Posted by vidyamaana on 2024-07-03 13:36:16 |
ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.
ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.
ಮದುವೆಯಾಗಿದ್ದ ಶ್ರೀಕಾಂತ್!
ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Posted by Vidyamaana on 2023-05-07 15:50:02 |
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸಾರದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಆನೆ ಬಲರಾಮ (67) ಮೃತಪಟ್ಟಿದೆ. ಅನಾರೋಗ್ಯದಿಂದ ಬಲರಾಮ ಸಾವನ್ನಪ್ಪಿದೆ.
ಕೆಲ ದಿನಗಳಿಂದ ನಾಗರಹೊಳೆ ಉದ್ಯಾನದಲ್ಲಿನ ಹುಣಸೂರು ರೇಂಜ್ ವ್ಯಾಪ್ತಿಯಲ್ಲಿನ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದಂತ ಬಲರಾಮ ಆನೆಯು ಅನಾರೋಗ್ಯಕ್ಕೆ ತುತ್ತಾಗಿತ್ತು. ಆನೆಯ ಬಾಯಿಯಲ್ಲಿ ಹುಣ್ಣಾಗಿ ಆಹಾರ ಸೇವಿಸಲು ಕಷ್ಟಪಡುತ್ತಿತ್ತು.ಆನೆಗೆ ಆಹಾರ ಸೇವಿಸಲು, ನೀರು ಕುಡಿಯಲು ಆಗದ ಕಾರಣದಿಂದಾಗಿ ಮತ್ತಷ್ಟು ಕುಗ್ಗಿ ಹೋಗಿತ್ತು. ಸ್ಥಳದಲ್ಲಿಯೇ ಪಶುವೈದ್ಯರು ಠಿಕಾಣಿ ಹೂಡಿ ಚಿಕಿತ್ಸೆ ಕೊಟ್ಟಿದ್ದರೂ, ಇಂದು ಚಿಕಿತ್ಸೆ ಫಲಿಸದೇ ಬಲರಾಮ ಕೊನೆ ಉಸಿರು ಚೆಲ್ಲಿದೆ.
Posted by Vidyamaana on 2023-09-17 04:52:32 |
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು. ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ.17ರಂದು ಕದಿರು ವಿನಿಯೋಗ (ಹೊಸತನೆ) ವಿತರಣೆ ನಡೆಯಲಿದೆ. ಬೆಳಿಗ್ಗೆ ದೇವಳದ ಪುಷ್ಕರಣಿಯ ಕಟ್ಟೆಯಿಂದ ಹೊಸತೆನೆಗೆ ಪೂಜೆ ಮಾಡುವ ಮೂಲಕ ದೇವಳದ ಒಳಾಂಗಣಕ್ಕೆ ತರಲಾಗುವುದು.ಬಳಿಕ ಸಂಪ್ರದಾಯದಂತೆ ದೇವಳದಲ್ಲಿ ಪೂಜೆ ನಡೆಯಲಿದೆ. ದೇವಳದ ಹೊರಾಂಗಣದಲ್ಲಿ ಭಕ್ತರಿಗೆ ಕದಿರು ವಿತರಣೆ ನಡೆಯಲಿದೆ.
Posted by Vidyamaana on 2024-02-09 11:54:53 |
ಪುತ್ತೂರು: ಶೀಘ್ರದಲ್ಲಿ ಶುಭಾರಂಭಗೊಳ್ಳಲಿರುವ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಚಿನ್ನಾಭರಣ ಸಂಸ್ಥೆಯ ಪುತ್ತೂರು ಮಳಿಗೆಗೆ ಉತ್ಸಾಹಿ ಅಭ್ಯರ್ಥಿಗಳ ಆಯ್ಕೆಗೆ ವಾಕ್-ಇನ್-ಇಂಟರ್ ವ್ಯೂ ಕರೆಯಲಾಗಿದೆ.
ಕಾಸರಗೋಡು ಮೂಲದ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಂಗಳೂರು, ಬೆಂಗಳೂರು, ಕಾಞಂಗಾಡ್, ಕಾಸರಗೋಡು, ದಾವಣಗೆರೆ ಮತ್ತು ಶಿವಮೊಗ್ಗದಲ್ಲಿ ಶಾಖೆಗಳನ್ನು ಹೊಂದಿದೆ. ಸೊಗಸಾದ ವಿನ್ಯಾಸ, ಸಾಟಿಯಿಲ್ಲದ ಶುದ್ಧತೆಯ ಮೂಲಕ ಚಿನ್ನದ ವೈವಿಧ್ಯತೆಯನ್ನು ಗ್ರಾಹಕರ ಮುಂದಿಡುವಲ್ಲಿ ಸಂಸ್ಥೆ ಈಗಾಗಲೇ ಯಶಸ್ವಿಯಾಗಿದೆ.
ಫೆ. 11ರ ಭಾನುವಾರ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ದರ್ಬೆ ಸಂತ ಫಿಲೋಮಿನಾ ಕ್ಯಾಂಪಸಿನ ಫಿಲೋಮಿನಾ ಇಂಗ್ಲೀಷ್ ಮೀಡಿಯಂ ಸ್ಕೂಲಿನ ಹಾಲಿನಲ್ಲಿ ನೇರ ಸಂದರ್ಶನ ನಡೆಯಲಿದೆ.
ಹುದ್ದೆಗಳ ವಿವರ ಹೀಗಿದೆ:
ಸೇಲ್ಸ್ ಎಕ್ಸಿಕ್ಯೂಟಿವ್ – ಜ್ಯುವೆಲ್ಲರಿ ಕ್ಷೇತ್ರದಲ್ಲಿ ಕನಿಷ್ಠ 1 ವರ್ಷ ಅನುಭವ ಹೊಂದಿರಬೇಕು.
ಸೇಲ್ಸ್ ಟ್ರೈನಿ – 25 ವರ್ಷದೊಳಗಿನವರಿಗೆ ಆದ್ಯತೆ.
ಕಸ್ಟಮರ್ ರಿಲೇಷನ್ಸ್ ಎಕ್ಸಿಕ್ಯೂಟಿವ್ – ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ
ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ – ದ್ವಿಚಕ್ರ ವಾಹನ ಹೊಂದಿರಲೇಬೇಕು.
ಪ್ಯಾಕಿಂಗ್ ಬಾಯ್
ಎಲೆಕ್ಟ್ರಿಷಿಯನ್
ಪ್ಯಾಂಟ್ರಿ ಬಾಯ್ಸ್
ಹೌಸ್ ಕೀಪರ್ಸ್
ಚಾಲಕರು
ಸೆಕ್ಯೂರಿಟಿ
ಅಡುಗೆಯವರು
ಹೆಚ್ಚಿನ ವಿವರಕ್ಕೆ ಸಂಪರ್ಕಿಸಿ: 9945474916, 9663748916
Posted by Vidyamaana on 2023-03-30 06:23:29 |
ನೆಲ್ಯಾಡಿ : ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ನೆಲ್ಯಾಡಿ ಸಮೀಪದ ಜ್ಞಾನೋದಯ ಬೆಥನಿ ಕಾಲೇಜು ಸಮೀಪ ಕರ್ಬಸಂಕ ಎಂಬಲ್ಲಿ ಡಿವೈಡರ್ಗೆ ಕಾರು ಡಿಕ್ಕಿಯಾಗಿ ಮಹಿಳೆ ಮೃತಪಟ್ಟು ಪತಿ ಮತ್ತು ಪುತ್ರ ಗಂಭೀರ ಗಾಯಗೊಂಡ ಘಟನೆ ಮಾ.30ರಂದು ಬೆಳಿಗ್ಗೆ ನಡೆದಿದೆ.ಅನ್ನಪೂರ್ಣ(50ವ.) ಮೃತ ಮಹಿಳೆ. ಇವರ ಪುತ್ರ ಅಶ್ವಿನ್(25ವ)ಹಾಗೂ ಪತಿ ಭಾಸ್ಕರ(56)ಗಂಭೀರ ವಾಗಿ ಗಾಯಗೊಂಡವರು. ಕಾರನ್ನು ಅಶ್ವಿನ್ ಚಲಾಯಿಯಿಸುತ್ತಿದ್ದು ಕಾರು ಬೆಂಗಳೂರಿನಿಂದ ಮಂಗಳೂರಿನ ಕಡೆಗೆ ಚಲಿಸುತಿತ್ತು ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆಕರೆದುಕೊಂಡು ಹೋಗಲಾಗಿದೆ.
ಅಪಘಾತವು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆ ಹಾಗೂ ಸೇತುವೆ ಕಾಮಾಗಾರಿ ನಡೆಯುತ್ತಿರುವ ಹಿನ್ನಲೆ ಡಿವೈಡರ್ ಆಳವಡಿಸಲಾಗಿದೆ. ಇದಕ್ಕೆ ಚಾಲಕ ಢಿಕ್ಕಿ ಹೊಡೆದಿದ್ದು ಕಾರಿನ ಮುಂಭಾಗ ಸಂಪೂರ್ಣ ಜಖಂ ಗೊಂಡಿದೆ.
ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ರವಿ ಬಿ.ಎಸ್., ಸಬ್ ಇನ್ಸೆಕ್ಟರ್ ರಾಜೇಶ್ ಕೆ.ವಿ., ನೆಲ್ಯಾಡಿ ಹೊರಠಾಣೆಯ ಹೆಡ್ಕಾನ್ಸ್ಟೇಬಲ್ ಬಾಲಕೃಷ್ಣ, ಕುಶಾಲಪ್ಪ ನಾಯ್ಕರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Posted by Vidyamaana on 2024-03-26 15:02:35 |
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಗಿದೆ. ಚುನಾವಣಾ ಕಚೇರಿಯೂ ಉದ್ಘಾಟನೆಗೊಂಡಿದೆ. ಮುಂದೆ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ತೆರಳಿ ಪ್ರಚಾರ ಕಾರ್ಯ ನಡೆಸಲಾಗುವುದು. ಪ್ರಚಾರ ಕಾರ್ಯಕ್ಕೆ ಇನ್ನಷ್ಟು ಶಕ್ತಿ ತುಂಬಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದರು.
ಏಪ್ರಿಲ್ 3ರಂದು ನಾಮಪತ್ರ ಸಲ್ಲಿಕೆ:
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಪರವಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ತೆರಳಿ ಪ್ರಚಾರ ಕಾರ್ಯ ನಡೆಸಲಾಗುವುದು. ಏ. 11ರಂದು ಸುಳ್ಯ, 12ರಂದು ಮುಲ್ಕಿ, 13ರಂದು ಪುತ್ತೂರು,14ರಂದು ಮಂಗಳೂರು ದಕ್ಷಿಣ, 15ರಂದು ಉಳ್ಳಾಲ, 16ರಂದು ಮಂಗಳೂರು ಉತ್ತರ, 17ರಂದು ಬೆಳ್ತಂಗಡಿ, 18ರಂದು ಬಂಟ್ವಾಳಕ್ಕೆ ಅಭ್ಯರ್ಥಿ ಸಹಿತ ಆಗಮಿಸಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ಪುತ್ತೂರಿಗೆ ಆಗಮಿಸಿ, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಲಿದ್ದಾರೆ ಎಂದರು.
ಏ. 19ರಿಂದ ಎರಡನೇ ಸುತ್ತಿನ ಪ್ರಚಾರ ಕಾರ್ಯ ನಡೆಯಲಿದೆ. ಮಾ. 24ಕ್ಕೆ ಪ್ರಚಾರ ಕಾರ್ಯ ಅಂತ್ಯವಾಗಲಿದ್ದು, 26ರಂದು ಚುನಾವಣೆ ನಡೆಯಲಿದೆ ಎಂದು ವಿವರಿಸಿದರು.
ಒಮ್ಮತದ ಅಭ್ಯರ್ಥಿ:
ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಹೊಸ ಮುಖಕ್ಕೆ ಅವಕಾಶ ನೀಡಬೇಕು ಎನ್ನುವುದು ಕಾರ್ಯಕರ್ತರ ಅಭಿಲಾಷೆಯಾಗಿತ್ತು. ಅದರಂತೆ ರಾಜಕೀಯದ ಜೊತೆಗೆ ಸಾಮಾಜಿಕ, ಧಾರ್ಮಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಕ್ರೀಯವಾಗಿರುವ ಪದ್ಮರಾಜ್ ಆರ್. ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಸಮರ್ಥ ಹಾಗೂ ಉತ್ತಮ ಅಭ್ಯರ್ಥಿಯನ್ನು ನೇಮಕ ಮಾಡಿರುವ ಕಾರಣಕ್ಕೆ ಕಾಂಗ್ರೆಸ್ ವರಿಷ್ಠರಿಗೆ ಅಭಿನಂದನೆ ಸಲ್ಲಿಸಿದರು.
ಗೆಲ್ಲುವ ಅಭ್ಯರ್ಥಿ:
ಚುನಾವಣಾ ಉಸ್ತುವಾರಿ ರಮಾನಾಥ ರೈ ಮಾತನಾಡಿ, ಹೊಸಮುಖದ ಅಗತ್ಯ ಪಕ್ಷಕ್ಕಿತ್ತು. ಇದೀಗ ಈ ಕೊರತೆ ನೀಗಿದ್ದು, ಗೆಲ್ಲುವ ಅಭ್ಯರ್ಥಿಯನ್ನೇ ಪಕ್ಷ ಆಯ್ಕೆ ಮಾಡಿದೆ. ನಾವು ಕಾರ್ಯಕರ್ತರು. ಕಾಂಗ್ರೆಸಿನ ಇತಿಹಾಸವನ್ನು ಮತ್ತೊಮ್ಮೆ ಪುನರ್ ಸ್ಥಾಪಿಸುವಂತೆ ನಾವು ಮಾಡುತ್ತೇವೆ ಎಂದ ಅವರು, ಜಿಲ್ಲೆಯ ಸಮಗ್ರ ಅಭಿವೃದ್ಧಿಯಲ್ಲಿ ಸಿಂಹಪಾಲು ನೀಡಿರುವ ಕಾಂಗ್ರೆಸ್ ನೀಡಿದಂತಹ ಭರವಸೆಯನ್ನು ಈಡೇರಿಸಿದೆ. ಗ್ಯಾರೆಂಟಿ ಯೋಜನೆಯೂ ಯಶಸ್ಸು ಕಂಡಿದೆ ಎಂದರು.
ಗೆಲುವಿಗಾಗಿ ಹೋರಾಟ:
ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಹೊಸ ಮುಖಕ್ಕೆ ಅವಕಾಶ ನೀಡುವ ಮೂಲಕ ಪಕ್ಷ ಕಾರ್ಯಕರ್ತರ ಬೇಡಿಕೆಗೆ ಮಣೆ ಹಾಕಿದೆ. ಅಭ್ಯರ್ಥಿ ಪದ್ಮರಾಜ್ ಅವರ ಗೆಲುವಿಗಾಗಿ ಹೋರಾಡುತ್ತೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮುಡಾ ಅಧ್ಯಕ್ಷ ಸದಾಶಿವ ಉಲ್ಲಾಳ್, ಪ್ರಮುಖರಾದ ಯು.ಕೆ. ಮೋನು, ಶಾಹುಲ್ ಹಮೀದ್ ಉಪಸ್ಥಿತರಿದ್ದರು.
Posted by Vidyamaana on 2023-09-09 08:40:11 |
ಗಳೂರು : ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿ ಮಾಡಲು ಶೇ. 50 ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಇಂದು ಕೊನೆಯ ದಿನಾಂಕವಾಗಿದ್ದು, ಇಂದು ಸೆಪ್ಟೆಂಬರ್ 9 ರೊಳಗೆ ವಾಹನ ಸವಾರರು ರಿಯಾಯಿತಿ ದರದಲ್ಲಿ ದಂಡ ಕಟ್ಟಬೇಕು.ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ.ಸೆಪ್ಟೆಂಬರ್ 9 ರೊಳಗೆ ವಾಹನ ಸವಾರರು ರಿಯಾಯಿತಿ ದರದಲ್ಲಿ ದಂಡ ಕಟ್ಟಬಹುದಾಗಿದೆ. ಸಂಚಾರಿ ಪೊಲೀಸ್ ಇಲಾಖೆಯ ಇ-ಚಲನ್ನಲ್ಲಿ ಫೆಬ್ರವರಿ 11, 2023ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಈ ಅವಕಾಶ ನೀಡಲಾಗಿದೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.
ರಿಯಾಯಿತಿ ದರದಲ್ಲಿ ದಂಡ ಕಟ್ಟೋದು ಹೇಗೆ..?
1) ಕರ್ನಾಟಕ ರಾಜ್ಯ ಪೊಲೀಸ್ ಅಧಿಕೃತ ಮೊಬೈಲ್ ಅಪ್ಲಿಕೇಶನ್ ಮೂಲಕ ಪಾವತಿ ಮಾಡಬಹುದು.
2) ಪೇಟಿಎಂ ಅಪ್ಲಿಕೇಶನ್ ಮುಖಾಂತರವು ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ.
3) ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ವೆಬ್ ಸೈಟ್ ಗೆ ಲಾಗ್ ಇನ್ ಆಗಿ ವಾಹನದ ನೋಂದಣಿ ಸಂಖ್ಯೆ ನಮೂದಿಸುವ ಮೂಲಕ ಬಾಕಿ ಪಾವತಿ ಮಾಡಬಹುದು.
4) ಸಂಚಾರ ನಿರ್ವಹಣ ಕೇಂದ್ರದ ಮೊದಲನೆ ಮಹಡಿಯಲ್ಲೂ ಸಹ ದಂಡ ಪಾವತಿಸಬಹುದಾಗಿದೆ.
5 ) ಹತ್ತಿರ ಸಂಚಾರ ಪೊಲೀಸ್ ಠಾಣೆಗಳಲ್ಲಿ ನಿಮ್ಮ ವಾಹನದ ನೋಂದಣಿ ಸಂಖ್ಯೆಯ ವಿವರಗಳನ್ನು ಒದಗಿಸಿ ಪಡೆಯಬಹುದು. ದಂಡವನ್ನು ಮೊತ್ತವನ್ನು ಪಾವತಿಸಿ ರಶೀದಿ ಪಡೆಯಬಹುದು..