ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಆಲಂಕಾರು ಕಾಂಗ್ರೆಸ್ ಬಹಿರಂಗ ಚುನಾವಣಾ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

Posted by Vidyamaana on 2024-04-11 16:20:02 |

Share: | | | | |


ಆಲಂಕಾರು ಕಾಂಗ್ರೆಸ್ ಬಹಿರಂಗ ಚುನಾವಣಾ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಕಡಬ: ಹಿಂದಿನ 40 ವರ್ಷಗಳಲ್ಲಿ ಜಿಲ್ಲೆಗೆ ಕಾಂಗ್ರೆಸ್ ಸಂಸದರು ನೀಡಿರುವ ಕೊಡುಗೆ‌ ಹಾಗೂ ನಂತರದ 33 ವರ್ಷ ಬಿಜೆಪಿ ಸಂಸದರು ನೀಡಿರುವ ಕೊಡುಗೆಗಳನ್ನು ತುಲನೆ ಮಾಡಿದರೆ ಜಿಲ್ಲೆಯ ಅಭಿವೃದ್ಧಿ ವಿಚಾರ ಅರ್ಥವಾಗುತ್ತದೆ. ಬುದ್ದಿವಂತರ ಜಿಲ್ಲೆ ಅಭಿವೃದ್ಧಿ ಕಡೆ ಹೆಜ್ಜೆ ಹಾಕಬೇಕಾಗಿದ್ದು, ಇದಕ್ಕಾಗಿ ಮತದಾರರು ಕಾಂಗ್ರೆಸನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು.


ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಲಂಕಾರಿನಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಮಾತನಾಡಿದರು.


ಚುನಾವಣೆ ಪ್ರಾರಂಭವಾದಾಗಿನಿಂದ ಬಿಜೆಪಿ ಸಂಸದರ ಸಾಧನೆ ಬಗ್ಗೆ ಕೇಳುತ್ತಿದ್ದೇವೆ. ಆದರೆ ಇದುವರೆಗೆ ಯಾರೂ ಇದಕ್ಕೆ ಉತ್ತರಿಸಿಲ್ಲ ಎಂದರು. ನಾವೂ ಮೌನವಾದರೆ ಜಿಲ್ಲೆ ಅಭಿವೃದ್ಧಿಯಲ್ಲಿ ಇದೇ ರೀತಿ ಹಿಂದೆ ಬೀಳಲಿದೆ. ಹಾಗಾಗಿ ಪ್ರಚೋದನೆಯ ಮಾತುಗಳಿಗೆ ಒಳಗಾಗದೇ, ಜಾಗೃತರಾಗಿ ಮತ ಚಲಾಯಿಸಬೇಕು. ಈ ಬಾರಿ ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ ಎಂದರು.


ಜಿಲ್ಲೆಯಲ್ಲಿ ಬಿಜೆಪಿ ಸೋಲುತ್ತದೆ ಎನ್ನುವುದು ಬಿಜೆಪಿಗರಿಗೆ ಸ್ಪಷ್ಟವಾಗಿ ಅರಿವಾಗಿದೆ. ಅದಕ್ಕಾಗಿ ಅಪಪ್ರಚಾರದ ಮಾರ್ಗ ಹಿಡಿದಿದ್ದಾರೆ. ಮುಂದಿನ ದಿನ ಅಪಪ್ರಚಾರ ಇನ್ನೂ ಹೆಚ್ಚಾಗಬಹುದು. ಎದೆಗುಂದದೇ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಿ ಎಂದರು

ಬಗೆಹರಿಯದ ಮೈತ್ರಿ ಟಿಕೆಟ್ ಹಂಚಿಕೆ ಗೊಂದಲ;ಇಂದು ದೆಹಲಿಗೆ ಮಾಜಿ ಪ್ರಧಾನಿ ಎಚ್​ಡಿಡಿ

Posted by Vidyamaana on 2024-03-23 08:26:10 |

Share: | | | | |


ಬಗೆಹರಿಯದ ಮೈತ್ರಿ ಟಿಕೆಟ್ ಹಂಚಿಕೆ ಗೊಂದಲ;ಇಂದು ದೆಹಲಿಗೆ ಮಾಜಿ ಪ್ರಧಾನಿ ಎಚ್​ಡಿಡಿ

ಬೆಂಗಳೂರು : ಲೋಕಸಭಾ ಚುನಾವಣೆ (Lok sabha Election 2024) ಗೆಲ್ಲಲು ಬಿಜೆಪಿ ಕಸರತ್ತು ನಡೆಸುತ್ತಿದೆ. ಆದರೆ ಕರ್ನಾಟಕದಲ್ಲಿ (Karnataka) ಮೈತ್ರಿ ಟಿಕೆಟ್​ ಹಂಚಿಕೆ ವಿಚಾರ ಕಗ್ಗಂಟಾಗಿಯೇ ಉಳಿದಿದೆ. ಮೈತ್ರಿ ಟಿಕೆಟ್ ಹಂಚಿಕೆ ಗೊಂದಲ ಮುಂದುವರೆದಿದ್ದು, ಈ ಹಿನ್ನೆಲೆಯಲ್ಲಿ ಇಂದು ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ (HD Devegowda) ಅವರು ನವದೆಹಲಿಗೆ ತೆರಳಲಿದ್ದಾರೆ.ಇಂದು ಬೆಳ್ಳಂಬೆಳಗ್ಗೆ ಎಚ್​ಡಿಡಿ, ಬೆಂಗಳೂರಿನ (Bengaluru) ವಿಮಾನ ನಿಲ್ದಾಣದಿಂದ ದೆಹಲಿಗೆ (Delhi Visit) ಪ್ರಯಾಣ ಬೆಳಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (PM Modi), ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಅಂತಿಮ ಮಾತುಕತೆ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ ಪ್ರಧಾನಿ ಮೋದಿ ಅವರನ್ನು ಎಚ್​ಡಿ ದೇವೇಗೌಡ ಅವರು ಭೇಟಿಯಾಗುವ ಸಾಧ್ಯತೆ ಇದ್ದು, ಈ ವೇಳೆ ಕೋಲಾರ ಟಿಕೆಟ್ ಗೊಂದಲ ಕುರಿತು ಮಾತುಕತೆ ನಡೆಯಲಿದೆ ಎನ್ನಲಾಗಿದೆ. ಚರ್ಚೆ ವೇಳೆ ಎಚ್​ಡಿಡಿ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್​​ ಜೆಡಿಎಸ್​ಗೆ ಬೇಡ ಆ ಬದಲು ಕೋಲಾರ ಕ್ಷೇತ್ರದ ಟಿಕೆಟ್ ಕೊಡಿ ಎಂದು ಬೇಡಿಕೆ ಮುಂದಿಡಲಿದ್ದಾರೆ ಎನ್ನಲಾಗಿದೆ. ಮಾತುಕತೆ ನಡೆಸಿ ಎಚ್​ಡಿಡಿ ಇಂದು ಸಂಜೆಯೇ ಬೆಂಗಳೂರಿಗೆ ವಾಪಾಸ್ ಆಗುವ ನಿರೀಕ್ಷೆ ಇದೆ.


ಇತ್ತ, ಕಾಂಗ್ರೆಸ್‌ನಲ್ಲೂ ಬಿಜೆಪಿಯಲ್ಲೂ ಇದೀಗ ಒಂದೇ ಜಗಳ, ಟಿಕೆಟ್‌ ಗದ್ದಲ. ಬಿಜೆಪಿಗೆ ತುಮಕೂರು, ಕಾಂಗ್ರೆಸ್‌ಗೆ ಬಾಗಲಕೋಟೆಯಲ್ಲಿ ರೆಬೆಲ್‌ಗಳ ಟೆನ್ಷನ್. ರಾಜ್ಯ ಬಿಜೆಪಿ ನಾಯಕರಿಗೆ ಅತೃಪ್ತರ ಒಳೇಟಿನ ಭಯ ಇದ್ದು, ಅತೃಪ್ತರ ಮನವೊಲಿಸುವ ಬಗ್ಗೆ ಬಿಜೆಪಿ ನಾಯಕರಿಂದ ಸಭೆ ನಡೆಯಿತು. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಪ್ರಮುಖರಿಂದ ಮಾತುಕತೆ ನಡೆಯಿತು.ಅತೃಪ್ತರಿಂದ ಅಭ್ಯರ್ಥಿಗಳಿಗೆ ಹಿನ್ನಡೆ ಭಯ ನಾಯಕರನ್ನು ಕಾಡ್ತಿದೆ. ಹೀಗಾಗೇ ಅತೃಪ್ತರ ಮನವೊಲಿಕೆ ಮಾಡುವ ಕಾರ್ಯತಂತ್ರ ಮಾಡಲಾಗಿದೆ. ಬಂಡಾಯ ಎದ್ದಿರೋರನ್ನು, ಅತೃಪ್ತರನ್ನು ಸಮಾಧಾನ ಮಾಡುವ ಬಗ್ಗೆ ಚರ್ಚೆ ಆಯ್ತು. ಅಭ್ಯರ್ಥಿಗಳಿಗೆ ಒಳೇಟು ಕೊಡುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿಗಳ ಗೆಲುವಿಗೆ ಮಾಡಬೇಕಾದ ತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಕುತ್ತಾರು : ಮನೆ ಕುಸಿತದಿಂದ ನಾಲ್ವರು ಮೃತಪಟ್ಟ ಘಟನಾ ಸ್ಥಳಕ್ಕೆ ಕಂದಾಯ ಸಚಿವರು ಭೇಟಿ

Posted by Vidyamaana on 2024-06-27 08:40:07 |

Share: | | | | |


 ಕುತ್ತಾರು : ಮನೆ ಕುಸಿತದಿಂದ ನಾಲ್ವರು ಮೃತಪಟ್ಟ ಘಟನಾ ಸ್ಥಳಕ್ಕೆ ಕಂದಾಯ ಸಚಿವರು ಭೇಟಿ

ಮಂಗಳೂರು, ಜೂನ್.26: ಪ್ರಕೃತಿ ವಿಕೋಪವನ್ನು ತಡೆಯುವುದು ಯಾರಿಂದಲೂ ಸಾಧ್ಯವಿಲ್ಲ. ಆದರೆ, ಮುಂಜಾಗ್ರತೆ ವಹಿಸದೆ ಇಳಿಜಾರಿನಲ್ಲಿ ಮನೆ ಕಟ್ಟಿಕೊಂಡಿರುವುದು ಇಲ್ಲಿ ಕಂಡುಬಂದಿದೆ. ಬೆಟ್ಟದ ಇಳಿಜಾರಿನಲ್ಲಿ ಈ ರೀತಿ ಮನೆ ಮಾಡಿರುವುದು ರಾಜ್ಯದಲ್ಲಿ ಸಾವಿರಾರು ಇರಬಹುದು. ಮಳೆಯ ಸಂದರ್ಭದಲ್ಲಿ ತೊಂದರೆ ಆಗಬಲ್ಲಂತಹ ಇಂತಹ ಮನೆಗಳನ್ನು ಗುರುತಿಸಿ, ಅಲ್ಲಿನ ನಿವಾಸಿಗಳಿಗೆ ಬೇರೆಡೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ

ಪುತ್ತೂರು : ಡಾ. ಎಂ.ಕೆ.ಪ್ರಸಾದ್ ಅವರ ಮನೆಗೆ ಭೇಟಿ ನೀಡಿದ ಸತ್ಯಜಿತ್ ಸುರತ್ಕಲ್

Posted by Vidyamaana on 2024-02-10 10:13:08 |

Share: | | | | |


ಪುತ್ತೂರು : ಡಾ. ಎಂ.ಕೆ.ಪ್ರಸಾದ್ ಅವರ ಮನೆಗೆ ಭೇಟಿ ನೀಡಿದ ಸತ್ಯಜಿತ್ ಸುರತ್ಕಲ್

ಪುತ್ತೂರು : ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಟಿಕೆಟ್ ಗೆ ಆಗ್ರಹಿಸುತ್ತಿರುವ ಸತ್ಯಜಿತ್ ಸುರತ್ಕಲ್ ಅವರು ಖ್ಯಾತ ವೈದ್ಯ ಡಾ.ಎಂ.ಕೆ. ಪ್ರಸಾದ್ ಅವರ ಮನೆಗೆ ಭೇಟಿ ನೀಡಿದರು.


ಪುತ್ತೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡ ಅವರು ಬಳಿಕ ಡಾ.ಎಂ.ಕೆ. ಪ್ರಸಾದ್ ಅವರ ಮನೆಯಲ್ಲಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಪುತ್ತೂರು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Posted by Vidyamaana on 2024-01-07 16:52:05 |

Share: | | | | |


ಪುತ್ತೂರು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ.


ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16ವ) ಮೃತ ಯುವತಿ.ದೀಕ್ಷಾ ಮನೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ  ಕಾರಣ ತಿಳಿದು ಬಂದಿಲ್ಲ. ದೀಕ್ಷಾ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದು, ನಾಳೆ ಅವರಿಗೆ ಲ್ಯಾಬ್ ಪರೀಕ್ಷೆಯಿತ್ತು ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.


ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹುಬ್ಬಳ್ಳಿ ಕೇಸ್‌ – ಕರಸೇವಕ ಶ್ರೀಕಾಂತ್‌ ಪೂಜಾರಿಗೆ ಜಾಮೀನು

Posted by Vidyamaana on 2024-01-05 16:04:32 |

Share: | | | | |


ಹುಬ್ಬಳ್ಳಿ ಕೇಸ್‌ – ಕರಸೇವಕ ಶ್ರೀಕಾಂತ್‌ ಪೂಜಾರಿಗೆ ಜಾಮೀನು

ಹುಬ್ಬಳ್ಳಿ: 31 ವರ್ಷದ ಬಳಿಕ ರಾಮಜನ್ಮಭೂಮಿ (Ram Janambhoomi) ಹೋರಾಟದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ದೇಶವ್ಯಾಪಿ ಸುದ್ದಿಯಾಗಿದ್ದ ಶ್ರೀಕಾಂತ್‌ ಪೂಜಾರಿಗೆ (Srikanth Poojari) ಕೋರ್ಟ್‌ (Court) ಜಾಮೀನು ಮಂಜೂರು ಮಾಡಿದೆ.ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು (Bail) ಮಂಜೂರು ಮಾಡಿದೆ.


ಶ್ರೀಕಾಂತ್‌ ಪೂಜಾರಿ ಪರ ವಕೀಲರು ಪ್ರತಿಕ್ರಿಯಿಸಿ, ನಮಗೆ ಜಾಮೀನು ಸಿಗಬಹುದು ಎಂಬ ವಿಶ್ವಾಸವಿತ್ತು. ಇಂದು ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ. ಯಾವ್ಯಾವ ಷರತ್ತು ವಿಧಿಸಿದ್ದಾರೆ ಎಂಬುದಕ್ಕೆ ಆದೇಶದ ಪ್ರತಿ ಇನ್ನೂ ನಮ್ಮ ಕೈ ಸೇರಿಲ್ಲ. ನಾಳೆ ಶ್ರೀಕಾಂತ್‌ ಪೂಜಾರಿ ಅವರ ಬಿಡುಗಡೆಯಾಗಲಿದೆ ಎಂದು ಹೇಳಿದರು.ಡಿಸೆಂಬರ್29 ರಂದು ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದರು. ಶ್ರೀಕಾಂತ್‌ ಪೂಜಾರಿ ಬಂಧನವನ್ನು ಖಂಡಿಸಿ ಬಿಜೆಪಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿತ್ತು.



Leave a Comment: