ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಪುತ್ತೂರು ನಗರದ ರಕ್ಷಣೆಗೆ ಆರಕ್ಷಕ ಸಿಬ್ಬಂದಿ ಗಳ ಕೊರತೆ

Posted by Vidyamaana on 2023-09-08 21:29:28 |

Share: | | | | |


ಪುತ್ತೂರು ನಗರದ ರಕ್ಷಣೆಗೆ ಆರಕ್ಷಕ ಸಿಬ್ಬಂದಿ ಗಳ ಕೊರತೆ

ಪುತ್ತೂರು: ಸರಣಿ ಅಪರಾಧ ಪ್ರಕರಣಗಳು, ಬೆಚ್ಚಿಬೀಳಿಸುವ ದರೋಡೆಯಂತಹ ಪ್ರಕರಣಗಳು, ಬೆನ್ನುಬೆನ್ನಿಗೇ ಸಾಲಾಗಿ ನಿಂತಿರುವ ಹಬ್ಬಗಳು... ಸೂಕ್ಷ್ಮ ಪ್ರದೇಶಗಳಲ್ಲಿ ಮೊದಲ ಸಾಲಿನಲ್ಲಿ ಗುರುತಿಸಿಕೊಂಡಿದೆ ಪುತ್ತೂರು. ಹಾಗಾಗಿ ಆರಕ್ಷಕ ಸಿಬ್ಬಂದಿ ಅಥವಾ ಪೊಲೀಸ್ ವ್ಯವಸ್ಥೆ ಸರ್ವಸನ್ನದ್ಧ ವಾಗಿ ಇರಬೇಕತ್ತು. ಆದರೆ ಹಾಗಿಲ್ಲ ಎನ್ನುವುದೇ ಇಲ್ಲಿನ ವಾಸ್ತವ.

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮುಖ್ಯ ಹುದ್ದೆಯಾದ ಪಿ.ಎಸ್.ಐ (ಸಬ್ ಇನ್ಸ್‌ಪೆಕ್ಟರ್) ಹುದ್ದೆಯೇ ಖಾಲಿ ಇರುವುದು ದುರಂತವೇ ಸರಿ.

ಪುತ್ತೂರು ನಗರ ಠಾಣೆಯಲ್ಲಿ ಒಟ್ಟು 4 ಹುದ್ದೆಗಳಿದ್ದು, ಅದರಲ್ಲಿ 3 ಹುದ್ದೆಗಳು ಖಾಲಿಯಾಗಿವೆ. ಅಂದರೆ ಒಂದು ಹುದ್ದೆ ಮಾತ್ರ ಭರ್ತಿಯಾಗಿದೆ.

ಪಿ.ಎಸ್.ಐ. ಶ್ರೀಕಾಂತ್ ರಾಥೋಡ್ ಅವರ ವರ್ಗಾವಣೆ ಬಳಿಕ ಕಾನೂನು ಸುವ್ಯವಸ್ಥೆಯ ಹುದ್ದೆಯೂ ತೆರವಾಗಿದ್ದು, ಖಾಲಿ ಇರುವ ಹುದ್ದೆಗಳ ಜವಾಬ್ದಾರಿಯೆಲ್ಲಾ ಪೊಲೀಸ್ ನಿರೀಕ್ಷಕ (ಇನ್ಸ್‌ಪೆಕ್ಟರ್)ರ ಮೇಲೆ ಬಿದ್ದಿದೆ‌.

ಇದನ್ನು ಕಳ್ಳರು ಗಮನಿಸಿದಂತಿದೆಯೋ ಏನೋ!? ಪುತ್ತೂರೇ ಬೆಚ್ಚಿಬೀಳಿಸುವಂತಹ ಘಟನೆಗಳು ಒಂದರ ಬೆನ್ನಿಗೆ ಇನ್ನೊಂದರಂತೆ ಬಂದೆರಗುತ್ತಿದೆ. ಸರಣಿ ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳ ಕೊರತೆ ಇದ್ದು, ಕೃತ್ಯ ಘಟಿಸಿದ ಬಳಿಕವಷ್ಟೇ ಕ್ರಮ ಕೈಗೊಳ್ಳುವ ಭರವಸೆ ನೀಡುವಂತಾಗಿದೆ. ಶಾಸಕರೂ ಇದರ ಬಗ್ಗೆ ಮುತುವರ್ಜಿ ವಹಿಸಿ, ತಕ್ಷಣ ತೆರವಾಗಿರುವ ಹುದ್ದೆಗಳನ್ನು ಭರ್ತಿ ಮಾಡುವತ್ತ ಗಮನಹರಿಸುವ ಜರೂರತ್ತು ಇದೆ.


ವಾರದೊಳಗೆ ಭರ್ತಿ: ಶಾಸಕ ಅಶೋಕ್ ರೈ

ಪಿ.ಎಸ್.ಐ. ಹುದ್ದೆ ಖಾಲಿ ಆಗಿರುವ ಬಗ್ಗೆ ಮಾಹಿತಿ ಇದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಗೆ ಪೊಲೀಸ್ ಅಧಿಕಾರಿಗಳು ಬರಲು ಕೇಳುವುದೇ ಇಲ್ಲ. ಹಾಗಾಗಿ ಪೊಲೀಸ್ ಠಾಣೆಯ ಪ್ರಮುಖ ಹುದ್ದೆಗಳೆಲ್ಲ ಖಾಲಿಯಾಗಿವೆ. ವಾರದೊಳಗೆ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.

- ಅಶೋಕ್ ಕುಮಾರ್ ರೈ, ಶಾಸಕರು, ಪುತ್ತೂರು

ಆಸ್ಪತ್ರೆಗೆ ತೆರಳಿ ಮನೆಗೆ ಮರಳುತ್ತಿದ್ದ ದಂಪತಿಗೆ ಅಪಘಾತ – ಪತ್ನಿ ದಾರುಣ ಸಾವು

Posted by Vidyamaana on 2024-01-29 18:51:49 |

Share: | | | | |


ಆಸ್ಪತ್ರೆಗೆ ತೆರಳಿ ಮನೆಗೆ ಮರಳುತ್ತಿದ್ದ ದಂಪತಿಗೆ ಅಪಘಾತ – ಪತ್ನಿ ದಾರುಣ ಸಾವು

ಪುತ್ತೂರು:ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಬೈಕ್ ಹಾಗೂ ಟಿಪ್ಪರ್ ಲಾರಿ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್‌ನ ಹಿಂಬದಿ ಸವಾರೆ, ಮಾಣಿ ಖಾಸಗಿ ಶಾಲಾ ಶಿಕ್ಷಕಿ ಮೃತಪಟ್ಟಿರುವ ಘಟನೆ ಜ.29ರಂದು ಮಧ್ಯಾಹ್ನ ನಡೆದಿದೆ.ಬಂಟ್ವಾಳ ತಾಲೂಕು ಇಡಿದು ಗ್ರಾಮದ ಮಿತ್ತೂರು ಮದಕ ಸುರೇಶ್ ಕುಲಾಲ್ ಪತ್ನಿ ಅನಿತಾ(35ವ.) ಮೃತಪಟ್ಟವರು. ಮಾಣಿ ಸಮೀದ ಗಡಿಯಾರ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಅನಿತಾ ಕೆಲ ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಜ.29ರಂದು ಬೆಳಿಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದರು. ಚಿಕಿತ್ಸೆ ಪಡೆದು ಬೈಕ್‌ನಲ್ಲಿ ಹಿಂತಿರುಗುವ ವೇಳೆ ಕಬಕ ಸಮೀಪ ಪೋಳ್ಯ ಎಂಬಲ್ಲಿ ಮಣ್ಣು ರಸ್ತೆಯಲ್ಲಿ ನಿಲ್ಲಿಸಿದ್ದ ಟಿಪ್ಪರ್ ಲಾರಿ ಏಕಾಏಕಿ ಡಂಬಾರು ರಸ್ತೆ ಗೆ ಬಂದಾಗ ಬೈಕ್ ಸಾವರನಿಗೆ ನಿಯಂತ್ರಣ ತಪ್ಪಿ  ಟಿಪ್ಪರ್ ಲಾರಿಗೆ  ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಿಂಬದಿ ಸವಾರೆ ಅನಿತಾ ಹಾಗೂ ಅವರು ಮಗು ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಬೊಳುವಾರು ಮಹಾವೀರ ಆಸ್ಪತ್ರೆಗೆ ಕರೆ ತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಮಗುವಿನ ಭುಜದ ಭಾಗಕ್ಕೆ ಸಣ್ಣ ಪುಟ್ಟ ಗಾಯವಾಗಿದ್ದು, ಸುರೇಶ್ ಕುಲಾಲ್ ಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.ಮೃತರ ಪತಿ ಸುರೇಶ್ ಕುಲಾಲ್ ನೀಡಿದ ದೂರಿನಂತೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತಿ ಸುರೇಶ್ ಕುಲಾಲ್, ಪುತ್ರಿ ಋತ್ವಿಯವರನ್ನು ಅಗಲಿದ್ದಾರೆ.

ನೈನ್ ಟು ನೈನ್ – ಜಿ.ಎಲ್.ಒನ್ ಮಾಲ್ ನಲ್ಲಿ ಶುಭಾರಂಭಗೊಳ್ಳುತ್ತಿದೆ ಮಂಗಲ್ ಹೈಪರ್ ಮಾರ್ಕೆಟ್

Posted by Vidyamaana on 2024-03-28 11:39:02 |

Share: | | | | |


ನೈನ್ ಟು ನೈನ್ – ಜಿ.ಎಲ್.ಒನ್ ಮಾಲ್ ನಲ್ಲಿ ಶುಭಾರಂಭಗೊಳ್ಳುತ್ತಿದೆ ಮಂಗಲ್ ಹೈಪರ್ ಮಾರ್ಕೆಟ್

ನೈನ್ ಟು ನೈನ್ – ಜಿ.ಎಲ್.ಒನ್ ಮಾಲ್ ನಲ್ಲಿ ಶುಭಾರಂಭಗೊಳ್ಳುತ್ತಿದೆ ‘ಮಂಗಲ್ ಹೈಪರ್ ಮಾರ್ಕೆಟ್’

ಇದು ನಮ್ಮ ಊರಿನ ನಿಮ್ಮ ಅಂಗಡಿ – ಈ ಸುದ್ದಿ ಓದಿದ್ರೆ ನಿಮ್ಗೆ ಗೊತ್ತಾಗುತ್ತರೆ ಎಲ್ಲಾ ವಿದ್ಯಮಾನ!

ವಿಶ್ವಾಸಾರ್ಹ ಸೇವೆ ಮೂಲಕ ಜನರ ಪ್ರೀತಿಗೆ ಪಾತ್ರವಾಗಿರುವ ಮಂಗಲ್ ಸ್ಟೋರ್ಸ್ ನ ಹೊಸ ಸ್ವರೂಪ ‘ಮಂಗಲ್ ಹೈಪರ್ ಮಾರ್ಕೆಟ್’


ಹೈಪರ್ ಮಾರ್ಕೆಟ್ ಗಳು ಇಂದಿನ ಜನರ ದೈನಂದಿನ ಅವಶ್ಯಕತೆಗಳನ್ನು ಪೂರೈಸುವ ಮಳಿಗೆಗಗಳಾಗಿ ಮಾರ್ಪಟ್ಟಿವೆ. ಮಹಾನಗರಗಳಿಗೆ ಸೀಮಿತವಾಗಿದ್ದ ಹೈಪರ್ ಮಾರ್ಕೆಟ್ ಗಳು ಇವತ್ತು ಸಣ್ಣ ನಗರ –ಪಟ್ಟಣಗಳಲ್ಲು ತಲೆ ಎತ್ತಿ ನಿಂತಿದ್ದು ಆ ಭಾಗದ ಗ್ರಾಹಕರ ಖರೀದಿಗೆ ‘ಬಲ’ ತುಂಬುವ ಕೆಲಸವನ್ನು ಮಾಡುತ್ತಿದೆ.

ಆದರೆ ಹೆಚ್ಚಿನ ಹೈಪರ್ ಮಾರ್ಕೆಟ್ ಗಳಿಗೆ ಆ ಊರಿನ ನಂಟು ಇರುವುದಿಲ್ಲ. ಹೆಚ್ಚೆಂದರೆ ಆ ಊರಿನ ಜನರನ್ನು ಕೆಲಸಕ್ಕೆ ಇಟ್ಟುಕೊಳ್ಳಟಬಹುದಷ್ಟೇ, ಆದರೆ ಇದೀಗ ಪುತ್ತೂರಿನಲ್ಲಿ ಎ.01ರಂದು ಇಲ್ಲಿನ ಜಿ.ಎಲ್.ಒನ್ ಮಾಲ್ ನಲ್ಲಿ ಶುಭಾರಂಭಗೊಳ್ಳುತ್ತಿರುವ ಮಂಗಲ್ ಹೈಪರ್ ಮಾರ್ಕೆಟ್ – ನಮ್ಮ ಊರಿನ ನಿಮ್ಮ ಅಂಗಡಿ ಎಂಬ ವಿಶೇಷ ಟೈಟಲ್ ನೊಂದಿಗೆ ಊರಿನ ಗ್ರಾಹಕರಿಗೆ ಇನ್ನಷ್ಟು ಹತ್ತಿರವಾಗಿ ಶುಭಾರಂಭಗೊಳ್ಳುತ್ತಿದೆ.


 ಎಲ್ಲಾ ದಿನಬಳಕೆ ವಸ್ತುಗಳನ್ನು ಅತ್ಯಂತ ಕಡಿಮೆ ಬೆಲೆಗೆ ಒಂದೇ ಕಡೆ ಖರೀದಿ ಮಾಡಕೆಂದು ಬಯಸುವವರಿಗೆ ಅತ್ಯುತ್ತಮ ತಾಣವೊಂದು ಮುತ್ತಿನ ನಗರಿ ಪುತ್ತೂರಿನ ಹೃದಯಭಾಗದಲ್ಲಿ ಆರಂಭಗೊಳ್ಳುತ್ತಿದೆ.‌ ಹೌದು, ಹಲವು ವರ್ಷಗಳ ಗುಣಮಟ್ಟದ, ವಿಶ್ವಾಸಾರ್ಹ ಸೇವೆಯ ಮೂಲಕ ಪುತ್ತೂರಿಗರ ಮನಗೆದ್ದಿರುವ ಮಂಗಲ್ ಸ್ಟೋರ್ಸ್ ಇದೀಗ ಪುತ್ತೂರಿನ ಜಿ.ಎಲ್.ಒನ್ ಮಾಲ್ ನಲ್ಲಿ ಕಾರ್ಯಾರಂಭ ಮಾಡುವುದಕ್ಕೆ ಸಜ್ಜಾಗಿ ನಿಂತಿದೆ. 

ಇದೇ ಎ.೧ರಿಂದ ಮಂಗಲ್‌ ಹೈಪರ್‌ ಮಾರ್ಕೆಟ್‌ ಪುತ್ತೂರಿನ ಜಿ.ಎಲ್.ಒನ್ ಮಾಲ್ ನಲ್ಲಿ ತೆರೆದುಕೊಳ್ಳಲಿದೆ. ಮಾಸ್ಟರ್ ಪ್ಲಾನರಿಯ ಎಸ್.ಕೆ. ಆನಂದ್‌ ರವರ ಮಾರ್ಗದರ್ಶನದೊಂದಿಗೆ ಕಳೆದ 20 ವರ್ಷಗಳಿಂದ ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುವ ಮಂಗಲ್ ಸ್ಟೋರ್ಸ್ ತನ್ನ ಉತ್ಪನ್ನಗಳ ಗುಣಮಟ್ಟ, ಸ್ಪರ್ಧಾತ್ಮಕ ಬೆಲೆಯ ಮೂಲಕ ಜನಪ್ರಿಯತೆ ಗಳಿಸಿದೆ.  ಗ್ರಾಹಕಸ್ನೇಹಿ ಸಿಬ್ಬಂದಿಗಳ ನಗುಮೊಗದ ಸ್ವಾಗತ, ವಿಶ್ವಾಸಾರ್ಹ ಖರೀದಿ, ಸಂತೃಪ್ತಿಯ ಸೇವೆಯಿಂದಾಗಿ ಗ್ರಾಹಕರು ಸಂಸ್ಥೆ ಮೇಲಿಟ್ಟಿರುವ ನಂಬಿಕೆ ಅಚಲವಾಗಿದೆ. ಇದೀಗ ಗ್ರಾಹಕರ  ಹೆಚ್ಚಿನ ಅನುಕೂಲಕ್ಕಾಗಿ ಪುತ್ತೂರು ಪೇಟೆಯ ಹೃದಯಭಾಗದಲ್ಲಿ ಮಂಗಲ್‌ ಹೈಪರ್‌ ಮಾರ್ಕೆಟ್‌ ಅನ್ನು ಪ್ರಾರಂಭಿಸಲಾಗುತ್ತಿದ್ದು, ಗ್ರಾಹಕರಿಗೆ ಅತ್ಯಂತ ಕಡಿಮೆ ದರಗಳಲ್ಲಿ ಗುಣಮಟ್ಟದ ವಸ್ತುಗಳು ದೊರಕಲಿದೆ.

ಏನಿದು ‘ಸರ್ವಮಂಗಲ್‌’..!?

ಯಾವುದೇ ಪೂಜೆ ಇರಲಿ, ಶುಭಸಮಾರಂಭವಿರಲಿ

ದಿನಸಿ ಸಾಮಾಗ್ರಿಗಳು, ತಾಜಾ ತರಕಾರಿಗಳಿಗಾಗಿ ಹಲವು ಕಡೆ ಹೋಗಬೇಕೆಂದಿಲ್ಲ..! ನಿಮ್ಮ ಅಗತ್ಯದ ದಿನಸಿ ಸಾಮಾಗ್ರಿಗಳು, ತಾಜಾ ತರಕಾರಿಗಳ ಪಟ್ಟಿಯಲ್ಲಿ ಮುಂಗಡವಾಗಿ ನೀಡಿ, ನಿಮ್ಮ ಮನೆಬಾಗಿಲಿಗೆ, ಯಾ ಸಭಾಭವನಕ್ಕೆ ತರಿಸಿಕೊಳ್ಳ ಬಹುದಾದಂತಹ ವಿಶೇಷ ಸೇವೆಯಾಗಿದೆ. ಯಾವುದೇ ಜಂಟಾಟವಿಲ್ಲದೇ, ನಿರಾಳವಾಗಿ ಸಂಭ್ರಮಾಚರಣೆಯನ್ನು ಆನಂದಿಸಬಹುದು..


ದಿನನಿತ್ಯದ ಆವಶ್ಯಕತೆಗಳಿಗೆ ಬೇಕಾಗುವ ಎಲ್ಲವೂ ಒಂದೇ ಸೂರಿನಡಿಯಲ್ಲಿ ಲಭ್ಯವಿದ್ದು, ಉಚಿತ ಪಾರ್ಕಿಂಗ್‌ನೊಂದಿಗೆ ಆಹ್ಲಾದಕರ ವಾತಾವರಣದಲ್ಲಿ ಆರಾಮವಾಗಿ ಶಾಪಿಂಗ್‌ ಮಾಡಬಹುದಾಗಿದೆ. ಪ್ರೆಸ್ಟೋ ಕಂಪೆನಿಯ ಪ್ರೀಮಿಯಂ ಸ್ವೀಟ್ಸ್‌ಗಳ ವಿಶೇಷ ಕೌಂಟರ್‌ ಕೂಡ ಲಭ್ಯವಿದೆ.

ಮಂಗಲ್‌ ಹೈಪರ್‌ ಮಾರ್ಕೆಟ್‌ ಬೆಳಿಗ್ಗೆ 9ರಿಂದ ರಾತ್ರಿ 9ರ ತನಕ ವಾರದ ಏಳು ದಿನಗಳಲ್ಲೂ ಕಾರ್ಯ ನಿರ್ವಹಿಸಲಿದೆ. ಈ ಮೂಲಕ ಗ್ರಾಹಕರ ನಗುಮೊಗದ ಸೇವೆಗೆ ಸಜ್ಜಾಗಿ ನಿಂತಿದೆ.

ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾದ ಪತಿ

Posted by Vidyamaana on 2023-12-13 17:19:19 |

Share: | | | | |


ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾದ ಪತಿ

ಮಂಡ್ಯ: ಪತ್ನಿ ಮೇಲೆ ಅನೈತಿಕ ಸಂಬಂಧದ ಶಂಕೆಯಿಂದ ಪತಿ ಪತ್ನಿಯನ್ನು ಕೊಲೆಗೈದು ಮಗು ಜೊತೆ ಪೊಲೀಸರಿಗೆ ಶರಣಾದ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ದೇಶಹಳ್ಳಿ ಗ್ರಾಮದಲ್ಲಿ ನಡೆದಿದೆ.ಮಧುಶ್ರೀ (32) ಕೊಲೆಯಾದ ಮಹಿಳೆ. ಮಹದೇವ(38) ಕೊಲೆ ಮಾಡಿದ ಕಿರಾತಕ ಪತಿ.


ಮೃತ ಮಧುಶ್ರೀ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು, ಗಂಡ ಮಹದೇವ್ ಚಾಲಕನಾಗಿ ಕೆಲಸ ಮಾಡುತ್ತಿದ್ದ.


ಪತ್ನಿ ಮೇಲೆ ಅನೈತಿಕ ಸಂಬಂಧದ ಶಂಕೆಯಿದ್ದ ಗಂಡ ಎನ್ನಲಾಗಿದ್ದು, ಅದೇ ವಿಚಾರಕ್ಕೆ ಆಗಾಗ ದಂಪತಿಗಳ ನಡುವೆ ಜಗಳವಾಗುತ್ತಿತ್ತು ಎನ್ನಲಾಗಿದೆ.ಗಂಡನ ಅನುಮಾನದ ಭೂತಕ್ಕೆ ಪತ್ನಿ ಮಧುಶ್ರೀ ಕೆಲ ತಿಂಗಳ ಹಿಂದೆ‌ ತವರು ಮನೆ ಸೇರಿದ್ದು, ಎರಡು ತಿಂಗಳ ಹಿಂದೆಯಷ್ಟೆ ರಾಜಿ ಪಂಚಾಯತಿ ನಡೆಸಿ ಕುಟುಂಬಸ್ಥರು ಗಂಡನ ಮನೆಗೆ ವಾಪಸ್ಸು ಕಳುಹಿಸಿದ್ದರು.



ನಿನ್ನೆ ಮೊಬೈಲ್ ರೀಚಾರ್ಜ್ ವಿಚಾರವಾಗಿ ಮತ್ತೆ ದಂಪತಿಗಳ ನಡುವೆ ಜಗಳವಾಗಿದ್ದು, ಜಗಳ ವಿಕೋಪಕ್ಕೆ ತಿರುಗಿ ಕಬ್ಬಿಣದ ರಾಡ್ ನಿಂದ ಪತ್ನಿ ಮೇಲೆ ಮಹದೇವ್ ಹಲ್ಲೆ ನಡೆಸಿದ್ದ. ಘಟನೆಯಿಂದ ತೀವ್ರ ಹಲ್ಲೆಗೆ ಒಳಗಾದ ಮಧುಶ್ರೀ ಸ್ಥಳದಲ್ಲೆ ಸಾವನಪ್ಪಿದ್ದಾರೆ. ಪತ್ನಿ ಸಾವನಪ್ಪುತ್ತಿದ್ದಂತೆ ಪತಿ ಮಗು ಜೊತೆ ಕಿರುಗಾವಲು ಪೊಲೀಸರಿಗೆ ಶರಣಾಗಿದ್ದಾನೆ.


ಈ‌ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಸ್.ಬಿ.ದಾರಿಮಿ ನೇತೃತ್ವದಲ್ಲಿ ಮುಸ್ಲಿಮ್ ಬಾಂಧವ್ಯ ವೇದಿಕೆಯಿಂದ ಸಿದ್ಧಗಂಗಾ ಮಠ ಭೇಟಿ

Posted by Vidyamaana on 2024-07-08 07:30:36 |

Share: | | | | |


ಎಸ್.ಬಿ.ದಾರಿಮಿ ನೇತೃತ್ವದಲ್ಲಿ ಮುಸ್ಲಿಮ್ ಬಾಂಧವ್ಯ ವೇದಿಕೆಯಿಂದ ಸಿದ್ಧಗಂಗಾ ಮಠ ಭೇಟಿ

ತುಮಕೂರು, ಜು.7: ಇಲ್ಲಿನ ಕನ್ನಡ ಭವನದಲ್ಲಿ ನಡೆದ ಮುಸ್ಲಿಮ್ ಬಾಂಧವ್ಯ ವೇದಿಕೆಯ ವಾರ್ಷಿಕ ಪದಗ್ರಹಣ ಸಮಾರಂಭಕ್ಕಿಂತ ಮುಂಚೆ ವೇದಿಕೆಯ ಸದಸ್ಯರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯೊಂದಿಗೆ ಪ್ರಸಕ್ತ ರಾಜಕೀಯ, ಸಾಮಾಜಿಕ ವಿಚಾರಗಳ ಬಗ್ಗೆ ಚರ್ಚಿಸಿದರು.

ತಂಡದ ನೇತೃತ್ವ ವಹಿಸಿದ್ದ ವೇದಿಕೆಯ ಗೌರವಾಧ್ಯಕ್ಷ ಎಸ್.ಬಿ.ದಾರಿಮಿ, ರಾಜ್ಯದಲ್ಲಿ ಕೋಮು ಸೌಹಾರ್ದ ಹದೆಗಡುತ್ತಿರುವ ದಿನಗಳಲ್ಲಿ ಮಠಾಧಿಪತಿಗಳು ಮಧ್ಯ ಪ್ರವೇಶಿಸಿ ದುಷ್ಟಶಕ್ತಿಗಳ ಮೇಲೆ ನಿಯಂತ್ರಣ ಸಾಧಿಸಬೇಕು. ಕೆಲವೊಮ್ಮೆ ಜವಾಬ್ದಾರಿಯುತ ಸ್ಥಾನದಲ್ಲಿರುವವರ ಮೌನವನ್ನು ಸಮಾಜಘಾತುಕ ಶಕ್ತಿಗಳು ವರದಾನವಾಗಿ ಬಳಸಿಕೊಳ್ಳುವ ಅಪಾಯ ಇದೆ. ಹಾಗಾಗಬಾರದು, ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಶಾಂತಿಯ ಮರುಸ್ಥಾಪನೆಯ ಅಗತ್ಯವಿದೆ. ಮಠಾಧೀಶರು ಸೇರಿದಂತೆ ಸಮಾಜದ ಎಲ್ಲರೂ ಇದಕ್ಕೆ ಕೈಜೋಡಿಸಬೇಕು. ರಾಜ್ಯದ ಪ್ರಮುಖ ಮಠವೆಂಬ ನೆಲೆಯಲ್ಲಿ ಪೀಠಾಧಿಪತಿಯಾದ ತಾವು ಕೋಮು ಸೌಹಾರ್ದ ಗಟ್ಟಿಗೊಳ್ಳಲು ನಿರ್ಣಾಯಕ ಭೂಮಿಕೆ ನಿಭಾಯಿಸಬೇಕು ಎಂದು ಸಿದ್ಧಲಿಂಗ ಸ್ವಾಮಿಗೆ ಮನವಿ ಮಾಡಿದರು.

ಕಡಬ : ತನ್ನದಲ್ಲದ ತಪ್ಪಿಗೆ 11 ತಿಂಗಳು ಜೈಲು

Posted by Vidyamaana on 2023-11-21 08:58:31 |

Share: | | | | |


ಕಡಬ : ತನ್ನದಲ್ಲದ ತಪ್ಪಿಗೆ 11 ತಿಂಗಳು ಜೈಲು

ಮಂಗಳೂರು: ತಾನು ಮಾಡದ ತಪ್ಪಿಗೆ ದೂರದ ಸೌದಿ ಅರೇಬಿಯಾದಲ್ಲಿ 11 ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದ. ಯಾರೋ ಮಾಡಿದ ತಪ್ಪಿಗೆ ಆ ಯುವಕ ಬಲಿಪಶುವಾಗಿದ್ದ. ವಿದೇಶಾಂಗ ಇಲಾಖೆ ಸೇರಿದಂತೆ ಎಲ್ಲರ ಪ್ರಯತ್ನದ ಬಳಿಕ ಕಡಬ ಮೂಲದ ಯುವಕ ಮರಳಿ ತಾಯ್ನಾಡು ಸೇರಿದ್ದಾನೆ. ಮಂಗಳೂರು ವಿಮಾನ ನಿಲ್ದಾಣದಿಂದ ಹೊರಬರುತ್ತಲೇ ತಾಯಿ ತನ್ನ ಮಗನನ್ನು ಅಪ್ಪಿ ಹಿಡಿದು ದುಃಖ ಮತ್ತು ಆನಂದ ಎರಡನ್ನೂ ಹರಿಸಿದರು.


ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಚಂದ್ರಶೇಖರ್ ಸೌದಿಯಲ್ಲಿ ಜೈಲು ಪಾಲಾಗಿ ಕಡೆಗೂ ಜೈಲು ಕುಣಿಕೆಯಿಂದ ಪಾರಾಗಿ ಬಂದಿದ್ದಾರೆ. ಅಲ್ಫನಾರ್ ಸಿರಾಮಿಕ್ಸ್ ಎನ್ನುವ ಕಂಪನಿಯಲ್ಲಿ ಬೆಂಗಳೂರಿನಲ್ಲಿ ಕೆಲಸಕ್ಕಿದ್ದ ಚಂದ್ರು ಅವರಿಗೆ ಭಡ್ತಿ ಸಿಕ್ಕಿದ್ದರಿಂದ ಒಂದು ವರ್ಷದ ಹಿಂದೆ ಸೌದಿ ಅರೇಬಿಯಾದಲ್ಲಿ ಕೆಲಸ ಸಿಕ್ಕಿತ್ತು. ಅಲ್ಲಿಗೆ ತೆರಳಿ ಕೆಲವು ತಿಂಗಳಲ್ಲೇ ಊರಿಗೆ ಮರಳಬೇಕು ಎನ್ನುವಷ್ಟರಲ್ಲಿ ಚಂದ್ರು ಮೊಬೈಲ್ ಸಿಮ್ ಖರೀದಿಗೆ ತೆರಳಿದ್ದರು. ಸಿಮ್ ಖರೀದಿಗಾಗಿ ಕೈ ಬೆರಳಚ್ಚು ನೀಡಿದ್ದ ಅವರು ಸಿಮ್ ಪಡೆಯಲಿದ್ದ ಪ್ರಕ್ರಿಯೆಯನ್ನೂ ಪೂರೈಸಿದ್ದರು. ಮೊಬೈಲಿಗೆ ಬಂದಿದ್ದ ಸಂದೇಶ ಪ್ರಕಾರ, ಓಟಿಪಿಯನ್ನೂ ನೀಡಿದ್ದರು.



ಆದರೆ ವಾರದ ನಂತರ, ರಿಯಾದ್ ಪೊಲೀಸರು ನೇರವಾಗಿ ಬಂದು ಚಂದ್ರಶೇಖರ್ ಅವರನ್ನು ಬಂಧಿಸಿದ್ದರು. ಮಹಿಳೆಯೊಬ್ಬರು ತನ್ನ ಖಾತೆಯಿಂದ ಚಂದ್ರು ಖಾತೆಗೆ 22 ಸಾವಿರ ರಿಯಾಲ್ ಹಣ ಹೋಗಿರುವುದಾಗಿ ದೂರು ನೀಡಿದ್ದರು. ಪೊಲೀಸರ ತನಿಖೆಯಲ್ಲಿ ತನ್ನಲ್ಲಿ ಒಂದೇ ಬ್ಯಾಂಕ್ ಖಾತೆ ಇರೋದು, ಅದರಿಂದ ಹಣ ಹೋಗಿಲ್ಲ ಎಂದರೂ ಕೇಳಲಿಲ್ಲ. ಚಂದ್ರು ಹೆಸರಲ್ಲಿಯೇ ನಕಲಿ ಬ್ಯಾಂಕ್ ಖಾತೆ ತೆರೆದಿದ್ದ ಹ್ಯಾಕರ್ಸ್, ಆ ಖಾತೆಗೆ ಮಹಿಳೆಯ ಖಾತೆಯಿಂದ ಹಣವನ್ನು ವರ್ಗಾಯಿಸಿದ್ದರು. ಆನಂತರ, ನಕಲಿ ಖಾತೆಯಿಂದಲೇ ಮತ್ತೊಂದು ಖಾತೆಗೆ ಹಣ ವರ್ಗಾವಣೆ ಆಗಿತ್ತು. ಯಾರೋ ಹ್ಯಾಕ್ ಮಾಡಿ ಈ ರೀತಿಯಾಗಿದೆ ಎಂದು ಮನವರಿಕೆ ಮಾಡಿದರೂ, ಪೊಲೀಸರು ಕೇಳದೆ ಚಂದ್ರುವನ್ನು ನೇರವಾಗಿ ಜೈಲಿಗೆ ತಳ್ಳಿದ್ದರು.



ಆನಂತರ, ಚಂದ್ರು ಕೆಲಸ ಮಾಡುತ್ತಿದ್ದ ಕಂಪನಿಯ ಪ್ರತಿನಿಧಿಗಳು ಮತ್ತು ಇತರ ಗೆಳೆಯರು ಸೇರಿ ಸೌದಿ ಕೋರ್ಟಿಗೆ ಮನವರಿಕೆ ಮಾಡಿದರು. ಅಲ್ಲದೆ, ದಂಡ ಕಟ್ಟಲು ಮತ್ತು ಮಹಿಳೆಯ ಹಣವನ್ನು ತೀರಿಸುವುದಕ್ಕೂ ಮುಂದಾಗಿದ್ದರು. ಕೊನೆಗೆ, ಹತ್ತು ಲಕ್ಷ ರೂಪಾಯಿಯಷ್ಟು ಹಣ ಕೊಡುವುದಕ್ಕೆ ಬಂದಿದ್ದು, ಎಲ್ಲವನ್ನೂ ಮಂಗಳೂರು ಮೂಲದ ಗೆಳೆಯರು ಪೂರೈಸಿದ್ದಾರೆ. ಆಮೂಲಕ ಸೌದಿ ಕೋರ್ಟಿನಲ್ಲಿ ಬಿಡುಗಡೆಯಾಗಿ ಬಂದ ಚಂದ್ರಶೇಖರ್ ನನ್ನು ರಿಯಾದ್ ಪೊಲೀಸರು ನೇರವಾಗಿ ಭಾರತಕ್ಕೆ ಕಳಿಸಿಕೊಟ್ಟಿದ್ದಾರೆ. ರಿಯಾದ್ ನಿಂದ ನೇರವಾಗಿ ಮುಂಬೈಗೆ ಬಂದು ಸೋಮವಾರ ಸಂಜೆ ಅಲ್ಲಿಂದ ಮಂಗಳೂರಿಗೆ ರಾತ್ರಿ 7.45ರ ವೇಳೆಗೆ ತಲುಪಿದ್ದಾರೆ. ಅಷ್ಟರಲ್ಲಿ ತಾಯಿ ಹೇಮಾವತಿ, ಅಣ್ಣ ಹರೀಶ್, ಈತನ ಬಿಡುಗಡೆಗಾಗಿ ಪ್ರಯತ್ನಿಸಿದ್ದ ಸಾಮಾಜಿಕ ಕಾರ್ಯಕರ್ತ ಶ್ರೀಧರ ಗೌಡ ಕೊಕ್ಕಡ ಸೇರಿದಂತೆ ಹಲವರು ಇದ್ದರು. ಚಂದ್ರು ನಿಲ್ದಾಣದಿಂದ ಹೊರ ಬರುತ್ತಿದ್ದಂತೆ ಸ್ವಾಗತಿಸಿದರು.


ಕೋಟಿ ಕೋಟಿ ಅಭಿನಂದನೆ ಎಂದ ಚಂದ್ರು


ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಚಂದ್ರಶೇಖರ್, ನನ್ನ ಬಿಡುಗಡೆಗಾಗಿ ಹಲವರು ಪ್ರಯತ್ನ ಮಾಡಿದ್ದಾರೆ. ಎಲ್ಲರಿಗೂ ಕೋಟಿ ಕೋಟಿ ಅಭಿನಂದನೆ ಹೇಳುತ್ತೇನೆ. ಎಲ್ಲರಿಗೂ ಆಭಾರಿಯಾಗಿದ್ದೇನೆ. ಜೈಲಿನಲ್ಲಿದ್ದರೂ ಕಂಪನಿ ಪ್ರತಿನಿಧಿಗಳು, ಮಂಗಳೂರು ಮೂಲದ ಹಲವರು ಸಹಾಯ ಮಾಡಿದ್ದಾರೆ. ಜೈಲಿನಲ್ಲಿದ್ದಾಗ ಮನೆಯವರೊಂದಿಗೆ ಮಾತನಾಡಲು ಸಾಧ್ಯವಾಗಲಿಲ್ಲ. ಇದರಿಂದ ತುಂಬ ದುಃಖಿತನಾಗಿದ್ದೆ. ಮೊಬೈಲ್ ಕೊಟ್ಟರೂ ಎರಡು ನಿಮಿಷ ಮಾತ್ರ ಬಳಕೆಗೆ ಅವಕಾಶ ಇತ್ತು. ಜೈಲಿನಲ್ಲಿ ಪೊಲೀಸರು ನನಗೆ ಯಾವುದೇ ತೊಂದರೆ ಮಾಡಿಲ್ಲ. ಮರಳಿ ಬರಲು ಕಾರಣವಾದ ಎಲ್ಲರಿಗೂ ಥ್ಯಾಂಕ್ಸ್ ಎಂದು ಹೇಳಿದ್ದಾರೆ. ದೀರ್ಘ ಕಾಲ ಜೈಲಿನಲ್ಲಿದ್ದರಿಂದಲೋ ಏನೋ, ಚಂದ್ರಶೇಖರ್ ಆರಂಭದಲ್ಲಿ ಮಾತನಾಡುವುದಕ್ಕೂ ತೊದಲಿದರು. ಅರಬ್ಬರ ಊರಿನಲ್ಲಿ ಮೌನದಲ್ಲೇ ಇದ್ದವರು ನೇರವಾಗಿ ವಿಮಾನದಲ್ಲಿ ಬಂದು ತಾಯಿ ನೆಲದಲ್ಲಿಯೇ ಬಾಯಿ ತೆರೆದಂತಿತ್ತು. ತಾಯಿ ಹೇಮಾವತಿ, ಅಣ್ಣ ಹರೀಶ್ ಮುಖದಲ್ಲಿ ಅಳುವೇ ಆವರಿಸಿತ್ತು. ಕಣ್ಣೀರು ಹಾಕುತ್ತಾ ಮನೆ ಮಗನನ್ನು ಅಪ್ಪಿ ಹಿಡಿದು ಆಲಿಂಗಿಸಿದರು. ಕಂಪನಿ ಕೆಲಸವೆಂದು ಹೋಗಿದ್ದ ಮಗನಿಗೆ ಹೀಗಾಯಿತಲ್ಲ ಎಂದು ತಾಯಿ ಕಣ್ಣೀರು ಹಾಕಿದರು.



Leave a Comment: