Posted by vidyamaana on 2024-07-25 12:27:06 |
ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.
ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು, ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
Posted by Vidyamaana on 2023-11-20 07:40:32 |
ಬೆಂಗಳೂರು: ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣದಲ್ಲಿ ಈಗಾಗಲೇ ಐವರು ಬೆಸ್ಕಾಂ ಅಧಿಕಾರಿಗಳು, ಸಿಬ್ಬಂದಿಯನ್ನು ಪೊಲೀಸರು ಬಂದಿಸಿದ್ದಾರೆ. ಇನ್ನು ಪ್ರಕರಣದಲ್ಲಿ ನಿರ್ಲಕ್ಷ್ಯದ ಆರೋಪದಲ್ಲಿ ಇಬ್ಬರು ಬೆಸ್ಕಾಂ ಅಧಿಕಾರಿಗಳನ್ನು ಇಂಧನ ಇಲಾಖೆ ಅಮಾನತು ಮಾಡಿದ್ದು, ಮೃತರಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಿಸಲಾಗಿದೆ.ಈ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಪ್ರತಿಕ್ರಿಯಿಸಿ, ಬೆಂಗಳೂರಿನ ವೈಟ್ಫೀಲ್ಡ್ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ಶಾಕ್ಗೆ ಒಬ್ಬ ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿರುವ ದುರ್ದೈವದ ಘಟನೆ ನಡೆದಿದೆ. ಈ ದುರದೃಷ್ಟಕರ ಸಾವುಗಳಿಗೆ ಕಾರಣವಾದ ಘಟನೆಯ ಕುರಿತು ನಾವು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದೇವೆ. ಇದರ ವರದಿಯನ್ನು ಎದುರು ನೋಡುತ್ತಿದ್ದೇವೆ. ಈ ಅಪಘಾತಕ್ಕೆ ಕಾರಣರಾದ AE ಮತ್ತು AEE ಯನ್ನು ಅಮಾನತುಗೊಳಿಸಲಾಗಿದೆ ಮತ್ತು ಇದಕ್ಕೆ ಕಾರಣಾದವರು ಮತ್ತಾರೇ ಇದ್ದರೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಈ ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ ಪರಿಹಾರ ನೀಡಲಿದೆ ಎಂದು ತಿಳಿಸಿದ್ದಾರೆ.
ಐವರ ಬಂಧನ
ವಿದ್ಯುತ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಕಾಡುಗುಡಿ ಪೊಲೀಸರು ಬಂಧಿಸಿದ್ದಾರೆ. ನಿರ್ಲಕ್ಷ್ಯದ ಆರೋಪದಡಿ ಬೆಸ್ಕಾಂ ವೈಟ್ಫೀಲ್ಡ್ ವಿಭಾಗದ ಎಕ್ಸಿಕ್ಯೂಟಿವ್ ಎಂಜಿನಿಯರ್ ಶ್ರೀರಾಮ್,ಅಸಿಸ್ಟೆಂಟ್ ಎಂಜಿನಿಯರ್ ಚೇತನ್, ಎಇಇ ಸುಬ್ರಮಣ್ಯ, ಜೂನಿಯರ್ ಎಂಜಿನಿಯರ್ ರಾಜಣ್ಣ ಹಾಗೂ ಸ್ಟೇಷನ್ ಆಪರೇಟರ್ ಮಂಜು ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇಬ್ಬರ ಸಾವಿಗೆ ಬಿಎಂಟಿಸಿ ಬಸ್ ಡ್ರೈವರ್ ಕೂಡ ಕಾರಣ?
ವಿದ್ಯುತ್ ತಗುಲಿ ತಾಯಿ-ಮಗು ಮೃತಪಡಲು ಬಿಎಂಟಿಸಿ ಬಸ್ ಡ್ರೈವರ್ ಕೂಡ ಕಾರಣ ಎಂಬ ಆರೋಪ ಕೇಳಿಬಂದಿದೆ. ಸಿಗ್ನಲ್ ಬಿದ್ದಿದೆ ಎಂದು ಘಟನೆ ನಡೆದಿದ್ದ ಸ್ಥಳದಲ್ಲಿ ಬಸ್ ಚಾಲಕ ಡೋರ್ ಓಪನ್ ಮಾಡಿದ್ದ. ಸ್ಥಳದಿಂದ ನೂರು ಮೀಟರ್ ದೂರದಲ್ಲಿ ಬಸ್ ನಿಲ್ದಾಣವಿತ್ತು. ಆದರೂ ಮೊದಲೇ ನಿಲ್ಲಿಸಿದ್ದರಿಂದ ತಾಯಿ-ಮಗು ಇಳಿದು ನಡೆದುಕೊಂಡು ಹೋಗಿದ್ದರಿಂದ ವಿದ್ಯುತ್ ತಂತಿ ತುಳಿದು ದರಂತಕ್ಕೆ ಕಾರಣವಾಗಿದೆ. ಹೀಗಾಗಿ ಬಸ್ ಚಾಲಕನ ವಿರುದ್ಧವೂ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.
ನ್ಯಾಯಕ್ಕಾಗಿ ಆಗ್ರಹಿಸಿ ಸಂಬಂಧಿಕರ ಪ್ರತಿಭಟನೆ
ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವಿಗೀಡಾದ್ದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು, ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಮೃತರ ಕುಟುಂಬಸ್ಥರು, ಸ್ಥಳೀಯರು ಕಾಡುಗುಡಿಯಲ್ಲಿ ಪ್ರತಿಭಟನೆ ನಡೆಸಿದರು. ಬೆಸ್ಕಾಂಗೆ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ನ್ಯಾಯಕ್ಕಾಗಿ ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದರು. ಇದರಿಂದ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಯಿತು. ಸ್ಥಳಕ್ಕೆ ಪೊಲೀಸರು ದೌಡಾಯಿಸಿ, ಪರಿಸ್ಥಿತಿಯನ್ನು ನಿಯಂತ್ರಿಸಿದರು.ರಸ್ತೆಯಲ್ಲಿ ಬಿದ್ದ ವಿದ್ಯುತ್ ತಂತಿ ಮೆಟ್ಟಿ ತಾಯಿ-ಮಗು ಸುಟ್ಟು ಕರಕಲು
ಬೆಂಗಳೂರು: ಬೆಳ್ಳಂಬೆಳಗ್ಗೆಯೇ ರಾಜಧಾನಿಯಲ್ಲಿ ಅತ್ಯಂತ ಆತಂಕಕಾರಿ ಮತ್ತು ಹೃದಯ ಹಿಂಡುವ ಘಟನೆ ನಡೆದಿದೆ. ತನ್ನ ಪುಟ್ಟ ಮಗುವನ್ನು ಕಂಕುಳಲ್ಲಿ ಎತ್ತಿಕೊಂಡು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ವಿದ್ಯುತ್ ಆಘಾತಕ್ಕೆ (Electricuted) ಒಳಗಾಗಿ ಮಗುವಿನೊಂದಿಗೆ ಸುಟ್ಟು ಕರಕಲಾಗಿದ್ದಾರೆ (Mother and Child de
non
). ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ (BESCOM Negligence) ಕ್ಕೆ ತಾಯಿ-ಮಗು ಬಲಿಯಾಗಿದ್ದಾರೆ.ತಾಯಿ ಸೌಂದರ್ಯ ಮತ್ತು ಪುಟ್ಟ ಮಗಳು ಲಿಯಾ ಮೃತಪಟ್ಟ ದುರ್ದೈವಿಗಳು. ವೈಟ್ ಫೀಲ್ಡ್ ಸಮೀಪದ ಹೋಪ್ ಫಾರ್ಮ್ ಸರ್ಕಲ್ ಬಳಿ ದುರ್ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ವಾಸವಾಗಿದ್ದ ಸೌಂದರ್ಯ ಅವರು ತಮ್ಮ ಪತಿ ಸಂತೋಷ್ ಮತ್ತು ಮಗುವಿನೊಂದಿಗೆ ತಮಿಳುನಾಡಿನ ತಾಯಿ ಮನೆಗೆ ಹೋಗಿದ್ದರು. ಶನಿವಾರ ರಾತ್ರಿ ಅವರು ಅಲ್ಲಿಂದ ಹೊರಟು ಬೆಳಗ್ಗೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಬಸ್ಸಿನಿಂದ ಇಳಿದಿದ್ದರು. ಬೆಳಗ್ಗೆ ಐದು ಗಂಟೆಯ ಹೊತ್ತಿಗೆ ಬಸ್ಸಿನಿಂದ ಇಳಿದು ಸಂತೋಷ್, ಸೌಂದರ್ಯ ಪುಟ್ಟ ಮಗುವನ್ನು ಕಂಕುಳಲ್ಲಿಇಟ್ಟುಕೊಂಡು ಅವರು ವೈಟ್ ಫೀಲ್ಡ್ ಸಮೀಪದ ಓಫಾರ್ಮ್ ಸರ್ಕಲ್ ಬಳಿ ಮನೆ ಕಡೆಗೆ ಸಾಗುತ್ತಿದ್ದರು. ಅವರು ಎ.ಕೆ ಗೋಪಾಲ್ ಕಾಲೋನಿಯಲ್ಲಿ ವಾಸಿಸುತ್ತಿದ್ದರು.ಈ ವೇಳೆ ರಸ್ತೆ ಬದಿ ತುಂಡಾಡಿ ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಅವರಿಗೆ ಕಾಣಿಸಲಿಲ್ಲ . ಕತ್ತಲಲ್ಲಿ ಅವರು ವಿದ್ಯುತ್ ತಂತಿಯನ್ನು ತುಳಿದಿದ್ದರು. ಮತ್ತು ಒಮ್ಮೆಗೇ ವಿದ್ಯುತ್ ಅವರ ದೇಹದಲ್ಲಿ ಪ್ರವಹಿಸಿ ತಾಯಿ ಮತ್ತು ಮಗು ಸ್ಥಳದಲ್ಲೇ ಸುಟ್ಟು ಕರಕಲಾಗಿ ಹೋಗಿದ್ದಾರೆ.
Posted by Vidyamaana on 2023-10-03 15:58:48 |
ಸುಳ್ಯ: ವಿಷಕಾರಿ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿದ ಪರಿಣಾಮ ಮಹಿಳೆಯೋರ್ವಳು ಮೃತಪಟ್ಟ ಘಟನೆ ಅಮರಪಡ್ಡೂರು ಗ್ರಾಮದ ಕುಳ್ಳಾಜಿ ಎಂಬಲ್ಲಿ ನಡೆದಿದೆ.
ಲೀಲಾವತಿ (35) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಪಡೀಲ್ ಕೆಪುಳು ಬಳಿ ಬೈಕ್ ಸ್ಕೂಟರ್ ನಡುವೆ ನಡೆದ ಅಪಘಾತದ ಸಿ ಸಿ ಟಿವಿ ದೃಶ್ಯ!
ಒಂದು ವಾರದ ಹಿಂದೆ ಕಾಡಿನಲ್ಲಿ ಸಿಗುವ ಮೈರೋಳ್ ಹಣ್ಣನ್ನು , ತಿನ್ನಬಹುದಾದ ಹಣ್ಣು ಎಂದು ಭಾವಿಸಿ ಮನೆಗೆ ತಂದು, ಅದರ ರಸ ತೆಗೆದು ಶರ್ಬತ್ ಮಾಡಿ ಲೀಲಾವತಿ ಹಾಗೂ ಅವರ ತಂದೆ ಸೇವನೆ ಮಾಡಿದ್ದರು.
ಇದರ ಪರಿಣಾಮವಾಗಿ ತಂದೆ ಮಗಳಿಬ್ಬರೂ ಅಸ್ವಸ್ಥರಾಗಿದ್ದರು. ಅವರಲ್ಲಿ ಲೀಲಾವತಿಯವರಿಗೆ ವಾಂತಿ, ಭೇದಿ ಆರ೦ಭವಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಸೌಖ್ಯ ತೀವ್ರಗೊ೦ಡು ಅ. 2ರ೦ದು ಹೆಚ್ಚಿನ ಚಿಕಿತ್ಸೆಗಾಗಿ ಮ೦ಗಳೂರಿಗೆ ಕೊ೦ಡೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ
Posted by Vidyamaana on 2023-09-17 14:49:48 |
ಬೆಂಗಳೂರು (ಸೆ.17): ರಾಜ್ಯದಲ್ಲಿ ಹಿಂದೂಪರ ಹೋರಾಟಗಾರ ಹಾಗೂ ಗೋರಕ್ಷಕ ಎಂದು ವಿವಿಧ ಹೋರಾಟಗಳ ಮೂಲಕ ಹಲ್ಲೆ ಹಾಗೂ ವಿವಿಧ ಪ್ರಕರಣಗಳಡಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಿ ಜೈಲಿಗಟ್ಟಿದ್ದರು. ಆದರೆ, ಗಣೇಶ ಹಬ್ಬಕ್ಕೆ ಒಂದು ದಿನ ಮುಂಚಿತವಾಗಿ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿಗೆ ಗುಡ್ ನ್ಯೂಸ್ ನೀಡಿರುವ ಸರ್ಕಾರ, ಅವರ ವಿರುದ್ಧ ದಾಖಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಗೊಳಿಸಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ
ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಇವರು ಕರ್ನಾಟಕ ಕಳ್ಳ ಭಟ್ಟಿ ವ್ಯಾಪಾರಿಗಳ, ಮಾದಕ ವಸ್ತು ಅಪರಾಧಿಗಳ, ಜೂಜುಕೋರರ, ಗೂಂಡಾಗಳ, ಅನೈತಿಕ ವ್ಯವಹಾರ ಅಪರಾಧಿಗಳ, ಕೊಳಚೆ ಪ್ರದೇಶಗಳನ್ನು ಕಬಳಿಸುವವರ, ವಿಡಿಯೋ ಅಥವಾ ಆಡಿಯೋ ಪೈರೇಟ್ ಚಟುವಟಿಕೆಗಳ ತಡೆ ಅಧಿನಿಯಮ, 1985ರಡಿಯಲ್ಲಿ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ (32 ವರ್ಷ) ವಿರುದ್ಧ ಆ.11ರಂದು ಹೊರಡಿಸಿರುವ ಬಂಧನ ಆದೇಶವನ್ನು ಆ.17ರಂದು ಅನುಮೋದಿಸಲಾಗಿತ್ತು. ಆದರೆ, ಸಲಹಾ ಮಂಡಳಿಯು ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ಸೆ.13ರ ವರದಿಯಲ್ಲಿ ಅಭಿಪ್ರಾಯಪಟ್ಟಿರುತ್ತದೆ.ಆದ್ದರಿಂದ ಕರ್ನಾಟಕ ಸರ್ಕಾರವು ಸದರಿ ಅಧಿನಿಯಮದ 12ನೇ ಪುಕರಣದ 2ನೇ ಉಪ ಪುಕರಣದಡಿ ಪುದತ್ತವಾದ ಅಧಿಕಾರವನ್ನು ಚಲಾಯಿಸಿ, ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಇವರು, ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ವಿರುದ್ಧ ಹೊರಡಿಸಿರುವ ಬಂಧನ ಆದೇಶವನ್ನು ಹಿಂಪಡೆದು, ಈ ಪುಕರಣಕ್ಕೆ ಅನ್ವಯವಾಗುವಂತೆ ಮಾತ್ರ ತಕ್ಷಣದಿಂದ ಜಾರಿಗೆ ಬರುವಂತೆ ಬಂಧಮುಕ್ತಗೊಳಿಸಿ ಆದೇಶಿಸಿದೆ.
ಗೂಂಡಾ ಕಾಯ್ದೆ ಜಾರಿ ಬಗ್ಗೆ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದ್ದ ಹೈಕೋರ್ಟ್: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿರುವ ಸಂಬಂಧ ರಾಜ್ಯ ಸರ್ಕಾರ, ನಗರ ಪೊಲೀಸ್ ಆಯುಕ್ತರು ಮತ್ತು ಸಿಸಿಬಿ ಪೊಲೀಸರಿಗೆ ಹೈಕೋರ್ಟ್ನಿಂದ ಆ.24ರಂದು ನೋಟಿಸ್ ಜಾರಿ ಮಾಡಿತ್ತು. ಗೂಂಡಾ ಕಾಯ್ದೆಯಡಿ ತಮ್ಮನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದುಆರೋಪಿಸಿ ಪುನೀತ್ ಕೆರೆಹಳ್ಳಿ (Puneeth kerehalli) ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿ (Habeas Corpus Petition) ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿತ್ತು.
ಸಮಾಜ ಸೇವಕ ಪುನೀತ್ ಕೆರೆಹಳ್ಳಿ ಎಂದು ವಾದ ಮಂಡನೆ:
ಇನ್ನು ಈ ಅರ್ಜಿಯ ಕುರಿತು ವಿಚಾರಣೆ ವೇಳೆ ಪುನೀತ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ (Arun shyam) ವಾದ ಮಂಡಿಸಿ, ಅರ್ಜಿದಾರರು ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಅರ್ಜಿದಾರರು ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಕಟ್ಟಿದೇಶಕ್ಕಾಗಿ ಹೋರಾಡುವ ಸಮಾನ ಮನಸ್ಕರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ದುರುದ್ದೇಶಪೂರ್ವಕವಾಗಿ ಹಲವು ಪ್ರಕರಣ ಹೂಡಿ ಮತ್ತು ರಾಜಕೀಯ ದ್ವೇಷದ ಕಾರಣಕ್ಕೆ ಅರ್ಜಿದಾರರನ್ನು ಆ.11ರಂದು ಗೂಂಡಾ ಕಾಯ್ದೆಯಡಿ ಅಕ್ರಮವಾಗಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರ ಪೊಲೀಸ್ ಆಯುಕ್ತರು ಯಾವುದೇ ವಿವೇಚನೆ ಬಳಸದೆ ಏಕಾಏಕಿ ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದಾರೆ. ಇದು ಏಕಪಕ್ಷೀಯ ನಡೆಯಾಗಿದ್ದು, ಆ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು.
Posted by Vidyamaana on 2024-06-08 19:54:44 |
ನವದೆಹಲಿ (ಜೂ.8): 2019ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಲ್ಲಿ ರಾಹುಲ್ ಗಾಂಧಿಯನ್ನು ಮಣಿಸುವ ಮೂಲಕ ಸ್ಮೃತಿ ಇರಾನಿ ದೈತ್ಯ ಸಂಹಾರಿಯಾಗಿ ಗುರುತಿಸಿಕೊಂಡಿದ್ದರು. ಈ ಬಾರಿ ಅಮೇಥಿ ಕ್ಷೇತ್ರದಲ್ಲಿ ಸ್ಮೃತಿ ಇರಾನಿಯನ್ನು ಮಣಿಸಲೇಬೇಕು ಎಂದು ಪಣ ತೊಟ್ಟಿದ್ದ ಕಾಂಗ್ರೆಸ್ ಅದರಲ್ಲಿ ಯಶಸ್ವಿಯಾಗಿದೆ.
ಆದರೆ, ಈ ಭಾರಿ ರಾಹುಲ್ ಗಾಂಧಿಯ ಬದಲು, ಈ ಕ್ಷೇತ್ರಕ್ಕೆ ತಮ್ಮ ಕುಟುಂಬಕ್ಕೆ ಅತ್ಯಂತ ಆಪ್ತರಾಗಿದ್ದ ಕಿಶೋರಿ ಲಾಲ್ ಶರ್ಮ ಅಂದರೆ ಕೆಎಲ್ ಶರ್ಮ ಅವರಿಗೆ ಟಿಕೆಟ್ ನೀಡಿತ್ತು. ನಿರೀಕ್ಷೆಯಂತೆಯೇ ಅವರು ಭಾರೀ ಮತಗಳ ಅಂತರದಲ್ಲಿ ಅಮೇಥಿಯಲ್ಲಿ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿಯನ್ನು ಸೋಲಿಸಿದ್ದರು. ಇದರ ಬೆನ್ನಲ್ಲಿಯೇ ಅವರು ಶುಕ್ರವಾರ ನವದೆಹಲಿಗೆ ಆಗಮಿಸಿ ಗಾಂಧಿ ಕುಟುಂಬವನ್ನು ಭೇಟಿ ಮಾಡಿದರು. ಈ ವೇಳೆ ತಮ್ಮ ಪತ್ನಿಯನ್ನು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಪರಿಚಯ ಮಾಡಿಕೊಟ್ಟರು. ಇದರ ವಿಡಿಯೋವನ್ನು ಕಾಂಗ್ರೆಸ್ ಹಂಚಿಕೊಂಡಿದೆ.
2.30 ನಿಮಿಷದ ವಿಡಿಯೋವನ್ನು ಕಾಂಗ್ರೆಸ್ ಎಕ್ಸ್ನಲ್ಲಿ ಕಂಚಿಕೊಂಡಿದೆ. ಈ ವೇಳೆ ರಾಹುಲ್ ಗಾಂದಿ ಅಮೇಥಿಯ ಭಾರಿ ಬಿಸಲಿನಲ್ಲಿ ಮಾಡಿದ ಪ್ರಚಾರದ ದಿನಗಳನ್ನು ಕೂಡ ನೆನಪಿಸಿಕೊಂಡಿದ್ದಾರೆ. ಪ್ರಚಾರದ ಕೊನೆಯ ದಿನ ಅಮೇಥಿಯಲ್ಲಿ ಭಾರೀ ಬಿಸಿಲಿತ್ತು. ಪ್ರಚಾರದ ಸಮಯದಲ್ಲಿ ರಾಹುಲ್ ಗಾಂಧಿ ಧರಿಸಿದ್ದ ಬಟ್ಟೆ ಸಂಪೂರ್ಣ ಒದ್ದೆಯಾಗಿತ್ತು ಎಂದು ಕೆಎಲ್ ಶರ್ಮ ಹೇಳಿದ್ದಾರೆ. ಇನ್ನು ರಾಹುಲ್ ಗಾಂಧಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನಿರ್ವಹಣೆ ಹೇಗಿದೆ ಎಂದು ಕೆಎಲ್ ಶರ್ಮ ಅವರನ್ನೇ ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಬಹಳ ಅದ್ಭುತವಾಗಿ ನಿರ್ವಹಣೆ ತೋರಿದಿದ್ದೇವೆ ಎಂದಿದ್ದಾರೆ. ಇನ್ನು ಸೋನಿಯಾ ಗಾಂಧಿಯವರನ್ನು ತಬ್ಬಿಕೊಂಡು ಕೆಎಲ್ ಶರ್ಮ ಪತ್ನಿ ಕಣ್ಣೀರಿದ್ದಾರೆ. ವಿಡಿಯೋದ ಕೊನೆಯಲ್ಲಿ ಕೆಎಲ್ ಶರ್ಮ ಅವರ ಪತ್ನಿ ಸೋನಿಯಾ ಗಾಂಧಿ ಅವರನ್ನು ಉದ್ದೇಶಿಸಿ ನೀವು ಸಿಂಹದಂತ ಮಗನಿಗೆ ಜನ್ಮ ನೀಡಿದ್ದೀರಿ ಎಂದು ಹೇಳಿದ್ದಾರೆ. ಇದಕ್ಕೆ ಉತ್ತರ ನೀಡುವ ಸೋನಿಯಾ ಗಾಂಧಿ, ಯಾಕೆಂದರೆ, ನಾನು ಸಿಂಹಿಣಿ ಎಂದು ಹೇಳಿದ್ದಾರೆ. ಈ ವಿಡಿಯೋವಿಗ ಸೋಶಿಯಲ್ ಮೀಡಿಯಾ ಸೈಟ್ನಲ್ಲಿ ಭಾರೀ ವೈರಲ್ ಆಗಿದೆ.
Posted by Vidyamaana on 2024-06-21 11:57:43 |
ಪುತ್ತೂರು: ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಪುತ್ತೂರು ಬಿಜೆಪಿಯಿಂದ ಜೂ. ೨೦ರಂದು ಪುತ್ತೂರು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು. ಮೆರವಣಿಗೆಯ ನಡುವೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಳಿಯ ಗಾಂಧಿಕಟ್ಟೆ ಬಳಿ ರಸ್ತೆ ತಡೆಯು ನಡೆಯಿತು. ಪೊಲೀಸರು ಬಂದು ಕಾರ್ಯಕರ್ತರನ್ನು ರಸ್ತೆ ತಡೆ ಮಾಡದಂತೆ ಮನವಿ ಮಾಡಿ ರಸ್ತೆಯಲ್ಲಿ ಕುಳಿತ ಕಾರ್ಯಕರ್ತರನ್ನು ಎಬ್ಬಿಸುವ ಪ್ರಯತ್ನ ಮಾಡಿದರು. ಕೊನೆಗೆ ಪ್ರತಿಭಟನಾಕಾರರು ಕೋರ್ಟ್ ರಸ್ತೆಯ ಮೂಲಕ ತಾಲೂಕು ಆಡಳಿತ ಸೌಧದ ಮುಂದೆ ತಹಸೀಲ್ದಾರ್ ಕಚೇರಿ ಮೂಲಕ ಸರಕಾರಕ್ಕೆ ಉಗ್ರ ಪ್ರತಿಭಟನೆಯ ಎಚ್ಚರಿಕೆಯ ಮನವಿ ಸಲ್ಲಿಸಿದರು.
Posted by Vidyamaana on 2024-01-28 15:33:22 |
ಹೈದರಾಬಾದ್: ನವವಿವಾಹಿತೆಯೊಬ್ಬಳು ಕ್ರಿಮಿನಾಶಕ ಸೇವಿಸಿ ಸಾವಿಗೆ ಶರಣಾದ ಸುದ್ದಿ ಕೇಳಿ ಆಕೆಯ ಗಂಡನೂ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆ ತೆಲಂಗಾಣದ ಆದಿಲಬಾದ್ನಲ್ಲಿ ನಡೆದಿದೆ.ಮೃತ ನವದಂಪತಿಯನ್ನು ವಿಜಯ್ (28) ಮತ್ತು ಪಲ್ಲವಿ (20) ಎಂದು ಗುರುತಿಸಲಾಗಿದೆ.ಕ್ರಿಮಿನಾಶಕ ಸೇವಿಸಿದ್ದ ಪಲ್ಲವಿಯನ್ನು ಆದಿಲಬಾದ್ನಲ್ಲಿರುವ ರಾಜೀವ್ ಗಾಂಧಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್)ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಆದಿಲಬಾದ್ ಪೊಲೀಸರ ಪ್ರಕಾರ ಪಲ್ಲವಿ, ಶುಕ್ರವಾರ ಕ್ರಿಮಿನಾಶಕ ಸೇವನೆ ಮಾಡಿದ್ದಳು. ಶನಿವಾರ ಬೆಳಗ್ಗೆ ಅಸುನೀಗಿದ್ದಾಳೆ. ಸಾವಿನ ಸುದ್ದಿ ಕೇಳಿದ ವಿಜಯ್, ಎಲ್ಲರ ನಿಂದನೆಗೆ ಗುರಿಯಾಗಬೇಕಾಗುತ್ತದೆ ಎಂದು ಹೆದರಿ, ಕೀಟನಾಶಕ ಸೇವಿಸಿ ಮಣ್ಣು ಮಾಡುವ ಜಾಗಕ್ಕೆ ತೆರಳಿ ಪತ್ನಿಯ ಬಳಿಯಲ್ಲೇ ಕೊನೆಯುಸಿರೆಳೆದಿದ್ದಾನೆ. ಇಬ್ಬರು ಕಳೆದ ವರ್ಷ ಮೇ 23ರಂದು ಶಾಸ್ತ್ರೋಕ್ತವಾಗಿ ಮದುವೆ ಆಗಿದ್ದರು.
ದಂಪತಿ ನಡುವೆ ಯಾವುದೇ ಕಲಹವಾಗಲಿ ಅಥವಾ ಭಿನ್ನಾಭಿಪ್ರಾಯವಾಗಲಿ ಇರಲಿಲ್ಲ. ಇಬ್ಬರು ಸುಂದರ ಜೀವನವನ್ನು ಸಾಗಿಸುತ್ತಿದ್ದರು. ಪಲ್ಲವಿಗೆ ಗಂಡನ ಮನೆ ಕೊಲ್ಹಾರಿಯಲ್ಲಿ ವಾಸಿಸಲು ಆಸಕ್ತಿ ಇರಲಿಲ್ಲ.ಹೀಗಾಗಿ ಮನೆಯಿಂದ ದೂರ ಉಳಿದಿದ್ದಳು. ಶುಕ್ರವಾರ ಆಕೆಯನ್ನು ಆಕೆಯ ಸಹೋದರ ಕೊಲ್ಹಾರಿಗೆ ಡ್ರಾಪ್ ಮಾಡಿದ್ದ. ಈ ವೇಳೆ ಕೀಟನಾಶಕ ಬಾಟಲಿ ತೆಗೆದುಕೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.