ತಿಂಗಳಿಗೆ ಎಷ್ಟು ಠೇವಣಿ ಮಾಡ್ಬೇಕು ಗೊತ್ತಾ.?

Posted by Vidyamaana on 2023-10-13 17:34:48 |

Share: | | | | |


ಪೋಷಕರೇ ಮಗಳ ಮದುವೆ ಸಮಯಕ್ಕೆ 25 ಲಕ್ಷ ಪಡೆಯಲು ಸುಕನ್ಯಾ ಯೋಜನೆ ಯಲ್ಲಿ ತಿಂಗಳಿಗೆ ಎಷ್ಟು ಠೇವಣಿ ಮಾಡ್ಬೇಕು ಗೊತ್ತಾ.?

ನವದೆಹಲಿ : ಕೇಂದ್ರ ಸರ್ಕಾರ ಹಲವು ಆಕರ್ಷಕ ಠೇವಣಿ ಯೋಜನೆಗಳನ್ನ ಪರಿಚಯಿಸುತ್ತಿದೆ. ಬೇಟಿ ಬಚಾವೋ ಬೇಟಿ ಪಡಾವೋ ಘೋಷಣೆಯ ಅಂಗವಾಗಿ ಕೇಂದ್ರ ಸರ್ಕಾರ ತಂದಿರುವ ಸುಕನ್ಯಾ ನಾಮೃದ್ಧಿ ಯೋಜನೆ ಯೋಜನೆ ಎಷ್ಟು ಮಹತ್ವ ಪಡೆದುಕೊಂಡಿದೆ ಎಂಬುದನ್ನ ಬಿಡಿಸಿ ಹೇಳಬೇಕಾಗಿಲ್ಲ.ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಮದುವೆಯ ಸಮಯದಲ್ಲಿ ಆದಾಯವನ್ನ ಪಡೆಯಲು ಈ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ. ಈ ಯೋಜನೆಯ ಭಾಗವಾಗಿ, ಗ್ರಾಹಕರು 15 ವರ್ಷಗಳವರೆಗೆ ಪಾವತಿಸಬೇಕು ಮತ್ತು 21 ವರ್ಷಗಳ ಅವಧಿಯ ನಂತರ ಹಣವನ್ನು ಪಡೆಯಬೇಕು.


ಹತ್ತನೇ ವಯಸ್ಸಿನಲ್ಲಿ ಮಗು ಈ ಯೋಜನೆಗೆ ಸೇರಬಹುದು. ಸುಕನ್ಯಾ ಸಮೃದ್ಧಿ ಯೋಜನೆ ಖಾತೆಯನ್ನು ಗರಿಷ್ಠ ಇಬ್ಬರು ಹೆಣ್ಣು ಮಕ್ಕಳಿಗೆ ಮಾತ್ರ ತೆರೆಯಬಹುದು. ಈ ಖಾತೆಯನ್ನು ತೆರೆಯಲು ಐಡಿ, ವಿಳಾಸ ಪುರಾವೆ, ಜನ್ಮ ಪ್ರಮಾಣಪತ್ರ, ಹೆಣ್ಣು ಮಗು ಮತ್ತು ಆಕೆಯ ತಂದೆಯ ಭಾವಚಿತ್ರಗಳು, ಆಧಾರ್ ಕಾರ್ಡ್ ಅಗತ್ಯವಿದೆ. ಮತ್ತು ಈ ಯೋಜನೆಯಲ್ಲಿ ಕನಿಷ್ಠ ಖಾತೆ ಮೊತ್ತ ರೂ. 250 ಠೇವಣಿ ಇಡಬಹುದು ಮತ್ತು ತೆರೆಯಬಹುದು. ಗರಿಷ್ಠ ರೂ. 1.50 ಲಕ್ಷ ಠೇವಣಿ ಇಡಬಹುದು. ಖಾತೆ ತೆರೆದ ದಿನಾಂಕದಿಂದ 15 ವರ್ಷಗಳವರೆಗೆ ಹಣವನ್ನು ಠೇವಣಿ ಇಡಬೇಕು. ಅದರ ನಂತರ, ಆರು ವರ್ಷಗಳ ನಂತರ, ಅಂದರೆ 21 ವರ್ಷಗಳನಂತರ, ಪ್ರಬುದ್ಧತೆ ಬರುತ್ತದೆ. ಈ ಆರು ವರ್ಷಗಳವರೆಗೆ ಯಾವುದೇ ಠೇವಣಿ ಅಗತ್ಯವಿಲ್ಲ.


ಖಾತೆಯನ್ನು ತೆರೆದ ನಂತರ, ಯಾವುದೇ ಕಾರಣಕ್ಕೂ ಹಣವನ್ನು ಠೇವಣಿ ಮಾಡದಿದ್ದರೆ, ಖಾತೆಯು ಡೀಫಾಲ್ಟ್ ಆಗಿ ಹೋಗುತ್ತದೆ. ಖಾತೆಯನ್ನು ಪುನಃ ಸಕ್ರಿಯಗೊಳಿಸುವ ಸಂದರ್ಭದಲ್ಲಿ, ರೂ. 50 ದಂಡ ಮತ್ತು ಖಾತೆಯನ್ನು ಪುನಃ ತೆರೆಯಿರಿ. ಖಾತೆಯನ್ನು ತೆರೆದ ದಿನಾಂಕದಿಂದ 15 ವರ್ಷಗಳ ಒಳಗೆ ಮತ್ತೆ ತೆರೆಯಬಹುದು. ಏತನ್ಮಧ್ಯೆ, ಸುಕನ್ಯಾ ಸಮೃದ್ಧಿ ಯೋಜನೆ ಯೋಜನೆಯ ಮೂಲಕ ಮಗುವಿಗೆ ಮದುವೆ ಆಗುವ ವೇಳೆಗೆ ಅಥವಾ ಶಿಕ್ಷಣ ಪೂರ್ಣಗೊಳ್ಳುವ ವೇಳೆಗೆ ರೂ. ಈಗ ನೀವು 25 ಲಕ್ಷಗಳನ್ನು ಪಡೆಯಲು ತಿಂಗಳಿಗೆ ಎಷ್ಟು ಹಣವನ್ನು ಠೇವಣಿ ಮಾಡಬೇಕು ಎಂದು ಕಂಡುಹಿಡಿಯೋಣ.


ಉದಾಹರಣೆಗೆ, ನಿಮ್ಮ ಮಗುವಿಗೆ ಪ್ರಸ್ತುತ 5 ವರ್ಷವಯಸ್ಸಾಗಿದೆ ಎಂದು ಭಾವಿಸೋಣ. ಪ್ರಸ್ತುತ ಈ ಯೋಜನೆಯ ಬಡ್ಡಿ ದರವು ಶೇಕಡಾ 8 ರಷ್ಟಿದೆ. ಈ ಲೆಕ್ಕಾಚಾರದಲ್ಲಿ ವರ್ಷಕ್ಕೆ ರೂ. 55,700 ಪಾವತಿಸಬೇಕು. ಹೀಗೆ ಮಾಡುವುದರಿಂದ ನಿಮಗೆ ರೂ. 25 ಲಕ್ಷ ಕೈಗೆ ಬರುತ್ತದೆ. ಅಂದರೆ ತಿಂಗಳಿಗೆ ರೂ. ಮಗಳ ಮದುವೆ ಸಮಯದಲ್ಲಿ 4,641 ರೂ. 25 ಲಕ್ಷ ವಾಪಸ್ ಪಡೆಯಬಹುದು. ಮತ್ತು ಈ ಯೋಜನೆಯ ಮೂಲಕ, ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 ಸಿ ಪ್ರಕಾರ, ನೀವು ರೂ. 1.50 ಲಕ್ಷ ತೆರಿಗೆ ವಿನಾಯಿತಿ ಪಡೆಯಬಹುದು. ಠೇವಣಿಯ ಮೇಲೆ ಗಳಿಸಿದ ಬಡ್ಡಿಗೆ ನೀವು ತೆರಿಗೆ ಪಾವತಿಸಬೇಕಾಗಿಲ್ಲ. ವಾರ್ಷಿಕ ಆಧಾರದ ಮೇಲೆ ಬಡ್ಡಿಯನ್ನು ಪಾವತಿಸಲಾಗುತ್ತದೆ. ಮೆಚ್ಯೂರಿಟಿಯ ನಂತರ ನೀವು ಪಡೆಯುವ ಬಡ್ಡಿ ಕೂಡ ತೆರಿಗೆ ಮುಕ್ತವಾಗಿರುತ್ತದೆ.

ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ

Posted by Vidyamaana on 2024-05-24 21:08:42 |

Share: | | | | |


ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ

ಪುತ್ತೂರು: ತಾಲೂಕಿನಲ್ಲಿ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳಾದ ಬೆಥನಿ ಪ್ರೌಢಶಾಲೆ, ಬೆಥನಿ ಹಿರಿಯ ಪ್ರಾಥಮಿಕ ಶಾಲೆ ಪಾಂಗ್ಲಾಯ್ ಮತ್ತು ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿನ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರವು ಮೇ 24 ನೇ ಶುಕ್ರವಾರ ದಂದು ಬೆಥನಿ ಶಾಲೆಯ ಸಭಾಂಗಣದಲ್ಲಿ,ಬೆಥನಿ ಶಾಲಾ ಸಂಚಾಲಕರಾದ ವಂದನೀಯ ಭಗಿನಿ ಪ್ರಶಾಂತಿ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. 

ಸಂಪನ್ಮೂಲ ವ್ಯಕ್ತಿಗಳಾದ ವಂದನೀಯ ಭಗಿನಿ ಅನ್ನಾ ಮರಿಯ ಕಾರ್ಯದರ್ಶಿಗಳು, ಜೀವಂಧಾರ ಸಮಾಜ ಸೇವಾ ಸಂಘ ಕುಲಶೇಖರ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ವೇದಿಕೆಯಲ್ಲಿ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆಯ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್, ಬೆಥನಿ ಹಿರಿಯ ಪ್ರಾಥಮಿಕ ಶಾಲೆ ಪಾಂಗ್ಲಾಯ್ ನ ಮುಖ್ಯ ಶಿಕ್ಷಕಿ ಭಗಿನಿ ಸೆಲಿನ್ ಪೇತ್ರ ಬಿ ಎಸ್ ಹಾಗೂ ಬೆಥನಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಭಗಿನಿ ಆಗ್ನೇಸ್ ಶಾಂತಿ ಬಿ ಎಸ್ ಉಪಸ್ಥಿತರಿದ್ದರು.

  

Recent News


Leave a Comment: