ಮೊಬೈಲ್‌ ಬಳಕೆದಾರರೇ ಗಮನಿಸಿ : ನಿಮ್ಮ ಫೋನ್ ನಲ್ಲಿರುವ ಈ ಸಣ್ಣ ರಂಧ್ರದ ಉಪಯೋಗವೇನು ಗೊತ್ತಾ?

ಸುದ್ದಿಗಳು News

Posted by vidyamaana on 2024-07-25 13:38:46 |

Share: | | | | |


ಮೊಬೈಲ್‌ ಬಳಕೆದಾರರೇ ಗಮನಿಸಿ : ನಿಮ್ಮ ಫೋನ್ ನಲ್ಲಿರುವ ಈ ಸಣ್ಣ ರಂಧ್ರದ ಉಪಯೋಗವೇನು ಗೊತ್ತಾ?

      ನಾವೆಲ್ಲರೂ ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ಗಳನ್ನು ಬಳಸುತ್ತೇವೆ, ಇದು ನಮ್ಮ ಜೀವನದ ಪ್ರಮುಖ ಭಾಗವಾಗಿದೆ, ಆದರೆ ನಿಮ್ಮ ಸ್ಮಾರ್ಟ್ಫೋನ್ ಅಡಿಯಲ್ಲಿ ಸಣ್ಣ ರಂಧ್ರವನ್ನು ನೀವು ಎಂದಾದರೂ ಗಮನಿಸಿದ್ದೀರಾ, ಆದರೆ ಅದು ಏನು ಬಳಸುತ್ತದೆ ಎಂಬುದರ ಬಗ್ಗೆ ನೀವು ಯೋಚಿಸಿದ್ದೀರಾ, ಜನರು ಇದನ್ನು ಮೈಕ್ರೊಫೋನ್ ಎಂದು ಪರಿಗಣಿಸುತ್ತಾರೆ, ಇದನ್ನು ಮೈಕ್ರೊಫೋನ್ ಗ್ರಿಲ್ ಎಂದು ಕರೆಯಲಾಗುತ್ತದೆ, ಇದು ನಿರ್ದಿಷ್ಟವಾಗಿ ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಗಳನ್ನು ಒಳಗೊಂಡಿದೆ.ಶಬ್ದವನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಫೋನ್ ಕರೆಗಳ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ, ಅದರ ಬಗ್ಗೆ ಸಂಪೂರ್ಣ ಮಾಹಿತಿಯ ಬಗ್ಗೆ ತಿಳಿದುಕೊಳ್ಳೋಣ

ಇದು ಹೇಗೆ ಕಾರ್ಯನಿರ್ವಹಿಸುತ್ತದೆ

ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ನಿಮ್ಮ ಫೋನ್ನ ಪ್ರಾಥಮಿಕ ಮೈಕ್ರೊಫೋನ್ನೊಂದಿಗೆ ಕಾರ್ಯನಿರ್ವಹಿಸುತ್ತದೆ, ಇದು ಸಾಮಾನ್ಯವಾಗಿ ಮುಂಭಾಗ ಅಥವಾ ಮೇಲ್ಭಾಗದಲ್ಲಿದೆ. ಕರೆ ಸಮಯದಲ್ಲಿ, ಮುಖ್ಯ ಮೈಕ್ರೊಫೋನ್ ನಿಮ್ಮ ಧ್ವನಿಯನ್ನು ಸೆರೆಹಿಡಿಯುತ್ತದೆ, ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಸುತ್ತಮುತ್ತಲಿನ ಶಬ್ದಗಳನ್ನು ತೆಗೆದುಕೊಳ್ಳುತ್ತದೆ.

ಮೈಕ್ರೊಫೋನ್ ಗ್ರಿಲ್ ನ ಪ್ರಾಮುಖ್ಯತೆ

ಮೈಕ್ರೊಫೋನ್ ಗ್ರಿಲ್ ಶಬ್ದವನ್ನು ತೆಗೆದುಹಾಕುವುದು ಅಥವಾ ತಿರುಚುವುದು ನಿಮ್ಮ ಕರೆಯ ಗುಣಮಟ್ಟದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಈ ಘಟಕವಿಲ್ಲದೆ, ಹಿನ್ನೆಲೆ ಶಬ್ದಗಳು ಹೆಚ್ಚು ಸ್ಪಷ್ಟವಾಗುತ್ತವೆ, ಸಂವಹನವನ್ನು ಕಷ್ಟಕರವಾಗಿಸುತ್ತದೆ.ಎಲ್ಲೆಲ್ಲೂ ಇಲ್ಲ

ಎಲ್ಲಾ ಸ್ಮಾರ್ಟ್ಫೋನ್ಗಳು ಶಬ್ದ-ರದ್ದುಗೊಳಿಸುವ ಮೈಕ್ರೊಫೋನ್ ಅನ್ನು ಹೊಂದಿಲ್ಲ ಎಂಬುದನ್ನು ಗಮನಿಸುವುದು ಮುಖ್ಯ. ನಿಮ್ಮ ಸಾಧನವು ಈ ವೈಶಿಷ್ಟ್ಯವನ್ನು ಹೊಂದಿದೆಯೇ ಎಂದು ನಿಮಗೆ ಖಚಿತವಿಲ್ಲದಿದ್ದರೆ, ನಿಮ್ಮ ಫೋನ್ನ ಕೈಪಿಡಿಯನ್ನು ನೀವು ನೋಡಿಕೊಳ್ಳಬಹುದು.

 Share: | | | | |


ಪುತ್ತೂರು ಗಾಂಧಿ ಕಟ್ಟೆಯ ಬಳಿ ಇತ್ತಂಡಗಳ ನಡುವೆ ಹೊಡೆದಾಟ

Posted by Vidyamaana on 2024-02-02 11:29:07 |

Share: | | | | |


ಪುತ್ತೂರು ಗಾಂಧಿ ಕಟ್ಟೆಯ ಬಳಿ ಇತ್ತಂಡಗಳ ನಡುವೆ ಹೊಡೆದಾಟ

ಪುತ್ತೂರು : ಎರಡು ತಂಡಗಳ ನಡುವೆ ಹೊಡೆದಾಟ ನಡೆದ ಘಟನೆ ಫೆ.1 ರಂದು ರಾತ್ರಿ ಪುತ್ತೂರು ಬಸ್ ನಿಲ್ದಾಣದ ಸಮೀಪದ ಹೂವಿನ ಮಾರುಕಟ್ಟೆ ಬಳಿ ನಡೆದಿದೆ.


ಪುತ್ತೂರು ಬಸ್ ನಿಲ್ದಾಣ ಸಮೀಪದ ಗಾಂಧಿಕಟ್ಟೆ ಸಮೀಪ ಹಣ್ಣು-ಹಂಪಲು ವಿತರಣೆಯ ಪಿಕಪ್ ವಾಹನದವರು ಹಾಗೂ ಮಾರುತಿ 800 ಕಾರಿನಲ್ಲಿದ್ದವರ ನಡುವೆ ಹೂವಿನ ಮಾರುಕಟ್ಟೆ ಮುಂಭಾಗ ನಡುರಸ್ತೆಯಲ್ಲೇ ಹೊಡೆದಾಟ ನಡೆದಿದೆ ಎಂದು ವರದಿಯಾಗಿದೆ.


ಹೊಡೆದಾಟದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಯಾವ ಕಾರಣಕ್ಕೆ ಹೊಡೆದಾಟ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.

ಹತ್ಯೆಯಾದರೆ ಬಿಜೆಪಿ ರಾಜ್ಯಾಧ್ಯಕ್ಷರು ಹೊಣೆ: ಸತ್ಯಜಿತ್ ಸುರತ್ಕಲ್

Posted by Vidyamaana on 2023-04-21 10:59:35 |

Share: | | | | |


ಹತ್ಯೆಯಾದರೆ   ಬಿಜೆಪಿ ರಾಜ್ಯಾಧ್ಯಕ್ಷರು ಹೊಣೆ: ಸತ್ಯಜಿತ್ ಸುರತ್ಕಲ್

ಮಂಗಳೂರು: ಚುನಾವಣೆ ನೆಪದಲ್ಲಿ ಸರಕಾರ ನನ್ನ ಭದ್ರತಾ ಸಿಬಂದಿಯನ್ನು ವಾಪಸ್ ಕರೆಯಿಸಿಕೊಂಡಿದೆ. ನನ್ನದೇನಾದರೂ ಹತ್ಯೆ ನಡೆದರೆ ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು, ಸಂಘ ಪರಿವಾರದ ಪ್ರಮುಖರೇ ಹೊಣೆಯಾಗುತ್ತಾರೆ ಎಂದು ಹಿಂದೂ ಸಂಘಟನೆಯ ಪ್ರಮುಖ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ.ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಪ್ರಾಣ ಬೆದರಿಕೆ ಇದ್ದುದರಿಂದ ಪೊಲೀಸರೇ ಭದ್ರತಾ ಸಿಬಂದಿ ಒದಗಿಸಿದ್ದರು. ಹದಿನಾರು ವರ್ಷಗಳಿಂದ ಇದ್ದ ಸಿಬಂದಿಯನ್ನು ಈಗ ಚುನಾವಣೆ ನೆಪದಲ್ಲಿ ವಾಪಸ್ ಪಡೆಯಲಾಗಿದೆ. ನನ್ನ ಹತ್ಯೆಗೆ ಮುಕ್ತ ಅವಕಾಶ ಮಾಡಿಕೊಟ್ಟಿದ್ದಾರೆ. ರಿವಾಲ್ವರ್ ಕೂಡ ತೆಗೆದಿಟ್ಟುಕೊಂಡಿದ್ದಾರೆ. ಈ ಬಗ್ಗೆ ಗೃಹ ಸಚಿವರು, ಸಂಘ ಪರಿವಾರದ ಪ್ರಮುಖರಿಗೆ ಹೇಳಿದರೂ ಪ್ರಯೋಜನವಾಗಿಲ್ಲ. ನಾನು ಹಿಂದುತ್ವಕ್ಕಾಗಿ ರಾಷ್ಟ್ರ ಹಿತಕ್ಕಾಗಿ ನಡೆಸಿದ ಕಾರ್ಯಗಳಿಂದಾಗಿ ಬೆದರಿಕೆ ಬಂದಿತ್ತೆ ಹೊರತು ನನ್ನ ವೈಯಕ್ತಿಕ ವಿಷಯಕ್ಕಾಗಿ ಅಲ್ಲ ಎಂದರು.ನಾನು ಯಾವುದಕ್ಕೂ ಭಯ ಪಡುವವನಲ್ಲ, ವ್ಯವಸ್ಥೆ ವಿರುದ್ದ ಮಾತನಾಡುವ ನನ್ನ ಬಾಯಿ ಮುಚ್ಚಿಸುವ ಪ್ರಯತ್ನವಾಗಿ ಹೀಗೆ ಮಾಡಲಾಗುತ್ತಿದೆ. ಆದರೆ ನಾನು ಹೋರಾಟ ಮುಂದುವರೆಸುತ್ತೇನೆ. ರಾಜಕೀಯ ಅಪೇಕ್ಷೆ ಇಲ್ಲ. ನನ್ನ ಹತ್ಯೆಯಾದರೆ ಸಂಘ ಪರಿವಾರದ ಯಾವ ನಾಯಕರೂ ನನ್ನ ಅಂತಿಮ ದರ್ಶನಕ್ಕೆ ಬರಬಾರದು, ಶವ ಮೆರವಣಿಗೆ ಮಾಡಬಾರದು ಎಂದು ಹೇಳಿದರು

ಡಿ.03ರಂದು ನಡೆಯಲಿದೆ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಸಾಮಾನ್ಯ ಜ್ಞಾನ ಪರೀಕ್ಷಾ ಸ್ಪರ್ಧೆ

Posted by Vidyamaana on 2023-11-24 11:50:09 |

Share: | | | | |


ಡಿ.03ರಂದು ನಡೆಯಲಿದೆ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಸಾಮಾನ್ಯ ಜ್ಞಾನ ಪರೀಕ್ಷಾ ಸ್ಪರ್ಧೆ

ಪುತ್ತೂರು : ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯ ಸಂಯೋಜನೆಯಲ್ಲಿ, ಪುತ್ತೂರು ನಗರ ಆರಕ್ಷಕ ಉಪನಿರೀಕ್ಷಕರಾಗಿರುವ ಆಂಜನೇಯ ರೆಡ್ಡಿ ರವರ ಮಾರ್ಗದರ್ಶನದಲ್ಲಿ ಡಿಸೆಂಬರ್ 3ರಂದು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜು(ಸ್ವಾಯತ್ತ) ನಲ್ಲಿ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತೇಜಿಸುವ ದೃಷ್ಟಿಯಿಂದ ಮಾದರಿ ಸಾಮಾನ್ಯ ಜ್ಞಾನ ಪರೀಕ್ಷಾ ಸ್ಪರ್ಧೆಯು ನಡೆಯಲಿದೆ.

ಕೆ.ಎ.ಎಸ್,  ಎಫ್.ಡಿ.ಎ, ಎಸ್.ಡಿ.ಎ,  ಪಿ.ಎಸ್.ಐ, ಪಿ.ಸಿ, ಪಿ.ಡಿ.ಒ, ಬ್ಯಾಂಕಿಂಗ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿಯಲ್ಲಿರುವವರಿಗೆ ಪ್ರೇರಣೆ ನೀಡಲು ರಾಜ್ಯದಲ್ಲೇ ಪ್ರಥಮ ಬಾರಿಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಪಿಯುಸಿ / ಪದವಿ ಓದುತ್ತಿರುವ / ಓದು ಮುಗಿಸಿರುವ 40 ವರ್ಷದ ವರೆಗಿನ ಅಭ್ಯರ್ಥಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಮೊದಲು ನೋಂದಣಿ ಮಾಡಿದ 1000 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಋಣಾತ್ಮಕ ಅಂಕಗಳನ್ನು ಪರಿಗಣಿಸಲಾಗುತ್ತದೆ.100 ಅಂಕಗಳ ಪ್ರಶ್ನೆ ಪತ್ರಿಕೆ ಇದಾಗಿದ್ದು, ಬಹು ಆಯ್ಕೆಯ ಪ್ರಶ್ನೆಗಳಿರುತ್ತವೆ. ಕಾಲಾವಕಾಶ 90 ನಿಮಿಷ (ಬೆಳಿಗ್ಗೆ 11:00 ರಿಂದ 12:30). 

ಭಾಗವಹಿಸುವ ಅಭ್ಯರ್ಥಿಗಳು ಬೆಳಿಗ್ಗೆ 10:00 ರ ಒಳಗಾಗಿ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಹಾಜರಿರತಕ್ಕದ್ದು. ನಂತರ ಬಂದವರಿಗೆ ಅವಕಾಶವಿಲ್ಲ. ಪರೀಕ್ಷಾ ಪತ್ರಿಕೆ ಕನ್ನಡ ಮಾಧ್ಯಮದಲ್ಲಿ ಇರುತ್ತದೆ. ಆಯೋಜಕರ ತೀರ್ಮಾನವೇ ಅಂತಿಮವಾಗಿರುತ್ತದೆ. ನೋಂದಣಿಗಾಗಿ ವಿದ್ಯಾಮಾತಾದ ಪುತ್ತೂರು / ಸುಳ್ಯ ಕಛೇರಿಗೆ 26 ನವೆಂಬರ್ 2023ರ ಒಳಗಾಗಿ ಭೇಟಿ ನೀಡಬಹುದು. ಇಲ್ಲವೇ ಇಲ್ಲಿ ನೀಡಿರುವ QR ಕೋಡ್ ಬಳಸಿ ನೋಂದಾಯಿಸಿಕೊಳ್ಳಬಹುದು.



 ಹೆಚ್ಚಿನ ಮಾಹಿತಿಗಾಗಿ ವಿದ್ಯಾಮಾತಾ  ಅಕಾಡೆಮಿ,ಹಿಂದೂಸ್ತಾನ್ ಕಾಂಪ್ಲೇಕ್ಸ್, ಎಪಿಯಂಸಿ ರಸ್ತೆ, ಪುತ್ತೂರು. ದ.ಕ

ಫೋನ್ ನಂ. :  9148935808 / 9620468869

ಸುಳ್ಯ ಶಾಖೆ :

ವಿದ್ಯಾಮಾತಾ ಅಕಾಡೆಮಿ

 ಟಿ.ಎ.ಪಿ.ಸಿ.ಎಂ.ಎಸ್  ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದ.ಕ 574239

PH: 9448527606 ನ್ನು ಸಂಪರ್ಕಿಸಬಹುದು.

ಆಂಟಿಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್

Posted by Vidyamaana on 2023-09-29 07:31:53 |

Share: | | | | |


ಆಂಟಿಯ  ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್

ಕಾರವಾರ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ ಬ್ಲ್ಯಾಕ್ ಮೇಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ದೇವಾಲಯ ಹಿತರಕ್ಷಣಾ ವೇದಿಕೆಯ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಎಂಬಾತನನ್ನು ಕಾರವಾರ ಪೋಲಿಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಪ್ರಕರಣದ ವಿವರ :

    ದೂರುದಾರ ವಿವಾಹಿತ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಉಳ್ಳವಳಾಗಿದ್ದು, ಮೊಬೈಲ್ ನಲ್ಲಿರುವ ಕ್ಲಬ್ ಹೌಸ್ ಅಪ್ಲಿಕೇಷನ್ ನಲ್ಲಿ ಆಗಾಗ ಹಾಡು ಹಾಡುತ್ತಿದ್ದಳು. ಕಳೆದ 2020 ರಲ್ಲಿ ಕ್ಲಬ್ ಹೌಸ್ ಅಪ್ಲಿಕೇಶನ್ ಮೂಲಕ ಈಕೆಗೆ ಆರೋಪಿ ಪ್ರಶಾಂತ ಭಟ್ ಮಾಣಿಲ, ಪ್ರಾಯ: 35 ವರ್ಷ, ವೃತ್ತಿ: ಮನೆಕೆಲಸ, ಸಾ, ಅರ್ಲಪದವು, ತಾ: ಪುತ್ತೂರು, ದಕ್ಷಿಣ ಕನ್ನಡ ಜಿಲ್ಲೆ ಈತನ ಪರಿಚಯ ಆಗಿದ್ದು, ಇದರ ಆ್ಯಪ್‌ನಲ್ಲಿ ಇಬ್ಬರೂ ಚಾಟ್ ಮಾಡುತ್ತಾ ಇದ್ದವರು, ನಂತರ ಫೇಸ್ ಬುಕ್ ನಲ್ಲಿ ಇಬ್ಬರೂ ಫ್ರೆಂಡ್ ಆಗಿದ್ದರು.ಇದಾದ ಬಳಿಕ ಕ್ರಮೇಣ ಇಬ್ಬರೂ ಇಷ್ಟಪಡುತ್ತಿದ್ದು, ನಂತರದ ದಿನಗಳಲ್ಲಿ ಆರೋಪಿ ದೂರುದಾರಳಿಗೆ ನಿನಗೆ ಆರ್ಕೆಸ್ಟ್ರಾದಲ್ಲಿ ಹಾಡಲು ಅವಕಾಶ ಕೊಡಿಸುವುದಾಗಿ ಹೇಳಿ ಆಸೆ ಹುಟ್ಟಿಸಿದ್ದು, ನಂತರ ದೂರುದಾರಳು ತನ್ನ ಮೊಬೈಲ್ ನಂಬರನ್ನು ಕೂಡ ಆರೋಪಿಗೆ ನೀಡಿ, ಇಬ್ಬರೂ ಪರಸ್ಪರ 2 ವರ್ಷಗಳ ತನಕ ಫೋನ್ ನಲ್ಲಿ ಮೆಸೇಜ್ ಹಾಗೂ ಕಾಲ್ ದಲ್ಲಿ ಸಂಪರ್ಕದಲ್ಲಿ ಇದ್ದರು ಎನ್ನಲಾಗಿದೆ


   ಆರೋಪಿಯು ದೂರುದಾರಳಿಗೆ ನಿನ್ನನ್ನು ಭೇಟಿಯಾಗಬೇಕು ಎಂದು ತನಗೆ ಅನಿಸುತ್ತಿದೆ ಎಂದು ಮನವೊಲಿಸಿ ಕಳೆದ 2023 ಜನವರಿ ಕೊನೆಯ ವಾರದಲ್ಲಿ ಒಂದು ದಿನದಂದು ಶಿರಸಿ ಮಾರಿಗುಡಿ ದೇವಸ್ಥಾನದಲ್ಲಿ ಭೇಟಿಯಾಗಿ, ಅಲ್ಲಿಂದ ಶಿರಸಿಯ ಖಾಸಗಿ ಲಾಡ್ಜ್ ಗೆ ಆರೋಪಿಯು ದೂರುದಾರಳನ್ನು ಕರೆದುಕೊಂಡು ಹೋಗಿದ್ದು, ಅಲ್ಲಿ ರೂಮ್ ಮಾಡಿ ಆ ದೂರುದಾರಳ ಮೇಲೆ ಬಲಾತ್ಕಾರದಿಂದಲೈಂಗಿಕ ಸಂಭೋಗ ಮಾಡಿದ್ದ ಎನ್ನಲಾಗಿದೆ.

ಇದಾದ ನಂತರ 2023 ರ ಫೆಬ್ರುವರಿ ಮೊದಲನೇ ವಾರದಲ್ಲಿ ಮತ್ತೆ ಅದೇ ಶಿರಸಿಯ ಖಾಸಗಿ ಲಾಡ್ಜ್‌ಗೆ ಆರೋಪಿಯು ದೂರುದಾರಳನ್ನು ಕರೆದುಕೊಂಡು ಹೋಗಿ, ಅಲ್ಲಿ ದೂರುದಾರಳ ಮೇಲೆ ಬಲಾತ್ಕಾರದಿಂದ ಲೈಂಗಿಕ ಸಂಭೋಗ ಮಾಡಿದ್ದಲ್ಲದೇ ಈ ಎರಡೂ ಘಟನೆಯ ವೇಳೆ ಆರೋಪಿ ದೂರುದಾರಳೊಂದಿಗೆ ತನ್ನ ಫೋಟೋಗಳನ್ನು ತೆಗೆದುಕೊಂಡಿದ್ದವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಬಳಿಕ ಆರೋಪಿಯು ಪ್ರತಿ ದಿನ ವಾಟ್ಸಪ್‌ನಲ್ಲಿ ಮೆಸೆಜ್ ಮಾಡಿ, ನನ್ನ ನಿನ್ನ ಇಬ್ಬರ ಫೋಟೋ ಹಾಗೂ ನಿನ್ನ ಖಾಸಗಿ ವೀಡಿಯೋ ಹಾಗೂ ಫೋಟೋಗಳನ್ನು ನಿನ್ನ ತಾಯಿ ಹಾಗೂ ನಿನ್ನ ಗಂಡನಿಗೆ ಕಳುಹಿಸುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ್ದು, ನಂತರ ದೂರುದಾರಳಿಗೆ ಆರೋಪಿಯು ವೀಡಿಯೋ ಕಾಲ್ ಮಾಡಿ, ಬೆತ್ತಲೆ ದೇಹವನ್ನು ತೋರಿಸುವಂತೆ ಹೆದರಿಸಿ, ಅದರ ಸ್ಕ್ರೀನ್ ಶಾಟ್ ತೆಗೆದುಕೊಂಡಿದ್ದ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಬಳಿಕ ಆರೋಪಿಯು ಪ್ರತಿ ದಿನ ವಾಟ್ಸಪ್‌ನಲ್ಲಿ ಮೆಸೆಜ್ ಮಾಡಿ, ನನ್ನ ನಿನ್ನ ಇಬ್ಬರ ಫೋಟೋ ಹಾಗೂ ನಿನ್ನ ಖಾಸಗಿ ವೀಡಿಯೋ ಹಾಗೂ ಫೋಟೋಗಳನ್ನು ನಿನ್ನ ತಾಯಿ ಹಾಗೂ ನಿನ್ನ ಗಂಡನಿಗೆ ಕಳುಹಿಸುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ್ದು, ನಂತರ ದೂರುದಾರಳಿಗೆ ಆರೋಪಿಯು ವೀಡಿಯೋ ಕಾಲ್ ಮಾಡಿ, ಬೆತ್ತಲೆ ದೇಹವನ್ನು ತೋರಿಸುವಂತೆ ಹೆದರಿಸಿ, ಅದರ ಸ್ಕ್ರೀನ್ ಶಾಟ್ ತೆಗೆದುಕೊಂಡಿದ್ದಇದಾದ ಬಳಿಕ ನನಗೆ ಹಣದ ಸಮಸ್ಯೆ ಇದೆ, ನೀನು ನನಗೆ ಹಣ ನೀಡು, ಇಲ್ಲವಾದಲ್ಲಿ ನಾನು ನಿನ್ನ ಬೆತ್ತಲೆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಅಪಲೋಡ್ ಮಾಡುವೆ ಎಂದು ಪ್ರತಿ ದಿನ ಮಾನಸಿಕ ಕಿರುಕುಳ ನೀಡಿದ್ದ. ಆದ್ದರಿಂದ ದೂರುದಾರ ಮಹಿಳೆ ಹೆದರಿಕೊಂಡು ಈ ವಿಷಯವನ್ನು ತನ್ನ ಗಂಡನಿಗೆ ತಿಳಿಸಿ, ರೂ. 25,000/- ಗಳನ್ನು ಆರೋಪಿಯ ಮೊಬೈಲ್ ನಂಬರಿಗೆ ಗೂಗಲ್ ಪೇ ಮಾಡಿಸಿರುತ್ತಾಳೆ. ಆದರೂ ಆರೋಪಿ ಪ್ರಶಾಂತ್ ಭಟ್ ಮಾಣಿಲ ತನಗೆ ಇನ್ನೂ ಹಣ ಬೇಕು ಎಂದು ದೂರುದಾರಳಿಗೆ ಬ್ಲ್ಯಾಕ್‌ ಮೇಲ್ ಮಾಡುತ್ತಾ, ಆಕೆಯ ಖಾಸಗಿ ಫೋಟೋಗಳನ್ನು ಹಾಗೂ ತನ್ನ ಜೊತೆ ಇರುವ ಫೋಟೋಗಳನ್ನು ದೂರುದಾರಳ ತಾಯಿಯ ಮೊಬೈಲಿಗೆ ವಾಟ್ಸಪ್ ಮೂಲಕ ಕಳಿಸಿದ್ದ ಎನ್ನಲಾಗಿದೆ.ಅಷ್ಟೇ ಅಲ್ಲದೇ ನಂತರ ಫೇಸ್ ಬುಕ್ ನಲ್ಲಿ ದೂರುದಾರ ಮಹಿಳೆಯ ಸ್ನೇಹಿತರಿಗೂ ಕಳುಹಿಸಿದ್ದಾನೆ. ನಂತರ ದೂರುದಾರಳ ಗಂಡನಿಗೆ ನಿನ್ನ ಹೆಂಡತಿಯ ಮರ್ಯಾದೆ ಉಳಿಯಬೇಕೆಂದರೆ, 7 ಲಕ್ಷ ರೂಪಾಯಿ ನೀಡಿ, ಮರ್ಯಾದೆ ಉಳಿಸಿಕೋ ಎಂದು ಆತನಿಗೆ ಬ್ಯಾಕ್‌ಮೇಲ್ ಮಾಡಿದ್ದು ಹಾಗೂ ದೂರುದಾರಳಿಗೆ ಅವಾಚ್ಯ ಶಬ್ದಗಳಿಂದ ಬೈದು, ದುಡ್ಡು ನೀಡದಿದ್ದರೆ ನಿಮ್ಮನ್ನು ಜೀವಸಹಿತ ಬಿಡುವುದಿಲ್ಲ ಎಂದು ಜೀವದ ಬೆದರಿಕೆ ಹಾಕಿದ್ದಾನೆಂದು‌ ಆರೋಪಿಸಲಾಗಿದೆನೊಂದ ದೂರುದಾರ ಮಹಿಳೆ ತನ್ನ ಮನೆಯವರಲ್ಲಿ ಈ ಬಗ್ಗೆ ಚರ್ಚಿಸಿ ಪೋಲಿಸ್ ದೂರು ನೀಡಲು ವಿಳಂಬವಾಗಿದ್ದು, ಮನೆ ಜನರ ಮರ್ಯಾದೆಗೆ ಅಂಜಿ ಇಷ್ಟು ದಿನ ದೂರು ನೀಡಿದೇ ಇದ್ದಿದ್ದನ್ನೇ ಚಾನ್ಸ್ ಎಂದು ಭಾವಿಸಿ ಬ್ಲ್ಯಾಕ್ ಮೇಲ್ ಗೆ ಇಳಿದಿದ್ದ ಆರೋಪಿ ಪ್ರಶಾಂತ ಭಟ್ ಮಾಣಿಲನ ವಿರುದ್ಧ ಸದ್ಯ ಕಾರವಾರ ಮಹಿಳಾ ಪೋಲಿಸ್ ಠಾಣೆಯಲ್ಲಿ ಐಪಿಸಿ 376,376(N), 504,506,503,384 ಮತ್ತು IT Act 2008ರ 67(A) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದುಆರೋಪಿಯನ್ನು ಬಂಧಿಸಿ ಜೈಲಿಗೆ ರವಾನಿಸಲಾಗಿದೆ

ಪಿಕಪ್ ವಾಹನಕ್ಕೆ ಮರ ತುಂಬಿಸುವ ವೇಳೆ ಮೈಮೇಲೆ ಬಿದ್ದ ಮರ -ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷ ಗೋಪಾಲಕೃಷ್ಣ ಮೃತ್ಯು

Posted by Vidyamaana on 2023-06-05 04:49:46 |

Share: | | | | |


ಪಿಕಪ್ ವಾಹನಕ್ಕೆ ಮರ ತುಂಬಿಸುವ ವೇಳೆ  ಮೈಮೇಲೆ ಬಿದ್ದ ಮರ -ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷ ಗೋಪಾಲಕೃಷ್ಣ  ಮೃತ್ಯು

ಪುತ್ತೂರು : ಪಿಕಪ್ ವಾಹನಕ್ಕೆ ಮರ ತುಂಬಿಸುವ ವೇಳೆ ಮೈಮೇಲೆ ಬಿದ್ದು ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷ ಗೋಪಾಲಕೃಷ್ಣ ರವರು ಮೃತಪಟ್ಟಿರುವ ಘಟನೆ ನಡೆದಿದೆ.ಬಡಗನ್ನೂರು ಗ್ರಾಮದ ಬಟ್ಯಂಗಲ ದಿ. ಕೊಲ್ಲಯ್ಯ ಒಕ್ಕಲಿಗ ರವರ ಪುತ್ರ ಗೋಪಾಲಕೃಷ್ಣ ಮೃತರು.ಮನೆಯ ಜಾಗದಲ್ಲಿ ಮರದ ದಿಮ್ಮಿಯನ್ನು ಪಿಕಪ್ ಗೆ ತುಂಬಿಸುವ ವೇಳೆ ಮರ ಹಿಂದಕ್ಕೆ ಬಂದು ಗೋಪಾಲಕೃಷ್ಣ ರವರ ಮೈಮೇಲೆ ಬಿದ್ದು ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆತರುವ ವೇಳೆ ಅವರು ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತ ಗೋಪಾಲಕೃಷ್ಣ ರವರು ಬಡಗನ್ನೂರು ಗ್ರಾ.ಪಂ ಸದಸ್ಯ ಹಾಗೂ ಸುಳ್ಯಪದವು ಯುವ ಶಕ್ತಿ ಬಳಗದ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ತಾಯಿ, ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

BREAKING:ಪೇಟಿಎಂ SVP ಪ್ರವೀಣ್‌ ಶರ್ಮಾ ರಾಜೀನಾಮೆ

Posted by Vidyamaana on 2024-03-24 13:47:23 |

Share: | | | | |


BREAKING:ಪೇಟಿಎಂ SVP ಪ್ರವೀಣ್‌ ಶರ್ಮಾ ರಾಜೀನಾಮೆ

ನವದೆಹಲಿ:ಪೇಟಿಎಂ ಬ್ರಾಂಡ್ನ ಮಾಲೀಕತ್ವ ಹೊಂದಿರುವ ಮತ್ತು ನಿರ್ವಹಿಸುತ್ತಿರುವ ಒನ್ 97 ಕಮ್ಯುನಿಕೇಷನ್ಸ್ ಲಿಮಿಟೆಡ್ (ಒಸಿಎಲ್) ಶನಿವಾರ ಎಕ್ಸ್ಚೇಂಜ್ ಫೈಲಿಂಗ್ನಲ್ಲಿ, ವ್ಯವಹಾರದ ಹಿರಿಯ ಉಪಾಧ್ಯಕ್ಷ ಪ್ರವೀಣ್ ಶರ್ಮಾ ಮಾರ್ಚ್ 23 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಔಪಚಾರಿಕವಾಗಿ ಘೋಷಿಸಿದೆ.ಶರ್ಮಾ ತಮ್ಮ ವೃತ್ತಿಪರ ಪ್ರಯಾಣದ ಮುಂದಿನ ಹಂತದಲ್ಲಿ ಅವಕಾಶಗಳನ್ನು ಹುಡುಕಲು ಹುದ್ದೆಯಿಂದ ಕೆಳಗಿಳಿಯುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪೇಟಿಎಂಗೆ ಸೇರುವ ಮೊದಲು, ಶರ್ಮಾ ಭಾರತ ಮತ್ತು ಎಪಿಎಸಿ ಪ್ರದೇಶವನ್ನು ಒಳಗೊಂಡ ಗೂಗಲ್ನಲ್ಲಿ ನಾಯಕತ್ವದ ಹುದ್ದೆಗಳಲ್ಲಿ ಒಂಬತ್ತು ವರ್ಷಗಳನ್ನು ಕಳೆದರು.

ಇತ್ತೀಚಿನ ಊಹಾಪೋಹಗಳಿಗೆ ಉತ್ತರಿಸಿದ ಪೇಟಿಎಂ, ನಿರ್ದಿಷ್ಟ ವ್ಯವಹಾರ ವಿಭಾಗಗಳಲ್ಲಿ 25-50 ಪ್ರತಿಶತದಷ್ಟು ಉದ್ಯೋಗಿಗಳನ್ನು ಕಡಿತಗೊಳಿಸುವ ವರದಿಗಳನ್ನು ಬಲವಾಗಿ ನಿರಾಕರಿಸಿದೆ.

ಇಂತಹ ವರದಿಗಳು ಆಧಾರರಹಿತ ಮತ್ತು ಕಂಪನಿಯ ಕಾರ್ಯಾಚರಣೆ ಮತ್ತು ಕಾರ್ಯತಂತ್ರದ ಯೋಜನೆಯನ್ನು ತಪ್ಪಾಗಿ ಪ್ರತಿನಿಧಿಸುತ್ತವೆ ಎಂದು ಪೇಟಿಎಂ ತನ್ನ ಫೈಲಿಂಗ್ನಲ್ಲಿ ತಿಳಿಸಿದೆ.ಫೈಲಿಂಗ್ ಪ್ರಕಾರ, ಪೇಟಿಎಂ ಪ್ರಸ್ತುತ ತನ್ನ ವಾರ್ಷಿಕ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ತೊಡಗಿದೆ, ಇದು ತಂಡದ ಕಾರ್ಯಕ್ಷಮತೆಯನ್ನು ನಿರ್ಣಯಿಸುವ ಮತ್ತು ಹೆಚ್ಚಿಸುವ ಗುರಿಯನ್ನು ಹೊಂದಿರುವ ವಾಡಿಕೆಯ ಸಾಂಸ್ಥಿಕ ಅಭ್ಯಾಸವಾಗಿದೆ. ಕಾರ್ಯಕ್ಷಮತೆಯ ಮೌಲ್ಯಮಾಪನಗಳು ಮತ್ತು ಪಾತ್ರ ಜೋಡಣೆಗಳ ಮೇಲೆ ಕೇಂದ್ರೀಕರಿಸಿದ ಈ ಪ್ರಕ್ರಿಯೆಯು ಕೈಗಾರಿಕೆಗಳಾದ್ಯಂತ ಪ್ರಮಾಣಿತವಾಗಿದೆ ಮತ್ತು ವಜಾಗಳನ್ನು ಸೂಚಿಸುವುದಿಲ್ಲ.

ಕಂಪನಿಯು ತನ್ನ ಪುನರ್ರಚನೆ ಪ್ರಯತ್ನಗಳು ಮತ್ತು ಕಾರ್ಯಕ್ಷಮತೆಗೆ ಸಂಬಂಧಿಸಿದ ಹೊಂದಾಣಿಕೆಗಳನ್ನು ವಜಾಗೊಳಿಸುವಿಕೆ ಎಂದು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟಪಡಿಸಿದೆ. ಪೇಟಿಎಂ ಬೆಳೆಯಲು ತನ್ನ ಬದ್ಧತೆಯನ್ನು ಭರವಸೆ ನೀಡುತ್ತದೆ ಎಂದು ಫೈಲಿಂಗ್ ಹೇಳುತ್ತದೆ.



Leave a Comment: