Posted by vidyamaana on 2024-07-08 08:41:02 |
ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗೈಡ್ ಹಾಗೂ ಪುಸ್ತಕಗಳನ್ನಿಟ್ಟುಕೊಂಡು ಸಾಮೂಹಿಕ ನಕಲು ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕೇವಲ ಮಕ್ಕಳಲ್ಲ ಶಿಕ್ಷಕರೂ ಅವರಿಗೆ ನೆರವಾಗುತ್ತಿರುವುದು ಸಿಸಿಟಿವಿ ದೃಶ್ಯದಲ್ಲಿ ಕಂಡುಬಂದಿದೆ. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗೈಡ್ ಇಟ್ಟುಕೊಂಡು ಸಾಮೂಹಿಕ ನಕಲು(Mass Cheating) ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಘಟನೆ ಸಿಸಿಟಿವಿಯಲ್ಲಿ ಬಯಲಾಗಿದೆ. ಜುಲೈ 5 ರಂದು ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು ಎಂದು ಎಸ್ ಡಿಎಂ ವಿಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. ಅವರು ತನಿಖೆಗಾಗಿ ಸ್ಥಳಕ್ಕೆ ಬಂದರು ಆದರೆ ಅಲ್ಲಿ ಎಲ್ಲವೂ ಸಾಮಾನ್ಯವಾಗಿತ್ತು. ಇದಾದ ಬಳಿಕ ವಿಡಿಯೋವೊಂದು ಹೊರಬಿದ್ದಿದ್ದು, ನಂತರ ವಿಷಯ ಬೆಳಕಿಗೆ ಬಂದಿದೆ.
ಪರೀಕ್ಷಾ ಪತ್ರಿಕೆಗಳಲ್ಲಿನ ಅಕ್ರಮಗಳು ಮತ್ತು ಸೋರಿಕೆಗಳ ಬಗ್ಗೆ ದೇಶದಲ್ಲಿ ಕೋಲಾಹಲವಿದೆ, ಈ ನಡುವೆ ಈ ಘಟನೆ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ತರಗತಿ ಕೊಠಡಿಯಲ್ಲಿ ಪರೀಕ್ಷೆ ನಡೆಯುವಾಗ ಹಲವು ಮಕ್ಕಳು ಗುಂಪು ಕಟ್ಟಿಕೊಂಡು ಬಹಿರಂಗವಾಗಿ ನಕಲು ಮಾಡುತ್ತಿದ್ದರು. ಅಲ್ಲಿ ಶಿಕ್ಷಕರೂ ಇದ್ದರು. ಆದರೆ ನಕಲು ನಿಲ್ಲಿಸುವ ಬದಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಿಎ ಮತ್ತು ಬಿಎಸ್ಸಿ ಪರೀಕ್ಷೆಗಳು ಅಲ್ಲಿ ನಡೆಯುತ್ತಿತ್ತು, ಈ ಪರೀಕ್ಷೆಗಳ ಕೇಂದ್ರವನ್ನು ದಾಮೋಹ್ ಪ್ರದೇಶದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಸಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳು ಅದೇ ಶಾಲೆಯ ತರಗತಿ ಕೊಠಡಿಯಲ್ಲಿದೆ ಎಂದು ಹೇಳಲಾಗಿದೆ.
ವಿದ್ಯಾರ್ಥಿಗಳು ಗೈಡ್ ಹಾಗೂ ಪುಸ್ತಕಗಳನ್ನು ತೆರೆದು ನಕಲು ಮಾಡುತ್ತಿರುವುದನ್ನು ಕಾಣಬಹುದು. ಈ ಬಗ್ಗೆ ಎಸ್ಡಿಎಂ ಭಿಂಡ್ ಕಲೆಕ್ಟರ್ ಸಂದೀಪ್ ಶ್ರೀವಾಸ್ತವ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರದ ಅಧ್ಯಕ್ಷರು ಹಾಗೂ ಪ್ರಾಂಶುಪಾಲರ ಶಾಮೀಲಾಗಿರುವುದನ್ನು ಇದರಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆಯೂ ಮಾತನಾಡಿದರು. ಇದೀಗ ಆಲಂಪುರದ ಹೈಯರ್ ಸೆಕೆಂಡರಿ ಶಾಲೆಯನ್ನು ಪರೀಕ್ಷಾ ಕೇಂದ್ರವನ್ನಾಗಿ ಮಾಡಲಾಗಿದೆ.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ದುರ್ಗಾಪ್ರಸಾದ್ ಸರಾಫ್, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸ್ವಯಂ ಪ್ರಭಾ ಕಾಲೇಜಿನ ವಿದ್ಯಾರ್ಥಿಗಳೂ ದಾಮೋಹ್ ಕೇಂದ್ರದಲ್ಲಿ ನಕಲು ಮಾಡುತ್ತಿದ್ದು ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ.
Posted by Vidyamaana on 2023-03-30 12:54:46 |
ಪುತ್ತೂರು: ಮಾರುಕಟ್ಟೆಯಲ್ಲಿ ಕುತೂಹಲ ಸೃಷ್ಟಿಸಿರುವ ಈಜ್ಝೀ ಬೈ ಡ್ರೆಸ್ ಮಳಿಗೆ ಮಾರ್ಚ್ ೩೧ರಂದು ಪುತ್ತೂರಿನ ಜಿಎಲ್ ವನ್ ಮಾಲ್ ನಲ್ಲಿ ಅದ್ಧೂರಿಯಾಗಿ ಉದ್ಘಾಟನೆಗೊಳ್ಳಲಿದೆ.
ಪುರುಷರ ಉಡುಗೆ, ಮಹಿಳೆಯರ ಉಡುಗೆ, ಮಕ್ಕಳ ಉಡುಗೆ, ಪಾದರಕ್ಷೆಗಳು ಸೇರಿದಂತೆ ಬ್ರಾಂಡೆಡ್ ಉಡುಗೆಗಳು ಈಜ್ಝಿ ಬಯ್ ನಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ. ಅಪರಿಮಿತ ಆಯ್ಕೆಗಳು ಇಲ್ಲಿ ಗ್ರಾಹಕರಿಗೆ ತೆರೆದುಕೊಳ್ಳಲಿದ್ದು, ೬೯ ರೂ.ನಿಂದ ದರ ಆರಂಭಗೊಳ್ಳಲಿದೆ.
ಉದ್ಘಾಟನೆಯ ಕೊಡುಗೆಯಾಗಿ ೧೯೯೯ ರೂ. ಮೌಲ್ಯದ ಖರೀದಿಗೆ ಟ್ರೆಂಡಿ ಡಫಲ್ ಬ್ಯಾಗ್ ಕೇವಲ ರೂ. ೧೯೯ಕ್ಕೆ ಲಭ್ಯವಾಗಲಿದೆ. ಇದರೊಂದಿಗೆ ೫೦೦ ರೂ. ಮೌಲ್ಯದ ರಿಯಾಯಿತಿ ವೋಚರ್ ಕೂಡ ಸಿಗಲಿದೆ ಎಂದು ಪ್ರಕಟಣೆ ತಿಳಿಸಿದೆ.
Posted by Vidyamaana on 2024-05-28 12:05:02 |
ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ನೋಡುಗರ ಎದೆ ನಡುಗಿಸುವಂತಿದೆ. ತನ್ನ ಗೆಳೆಯನ ಜೊತೆ ವಾಗ್ವಾದ ಮಾಡುತ್ತಿದ್ದ ಯುವತಿಯೊಬ್ಬಳು ನೋಡ ನೋಡುತ್ತಿದ್ದಂತೆ ರೈಲಿನ ಮುಂದೆ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ.
ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಆಗ್ರಾದ ರಾಜಾ ಕಿ ಮಂಡಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಅಲ್ಲಿನ ಫ್ಲಾಟ್ ಫಾರಂ ಸಂಖ್ಯೆ ಒಂದರಲ್ಲಿ ಯುವತಿಯೊಬ್ಬಳು ತನ್ನ ಗೆಳೆಯನ ಜೊತೆ ಕುಳಿತಿರುತ್ತಾಳೆ. ಇಬ್ಬರ ನಡುವೆ ಯಾವುದೋ ಕಾರಣಕ್ಕೆ ಪರಸ್ಪರ ವಾಗ್ವಾದ ನಡೆಯುತ್ತಿರುತ್ತದೆ. ಈ ಸಂದರ್ಭದಲ್ಲಿ ಏಕಾಏಕಿ ಎದ್ದು ನಿಂತ ಆಕೆ ರೈಲ್ವೆ ಟ್ರ್ಯಾಕಿನ ಮೇಲೆ ಹಾರಿ ವಾಗ್ವಾದ ಮುಂದುವರಿಸಿದ್ದಾಳೆ.
Posted by Vidyamaana on 2023-11-29 10:36:19 |
ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಜಿಲ್ಲೆಗೆ ಒಬ್ಬರು ಪೊಲೀಸ್ ಅಧೀಕ್ಷಕರು, ಇಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರ್ಯನಿರ್ವಹಿಸಲಿದ್ದಾರೆ.21 ಜಿಲ್ಲಾ ಘಟಕಗಳಿಗೆ ಎರಡು ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆಗಳನ್ನು ಸೃಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕರ ನಿರ್ದೇಶನದ ಅನ್ವಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರ್ಯನಿರ್ವಹಿಸಲಿದ್ದಾರೆ. ಅವರಿಗೆ ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ವಿಭಾಗದ ಕರ್ತವ್ಯಗಳನ್ನು ಹಂಚಿಕೆ ಮಾಡಲಾಗಿದೆ. 21 ಜಿಲ್ಲಾ ಪೊಲೀಸ್ ಘಟಕಗಳಲ್ಲಿ ತಲಾ ಎರಡು ಎಎಸ್ಪಿ ಹುದ್ದೆಗಳನ್ನು ಸೃಜಿಸಲಾಗಿದೆ.
ಹೆಚ್ಚುವರಿ ಪೊಲೀಸ್ ಅಧೀಕ್ಷಕರು 1 ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು 2 ಎಂದು ಹುದ್ದೆಗಳನ್ನು ವಿಂಗಡಿಸಲಾಗಿದ್ದು, ಅವರಿಗೆ ಕರ್ತವ್ಯ ಹಂಚಿಕೆ ಮಾಡಲಾಗಿದೆ.
ಎಎಸ್ಪಿ 1 ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ, ಬಂದೋಬಸ್ತ್, ಸಂಚಾರಕ್ಕೆ ಸಂಬಂಧಿಸಿದ ಎಲ್ಲಾ ಕರ್ತವ್ಯ ಸೇರಿ ಎಸ್.ಪಿ. ನಿರ್ದೇಶನದಂತೆ ಕಾರ್ಯನಿರ್ವಹಿಸುವುದು.
ಎಎಸ್ಪಿ 2 ಜಿಲ್ಲೆಯಲ್ಲಿ ಅಪರಾಧ, ನ್ಯಾಯಾಲಯಗಳ ವಿಚಾರಣೆ ನಿರ್ವಹಣೆ, ಡಿಎಆರ್ ಕೇಂದ್ರ ಕಚೇರಿ, ಜಿಲ್ಲಾ ಪೊಲೀಸ್ ಕಚೇರಿಗೆ ಸಂಬಂಧಿಸಿದ ವಿವಿಧ ಕರ್ತವ್ಯ ನಿರ್ವಹಣೆ ಸೇರಿ ಎಸ್.ಪಿ. ನಿರ್ದೇಶನದಂತೆ ಕಾರ್ಯನಿರ್ವಹಿಸುವುದು.
Posted by Vidyamaana on 2023-08-04 14:45:23 |
ಕಾಂಗ್ರೆಸ್ ನಾಯಕ (Congress le
non
er) ರಾಹುಲ್ ಗಾಂಧಿಗೆ (Rahul Gandhi) ಬಿಗ್ ರಿಲೀಫ್ ಸಿಕ್ಕಿದೆ. ಮೋದಿ ಜಾತಿ (Modi Surname) ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ (Supreme Court) ರಿಲೀಫ್ ನೀಡಿದೆ.ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, 2 ವರ್ಷಗಳ ಕಾಲದ ಜೈಲು ಶಿಕ್ಷೆಗೆ ತಡೆ ನೀಡಿದೆ. ಸತ್ಯಕ್ಕೆ ಯಾವತ್ತಿದ್ದರೂ ಗೆಲುವು ಸಿಕ್ಕೇ ಸಿಗುತ್ತದೆ ಎನ್ನುವ ಮೂಲಕ ಸುಪ್ರೀಂ ಕೋರ್ಟ್ ತೀರ್ಪನ್ನು ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ. ಮತ್ತೊಂದೆಡೆ ಇಂದು ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ವಿಜಯ ಅಂತ ರಾಹುಲ್ ಪರ ತೀರ್ಪಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (AICC president Mallikarjun Kharge) ಸಂತಸ ವ್ಯಕ್ತಪಡಿಸಿದ್ದಾರೆ. ಹಾಗಾದರೆ ಸುಪ್ರೀಂ ತೀರ್ಪಿನಿಂದ ರಾಹುಲ್ ಲೋಕಸಭಾ ಸದಸ್ಯತ್ವ ಮರಳಿ ಪಡೆಯುತ್ತಾರಾ? ರಾಹುಲ್ ಗಾಂಧಿ ಮತ್ತೆ ಸಂಸತ್ಗೆ ಬರುತ್ತಾರಾ? ಮತ್ತೆ ಸಂಸದ ಸ್ಥಾನ ಪಡೆಯುವ ಪ್ರಕ್ರಿಯೆ ಹೇಗಿರುತ್ತದೆ? ಒಂದಷ್ಟು ಮಾಹಿತಿ ಇಲ್ಲಿದೆ .ಏನಿದುಪ್ರಕರಣ?
2019ರ ಚುನಾವಣಾ ಪ್ರಚಾರದ ಸಂದರ್ಭದಲ್ಲಿ, ಕರ್ನಾಟಕದ ಕೋಲಾರದಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ ಸಾಮಾನ್ಯವಾಗಿ ಎಲ್ಲಾ ಕಳ್ಳರು ಮೋದಿ ಮನೆತನದ ಹೆಸರನ್ನು ಹೇಗೆ ಪಡೆದರು?ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಮತ್ತು ಮೋದಿ ಎಲ್ಲರೂ ಕಳ್ಳರು. ಮೋದಿ ಉಪನಾಮ ಹೊಂದಿರುವ ವ್ಯಕ್ತಿ ಕಳ್ಳನಾಗಲು ಹೇಗೆ ಸಾಧ್ಯ ಎಂದು ರಾಹುಲ್ ಗಾಂಧಿ ಅಲ್ಲಿನ ಜನರನ್ನು ಪ್ರಶ್ನಿಸಿದ್ದರು.
ರಾಹುಲ್ ವಿರುದ್ಧ ತೀರ್ಪುನೀಡಿದ್ದಕೋರ್ಟ್
ಇತ್ತ ಮೋದಿ ಕುಟುಂಬದ ಹೆಸರಿನ ಬಗ್ಗೆ ರಾಹುಲ್ ಗಾಂಧಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವಿಚಾರದಲ್ಲಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಏಪ್ರಿಲ್ 2019 ರಲ್ಲಿ, ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್ 499, 500 ಅಡಿಯಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ನಂತರ ಕಳೆದ ಮಾರ್ಚ್ 24, 2023 ರಂದು ಗುಜರಾತ್ ನ್ಯಾಯಾಲಯವು ಮಾನನಷ್ಟ ಆರೋಪದ ಮೇಲೆ ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
ರಾಹುಲ್ ಗಾಂಧಿಗೆ ಜೈಲು ಶಿಕ್ಷೆ ವಿಧಿಸಿದ್ದ ಕೋರ್ಟ್:
ಮಾನನಷ್ಟ ಮೊಕದ್ದಮೆಯಲ್ಲಿ 2 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಮೋದಿ ಜಾತಿ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಇದರ ವಿಚಾರಣೆ ನಡೆಸಿದ್ದ ಗುಜರಾತ್ನ ಸೂರತ್ ಕೋರ್ಟ್ ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
ಬಿಗ್ ರಿಲೀಫ್ ನೀಡಿದಸುಪ್ರೀಂ ಕೋರ್ಟ್
ಇದೇ ಪ್ರಕರಣದಲ್ಲಿ ರಾಹುಲ್ ಗಾಂಧಿ ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರಿಂ ಕೋರ್ಟ್, ರಾಹುಲ್ ಗಾಂಧಿಗೆ ವಿಧಿಸಿದ್ದ ಜೈಲು ಶಿಕ್ಷೆಗೆ ತಡೆಯಾಜ್ಞೆ ನೀಡಿದೆ.
ಸುಪ್ರೀಂ ತೀರ್ಪಿನಲ್ಲಿ ಹೇಳಿದ್ದೇನು?
ಜೈಲು ಶಿಕ್ಷೆಗೆ ತಡೆ ನೀಡಿದ್ದರೂ, ರಾಹುಲ್ ಗಾಂಧಿ ಅವರ ಹೇಳಿಕೆ ಬಗ್ಗೆ ಕೋರ್ಟ್ ಆಕ್ಷೇಪಿಸಿದೆ. ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗಳು ಉತ್ತಮ ಅಭಿರುಚಿ ಹೊಂದಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಅದಲ್ಲದೇ ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಧೀಶರು ಎರಡು ವರ್ಷಗಳ ಶಿಕ್ಷೆಯನ್ನು ನೀಡಿರುವುದಕ್ಕೆ ಪೀಠ ಆಕ್ಷೇಪಿಸಿದೆ. ಶಿಕ್ಷೆಯ ಅವಧಿ ಒಂದು ದಿನ ಕಡಿಮೆಯಿದ್ದರೂ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹರಾಗುತ್ತಿದ್ದಿಲ್ಲ ಎಂಬುದನ್ನು ಸುಪ್ರೀಂ ಕೋರ್ಟ್ ಗಮನಿಸಿದ್ದಾಗಿ ತಿಳಿಸಿದೆ. ಅರ್ಜಿದಾರರು ಅಂದರೆ ರಾಹುಲ್ ಗಾಂಧಿ ಭಾಷಣ ಮಾಡುವಾಗ ಜಾಗೃತೆಯಾಗಿರಬೇಕು ಎಂದೂ ತಿಳಿಸಿದೆ.
ಮತ್ತೆ ಸಂಸದ ಸ್ಥಾನ ಪಡೆಯುತ್ತಾರಾ ರಾಹುಲ್ ಗಾಂಧಿ?
ಇದೀಗ ರಾಹುಲ್ ಗಾಂಧಿ ಹಾದಿ ಸುಗಮವಾಗಿದೆ. ಸದ್ಯಕ್ಕೆ ಕಾನೂನು ಕಂಟಕದಿಂದ ರಾಹುಲ್ ಗಾಂಧಿ ತಪ್ಪಿಸಿಕೊಂಡಿದ್ದಾರೆ. ಹೀಗಾಗಿ ಅವರು ತಾವು ಗೆದ್ದು ಬಂದಿದ್ದ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಸಂಸದನಾಗಿಮುಂದುವರೆಯಬಹುದಾಗಿದೆ.
ಲೋಕಸಭೆಗೆ ಪ್ರಮಾಣ ಪತ್ರ ಸಲ್ಲಿಸಬೇಕು
ರಾಹುಲ್ ಗಾಂಧಿ ಈ ಬಗ್ಗೆ ಲೋಕಸಭಾ ಕಾರ್ಯದರ್ಶಿಗೆ ಪ್ರಮಾಣ ಪತ್ರವನ್ನು ಸಲ್ಲಿಸಬೇಕಿದೆ. ತಮ್ಮ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಲೋಕಸಭಾ ಕಾರ್ಯದರ್ಶಿಗೆ ತಿಳಿಸಬೇಕಿದೆ. ಜೊತೆಗೆ ಸಂಬಂಧಿಸಿದ ದಾಖಲೆಗಳು, ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕಿದೆ. ಅದನ್ನು ಪರಿಶೀಲಿಸಲು ಕಾರ್ಯದರ್ಶಿಗಳು ಸಮಯಾವಕಾಶ ತೆಗೆದುಕೊಳ್ಳಬುಹುದು. ಅದಾದ ಬಳಿಕ ಲೋಕಸಭಾ ಕಾರ್ಯದರ್ಶಿ ಪರಿಶೀಲನೆ ನಡೆಸಿ, ಅನರ್ಹತೆಯನ್ನು ಹಿಂಪಡೆಯುತ್ತದೆ.
ಮತ್ತೆ ಚುನಾವಣೆಗೆ ಸ್ಪರ್ಧಿಸಬಹುದು ರಾಹುಲ್ ಗಾಂಧಿ
ಲೋಕಸಭಾ ಕಾರ್ಯದರ್ಶಿ ಪ್ರಮಾಣ ಪತ್ರ ನೀಡಿದ ಬಳಿಕ ರಾಹುಲ್ ಗಾಂಧಿ ತಾವು ಪ್ರತಿನಿಧಿಸುವ ಕೇರಳದ ವಯನಾಡು ಕ್ಷೇತ್ರದ ಸಂಸದರಾಗಿ ಮುಂದುವರೆಯಬಹುದು. ಬಳಿಕ ಮುಂದಿನ ಬಾರಿ ಲೋಕಸಭಾ ಚುನಾವಣೆಗೂ ಕೂಡ ಸ್ಪರ್ಧೆ ಮಾಡಬಹುದಾಗಿದೆ
Posted by Vidyamaana on 2024-05-29 06:03:09 |
ಪುತ್ತೂರು: ಈ ಬಾರಿಯ ಎಂಎಲ್ಸಿ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕ ಕ್ಷೇತ್ರ ಎರಡರಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಯಾಗಬೇಕು ಇದಕ್ಕಾಗಿ ಕಾರ್ಯಕರ್ತರು ತಳಮಟ್ಟದಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಪುತ್ತೂರಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಪದವೀಧಶರ ಕ್ಷೇತ್ರದಿಂದ ಸ್ಪರ್ದೆ ಮಾಡುತ್ತಿರುವ ಆಯನೂರು ಮಂಜುನಾಥ್ ಅವರು ಓರ್ವ ಸಜ್ಜನ ಮತ್ತು ವಿದ್ಯಾವಂತ ರಾಜಕಾರಣಿಯಾಗಿದ್ದು ಈ ಹಿಂದೆಯೂ ಹಲವಾರು ಅಭಿವೃದ್ದಿ ಕೆಲಸಗಳನ್ನು ಮಾಡುವ ಮೂಲಕ ರಾಜ್ಯದಲ್ಲಿ ಚಿರಪರಿಚಿತ ನಾಯಕರಾಗಿದ್ದಾರೆ. ಜನರ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲವರಾಗಿರುವ ಇವರು ಎಂಥಾ ಸನ್ನಿವೇಶದಲ್ಲೂ ಸಮಸ್ಯೆಗಳನ್ನು ಎದುರಿಸುವ ಶಕ್ತಿ ಇದ್ದು ಬಡವರ ಬಗ್ಗೆ ಅಪಾರ ಕಾಳಜಿಇರುವ ನಾಯಕರಾಗಿದ್ದು ಇವರಿಗೆ ಪುತ್ತೂರಿನಲ್ಲಿ ಹೆಚ್ಚು ಮತ ಚಲಾವಣೆಯಾಗುವಂತೆ ನಾವು ಕಾರ್ಯಪೃವೃತ್ತರಾಗಬೇಕಿದೆ ಎಂದು ಹೇಳಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ವಲಯ ಮಟ್ಟದಲ್ಲಿ ಕಾರ್ಯಕರ್ತರು ಮತದಾರನ ಬಳಿ ತೆರಳಿ ಮತಯಾಚನೆ ಮಾಡುವಂತೆ ಶಾಸಕರು ಮನವಿ ಮಾಡಿದರು.
Posted by Vidyamaana on 2023-09-30 22:09:16 |
ಪುತ್ತೂರು; ಅಧಿಕಾರದಲ್ಲಿರುವವರು ನ್ಯಾಯ ಪಾಲಿಸಬೇಕು, ರಾಜಧರ್ಮ ಪಾಲಿಸಬೇಕಾಗಿರುವುದು ಕರ್ತವ್ಯವೂ ಆಗಿದೆ ಆದರೆ ಕೆಲವರು ಆ ಕರ್ತವ್ಯವನ್ನು ಮರೆತು ಅಧಿಕಾರ ಅನುಭವಿಸಿದವರೂ ಇದ್ದಾರೆ . ಆದರೆ ಪುತ್ತೂರು ಶಾಸಕರು ಈ ವಿಚಾರದಲ್ಲಿ ತಮ್ಮ ಕರ್ತವ್ಯವನ್ನು ಮರೆತಿಲ್ಲ. ತನ್ನ ಸಹೋದರಿ ನಳಿನಿ ಶೆಟ್ಟಿ ಶನಿವಾರದಂದು ಶಾಸಕರನ್ನು ಭೇಟಿಯಾಗಲು ಶಾಸಕರ ಕಚೇರಿಗೆ ಬಂದಿದ್ದರು. ಶಾಸಕರನ್ನು ಭೇಟಿಯಾಗಲು ಬಂದಿರುವ ಸಾರ್ವಜನಿಕರ ಸಂಖ್ಯೆಯೂ ಅಪಾರವಾಗಿತ್ತು. ತನ್ನ ಸಹೋದರಿ ತನಗಾಗಿ ಕಾಯುತ್ತಿದ್ದಾರೆ ಎಂಬ ವಿಚಾರ ಶಾಸಕರಿಗೆ ಗೊತ್ತಿತ್ತು. ಆದರೆ ಶಾಸಕರು ತನ್ನ ಸಹೋದರಿಯನ್ನು ಕರೆಯಲಿಲ್ಲ.ಸರತಿ ಸಾಲಿನಲ್ಲೇ ಬಂದ ನಳಿನಿ ಶೆಟ್ಟಿಯವರು ಅರ್ಜಿ ಸಲ್ಲಿಸಿ ಅಲ್ಲಿಂದ ತೆರಳಿದರು.ಶಾಸಕರ ಈ ನ್ಯಾಯದ ನಡೆ ಅಲ್ಲಿದ್ದವರಿಗೆ ಶಾಸಕರ ಬಗ್ಗೆ ಗೌರವ ಹೆಚ್ಚಾಗುವಂತೆ ಮಾಡಿತು