ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಸುದ್ದಿಗಳು News

Posted by vidyamaana on 2024-07-25 19:32:58 | Last Updated by Vidyamaana on 2024-07-25 19:32:58

Share: | | | | |


ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ. 

 ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ

ಬಾತಿಷಾ( 22) ಮೃತಪಟ್ಟವರು.ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.

 Share: | | | | |


Expressway ನಲ್ಲಿ ದರೋಡೆ ನಡೆಯುತ್ತಿಲ್ಲ, ಸುಳ್ಳು ಸುದ್ದಿ ನಂಬಬೇಡಿ: ರಾಮನಗರ SP ಸೂಚನೆ

Posted by Vidyamaana on 2023-08-12 17:55:28 |

Share: | | | | |


Expressway ನಲ್ಲಿ ದರೋಡೆ ನಡೆಯುತ್ತಿಲ್ಲ, ಸುಳ್ಳು ಸುದ್ದಿ ನಂಬಬೇಡಿ: ರಾಮನಗರ SP ಸೂಚನೆ

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ರಾತ್ರಿ ಹೊತ್ತು ವಾಹನಗಳನ್ನು ಅಡ್ಡ ಹಾಕಿ ದರೋಡೆ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾದ ವಿಚಾರ ಶುದ್ಧ ಸುಳ್ಳು ಇಲ್ಲಿ ಯಾವುದೇ ದರೋಡೆ ಪ್ರಕರಣ ನಡೆದಿಲ್ಲ ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಹೇಳಿದ್ದಾರೆಈ ಕುರಿತು ಸ್ಪಷ್ಟನೆ ನೀಡಿದ ಅವರು ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ರಾತ್ರಿ ಹೊತ್ತು ವಾಹನಗಳನ್ನು ತಡೆದು ದರೋಡೆ ನಡೆಸಲಾಗುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್‌ಪ್ರೆಸ್‌ ವೇ ದರೋಡೆಕೋರರ ಹಾವಳಿ ಎಂದು ಪೋಸ್ಟ್ ಮಾಡಲಾಗಿತ್ತು ಇದು ಸತ್ಯಕ್ಕೆ ದೂರವಾದ ವಿಚಾರ ಇಲ್ಲಿ ಒಂದು ಘಟನೆ ನಡೆದಿದ್ದು ಬಿಟ್ಟರೆ ಬೇರೆ ಯಾವುದೇ ಪ್ರಕರಣ ನಡೆದಿಲ್ಲ ಹಾಗಾಗಿ ಯಾರು ಸುಳ್ಳು ಸುದ್ದಿಯನ್ನು ನಂಬಬೇಡಿ ಎಂದು ಹೇಳಿದ್ದಾರೆ.ಜಾಲತಾಣದಲ್ಲಿ ಹಾಕಿರುವ ಸುಳ್ಳು ಸುದ್ದಿ‌ ಅಲ್ಲದೆ ಈ ಪೋಟೋದಲ್ಲಿರುವ ರಸ್ತೆ ಭಾರತಕ್ಕೆ ಸಂಬಂಧಿಸಿದ್ದಲ್ಲ ಇದು ಹೊರ ದೇಶಕ್ಕೆ ಸಂಬಂಧಿಸಿದ ಪೋಸ್ಟ್ ಆಗಿದೆ. ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಯಾವುದೇ ದರೋಡೆಗಳು ಆಗುತ್ತಿಲ್ಲ. ಅಲ್ಲದೆ ಹೈವೇ ಪ್ಯಾಟ್ರೋಲ್ ಇಪ್ಪತ್ತನಾಲ್ಕು ಗಂಟೆ ಕೆಲಸ ಮಾಡುತ್ತಿದೆ. ಈ ಹಿಂದೆ ಆಗಿದ್ದ ದರೋಡೆಗಳ ಪ್ರಕರಣಕ್ಕೆ‌ ಸಂಬಂಧಿಸಿದ ಆರೋಪಿಗಳನ್ನ ಈಗಾಗಲೇ ಬಂಧಿಸಿದ್ದೇವೆ. ಸಾಮಾಜಿಕ ಜಾಲತಾಣದಲ್ಲಿ ಬಂದಿರುವುದು ಸುಳ್ಳು ಸುದ್ದಿ ಇದಕ್ಕೆ ಯಾರು ಕಿವಿಗೊಡಬೇಡಿ ಎಂದು ಹೇಳಿದ್ದಾರೆ

ತಲೆಕೆಳಗಾದ ಚುನಾವಣಾ ಸಮೀಕ್ಷೆ ಟಿವಿ ಲೈವ್‌ನಲ್ಲೇ ಕಣ್ಣೀರು ಹಾಕಿದ ಆಕ್ಸಿಸ್ ಮೈ ಇಂಡಿಯಾದ ಪ್ರದೀಪ್‌ ಗುಪ್ತಾ

Posted by Vidyamaana on 2024-06-05 09:46:29 |

Share: | | | | |


ತಲೆಕೆಳಗಾದ ಚುನಾವಣಾ ಸಮೀಕ್ಷೆ ಟಿವಿ ಲೈವ್‌ನಲ್ಲೇ ಕಣ್ಣೀರು ಹಾಕಿದ ಆಕ್ಸಿಸ್ ಮೈ ಇಂಡಿಯಾದ ಪ್ರದೀಪ್‌ ಗುಪ್ತಾ

ಹೊಸದಿಲ್ಲಿ : ಆಕ್ಸಿಸ್ ಮೈ ಇಂಡಿಯಾ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಗುಪ್ತಾ ಅವರು 2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳು ತಮ್ಮ ಲೆಕ್ಕಾಚಾರ ಮೀರುತ್ತಿದ್ದಂತೆ, ಇಂಡಿಯಾ ಟುಡೇ ಟಿ ವಿ ಲೈವ್ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ ಘಟನೆ ನಡೆದಿದೆ.

ಇಂಡಿಯಾ ಟುಡೆಯ ಚುನಾವಣಾ ಫಲಿತಾಂಶಗಳ ಲೈವ್ ಕವರೇಜ್‌ನಲ್ಲಿ ಕಾಣಿಸಿಕೊಂಡ ಗುಪ್ತಾ, ಕಣ್ಣೀರಿಡುತ್ತಿದ್ದಂತೆ ಆಂಕರ್ಗಳು ಅವರಿಗೆ ಸಾಂತ್ವನ ಹೇಳಿದರು.


ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಪ್ರಕಾರ, ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ 361-401 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದವು. INDIA ಒಕ್ಕೂಟವು 131-166 ಸ್ಥಾನಗಳನ್ನು ಗೆಲ್ಲಲಿದೆ, ಸಮೀಕ್ಷೆಗಳ ಪ್ರಕಾರ ಇತರ ಪಕ್ಷಗಳು 8 ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿತ್ತು.


ಶನಿವಾರದ ಅಂತಿಮ ಸುತ್ತಿನ ಮತದಾನದ ನಂತರ ಬಿಡುಗಡೆಯಾದ ಬಹುಪಾಲು ಎಕ್ಸಿಟ್ ಪೋಲ್‌ಗಳು ಬಿಜೆಪಿ ಮತ್ತು ಎನ್‌ಡಿಎ ಮುನ್ನಡೆ ಸಾಧಿಸಲಿವೆ ಎಂದು ತೋರಿಸಿದ್ದವು.

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Posted by Vidyamaana on 2024-06-17 20:54:40 |

Share: | | | | |


ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

ಸುಳ್ಯ : ಪಂಜ ಮೆಸ್ಕಾಂ ಶಾಖಾ ವ್ಯಾಪ್ತಿಯ ಅಲೆಕ್ಕಾಡಿ ಸಮೀಪದ ಪಿಜಾವು ಎಂಬಲ್ಲಿ ವಿದ್ಯುತ್ ಕಂಬದಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾರ್ಮಿಕರೊಬ್ಬರು ಬಿದ್ದು ಮೃತಪಟ್ಟ ಘಟನೆ ಜೂ.17ರಂದು ನಡೆದಿದೆ.

ಕಂಬದಿಂದ ಬಿದ್ದು ಬೆಳ್ತಂಗಡಿ ತಾಲೂಕಿನ ಮುಗೇರಡ್ಕ ನಿವಾಸಿ ಪ್ರಕಾಶ್(29) ಎಂಬವರು ಮೃತಪಟ್ಟವರು. ಗುತ್ತಿಗೆದಾರರ ಅಡಿಯಲ್ಲಿ ಲೈನ್ ಕಾರ್ಮಿಕರು ವಿದ್ಯುತ್ ಲೈನ್ ಕೆಲಸ ನಿರ್ವಹಿಸುತ್ತಿದ್ದರೆನ್ನಲಾಗಿದೆ. ಕಂಬ ಏರಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಪೈಕಿ ಪ್ರಕಾಶ್ ಕಂಬದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತಪೂಜೆ

Posted by Vidyamaana on 2024-08-17 05:34:39 |

Share: | | | | |


ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತಪೂಜೆ

ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿ ಪುತ್ತೂರು ವತಿಯಿಂದ ಆ.16ರಂದು ಪುತ್ತೂರಿನ ಸುಭದ್ರ ಕಲಾಮಂದಿರದಲ್ಲಿ ವರಮಹಾಲಕ್ಷ್ಮೀ ವೃತಪೂಜೆ ನಡೆಯಿತು.ಆ.16ರಂದು ಬೆಳಿಗ್ಗೆ 8 ಗಂಟೆಗೆ ಭಜನೆ, ಬೆಳಿಗ್ಗೆ 10 ಗಂಟೆಗೆ ಮಹಾಲಕ್ಷ್ಮೀ ವ್ರತ ಪೂಜೆ ಪ್ರಾರಂಭವಾಯಿತು. ಬಳಿಕ ಮಧ್ಯಾಹ್ನ 10ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

ಬಡಗನ್ನೂರು : ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-04-27 08:26:28 |

Share: | | | | |


ಬಡಗನ್ನೂರು : ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ತಾಲೂಕು ಕಚೇರಿಯಲ್ಲಿ ವಿಲೇವಾರಿಯಾಗದೆ ಬಾಕಿಯಾದ ಅಕ್ರಮಸಕ್ರಮ ಫೈಲುಗಳು, ೯೪ ಸಿ, ೯೪ ಸಿಸಿ ಫೈಲುಗಳು ಸೇರಿದಂತೆ ಲಂಚ ಕೊಡದ ಕಾರಣಕ್ಕೆ ಪೆಂಡಿಂಗ್ ಇಟ್ಟಿರುವ ಫೈಲುಗಳು ಇನ್ನು ಕೆಲವೇ ದಿನಗಳಲ್ಲಿ ಮೈ ಕೊಡವಿ ಎದ್ದೇಳಲಿದ್ದು ಇದಕ್ಕೆ ಕಾರ್ಯಕರ್ತರ ಜೈಕಾರ ಅತೀ ಮುಖ್ಯ. ನಿಮ್ಮ ಜೈಕಾರ ಗ್ರಾಮದ ಮನೆ ಮನೆಗಳಿಗೂ ತಲುಪಬೇಕು ಈ ಕಾರಣಕ್ಕೆ ತಾಲೂಕು ಕಚೇರಿಯ ಫೈಲುಗಳ ಅಲುಗಡಬೇಕು ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.

ಬಡಗನ್ನೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ರವರ ಮನೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.ಬಡವರು ನಯಾ ಪೈಸೆ ಕೊಡದೆ ತಾಲೂಕು ಕಚೇರಿಯಲ್ಲಿ ತಮ್ಮ ಕೆಲಸ ಕಾರ್ಯಗಳನ್ನು ಮಾಡುವ ಕಾಲ ಬರಲಿದೆ. ಯಾರ ಕೈಯ್ಯನ್ನೂ ಬಿಸಿ ಮಾಡದೆ ನಿಮ್ಮ ಕೆಲಸಗಳು ನಡೆಯಲಿದೆ. ಯಾರದೇ ಫೈಲುಗಳಾಗಿರಲಿ, ಕಾಂಗ್ರೆಸ್ ಕಾರ್ಯಕರ್ತನೇ ಆಗಲಿ, ಬಿಜೆಪಿ ಕಾರ್ಯಕರ್ತನೇ ಆಗಲಿ ಜಾತಿ, ಧರ್ಮ, ಪಕ್ಷ ನೋಡದೇ ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸವನ್ನು ಖಂಡಿತವಾಗಿಯೂ ಮಾಡುತ್ತೇನೆ. ನೀವು ಆಶೀರ್ವಾದ ಮಾಡಿದ್ದಲ್ಲಿ ನಾನು ಈಗ ಮಾಡುತ್ತಿರುವ ಟ್ರಸ್ಟ್‌ನ ಸಮಾಜ ಸೇವೆಯನ್ನು ಇನ್ನಷ್ಟು ವಿಸ್ತಾರ ಮಾಡಲಿದ್ದು ಇದಕ್ಕೆ ನನ್ನ ಸ್ವಂತ ಉದ್ದಿಮೆಯ ಹಣವನ್ನು ಬಳಸುತ್ತೇನೆ, ಸರಕಾರದ ಅನುದಾನ ಅದು ಪೂರ್ತಿಯಾಗಿ ಜನರಿಗೆ ತಲುಪುವಂತೆ ಮಾಡುತ್ತೇನೆ ಎಂದು ರೈಗಳು ಹೇಳಿದರು. ಈ ವೇಳೆ ಕಾರ್ಯಕರ್ತರ ಜೈಕಾರ ಘೋಷಣೆ ಮುಗಿಲುಮುಟ್ಟಿತ್ತು.

ತಣ್ಣೀರ್ ಪಂತ :ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ :ಬಾರ್ಯ ನಿವಾಸಿ ಶಿವಾನಂದ ಮೃತ್ಯು

Posted by Vidyamaana on 2024-07-21 09:56:44 |

Share: | | | | |


ತಣ್ಣೀರ್ ಪಂತ :ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ :ಬಾರ್ಯ ನಿವಾಸಿ ಶಿವಾನಂದ ಮೃತ್ಯು

ತಣ್ಣೀರುಪoತ : ತಣ್ಣೀರುಪoತ ಗ್ರಾಮದ ತುರ್ಕಳಿಕೆ ಎಂಬಲ್ಲಿ ಜುಲೈ 20 ರಂದು ರಾತ್ರಿ ಬೈಕ್ ಗಳೆರಡು ಡಿಕ್ಕಿ ಸಂಭವಿಸಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ, ನಾಲ್ವರಿಗೆ ಗಾಯಗಳಾಗಿವೆ ಎಂಬ ವರದಿಯಾಗಿದೆ.



Leave a Comment: