ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿ ಸದನದಲ್ಲಿ ತುಳುವಿನಲ್ಲೇ ವಿಚಾರಮಂಡಿಸಿದ ಶಾಸಕ ಅಶೋಕ್ ರೈ

ಸುದ್ದಿಗಳು News

Posted by vidyamaana on 2024-07-24 16:44:22 |

Share: | | | | |


ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿ ಸದನದಲ್ಲಿ ತುಳುವಿನಲ್ಲೇ ವಿಚಾರಮಂಡಿಸಿದ ಶಾಸಕ ಅಶೋಕ್ ರೈ

ಪುತ್ತೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಸೇರಿಸಬೇಕು ಎಂದು ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ತುಳು ಭಾಷೆಯಲ್ಲೇ ವಿಧಾನಸಭಾ ಅಧಿವೇಶನದಲ್ಲಿ ವಿಚಾರವನ್ನು ಮಂಡಿಸಿದ್ದು , ಶಾಸಕರ ಬೇಡಿಕೆಗೆ ಸರಕಾರದಿಂದ ಗಟ್ಟಿ ಭರವಸೆ ದೊರೆತಿದ್ದು ಮುಂದಿನ ದಿನಗಳಲ್ಲಿ ನಿಮ್ಮ ಬೇಡಿಕೆ ಈಡೇರಲಿದೆ ಎಂದು ಸರಕಾರ ಭರವಸೆಯನ್ನು ನೀಡಿದೆ.

ತುಳುವಿಗೆ ೨೦೦೦ ವರ್ಷದ ಇತಿಹಾಸವಿದೆ

ತುಳುಭಾಷೆಗೆ ಎರಡು ಸಾವಿರ ವರ್ಷದ ಇತಿಹಾಸವಿದೆ. ತುಳು ಮಾತನಾಡುವ ಮಂದಿ ವಿಶ್ವದೆಲ್ಲೆಡೆ ಇದ್ದಾರೆ. ತುಳು ಭಾಷೆಗೆ ಮಾನ್ಯತೆ ಸಿಗಬೇಕು ಎಂದು ಅನೇಕ ವರ್ಷಗಳಿಂದ ಹೋರಾಟಗಳು ನಡೆಯುತ್ತಿದೆ. ಎಟಂನೇ ಪರಿಚ್ಚೇಧಕ್ಕೆ ಸೇರ್ಪಡೆ ಮಾಡಬೇಕು ಎಂಬ ಬೇಡಿಕೆ ಇನ್ನೊಂದು ಕಡೆ ಇದೆ ಇದೆಲ್ಲದರ ನಡುವೆ ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂಬ ಆಗ್ರಹವನ್ನು ಶಾಸಕನಾಗಿ ಕಳೆದ ಒಂದು ವರ್ಷದಿಂದ ಮಾಡುತ್ತಿದ್ದೇನೆ.

೧೯೯೪ ರಲ್ಲಿ ವೀರಪ್ಪ ಮೊಯಿಲಿಯವರು ಮುಖ್ಯಮಂತ್ರಿಯಾಗಿದ್ದ ವೇಳೆ ತುಳು ಅಕಾಡೆಮಿಯನ್ನು ಸ್ಥಾಪನೆ ಮಾಡಿದ್ದಾರೆ, ೨೦೦೭ ರಲ್ಲಿ ಕೇರಳ ಸರಕಾರ ತುಳು ಅಕಾಡೆಮಿಯನ್ನು ಸ್ಥಾಪನೆ ಮಾಡಿದೆ, ಆಕಾಶವಾಣಿಯಲ್ಲಿ ೧೯೭೬ ರಿಂದ ಆಕಾಶವಾಣಿಯಲ್ಲಿ ತುಳು ಕಾರ್ಯಕ್ರಮ ಪ್ರಸಾರವಾಗುತ್ತಿದೆ, ಅಮೇರಿಕಾದಲ್ಲಿ ಸಿಆರ್ ಎಕ್ಸಾಮ್‌ಗೆ ಅರ್ಜಿ ನಮೂನೆಯಲ್ಲೂ ವಿಶ್ವದ ೧೨೨ ಭಾಷೆಯ ಜೊತೆಗೆ ತುಳುವಿಗೆ ಮಾನ್ಯತೆ ನೀಡಲಾಗಿದೆ, ಗೂಗಲ್ ಸಂಸ್ಥೆಯವರು ತರ್ಜುಮೆ ಮಾಡಬಲ್ಲ ಭಾಷೆಗಳ ಪಟ್ಟಿಯಲ್ಲಿ ತುಳುವನ್ನು ಸೇರ್ಪಡೆ ಮಾಡಿದ್ದಾರೆ. ಇಷ್ಟೆಲ್ಲಾ ಇರುವಾಗ ನಮ್ಮ ರಾಜ್ಯದಲ್ಲಿ ತುಳುವನ್ನು ಅದಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು.

ಮೂರು ರಾಜ್ಯಗಳಿಗೆ ಅಧ್ಯಯನ ತಂಡ ಕಳಿಸಿದ್ದೇನೆ

ಬಿಹಾರ, ಪಶ್ಚಿಮಬಂಗಾಳ ಮತ್ತು ಆಂದ್ರಕ್ಕೆ ವಿಶೇಷ ಪ್ರತಿನಿಧಿಯನ್ನು ತನ್ನ ಸ್ವಂತ ಖರ್ಚಿನಲ್ಲಿ ಕಳಿಸಿದ್ದೇನೆ. ಈ ಮೂರು ರಾಜ್ಯಗಳಲ್ಲಿ ಸ್ಥಳೀಯ ಭಾಷೆಯನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಯಾವ ಆಧಾರದಲ್ಲಿ ಘೋಷಣೆ ಮಾಡಿದ್ದಾರೆ ಎಂಬುದನ್ನು ಅಧ್ಯಯನ ನಡೆಲಲಾಗಿದೆ. ಆಂದ್ರದಿಂದ ವರದಿಯನ್ನು ತರಿಸಿದ್ದೇನೆ.. ಈ ವರದಿಯನ್ನು ಸರಕಾರದ ಮುಂದೆ ಇಡಲಿದ್ದು ಅದರ ಆಧಾರದಲ್ಲಿ ಕರ್ನಾಟಕದಲ್ಲಿ ತುಳುವನ್ನು ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಲು ಸಹಕಾರಿಯಾಗಲಿದೆ ಎಂಬ ಕಾರಣಕ್ಕೆ ನಾನು ಸ್ವಂತ ಖರ್ಚಿನಲ್ಲೇ ಅಧ್ಯಯನ ತಂಡವನ್ನು ಮೂರು ರಾಜ್ಯಗಳಿಗೆ ಕಳಿಸಿದ್ದೇನೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.

ವಿಶ್ವದಲ್ಲೇ ತುಳವರಿದ್ದಾರೆ, ತುಳುವರು ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಾರೆ.


ನಿಕ್ಲು ಗಲಾಟೆ ಮಲ್ಪೊಡ್ಚಿ ಕುಲ್ಲುಲೆ ಮಾರ್ರೆ

ಪುತ್ತೂರು ಶಾಸಕ ಅಶೋಕ್ ರೈಯವರು ಸದನದಲ್ಲಿ ತುಳು ಭಾಷೆಯಲ್ಲಿ ಮಾತನಾಡುವ ವೇಳೆ ಮಧ್ಯದಲ್ಲಿ ಮಾತನಾಡಿದ ಮಂಗಳೂರು ಶಾಸಕ ವೇದವ್ಯಾಸ ಕಾಮತ್‌ರಲ್ಲಿ ಈರ್ ಬೊಕ್ಕ ಪಾತೆರ‍್ಲೆ , ಇತ್ತೆ ಯಾನ್ ಪಾತರೊಂದುಲ್ಲೆ ಎಂದು ಶಾಸಕ ಅಶೋಕ್ ರೈ ವೇದವ್ಯಾಸ ಕಾಮತರಿಗೆ ಹೇಳಿದಾಗ ಮಧ್ಯಪ್ರವೇಶ ಮಾಡಿದ ಸಭಾಪತಿ ಯು ಟಿ ಖಾದರ್ ನಿಕ್ಲು ಗಲಾಟೆ ಮಲ್ಪೊಡ್ಚಿ ಮಾರ್ರೆ ಈರ್ ಕುಲ್ಲುಲೆ ಎಂದು ಶಾಸಕ ವೇದವ್ಯಾಸ ಕಾಮತರಿಗೆ ಕುಳಿತುಕೊಳ್ಳಲು ಹೇಳಿದರು.

 ಇದೇನು ಮಂಗಳೂರು ಅಧಿವೇಶನವಾ: ಆರ್ ಅಶೋಕ್

ಸದನದಲ್ಲಿ ಶಾಸಕ ಅಶೋಕ್ ರೈ ಮತ್ತು ಸಭಾಪತಿ ಯು ಟಿ ಖಾದರ್ ರವರು ತುಳುವಿನಲ್ಲಿ ಮಾತನಾಡುತ್ತಿದ್ದ ವೇಳೆ ಎದ್ದು ನಿಂತ ವಿರೋಧ ಪಕ್ಷದ ನಾಯಕ ಆರ್ ಆಶೋಕ್ ಇದೇನು ಮಂಗಳೂರು ಅಧಿವೇಶಧನವಾ? ಎಂದು ನಗುತ್ತಲೇ ಹೇಳಿದರು. ಈ ವೇಳೆ ಮಾತನಾಡಿದ ಶಾಸಕ ಅಶೋಕ್ ರೈಯವರು ವಿರೋಧ ಪಕ್ಷದ ನಾಯಕರಾದ ಆರ್ ಆಶೋಕ್ ರವರೇ ನಾವು ತುಳುವಿನಲ್ಲಿ ಮಾತನಾಡಿದ್ದನ್ನು ಕನ್ನಡದಲ್ಲಿ ಹೇಳುತ್ತೇನೆ. ನೀವು ನಮ್ಮ ಹೋರಾಟಕ್ಕೆ , ನಮ್ಮ ಬೇಡಿಕೆಗೆ ಬೆಂಬಲವನ್ನು ನೀಡಬೇಕು, ಇಡೀ ಸದನ ನಮ್ಮ ನಿಲುವಿಗೆ ಬೆಂಬಲ ನೀಡಬೇಕು ಅ ಮೂಲಕ ತುಳು ಭಾಷೆಗೆ ಸರಕಾರದಿಂದ ಮಾನ್ಯತೆ ದೊರೆಯುವಂತಾಗಲಿ ಇದಕ್ಕೆ ಎಲ್ಲರ ಸಹಕಾರವನ್ನು ಕೋರಿದರು. ತುಳುವಿಗೆ ಲಿಪಿ ಇದೆ, ವಿಶ್ವದಲ್ಲೆಡೆ ತುಳು ಮಾತನಾಡುವ ಮಂದಿ ಇದ್ದಾರೆ ಎಂದು ಹೇಳಿದ ಶಾಸಕ ಅಶೋಕ್ ರೈಯವರು ಸಭಾಧ್ಯಕ್ಷೆರೇ ಈರ್ ಸಪೋರ್ಟು ಮಲ್ಪೊಡು, ಈರ್‌ನ ಸಹಕಾರ ಎಂಕ್ಲೆಗ್ ಬೋಡು ಎಂದು ಮನವಿ ಮಾಡಿದರು.

ಅಶೋಕ್ ರೈಗೆ ಅಭಿನಂದನೆ ಸಲ್ಲಿಸಿದ ವೇದವ್ಯಾಸ ಕಾಮತ್

ಸದನದಲ್ಲಿ ಮಾತನಾಡಿದ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ತುಳು ವಿಚಾರದಲ್ಲಿ ಪ್ರಾರಂಭದಿಂದಲೇ ಸರಕರದ ಗಮನಸೆಳೆದ ಪುತ್ತೂರು ಶಾಸಕರಾದ ಅಶೋಕ್ ರೈಯವರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಭೆಯಲ್ಲಿ ತಿಳಿಸಿದರು.

ನಿಮ್ಮ ಕಾಳಜಿಗೆ ಅಭಿನಂದನೆ; ಸಚಿವ ಖರ್ಗೆ

ತನ್ನ ಸ್ವಂತ ಖರ್ಚಿನಲ್ಲಿ ಅಧ್ಯಯನ ತಂಢವನ್ನು ಮೂರು ರಾಜ್ಯಕ್ಕೆ ಕಳುಹಿಸುವ ಮೂಲಕ ತನ್ನ ಊರಿನ ಮಾತೃಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಡಬೇಕು ಎನ್ನುವ ನಿಮ್ಮ ಕಾಳಜಿಗೆ ಅಭಿನಂದನೆ ಸಲ್ಲಿಸುವುದಾಗಿ ಸಚಿವ ಪ್ರಿಯಾಂಕ ಖರ್ಗೆ ಶಾಸಕ ಅಶೋಕ್ ರೈಯವರಿಗೆ ಅಭಿನಂದನೆ ಸಲ್ಲಿಸಿದರು. ಮಾತೃಭಷೆಯ ಮೇಲೆ ಎಲ್ಲರಿಗೂ ಪ್ರೀತಿ ಇರುತ್ತದೆ ಆದರಲ್ಲೂ ಅಶೋಕ್ ರೈಯವರು ಈವಿಚಾರದಲ್ಲಿ ಒಂದು ಹಜ್ಜೆ ಮುಂದೆ ಇದ್ದಾರೆ ಇದು ಅಭಿನಂದನಾರ್ಹ ಎಂದು ಸಚಿವರು ಸಭೆಯಲ್ಲಿ ಹೇಳಿದರು.

 ಖಂಡಿತವಾಗಿಯೂ ಬೇಡಿಕೆ ಈಡೇರಲಿದೆ: ಪ್ರಿಯಾಂಕ ಖರ್ಗೆ

ಡಾ. ಮೋಹನ್ ಆಳ್ವರ ನೇತೃತ್ವದ ಸಮಿತಿಯ ವರದಿಯಲ್ಲಿ ಸಾಧ್ಯವಿದೆ ಎಂಬುದರ ಬಗ್ಗೆ ವರದಿ ನೀಡಲಾಗಿದೆ.. ತನ್ನ ಸ್ವಂತ ಖರ್ಚಿನಲ್ಲಿ ತಂಡವನ್ನು ಕಳುಹಿಸಿ ಅಧ್ಯಯನ ನಡೆಸಿದ ಶಾಸಕ ಅಶೋಕ್ ರೈಯವರ ಕಾಳಜಿಯನ್ನು ಮೆಚ್ಚಲೇಬೇಕು. ತುಳು ಭಾಷೆ, ಅದರ ಸಂಸ್ಕೃತಿ, ಅದರ ಸೌಂದರ್ಯ, ಪ್ರಾಚೀನತೆ, ಎಲ್ಲವೂ ಗೌರವದಿಂದ ಕೂಡಿದೆ. ಸರಕಾರದ ಮುಂದೆ ಈ ಪ್ರಸ್ತಾಪ ಇದೆ. ತುಳುವಿಗೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಲ್ಲಿ ಸರಕಾರಕ್ಕೆ ಮುತುವರ್ಜಿ ಇದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಪರವಾಗಿ ಮಾತನಾಡಿದ ಸಚಿವ ಪ್ರಿಯಾಂಕ ಖರ್ಗೆ ಸಭೆಗೆ ತಿಳಿಸಿದರು. ವೈಯುಕ್ತಿಕವಾಗಿಯೂ ಈ ಪ್ರಸ್ತಾಪಕ್ಕೆ ನನ್ನ ಬೆಂಬಲ ಇದೆ ಎಂದು ಸಚಿವರು ಹೇಳಿದರು.

ಸಚಿವರ ಸಭೆ ಕರೆದು ತೀರ್ಮಾನಿಸಿ: ಸಭಾಪತಿ

ಈ ವಿಚಾರದಲ್ಲಿ ಸರಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸಚಿವರನ್ನೊಳಗೊಂಡಂತೆ ಆ ಭಾಗದ ಶಾಸಕರ ಸಭೆಯನ್ನು ಕರೆದು ತೀರ್ಮಾನ ಕೈಗೊಳ್ಳುವಂತೆ ಸಭಾಪತಿ ಯು ಟಿ ಖಾದರ್ ರವರು ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಸೂಚನೆಯನ್ನು ನೀಡಿದರು.

ಎರಡನೇ ಬಾರಿಗೆ ತುಳುವಿನಲ್ಲಿ ಮಾತು

ಶಾಸಕ ಅಶೋಕ್ ರೈಯವರು ತಾನು ಶಾಸಕನಾಗಿ ಮೊದಲ ಅಧಿವೇಶನದಲ್ಲೇ ತುಳುವಿನಲ್ಲಿ ಮಾತನಾಡಿದ್ದರು. ಈ ವಿಚಾರ ಅತೀ ಹೆಚ್ಚು ವೈರಲ್ ಆಗಿತ್ತು. ಅಧಿವೇಶನದ ಇತಿಹಾಸದಲ್ಲೇ ಮೊದಲ ಬಾರಿಗೆ ತುಳುವಿನಲ್ಲಿ ಮಾತನಾಡುವ ಮೂಲಕ ತುಳುವನ್ನು ವಿಶ್ವಕ್ಕೆ ಪರಿಚಯಿಸುವ ಕೆಲಸವನ್ನು ಮಾಡಿದ್ದರು. ಇದೀಗ ಎರಡನೇ ಬಾರಿಗೆ ತುಳುವಿನಲ್ಲಿ ಅಧಿವೇಶನದಲ್ಲಿ ಮಾತನಾಡಿರುವುದು ತುಳು ಭಾಷೆಗೆ ಸಿಕ್ಕ ಮಾನ್ಯತೆ ಎಂದೇ ಹೇಳಬಹುದು

 Share: | | | | |


ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸುವಂತಿಲ್ಲ: ಕೋರ್ಟ್ ತಡೆಯಾಜ್ಞೆ

Posted by Vidyamaana on 2024-05-06 16:07:30 |

Share: | | | | |


ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸುವಂತಿಲ್ಲ: ಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ಅವರ ವಿರುದ್ಧವಾಗಿ ದಾಖಲಾಗಿರುವ ಈ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಉಭಯ ನಾಯಕರು ಸೆಷನ್ಸ್ ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಗಳು ತಮ್ಮ ಹೆಸರು ಬಳವುದನ್ನು ನಿರ್ಬಂಧಿಸುವವಂತೆ ಕೋರಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು

ನಾಳೆ (ಆ.28) ಪುತ್ತೂರು ಶಾಸಕರ ಸುಸಜ್ಜಿತ ಕಚೇರಿ ಲೋಕಾರ್ಪಣೆ

Posted by Vidyamaana on 2023-08-27 15:50:25 |

Share: | | | | |


ನಾಳೆ (ಆ.28)  ಪುತ್ತೂರು ಶಾಸಕರ ಸುಸಜ್ಜಿತ ಕಚೇರಿ ಲೋಕಾರ್ಪಣೆ

ಪುತ್ತೂರು : ಶಾಸಕರಾದ ಅಶೋಕ್ ಕುಮಾರ್ ರೈಯವರ ಬಹುನಿರೀಕ್ಷಿತ ಕಚೇರಿ ಆ.28ರಂದು ಉದ್ಘಾಟನೆಗೊಳ್ಳ ಲಿದೆ.     ಶಾಸಕರ ಅಧಿಕೃತ ಕಚೇರಿ ಮಿನಿ ವಿಧಾನಸೌಧದ ಬಳಿ ಇರುವ ಹಳೆಯ ಪುರಸಭಾ ಕಚೇರಿ (ಪುಡಾಕಚೇರಿ)ಯಲ್ಲಿ ಉದ್ಘಾಟನೆ ಗೊಳ್ಳಲಿದ್ದು ಹಲವಾರು ಮಂದಿ ಗಣ್ಯರು ಭಾಗವಹಿಸಲಿ ದ್ದಾರೆ.

     ವಿಶಾಲ ಸ್ಥಳಾವಕಾಶವನ್ನು ಹೊಂದಿರುವ ಕಚೇರಿಯಲ್ಲಿ ಶಾಸಕರನ್ನು ಭೇಟಿಯಾಗಲು ಬರುವವರಿಗೆ, ಅಥವಾ ಕ ಚೇರಿಗೆ ಬರುವ ಸಾರ್ವಜನಿಕರಿಗೆ ಎಲ್ಲಾ ಸೌಕರ್ಯಗಳ ನ್ನೊಳನ್ನು ಈ ಕಚೇರಿ ಹೊಂದಿದೆ. ಪಾರ್ಕಿಂಗ್ ವ್ಯವಸ್ಥೆ ಯೂ ಸಾಕಷ್ಟಿದೆ. ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್, ಮಾಜಿ ಸಚಿವ ಬಿ ರಮಾನಾಥ ರೈ, ಮಾಜಿ ಶಾ ಸಕಿ ಶಕುಂತಳಾ ಶೆಟ್ಟಿ ಸೇರಿದಂತೆ ಪ್ರಮುಖ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ. ಕಚೇರಿ ಉದ್ಘಾಟನೆ ಬಳಿಕ ಸುಮಾರು 160 ಕುಟುಂಬಗ ಳಿಗೆ ಶಾಸಕರು ಹಕ್ಕುಪತ್ರ ವಿತರಿಸಲಿದ್ದಾರೆ ಎಂದು ತಿಳಿ ದು ಬಂದಿದೆ.ಸಾರ್ವಜನಿಕರಿಗೆ ತ್ವರಿತಗತಿಯ ಸೇವೆ ನೀಡುವುದು ಈ ಕಚೇರಿಯ ಉದ್ದೇಶವಾಗಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರು ಈ ಕಚೇರಿಗೆ ಬಂದರೆ ಶಾಸಕರನ್ನು ಭೇಟಿಯಾಗಬಹುದು. ಕಚೇರಿಯಲ್ಲಿ ಸಾರ್ವಜನಿಕರಿಗೆ  ಎಲ್ಲಾ ರೀತಿಯ ಅರ್ಜಿಗಳನ್ನು ಸ್ವೀಕರಿಸಲು ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗಿದೆ. ಯಾವುದೇ ಇಲಾಖೆಗಳಿಗೆ ಅರ್ಜಿ ಸಲ್ಲಿಸಲು ಅಥವಾ ಯಾವುದೆ ಇಲಾಖೆಯಲ್ಲಿ ಕೆಲಸ ಕಾರ್ಯಗಳು ನಡೆಯದೆ ಇದ್ದಲ್ಲಿ ಶಾಸಕರ ಕಚೇರಿಯಲ್ಲಿರುವ ಆಯಾ ಇಲಾಖೆಗೆ ಸಂಬಂ ಧಿಸಿದ ಸಿಬಂದಿಗಳನ್ನು ಭೇಟಿಯಾಗಿ ಮಾತನಾಡಬಹುದಾಗಿದೆ.

ನನ್ನ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರಿಗೆ ಅನುಕೂ ಲವಾಗಲೆಂದು ಮಿನಿ ವಿಧಾನಸೌಧದ ಬಳಿಯೇ ಹೊಸ ಕಚೇರಿಯನ್ನು ತೆರೆದಿದ್ದು ಸಾರ್ವಜನಿಕರ ಸೇವೆಗೆ ಸಿಬಂ ದಿಗಳನ್ನು ನೇಮಕ ಮಾಡಿದ್ದೇನೆ. ಯಾವುದೇ ಸಮಸ್ಯೆಗ ಳಿದ್ದರೂ, ತೊಂದರೆಗೊಳಗಾದವರು ಶಾಸಕರ ಕಚೇರಿಗೆ ಬಂದು ತಿಳಿಸಬಹುದು. ದೂರು, ಮನವಿ ಇದ್ದರೂ ಕೊಡಬಹುದು. ಕ್ಷೇತ್ರದ ಎಲ್ಲರಿಗೂ ನನ್ನ ಕಚೇರಿಗೆ ಮುಕ್ತವಾಗಿ ಬರಲು ಅವಕಾಶ ಇದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಉತ್ತರಕರ್ನಾಟಕ ಭಾಗದ SSLC ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು : MLC ಅಭ್ಯರ್ಥಿ ಭೋಜೇಗೌಡ ಆರೋಪ

Posted by Vidyamaana on 2024-05-19 17:56:29 |

Share: | | | | |


ಉತ್ತರಕರ್ನಾಟಕ ಭಾಗದ SSLC ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು : MLC ಅಭ್ಯರ್ಥಿ ಭೋಜೇಗೌಡ ಆರೋಪ

ಮಂಗಳೂರು : ಪ್ರತಿವರ್ಷ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕದ ಭಾಗದ ಎಲ್ಲಾ ವಿದ್ಯಾರ್ಥಿಗಳು ಮಾಸ್ ಕಾಪಿ ಮಾಡುತ್ತಿದ್ದರು ಎಂದು ಎಂಎಲ್ಸಿ ಬೋಜೆ ಗೌಡ ಗಂಭೀರವಾದಂತ ಆರೋಪವನ್ನು ಮಾಡಿದ್ದಾರೆ.ಮಂಗಳೂರಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಇದು ವಿದ್ಯಾರ್ಥಿಗಳ ಭವಿಷ್ಯದ ವಿದ್ಯಾಭ್ಯಾಸಕ್ಕೆ ಮಾರಕವಾಗುತ್ತಿತ್ತು.ಈ ಹಿನ್ನಲೆ ನೈರುತ್ಯ ಕ್ಷೇತ್ರಗಳಿಗೆ ಪರೀಕ್ಷೆ ಸಮಯ ಅನ್ಯಾಯ ಆಗುತ್ತಿರುವ ಬಗ್ಗೆ ವಿಧಾನ ಪರಿಷತ್‌ನಲ್ಲಿ ಹೇಳಿದ್ದೆ. ಜೊತೆಗೆ ಪರೀಕ್ಷೆ ವೇಳೆ ಸಿಸಿಟಿವಿ ಅಳವಡಿಕೆ ಕುರಿತು ಪರಿಷತ್​​ನಲ್ಲಿ ಆಗ್ರಹಿಸಿದ್ದೆ ಎಂದರು.

ಕೊಯಮತ್ತೂರು ಕ್ಷೇತ್ರದಲ್ಲಿ ಜನ್ಮದಿನವೇ ಅಣ್ಣಾಮಲೈಗೆ ಸೋಲು; ಮತಗಟ್ಟೆಯೊಂದರಲ್ಲಿ ಒಂದೇ ಮತ ಪಡೆದ ಮಾಜಿ ಐಪಿಎಸ್ ಅಧಿಕಾರಿ

Posted by Vidyamaana on 2024-06-04 21:21:27 |

Share: | | | | |


ಕೊಯಮತ್ತೂರು ಕ್ಷೇತ್ರದಲ್ಲಿ ಜನ್ಮದಿನವೇ ಅಣ್ಣಾಮಲೈಗೆ ಸೋಲು; ಮತಗಟ್ಟೆಯೊಂದರಲ್ಲಿ ಒಂದೇ ಮತ ಪಡೆದ ಮಾಜಿ ಐಪಿಎಸ್ ಅಧಿಕಾರಿ

ಲೋಕಸಭಾ ಚುನಾವಣೆಯಲ್ಲಿ ಸಂಚಲನ ಸೃಷ್ಟಿಸಿದ್ದ ಕ್ಷೇತ್ರಗಳಲ್ಲಿ ತಮಿಳುನಾಡಿನ ಕೊಯಮತ್ತೂರು ಲೋಕಸಭಾ ಕ್ಷೇತ್ರವೂ ಒಂದು. ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಅವರು ಕೊಯಮತ್ತೂರು ಕ್ಷೇತ್ರದಲ್ಲಿ 17 ಸಾವಿರಕ್ಕೂ ಅಧಿಕ ವೋಟುಗಳ ಅಂತರದಿಂದ ಸೋಲೊಪ್ಪಿಕೊಂಡಿದ್ದಾರೆ.

ಇಲ್ಲಿ ಅಣ್ಣಾಮಲೈ ಅವರು ಬಿಜೆಪಿ ಅಭ್ಯರ್ಥಿಯಾಗಿ ಗೆದ್ದೇ ಗೆಲ್ಲುತ್ತಾರೆ ಎಂದು ಹೇಳಿದ್ದ ಸಮೀಕ್ಷೆಗಳು ಸುಳ್ಳಾಗಿವೆ. ಇದರೊಂದಿಗೆ ಅರಳುವ ಮುನ್ನವೇ ಕಮಲ ಮುದುಡಿದೆ.


ದ್ರಾವಿಡ್ ಮುನ್ನೇತರ ಕಜಗಂ (ಡಿಎಂಕೆ) ಪಕ್ಷದಿಂದ ಸ್ಪರ್ಧಿಸಿದ್ದ ಗಣಪತಿ ರಾಜ್​ಕುಮಾರ್ ಅವರ ವಿರುದ್ಧ ಅಣ್ಣಾಮಲೈ ಸೋತಿದ್ದಾರೆ. ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಎಐಡಿಎಂಕೆ ಪಕ್ಷದಿಂದ ಸಿಂಗೈ ಜಿ ರಾಮಚಂದ್ರನ್ ಅವರು ಸಹ ಸ್ಪರ್ಧೆ ಮಾಡಿದ್ದರು. ಆದರೆ ಅವರು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದರು.

ಸಿ.ಟಿ.ರವಿ ಸಿಎಂ ಆಗಲಿ.. ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದ ಈಶ್ವರಪ್ಪ ಹೇಳಿಕೆ

Posted by Vidyamaana on 2023-04-25 12:40:04 |

Share: | | | | |


ಸಿ.ಟಿ.ರವಿ ಸಿಎಂ ಆಗಲಿ.. ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದ ಈಶ್ವರಪ್ಪ ಹೇಳಿಕೆ

ಚಿಕ್ಕಮಗಳೂರು: ಚುನಾವಣೆ ನಡೆಯುವ ಮೊದಲೇ ರಾಜಕೀಯ ಪಕ್ಷಗಳಲ್ಲಿ ಮುಂದಿನ ಸಿಎಂ ಚರ್ಚೆ ಜೋರಾಗಿದೆ. ಅಧಿಕಾರಕ್ಕೇರುವ ಮುನ್ನವೇ ಸಿಎಂ ಕೂಗು ಕೇಳಿ ಬರುತ್ತಿದೆ. ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪನವರು ಸಿಟಿ ರವಿ ಅವರು ಮುಂದಿನ ಸಿಎಂ ಆಗಲಿ ಎಂದು ಹೇಳಿದ್ದಾರೆ.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ನಿಡಘಟ್ಟದಲ್ಲಿ ನಡೆದ, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಸಿಟಿ ರವಿ ಅವರನ್ನು ದೊಡ್ಡ ಅಂತರದಿಂದ ಗೆಲ್ಲಿಸಿ ಅವರನ್ನು ಕರ್ನಾಟಕದ ಮುಂದಿನ ಸಿಎಂಯನ್ನಾಗಿ ಮಾಡಬೇಕೆಂದಿದ್ದಾರೆ.ಕಾಂಗ್ರೆಸ್‌ ನಲ್ಲಿ ಓಡಾಡುತ್ತಿದ್ದ ಸಿಎಂ ಕೂಗು ಇದೀಗ ಬಿಜೆಪಿಯಲ್ಲೂ ಕೇಳಿ ಬಂದಿದೆ. ಬಹಿರಂಗ ಸಭೆಯಲ್ಲೇ ಸಿ.ಟಿ.ರವಿ ಪರ ಈಶ್ವರಪ್ಪ ಅವರು ಒಲವು ತೋರಿದ್ದು, ಇದೀಗ ಈ ಸಂಬಂಧಿತ ವಿಡಿಯೋ ಸದ್ದು ಮಾಡುತ್ತಿದೆ.ನಿನ್ನೆಯಷ್ಟೇ ಸಿಟಿ ರವಿ ಅವರು ಮೈಸೂರಿನಲ್ಲಿ ಮಾತನಾಡುವ ವೇಳೆ ಸಿಎಂ ಆಗುವ ಇಂಗಿತವನ್ನು ವ್ಯಕ್ತಪಡಿಸಿದ್ದರು.ಈಶ್ವರಪ್ಪ ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ

ಅತ್ತಿಬೆಲೆ ಪಟಾಕಿ ಗೋಡೌನ್ ಗೆ ಬೆಂಕಿ : ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆ

Posted by Vidyamaana on 2023-10-08 08:29:34 |

Share: | | | | |


ಅತ್ತಿಬೆಲೆ ಪಟಾಕಿ ಗೋಡೌನ್ ಗೆ ಬೆಂಕಿ : ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆ

 ಬೆಂಗಳೂರಿನ ಆನೇಕಲ್ ತಾಲೂಕಿನ ಅತಿ ತಲೆಯಲ್ಲಿ ನಿನ್ನೆ ನಡೆದ ಪಟಾಕಿ ಗೌಡೌನ್ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ನಿನ್ನೆ ತಡ ರಾತ್ರಿ ನಡೆದ ಕಾರ್ಯಾಚರಣೆ ವೇಳೆ ಇನ್ನೊಂದು ಮತ ದೇಹ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.ಅಲ್ಲದೆ ಇದೆ ವೇಳೆ ಬಾಲಾಜಿ ಪಟಾಕಿ ಅಂಗಡಿ ಮಾಲೀಕ ವಿರುದ್ಧ ಕಕೇಸ್ ದಾಖಲಾಗಿದ್ದು, ಅಂಗಡಿ ಮಾಲೀಕ ರಾಮಸ್ವಾಮಿರೆಡ್ಡಿ ಹಾಗೂ ಜಾಗದ ಮಾಲೀಕ ಅನಿಲ ವಿರುದ್ಧ ಅತ್ತಿಬೆಲೆ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338, 304ರ ಅಡಿ FIR ದಾಖಲಾಗಿದೆ.ಪಟಾಕಿ ಗೋಡೌನ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ತಡರಾತ್ರಿ ಕಾರ್ಯಚರಣೆ ಮಾಡುತ್ತಿದ್ದ ವೇಳೆ ಇನ್ನೊಂದು ಮೃತದೇಹ ಪತ್ತೆಯಾಗಿದೆ.

ಅಸಿಡಿಟಿಯ ಎದೆ ಉರಿಯನ್ನು ಮತ್ತು ಎದೆ ನೋವಿನ ಉರಿಯನ್ನು ಐಡೆಂಟಿಫೈ ಮಾಡೋದು ತುಂಬಾ ಸುಲಭ: ಡಾ. ಜೆ ಸಿ ಅಡಿಗ

ಪಟಾಕಿ ಗೌಡೌನ್ ಅಗ್ನಿ ದುರಂತದಲ್ಲಿ ಮೃತದೇಹಗಳು ಸುಟ್ಟು ಕರಕಲಾಗಿವೆ. ಪಟಾಕಿ ಗೋಡೌನಲ್ಲಿ ದುರಂತದಲ್ಲಿ 14ಜನರ ಸಜೀವ ದಹನ ಕೇಸ್ ಬಗ್ಗೆ ಅಧಿಕಾರಿಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿಯನ್ನು ಪಡೆಯಲಿದ್ದಾರೆ. ದುರಂತದ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಿ ಸಿಎಂ ಸಿದ್ದರಾಮಯ್ಯ ಪರಿಶೀಲನೆ ನಡೆಸಲಿದ್ದಾರೆ ಎಂದ್ ತಿಳಿದುಬಂದಿದೆ.

Recent News


Leave a Comment: