ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಸುದ್ದಿಗಳು News

Posted by vidyamaana on 2024-07-25 06:35:41 |

Share: | | | | |


ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್‌ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.

ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.

ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್‌ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್‌ಐ ಹೇಳಿದ್ದಾರೆ.

 Share: | | | | |


ಹಾಸನದಲ್ಲಿ ಆಶ್ಲೀಲ ಪೆನ್‌ಡ್ರೈವ್ ಹಂಚಿಸಿದ್ದೇ ವಿಜಯೇಂದ್ರ; ಯತ್ನಾಳ ಗಂಭೀರ ಆರೋಪ

Posted by Vidyamaana on 2024-08-04 06:14:56 |

Share: | | | | |


ಹಾಸನದಲ್ಲಿ ಆಶ್ಲೀಲ ಪೆನ್‌ಡ್ರೈವ್ ಹಂಚಿಸಿದ್ದೇ ವಿಜಯೇಂದ್ರ; ಯತ್ನಾಳ ಗಂಭೀರ ಆರೋಪ

ವಿಜಯಪುರ: ಭ್ರಷ್ಟ ವಿಜಯೇಂದ್ರನನ್ನು ಬಿಜೆಪಿ ರಾಜ್ಯಾಧ್ಯಕ್ಷನೆಂದು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ. ವಿಜಯೇಂದ್ರನ ನಾಲ್ಕಾರು ಚೇಲಾ ಶಾಸಕರ ಹೊರತಾಗಿ 55ಕ್ಕೂ ಹೆಚ್ಚು ಶಾಸಕರ ವಿರೋಧವಿದ್ದು, ಈ ಬಗ್ಗೆ ಹೈಕಮಾಂಡ್ ನಾಯಕರನ್ನು ನಾವು ಪ್ರಶ್ನಿಸುತ್ತೇವೆ. ಪಕ್ಷದಲ್ಲಿ ಹೈಕಮಾಂಡ್ ಭ್ರಷ್ಟ ವಿಜಯೇಂದ್ರನನ್ನು ವಿರುದ್ಧ ಕ್ರಮ ಕೈಗೊಳ್ಳಲಿ, ತಪಿದ್ದರೆ ನಮ್ಮ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸವಾಲು ಹಾಕಿದ್ದಾರೆ.

ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿರುವ ನನ್ನನ್ನು ಹೊರ ಹಾಕಲಿ ಎಂದು ರಾಜ್ಯದ ಜನರಿಗೆ ಹೇಳುತ್ತೇನೆ. ಪಕ್ಷದ ಹೈಕಮಾಂಡ ಯತ್ನಾಳ‌ ಪಕ್ಷ ವಿರೋಧ ಚಟುವಟಿಕೆ ಮಾಡುತ್ತಿದ್ದಾರೆ ಎಂದು ನನ್ನನ್ನು ಹೊರಹಾಕಲಿ. ನನ್ನ ಭ್ರಷ್ಟಾಚಾರ ಇದ್ದರೆ ಹೊರ ಹಾಕಲಿ, ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದರು.

ವಿಜಯೇಂದ್ರಗೆ ಆಗಿರುವ ಸೆಟ್‍ಬ್ಯಾಕ್ ಏನೇಂದರೆ ನಿಂತು ಸಹಿ ಮಾಡಿಸಿಕೊಂಡಿದ್ದು, ಈ ಮನುಷ್ಯ ವಿಜಯೇಂದ್ರ ಅಡ್ಜಸ್ಟಮೆಂಟ್ ಇದ್ದಾನೆ. ನಾನು ಹೈಕಮಾಂಡನ್ನು ಇದೇ ಕೇಳುತ್ತೇನೆ, ವಿಜಯೇಂದ್ರನ ಕೃಪೆಯಿಂದ ಉಮೇಶ ಕಾಂಟ್ರಾಕ್ಟರ್ ಮನೆಯಲ್ಲಿ ಸಿಕ್ಕ ಸಾವಿರ ಕೋಟಿ ರೂ ಮೌಲ್ಯದ ದಾಖಲೆಗಳು, ಕೌಂಟಿಂಗ್ ಮಾಡುವ ನಾಲ್ಕು ಮಸೀನ್ ಸಿಕ್ಕವಲ್ಲ ಅವೆಲ್ಲ ಎಲ್ಲಿ ಹೋದವು ಎಂದು ಪ್ರಶ್ನಿಸಿದರು.

ರಸ್ತೆ ಅಪಘಾತ: ಗಾಯಾಳು ಪತ್ರಕರ್ತ ಪಾವ್ಲ್ ಬೆಂಜಮಿನ್‌ ಮೃತ್ಯು

Posted by Vidyamaana on 2023-07-13 10:01:24 |

Share: | | | | |


ರಸ್ತೆ ಅಪಘಾತ: ಗಾಯಾಳು ಪತ್ರಕರ್ತ ಪಾವ್ಲ್ ಬೆಂಜಮಿನ್‌ ಮೃತ್ಯು

ಮಂಗಳೂರು: ಬೆಂಗಳೂರಿನ ಸೈಂಟ್‌ ಪಾವ್ಲ್ ಸ್‌ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದ ಪತ್ರಕರ್ತ ಪಾವ್ಲ್ ಬೆಂಜಮಿನ್‌ (27) ಅವರು ಜು.12ರಂದು ನಿಧನ ಹೊಂದಿದರು.ಮೈಸೂರು ಜಿಲ್ಲೆಯ ಕೊಳ್ಳೇಗಾಲ ಹನೂರು ಸಮೀಪದ ಲಾಸರದೊಡ್ಡಿ ನಿವಾಸಿಯಾಗಿದ್ದ ಅವರು ರಸ್ತೆ ಅಪಘಾತದಲ್ಲಿ ಗಾಯಗೊಂಡು ಕಳೆದ 25 ದಿನಗಳಿಂದ ಆಸ್ಪತ್ರೆಯಲ್ಲಿದ್ದರು.


ಮಂಗಳೂರಿನ ಸೈಂಟ್‌ ಅಲೋಶಿಯಸ್‌ ಕಾಲೇಜು ಮತ್ತು ಎಸ್‌ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದರು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದರು 

ಮೃತರು ತಂದೆ, ತಾಯಿ ಮತ್ತು ಇಬ್ಬರು ಸಹೋದರರನ್ನು ಅಗಲಿದ್ದಾರೆ.

ಚಂದ್ರಯಾನ ಯಶಸ್ಸಿಗೆ ಗಲ್ಫ್ ಟೂರ್ಸ್ ಉಮ್ರಾ ಯಾತ್ರಾರ್ಥಿಗಳಿಂದ ಮದೀನಾದಲ್ಲಿ ವಿಶೇಷ ಪ್ರಾರ್ಥನೆ

Posted by Vidyamaana on 2023-08-23 11:47:14 |

Share: | | | | |


ಚಂದ್ರಯಾನ ಯಶಸ್ಸಿಗೆ  ಗಲ್ಫ್ ಟೂರ್ಸ್ ಉಮ್ರಾ ಯಾತ್ರಾರ್ಥಿಗಳಿಂದ ಮದೀನಾದಲ್ಲಿ  ವಿಶೇಷ ಪ್ರಾರ್ಥನೆ

ಸೌದಿ : ಪವಿತ್ರ ಉಮ್ರಾ ನಿರ್ವಹಣೆಯಲ್ಲಿರುವ ಆಗಸ್ಟ್ ತಿಂಗಳ ಗಲ್ಫ್ ಟೂರ್ಸ್ ಉಮ್ರಾ ಯಾತ್ರಾರ್ಥಿಗಳ ತಂಡವು ಭಾರತದ  ಬಹು ನಿರೀಕ್ಷಿತ್ ಚಂದ್ರಯಾನ _3  ವಿಕ್ರಮ್ ಲ್ಯಾಂಡರ್  ಗುರಿ ತುಲಪುವಂತಾಗಳು ವಿಶೇಷ ಪ್ರಾರ್ಥನೆ ನಡೆಸಿತು.

ಯಾತ್ರಾ ತಂಡದ ಚೀಫ್ ಅಮೀರ್ ಉಸ್ತಾದ ಸಿರಾಜುದ್ದೀನ್ ಫೈಝಿ ಈ ಸಂದರ್ಭದಲ್ಲಿ

ವಿಶೇಷ ಪ್ರಾರ್ಥನೆಗೆ ನೇತೃತ್ವ ನೀಡಿದರು.

 ಟೂರ್ಸ್ ಮಾಲಕರಾದ ಸುಲೈಮಾನ್ ಹಾಜಿ,ಇಸ್ಮಾಯಿಲ್ ಹಾಜಿ ಸೌತ್ ಇಂಡಿಯಾ,ಅಬ್ಬಾಸ್ ದಾರಿಮಿ ಕೆಲಿಂಜ,ಅಬ್ದುರ್ರಹ್ಮಾನ್ ಪೈಝಿ ಫಲಿಮಾರ್,ಖಾಲಿದ್ ಸಅದಿ ಬೇಂಗಿಲ,ಸೈದಾಲಿ ಮುಸ್ಲಿಯಾರ್, ಹಲವಾರು ಮೊಹಲ್ಲಾಗಳಿಂದ ಯಾತ್ರಾರ್ಥಿಗಳಾಗಿ ಬಂದ ಜಮಾಅತ್ ಸಮಿತಿ ಸಾರಥಿ ಗಳು, ವಿವಿಧ ಸಂಘ ಸಂಸ್ಥೆಗಳ ಯುವ ಕಾರ್ಯಕರ್ತರು ಸೇರಿದಂತೆ ಎರಡು ಯಾತ್ರಾ ತಂಡಗಳಲ್ಲಿದ್ದ ಸುಮಾರು ತೊಂಭತ್ತರಷ್ಟು ಯಾತ್ರಾರ್ಥಿಗಳು ಪಾಲ್ಗೊಂಡಿದ್ದರು.

ಗಮನಿಸಿ : ರೇಷನ್ ಕಾರ್ಡ್ ನಲ್ಲಿ ನಿಮ್ಮ ಹೆಸರು ಇದೆಯಾ ಅಂತ ಈ ರೀತಿ ಚೆಕ್ ಮಾಡಿಕೊಳ್ಳಿ!

Posted by Vidyamaana on 2024-06-21 14:41:56 |

Share: | | | | |


ಗಮನಿಸಿ : ರೇಷನ್ ಕಾರ್ಡ್ ನಲ್ಲಿ ನಿಮ್ಮ ಹೆಸರು ಇದೆಯಾ ಅಂತ ಈ ರೀತಿ ಚೆಕ್ ಮಾಡಿಕೊಳ್ಳಿ!

ಬೆಂಗಳೂರು  : ಪಡಿತರ ಚೀಟಿಯಲ್ಲಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದವರ ಪಟ್ಟಿ ಬಿಡುಗಡೆಯಾಗಿದ್ದು, ಅರ್ಜಿ ಸಲ್ಲಿಸಿದವರು ಅಧಿಕೃತ ವೆಬ್‌ ಸೈಟ್‌ ಭೇಟಿ ನೀಡುವ ಮೂಲಕ ನಿಮ್ಮ ಹೆಸರನ್ನು ಪರಿಶೀಲನೆ ಮಾಡಿಕೊಳ್ಳಬಹುದು.

ಕರ್ನಾಟಕ ಪಡಿತರ ಚೀಟಿಯ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಲು ನೀವು ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸಬೇಕು:-

ಮೊದಲಿಗೆ, ಇಲ್ಲಿ ನೀಡಲಾದ ಅಧಿಕೃತ ವೆಬ್ಸೈಟ್ https://ahara.kar.nic.in/Home/EServices ಗೆ ಭೇಟಿ ನೀಡಿ

ಕಾಂಗ್ರೆಸ್ ಲೂಟಿಕೋರ, ಭ್ರಷ್ಟರ ಸರ್ಕಾರ ; ಕಾವೂರು ಬಿಜೆಪಿ ಪ್ರತಿಭಟನೆಯಲ್ಲಿ ನಳಿನ್ ಕುಮಾರ್

Posted by Vidyamaana on 2023-10-18 17:07:06 |

Share: | | | | |


ಕಾಂಗ್ರೆಸ್ ಲೂಟಿಕೋರ, ಭ್ರಷ್ಟರ ಸರ್ಕಾರ ; ಕಾವೂರು ಬಿಜೆಪಿ ಪ್ರತಿಭಟನೆಯಲ್ಲಿ ನಳಿನ್ ಕುಮಾರ್

ಮಂಗಳೂರು: ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ನಗರದ ಕಾವೂರಿನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು ಕಾಂಗ್ರೆಸ್ ಸರ್ಕಾರ ಎಟಿಎಂ ಸರ್ಕಾರ ಎಂದು ಘೋಷಣೆ ಕೂಗಿದ್ದಾರೆ. 


ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ದು ಗುತ್ತಿಗೆದಾರರ ಮನೆಯಲ್ಲಿ ರಾಶಿ ರಾಶಿ ಹಣ ಸಿಕ್ಕಿದ್ದು ಸರ್ಕಾರದ ಖಜಾನೆಯ ಹಣ ನೇರವಾಗಿ ಸಿದ್ದರಾಮಯ್ಯ ಮತ್ತು‌ ಡಿಕೆಶಿ ಮನೆಗೆ ಹೋಗಿದೆ.‌ ಇದು ಖಜಾನೆ ಖಾಲಿ‌ ಮಾಡಿದ ಲೂಟಿಕೋರ ಸರ್ಕಾರ.‌ ಡಿಕೆ‌ ಶಿವಕುಮಾರ್ ಅವರು ತಿಹಾರ್ ಜೈಲಿಗೆ ಹೋಗಿ ಬಂದಿದ್ದರು. ಇದೀಗ ಎರಡನೇ ಸಲ ತಿಹಾರ್ ಜೈಲಿಗೆ ಹೋಗಲು ಸಿದ್ದರಾಗುತ್ತಿದ್ದಾರೆ. ನಿನ್ನೆ ಸಿಕ್ಕ ಹಣ ಡಿಕೆಶಿಯದ್ದು ಅಂತ ಪತ್ರಿಕೆಗಳು, ಟಿವಿಗಳು ಹೇಳ್ತಾ ಇದೆ. ಪಂಚರಾಜ್ಯ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ಎಟಿಎಂ ಆಗ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಹೊಟೇಲ್ ಗಳಲ್ಲಿ ತಿಂಡಿಗೆ ಬೆಲೆ ಇದ್ದಂತೆ ಸರ್ಕಾರಿ ಕಚೇರಿಗಳಲ್ಲಿ ರೇಟ್ ಫಿಕ್ಸ್ ಆಗಿದೆ. ವರ್ಗಾವಣೆ ಸೇರಿದಂತೆ ಯಾವುದೇ ಕೆಲಸ ಆಗಬೇಕಿದ್ದರೂ ಇಂತಿಷ್ಟು ರೇಟ್ ಕೊಡಬೇಕು. ಹೀಗಾಗಿ ಸಿದ್ದರಾಮಯ್ಯರ ಸರ್ಕಾರ 80% ಪರ್ಸಂಟೇಜ್ ಸರ್ಕಾರ ಎನ್ನುವಂತಾಗಿದೆ. ತಾಲೂಕು ಕಚೇರಿಗಳಲ್ಲಿ ತಹಶಿಲ್ದಾರ್ ರು ಲಂಚ ಕೇಳ್ತಾರೆ. ಗ್ರಾಮಗಳಲ್ಲಿ ವಿಎಗಳು ಲಂಚ ಕೇಳ್ತಾರೆ, ಪಿಡಿಓಗಳು ಲಂಚ ಕೇಳ್ತಾ‌ ಇದಾರೆ. ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರ ಮುಳುಗಿದೆ ಎಂದು ನಳಿನ್ ಕುಮಾರ್ ಹೇಳಿದರು.

ಭರ್ಜರಿ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

Posted by Vidyamaana on 2024-04-16 11:38:03 |

Share: | | | | |


ಭರ್ಜರಿ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಮಂಗಳೂರು: ದಕ್ಷಿಣ ಕನ್ನಡವನ್ನು ದೇಶದ ಬಲಿಷ್ಠ ಜಿಲ್ಲೆಯಾಗಿ ರೂಪಿಸಲು ಶ್ರಮಿಸುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.

ಅಡ್ಡೂರಿನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು.

ಜಿಲ್ಲೆಯನ್ನು ಎಲ್ಲಾ ರೀತಿಯಲ್ಲೂ ಅಭಿವೃದ್ಧಿ ಮಾಡಲು ಬೇಕಾದ ಮೂಲಸೌಕರ್ಯಗಳು ಇವೆ. ಇದರ ಜೊತೆಗೆ ಹೂಡಿಕೆ, ಉದ್ದಿಮೆಗೆ ಪ್ರೋತ್ಸಾಹ ನೀಡಿ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಪೂರಕ ವಾತಾವರಣ ನಿರ್ಮಿಸಲಾಗುವುದು. ಇದರಿಂದ ಉದ್ಯೋಗ ಸೃಷ್ಟಿಯೂ ಸಾಧ್ಯ. ಮಾತ್ರವಲ್ಲ ಎಂದರು.

Recent News


Leave a Comment: