ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಸುದ್ದಿಗಳು News

Posted by vidyamaana on 2024-07-24 18:06:21 | Last Updated by Vidyamaana on 2024-07-24 18:06:21

Share: | | | | |


ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಕಾರವಾರ: ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದನ್ನು ಖಚಿತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ.

ನದಿಯ ಕೆಳಭಾಗದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು ಅದಕ್ಕಾಗಿ ಶೋಧ ನಡೆಯುತ್ತಿದೆ.

ಶಿರೂರಿನಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನದಂದು, ಲಾರಿಯ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಪಡೆಯಲಾಗಿದೆ. ಇಂದು ಬೆಳಗ್ಗೆ ಬೂಮ್ ಲೆಂಗ್ತ್ ಕ್ರೇನ್ ಬಂದಿದ್ದು, ತಪಾಸಣೆ ಪುನರಾರಂಭವಾಗಿದೆ. ಈ ಯಂತ್ರವು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ.

ಈ ಕುರಿತು ಕೃಷ್ಣ ಬೈರೇಗೌಡ Xನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ X ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.ಜುಲೈ 16 ರಂದು ಬೆಳಿಗ್ಗೆ ಕೋಝಿಕ್ಕೋಡ್‌ನ ಕಂಡ್ಯಕ್ಕಲ್ ಮೂಲದ ಅರ್ಜುನ್ (30) ಕರ್ನಾಟಕ-ಗೋವಾ ಗಡಿಯಲ್ಲಿ ಹಾದು ಹೋಗುವ ಪನ್ವೇಲ್-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಭೂಕುಸಿತದಲ್ಲಿ ಟೀ ಅಂಗಡಿ ಮಾಲೀಕ ಸೇರಿದಂತೆ 10 ಜನರು ಸಾವನ್ನಪ್ಪಿದ ಸ್ಥಳದಲ್ಲಿ ಲಾರಿಯ ಜಿಪಿಎಸ್ ಸ್ಥಳವನ್ನು ಕೊನೆಯದಾಗಿ ಪತ್ತೆ ಹಚ್ಚಲಾಯಿತು.

 Share: | | | | |


ಪೋಕ್ಸೊ ಕೇಸ್: ಜಾಮೀನಿನ ಮೇಲೆ ಬಿಡುಗಡೆಯಾದ 4 ದಿನಗಳಲ್ಲೇ ಮುರುಘಾ ಶ್ರೀ ಮರು ಬಂಧನ

Posted by Vidyamaana on 2023-11-20 15:51:04 |

Share: | | | | |


ಪೋಕ್ಸೊ ಕೇಸ್: ಜಾಮೀನಿನ ಮೇಲೆ ಬಿಡುಗಡೆಯಾದ 4 ದಿನಗಳಲ್ಲೇ ಮುರುಘಾ ಶ್ರೀ ಮರು ಬಂಧನ

ದಾವಣಗೆರೆ: ನವೆಂಬರ್.16ರಂದು ಪೋಕ್ಸೊ ಮೊದಲನೇ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನಿನ ಮೇಲೆ ಬಿಡುಗಡೆ ಕೂಡ ಆಗಿದ್ದರು. ಆದ್ರೇ 2ನೇ ಪೋಕ್ಸೊ ಪ್ರಕರಣದಲ್ಲಿ ಜಾಮೀನು ಪಡೆಯೋ ಮುನ್ನವೇ ಬಿಡುಗಡೆ ಆಗಿದ್ದ ಕಾರಣ, ಅವರನ್ನು ಇಂದು ಜಾಮೀನು ಪಡೆದ 4 ದಿನಗಳಲ್ಲೇ ಮತ್ತೆ ಬಂಧಿಸಲಾಗಿದೆ.ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಕಳೆದ 14 ತಿಂಗಳುಗಳ ಕಾಲ ಜೈಲು ಸೇರಿದ್ದರು. ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ಬಂಧನದಲ್ಲಿದ್ದಂತ ಅವರಿಗೆ ಕೆಲ ದಿನಗಳ ಹಿಂದಷ್ಟೇ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು. ಆ ಜಾಮೀನಿನ ಮೇಲೆ ಬಿಡುಗಡೆ ಕೂಡ ಆಗಿದ್ದರು.


ಜಾಮೀನಿನ ಮೇಲೆ ಬಿಡುಗಡೆಗೊಂಡಿರುವಂತ ಮುರುಘಾ ಶ್ರೀಗಳು 2ನೇ ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದ್ರೇ ಈ ಆದೇಶವನ್ನು ಪಾಲಿಸದೇ ವೀಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರಾಗಿದ್ದರು. ಇದನ್ನು ಸರ್ಕಾರಿ ವಕೀಲರು ಪ್ರಶ್ನಿಸಿದ್ದರು. ಜೊತೆಗೆ ಆದೇಶ ಉಲ್ಲಂಘನೆ ಸಂಬಂಧ ಅವರ ವಿರುದ್ಧ ಕಾನೂನು ಕ್ರಮಕ್ಕೆ ಮನವಿ ಮಾಡಿದ್ದರು.ಸರ್ಕಾರಿ ವಕೀಲರ ಆಕ್ಷೇಪದ ನಂತ್ರ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಮುರುಘಾ ಶ್ರೀ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿದೆ. ಈ ಹಿನ್ನಲೆಯಲ್ಲಿ ಇಂದು ದಾವಣಗೆರೆಯ ವಿರಕ್ತ ಮಠಕ್ಕೆ ತೆರಳಿದಂತ ಚಿತ್ರದುರ್ಗ ಜಿಲ್ಲೆಯ ಗ್ರಾಮಾಂತರ ಠಾಣೆಯ ಪೊಲೀಸರು, ಮುರುಘಾ ಶ್ರೀಗಳನ್ನು 2ನೇ ಪೊಕ್ಸೊ ಪ್ರಕರಣದಲ್ಲಿ ಬಂಧಿಸಿದ್ದಾರೆ.

ಪ್ರೀತಿಗೆ ಪೋಷಕರ ನಿರಾಕರಣೆ; ಪ್ರೇಮಿಗಳಿಬ್ಬರು ನೇಣಿಗೆ ಶರಣು

Posted by Vidyamaana on 2024-02-03 18:08:10 |

Share: | | | | |


ಪ್ರೀತಿಗೆ ಪೋಷಕರ ನಿರಾಕರಣೆ; ಪ್ರೇಮಿಗಳಿಬ್ಬರು ನೇಣಿಗೆ ಶರಣು

ಕಲಬುರಗಿ : ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರು ನಿರಾಕರಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ. ಶಶಿಕಲಾ (20) ಗೊಲ್ಲಾಳಪ್ಪ (24) ನೇಣಿಗೆ ಶರಣಾದ ಪ್ರೇಮಿಗಳು. ಶಶಿಕಲಾ ಮತ್ತು ಗೊಲ್ಲಾಳಪ್ಪ ಇಬ್ಬರು ಕೂಡ ವರಸೆಯಲ್ಲಿ ಅಣ್ಣ ತಂಗಿ ಆಗಿದ್ದರು.ಗೊಲ್ಲಾಳಪ್ಪ ಪ್ರೀತಿಯನ್ನು ನಿರಾಕರಿಸಿ ಶಶಿಕಲಾಗೆ ಬೇರೆ ಮದುವೆ ಮಾಡಲು ಕುಟುಂಬಸ್ಥರು ಮುಂದಾಗಿದ್ದರು. ಅದರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಗ್ರಾಮದ ಯುವಕನ ಜೊತೆ ನಿಶ್ಚಿತಾರ್ಥ ಮಾಡಿಸಿದ್ದರು. ಮುಂದಿನ ತಿಂಗಳು ಮದುವೆ ಕೂಡ ನಿಶ್ಚಯವಾಗಿತ್ತು ಎನ್ನಲಾಗಿದೆ.ಪ್ರೇಯಸಿಗೆ ಮದುವೆ ನಿಶ್ಚಯ ಆಗಿರುವ ವಿಷಯ ತಿಳಿದ ಗೊಲ್ಲಾಳಪ್ಪ ನಿನ್ನೆ ರಾತ್ರಿ ಶಶಿಕಲಾಳನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾನೆ. ನಂತರ ಮಾಗಣಪುರ ಗ್ರಾಮದ ದೇವಸ್ಥಾನದಲ್ಲಿ ಜೋಡಿ ಮದುವೆ ಮಾಡಿಕೊಂಡಿದ್ದಾರೆ. ಬಳಿಕ ಅದೇ ಗ್ರಾಮದ ಹೊರವಾಲಯದ ತೋಟದ ಜಮೀನಿನಲ್ಲಿ ಇಬ್ಬರು ನೇಣಿಗೆ ಶರಣಾಗಿದ್ದಾರೆ. ಪ್ರೇಮಿಗಳಿಬ್ಬರು ನೇಣಿಗೆ ಶರಣಾಗುವ ಮುನ್ನ ತಾವು ಮದುವೆ ಮಾಡಿಕೊಂಡಿರುವುದರ ಬಗ್ಗೆ ಸೆಲ್ಫಿ ಫೋಟೋ ತೆಗೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಸ್ ಗೆ ಡಿಕ್ಕಿ‌ಹೊಡೆದ ಡಿಯೋ: ಪವಾಡಸದೃಶ ಪಾರಾದ ಸವಾರ

Posted by Vidyamaana on 2023-04-30 10:18:31 |

Share: | | | | |


ಬಸ್ ಗೆ ಡಿಕ್ಕಿ‌ಹೊಡೆದ ಡಿಯೋ: ಪವಾಡಸದೃಶ ಪಾರಾದ ಸವಾರ

ಪುತ್ತೂರು: ಮಂಜಲ್ಪಡ್ಪು ಬೈಪಾಸ್ ಜಂಕ್ಷನ್ ಬಳಿ ಡಿಯೋ ದ್ವಿಚಕ್ರ ವಾಹನ‌ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಭಾನುವಾರ ಮಧ್ಯಾಹ್ನ ನಡೆಯಿತು.

ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸಿಗೆ ಎದುರಿನಿಂದ ಬಂದ ಡಿಯೋ ದ್ವಿಚಕ್ರ ವಾಹನ ಮುಖಾಮುಖಿ ಢಿಕ್ಕಿ‌ ಹೊಡೆದಿದೆ.

ಸವಾರನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ. ಸವಾರ ಪವಾಡಸದೃಶವಾಗಿ ಪಾರಾಗಿದ್ದಾನೆ.

ಮಂಗಳೂರು : ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಪ್ರಕರಣ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಚಂದನ್ ಕುಮಾರ್ ಮೃತ್ಯು

Posted by Vidyamaana on 2024-07-03 20:52:26 |

Share: | | | | |


ಮಂಗಳೂರು : ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಪ್ರಕರಣ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಚಂದನ್ ಕುಮಾರ್ ಮೃತ್ಯು

ಮಂಗಳೂರು : ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಸಂಭವಿಸಿ ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ನಗರದ ಬಲ್ಮಠ ಬಳಿ ಬುಧವಾರ ಸಂಭವಿಸಿದೆ.ಮೃತ ಕಾರ್ಮಿಕನನ್ನು ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ (30) ಎಂದು ತಿಳಿದು ಬಂದಿದೆ.ಮಧ್ಯಾಹ್ನ ಕಟ್ಟಡದ ಕಾಮಗಾರಿ ನಡೆಯುತಿದ್ದ ವೇಳೆ ಭೂಕುಸಿತ ಸಂಭವಿಸಿ ಮಣ್ಣಿನಡಿ ಇಬ್ಬರು ಕಾರ್ಮಿಕರು ಸಿಲುಕಿದ್ದರು.

ಬೈಕ್ ನಲ್ಲಿ ಬಂದು ಮೊಬೈಲ್ ರಾಬರಿ: ಇಬ್ಬರು ಖತರ್ನಾಕ್ ಕಳ್ಳರು ಅರೆಸ್ಟ್!

Posted by Vidyamaana on 2024-02-28 11:06:18 |

Share: | | | | |


ಬೈಕ್ ನಲ್ಲಿ ಬಂದು ಮೊಬೈಲ್ ರಾಬರಿ: ಇಬ್ಬರು ಖತರ್ನಾಕ್ ಕಳ್ಳರು ಅರೆಸ್ಟ್!

ಬೆಂಗಳೂರಿನಲ್ಲಿ ಮೊಬೈಲ್ ಕಳ್ಳರ ಹಾವಳಿ ಹೆಚ್ಚಾಗಿದೆ..ಕಳ್ಳರ ಕಾಟಕ್ಕೆ ಜನ ಫೋನ್ ನಲ್ಲಿ ಮಾತಾಡೋಕು ಹೆದರೊ ಪರಿಸ್ಥಿತಿ ನಿರ್ಮಾಣ ಆಗಿದೆ..ಬೈಕ್‌ ನಲ್ಲಿ ಬರೊ ಆಸಾಮಿಗಳು ಕ್ಷಣ ಮಾತ್ರದಲ್ಲಿ ಮೊಬೈಲ್ ಕಸಿದು ಪರಾರಿ ಆಗ್ತಿದ್ದಾರೆ..ಇದು ಒಂದು ಕಡೆ ಆದ್ರೆ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿರುವ ಮೊಬೈಲ್ ಕದ್ದು ಹಣ ದೋಚ್ತಿದ್ದ ಖದೀಮ ಕೂಡ ಲಾಕ್ ಆಗಿದ್ದಾನೆ.ರಸ್ತೆಯಲ್ಲಿ ಮೊಬೈಲ್ ಹಿಡಿದು ನಿಂತ್ರೆ ನಿಮ್ಮ ಮೊಬೈಲ್ ನಿಮ್ಮ ಕೈನಲ್ಲಿ ಇರೋದೆ ಇಲ್ಲ..ಕ್ಷಣಮಾತ್ರದಲ್ಲಿ ಕಂಡವರ ಪಾಲಾಗಿಬಿಡತ್ತೆ…ಇಲ್ಲಾಗಿರೋದು ಕೂಡ ಅದೇ..ನೋಡಿ ರಸ್ತೆ ಬದಿ ಮೊಬೈಲ್ ಹಿಡಿದು ನಿಂತಿದ್ದ ವ್ಯಕ್ತಿಯ ಮೊಬೈಲ್ ಅನ್ನು ಬೈಕ್ ನಲ್ಲಿ ಬರೊ‌ ಆಸಾಮಿಗಳು ಅದ್ಹೇಗೆ ಕಿತ್ತು ಪರಾರಿ ಆಗ್ತಾರೆ ಅಂತಾ..ಇಂತಹ ಗ್ಯಾಂಗ್ ಬೆಂಗಳೂರಿನಾದ್ಯಂತ ಆಯಕ್ಟಿವ್ ಆಗಿದ್ದ ಸಾರ್ವಜನಿಕರು ಭಯದಲ್ಲೇ ಮೊಬೈಲ್ ಹಿಡಿದು ಓಡಾಡೊ ಪರಿಸ್ಥಿತಿ ನಿರ್ಮಾಣ ಆಗಿದೆ.ಹೌದು ಈ ಫೋಟೊದಲ್ಲಿ ಕಾಣ್ತಿರೊ ಆಸಾಮಿಗಳ ಹೆಸರು..ರಂಗನಾಥ್ ಮತ್ತು ಗಿರೀಶ್…ಇವ್ರು ಸಾಮಾನ್ಯದವ್ರಲ್ಲ..ಮೊಬೈಲ್ ನಲ್ಲಿ ಬೆಂಗಳೂರಿನ ರಸ್ತೆ ರಸ್ತೆಗಳಲ್ಲಿ ರೌಂಡ್ಸ್ ಹಾಕ್ತಾರೆ…ರಸ್ತೆ ಬದಿಯಲ್ಲಿ ಮೊಬೈಲ್ ಕೈನಲ್ಲಿ ಹಿಡಿದು ನಿಂತಿರೋರನ್ನೆ ಟಾರ್ಗೆಟ್ ಮಾಡ್ತಾರೆ..ಅವ್ರ ಗಮನ ಸ್ವಲ್ಪ ಅತ್ತ ಇತ್ತ ಹೋದ್ರೆ ಸಾಕು..ಕೈನಲ್ಲಿದ್ದ ಮೊಬೈಲ್ ಕಸಿದು ಪರಾರಿ ಆಗ್ತಿದ್ರು..ಸದ್ಯ ಅದೇ ಖದೀಮರು ಈಗ ಪೊಲೀಸರ ಅತಿಥಿಗಳಾಗಿದ್ದಾರೆ..ಬಂಧಿತರಿಂದ 20 ಲಕ್ಷ ಮೌಲ್ಯದ 68 ಮೊಬೈಲ್ ಫೋನ್ ವಶಕ್ಕೆ ಪಡೆದುಕೊಳ್ಳಲಾಗಿದೆ


ಇನ್ನು ಮೊಬೈಲ್ ಕಸಿದು ಪರಾರಿ ಆಗೋರ ಕಥೆ ಇದಾದ್ರೆ..ಮಹಿಳೆಯರ ವ್ಯಾನಿಟಿ‌ ಬ್ಯಾಗ್ ನಿಂದ ಮೊಬೈಲ್ ಕದ್ದು ಅವರ ಖಾತೆಯಲ್ಲಿರುವ ಹಣವನ್ನ ವರ್ಗಾವಣೆ ಮಾಡಿಕೊಳ್ತಿದ್ದ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ..ರಾಮಮೂರ್ತಿನಗರ ಪೊಲೀಸರು ವಿಘ್ನೇಶ್ ಎಂಬ ಮೊಬೈಲ್ ಕಳ್ಳತನ ಮಾಡ್ತಿದ್ದ ಆರೋಪಿಯನ್ನ ಬಂಧಿಸಿದ್ದಾರೆ‌.ಬಂಧಿತನಿಂದ 8 ಲಕ್ಷ ಮೌಲ್ಯದ 38 ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಗಿದೆ..ಆರೋಪಿಯು ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದಲ್ಲಿ ಹೊಂಚು ಹಾಕಿ ನಿಲ್ತಿದ್ದ.ಬಸ್ ಹತ್ತುವ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಹಿಂದಿನಿಂದ ಬಸ್ ಹತ್ತುವ ನೆಪದಲ್ಲಿ ವ್ಯಾನಿಟಿ ಬ್ಯಾಗ್ ನ ಜಿಪ್ ತೆಗೆದು ಮೊಬೈಲ್ ಫೋನ್ ಕಳ್ಳತನ ಮಾಡ್ತಿದ್ದ..ಮೊಬೈಲ್ ಫೋನ್ ನಲ್ಲಿ ಇರ್ತಿದ್ದ ಸಿಮ್ ಕಾರ್ಡ್ ಬೇರೊಂದು ಮೊಬೈಲ್ ಫೋನ್ ಗೆ ಹಾಕಿ ಫೋನ್ ಪೇ,ಗೂಗಲ್‌ಪೇ,ಪಿನ್ ಕೋಡ್ ಬದಲಿಸ್ತಿದ್ದ.ನಂತರ ಅವುಗಳ ಮೂಲಕ ಕಳವು ಮಾಡಿದ್ದ ಮೊಬೈಲ್ ನಂಬರ್ ಲಿಂಕ್ ಹೊಂದಿರುವ ಬ್ಯಾಂಕ್ ಗಳಲ್ಲಿರುವ ಹಣವನ್ನು ಬೇರೊಂದು ಪರಿಚಯಸ್ಥರ ಅಕೌಂಟ್ ಗೆ ವರ್ಗಾವಣೆ ಮಾಡಿ ನಂತರ ಆ ಹಣವನ್ನು ಪಡೆದುಕೊಳ್ತಿದ್ದ‌.ಸದ್ಯ ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ

ಫೆ. 10 – 12: 5ನೇ ಕೃಷಿಯಂತ್ರ ಮೇಳ 2023, ಕನಸಿನ ಮನೆ ಬೃಹತ್ ಪ್ರದರ್ಶನ

Posted by Vidyamaana on 2023-01-21 08:13:39 |

Share: | | | | |


ಫೆ. 10 – 12: 5ನೇ ಕೃಷಿಯಂತ್ರ ಮೇಳ 2023, ಕನಸಿನ ಮನೆ ಬೃಹತ್ ಪ್ರದರ್ಶನ

ಪುತ್ತೂರು: ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಕ್ಯಾಂಪ್ಕೋ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಇದರ ಆಶ್ರಯದಲ್ಲಿ ‘5ನೇ ಕೃಷಿ ಯಂತ್ರ ಮೇಳ-2023 ಹಾಗೂ ಕನಸಿನ ಮನೆ ಬೃಹತ್ ಪ್ರದರ್ಶನ ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಫೆ. 10ರಿಂದ 12ರವರೆಗೆ ನಡೆಯಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

         ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ ನಾಲ್ಕು ಯಂತ್ರಮೇಳಗಳು ಈ ವಿದ್ಯಾ ಸಂಸ್ಥೆಯ ಆವರಣದಲ್ಲಿ ನಡೆದಿದ್ದು, ಈ ಹಿಂದೆ ನಡೆದ ಮೇಳವು ಅಭೂತಪೂರ್ವ ಯಶಸ್ಸನ್ನು ಕಂಡಿತ್ತು. ಸುಮಾರು ೨ ಲಕ್ಷದಷ್ಟು ಜನ ಭೇಟಿ ನೀಡಿದ್ದರು. 2023ರಲ್ಲಿ ನಡೆಯುವ ಯಂತ್ರಮೇಳವು ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಸಂಸ್ಕಾರವನ್ನು ಕೃಷಿಕರಿಗೆ ತಲುಪಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇಲ್ಲಿ ಪ್ರಾತ್ಯಕ್ಷಿಕೆ, ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆ ಮಾಡಲಾಗಿದೆ. ದೇಶ ವಿದೇಶಗಳ ಅತ್ಯಾಧುನಿಕ ಕೃಷಿ ಯಂತ್ರೋಪಕರಣಗಳನ್ನು ಒಂದೇ ಸೂರಿನಡಿ ವೀಕ್ಷಿಸುವ ಅಪೂರ್ವ ಅವಕಾಶವನ್ನು ಕಲ್ಪಿಸಲಾಗಿದೆ. ಪ್ರಗತಿಪರ ಕೃಷಿಕರು ತಮ್ಮ ಅನುಭವದ ಆಧಾರದಲ್ಲಿ ತಾವೇ ತಯಾರಿಸಿದ ಯಂತ್ರಗಳನ್ನು ಇಲ್ಲಿ ಪ್ರದರ್ಶಿಸುತ್ತಾರೆ. ಕೃಷಿಕರ ಇಂದಿನ ಅವಶ್ಯಕತೆಗಳಿಗೆ ಸ್ಪಂದಿಸುವ ವಿಶೇಷ ಪ್ರಯತ್ನ ಇದಾಗಿದ್ದು, ಆಧುನಿಕ ಕೃಷಿ ತಂತ್ರಜ್ಞಾನದ ಮಾಹಿತಿ ನೀಡುವ ವಿಚಾರ ಸಂಕಿರಣಗಳನ್ನು ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕಟ್ಟಡ ನಿರ್ಮಾಣದ ತಾಂತ್ರಿಕತೆಯನ್ನು ಜನ ಸಾಮಾನ್ಯರಿಗೆ ತಲಪಿಸುವ ಉದ್ದೇಶದೊಂದಿಗೆ ಕನಸಿನ ಮನೆ ಎನ್ನುವ ಕಾರ್ಯಕ್ರಮ ನಡೆಸಲಾಗುತ್ತದೆ. ಸ್ಥಳೀಯವಾಗಿ ಸಿಗುವ ಸಾಮಗ್ರಿಗಳನ್ನು ಬಳಸಿ ಕಡಿಮೆ ವೆಚ್ಚದಲ್ಲಿ ಮನೆಗಳ ನಿರ್ಮಾಣ, ಕಟ್ಟಡ ನಿರ್ಮಾಣದಲ್ಲಿನ ಹೊಸ ಹೊಸ ವಿನ್ಯಾಸಗಳ ಮತ್ತು ತಂತ್ರಜ್ಞಾನದ ಬಗ್ಗೆ ಅರಿವು ಮೂಡಿಸುವುದು, ಹೊರಾಂಗಣ ಮತ್ತು ಒಳಾoಗಣ ಶೃಂಗಾರ ಸಾಧನಗಳ ಪ್ರದರ್ಶನ, ಬಳಸಬಹುದಾದ ಮತ್ತು ಬಳಸಬೇಕಾದ ಪರಿಕರಗಳ ಪ್ರದರ್ಶನವನ್ನು ಇಲ್ಲಿ ಏರ್ಪಡಿಸಲಾಗಿದೆ ಎಂದರು.

        ಯುವ ಜನತೆಯಲ್ಲಿ ಕೃಷಿ ಚಟುವಟಿಕೆಗಳ ಬಗ್ಗೆ ಆಸಕ್ತಿ ಮೂಡಿರುವ ಸಲುವಾಗಿ ಹೈಸ್ಕೂಲು, ಕಾಲೇಜು ವಿದ್ಯಾರ್ಥಿಗಳು ಅನ್ವೇಷಿಸಿದ ಕೃಷಿ ಯಂತ್ರಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿದೆ. ಕೃಷಿಯಲ್ಲಿ ತಮ್ಮದೇ ಆದ ರೀತಿಯಲ್ಲಿ ಹೊಸತನವನ್ನು ಹುಡುಕಿ ಅದಕ್ಕೆ ಪೂರಕವಾದ ಯಂತ್ರವನ್ನು ಅನ್ವೇಷಿಸಿ ಅದನ್ನು ಬಳಸಿ ಯಶಸ್ವಿಯಾದ ರೈತರ ಯಂತ್ರಗಳನ್ನು ಪ್ರದರ್ಶಿಸುವುದಕ್ಕೆ ಉಚಿತವಾದ ವೇದಿಕೆಯನ್ನು ಇಲ್ಲಿ ನೀಡಲಾಗುತ್ತದೆ. ಅಲ್ಲದೆ ಉತ್ತಮ ಸಂಶೋಧಕರನ್ನು ಗುರುತಿಸಿ ಗೌರವಿಸಲಾಗುತ್ತದೆ. ಅಲ್ಲದೇ, ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಚಾರಗೋಷ್ಠಿಗಳು ನಡೆಯಲಿದೆ. ಕೃಷಿ ಯಂತ್ರ ವಿಭಾಗದಲ್ಲಿ 140 ಸ್ಟಾಲ್ ಗಳಿವೆ. ಆಟೋಮೊಬೈಲ್ ವಿಭಾಗದಲ್ಲಿ 10, ಕನಸಿನ ಮನೆ ವಿಭಾಗದಲ್ಲಿ 73, ನರ್ಸರಿಯ 4, ವ್ಯಾಪಾರಕ್ಕೆ ಸಂಬಂದಿಸಿದ 26, ಆಹಾರ ಮಳಿಗೆಗಳು 19, ಹಾಗೂ ಸಾವಯವ ಕೃಷಿ ಮಳಿಗೆಗಳು 20 ಹೀಗೆ ಒಟ್ಟು 292 ಮಳಿಗೆಗಳು ಈ ಮೇಳದಲ್ಲಿವೆ ಎಂದು ಮಾಹಿತಿ ನೀಡಿದರು.

         ಪತ್ರಿಕಾಗೋಷ್ಠಿಯಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಎಂಡಿ ಕೃಷ್ಣ ಕುಮಾರ್ ರೈ, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್, ಕೃಷಿ ಯಂತ್ರ ಮೇಳದ ಸಂಯೋಜಕ ರವಿಕೃಷ್ಣ ಡಿ. ಕಲ್ಲಾಜೆ, ಕ್ಯಾಂಪ್ಕೋ ನಿರ್ದೇಶಕರಾದ ರಾಘವೇಂದ್ರ ಭಟ್ ಕೆದಿಲ, ಕೃಷ್ಣ ಪ್ರಸಾದ್ ಮಡ್ತಿಲ ಉಪಸ್ಥಿತರಿದ್ದರು.



Leave a Comment: