ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಸುದ್ದಿಗಳು News

Posted by vidyamaana on 2024-07-24 08:25:31 | Last Updated by Vidyamaana on 2024-07-24 08:25:31

Share: | | | | |


ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು  ಲಾರಿ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ

ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡ‌ರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.

 Share: | | | | |


ಯಡಿಯೂರಪ್ಪ ಧರ್ಮ ದ್ವೇಷಿಯಲ್ಲ: ಕಾಂಗ್ರೆಸ್‌ ಶಾಸಕ

Posted by Vidyamaana on 2024-03-10 12:54:02 |

Share: | | | | |


ಯಡಿಯೂರಪ್ಪ ಧರ್ಮ ದ್ವೇಷಿಯಲ್ಲ: ಕಾಂಗ್ರೆಸ್‌ ಶಾಸಕ

ಚಿಕ್ಕಮಗಳೂರು: ಬಿ.ಎಸ್‌. ಯಡಿಯೂರಪ್ಪ ಬಿಜೆಪಿಯಲ್ಲಿದ್ದರೂ ಎಂದಿಗೂ ಯಾವುದೇ ಧರ್ಮವನ್ನು ದ್ವೇಷಿಸಲಿಲ್ಲ ಎಂದು ಕಾಂಗ್ರೆಸ್‌ ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದರು.

ಜಿಲ್ಲಾ ಉರ್ದು ಅದಬ್, ರಾಜ್ಯ ಅಂಜುಮನ್ ತಾರಕಿ ಉರ್ದು ವತಿಯಿಂದ ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಉರ್ದು ಸಮ್ಮೇಳನ ಹಾಗೂ ಗಜಲ್-ಕವಾಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಶಿಕಾರಿಪುರದಲ್ಲಿ ಯಡಿಯೂರಪ್ಪ ಅನಭಿಶಕ್ತ ದೊರೆ ಇದ್ದಂತೆ. ಯಾವ ವ್ಯಕ್ತಿ ತನ್ನ ಧರ್ಮದೊಂದಿಗೆ ಇತರೆ ಧರ್ಮವನ್ನು ಪ್ರೀತಿಸುತ್ತಾನೆಯೋ ಆ ವ್ಯಕ್ತಿಯನ್ನು ಎಲ್ಲರೂ ಗೌರವಿಸುತ್ತಾರೆ ಎಂದರು.

ಅಂಕೋಲಾ : ಭಾರೀ ಪ್ರಮಾಣದ ಗುಡ್ಡ ಕುಸಿತ: 9 ಮಂದಿ ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ

Posted by Vidyamaana on 2024-07-16 11:39:47 |

Share: | | | | |


ಅಂಕೋಲಾ : ಭಾರೀ ಪ್ರಮಾಣದ ಗುಡ್ಡ ಕುಸಿತ: 9 ಮಂದಿ ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ

ಕಾರವಾರ, ಜು.16: ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು ಒಂದೇ ಕುಟುಂಬದ ಐವರು ಸೇರಿ ಒಟ್ಟು 9 ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಐಆರ್ ಬಿ ಕಂಪೆನಿ ಹೆದ್ದಾರಿ ಅಗಲೀಕರಣಕ್ಕಾಗಿ ರಸ್ತೆ ಪಕ್ಕದ ಗುಡ್ಡವನ್ನು ಭಾರೀ ಪ್ರಮಾಣದಲ್ಲಿ ಅಗೆಯಲಾಗಿತ್ತು. ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಈ ಗುಡ್ಡ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಮನೆಯ ಮೇಲೆ ಭಾರೀ ಪ್ರಮಾಣದ ಮಣ್ಣು

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Posted by Vidyamaana on 2024-05-02 11:06:52 |

Share: | | | | |


ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುಧೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.

ಮೇ. 1(ಬುಧವಾರ) ದಂದು ಕೋಟದಲ್ಲಿ ನಡೆಯುತ್ತಿದ್ದ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಧರಿಸಿದ್ದ ಪುತ್ತೂರು ಅವರು ರಾತ್ರಿ 12.25 ರ ಸುಮಾರಿಗೆ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ ಎನ್ನಲಾಗಿದೆ.

ಕಾಸರಗೋಡಿನ ಶೇಣಿಯಲ್ಲಿ ಬಾಲಿವುಡ್ ತಾರೆ ಸನ್ನಿ ಲಿಯೋನ್

Posted by Vidyamaana on 2024-04-27 16:51:17 |

Share: | | | | |


ಕಾಸರಗೋಡಿನ ಶೇಣಿಯಲ್ಲಿ ಬಾಲಿವುಡ್ ತಾರೆ ಸನ್ನಿ ಲಿಯೋನ್

ಕಾಸರಗೋಡು : ನಟಿ ಸನ್ನಿ ಲಿಯೋನ್ ಕಾಸರಗೋಡಿನಲ್ಲಿ ಪ್ರತ್ಯಕ್ಷವಾಗಿದ್ದಾರೆ. ಕಾಸರಗೋಡಿನ ಸೀತಂಗೋಳಿ ಸಮೀಪದ ಶೇಣಿಯಲ್ಲಿ ಸಿನಿಮಾ ಸನ್ನಿ ಲಿಯೋನ್ ಅವರ ಹಿಂದಿ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು ಅದರಲ್ಲಿ ಭಾಗಿಯಾಗಿದ್ದಾರೆ.ನೆಚ್ಚಿನ ತಾರೆಯನ್ನು ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ.

ಮಹಾದೇವ್ ಬೆಟ್ಟಿಂಗ್ ಆ್ಯಪ್‌ ಮಾಲೀಕ ರವಿ ಉಪ್ಪಲ್ ದುಬೈನಲ್ಲಿ ಬಂಧನ

Posted by Vidyamaana on 2023-12-13 11:25:21 |

Share: | | | | |


ಮಹಾದೇವ್ ಬೆಟ್ಟಿಂಗ್ ಆ್ಯಪ್‌ ಮಾಲೀಕ ರವಿ ಉಪ್ಪಲ್ ದುಬೈನಲ್ಲಿ ಬಂಧನ

ನವದೆಹಲಿ: ಮಹಾದೇವ್ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ನ ಇಬ್ಬರು ಪ್ರಮುಖ ಮಾಲೀಕರಲ್ಲಿ ಒಬ್ಬರಾದ ರವಿ ಉಪ್ಪಲ್ ಅವರನ್ನು ಇಡಿ ಆದೇಶದ ಮೇರೆಗೆ ಇಂಟರ್‌ಪೋಲ್ ಹೊರಡಿಸಿದ ರೆಡ್ ನೋಟಿಸ್ ಆಧಾರದ ಮೇಲೆ ಸ್ಥಳೀಯ ಪೊಲೀಸರು ದುಬೈನಲ್ಲಿ ಬಂಧಿಸಿದ್ದಾರೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.



ರವಿ ಉಪ್ಪಲ್ ಜೊತೆಗೆ ಇನ್ನಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಉಪ್ಪಲ್ ಅವರನ್ನು ಕಳೆದ ವಾರ ದುಬೈನಲ್ಲಿ ಬಂಧಿಸಲಾಗಿದ್ದು ಇದೀಗ ಅವರನ್ನು ಭಾರತಕ್ಕೆ ಗಡೀಪಾರು ಮಾಡಲು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದುಬೈ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.


ರವಿ ಉಪ್ಪಲ್ ಅವರು 6,000 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದು, ಇದರಲ್ಲಿ ನಿರ್ಗಮಿತ ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್ ಅವರ ಹೆಸರೂ ಕೂಡಾ ಕೇಳಿಬಂದಿದ್ದು. ಮೂಲಗಳ ಪ್ರಕಾರ, ಇಡಿ ಹೊರಡಿಸಿದ ರೆಡ್ ಕಾರ್ನರ್ ನೋಟಿಸ್‌ನಿಂದ ಉಪ್ಪಲ್ ಅವರನ್ನು ಬಂಧಿಸಲಾಗಿದೆ. ರವಿಯನ್ನು ಹಸ್ತಾಂತರಿಸಲು ಸಿದ್ಧ ಎಂದು ದುಬೈ ಅಧಿಕಾರಿಗಳು ಭಾರತಕ್ಕೆ ಮಾಹಿತಿ ನೀಡಿದ್ದಾರೆ.


ಮಹಾದೇವ್ ಆ್ಯಪ್‌ನ ಎರಡನೇ ಪ್ರವರ್ತಕ ಸೌರಭ್ ಚಂದ್ರಕರ್ ಕೂಡ ಶೀಘ್ರದಲ್ಲೇ ಯುಎಇಯಲ್ಲಿ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು. ಆತನ ಬಂಧನದ ಬಳಿಕ ಆತನನ್ನೂ ಭಾರತಕ್ಕೆ ಹಸ್ತಾಂತರಿಸಲಾಗುವುದು ಎಂದು ಹೇಳಿದ್ದಾರೆ.ರಾಯ್‌ಪುರದ ವಿಶೇಷ ನ್ಯಾಯಾಲಯದಿಂದ ಇಡಿ ಇಬ್ಬರ ವಿರುದ್ಧವೂ ಜಾಮೀನು ರಹಿತ ವಾರಂಟ್ ತೆಗೆದುಕೊಂಡಿದೆ. ಆ ಬಳಿಕ ಅಕ್ಟೋಬರ್‌ನಲ್ಲಿ ಇಬ್ಬರ ವಿರುದ್ಧವೂ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು.

1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭಕ್ಕೆ ಸರ್ಕಾರ ಅನುಮತಿ

Posted by Vidyamaana on 2024-06-19 13:58:32 |

Share: | | | | |


1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭಕ್ಕೆ ಸರ್ಕಾರ ಅನುಮತಿ

ಬೆಂಗಳೂರು : 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ ಇತರೆ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿ ಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡುವ ಬಗ್ಗೆ ಆದೇಶವನ್ನು ಹೊರಡಿಸಲಾಗಿದೆ.ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ 2024-25ನೇ ಸಾಲಿನ (ಫೆಬ್ರವರಿ) ಅಯವ್ಯಯ ಭಾಷಣದ ಕಂಡಿಕೆ 96(5)ರಲ್ಲಿ ಸನ್ಮಾನ್ಯ ಮುಖ್ಯ ಮಂತ್ರಿಯವರು ಈ ಕೆಳಕಂಡಂತೆ ಘೋಷಿಸಿರುತ್ತಾರೆ.

2000 ಸರ್ಕಾರಿ ಪಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು " ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ ರಾಜ್ಯದ 1000 ಸರ್ಕಾರಿ ಶಾಲೆಗಳಲ್ಲಿ 2019-20ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿ ಭಾಷಾ ಮಾಧ್ಯಮ) ತರಗತಿಯನ್ನು ಕೆಲವು ಷರತ್ತುಗಳೊಂದಿಗೆ ಪ್ರಾರಂಭಿಸಲು ಅನುಮತಿ ನೀಡಿ ಆದೇಶಿಸಲಾಗಿರುತ್ತದೆ.

Recent News


Leave a Comment: