ಪುತ್ತೂರು: ನೇಣು ಬಿಗಿದು ಅನ್ಸರ್ ಆತ್ಮಹತ್ಯೆ

ಸುದ್ದಿಗಳು News

Posted by vidyamaana on 2024-07-05 12:22:17 |

Share: | | | | |


ಪುತ್ತೂರು: ನೇಣು ಬಿಗಿದು  ಅನ್ಸರ್  ಆತ್ಮಹತ್ಯೆ

ಪುತ್ತೂರು : ವಿವಾಹಿತ ಯುವಕನೊಬ್ಬ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಗುರುವಾರ ನಡೆದಿದೆ.

ಮೂಲತಃ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿಯಾಗಿದ್ದು, ಪ್ರಸ್ತುತ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯವಿದ್ದ ಸಿದ್ದೀಕ್ ಅನ್ಸರ್(32) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಕೊಪ್ಪಳದಲ್ಲಿರುವ ತನ್ನ ಮಾವನ ಅಡಕೆ ತೋಟದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಡಕೆ ಗಾರ್ಬಲ್‌ನಲ್ಲಿ ದುಡಿಯುತ್ತಿದ್ದ ಸಿದ್ದೀಕ್ ಅನ್ಸರ್ ಸರ್ವೆ ಗ್ರಾಮದ ಕಲ್ಪನೆಯಲ್ಲಿ 10 ಸೆಂಟ್ಸ್ ಜಾಗ ಖರೀದಿಸಿ ಮನೆ ನಿರ್ಮಿಸಲು ಅಡಿಪಾಯ ಹಾಕಿದ್ದರು. ಆರ್ಯಾಪು ಗ್ರಾಮದ ಕೊಪ್ಪಳದಲ್ಲಿ ಬಾಡಿಗೆ ಮನೆ ಮಾಡಿ ಅಲ್ಲಿ ತಂದೆ, ತಾಯಿ ಹಾಗೂ ಪತ್ನಿ ಮಕ್ಕಳ ಜತೆ ವಾಸ್ತವ್ಯವಿದ್ದರು. ಕಳೆದ ಒಂದೂವರೆ ತಿಂಗಳಿನಿಂದ ವಿಪರೀತ ಹೊಟ್ಟೆನೋವು ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪುತ್ತೂರಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗದ ಅವರು ಗಾರ್ಬಲ್ ಕೆಲಸಕ್ಕೆ ಹೋಗದೆ ಮನೆಯಲ್ಲೇ ಉಳಿದುಕೊಂಡಿದ್ದರು. ಮನೆ ನಿರ್ಮಿಸುವ ಉದ್ದೇಶದಿಂದ ಸಾಲ ಪಡೆದಿದ್ದ ಅವರು ಸಾಲ ತೀರಿಸಲಾಗದೆ ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿಗೆ ಶಿಲಾನ್ಯಾಸ | 35 ಲಕ್ಷ ರೂ. ಯೋಜನೆಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು

Posted by Vidyamaana on 2023-03-11 09:04:59 |

Share: | | | | |


ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿಗೆ ಶಿಲಾನ್ಯಾಸ | 35 ಲಕ್ಷ ರೂ. ಯೋಜನೆಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು

ಪುತ್ತೂರು: ಅತ್ಯಂತ ಪಾವಿತ್ರ್ಯತೆ ಹೊಂದಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿ ಬಹುದಿನಗಳ ಬೇಡಿಕೆಯಾಗಿದ್ದು, ಇದೀಗ 35 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೆ ಶಿಲಾನ್ಯಾಸ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚುವರಿ ಅನುದಾನ ತರಿಸಿಕೊಂಡು, ಇನ್ನಷ್ಟು ಅಭಿವೃದ್ಧಿಗೆ ಪ್ರಯತ್ನಿಸಲಾಗುವುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಿಣಿ ಅಭಿವೃದ್ಧಿಗಾಗಿ ಪುಡಾದ 35 ಲಕ್ಷ ರೂ. ಅನುದಾನದ ಕಾಮಗಾರಿಗೆ ಶನಿವಾರ ತೆಂಗಿನಕಾಯಿ ಒಡೆಯುವ ಮೂಲಕ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರುಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಪುಷ್ಕರಿಣಿ ಧಾರ್ಮಿಕ ಮಹತ್ವವನ್ನು ಹೊಂದಿದೆ. ಆದ್ದರಿಂದ ಈ ಕೆರೆಯನ್ನು ಅಭಿವೃದ್ಧಿ ಮಾಡುವ ದೃಷ್ಟಿಯಿಂದ ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಹಂತಹಂತವಾಗಿ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದರು

.ಬನ್ನೂರು ಕೆರೆಗೆ 1.75 ಕೋಟಿ ಅಂದಾಜು ಪಟ್ಟಿ ತಯಾರಿ : ಭಾಮಿ ಅಶೋಕ್ ಶೆಣೈ

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್‍ ಶೆಣೈ ಮಾತನಾಡಿ, ನಗರ ಸೇರಿದಂತೆ ಹೊರವಲಯದ ಹಲವು ಕೆರೆಗಳ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು. ಈಗಾಗಲೇ ಬನ್ನೂರು ಕೆರೆ ಅಭಿವೃದ್ಧೀಗೆ 1.75 ಕೋಟಿ ರೂ. ಅಂದಾಜು ಪಟ್ಟಿ ತಯಾರಿಸಲಾಗಿದೆ. ಈ ಪ್ರಕ್ರಿಯೆ ಕೇವಲ ನಾಲ್ಕು ದಿನಗಳಲ್ಲಿ ನಿರ್ಐಯ ತೆಗೆದುಕೊಂಡು ಮಾಡಲಾಗಿದೆ ಎಂದ ಅವರು, ದೇವಸ್ಥಾನದ ಕೆರೆ ಅಭಿವೃದ್ಧಿಗೆ 35 ಲಕ್ಷ ರೂ. ಅನುದಾನ ಪುಡಾ ವತಿಯಿಂದ ನೀಡಲಾಗಿದ್ದು, ಅನುದಾನ ನೀಡುವಲ್ಲಿ ಶಾಸಕ ಸಂಜೀವ ಮಠಂದೂರು ಅವರು ಪಾತ್ರ ಮಹತ್ವದ್ದಾಗಿದೆ. ಇನ್ನಷ್ಟು ಅನುದಾನ ಒದಗಿಸುವ ಭರವಸೆ ನೀಡಿದರು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಒಂದು ಚಕ್ರದಿಂದ ಕೆಲಸ ಕಾರ್ಯಗಳು ನಡೆಯುವುದಿಲ್ಲ. ಪುಷ್ಕರಣಿ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡುವಲ್ಲಿ ಪುತ್ತೂರು ಶಾಸಕರು ಸೇರಿದಂತೆ ಎಲ್ಲರೂ ಕೈಜೋಡಿಸುವಿಕೆಯಿಂದ ಆಗಿದೆ. ಒಟ್ಟಾರೆಯಾಗಿ ದೇವಸ್ಥಾನದ ಅಭಿವೃದ್ಧಿ ಕೆಲಸಗಳು ಸರಿಯಾದ ರೀತಿಯಲ್ಲಿ ಸಾಗುತ್ತಿದೆ ಎಂದರು.

ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್‍ ಮಾತನಾಡಿದರು. ವೇದಿಕೆಯಲ್ಲಿ ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ನಗರಸಭೆ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, , ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳೀಕೃಷ್ಣ ಹಸಂತಡ್ಕ, ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಭಿಲಾಷ್ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಯೋಜನಾ ಪ್ರಾಧಿಕಾರದ ಸದಸ್ಯರಾದ ರಮೇಶ್‍ ಭಟ್, ಜಯಶ್ರೀ ಶೆಟ್ಟಿ, ನ್ಯಾಯವಾದಿ ಚಿದಾನಂದ ಬೈಲಾಡಿ ಮತ್ತಿತರರು ಉಪಸ್ಥಿತರಿದ್ದರು.

ಅಪೂರ್ವ ಪ್ರಾರ್ಥನೆ ಹಾಡಿದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಸ್ವಾಗತಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ವಂದಿಸಿದರು. ಮಾಜಿ ಪುರಸಭಾ ಅಧ್ಯಕ್ಷ ರಾಜೇಶ್ ಬನ್ನೂರು ಕಾರ್ಯಕ್ರಮ ನಿರೂಪಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಿ.ಐತ್ತಪ್ಪ ನಾಯ್ಕ, ರಾಮದಾಸ್ ಗೌಡ, ವೀಣಾ ಬಿ.ಕೆ.ಶೇಖರ್ ನಾರಾವಿ, ಮ್ಯಾನೇಜರ್ ಹರೀಶ್‍ ಶೆಟ್ಟಿ ಅತಿಥಿಗಳನ್ನು ಗೌರವಿಸಿದರು

ಬೆಳ್ತಂಗಡಿ : ಹಳೇಕೋಟೆ ಬೈಕಿಗೆ ಲಾರಿ ಡಿಕ್ಕಿ ಸವಾರ ವಿನೋದ್ ಗೌಡ ಪಾಲಡ್ಕ ಸ್ಥಳದಲ್ಲೇ ಮೃತ್ಯು

Posted by Vidyamaana on 2024-06-01 18:09:41 |

Share: | | | | |


ಬೆಳ್ತಂಗಡಿ : ಹಳೇಕೋಟೆ  ಬೈಕಿಗೆ ಲಾರಿ ಡಿಕ್ಕಿ ಸವಾರ ವಿನೋದ್ ಗೌಡ ಪಾಲಡ್ಕ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಹಳೆಕೋಟೆ ಬಳಿ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ   ಘಟನೆ ನಡೆದಿದೆ.

ಬೆಳ್ತಂಗಡಿಯ ಹಳೇಕೋಟೆ ಬಳಿಯ ಪೆಟ್ರೋಲ್ ಪಂಪ್ ಬಳಿ ಮಣ್ಣು ಹೇರಿಕೊಂಡು ಹೋಗುತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಲಾರಿಯಡಿ ಸಿಲುಕಿ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಮಚ್ಚಿನದ ಕೃಷಿಕ ವಿನೋದ್ ಗೌಡ(45) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. 

ಬೆಳ್ಳಾರೆಯ ಬಾಡಿಗೆ ಮನೆ ಮೇಲೆ ಬೆಳ್ಳಂಬೆಳಗ್ಗೆ NIA ದಾಳಿ

Posted by Vidyamaana on 2024-03-05 16:13:39 |

Share: | | | | |


ಬೆಳ್ಳಾರೆಯ ಬಾಡಿಗೆ ಮನೆ ಮೇಲೆ ಬೆಳ್ಳಂಬೆಳಗ್ಗೆ NIA ದಾಳಿ

ಬೆಳ್ಳಾರೆ : ಎನ್.ಐ.ಎ ಅಧಿಕಾರಿಗಳ ತಂಡ ಪ್ರಕರಣವೊಂದರ ಸಂಬಂಧ ಮಾ‌.5 ರಂದು ಬೆಳ್ಳಾರೆಯ ಬಾಡಿಗೆ ಮನೆಗೆ ಬೆಳಗ್ಗೆ ದಾಳಿ ಮಾಡಿ ಮನೆಯನ್ನು ಶೋಧ ನಡೆಸಿ ನಂತರ ಬೀಜು ಎಂಬಾತನಿಗೆ ಸಮನ್ಸ್ ನೀಡಿ ಮೊಬೈಲ್ ಫೋನ್ ವಶಕ್ಕೆ ಪಡೆದು ಮಹಜರು ನಡೆಸಿ ಹೋಗಿರುವ ಅಧಿಕಾರಿಗಳು. 

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನಿಂತಿಕಲ್ಲು ಬಳಿಯ ಕಲ್ಮಡ್ಕ ನಿವಾಸಿ ಚಿದಾನಂದ ಎಂಬವರ ಬಾಡಿಗೆ ಮನೆ ಮೇಲೆ ಬೆಂಗಳೂರು ಬ್ರಾಂಚ್ ನ ಎನ್.ಐ.ಎ ಅಧಿಕಾರಿಗಳಾದ ಡಿವೈಎಸ್ಪಿ ರಾಜನ್ ಪಿ.ವಿ , ಸಬ್ ಇನ್ಸ್ಪೆಕ್ಟರ್ ಮಂಜಪ್ಪ , ಕಾನ್ಟೇಬಲ್ ಸುರೇಶ್.ಸಿ ನೇತೃತ್ವದ ಮೂರು ಜನರ ತಂಡ ಬೆಳ್ಳಾರೆ ಪೊಲೀಸರ ಸಹಕಾರದಲ್ಲಿ ಮಾ.5 ರಂದು ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿ ಮನೆಯನ್ನು ಪರಿಶೀಲನೆ ನಡೆಸಿದ್ದಾರೆ‌.


*ಪ್ರಕರಣದ ವಿವರ:* 25-10-2023 ರಂದು RC-28/2023/NIA/DLI ಯಲ್ಲಿ 120B,121,121A&122 ಜೊತೆಗೆ 3,25 ಆರ್ಮ್ಸ್ 13 ,18 ಮತ್ತು UA(P) ಅಡಿಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿದಂತೆ ಬೆಳ್ಳಾರೆಯ ಚಿದಾನಂದ ಎಂಬವರ ಬಾಡಿಗೆ ಮನೆಗೆ ಎರಡು ದಿನದ ಹಿಂದೆ ಬಂದ ಕೇರಳ ರಾಜ್ಯದ ಇಡುಕ್ಕಿಯ ಬಿಜು ಅಬ್ರಾಹಂ @ ಬಿಜು ಎಮ್.ಎ (45) ಎಂಬಾತನ ವಾಸವಾಗಿದ್ದ ಮನೆಗೆ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ ನಂತರ ಬಿಜುಗೆ  ಸಮನ್ಸ್ ನೀಡಿದ್ದಾರೆ‌.


*ಮೊಬೈಲ್ ವಶಕ್ಕೆ:* ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ ಬಳಿಕ ಬಿಜು ಬಳಸುತ್ತಿದ್ದ ಮೊಬೈಲ್ ಫೋನ್‌ ಮತ್ತು ಅದರಲ್ಲಿದ್ದ ಜಿಯೋ ಕಂಪನಿಯ ಸಿಮ್ ಕಾರ್ಡ್ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಬೆಳ್ಳಾರೆ ಪೊಲೀಸರ ಸಹಕಾರದಲ್ಲಿ ಮಹಜರು ನಡೆಸಿ ಹೋಗಿದ್ದಾರೆ.

ಹಾಸನ ಶಿಕ್ಷಕಿ ಕಿಡ್ನಾಪ್ ಪ್ರಕರಣ ಸುಖಾಂತ್ಯ ಅತ್ತೆ ಮಗಳ ಅಪಹರಿಸಿದವನನ್ನು ಮಾವನಮನೆ ಗೆ ಕಳಿಸಿದ ಪೊಲೀಸರು!

Posted by Vidyamaana on 2023-12-01 08:29:57 |

Share: | | | | |


ಹಾಸನ ಶಿಕ್ಷಕಿ ಕಿಡ್ನಾಪ್ ಪ್ರಕರಣ ಸುಖಾಂತ್ಯ ಅತ್ತೆ ಮಗಳ ಅಪಹರಿಸಿದವನನ್ನು ಮಾವನಮನೆ ಗೆ ಕಳಿಸಿದ ಪೊಲೀಸರು!

ಕಡಬ: ಹಾಸನದಲ್ಲಿ ನಡೆದಿದ್ದ ಶಾಲಾ ಶಿಕ್ಷಕಿ ಕಿಟ್ರ್ಯಾಪ್ ಪ್ರಕರಣವನ್ನು ಪೊಲೀಸರು ಭೇಧಿಸಿದ್ದಾರೆ.


ಕಡಬ ತಾಲೂಕಿನ ನೆಲ್ಯಾಡಿ ಬಳಿ ಅಪಹರಣಕಾರರನ್ನು ಪತ್ತೆ ಹಚ್ಚಿರುವ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿವಾಹ ಮಾಡಿ ಕೊಡಲು ಒಪ್ಪದ ಕಾರಣಕ್ಕೆ ಹಾಸನ ನಗರದ ಹೊರ ವಲಯದ ಬಿಟ್ಟಗೌಡನಹಳ್ಳಿ ಬಳಿ ಖಾಸಗಿ ಶಾಲೆ ಶಿಕ್ಷಕಿಯನ್ನು ರಾಮು ಎಂಬಾತ ಅಪಹರಣ ಮಾಡಿದ್ದನು.

ನೆಲ್ಯಾಡಿ ಬಳಿ ಕಿಟ್ರ್ಯಾಪ್ ಮಾಡಿದ ಆರೋಪಿಗಳನ್ನು ಪತ್ತೆ ಹಚ್ಚಿದ ಹಾಸನ ಪೊಲೀಸರು ವಶಕ್ಕೆ ಪಡೆದು, ಅಪಹರಣಕ್ಕೊಳಗಾದ ಶಾಲಾ ಶಿಕ್ಷಕಿಯನ್ನು ಹಾಸನಕ್ಕೆ ಕರೆದೊಯ್ದಿದ್ದಾರೆ.

ಮದುವೆಗೆ ಒಪ್ಪದ ಅತ್ತೆ ಮಗಳನ್ನು ಸಂಬಂಧಿ ರಾಮು ಎಂಬಾತ ತನ್ನ ಗೆಳೆಯರ ಜೊತೆ ಸೇರಿ ಇನ್ನೋವಾ ಕಾರಿನಲ್ಲಿ ಕಿಟ್ರ್ಯಾಪ್ ಮಾಡಿದ್ದನು.

ಹಾಸನ ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು.

ಕೊಣಾಜೆ: ಬೋಳಿಯಾರ್ ಅಮಾಯಕ ಮುಸ್ಲಿಮರ ಬಂಧನ ವಿರೋಧಿಸಿ SDPI ಪ್ರತಿಭಟನೆ

Posted by Vidyamaana on 2024-06-25 21:01:31 |

Share: | | | | |


ಕೊಣಾಜೆ: ಬೋಳಿಯಾರ್ ಅಮಾಯಕ ಮುಸ್ಲಿಮರ ಬಂಧನ ವಿರೋಧಿಸಿ SDPI ಪ್ರತಿಭಟನೆ

ಕೊಣಾಜೆ: ಬೋಳಿಯಾರಿನಲ್ಲಿ ಅಮಾಯಕ ಮುಸ್ಲಿಮರ ಬಂಧನ ವಿರೋಧಿಸಿ ಎಸ್ ಡಿಪಿಐ ಕೊಣಾಜೆ ಪೊಲೀಸ್ ಠಾಣೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದೆ.

ಮೂಡಿಗೆರೆ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ವಿರೋಧ, ಸ್ಥಾನ ಕೈತಪ್ಪಿದ ಸಿಟ್ಟಿನಲ್ಲಿ ನಡುಬೀದಿಯಲ್ಲಿ ಮುಖಂಡರ ಹೊಡೆದಾಟ

Posted by Vidyamaana on 2024-02-10 15:16:05 |

Share: | | | | |


ಮೂಡಿಗೆರೆ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ವಿರೋಧ, ಸ್ಥಾನ ಕೈತಪ್ಪಿದ ಸಿಟ್ಟಿನಲ್ಲಿ ನಡುಬೀದಿಯಲ್ಲಿ ಮುಖಂಡರ ಹೊಡೆದಾಟ

ಚಿಕ್ಕಮಗಳೂರು, ಫೆ.10: ಮೂಡಿಗೆರೆ ಬಿಜೆಪಿ ತಾಲೂಕು ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಪಕ್ಷದ ಇಬ್ಬರು ಮುಖಂಡರು ನಡುಬೀದಿಯಲ್ಲಿ ಹೊಡೆದಾಟ ನಡೆಸಿದ ಘಟನೆ ನಡೆದಿದ್ದು ಈ ಬಗ್ಗೆ ಮೂಡಿಗೆರೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. 


ಮೂಡಿಗೆರೆ ತಾಲೂಕು ಸಮಿತಿಯ ಅಧ್ಯಕ್ಷ ಸ್ಥಾನ ತಪ್ಪಲು ಹಾಲಿ ತಾಪಂ ಸದಸ್ಯ ಕೆ.ಸಿ ರತನ್ ಕಾರಣ ಎಂದು ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪುಟ್ಟಣ್ಣ ಹಲ್ಲೆ ನಡೆಸಿದ್ದಾರೆ. ತಾಲೂಕು ಅಧ್ಯಕ್ಷರಾಗಿ ಟಿಎಂ ಗಜೇಂದ್ರ ಅವರನ್ನು ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ ನೇಮಕ ಮಾಡಿದ್ದರು. ಇದರಿಂದ ಕೋಪಗೊಂಡ ಪುಟ್ಟಣ್ಣ ಮತ್ತು ಬೆಂಬಲಿಗರು ತಾಲೂಕು ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಇದೇ ವೇಳೆ, ಪುಟ್ಟಣ್ಣ ಮತ್ತು ಕೆಸಿ ರತನ್ ನಡುವೆ ಮಾತಿಗೆ ಮಾತು ಬೆಳೆದು ನಡುರಸ್ತೆಯಲ್ಲೇ ಹೊಡೆದಾಟ ನಡೆಸಿದ್ದಾರೆ. ಬಟ್ಟೆ ಹರಿದುಕೊಂಡು ಇಬ್ಬರೂ ಪರಸ್ಪರ ಕಿತ್ತಾಡಿದ್ದು ಇತರರು ಬಿಡಿಸಲು ಬಂದರೂ ಕೇಳದೆ ಹೊಡೆದಾಟ ನಡೆಸಿದ್ದಾರೆ. ಇದನ್ನು ಅಲ್ಲಿಯೇ ಇದ್ದ ವ್ಯಕ್ತಿಯೊಬ್ಬರು ವಿಡಿಯೋ ಮಾಡಿದ್ದು ನೆಲಕ್ಕುರುಳಿಸಿ ಹೊಡೆದಾಡಿದ್ದು ಜಾಲತಾಣದಲ್ಲಿ ವೈರಲ್ ಆಗಿದೆ. ಮೂಡಿಗೆರೆಯ ತಾಲೂಕು ಬಿಜೆಪಿ ಕಚೇರಿ ಬಳಿಯಲ್ಲೇ ಘಟನೆ ನಡೆದಿದೆ. ಕೆ.ಸಿ ರತನ್ ಹಸ್ತಕ್ಷೇಪದಿಂದ ತನ್ನ ಅಧ್ಯಕ್ಷ ಸ್ಥಾನ ಕೈತಪ್ಪಿದೆ ಎಂದು ಸಿಟ್ಟಿನಲ್ಲಿ ಹೊಡೆದಾಡಿದ್ದಾರೆ. ಹೊಸತಾಗಿ ಅಧ್ಯಕ್ಷರಾದ ಗಜೇಂದ್ರ ಬಗ್ಗೆ ಪುಟ್ಟಣ್ಣ ಮತ್ತು ಕನ್ನಳ್ಳಿ ಭರತ್ ಟೀಮ್ ವಿರೋಧ ವ್ಯಕ್ತಪಡಿಸಿದ್ದು ಕಚೇರಿ ಎದುರಲ್ಲಿ ಪ್ರತಿಭಟನೆ ನಡೆಸಿದ್ದರು.‌ ಹಲ್ಲೆಗೊಳಗಾದ ರತನ್ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Recent News


Leave a Comment: