Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10
ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.
Posted by Vidyamaana on 2024-03-13 16:47:16 |
ಯಲ್ಲಾಪುರ :ಯುವತಿಯೊಬ್ಬಳು ಕಾಣೆಯಾದ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಲ್ಲಾಪುರ ತಾಲೂಕಿನ ಚಂದ್ಗುಳಿಯ ದೇಸಾಯಿಮನೆ ತೇಜಾ ರಾಮಕೃಷ್ಣ ಭಟ್ಟ (26)ಕಾಣೆಯಾದ ಯುವತಿ.ಹುಬ್ಬಳ್ಳಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈಕೆ, ಕಳೆದ ಡಿಸೆಂಬರ್ 20 ರಂದು ಹುಬ್ಬಳ್ಳಿಗೆ ಹೋಗುವುದಾಗಿ ಮನೆಯಿಂದ ಹೊರಟಿದ್ದು, ಅಲ್ಲಿಗೂ ಹೋಗದೇ ಸಂಬಂಧಿಕರ ಮನೆಗೂ ಹೋಗದೇ ಈವರೆಗೂ ಮರಳಿ ಬಂದಿಲ್ಲ. ಈ ಕುರಿತು ತಂದೆ ರಾಮಕೃಷ್ಣ ಎಸ್ ಭಟ್ಟ ದೇಸಾಯಿಮನೆ ಪೋಲಿಸ್ ದೂರು ನೀಡಿದ್ದಾರೆ.
ಸಾಧಾರಣ ಮೈಕಟ್ಟು, ಗೋಧಿ ಬಣ್ಣ, ಕಪ್ಪು ಕೂದಲು ಹೊಂದಿದ್ದು, ಕನ್ನಡ, ಇಂಗ್ಲಿಷ್ ಮಾತನಾಡುತ್ತಾಳೆ. ಈಕೆ ಎಲ್ಲಿಯಾದರೂ ಕಂಡು ಬಂದಲ್ಲಿ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಕೋರಿದ್ದಾರೆ.
Posted by Vidyamaana on 2024-07-12 10:23:20 |
ಕೋಲಾರ: ಪ್ರೀತಿಸಿ ಮದುವೆಯಾಗಿದ್ದ ದಂಪತಿ ಊರ ಹೊರಗಿನ ಮರವೊಂದಕ್ಕೆ ಒಂದೇ ಹಗ್ಗದಲ್ಲಿ ನೇಣುಬಿಗಿದುಕೊಂಡು ತಾಲೂಕಿನ ಕಲ್ವಮಂಜಲಿಗ್ರಾಮದಲ್ಲಿಆತ್ಮಹತ್ಯೆಗೆ ಶರಣಾಗಿದ್ದಾರೆ. ಅನ್ಯೋನ್ಯವಾಗಿದ್ದ ಕುಟುಂಬಕ್ಕೆ ದಿಢೀರ್ ಏನಾಯ್ತು ಎಂದು ಬಂದಿದ್ದವರು ತಾವೇ ಪ್ರಶ್ನೆ ಮಾಡಿಕೊಳ್ಳುತ್ತಿದ್ದರು.
ಲಕ್ಷ್ಮಣ್ ಹಾಗೂ ಮಾಲಶ್ರೀ ಕಳೆದ ಹದಿಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಪ್ರೀತಿಯಿಂದ ಸಂಸಾರ ಮಾಡುತ್ತಿದ್ದ ಅವರಿಗೆ ಒಂದು ಹೆಣ್ಣು ಒಂದು ಗಂಡು ಮಕ್ಕಳಿದ್ದರು. ಪ್ರೀತಿಸಿ ಮದುವೆಯಾಗಿದ್ದ ಕುಟುಂಬ ಕಷ್ಟ ಪಟ್ಟು ದುಡಿಯುತ್ತಿದ್ದರು. ಲಕ್ಷ್ಮಣ್ ಆಟೋ ಓಡಿಸುತ್ತಿದ್ದರೆ, ಮಾಲಾಶ್ರೀ ಕಲ್ವಮಂಜಲಿ ಗ್ರಾಮದಲ್ಲೇ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು
Posted by Vidyamaana on 2024-05-03 08:25:04 |
ಬೆಂಗಳೂರು : ಹಾಸನ ರಾಜಕಾರಣಕ್ಕೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬದ ವಿರುದ್ಧ ತೊಡೆತಟ್ಟಿದ್ದ ಹಾಸನ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಪ್ರೀತಮ್ ಗೌಡ ಅವರು, ಪ್ರಜ್ವಲ್ ರೇವಣ್ಣ ಪ್ರಕರಣ ದೇಶಾದ್ಯಂತ ತೀವ್ರ ಬಿರುಗಾಳಿ ಎಬ್ಬಿಸಿದರೂ ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವುದು ಚರ್ಚೆಗೆ ಗ್ರಾಸವಾಗಿದೆ.ತಮ್ಮ ವಾಟ್ಸಾಪ್ ನಂಬರ್ನಲ್ಲಿ ಆಗಾಗ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಟೇಟಸ್ ಅಪ್ಡೇಟ್ ಮಾಡುತ್ತಿರುವುದನ್ನು ಬಿಟ್ಟರೆ, ಮಾಧ್ಯಮಗಳಿಗೆ ಹೇಳಿಕೆಯನ್ನೂ ಕೊಟ್ಟಿಲ್ಲ. ಪ್ರೀತಮ್ ಇದ್ದಕ್ಕಿದ್ದಂತೆ ತಟಸ್ಥರಾದಂತೆ ವರ್ತಿಸುತ್ತಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
Posted by Vidyamaana on 2023-11-27 04:29:57 |
ಮಂಗಳೂರು, ನ.26: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆಗೈದ ಪ್ರಕರಣದಲ್ಲಿ ಪತ್ನಿ, ಮಕ್ಕಳನ್ನು ಕಳಕೊಂಡ ನೂರ್ ಮಹಮ್ಮದ್ ಮಂಗಳೂರಿನಲ್ಲಿ ಮಕ್ಕಳಾದ ಐನಾಝ್ ಮತ್ತು ಅಫ್ನಾನ್ ನೆಲೆಸಿದ್ದ ಬಾಡಿಗೆ ಮನೆಗೆ ಆಗಮಿಸಿದ್ದು, ಮನೆಯಲ್ಲಿ ಸಿಕ್ಕ ವಸ್ತುಗಳನ್ನು ನೋಡಿ ಕಣ್ಣೀರಿಟ್ಟಿದ್ದಾರೆ.
ಮಕ್ಕಳಿಬ್ಬರೂ ಒಂದೇ ಕೊಠಡಿಯಲ್ಲಿ ನೆಲೆಸಿದ್ದರು. ತಾವೇ ಅಡುಗೆಯನ್ನೂ ಮಾಡಿಕೊಳ್ಳುತ್ತಿದ್ದರು. ಆರಂಭದಲ್ಲಿ ಬಾಡಿಗೆ ಮನೆ ಹುಡುಕಿಕೊಡಲು ಪ್ರವೀಣ್ ಚೌಗುಲೆ ನೆರವಾಗಿದ್ದ. ಈ ಬಗ್ಗೆ ಮನೆ ಮಾಲೀಕರ ಜೊತೆಗೂ ಮಾತನಾಡಿದ್ದು, ಮನೆ ತೋರಿಸುವುದಕ್ಕೆ ಮಾತ್ರ ಪ್ರವೀಣ್ ಇಲ್ಲಿಗೆ ಬಂದಿದ್ದ ಎಂದು ಹೇಳಿದ್ದಾರೆ. ಈ ನಡುವೆ, ಪ್ರವೀಣ ಚೌಗುಲೆ ಹೊಸತಾಗಿ ಕಾರು ಖರೀದಿಸಿದ್ದು ತನ್ನಲ್ಲಿದ್ದ ಸ್ಕೂಟರನ್ನು ಐನಾಝ್ ಗೆ ನೀಡಿದ್ದ. ಇದನ್ನು ಐನಾಝ್ ಕೂಡ ತನಗೆ ಮಾಹಿತಿ ನೀಡಿದ್ದಳು. ಸ್ಕೂಟರಿಗೆ 28 ಸಾವಿರ ರೂಪಾಯಿ ನೀಡಿದ್ದೇನೆ ಎಂದು ತಿಳಿಸಿದ್ದಳು.
ಮನೆಯ ಹೊರಗಡೆ ಆ ಸ್ಕೂಟರ್ ಹಾಗೇ ಇದೆ. ಮನೆಯಲ್ಲಿ ಮಕ್ಕಳಿಬ್ಬರ ವಸ್ತುಗಳನ್ನು ನೋಡಿ ದುಃಖ ಉಕ್ಕಿ ಬಂದಿದೆ. ಹೆತ್ತವರು ಮುಸ್ಸಂಜೆಯಲ್ಲಿರುವಾಗ ಯೌವನಕ್ಕೆ ಬಂದ ಮಕ್ಕಳು ಈ ರೀತಿ ಕೊಲೆಯಾಗುತ್ತಾರೆಂದು ಯಾರೂ ಅಂದುಕೊಳ್ಳಲ್ಲ. ಮನೆಯಲ್ಲಿ ಐರನ್ ಬಾಕ್ಸ್, ಬಟ್ಟೆಗಳು, ಇದರ ನಡುವೆ ಖುರಾನ್ ಪುಸ್ತಕವೂ ಸಿಕ್ಕಿದೆ. ನನ್ನ ಹೆಣ್ಮಕ್ಕಳಿಬ್ಬರು ಇಸ್ಲಾಂ ಧರ್ಮದ ಚೌಕಟ್ಟಿನಲ್ಲಿ ಬದುಕುತ್ತಿದ್ದರು ಎಂದು ನೂರ್ ಮಹಮ್ಮದ್ ಹೇಳಿದ್ದಾರೆ.
ಉದ್ಯೋಗದಲ್ಲಿ ಸೀನಿಯರ್ ಆಗಿದ್ದರಿಂದ ಪ್ರವೀಣ್ ಚೌಗುಲೆಗೆ ಮಂಗಳೂರಿನಲ್ಲಿ ಪರಿಚಯ ಇದ್ದುದರಿಂದ ಬಾಡಿಗೆ ಮನೆ ಪಡೆಯುವಾಗ ಆತನ ನೆರವು ಕೇಳಿದ್ದಳು. ಈ ಬಗ್ಗೆ ತನ್ನಲ್ಲಿಯೂ ಐನಾಝ್ ಹೇಳಿಕೊಂಡಿದ್ದಳು. ಮನೆಯನ್ನೂ ನೋಡುವುದಕ್ಕೆ ನಾನು ಈ ಹಿಂದೆ ಬಂದಿದ್ದೆ. ಮನೆಯಲ್ಲಿ ಅಡುಗೆ ಇನ್ನಿತರ ಎಲ್ಲದಕ್ಕೂ ವ್ಯವಸ್ಥೆ ಮಾಡಿಕೊಂಡಿದ್ದರು. ಇಬ್ಬರೂ ಸೇರಿಕೊಂಡು ಮನೆ ನಡೆಸುತ್ತಿದ್ದರು. ಮನೆಯಲ್ಲಿ ಬುರ್ಖಾ, ಇನ್ನಿತರ ಎಲ್ಲ ಬಟ್ಟೆ ಬರೆಗಳೂ ಇವೆ ಎಂದು ಎಲ್ಲವನ್ನೂ ನೋಡುತ್ತಲೇ ಕಣ್ಣೀರು ಹಾಕಿದ್ದಾರೆ. ಆರೋಪಿ ಪ್ರವೀಣ್ ಚೌಗುಲೆಯನ್ನು ಬಂಧಿಸಿ ಜೈಲಿಗಟ್ಟಿದ ಬಳಿಕ ಮೊದಲ ಬಾರಿಗೆ ನೂರ್ ಮಹಮ್ಮದ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
Posted by Vidyamaana on 2023-09-21 16:09:12 |
ಬಂಟ್ವಾಳ:ಪೊಲೀಸ್ ಸಿಬ್ಬಂದಿಯ ಮೊಬೈಲನ್ನೇ ಖತರ್ನಾಕ್ ಕಳ್ಳನೊಬ್ಬ ಎಗರಿಸಿದ ಘಟನೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.
ಮೆಲ್ಕಾರ್ ಟ್ರಾಫಿಕ್ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದಿಂದಾಗಿ ಸೆ.17 ರಂದು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಬಳಿಕ ಅವರು ಸೆ.19 ರಂದು ಜನರಲ್ ವಾರ್ಡ್ ಗೆ ಶಿಫ್ಟ್ ಆಗಿದ್ದರು. ಅವರು ಮಲಗಿದ್ದ ವೇಳೆ ಇವರ ಬೆಡ್ ಪಕ್ಕದಲ್ಲಿ ಟೇಬಲ್ ಮೇಲೆ ಇರಿಸಲಾಗಿದ್ದ ಆಂಡ್ರಾಯ್ಡ್ ಮೊಬೈಲ್ ಹಾಗೂ ಕೀ ಪೇಡ್ ಮೊಬೈಲ್ ಫೋನ್ ನ್ನು ಕಳ್ಳನೊಬ್ಬ ಎಗರಿಸಿದ್ದಾನೆ. ಇನ್ನು ಕಳ್ಳ ಮೊಬೈಲ್ ಕಳ್ಳತನ ಮಾಡಿದ ಮತ್ತು ಆತ ಆಸ್ಪತ್ರೆಗೆ ಬಂದು ಹೋಗುವ ಬಗ್ಗೆ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ.
ಈತ ಕಳೆದ ವಾರ ಐಸಿಯು ಘಟಕದೊಳಗೆ ನುಗ್ಗಿ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಜ್ಜಿಯೋರ್ವರಲ್ಲಿ ಒಮ್ಮೆ ಪೋನ್ ಕೊಡಿ ಅಜ್ಜಿ ಅರ್ಜೆಂಟಾಗಿ ಪೋನ್ ಮಾಡಲು ಇದೆ ಎಂದು ಹೇಳಿ ಮೊಬೈಲ್ ಪಡೆದುಕೊಂಡು ಹೋಗಿ ಮೊಬೈಲ್ ಸಮೇತ ಎಸ್ಕೆಪ್ ಆಗಿದ್ದ. ಇದೀಗ ಆತನೇ ಪೊಲೀಸ್ ಸಿಬ್ಬಂದಿಯ ಮೊಬೈಲ್ ಕಳ್ಳತನ ಮಾಡಿದ್ದು ಈತನ ಓಡಾಟದ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿದೆ
ಇದೀಗ ಆಸ್ಪತ್ರೆಯಲ್ಲಿ ಈತನ ಪೋಟೋ ಅಂಟಿಸಲಾಗಿದ್ದು,ಈತನ ಚಹರೆ ಯನ್ನು ಗಮನಿಸಿದವರು ಕೂಡಲೇ ಪೋಲಿಸರಿಗೆ ಮಾಹಿತಿ ನೀಡಿ ಎಂದು ತಿಳಿಸಲಾಗಿದೆ.