ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಸುದ್ದಿಗಳು News

Posted by vidyamaana on 2024-07-24 19:54:18 |

Share: | | | | |


ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.

ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ

 Share: | | | | |


ಅಯೋಧ್ಯೆ ರಾಮ ಮಂದಿರ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚನೆ: ಯೋಗಿಗೆ ವಿಎಚ್‌ಪಿ ದೂರು

Posted by Vidyamaana on 2023-12-31 16:45:19 |

Share: | | | | |


ಅಯೋಧ್ಯೆ ರಾಮ ಮಂದಿರ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚನೆ: ಯೋಗಿಗೆ ವಿಎಚ್‌ಪಿ ದೂರು

ನವದೆಹಲಿ: ಅಯೋಧ್ಯೆ ರಾಮ ಮಂದಿರ ಟ್ರಸ್ಟ್‌ನ ಹೆಸರಿನಲ್ಲಿ ಕೆಲವರು ಯಾವುದೇ ಅನುಮೋದನೆ ಪಡೆಯದೆ ಹಣ ವಸೂಲಿ ಮಾಡುತ್ತಿದ್ದಾರೆ. ಈ ಸಂಬಂಧ ಉತ್ತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರಕ್ಕೆ ದೂರು ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಭಾನುವಾರ ಹೇಳಿದೆ.ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟ್ ಹೆಸರಿನಲ್ಲಿ ಜನರನ್ನು ಮೋಸ ಮಾಡಲು ಪ್ರಯತ್ನಿಸಲಾಗುತ್ತಿದೆ. ಅವರ ಬಲೆಗೆ ಬೀಳದಂತೆ ವಿಎಚ್‌ಪಿ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಜನರನ್ನು ಎಚ್ಚರಿಸಿದ್ದಾರೆ. ಅಲ್ಲದೇ ಉತ್ತರ ಪ್ರದೇಶ ಪೊಲೀಸರಿಗೆ ನೀಡಿದ ದೂರಿನ ಪ್ರತಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಅದರ ಪ್ರತಿಯನ್ನು ಸಿಎಂ ಆದಿತ್ಯನಾಥ್ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಟ್ಯಾಗ್‌ ಮಾಡಿದ್ದಾರೆ.ಎಚ್ಚರ! ಕೆಲವರು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ನಕಲಿ ಗುರುತಿನ ಚೀಟಿ ಮೂಲಕ ಜನರನ್ನು ವಂಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬನ್ಸಾಲ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.


ಈ ಬಗ್ಗೆ ತಕ್ಷಣದ ಕ್ರಮ ಕೈಗೊಳ್ಳುವಂತೆ ನಾವು ಉತ್ತರ ಪ್ರದೇಶ ಡಿಜಿಪಿ, ಲಖನೌ ವಲಯ ಐಜಿಗೆ ಔಪಚಾರಿಕ ದೂರು ನೀಡಿದ್ದೇವೆ ಎಂದು ಬನ್ಸಾಲ್ ಮತ್ತೊಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.


ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯುವ ರಾಮನ ಮೂರ್ತಿ ಪ್ರತಿಷ್ಠಾಪನೆ ಸಮಾರಂಭಕ್ಕೆ ಹಣವನ್ನು ಸಂಗ್ರಹಿಸಲು ಯಾರಿಗೂ ಅನುಮತಿ ನೀಡಲಾಗಿಲ್ಲ ಎಂದು ವಿಎಚ್‌ಪಿ ಇತ್ತೀಚೆಗೆ ಹೇಳಿತ್ತು.


ಶ್ರೀರಾಮ ದೇಗುಲದಲ್ಲಿ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ನಿಧಿ ಸಂಗ್ರಹಿಸಲು, ಪ್ರತ್ಯೇಕ ಸಮಿತಿ ರಚಿಸಲು ಮತ್ತು ರಶೀದಿಗಳನ್ನು ಮುದ್ರಿಸಲು ಯಾರಿಗೂ ಅನುಮತಿ ನೀಡಲಾಗಿಲ್ಲ ಎಂದು ವಿಎಚ್‌ಪಿ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಹೇಳಿದ್ದಾರೆ.

ಮಾಣಿ ಟು ಸಂಪಾಜೆ ಶೀಘ್ರವೇ ಫೋರ್ ವೇ

Posted by Vidyamaana on 2023-11-04 08:34:52 |

Share: | | | | |


ಮಾಣಿ ಟು ಸಂಪಾಜೆ ಶೀಘ್ರವೇ ಫೋರ್ ವೇ

ಪುತ್ತೂರು: ಮಾಣಿ-ಸಂಪಾಜೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ೨೨೦೦ ಕೋಟಿ ರೂ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ಮುಂದಿನ ನಾಲ್ಕು ವರ್ಷದೊಳಗೆ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲಿದ್ದು ಈ ಭಾಗದ ಜನತೆಯ ಬಹುವರ್ಷಗಳ ಕನಸು ನನಸಾಗುವ ಕಾಲ ಬಂದಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.

ಮಾಣಿಯಿಂದ ಸಂಪಾಜೆ ತನಕ ೭೬ ಕಿ ಮೀ ರಸ್ತೆಯು ಮುಂದಿನ ದಿನಗಳಲ್ಲಿ ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಲಿದೆ. ೭೬ ಕಿ ಮಿ ರಸ್ತೆ ಕಾಮಗಾರಿಗೆ ಮೊದಲ ಹಂತದಲ್ಲಿ ೧೧೦೦ ಕೋಟಿ ರೂ ಮತ್ತು ಎರಡನೇ ಹಂತದಲ್ಲಿ ೧೧೦೦ ಕೋಟಿ ರೂ ಒಟ್ಟು ೨೨೦೦ ಕೋಟಿ ರೂ ಗಳ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ.

ಕಳೇದ ಕೆಲದಿನಗಳ ಹಿಂದೆ ಚತುಷ್ಪಥ ರಸ್ತೆ ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ಜೊತೆ ಶಾಸಕರಾದ ಅಶೋಕ್ ರೈ ಹಾಗೂ ಮಂಗಳೂರು ಸಂಸದ ನಳಿನ್‌ಕುಮಾರ್ ಕಟೀಲ್ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ ಮಾಣಿಯಿಂದ ಪುತ್ತೂರು ವರೆಗೆ ಚತುಷ್ಪಥ ರಸ್ತೆ ಕಾಮಗಾರಿಯ ವಿಚಾರವೂ ಚರ್ಚೆಯಾಗಿತ್ತು. ಆ ಬಳಿಕ ಕೇಂದ್ರ ಹೆದ್ದಾರಿ ಪ್ರಾಧಿಕಾರ ರೀಜನಲ್ ಮೆನೆಜರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಶಾಸಕರು ಮತ್ತು ಸಂಸದರು ಚರ್ಚೆ ನಡೆಸಿದ್ದರು. ಇದೀಗ ಮಾಣಿಯಿಂದ ಸಂಪಾಜೆ ತನಕ ಚತುಷ್ಪಥ ಕಾಮಗಾರಿಗೆ ಹೆದ್ದಾರಿ ಪ್ರಾಧಿಕಾರ ಒಪ್ಪಿಕೊಂಡಿದ್ದು ಇದಕ್ಕೆ ಬೇಕಾದ ಎಲ್ಲಾ ಯೋಜನಾ ವರದಿಯನ್ನು ಸಿದ್ದಪಡಿಸಿಕೊಳ್ಳಲು ಮುಂದಾಗಿದೆ.

ಮಾಣಿಯಿಂದ ಸಂಪಾಜೆ ತನಕ ಭೂ ಒತ್ತುವರಿ ಪ್ರಕ್ರಿಯೆ, ಸೇತುವೆ ಕಾಮಗಾರಿ ಸೇರಿದಂತೆ ರಸ್ತೆ ಅಗಲೀಕರಣಕ್ಕೆ ಬೇಕಾದ ಎಲ್ಲಾ ಯೋಜನೆಗಳನ್ನು ಸಿದ್ದಪಡಿಸಲಾಗುತ್ತಿದ್ದು ಮುಂದಿನ ನಾಲ್ಕು ತಿಂಗಳೊಳಗೆ ಈ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಳ್ಳಲಿದೆ. ಬಳಿಕ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು ಮುಂದಿನ ನಾಲ್ಕು ವರ್ಷದೊಳಗೆ ಈ ಕಾಮಗಾರಿ ಪೂರ್ಣಗೊಳ್ಳಲಿದ್ದು ಮಾಣಿಯಿಂದ ಸಂಪಾಜೆ ತನಕ ಪೂರ್ಣ ಪ್ರಮಾಣದ ಚತುಷ್ಪಥ ರಸ್ತೆ ನಿರ್ಮಾಣವಾಗಲಿದೆ.


೨ ಫೈಓವರ್ ೧ ಅಂಡರ್‌ಪಾಸ್

ಬೈಪಾಸ್ ಹಾಗೂ ದರ್ಬೆಯ ಬಳಿ ಫ್ಲೈ ಓವರ್ ನಿರ್ಮಾಣವಾಗಲಿದೆ ಮತ್ತು ವಿವೇಕಾನಂದ ವಿದ್ಯಾ ಸಂಸ್ಥೆಯ ಬಳಿ ಅಂಡರ್‌ಪಾಸ್ ನಿರ್ಮಾಣವಾಗಲಿದೆ. ವಿದ್ಯಾರ್ಥಿಗಳ ಹಿತ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಅಂಡರ್‌ಪಾಸ್ ನಿರ್ಮಾಣ ಮಾಡಲಾಗುತ್ತದೆ. ಉಳಿದಂತೆ ಮಾಣಿಯಿಂದ ಸಂಪಾಜೆ ತನಕ ಅಗತ್ಯ ಇರುವ ಕಡೆಗಳಲ್ಲಿ ಫ್ಲೈ ಓವರ್ ಮತ್ತು ಅಂಡರ್ ಪಾಸ್ ಕಾಮಗಾರಿ ನಡೆಯಲಿದೆ.


ಕಿ ಮೀ ಕಡಿತವಾಗಲಿದೆ

ಮಾಣಿಯಿಂದ ಸಂಪಾಜೆ ತನಕ ಚತುಷ್ಪಥ ರಸ್ತೆ ನಿರ್ಮಾಣವಾದಲ್ಲಿ ರಸ್ತೆಯು ನೇರವಾಗಿ ನಿರ್ಮಾಣವಾಗಲಿರುವ ಕಾರಣ ಕಿ ಮಿ ಅಂತರವೂ ಕಡಿಮೆಯಾಗುವ ಸಾಧ್ಯತೆ ಇದೆ.



ಶಾಸಕನಾಗಿ ಆಯ್ಕೆಯಾದ ಮೊದಲ ದಿನದಂದೇ ಚತುಷ್ಪಥ ರಸ್ತೆಯ ಕನಸು ಕಂಡಿದ್ದೆ. ಆ ಬಳಿಕ ನಾನು ಅದರ ಬಗ್ಗೆ ಮಾಹಿತಿ ಕಲೆ ಹಾಕಲು ಹೆದ್ದಾರಿ ಪ್ರಾಧಿಕಾರದ ದೆಹಲಿ ಮತ್ತು ಬೆಂಗಳೂರು ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಚರ್ಚಿಸಿದ್ದೆ. ಇದೀಗ ನಾನು ಮತ್ತು ಸಂಸದ ನಳಿನ್‌ಕುಮಾರ್ ಕಟೀಲ್ ಕಾಮಗಾರಿಗೆ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಿದ್ದೇವೆ. ಪ್ರಸ್ತಾವನೆಗೆ ಕೇಂದ್ರದ ಒಪ್ಪಿಗೆ ದೊರಕಿದ್ದು ಮುಂದೆ ಯೋಜನಾ ವರದಿ ಸಿದ್ದಗೊಂಡ ಬಳಿಕ ಕಾಮಗಾರಿ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಒಟ್ಟು ಎರಡು ಹಂತದಲ್ಲಿ ೨೨೦೦ ಕೋಟಿ ರೂ ಅನುದಾನಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗಿದ್ದು ಸುಮಾರು ೩೦೦೦ ಕೋಟಿ ರೂ ವೆಚ್ಚದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ. ಅಭಿವೃದ್ದಿಗಾಗಿ ನಾನು ಮತ್ತು ನಳಿನ್‌ಕುಮಾರ್ ಕಟೀಲ್ ಜೊತೆಯಾಗಿ ಈ ವಿಚಾರದಲ್ಲಿ ಕೆಲಸ ಮಾಡಿದ್ದೇವೆ . ಅಭಿವೃದ್ದಿಯಲ್ಲಿ ಯಾವುದೇ ರಾಜಕೀಯ ಇಲ್ಲ. ಜನತೆಯ ಬಹುವರ್ಷಗಳ ಕನಸು ಮತ್ತು ನನ್ನ ಕನಸು ನನಸಾಗಿದ್ದು ಇದು ಬಹಳ ಸಂತೋಷದ ವಿಚಾರವಾಗಿದೆ


ಅಶೋಕ್ ರೈ, ಶಾಸಕರು ಪುತ್ತೂರು

ಪುತ್ತೂರು ಕೋಟಿ ಚೆನ್ನಯ್ಯ ಜೋಡುಕರೆ ಕಂಬಳಕ್ಕೆ ಕರೆ ಮೂಹೂರ್ತ

Posted by Vidyamaana on 2021-07-07 18:30:00 |

Share: | | | | |


ಪುತ್ತೂರು ಕೋಟಿ ಚೆನ್ನಯ್ಯ ಜೋಡುಕರೆ ಕಂಬಳಕ್ಕೆ ಕರೆ ಮೂಹೂರ್ತ

ಪುತ್ತೂರು: ಇತಿಹಾಸ ಪ್ರಸಿದ್ಧ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಡಿ.೧೨ರಂದು ಕರೆ ಮುಹೂರ್ತ ನಡೆಯಿತು. ಜ. ೨೮ ಮತ್ತು ೨೯ರಂದು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ೩೦ನೇ ವರ್ಷದ ಕಂಬಳ ಈ ಬಾರಿ ನಡೆಯಲಿದೆ.


ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಕಂಬಳ ಸಮಿತಿ ಸಂಚಾಲಕ ಸುಧಾಕರ ಶೆಟ್ಟಿ ನೇತೃತ್ವದಲ್ಲಿ ಮೂಲ ನಾಗನ ಕಟ್ಟೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಅವರು ಹಾರೆಯ ಮೂಲಕ ಮಣ್ಣು ತೆಗೆದು, ಕರೆ ಮುಹೂರ್ತಕ್ಕೆ ಚಾಲನೆ ನೀಡಿ ಶುಭಹಾರೈಸಿದರು.


ಪ್ರಧಾನ ಕಾರ್ಯದರ್ಶಿ ಪಿ.ವಿ. ದಿನೇಶ್ ಕುಲಾಲ್, ಕೋಶಾಧಿಕಾರಿ ಪಂಜಿಗುಡ್ಡೆ ಈಶ್ವರ ಭಟ್, ಉಪಾಧ್ಯಕ್ಷ ವಸಂತ್ ಕುಮಾರ್ ರೈ ಜೆ.ಕೆ., ಶಿವರಾಮ ಆಳ್ವ, ಜಿನ್ನಪ್ಪ ಪೂಜಾರಿ ಮುರ, ಜೋಕಿಂ ಡಿಸೋಜ, ಜತೆಕಾರ್ಯದರ್ಶಿ ಬಿ.ಪ್ರೇಮಾನಂದ ನಾಕ್, ಪ್ರವೀಣ್ ಶೆಟ್ಟಿ ಅಳಕೆಮಜಲು, ವಿಕ್ರಂ ಶೆಟ್ಟಿ ಕೋಡಿಂಬಾಡಿ, ಸುಧಾಕರ ಶೆಟ್ಟಿ ಬೀಡಿನಮಜಲು, ರೋಶನ್ ರೈ ಬನ್ನೂರು, ಮುರಳೀಧರ ರೈ ಮಠಂತಬೆಟ್ಟು, ರೋಶನ್ ರೈ ಬನ್ನೂರು, ಉಮೇಶ್ ಕರ್ಕೆರ, ಕೃಷ್ಣಪ್ರಸಾದ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು. ಸಮಿತಿ ಉಪಾಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು.


ಮಾಣಿ : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ : ಆಸ್ಪತ್ರೆಗೆ ದಾಖಲು

Posted by Vidyamaana on 2023-05-24 11:48:40 |

Share: | | | | |


ಮಾಣಿ : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ : ಆಸ್ಪತ್ರೆಗೆ ದಾಖಲು

ಬಂಟ್ವಾಳ : ಬಜರಂಗದಳ, ಬಿಜೆಪಿ ಕಾರ್ಯಕರ್ತರ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿಯಲ್ಲಿ ನಡೆದಿದೆ.ಘಟನೆಯಲ್ಲಿ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಗಾಯಗೊಂಡಿದ್ದು, ಇಬ್ಬರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ ಹರ್ಷ ಆಚರಣೆ ವೇಳೆ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ ತಂಡಗಳ ಮಧ್ಯೆ ಗಲಾಟೆ ನಡೆದಿತ್ತು ಎನ್ನಲಾಗಿದೆ.

ಸ್ಥಳಕ್ಕೆ ವಿಟ್ಲ ಪೊಲೀಸರ ತಂಡ ಭೇಟಿ ನೀಡಿ ಪ್ರಕರಣ ದಾಖಲಿಸಿದೆ.

ಹಲ್ಲೆ ನಡೆದದ್ದು ಕಟ್ಟಿಗೆಯಿಂದ, ತಲ್ವಾರಿನಿಂದಲ್ಲ:ಎಸ್ಪಿ‌ ವಿಕ್ರಮ್ ಅಮಟೆ ಸ್ಪಷ್ಟನೆ

ಬಂಟ್ವಾಳ : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾಣಿಯಲ್ಲಿ ನಡೆದ ಜಗಳದಲ್ಲಿ ಕಟ್ಟಿಗೆಯಿಂದ ಹಲ್ಲೆ ನಡೆಸಲಾಗಿದೆಯೇ ಹೊರತು, ತಲವಾರಿನಿಂದಲ್ಲ ಎಂದು ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

ಘಟನೆಯಲ್ಲಿ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಗಾಯಗೊಂಡಿದ್ದು, ಇಬ್ಬರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ ಹರ್ಷ ಆಚರಣೆ ವೇಳೆ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ ತಂಡಗಳ ಮಧ್ಯೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರ ತಂಡ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಹಾಸನದಲ್ಲಿ ಸಂಚಲನ ಮೂಡಿಸಿದ ಪ್ರಭಾವಿ ರಾಜಕಾರಣಿಯ ಪೆನ್‌ಡ್ರೈವ್‌!!!

Posted by Vidyamaana on 2024-04-24 20:42:30 |

Share: | | | | |


ಹಾಸನದಲ್ಲಿ ಸಂಚಲನ ಮೂಡಿಸಿದ ಪ್ರಭಾವಿ ರಾಜಕಾರಣಿಯ ಪೆನ್‌ಡ್ರೈವ್‌!!!

ಹಾಸನ: ಲೋಕಸಭೆ ಚುನಾವಣೆಗೆ ಇನ್ನೆರಡು ದಿನ ಉಳಿದಿರುವಂತೆ, ಜಿಲ್ಲೆಯ ರಾಜಕೀಯ ಯುವ ನಾಯಕರೊಬ್ಬರ ಖಾಸಗಿ ಚಟುವಟಿಕೆಗಳ ಮಾಹಿತಿಯುಳ್ಳ ಪೆನ್ ಡ್ರೈವ್‌ಗಳು ಪಾರ್ಕ್, ಕ್ರೀಡಾಂಗಣ ಹಾಗೂ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ದೊರೆಯುತ್ತಿವೆ ಎಂಬ ವದಂತಿ ಹರಡಿದ್ದು, ಸಂಚಲನ ಮೂಡಿಸಿದೆ.

ಯುವ ನಾಯಕರೊಬ್ಬರ ಖಾಸಗಿ ಚಟುವಟಿಕೆಗಳಿರುವ ವಿಡಿಯೋಗಳನ್ನು ಪೆನ್ ಡ್ರೈವ್‌ಗಳಲ್ಲಿ ತುಂಬಿ ಅನಾಮಧೇಯವಾಗಿ ಹರಡಲಾಗುತ್ತಿದೆ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ನಡೆದಿದೆ.

ಏರ್ ಇಂಡಿಯಾ ಗಗನಸಖಿ ಕೊಲೆ ಪ್ರಕರಣದ ಆರೋಪಿ ವಿಕ್ರಂ ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆ

Posted by Vidyamaana on 2023-09-08 21:50:08 |

Share: | | | | |


ಏರ್ ಇಂಡಿಯಾ ಗಗನಸಖಿ ಕೊಲೆ ಪ್ರಕರಣದ ಆರೋಪಿ ವಿಕ್ರಂ ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆ

ಮುಂಬೈ: ಗಗನಸಖಿ ಒಬ್ಬರನ್ನು ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯೊಬ್ಬ ಅಂಧೇರಿಯ ಪೊಲೀಸ್ ಠಾಣೆಯಲ್ಲಿ ತನ್ನ ಪ್ಯಾಂಟ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮುಂಬೈನ ಮರೋಲ್ ಪ್ರದೇಶದಲ್ಲಿ ವಾಸಿಸುತ್ತಿದ್ದ 23 ವರ್ಷದ ಗಗನಸಖಿಯನ್ನು ಕೊಂದ ಆರೋಪದಲ್ಲಿ ವಿಕ್ರಂ ಅತ್ವಾಲ್ ನನ್ನು ಪೊಲೀಸರು ಬಂಧಿಸಿದ್ದರು. ಆರೋಪಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ಗಗನಸಖಿ ರೂಪಲ್ ಒಗ್ರೆ ಅಂಧೇರಿಯ ಅಪಾರ್ಟ್ಮೆಂಟ್ ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಛತ್ತೀಸ್ ಗಢ ಮೂಲದ ಅವರು ವಿಮಾನಯಾನ ಸಂಸ್ಥೆಯಲ್ಲಿ ತರಬೇತಿಗಾಗಿ ಏಪ್ರಿಲ್ ನಲ್ಲಿ ಮುಂಬೈಗೆ ಬಂದಿದ್ದರು.

ಕೊಲೆ ಆರೋಪದ ಮೇಲೆ ರೂಪಾಲ್ ಉಳಿದುಕೊಂಡಿದ್ದ ಅಪಾರ್ಟ್ಮೆಂಟ್ ನ ಸ್ವಚ್ಚತಾ ಕೆಲಸಗಾರ 40 ವರ್ಷದ ವಿಕ್ರಮ್ ಅತ್ವಾಲ್ ಎಂಬುವವನ್ನು ಪೊಲೀಸರು ಬಂಧಿಸಿದ್ದರು. ಆದರೆ ಶುಕ್ರವಾರ ಆತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Recent News


Leave a Comment: