ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

Posted by Vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

Posted by Vidyamaana on 2023-04-11 20:45:43 |

Share: | | | | |


ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

ಪುತ್ತೂರು: ರಾಜಕೀಯ ಜಂಜಾಟಕ್ಕೆ ಕಾರಣವಾಗಿದ್ದ ಪುತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಅವರನ್ನು ಕಣಕ್ಕಿಳಿಸಲಾಗಿದೆ.

ಪೆರಾಜೆ:ರಾಘವೇಶ್ವರ ಭಾರತೀ ಸ್ವಾಮೀಜಿಯ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Posted by Vidyamaana on 2023-10-15 14:23:19 |

Share: | | | | |


ಪೆರಾಜೆ:ರಾಘವೇಶ್ವರ ಭಾರತೀ ಸ್ವಾಮೀಜಿಯ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಬಂಟ್ವಾಳ : ನವರಾತ್ರಿಯ ನಿಮಿತ್ತ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠಕ್ಕೆ ಆಗಮಿಸಿರುವ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರನ್ನು ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿಯಾಗಿ ಆಶೀರ್ವಾದ ಪಡೆದರು.

ಈ ವೇಳೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶೈಲಜಾ ಭಟ್ ಕೊಂಕೋಡಿ, ಹವ್ಯಕ ಪರಿಷತ್ತಿನ ಶ್ರೀಪ್ರಕಾಶ್ ಕುಕ್ಕಿಲ, ನೇರಳಕಟ್ಟೆ ಸಿಎ ಬ್ಯಾಂಕ್ ಅಧ್ಯಕ್ಷ ಪುಷ್ಪರಾಜ್ ಚೌಟ ಉಪಸ್ಥಿತರಿದ್ದರು.

ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್‌ಗೆ 4ರಿಂದ 6 ರೂಪಾಯಿ ಕಡಿತಕ್ಕೆ ಚಿಂತನೆ

Posted by Vidyamaana on 2023-12-31 04:55:39 |

Share: | | | | |


ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್‌ಗೆ 4ರಿಂದ 6 ರೂಪಾಯಿ ಕಡಿತಕ್ಕೆ ಚಿಂತನೆ

ನವದೆಹಲಿ: 2024ರಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರವು ಶೀಘ್ರದಲ್ಲೇ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಇಳಿಕೆ ಮಾಡಲು ಚಿಂತನೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ. ಪ್ರತಿ ಲೀಟರ್‌ಗೆ 4 ರಿಂದ 6 ರೂಪಾಯಿಗಳವರೆಗೆ ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ. ಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ ತಗ್ಗಿಸಲು ತೈಲ ಮಾರುಕಟ್ಟೆ ಕಂಪನಿಗಳೊಂದಿಗೆ ಚರ್ಚೆಗಳು ನಡೆಯುತ್ತಿವೆ. ಬೆಲೆ ಕಡಿತದ ಸಮಾನ ಹೊರೆಯನ್ನು ಸರ್ಕಾರ ಮತ್ತು ತೈಲ ಮಾರುಕಟ್ಟೆ ಕಂಪೆನಿಗಳಿಗೆ ವಹಿಸುವ ಪ್ರಸ್ತಾವನೆಯು ಪರಿಗಣನೆಯಲ್ಲಿದೆ ಎಂದು ಬಿಸಿನೆಸ್‌ ಟುಡೇ ವರದಿ ತಿಳಿಸಿದೆ. ಕೇಂದ್ರವು ಪ್ರತಿ ಲೀಟರ್‌ಗೆ 10 ರೂ.ವರೆಗೆ ಹೆಚ್ಚಿನ ಬೆಲೆ ಕಡಿತಕ್ಕೆ ಮುಂದಾಗಬಹುದು. ಇಂಧನ ಬೆಲೆ ಕಡಿತವು ನವೆಂಬರ್‌ನಲ್ಲಿ ಮೂರು ತಿಂಗಳ ಗರಿಷ್ಠ 5.55% ಕ್ಕೆ ಏರಿದೆ. ಪೆಟ್ರೋಲಿಯಂ ಸಚಿವಾಲಯ ಮತ್ತು ಹಣಕಾಸು ಸಚಿವಾಲಯ ಇತ್ತೀಚೆಗೆ ಚರ್ಚೆ ನಡೆಸಿದ್ದು, ಈ ಕುರಿತು ಪ್ರಧಾನಿ ಕಾರ್ಯಾಲಯಕ್ಕೆ ಆಯ್ಕೆಗಳನ್ನು ಸಲ್ಲಿಸಿದೆ. ಈ ಎರಡು ಸಚಿವಾಲಯಗಳು ಪ್ರತಿ ಹದಿನೈದು ದಿನಗಳಿಗೊಮ್ಮೆ ಇಂಧನ ಬೆಲೆಗಳ ಬಗ್ಗೆ ಚರ್ಚೆ ನಡೆಸುತ್ತವೆ. ವಾಹನ ಸವಾರರಿಗೆ ಗುಡ್ ನ್ಯೂಸ್: ಅಗ್ಗವಾಗಲಿದೆ ಪೆಟ್ರೋಲ್, ಡೀಸೆಲ್ ಬೆಲೆ! ಕಳೆದ ಮೂರು ತಿಂಗಳಿನಿಂದ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 70-80 ಡಾಲರ್‌ಗಳ ಮಧ್ಯೆ ಏರಿಳಿತವಾಗುತ್ತಿರುವ ಕಾರಣ ಕೇಂದ್ರ ಸರ್ಕಾರ ಇಂಧನ ಬೆಲೆ ಕಡಿತಕ್ಕೆ ಚಿಂತನೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಸರ್ಕಾರವು ಕೇಂದ್ರ ಅಬಕಾರಿ ಸುಂಕವನ್ನು ನವೆಂಬರ್ 2021 ಮತ್ತು ಮೇ 2022 ರಲ್ಲಿ ಎರಡು ಕಂತುಗಳಲ್ಲಿ ಕ್ರಮವಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಪ್ರತಿ ಲೀಟರ್‌ಗೆ ಒಟ್ಟು ರೂ 13 ಮತ್ತು ರೂ 16 ರಷ್ಟು ಕಡಿಮೆ ಮಾಡಿದೆ. ಅಬಕಾರಿ ಕಡಿತವನ್ನು ಸಂಪೂರ್ಣವಾಗಿ ಗ್ರಾಹಕರಿಗೆ ವರ್ಗಾಯಿಸಲಾಯಿತು ಮತ್ತು ಇದರ ಪರಿಣಾಮವಾಗಿ ಚಿಲ್ಲರೆ ಬೆಲೆಗಳು ಕುಸಿಯಿತು. ಕಡಿಮೆ ಕಚ್ಚಾ ತೈಲ ಬೆಲೆಗಳು ಮೂರು ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪ್ (IOC), ಭಾರತ್ ಪೆಟ್ರೋಲಿಯಂ ಕಾರ್ಪ್ (BPCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪ್ (HPCL) ದೊಡ್ಡ ಲಾಭವನ್ನು ನೀಡಿದೆ. ಗುರುವಾರ ತೈಲ ಬೆಲೆಗಳು ಸ್ಥಿರವಾಗಿವೆ. ಬ್ರೆಂಟ್ ಒಂದು ಬ್ಯಾರೆಲ್‌ಗೆ $80 ರ ಸಮೀಪದಲ್ಲಿ ವ್ಯಾಪಾರ ಮಾಡುವುದರೊಂದಿಗೆ ಹೆಚ್ಚಿನ ದಾಸ್ತಾನುಗಳು ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿನ ದಾಖಲೆಯ ಉತ್ಪಾದನೆಯು ಕೆಂಪು ಸಮುದ್ರದಲ್ಲಿನ ಜಾಗತಿಕ ವ್ಯಾಪಾರದ ಅಡೆತಡೆಗಳ ಮೇಲೆ ಆತಂಕವನ್ನು ಕಡಿಮೆ ಮಾಡಿದೆ.

ಮೋದಿ 3ನೇ ಬಾರಿಗೆ ಪ್ರಧಾನಿಯಾಗಲು,ಚೌಟ ಹೆಚ್ಚಿನ ಅಂತರದಿಂದ ಗೆಲ್ಲಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪುತ್ತಿಲ

Posted by Vidyamaana on 2024-06-04 08:46:38 |

Share: | | | | |


ಮೋದಿ 3ನೇ ಬಾರಿಗೆ ಪ್ರಧಾನಿಯಾಗಲು,ಚೌಟ ಹೆಚ್ಚಿನ ಅಂತರದಿಂದ ಗೆಲ್ಲಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪುತ್ತಿಲ

 ಪುತ್ತೂರು : ಹಲವು ದಿನಗಳಿಂದ ಕಾಯುತ್ತಿರುವ ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಬೇಕೆಂದು ಹಾಗೆಯೇ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಹೆಚ್ಚಿನ ಅಂತರದಿಂದ ಗೆಲ್ಲಲು ಅರುಣ್ ಕುಮಾರ್ ಪುತ್ತಿಲ 

ಕಬ್ಬಿನ ಸಿಪ್ಪೆ ತುಂಬಿದ್ದ ಲಾರಿಗೆ ವಿದ್ಯುತ್‌ ತಂತಿ ತಗುಲಿ ಬೆಂಕಿ; ಸಿಪ್ಪೆ ಭಸ್ಮ

Posted by Vidyamaana on 2023-12-20 08:28:53 |

Share: | | | | |


ಕಬ್ಬಿನ ಸಿಪ್ಪೆ ತುಂಬಿದ್ದ ಲಾರಿಗೆ ವಿದ್ಯುತ್‌ ತಂತಿ ತಗುಲಿ ಬೆಂಕಿ; ಸಿಪ್ಪೆ ಭಸ್ಮ

ಹುಣಸೂರು: ಕಬ್ಬಿನ ಸಿಪ್ಪೆ ಹೊತ್ತೊಯ್ಯುತ್ತಿದ್ದ ಲಾರಿಗೆ ವಿದ್ಯುತ್‌ ತಂತಿ ತಗುಲಿ ಕಬ್ಬಿನ ಸಿಪ್ಪೆ ಸಂಪೂರ್ಣ ಭಸ್ಮವಾಗಿದ್ದರೆ, ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶ್ರಮದಿಂದ ಲಾರಿಗೆ ಯಾವುದೇ ಅಪಾಯವಾಗಿಲ್ಲ.ಹುಣಸೂರು ನಗರಕ್ಕೆ ಸಮೀಪದ ಎಚ್‌.ಡಿ.ಕೋಟೆ ರಸ್ತೆಯ ಹಂಚ್ಯಾ ಗ್ರಾಮದ ಬಳಿ ಮಂಗಳವಾರ ಮಧ್ಯಾಹ್ನ ಘಟನೆ ಸಂಭವಿಸಿದ್ದು, ಲಾರಿಯಲ್ಲಿ ಎತ್ತರವಾಗಿ ಕಬ್ಬಿನ ಸಿಪ್ಪೆ ತುಂಬಿದ್ದರಿಂದಾಗಿ ಹಂಚ್ಯಾ ಬಳಿಯ ರಸ್ತೆಗೆ ಅಡ್ಡಲಾಗಿ ಹಾಕಿದ್ದ ವಿದ್ಯುತ್‌ ತಂತಿಗೆ ಸಿಲುಕಿ ಒಮ್ಮೆಲೆ ಬೆಂಕಿ ಹತ್ತಿಕೊಂಡಿದೆ.ತಕ್ಷಣವೇ ಪಕ್ಕದ ಜಮೀನಿನವರು ತಮ್ಮ ಬೋರ್‌ವೆಲ್‌ ನಿಂದ ಪೈಪ್‌ ಮೂಲಕ ನೀರು ಹಾಯಿಸಿದರಾದರೂ ದಟ್ಟ ಹೊಗೆ ಆವರಿಸಿದೆ. ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕಾಗಮಿಸಿದ ಸಿಬ್ಬಂದಿ ಬೆಂಕಿ ನಂದಿಸಿದ್ದರಿಂದ ಲಾರಿಗೆ ಹಾನಿಯಾಗಿಲ್ಲ



Leave a Comment: