ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ಸುದ್ದಿಗಳು News

Posted by vidyamaana on 2024-07-24 23:15:54 |

Share: | | | | |


ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಪ್ರಚಾರ ಕಾರ್ಯಕ್ರಮದ ವೇದಿಕೆ ಮೇಲೆ ಹೋಗದೇ ಏಕಾಂಗಿಯಾಗಿ ಕುಳಿತ ಅಭ್ಯರ್ಥಿ ರಕ್ಷಾ ರಾಮಯ್ಯ, ಕಾರಣವೇನು?

Posted by Vidyamaana on 2024-04-19 12:54:03 |

Share: | | | | |


ಪ್ರಚಾರ ಕಾರ್ಯಕ್ರಮದ ವೇದಿಕೆ ಮೇಲೆ ಹೋಗದೇ ಏಕಾಂಗಿಯಾಗಿ ಕುಳಿತ ಅಭ್ಯರ್ಥಿ ರಕ್ಷಾ ರಾಮಯ್ಯ, ಕಾರಣವೇನು?

ಚಿಕ್ಕಬಳ್ಳಾಪುರ, (ಏಪ್ರಿಲ್ 19): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು(ಏಪ್ರಿಲ್ 18) ಚಿಕ್ಕಬಳ್ಳಾಪುರ ಲೋಕಸಭಾ (Chikkaballapur Loksabha Election) ಕ್ಷೇತ್ರದ ಅಖಾಡಕ್ಕಿಳಿದಿದ್ದು, ತಮ್ಮ ಪಕ್ಷದ ಅಭ್ಯರ್ಥಿ ರಕ್ಷಾ ರಾಮಯ್ಯ (Raksha Ramaiah) ಪರ ಭರ್ಜರಿ ಮತಬೇಟೆ ನಡೆಸಿದರು. ಚಿಕ್ಕಬಳ್ಳಾಪುರ(Chikkaballapur) ವಿಧಾನಸಭಾ ವ್ಯಾಪ್ತಿಯಿಂದಲೇ ಪ್ರಚಾರ ಆರಂಭಿಸಿದ ಸಿದ್ದರಾಮಯ್ಯ, ಭರ್ಜರಿ ರೋಡ್​ ಶೋ ನಡೆಸಿದರು. ಈ ವೇಳೆ ಎನ್​​ಡಿಎ ಅಭ್ಯರ್ಥಿ ಡಾ ಕೆ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದರು. ಬಳಿಕ ಚಿಕ್ಕಬಳ್ಳಾಪುರದ ಬಾಗೆಪಲ್ಲಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದರು

ಎಚ್.ಡಿ.ಕೆ ಹುಟ್ಟುಹಬ್ಬ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಜೆಡಿಎಸ್

Posted by Vidyamaana on 2022-12-17 07:33:16 |

Share: | | | | |


ಎಚ್.ಡಿ.ಕೆ ಹುಟ್ಟುಹಬ್ಬ  ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಜೆಡಿಎಸ್

ಎಚ್.ಡಿ.ಕೆ ಹುಟ್ಟುಹಬ್ಬ: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಜೆಡಿಎಸ್


ಪುತ್ತೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ೬೪ನೆಯ ಹುಟ್ಟು ಹಬ್ಬದ ಪ್ರಯುಕ್ತ ಶುಕ್ರವಾರ ಜೆಡಿಎಸ್ ಕಾರ್ಯಕರ್ತರು ಪುತ್ತೂರಿನ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.

ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಸಮಿತಿ ಅಧ್ಯಕ್ಷ ಅಶ್ರಫ್ ಕಲ್ಲೇಗ ಮಾತನಾಡಿ, ಜೆಡಿಎಸ್ ವರಿಷ್ಠಿರಾದ ಎಚ್.ಡಿ. ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೂ ಬಡವರ ಹಾಗೂ ರೋಗಿಗಳ ಬಗ್ಗೆ ಬಹಳಷ್ಟು ಕಾಳಜಿ ವಹಿಸಿದ್ದರು. ಇಂದು ಅವರ ೬೪ನೆಯ ಹುಟ್ಟು ಹಬ್ಬವಾಗಿದ್ದು, ಆ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುತ್ತಿದ್ದೇವೆ ಎಂದರು.

ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ, ವೈದ್ಯ ಡಾ. ಯದುರಾಜ್ ಡಿ.ಕೆ., ಜೆಡಿಎಸ್‌ನ ಮುಖಂಡರಾದ ಇಬ್ರಾಹಿಂ ಗೋಳಿಕಟ್ಟೆ, ಐ.ಸಿ. ಕೈಲಾಸ್, ಅಬ್ದುಲ್ಲ ಕೆದುವಡ್ಕ, ನಝೀರ್ ಬಪ್ಪಳಿಗೆ, ಪದ್ಮಾ ಮಣಿಯನ್, ಜಯರಾಜ್ ಅಮೀನ್, ಶಿವು ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

ಬಿಜೆಪಿ ಯುವಮೋರ್ಚಾ ಮುಖಂಡನ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಮದ್ಯ ದಾಸ್ತಾನು ಪತ್ತೆ ; ಮನೆ ಮಾಲೀಕ ರಮೇಶ್ ಪ್ರಭು ಪೊಲೀಸ್ ವಶಕ್ಕೆ

Posted by Vidyamaana on 2024-04-09 17:32:02 |

Share: | | | | |


ಬಿಜೆಪಿ ಯುವಮೋರ್ಚಾ ಮುಖಂಡನ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಮದ್ಯ ದಾಸ್ತಾನು ಪತ್ತೆ ; ಮನೆ ಮಾಲೀಕ ರಮೇಶ್ ಪ್ರಭು ಪೊಲೀಸ್ ವಶಕ್ಕೆ

ಉಡುಪಿ, ಎ.9: ಬಿಜೆಪಿ ಯುವಮೋರ್ಚಾ ಮುಖಂಡನ ಮನೆಗೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು ಲಕ್ಷಾಂತರ ರೂ. ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. 


ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಮಂಗಳೂರು ಮತ್ತು ಉಡುಪಿ ಅಬಕಾರಿ ವಿಭಾಗದ ಆಯುಕ್ತರ ಸೂಚನೆಯಂತೆ ಪೊಲೀಸ್ ಸಿಬಂದಿ ದಾಳಿ ನಡೆಸಿದ್ದಾರೆ. ನಿನ್ನೆ ರಾತ್ರಿ ಬ್ರಹ್ಮಾವರ ಇಂದಿರಾ ನಗರದಲ್ಲಿರುವ ರಮೇಶ ಪ್ರಭು ಎಂಬವರ ಮನೆಗೆ ದಾಳಿ ನಡೆಸಲಾಗಿದ್ದು ಮನೆಯಲ್ಲಿ ಕೂಡಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ.

ಬೋಳಿಯಾರು ಚೂರಿ ಇರಿತ ಪ್ರಕರಣ ; ಐವರು ಆರೋಪಿಗಳ ಬಂಧನ, ಮಸೀದಿ ಮುಂಭಾಗದಲ್ಲಿ ಘೋಷಣೆ ಕೂಗಿದ್ದಾರೆಂದು ಮತ್ತೊಂದು ಕೇಸು, ಸಿಸಿಟಿವಿ ಆಧರಿಸಿ ಐವರ ವಿರುದ್ಧ ಪ್ರಕರಣ ದಾಖಲು

Posted by Vidyamaana on 2024-06-10 20:32:43 |

Share: | | | | |


ಬೋಳಿಯಾರು ಚೂರಿ ಇರಿತ ಪ್ರಕರಣ ; ಐವರು ಆರೋಪಿಗಳ ಬಂಧನ, ಮಸೀದಿ ಮುಂಭಾಗದಲ್ಲಿ ಘೋಷಣೆ ಕೂಗಿದ್ದಾರೆಂದು ಮತ್ತೊಂದು ಕೇಸು, ಸಿಸಿಟಿವಿ ಆಧರಿಸಿ ಐವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು, ಜೂನ್ 10: ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಬ್ಬರ ಮೇಲೆ ಚೂರಿಯಿಂದ ದಾಳಿ ನಡೆಸಿದ ಘಟನೆ ಸಂಬಂಧಿಸಿ ಕೋಣಾಜೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಕೀರ್(28), ಅಬ್ದುಲ್ ರಜಾಕ್ (40), ಅಬೂಬಕ್ಕರ್ ಸಿದ್ದಿಕ್(35), ಸವಾದ್ (18) ಮತ್ತು ಮೋನು ಅಲಿಯಾಸ್ ಹಫೀಜ್ (24) ಬಂಧಿತರು.

ಇದೇ ವೇಳೆ, ಬೋಳಿಯಾರು ಜುಮ್ಮಾ ಮಸೀದಿ ಕಮಿಟಿಯ ಅಧ್ಯಕ್ಷ ಪಿ.ಕೆ ಅಬ್ದುಲ್ಲಾ ನೀಡಿದ ದೂರಿನಂತೆ ಕೋಣಾಜೆ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತರ ವಿಜಯೋತ್ಸವದ ಬಳಿಕ ಕೆಲವು ಕಾರ್ಯಕರ್ತರು ಮಸೀದಿ ಮುಂಭಾಗದಲ್ಲಿ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದರು. ಆಮೂಲಕ ಅಲ್ಲಿದ್ದ ಮುಸ್ಲಿಂ ಕಾರ್ಯಕರ್ತರನ್ನು ಪ್ರಚೋದಿಸಿದ್ದಾರೆಂದು ದೂರಿನಲ್ಲಿ ತಿಳಿಸಿದ್ದು, ಇದರ ಸಿಸಿಟಿವಿ ವಿಡಿಯೋವನ್ನೂ ಮಸೀದಿಯವರು ಬಿಡುಗಡೆ ಮಾಡಿದ್ದಾರೆ.

6ನೇ ಬಾರಿ ವಿಶ್ವಕಪ್ ಗೆ ಮುತ್ತಿಟ್ಟ ಆಸ್ಟ್ರೇಲಿಯ

Posted by Vidyamaana on 2023-11-19 21:31:00 |

Share: | | | | |


6ನೇ ಬಾರಿ ವಿಶ್ವಕಪ್ ಗೆ ಮುತ್ತಿಟ್ಟ ಆಸ್ಟ್ರೇಲಿಯ

ಅಹ್ಮದಾಬಾದ್‌: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಅಮೋಘ ನಿರ್ವಹಣೆ ನೀಡಿದ ಆಸ್ಟ್ರೇಲಿಯ ತಂಡ ಭಾರತದ ಬ್ಯಾಟಿಂಗ್ ಮತ್ತು ಬೌಲಿಂಗ್ ಸಾಮರ್ಥ್ಯಕ್ಕೆ ಸವಾಲೊಡ್ಡಿ ನಿಂತು ಆರನೇ ಬಾರಿ ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಇದು ಭಾರತ ಎರಡನೇ ಬಾರಿ ವಿಶ್ವಕಪ್ ಫೈನಲ್ ನಲ್ಲಿ ಆಸ್ಟ್ರೇಲಿಯದ ಎದುರು ಸೋಲಿಗೆ ಶರಣಾಗಿರುವುದು.



ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಅಮೋಘ ನಿರ್ವಹಣೆ ತೋರಿದ ಆಸೀಸ್ ಟಾಸ್ ಗೆದ್ದು ಭಾರತವನ್ನು 240 ರನ್ ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿತ್ತು. ಭಾರತದ ಬೌಲರ್ ಗಳ ಮೇಲೆ ಇಟ್ಟಿದ್ದ ಭರವಸೆಯೂ ಹುಸಿಯಾಯಿತು. ಗುರಿ ಬೆನ್ನಟ್ಟಿದ್ದ ಆಸೀಸ್ ತನ್ನ ಸಾಮರ್ಥ್ಯ ಮೆರೆದು 43 ಓವರ್ ಗಳಲ್ಲಿ 4ವಿಕೆಟ್ ನಷ್ಟಕ್ಕೆ 241 ರನ್ ಗಳಿಸಿ ವಿಶ್ವಕಪ್ ಮುಡಿಗೇರಿಸಿಕೊಂಡಿತು. 


ಆಸ್ಟ್ರೇಲಿಯದ ಆರಂಭಿಕ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ ಅತ್ಯಮೋಘ ಶತಕ ಸಿಡಿಸಿದರು. ವಿಶ್ವಕಪ್ ಫೈನಲ್ ನಲ್ಲಿ ಶತಕ ಸಿಡಿಸಿದ ಏಳನೇ ಬ್ಯಾಟರ್ ಎನಿಸಿಕೊಂಡರು. ಅವರು 95 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಸ್ಮರಣೀಯ ಆಟವಾಡಿದ ಹೆಡ್, ಕಪ್ ಗೆಲ್ಲಲು ಕೇವಲ ಎರಡೇ ರನ್ ಬಾಕಿ ಇದ್ದಾಗ 137 ರನ್ ಗಳಿಸಿದ್ದ ವೇಳೆ ಸಿರಾಜ್ ಎಸೆದ ಚೆಂಡನ್ನು ಗಿಲ್ ಕೈಗಿತ್ತು ನಿರ್ಗಮಿಸಿದರು. 120 ಎಸೆತಗಳಲ್ಲಿ ಅದ್ಭುತ ಇನ್ನಿಂಗ್ಸ್ ಕಟ್ಟಿದ ಹೆಡ್ 15 ಬೌಂಡರಿ ಮತ್ತು 4 ಭರ್ಜರಿ ಸಿಕ್ಸರ್ ಸಿಡಿಸಿದರು. ಲಬುಶೇನ್  ಔಟಾಗದೆ 58 ರನ್ ಗಳಿಸಿದರು.


ಭೋರ್ಗರೆಯುತ್ತಿರುವ ಅಹ್ಮದಾಬಾದ್‌ ಕ್ರೀಡಾಂಗಣವನ್ನು ನಿಶ್ಯಬ್ದಗೊಳಿಸುವುದೇ ನಮ್ಮ ಗುರಿ ಎಂದು ಆಸ್ಟ್ರೇಲಿಯ ತಂಡದ ನಾಯಕ ಪ್ಯಾಟ್‌ ಕಮಿನ್ಸ್ ಪಂದ್ಯಕ್ಕೂ ಮುನ್ನ ಹೇಳಿಕೆ ನೀಡಿದ್ದರು. ಅದನ್ನು ಆಸೀಸ್ ತಂಡ ನಿಜವಾಗಿಸಿದೆ. ಸತತ 10 ಗೆಲುವಿನೊಂದಿಗೆ ಕಪ್ ಎತ್ತುವ ವಿಶ್ವಾಸ ಹೊಂದಿದ್ದ ರೋಹಿತ್ ಬಳಗ ಗೆಲುವಿನ ಶಿಖರದಿಂದ ಜಾರಿತು. ಕ್ರೀಡಾಂಗಣದಲ್ಲಿ ಸೇರಿದ್ದ ಲಕ್ಷಾಂತರ ಭಾರತದ ಅಭಿಮಾನಿಗಳು ಮೌನಕ್ಕೆ ಶರಣಾಗಿ ಹೋದರು. ಹಲವರ ಕಣ್ಣಗಳಿಂದ ಧಾರಾಕಾರವಾಗಿ ನೀರು ಸುರಿಯಿತು.ಗುರಿ ಬೆನ್ನಟ್ಟಿದ ಆಸೀಸ್ ಆರಂಭದಿಂದಲೇ ಅಬ್ಬರಿಸುತ್ತಾ ಸಾಗಿತು. ಆದರೆ 7 ರನ್ ಗಳಿಸಿದ್ದ ಡೇವಿಡ್ ವಾರ್ನರ್ ಅವರು ಶಮಿ ಎಸೆದ ಚೆಂಡನ್ನು ಕೊಹ್ಲಿ ಕೈಗಿತ್ತು ನಿರ್ಗಮಿಸಿದರು. ಇದು ಆರಂಭಿಕ ಆಘಾತವಾಯಿತು. 15 ರನ್ ಗಳಿಸಿದ್ದ ಮಿಚೆಲ್ ಮಾರ್ಷ್ ಬುಮ್ರಾ ಎಸೆದ ಚೆಂಡನ್ನು ರಾಹುಲ್ ಕೈಗಿತ್ತು ನಿರ್ಗಮಿಸಿದರು.ಆ ಬಳಿಕ ಸ್ಮಿತ್‌ ಎಲ್ಬಿಡಬ್ಲ್ಯೂ ಮೂಲಕ ಔಟಾಗಿದ್ದು ವಿಶ್ವಕಪ್ ಫೈನಲ್ ನಂತಹ ಮಹತ್ವದ ಪಂದ್ಯದಲ್ಲಿ ತೀವ್ರ ಚರ್ಚೆಗೆ ಗುರಿಯಾಗಿದೆ.ಆಸೀಸ್ ಅಮೋಘ ಗೆಲುವು ಸಾಧಿಸಿದ ಕಾರಣ ಆ ವಿಚಾರ ಇಲ್ಲೇ ಮರೆತುಹೋಗಲಿದೆ.



ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಭಾರತದ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿ ವಿಶ್ವಕಪ್ ಹೀರೋ ಎನಿಸಿಕೊಂಡರು. ನಾಲ್ಕನೇ ವಿಕೆಟ್ ಗೆ ಹೆಡ್ ಅವರಿಗೆ ಸಾಥ್ ನೀಡಿ ಅದ್ಭುತ ಜತೆಯಾಟವಾಡಿದ ಮಾರ್ನಸ್ ಲಬುಶೇನ್ ಅವರು ಗೆಲುವನ್ನು ಖಚಿತ ಪಡಿಸಿದರು.


ಆರಂಭದಲ್ಲಿ ನಾಯಕ ರೋಹಿತ್ ಶರ್ಮ ಅವರು ಅಬ್ಬರಿಸುತ್ತಿದ್ದ ವೇಳೆ ಶುಭಮಂ ಗಿಲ್ ಅವರು ತಂಡ 4.2 ಓವರ್ ಗಳಲ್ಲಿ 30 ರನ್ ಗಳಿಸಿದ್ದ ವೇಳೆ ಔಟಾಗಿ ಆಘಾತ ಅನುಭವಿಸಿತು. 4 ರನ್ ಗೆ ಗಿಲ್ ನಿರ್ಗಮಿಸಿದರು. ಆ ಬಳಿಕ ಶರ್ಮ 47 ರನ್ ಗಳಿಸಿ ವಿಶ್ವಾಸ ಮೂಡಿಸಿದ್ದ ವೇಳೆ ಆಘಾತಕಾರಿಯಾಗಿ ಔಟಾದರು. 4 ಬೌಂಡರಿ ಮತ್ತು 3 ಸಿಕ್ಸರ್ ಬಾರಿಸಿದ್ದರು. ಮ್ಯಾಕ್ಸ್‌ವೆಲ್ ಎಸೆದ ಚೆಂಡನ್ನು ರೋಹಿತ್ ದೊಡ್ಡ ಹೊಡೆತಕ್ಕೆ ಮುಂದಾದರು ಈ ವೇಳೆ ಹೆಡ್ ಅದ್ಬುತ ಕ್ಯಾಚ್ ಹಿಡಿದರು.


ಅದ್ಬುತ ಫಾರ್ಮ್ ನಲ್ಲಿದ್ದ ಶ್ರೇಯಸ್ ಅಯ್ಯರ್ 4 ರನ್ ಗೆ ಔಟಾಗಿ ನಿರಾಶರಾದರು. ಆಬಳಿಕ ತಾಳ್ಮೆಯ ಆಟವಾಡಿದ ಕೊಹ್ಲಿ 63 ಎಸೆತಗಳಲ್ಲಿ 54 ರನ್ ಗಳಿಸಿದ್ದ ವೇಳೆ ದುರದೃಷ್ಟವೆಂಬಂತೆ ಔಟಾದರು. ಅವರು 4 ಬೌಂಡರಿಗಳನ್ನು ಬಾರಿಸಿದ್ದರು. ನಾಯಕ ಕಮ್ಮಿನ್ಸ್ ಎಸೆದ ಚೆಂಡು ಕೊಹ್ಲಿ ಅವರ ಬ್ಯಾಟ್ ಗೆ ತಗುಲಿ ವಿಕೆಟ್ ಗೆ ಅಪ್ಪಳಿಸಿತು.


ತಾಳ್ಮೆಯ ಆಟವಾಡಿದ ಕೆಎಲ್ ರಾಹುಲ್ 107 ಎಸೆತಗಳಲ್ಲಿ 66 ರನ್ ಗಳಿಸಿ ಭರವಸೆ ಮೂಡಿಸಿದರು. ಆದರೆ ಸ್ಟಾರ್ಕ್ ಅವರು ಎಸೆದ ಚೆಂಡು ಕೀಪರ್ ಜೋಶ್ ಇಂಗ್ಲಿಸ್ ಅವರ ಕೈ ಸೇರಿ ನಿರ್ಗಮಿಸಿದರು. ರವೀಂದ್ರ ಜಡೇಜಾ ಕೂಡ ದೊಡ್ಡ ಮೊತ್ತ ದಾಖಲಿಸಲು ಸಾಧ್ಯವಾಗಲಿಲ್ಲ.22 ಎಸೆತಗಳಲ್ಲಿ 9 ರನ್ ಗಳಿಸಿ ಔಟಾದರು. ಶಮಿ 6 ರನ್ ಗಳಿಸಿ ಔಟಾದರು.


ಸೂರ್ಯಕುಮಾರ್ ಯಾದವ್ 28 ಎಸೆತಗಳಲ್ಲಿ 18 ರನ್ ಗಳಿಸಿ ಔಟಾದರು. ಬುಮ್ರಾ 1 ರನ್ ಗೆ ಔಟಾದರು. ಕೊನೆಯ ಎಸೆತದಲ್ಲಿ ಕುಲದೀಪ್ ಯಾದವ್ 10 ರನ್ ಗಳಿಸಿದ್ದ ವೇಳೆ ರನ್ ಔಟಾದರು. ಮತ್ತು ಸಿರಾಜ್ 8 ರನ್ ಗಳಿಸಿ ಔಟಾಗದೆ ಉಳಿದರು. ಆಸೀಸ್ ಬಿಗಿ ದಾಳಿಯ ನಡುವೆಯೂ 50 ಓವರ್ ಗಳಲ್ಲಿ 240 ರನ್ ಗಳಿಗೆ ಆಲೌಟಾಯಿತು.ಆಸೀಸ್ ಪರ ಬಿಗಿ ದಾಳಿ ಸಂಘಟಿಸಿದ ಮಿಚೆಲ್ ಸ್ಟಾರ್ಕ್3, ಜೋಶ್ ಹ್ಯಾಜಲ್ವುಡ್2 , ಗ್ಲೆನ್ ಮ್ಯಾಕ್ಸ್ವೆಲ್ 1, ಪ್ಯಾಟ್ ಕಮ್ಮಿನ್ಸ್2 , ಆಡಮ್ ಝಂಪಾ 1 ವಿಕೆಟ್ ಪಡೆದರು.

ಗುರುಗಳಿಗೆ ಮುಳಿಯ ನಮನ: ಚಿನ್ನ-ಬೆಳ್ಳಿ ಖರೀದಿ ಮೇಲೆ ವಿಶೇಷ ರಿಯಾಯಿತಿ

Posted by Vidyamaana on 2023-09-05 08:36:08 |

Share: | | | | |


ಗುರುಗಳಿಗೆ ಮುಳಿಯ ನಮನ: ಚಿನ್ನ-ಬೆಳ್ಳಿ ಖರೀದಿ ಮೇಲೆ ವಿಶೇಷ ರಿಯಾಯಿತಿ

ಪುತ್ತೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್  ಗುರುವಂದನೆ ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ ಚಿನ್ನ ಖರೀದಿಯ ಮೇಲೆ 2 ಗ್ರಾಂ ಬೆಳ್ಳಿಯ ಆಭರಣಗಳ / ಪರಿಕರಗಳನ್ನು ಕೊಡುಗೆಯಾಗಿ ಪಡೆಯುವ ಅವಕಾಶವನ್ನು ಮುಳಿಯ ಜ್ಯುವೆಲ್ಸ್‌ ಒದಗಿಸಿದೆ.


ಗ್ರಾಹಕರು ತಮ್ಮ ಗುರುತಿನ ಚೀಟಿ (ಐಡಿ ಕಾರ್ಡ್‌) ತೋರಿಸಿ ವಿಶೇಷ ರಿಯಾಯಿತಿಯನ್ನು ಪಡೆಯುವಂತೆ ಮುಳಿಯ ಜ್ಯುವೆಲ್ಸ್ ಪ್ರಕಟಣೆ ಕೋರಿದೆ. ಈ ಕೊಡುಗೆ ಅಕ್ಟೋಬರ್ 31ರ ವರೆಗೆ ಮಾತ್ರ ಲಭ್ಯವಿದೆ. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರು ಶಾಖೆಗಳಲ್ಲಿ ಈ ಕೊಡುಗೆ ಲಭ್ಯವಿದೆ.


ವಿವರಗಳಿಗಾಗಿ ಟೋಲ್ ಫ್ರೀ ಸಂಖ್ಯೆ- 1800 4252 916 ಅಥವಾ ಆನ್‌ಲೈನ್‌ ಮಾರಾಟದ ಸಹಾಯಕ್ಕಾಗಿ ಇರುವ 9353030916- ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಸಮಾಜದ ಅಭ್ಯುದಯಕ್ಕೆ ಕಾರಣಕರ್ತರಾದ, ವಿದ್ಯಾರ್ಥಿ ವೃಂದಕ್ಕೆ ವಿದ್ಯಾದಾನ ಮಾಡಿ ಸದೃಢ ರಾಷ್ಟ್ರ ನಿರ್ಮಾಣದ ಕಾರ್ಯ ಮಾಡುತ್ತಿರುವ ಶಿಕ್ಷಕ ವೃಂದಕ್ಕೆ ಅನಂತ ಅಭಿನಂದನೆಗಳನ್ನು ಸಲ್ಲಿಸುತ್ತ ಈ ವಿಶೇಷ ಕೊಡುಗೆಯನ್ನು ಮುಳಿಯ ಜ್ಯುವೆಲ್ಸ್  ಪ್ರಕಟಿಸಿದೆ.



Leave a Comment: