Posted by vidyamaana on 2024-07-05 07:31:37 |
ಮಂಗಳೂರು: ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಹೊರವಲಯದ ಪೆರ್ಮಂಕಿ ಪರಿಸರದಲ್ಲಿ ಉದ್ಯಮಿ ಹಾಗೂ ಸಾಮಾಜಿಕ ಮುಖಂಡ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ನಡೆಸಿದ ಆರೋಪದಲ್ಲಿ ಮಂಗಳೂರು ಪೊಲೀಸರು 10 ಮಂದಿಯನ್ನು ಸೆರೆಹಿಡಿದಿದ್ದಾರೆ. ಇವರಲ್ಲಿ ಉದ್ಯಮಿಯ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ನೀರಮಾರ್ಗ ಗ್ರಾಮ ನಿವಾಸಿ ವಸಂತಕುಮಾರ್ (42) ಒಳಗೊಂಡಿದ್ದಾನೆ.
ಮಾಧ್ಯಮಗಳೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಬಂಧಿತರನ್ನು ನೀರಮಾರ್ಗದ ವಸಂತಕುಮಾರ್ (42), ನೀರಮಾರ್ಗದ ರಮೇಶ್ (42), ಬಂಟ್ವಾಳದ ಬಾಲಕೃಷ್ಣ ರೇಮಂಡ್ ಡಿಸೋಜಾ (47) ಎಂದು ಗುರುತಿಸಲಾಗಿದೆ. ಕಾಸರಗೋಡಿನಿಂದ (48), ತ್ರಿಶೂರಿನ ಜಾಕೀರ್ ಹುಸೇನ್ (56), ತ್ರಿಶೂರ್ನಿಂದ ವಿನೋಜ್ (38), ತ್ರಿಶೂರ್ನಿಂದ ಸಜೀಶ್ ಎಂಎಂ (32), ತಿರುವನಂತಪುರದಿಂದ ಬಿಜು ಜಿ (41), ತ್ರಿಶೂರ್ನಿಂದ ಸತೀಶ್ ಬಾಬು (44), ಮತ್ತು ಶಿಜೋ ದೇವಸಿ (38) ಇದರಲ್ಲಿ 7 ಮಂದಿ ಕೇರಳ ಮೂಲದವರಾಗಿದ್ದಾರೆ.
ಮಂಗಳೂರು ನಗರದ ಉಳಾಯಿಬೆಟ್ಟು ಪೆರ್ಮಂಕಿ ನಿವಾಸಿ ಉದ್ಯಮಿ ಪದ್ಮನಾಭ ಕೋಟ್ಯಾನ್ ಅವರು ಜೂನ್ 21ರಂದು ಸಂಜೆ ಸುಮಾರು 7.45ಕ್ಕೆ ಮನೆಯಲ್ಲಿದ್ದ ವೇಳೆ ಸುಮಾರು 10ರಿಂದ 12 ಮಂದಿ ಆರೋಪಿಗಳು ಆಗಮಿಸಿ, ಚೂರಿಯಿಂದ ಪದ್ಮನಾಭ ಕೋಟ್ಯಾನ್ ಮೇಲೆ ಹಲ್ಲೆ ನಡೆಸಿ, ನಂತರ, ಅವರ ಪತ್ನಿ ಮತ್ತು ಮಗನನ್ನು ಕಟ್ಟಿಹಾಕಿ, ನಗದು, ಹಣ, ಒಡವೆ ಸೇರಿ ಬೆಲೆಬಾಳುವ ಸೊತ್ತುಗಳನ್ನು ದರೋಡೆ ಮಾಡಿದ್ದರು.
ಘಟನೆಯಲ್ಲಿ ವಸಂತಕುಮಾರ್, ಉದ್ಯಮಿಯ ವ್ಯವಹಾರ ಮತ್ತು ಮನೆಯ ಮಾಹಿತಿಯನ್ನು ಇನ್ನೋರ್ವ ಆರೋಪಿ ರಮೇಶ್ ಪೂಜಾರಿಗೆ ನೀಡಿದ್ದು, ಆರೋಪಿ ರಮೇಶ್ ಪೂಜಾರಿ ಮತ್ತು ರೇಮಂಡ್ ಡಿಸೋಜಾ ಇನ್ನೋರ್ವ ಆರೋಪಿ ಬಾಲಕೃಷ್ಣ ಶೆಟ್ಟಿಗೆ ಉದ್ಯಮಿಯ ಮನೆಯ ಹಾಗೂ ವ್ಯವಹಾರದ ಮಾಹಿತಿ ನೀಡಿದ್ದಾರೆ. ಅದರಂತೆ ಬಾಲಕೃಷ್ಣ ಶೆಟ್ಟಿ ತನ್ನ ಸ್ನೇಹಿತ ಕೇರಳದ ವ್ಯಕ್ತಿಯೊಂದಿಗೆ ದರೋಡೆ ನಡೆಸಲು ಸಂಚು ರೂಪಿಸಿ,ಮನೆಯ ಮಾಹಿತಿಯನ್ನು ನೀಡಿ, ಆರೋಪಿಗಳನ್ನು ಮಂಗಳೂರಿಗೆ ಕರೆಯಿಸಿಕೊಂಡು ದರೋಡೆ ನಡೆಸಿದ್ದಾಗಿ ತಿಳಿದುಬಂದಿದೆ ಎಂದು ಕಮೀಷನರ್ ಹೇಳಿದ್ದಾರೆ.ಕೃತ್ಯದಲ್ಲಿ 15ಕ್ಕೂ ಅಧಿಕ ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ಕಂಡುಬಂದಿದೆ. ಆರೋಪಿಗಳ ಪೈಕಿ ಬಿಜು ಹಾಗೂ ಸತೀಶ್ ಬಾಬು ಎರಡು ತಂಡ ಗಳನ್ನು ಮಂಗಳೂರಿಗೆ ಕಳಿಸಿ, ದರೋಡೆಗೆ ಸಂಚು ರೂಪಿಸಿ ದರೋಡೆ ಕೃತ್ಯ ನಡೆಸಿದ್ದಾರೆ.
ಮೊದಲೇ ಕೇಸ್ ಇತ್ತು
ಆರೋಪಿಗಳ ಪೈಕಿ ವಸಂತ ಕುಮಾರ್ ವಿರುದ್ಧ 2011ನೇ ಇಸವಿಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಾಗಿದ್ದರೆ, ಜಾಕೀರ್ ಎಂಬಾತನ ವಿರುದ್ಧ ಕೇರಳದಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ. ಸತೀಶ್ ಬಾಬು ವಿರುದ್ಧ ತ್ರಿಶೂರ್ ಜಿಲ್ಲೆಯಲ್ಲಿ ಶಾಜಿ ಎಂಬಾತನ ಕೊಲೆ ಪ್ರಕರಣ ದಾಖಲಾಗಿದೆ. ಬಿಜು ವಿರುದ್ಧ ಅಬಕಾರಿ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿವೆ.
ಜೂನ್ 21ರಂದು ಎಂಟರಿಂದ ಒಂಬತ್ತು ಮಂದಿ ಮುಸುಕುಧಾರಿಗಳು ಮನೆಗೆ ನುಗ್ಗಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ರವರನ್ನು ಕಟ್ಟಿ ಹಾಕಿ ಥಳಿಸಿದ್ದು ಹಾಗೂ ಪತ್ನಿ, ಮಕ್ಕಳನ್ನು ಬೆದರಿಸಿ 9 ಲಕ್ಷ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿ ಮನೆಯ ವಾಹನದಲ್ಲೇ ಅಲ್ಪ ದೂರದ ವರೆಗೆ ಪ್ರಯಾಣಿಸಿ ನಂತರ ಅವರ ವಾಹನವನ್ನು ಮಧ್ಯದಲ್ಲೇ ಬಿಟ್ಟು ಇನ್ನೋವಾದಲ್ಲಿ ಪರಾರಿಯಾಗಿದರು. ನಾಲ್ವರು ಸ್ಥಳೀಯ ಆರೋಪಿಗಳಾದ ವಸಂತ್, ರಮೇಶ್, ರೇಮಂಡ್ ಮತ್ತು ಬಾಲಕೃಷ್ಣ ದರೋಡೆಗೆ ಯೋಜನೆ ರೂಪಿಸಿದ್ದರು. ಬಾಲಕೃಷ್ಣ ನಂತರ ಜಾನ್ ಬಾಸ್ಕೋ ನೇತೃತ್ವದ ಕೇರಳ ತಂಡದೊಂದಿಗೆ ಸಂಪರ್ಕ ಹೊಂದಿದ್ದರು.
ಎಂಟು ತಿಂಗಳ ಹಿಂದೆಯೇ ಯೋಜನೆ ರೂಪಿಸಲಾಗಿತ್ತು. ಕೇರಳದ ತಂಡ ಮಂಗಳೂರಿಗೆ ಭೇಟಿ ನೀಡಿದ್ದು, ದರೋಡೆಗೆ ಪ್ರದೇಶದ ಸ್ಕೆಚ್ ಮತ್ತು ನಕ್ಷೆಯನ್ನು ಸಿದ್ಧಪಡಿಸುವಂತೆ ರಮೇಶ್ ಮತ್ತು ವಸಂತ್ ಅವರನ್ನು ಕೇಳಿದ್ದರು ಅದರಂತೆಯೇ ಗುತ್ತಿಗೆದಾರನ ಬಳಿ 100 ರಿಂದ 300 ಕೋಟಿ ರೂ.ಗೂ ಹೆಚ್ಚು ಹಣವಿದೆ ಎಂದು ಸ್ಥಳೀಯ ಆರೋಪಿಗಳು ಕೇರಳ ತಂಡಕ್ಕೆ ತಿಳಿಸಿದ್ದು ಲೂಟಿಹೊಡೆಯಲು ಎಲ್ಲಾ ರೀತಿಯ ಸ್ಕೆಚ್ ತಯಾರಿಸಿದ್ದರು.
ಈ ಪ್ರಕರಣದಲ್ಲಿ ಇನ್ನೂ 4-5 ಮಂದಿಯನ್ನು ಬಂಧಿಸಬೇಕಿದ್ದು 100ರಿಂದ 300 ಕೋಟಿ ಲೂಟಿ ಮಾಡಬಹುದೆಂದು ನಂಬಿಸಿ ಮಾಸ್ಟರ್ ಬೆಡ್ರೂಮ್ನ ಟೈಲ್ಸ್ ತೆಗೆಯಲು 20ಕ್ಕೂ ಹೆಚ್ಚು ಗೋಣಿ ಚೀಲಗಳು ಮತ್ತು ಸಲಕರಣೆಗಳನ್ನು ತಂದಿದ್ದರು. ಒಂದೇ ಒಂದು ಸುಳಿವೇ ಇಲ್ಲದ ಕುರುಡು ಪ್ರಕರಣವಾಗಿರುವುದರಿಂದ ಆರೋಪಿಗಳ ಪತ್ತೆಗೆ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದರು. ಕಳೆದ 15 ದಿನಗಳಿಂದ ಈ ಪ್ರಕರಣವನ್ನು ಭೇದಿಸಲು ಅವಿರತವಾಗಿ ಶ್ರಮಿಸಿದ ಡಿಸಿಪಿ, ಎಸಿಪಿ ಮತ್ತು ಸಿಸಿಬಿ ಸಿಬ್ಬಂದಿಯನ್ನು ನಾನು ಅಭಿನಂದಿಸುತ್ತೇನೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
Posted by Vidyamaana on 2024-04-01 20:20:46 |
ಬಂಟ್ವಾಳ, ಎ.1: ಆರು ದಿನಗಳ ಹಿಂದೆ ದಿಢೀರ್ ನಾಪತ್ತೆಯಾಗಿದ್ದ ಚುನಾವಣಾ ಕರ್ತವ್ಯದಲ್ಲಿದ್ದ ಇಲ್ಲಿನ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಧರ್ಮಸ್ಥಳ ಬಳಿಯ ಪಟ್ರಮೆ ಎಂಬಲ್ಲಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮಾ.27ರಂದು ಚುನಾವಣಾ ಕರ್ತವ್ಯದಲ್ಲಿದ್ದ ಅಮ್ಟಾಡಿ ಗ್ರಾಪಂ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕರ್ತವ್ಯಕ್ಕೆ ಹಾಜರಾಗದೆ ಕಣ್ಮರೆಯಾಗಿದ್ದರು. ಈ ಬಗ್ಗೆ ಅವರ ಪತ್ನಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆ ದೂರು ನೀಡಿದ್ದರು.
Posted by Vidyamaana on 2024-03-08 12:37:16 |
ಪುತ್ತೂರು: ರಾಜ್ಯದಲ್ಲಿ ಬಡವರ ಪರವಾಗಿರುವ ರಾಜ್ಯ ಸರಕಾರದ ಗ್ಯಾರೆಂಟಿ ಯೋಜನೆ ಪ್ರತಿಯೊಬ್ನ ಜನರಿಗೂ ತಲುಪುವಂತೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಪುತ್ತೂರು ಕಿಲ್ಲೆ ಮೈದಾನದಲ್ಲಿ ಗುರುವಾರ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು.
ಈಗಾಗಲೇ ಶೇ. 98 ಜನರಿಗೆ ರಾಜ್ಯದ ಗ್ಯಾರೆಂಟಿ ಯೋಜನೆಗಳು ತಲುಪಿವೆ. ಆದರೂ ನನಗೆ ಬೇಸರವಿದೆ. ಶೇ. 100 ಜನರಿಗೆ ಈ ಯೋಜನೆಗಳು ತಲುಪಬೇಕಿತ್ತು. ಆದ್ದರಿಂದ ಜನರ ಬಳಿ ಕ್ಷಮೆ ಕೇಳುತ್ತೇನೆ ಎಂದರು.
ಗ್ಯಾರೆಂಟಿ ಸುಳ್ಳು ಎಂದು ಹೇಳುತ್ತಿದ್ದವರು ಇಂದು ಅದೇ ಗ್ಯಾರೆಂಟಿಯ ಹಿಂದೆ ಬಿದ್ದಿದ್ದಾರೆ. ದೇಶದಲ್ಲೇ ಗ್ಯಾರೆಂಟಿಗಳನ್ನು ಕೊಡುವ ಕೆಲಸ ಆಗುತ್ತಿದೆ. ಈ ಮೂಲಕ ಬಡವರ ಸಶಕ್ತೀಕರಣದ ಕೆಲಸ ಆಗುತ್ತಿದೆ. ಆದ್ದರಿಂದ ಎಂದರು.
ರಾಜ್ಯ ಸರಕಾರದ ಈ ಗ್ಯಾರೆಂಟಿ ಯೋಜನೆಗಳನ್ನು ವಿರೋಧಿಸಿದವರು ಯಾರೂ ಇಲ್ಲ. ಸುಮಾರು 3ರಿಂದ 4 ಸಾವಿರ ಮಹಿಳೆಯರ ಜೊತೆ ಮಾತನಾಡಿದ್ದೇನೆ. ಅವರೆಲ್ಲರೂ ಯೋಜನೆಯ ಬಗ್ಗೆ ಹೊಗಳಿಯೇ ಮಾತನಾಡಿದ್ದಾರೆ. ಒಂದು ವೇಳೆ 1 % ಜನ ವಿರೋಧಿಸಬಹುದು. ಅದು ನಂಜಿಕಾರುವವರು ಎಂದು ಕುಟುಕಿದರು.
ಗ್ಯಾರೆಂಟಿ ಯೋಜನೆಯಿಂದ ಬರದ ಪ್ರಭಾವ ಕಡಿಮೆಯಾಗಿದೆ: ಹರೀಶ್ ಕುಮಾರ್
ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮಾತನಾಡಿ, ಬದುಕು ಕೊಡುವ ಕೆಲಸವನ್ನು ರಾಜ್ಯ ಸರಕಾರ ಮಾಡಿದೆ. ಕೊಟ್ಟಿರುವ ಆಶ್ವಾಸನೆಗಳನ್ನು ಈಡೇರಿಸಿ, ರಾಜ್ಯದ ಜನರ ಮನಗೆದ್ದಿದೆ. ವರ್ಷಕ್ಕೆ 58ರಿಂದ 60 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ. ಹಾಗೆಂದು ರಾಜ್ಯದ ಅಭಿವೃದ್ಧಿ ಕಾರ್ಯಕ್ಕೆ ತೊಡಕಾಗಿಲ್ಲ. ಆರ್ಥಿಕ ಚಾಣಕ್ಯ ಸಿದ್ದರಾಮಯ್ಯ ಇವನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಕಾಂಗ್ರೆಸಿನ ಗ್ಯಾರೆಂಟಿ ಯೋಜನೆಗಳಿಂದಾಗಿ ಬರದ ಪ್ರಭಾವವೂ ಅಷ್ಟಾಗಿ ಕಾಡುತ್ತಿಲ್ಲ ಎಂದರು.
ಇದೇ ಸಂದರ್ಭ ಫಲಾನುಭವಿಗಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ದ.ಕ.ಜಿ.ಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಆನಂದ್ ಕೆ,ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ವಿ.ಇಬ್ರಾಹಿಂಪುರ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಆರ್.ಲೋಕೇಶ್, ಜಿಲ್ಲಾ ಉದ್ಯೋಗ ಅಧಿಕಾರಿ ವೈ. ಎಂ.ಬಡಿಗೇರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಮಂಗಳಾ ಕಾಳೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಉಸ್ಮಾನ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಾಜಾರಾಮ್, ಅಧೀಕ್ಷಕ ಇಂಜಿನಿಯರ್ ಕೃಷ್ಣರಾಜು, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.ತಹಸೀಲ್ದಾರ್ ಪುರಂದರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಕಮಿಷನರ್ ಜುಬಿನ್ ಮೊಹಾಪಾತ್ರ ಸ್ವಾಗತಿಸಿದರು.ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್ ವಂದಿಸಿದರು.ಶಿಕ್ಷಕ ಬಾಲಕೃಷ್ಣ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು
Posted by Vidyamaana on 2023-08-24 13:18:04 |
ಪುತ್ತೂರು: ಪುತ್ತೂರಿನಲ್ಲಿ ಯುವತಿಯೋರ್ವಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಕೃತ್ಯ ನಡೆದ ಒಂದೂವರೆಗಂಟೆಯೊಳಗೆ ಬಂಧಿಸಿರುವುದು ಶ್ಲಾಘನೀಯವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಪ್ರತಿಕ್ರಿಯಿಸಿದ್ದಾರೆ.
ಪುತ್ತೂರು ನಗರದಲ್ಲಿ ಹಾಡುಹಗಲೇ ನಡೆಯಬಾರದ ಘಟನೆ ನಡೆದಿರುವುದು ಅತ್ಯಂತ ದುಖದ ವಿಚಾರವಾಗಿದೆ. ಇಂಥಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಎಚ್ಚರದಿಂದ ಇರಬೇಕಾಗುತ್ತದೆ. ತಮ್ಮ ಮಗಳನ್ನು ಕಳೆದುಕೊಂಡ ಕುಟುಂಬಕ್ಕೆ ನಾನು ಸಾಂತ್ವನವನ್ನು ಹೇಳುತ್ತಿದ್ದೇನೆ. ಪುತ್ತೂರು ಸೇರಿದಂತೆ ಜಿಲ್ಲೆಯ ಯಾವುದೇ ಭಾಗದಲ್ಲಿ ಅಪರಾಧ ಚಟವಟಿಕೆ ನಡೆಯದಂತೆ ಪೊಲೀಸ್ ಇಲಾಖೆ ಸದಾ ಎಚ್ಚರದಿಂದ ಇದ್ದರೂ ಈ ಕೃತ್ಯ ನಡೆದಿದೆ. ಆರೋಪಿಯನ್ನು ಬಂಧಿಸುವಲ್ಲಿ ಮುತುವರ್ಜಿವಹಿಸಿದ ಜಿಲ್ಲಾ ಎಸ್ ಪಿ ಸಿ ಬಿ ರಿಷ್ಯಂತ್ ಹಾಗೂ ಡಿವೈಎಸ್ಪಿ ಗಾಣಾ ಪಿ ಕುಮಾರ್ ಹಾಗೂ ಪೊಲೀಸ್ ಇಲಾಖೆಗೆ ನಾನು ಅಭಿನಂದನೆಯನ್ನು ಸಲ್ಲಿಸುತ್ತಿದ್ದೇನೆ ಎಂದು ಶಾಸಕರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Posted by Vidyamaana on 2023-11-20 20:02:34 |
ಪುತ್ತೂರು: ಪುತ್ತಿಲ ಪರಿವಾರದ ವತಿಯಿಂದ ಡಿ.24 ಮತ್ತು 25 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಲೋಕಕಲ್ಯಾಣರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಬೃಹತ್ ಸಂತ ಸಮ್ಮೇಳನ ನಡೆಯುವ ಬಗ್ಗೆ ಪೂರ್ವಭಾವಿ ಸಭೆ ಮುಕ್ರಂಪಾಡಿಯ ಸುಭದ್ರ ಕಲ್ಯಾಣಮಂಟಪದಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಡಿ.24 ರ ಸಂಜೆ ಬೊಳುವಾರಿನಿಂದ ತಿರುಪತಿಯಿಂದ ಆಗಮಿಸುವ ದೇವರ ವೈಭವದ ಮೆರವಣಿಗೆ, ನಂತರ ರಾತ್ರಿ ಪೂಜೆ ನಂತರ ಸಾಂಸ್ಕೃತಿಕ ಕಾರ್ಯಕ್ರಮ, ಮರುದಿನ ಬೆಳಿಗ್ಗೆ ವಿಶೇಷ ಉದಯಾಸ್ತಮಾನ ಪೂಜೆ , ನಂತರ ರಾಮಕೃಷ್ಣ ಕಾಟುಕುಕ್ಕೆ ಅವರಿಂದ ಭಜನೋತ್ಸವ ಸಂಜೆ ಬೃಹತ್ ಸಂತ ಸಮ್ಮೇಳನ ನಡೆಯಲಿದೆ.
ಸಭೆಯ ನಂತರ ಶ್ರೀನಿವಾಸ ಕಲ್ಯಾಣೋತ್ಸವ ಜರುಗಲಿದೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.
ಎರಡು ದಿನದ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಅಂದಾಜು 1 ಲಕ್ಷಕ್ಕೂ ಅಧಿಕ ಜನ ಸೇರಲಿದ್ದು, ಎರಡು ದಿನವೂ ಅನ್ನದಾನ ಇರಲಿದೆ ಎಂದರು.
ಪೂರ್ವಭಾವಿ ಸಭೆಯಲ್ಲಿ ಸಮಿತಿ ರಚನೆ ನಡೆಯಿತು.
ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ಶ್ರೀನಿವಾಸ ಕಲ್ಯಾಣೋತ್ಸವದ ಅಧ್ಯಕ್ಷರಾದ ಶಶಾಂಕ್ ಕೊಟೇಚಾ, ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್, ಮಹಿಳಾ ಘಟಕದ ಅಧ್ಯಕ್ಷೆ ಮಲ್ಲಿಕಾ ಪ್ರಸಾದ್, ಗಣೇಶ್ ಭಟ್ ಮಕರಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪುತ್ತಿಲ ಪರಿವಾರದ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿ ಮಠ ಕಾರ್ಯಕ್ರಮ ನಿರೂಪಿಸಿದರು.