ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ. ಆಗಿ ಜಂಬೂರಾಜ್ ಮಹಾಜನ್ ನೇಮಕ

Posted by Vidyamaana on 2023-12-02 14:06:13 |

Share: | | | | |


ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ. ಆಗಿ ಜಂಬೂರಾಜ್ ಮಹಾಜನ್ ನೇಮಕ

ಪುತ್ತೂರು: ಡಿ.ಸಿ.ಆ‌ರ್.ಬಿ. ಚಿಕ್ಕಮಗಳೂರು

ಘಟಕದಲ್ಲಿದ್ದ ಜಂಬೂರಾಜ್ ಮಹಾಜನ್ ಅವರನ್ನು ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ. ಆಗಿ ನೇಮಕಗೊಳಿಸಿ ಪೊಲೀಸ್ ಉಪ ಮಹಾನಿರೀಕ್ಷಕ ಚಂದ್ರಗುಪ್ತ ಆದೇಶಿಸಿದ್ದಾರೆ.


ಇವರು ಈ ಹಿಂದೆ ಪುತ್ತೂರು ನಗರ ಠಾಣೆಯಲ್ಲಿ ಪಿ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸಿದ್ದರು.ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ. ಆಗಿದ್ದ ಧನಂಜಯ ಬಿ.ಸಿ. ಅವರು ಪಶ್ಚಿಮ ವಲಯ ಕಚೇರಿಗೆ ಸ್ಥಳಾಂತರಗೊಂಡಿದ್ದು, ತೆರವಾದ ಹುದ್ದೆಗೆ ಜಂಬೂರಾಜ್ ಮಹಾಜನ್ ವರ್ಗಾವಣೆಗೊಂಡಿದ್ದಾರೆ.

ಸೋಮವಾರ ಮಧ್ಯಾಹ್ನದ ಬಳಿಕ ಪುತ್ತೂರಿನ ಶಾಲೆ- ಕಾಲೇಜುಗಳಿಗೆ ರಜೆ

Posted by Vidyamaana on 2023-07-24 08:36:45 |

Share: | | | | |


ಸೋಮವಾರ ಮಧ್ಯಾಹ್ನದ ಬಳಿಕ ಪುತ್ತೂರಿನ ಶಾಲೆ- ಕಾಲೇಜುಗಳಿಗೆ ರಜೆ


ಪುತ್ತೂರು: ಭಾರೀ ಮಳೆ ಕಾರಣದಿಂದ ಪುತ್ತೂರು ತಾಲೂಕಿನ ಶಾಲಾ - ಕಾಲೇಜುಗಳಿಗೆ ಸೋಮವಾರ ಮಧ್ಯಾಹ್ನದ ಬಳಿಕ ರಜೆ ನೀಡಲಾಗಿದೆ.

ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. 

ನಾಳೆ ಅಂದರೆ ಮಂಗಳವಾರದ ಮಳೆ ಪರಿಸ್ಥಿತಿ ನೋಡಿ ನಿರ್ಧಾರ ಮಾಡುವಂತೆಯೂ ಶಾಸಕರು‌ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಸಂಸದರ ಸಾಧನೆಗೆ ಹೊಸ ಗರಿ ಮೂಡಿಸಿದ ಬಳ್ಪ - ಸಂಸದರ ಆದರ್ಶ ಗ್ರಾಮ ಯೋಜನೆ

Posted by Vidyamaana on 2023-11-10 07:41:02 |

Share: | | | | |


ಸಂಸದರ ಸಾಧನೆಗೆ ಹೊಸ ಗರಿ ಮೂಡಿಸಿದ ಬಳ್ಪ - ಸಂಸದರ ಆದರ್ಶ ಗ್ರಾಮ ಯೋಜನೆ

ಮಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಪ್ರಾರಂಭಗೊಂಡಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಬಿಜೆಪಿ ಅಭ್ಯರ್ಥಿ ಯಾರಾಗಬಹುದೆಂಬ ಚರ್ಚೆಗಳೂ ಸಹ ಗರಿಗೆದರಿದೆ.

ಒಂದು ಮೂಲಗಳ ಪ್ರಕಾರ ಹ್ಯಾಟ್ರಿಕ್ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೇ ಈ ಬಾರಿ ಪಕ್ಷ ಮಣೆ ಹಾಕುವ ಸಾಧ್ಯತೆಗಳು ದಟ್ಟವಾಗಿದೆ. ಹಾಲಿ ಸಂಸದರೂ ಹಾಗೂ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಬಗೆಗಿನ ಪರ ವಿರೋಧದ ಚರ್ಚೆಯ ನಡುವೆ ನಳಿನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಬಂದಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಸಂಸದರ ಆದರ್ಶ ಗ್ರಾಮ ಯೋಜನೆಯನ್ನು ಸಮರ್ಪಕವಾಗಿ ಬಳಸಿ ಗುರಿ ಮುಟ್ಟಿದ ರಾಜ್ಯದ ಸಂಸದರ ಪೈಕಿ ಮಂಗಳೂರು ಸಂಸದರು ಪ್ರಥಮ ಸ್ಥಾನದಲ್ಲಿದ್ದಾರೆ ಎಂದು ಸಂಸದರ ಆದರ್ಶ ಗ್ರಾಮದ ಯೋಜನಾ ನಿರ್ದೇಶಕರು ಹೇಳಿದ್ದಾರೆ.

ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಳ್ಪ ಗ್ರಾಮವನ್ನು ಸಂಸದರು ಆಯ್ಕೆ ಮಾಡಿಕೊಂಡಿದ್ದು ಈ ಗ್ರಾಮದಲ್ಲಿ ಅಭೂತಪೂರ್ವ ಅಭಿವೃದ್ಧಿ ಕಾಮಗಾರಿಯನ್ನು ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಶಾಲೆ, ಆಸ್ಪತ್ರೆ, ಸಾರಿಗೆ ವ್ಯವಸ್ಥೆ, ನೆಟ್ವರ್ಕ್ ವ್ಯವಸ್ಥೆ ಸೇರಿದಂತೆ 55 ಕೋಟಿ ರೂಪಾಯಿ ಅನುದಾನವನ್ನು ಒಂದು ಗ್ರಾಮಕ್ಕೆ ಒದಗಿಸಿ ಆ ಗ್ರಾಮವನ್ನು ಸಮಗ್ರ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದು, ಸತತ ನಾಲ್ಕನೇ ಬಾರಿ ಸಂಸದ ಸ್ಥಾನದ ಮೇಲೆ ಕಣ್ಣಿಟ್ಟಿರುವ ನಳಿನ್ ಕುಮಾರ್ ಕಟೀಲ್ ಅವರ ಉಮೇದುವಾರಿಕೆಗೆ ಇನ್ನಷ್ಟು ಬಲ ತುಂಬಲಿದೆ ಎಂಬ ಲೆಕ್ಕಾಚಾರ ಪಕ್ಷದಲ್ಲಿ ನಡೆಯುತ್ತಿದೆ.

ಕಡಬ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಫೋಟ : ಮುಖಂಡರು ಮತ್ತು ಕಾರ್ಯಕರ್ತರ ನಡುವೆ ನೂಕಾಟ – ತಳ್ಳಾಟ

Posted by Vidyamaana on 2024-03-30 21:21:56 |

Share: | | | | |


ಕಡಬ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಫೋಟ : ಮುಖಂಡರು ಮತ್ತು ಕಾರ್ಯಕರ್ತರ ನಡುವೆ ನೂಕಾಟ – ತಳ್ಳಾಟ

ಕಡಬ : ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ನಾಯಕರ ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ನೂಕಾಟ – ತಳ್ಳಾಟದವರೆಗೆ ತಲುಪಿದ ಬಗ್ಗೆ ವರದಿಯಾಗಿದೆ.

ಹಾಲಶ್ರೀ ಸ್ವಾಮಿಜಿ ಅರೆಸ್ಟ್ ಹಿಂದಿದೆ ಸಿಸಿಬಿ ಎಸಿಪಿ ರೀನಾ ಸುವರ್ಣ ಶ್ರಮ!

Posted by Vidyamaana on 2023-09-20 15:25:32 |

Share: | | | | |


ಹಾಲಶ್ರೀ ಸ್ವಾಮಿಜಿ ಅರೆಸ್ಟ್ ಹಿಂದಿದೆ ಸಿಸಿಬಿ ಎಸಿಪಿ ರೀನಾ ಸುವರ್ಣ ಶ್ರಮ!

ಬೆಂಗಳೂರು : ಚೈತ್ರ ಅಂಡ್ ಗ್ಯಾಂಗ್ 5 ಕೊಟ್ಟಿ ವಂಚನೆ ಸಂಬಂಧ ಹಾಲಾಶ್ರೀ ಸ್ವಾಮಿಜಿ ಸಿಸಿಬಿಗೆ ಲಾಕ್ ಆಗಿದ್ದೆ ರೋಚಕ ಸ್ವಾಮಿಜಿ ಅರೆಸ್ಟ್ ಹಿಂದಿದೆ ಎಸಿಪಿ ರೀನಾ ಸುವರ್ಣ ಟೆಕ್ನಿಕಲ್ ಎಫರ್ಟ್. ಸತತ ಐದು ದಿನಗಳಿಂದ ಸ್ವಾಮಿಜಿ ಹಿಂದೆ ಬಿದ್ದಿದ್ದ ಸಿಸಿಬಿ ತಂಡ.‌ಆದ್ರ ಮೈಸೂರಿನಿಂದ‌ ಮಿಸ್ ಆಗಿದ್ದ ಸ್ವಾಮಿಜಿ ವೇಚ ಬದಲಿಸಿ ಮೊಬೈಲ್ ಸ್ವಿಟ್ಚ್ ಆಫ್ ಮಾಡಿ ಎಸ್ಕೇಪ್ ಆಗಿದ್ರು.ಹೈದರಬಾದ್ ಮಾಹಿತಿ ಪಡೆದು ಹೈದರಬಾದ್ ಗೂ ತೆರಳಿತ್ತು ಸಿಸಿಬಿ ಟೀಮ್. ಆದ್ರೆ ಹೈದರಾಬಾದ್ ಮಠದಿಂದ ಸ್ವಾಮಿಜಿ ಟ್ರೈನ್ ಮೂಲಕ ಕಾಶಿ ಕಡೆ ಪ್ರಯಾಣ ಮಾಡಿದ್ರು.‌ ಹೈದರಬಾದ್ ಮಠವೊಂದರ ಕಾರ್ ನಲ್ಲೇ ಸ್ವಾಮಿಜಿ ರತಯಲ್ವೇ ಸ್ಟೇಷನ್ ಗೆ ಡ್ರಾಪ್ ಪಡೆದುಕೊಂಡಿದ್ರು. ಮಾರ್ಗ ಮಧ್ಯ ಹೈದರಬಾದ್ ನಲ್ಲಿ ಸ್ವಾಮಿಜಿ ಹೊಸ ಮೊಬೈಲ್ ಖರೀದಿ ಮಾಡಿದ್ರ.


ಸಿಸಿಬಿ ಪೊಲಿಲೀಸ್ರ ವಿಚಾರಣೆ ವೇಳೆ ಮಠದ ಕಾರು ಚಾಲಕ ಹೊಸ ಮೊಬೈಲ್ ಬಗ್ಗೆ ಮಾಹಿತಿ ನೀಡಿದ್ದ.‌ ನಂತರ ಶುರುವಾಗಿದ್ದೆ ಅಸಲಿ ಕಹಾನಿ.‌ ಮೊಬೈಲ್ ಐ ಎಂ ಐ ನಂಬರ್ ನಿಂದ‌ ಸ್ವಾಮಿಜಿ ಟ್ರಾಕ್ ಮಾಡಿದ ಎಸಿಪಿ ರೀನಾ ಸುವರ್ಣ ಅಂಡ್ ಟೀಮ್. ಸ್ವಾಮಿಜಿ‌ ಹೊಸ ಮೊಬೈಲ್ ನಿಂದ ತಮ್ಮ‌ಮಠ ಹಾಗೂ ಹೈದರಬಾದಗ ಮಠದ ಸ್ವಾಮಿಜಿ ಸಂಪರ್ಕ ಮಾಡಿದ್ರು. ಇದಾದ ಕೆಲವೇ ಹೊತ್ತಲ್ಲಿ ಸ್ವಾಮಿಜಿಗೆ ಪೊಲೀಸ್ರು ಹೈದರಬಾದ್ ಗೆ ಬಂದಿರೋ‌ ವಿಷಯ ಕೂಡ ತಲುಪಿತ್ತು.ಹೈದರಾಬಾದ್ ನಲ್ಲಿ ತೆಗೆದುಕೊಂಡಿದ್ದ ಮೊಬೈಲ್‌ ಸ್ವಿಟ್ಚ್ ಆಫ್ ಮಾಡಿ ಒಡಿಶಾದಲ್ಲಿ ಹೊಸ ಸಿಮ್‌ಮತ್ತು ಮೊಬೈಲ್‌ಖರೀದಿ‌ಮಾಡಿದ್ರು. ಆದ್ರೆ ಸ್ವಾಮಿಜಿ‌ ರೆಗ್ಯೂಲರ್ ಆಗಿ ಫೋನ್‌ಮಾಡಿದ್ದ ನಂಬರ್ ಮೇಲೆ‌ ಸಿಸಿಬಿ ಕಣ್ಣಿಟ್ಟಿತ್ತು.‌ ಮತ್ತೆ ಅದೇ ನಂಬರ್ ಗೆ ಸ್ವಾಮಿಜಿ ಕರೆ ಮಾಡಿದಾಗ ಸಿಸಿಬಿ ಟ್ರಾಕ್ ಗೆ ಮತ್ತೆ ಸ್ವಾಮಿಜಿ ಬಂದಿದ್ರು.


ಈ ಒಟ್ಟು ತನಿಖಾ ಸಮಯದಲ್ಲಿ ಮೊಬೈಲ್ ಐಎಂಇಐ ಸಿಡಿ ಆರ್ ಹಾಗೂ ಲೊಕೇಶ್ ಟ್ರೇಸ್ ಸೇರಿದಂತೆ ಎಲ್ಲಾ ಟೆಕ್ನಿಕಲ್ ಡಾಟವನ್ನ ಇದೇ ಎಸಿಪಿ ರೀನಾ ಸುವರ್ಣ ನಿರ್ವಹಿಸಿದ್ರು. ಸಿಸಿಬಿ ಕಚೇರಿಯಲ್ಲೇ ಕುಳಿತು ಈ ಎಲ್ಲಾ ಟೆಕ್ನಿಕಲ್ ಎವಿಡೆನ್ಸ್ ನ ಎಸಿಪಿ ರೀನಾ ಸುವರ್ಣ ಕಲೆಕ್ಟ್ ಮಾಡಿ ಸಿಸಿಬಿ ಸಿಬ್ಬಂದಿಗೆ ಕೊಟ್ಟಿದ್ರು .‌ ಇದೇ ಕಾರಣಕ್ಕೆ ಸ್ವಾಮಿಜಿಯನ್ನ ಸಿಸಿಬಿ ಪೊಲೀಸ್ರು ಈಸಿಯಾಗಿ ಕ್ಯಾಚ್ ಮಾಡಲು ಸಹಕಾರಿಯಾಗಿದೆ.

ಪೊಲೀಸರು ಕಾನೂನು ಮೀರಿ ವರ್ತನೆ ತೋರಿದ್ದು ಕಂಡು ಬಂದಲ್ಲಿ ಅಂತವರ ವಿರುದ್ಧ ಕ್ರಮ- ಶಾಸಕ ಅಶೋಕ್ ಕುಮಾರ್ ರೈ

Posted by Vidyamaana on 2023-05-17 15:19:00 |

Share: | | | | |


ಪೊಲೀಸರು ಕಾನೂನು ಮೀರಿ ವರ್ತನೆ ತೋರಿದ್ದು ಕಂಡು ಬಂದಲ್ಲಿ ಅಂತವರ ವಿರುದ್ಧ ಕ್ರಮ- ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಬಿಜೆಪಿ ನಾಯಕರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣ ಹಾಗೂ ನಂತರದ ಬೆಳವಣಿಗೆಯಲ್ಲಿ ಆರೋಪಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಪ್ರಕರಣಗಳನ್ನು ಉಲ್ಲೇಖಿಸಿ ಮಾತನಾಡಿರುವ ನೂತನ ಶಾಸಕ ಅಶೋಕ್‌ ಕುಮಾರ್ ರೈ ಅವರು, ತನ್ನ‌ ಕ್ಷೇತ್ರದಲ್ಲಿ ಇಂತಹ ದೌರ್ಜನ್ಯಕ್ಕೆ ಅವಕಾಶ ನೀಡುವುದಿಲ್ಲ ಎಂಬ ಖಡಕ್ ಸಂದೇಶ ರವಾನಿಸಿದ್ದಾರೆ.

ವಿದ್ಯಮಾನದ ಜೊತೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯದ ಬಗೆಗಿನ ಪೋಟೋ, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ. ಘಟನೆಯ ಸತ್ಯಾಂಶದ ಬಗ್ಗೆ ಸಂಬಂಧಪಟ್ಟವರ ಜೊತೆ ಮಾಹಿತಿ ಪಡೆದುಕೊಳ್ಳುವೆ. ಪ್ರಕರಣದಲ್ಲಿ ಪೊಲೀಸರು ಕಾನೂನು ಮೀರಿ ವರ್ತನೆ ತೋರಿದ್ದು ಕಂಡು ಬಂದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಬಿಜೆಪಿ ನಾಯಕರ ಫೋಟೋವಿದ್ದ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಒಂಭತ್ತು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ಅವರಿಗೆ ಥಳಿಸಿ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ. ಇಂತಹ ಅಶಾಂತಿಯ ವಾತಾವರಣ ಕದಡುವ‌ ಪ್ರಯತ್ನದ ಪೂರ್ವದಲ್ಲೇ ಶಾಸಕ ಅಶೋಕ್ ಕುಮಾರ್ ರೈ ಅವರು ಎಚ್ಚರಿಕೆ ಸಂದೇಶ ನೀಡಿರುವುದರಿಂದ ಹೆಚ್ಚು ಮಹತ್ವ ಪಡೆದುಕೊಂಡಿದೆ.



Leave a Comment: