ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಸುದ್ದಿಗಳು News

Posted by vidyamaana on 2024-07-25 06:35:41 |

Share: | | | | |


ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್‌ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.

ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.

ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್‌ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್‌ಐ ಹೇಳಿದ್ದಾರೆ.

 Share: | | | | |


ಬಪ್ಪಳಿಗೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವಿನ ರಕ್ಷಣೆ

Posted by Vidyamaana on 2023-09-26 21:54:16 |

Share: | | | | |


ಬಪ್ಪಳಿಗೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವಿನ ರಕ್ಷಣೆ

ಪುತ್ತೂರು: ಇಲ್ಲಿನ ಬಪ್ಪಳಿಗೆ ಎಂಬಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದನನ್ನ ಹಿಡಿದು ರಕ್ಷಣೆ ಮಾಡಲಾಗಿದೆ. ಬಪ್ಪಳಿಗೆ ಪರಿಸರದ ಜನನಿಬಿಡ ಪ್ರದೇಶ ರಸ್ತೆಯಲ್ಲಿ ಅಡ್ಡಲಾಗಿದ್ದ ಹೆಬ್ಬಾವನ್ನ ಕಂಡು ಯುವಕನೋರ್ವ ಬೆಚ್ಚಿ ಬಿದ್ದಿದ್ದಾನೆ.  ಬಳಿಕ ಸ್ನೇಕ್ ರಾಜೇಶ್ ನೂಜಿ ಅವರನ್ನ ಕರೆದು ಹೆಬ್ಬಾವನ್ನ ಹಿಡಿದು ರಕ್ಷಣೆ ಮಾಡಿ ಅರಣ್ಯವಲಯಕ್ಕೆ ಬಿಡಲಾಗಿದೆ.

ಮಂಗಳೂರು : ಕುದ್ರೋಳಿಯಲ್ಲಿ ಇನಾರ ಮೆಡಿಕಲ್ ಶುಭಾರಂಭ

Posted by Vidyamaana on 2023-07-21 01:42:10 |

Share: | | | | |


ಮಂಗಳೂರು : ಕುದ್ರೋಳಿಯಲ್ಲಿ  ಇನಾರ ಮೆಡಿಕಲ್ ಶುಭಾರಂಭ

 ಮಂಗಳೂರಿನ ಹೃದಯ ಭಾಗದಲ್ಲಿರುವ ಕುದ್ರೋಳಿಯ ಜಿ ಟಿ ರಸ್ತೆಯಲ್ಲಿ ನೂತನವಾಗಿ ಆರಂಭಗೊಂಡ ಇನಾರ ಮೆಡಿಕಲ್ ಇದರ ಉದ್ಘಾಟನೆಯನ್ನು ಜು.17 ರಂದು ನಡುಪಳ್ಳಿ ಜುಮಾ ಮಸೀದಿಯ ಖತೀಬರಾದ ಮೌಲಾನ ರಿಯಾಝ್ ಫೈಝಿ ಕಕ್ಕಿಂಜೆ ನೆರವೇರಿಸಿದರು.


ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸ್ಥಳೀಯ ಮ.ನ.ಪಾ ಸದಸ್ಯರಾದ ಶಂಶುದ್ದೀನ್ ಹೆಚ್.ಬಿ.ಟಿ ,ಎಸ್.ಡಿ.ಪಿ.ಐ ಕುದ್ರೋಳಿ ವಾರ್ಡ್ ಅಧ್ಯಕ್ಷರಾದ ಮುಝೈರ್ ಕುದ್ರೋಳಿ ,ಸಾಮಾಜಿಕ ಕಾರ್ಯಕರ್ತರಾದ ಖಾದರ್ ಇಡ್ಯ ಮತ್ತಿತರರು ಭಾಗವಹಿಸಿ ಶುಭ ಹಾರೈಸಿದರು.


ಇನಾರ ಮೆಡಿಕಲ್ ಮಾಲಕರಾದ ಮುಹಮ್ಮದ್ ಸಮೀರ್ ಸರ್ವರನ್ನು ಸ್ವಾಗತಿಸಿ ನಮ್ಮಲ್ಲಿ ವೈದ್ಯಕೀಯ ವಿಭಾಗಕ್ಕೆ ಸಂಬಂಧಿಸಿದ ಎಲ್ಲಾ ಔಷಧಿಗಳು,ಸುಸಜ್ಜಿತ ವೈದ್ಯಕೀಯ ಸಲಕರಣೆಗಳು ಹಾಗೂ ಇನ್ನಿತರ ವೈದ್ಯಕೀಯ ರಂಗಕ್ಕೆ ಸಂಬಂಧಿಸಿದ  ವಿವಿಧ ಉಪಕರಣಗಳು ನಮ್ಮಲ್ಲಿ ಲಭ್ಯವಿದ್ದು 2 ಕಿ.ಮೀ ಅಂತರದ ಒಳಗೆ ಗ್ರಾಹಕರ ಮನೆ ಬಾಗಿಲಿಗೆ ಉತ್ಪನ್ನಗಳನ್ನು ತಲುಪಿಸುವ ಸೇವೆಯು ನೀಡಲಿದ್ದೇವೆ ಎಂದು ತಿಳಿಸಿ ಎಲ್ಲರ ಸಹಕಾರ ಕೋರಿದರು.

ಜಿಎಲ್ ಶಾಪಿಂಗ್ ಹಬ್ಬ ವರುಷದ ಹರುಷಕ್ಕೆ ಚಾಲನೆ

Posted by Vidyamaana on 2023-04-03 09:07:30 |

Share: | | | | |


ಜಿಎಲ್ ಶಾಪಿಂಗ್ ಹಬ್ಬ ವರುಷದ ಹರುಷಕ್ಕೆ ಚಾಲನೆ

ಪುತ್ತೂರು: ಜಿಎಲ್ ಶಾಪಿಂಗ್ ಹಬ್ಬ ವರುಷದ ಹರುಷಕ್ಕೆ ಏ. 3ರಂದು ಚಾಲನೆ ನೀಡಲಾಯಿತು.

ಏ. 9ರವರೆಗೆ ನಡೆಯಲಿರುವ ಈ ಹಬ್ಬ, ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ಎಲ್ಲಾ ಶಾಖೆಗಳಲ್ಲೂ ನಡೆಯಲಿದೆ.

ರಾಜಶೇಖರ್ ಕೋಟ್ಯಾನ್ ವಿರುದ್ಧ ವಂಚನೆ ಆರೋಪ

Posted by Vidyamaana on 2023-09-29 15:19:39 |

Share: | | | | |


ರಾಜಶೇಖರ್ ಕೋಟ್ಯಾನ್ ವಿರುದ್ಧ ವಂಚನೆ ಆರೋಪ

ಪುತ್ತೂರು : ರಾಜಶೇಖರ್ ಕೋಟ್ಯಾನ್ ಎಂಬವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಂಚನೆ ಆರೋಪಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಪುತ್ತಿಲ ಪರಿವಾರ ಸ್ಪಷ್ಟೀಕರಣ ನೀಡಿದೆ.


2023ರ ಪುತ್ತೂರು ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ಒತ್ತಾಯದಂತೆ ಪಕ್ಷೇತರರಾಗಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರು ಸ್ಪರ್ಧಿಸಿದರು.


ಚುನಾವಣೆಯ ಸಂದರ್ಭ ಕೇವಲ 20 ದಿನದಲ್ಲಿ ನಡೆದ ಪ್ರಚಾರ ಕಾರ್ಯದಲ್ಲಿ ತಾಲೂಕು, ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾವಿರಾರು ಕಾರ್ಯಕರ್ತರು ದುಡಿದಿರುವವರಲ್ಲಿ ನೇರಳಕಟ್ಟೆಯ ರಾಜಶೇಖರ್ ಕೋಟ್ಯಾನ್ ಕೂಡ ಓರ್ವರು.


ಇದೀಗ ಸಾಮಾಜಿಕ ಜಾಲತಾಣದಲ್ಲಿ ರಾಜಶೇಖರ್ ಕೋಟ್ಯಾನ್ ವಿರುದ್ಧ ಕೆಲವು ಆರೋಪಗಳು ಕೇಳಿ ಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ವಿಷಯ ಕರ್ನಾಟಕದ ಹಗರಿಬೊಮ್ಮನಹಳ್ಳಿಯ ಕ್ಷೇತ್ರದ ರಾಷ್ಟ್ರೀಯ ಪಕ್ಷದ ಟಿಕೇಟ್ ವಿಷಯದಲ್ಲಿ ನಾಯಕರ ನಡುವೆ ಚುನಾವಣಾ ಪೂರ್ವ ವ್ಯವಹಾರವಾಗಿದ್ದು, ಆ ಆರೋಪದಲ್ಲಿ ಪುತ್ತಿಲ ಪರಿವಾರದ ಹೆಸರು ಪ್ರಸ್ತಾಪವಾಗಿರುವುದರಿಂದ ಸ್ಪಷ್ಟನೆ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಬಂದ ದೂರಿನ ಪ್ರತಿಯಲ್ಲಿಯೂ ಪುತ್ತಿಲ ಪರಿವಾರದ ಬಗ್ಗೆ ಉಲ್ಲೇಖವಿಲ್ಲ. ಅವರ ವೈಯಕ್ತಿಕ ವ್ಯವಹಾರಕ್ಕೂ ನಮ್ಮ ಪುತ್ತಿಲ ಪರಿವಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪುತ್ತಿಲ ಪರಿವಾರ ತಿಳಿಸಿದೆ.

ವಿದ್ಯುತ್‌ ಕಂಬ ಏರಿದ ಹೆಬ್ಬಾವು; ತಂತಿ ಸ್ಪರ್ಶಿಸಿ ಸಾವು

Posted by Vidyamaana on 2024-07-16 21:54:55 |

Share: | | | | |


ವಿದ್ಯುತ್‌ ಕಂಬ ಏರಿದ ಹೆಬ್ಬಾವು; ತಂತಿ ಸ್ಪರ್ಶಿಸಿ ಸಾವು

ಉಳ್ಳಾಲ: ವಿದ್ಯುತ್‌ ಕಂಬ ಏರಿದ ಬೃಹತ್‌ ಗಾತ್ರದ ಹೆಬ್ಬಾವು ವಿದ್ಯುತ್‌ ಶಾಕ್‌ ತಗಲಿ ಸಾವನ್ನಪ್ಪಿರುವ ಘಟನೆ ಮುಕ್ಕಚ್ಚೇರಿ ಹೈದರಾಲಿ ರೋಡ್‌ ಎಂಬಲ್ಲಿ ನಡೆದಿದ್ದು, ಸ್ಥಳೀಯರು ಹಾಗೂ ಮೆಸ್ಕಾಂ ಸಿಬ್ಬಂದಿ ಕಳೇಬರವನ್ನು ಕಂಬದಿಂದ ಕೆಳಗಿಳಿಸಿದ್ದಾರೆ.

ಹೆಬ್ಬಾವು ವಿದ್ಯುತ್‌ ತಂತಿ ಸಮೀಪವೇ ಇರುವ ತೆಂಗಿನ ಮರದ ಮೂಲಕ ಮರವನ್ನೇರಿರುವ ಶಂಕೆ ಇದೆ. ಅಲ್ಲಿಂದ ವಿದ್ಯುತ್‌ ಕಂಬದ ಮೇಲೆ ದಾಟುವಾಗ ವಿದ್ಯುತ್‌ ಶಾಕ್‌ ತಗಲಿ ಅಲ್ಲೇ ಮೃತಪಟ್ಟಿರುವ ಶಂಕೆಯಿದೆ.

ಉಪ್ಪಿನಂಗಡಿ : ಶಿರಾಡಿ ಘಾಟಿಯಲ್ಲಿ ಅಕ್ಕಿ ಸಾಗಟದ ಲಾರಿಗೆ ಬೆಂಕಿ - ಲಕ್ಷಾಂತರ ನಷ್ಟ

Posted by Vidyamaana on 2023-10-21 12:35:31 |

Share: | | | | |


ಉಪ್ಪಿನಂಗಡಿ : ಶಿರಾಡಿ ಘಾಟಿಯಲ್ಲಿ ಅಕ್ಕಿ ಸಾಗಟದ ಲಾರಿಗೆ ಬೆಂಕಿ -  ಲಕ್ಷಾಂತರ  ನಷ್ಟ

ಉಪ್ಪಿನಂಗಡಿ : ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ (Shir

non

i Ghat) ಸಂಭವಿಸಿದೆ.ಶಿರಾಡಿ ಘಾಟ್ ನ ಡಬಲ್ ಟರ್ನ್ ನಲ್ಲಿ ಟ್ರಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Seemore ವಿಡಿಯೋ ನೋಡಲು ಕ್ಲಿಕ್ ಮಾಡಿ 

ಉಪ್ಪಿನಂಗಡಿ : ಶಿರಾಡಿ ಘಾಟಿಯಲ್ಲಿ ಅಕ್ಕಿ ಸಾಗಟದ ಲಾರಿಗೆ ಬೆಂಕಿ - ಲಕ್ಷಾಂತರ ನಷ್ಟ


ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆ ಲಾರಿ ಚಾಲಕ ಹಾಗೂ ಕ್ಲೀನರ್, ಲಾರಿಯನ್ನು ನಿಲ್ಲಿಸಿ ಕೆಳಗಿಳಿದು ಪಾರಾಗಿದ್ದಾರೆ.ಲಾರಿ ಹಾಗೂ ಅದರಲ್ಲಿದ್ದ ಅಕ್ಕಿ ಸಂಪೂರ್ಣ ಸುಟ್ಟು ಹೋಗಿದೆ. ಹಾಸನದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಆದರೂ ಲಾರಿ ಅಕ್ಕಿ ಸಮೇತ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೂ ಕೆಲ ಹೊತ್ತು ಅಡಚಣೆ

ಉಂಟಾಗಿತ್ತು ಎಂದು ತಿಳಿದುಬಂದಿದೆ.

Recent News


Leave a Comment: