ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ಸುದ್ದಿಗಳು News

Posted by vidyamaana on 2024-07-24 23:15:54 |

Share: | | | | |


ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಡೊನ್ ಬೊಸ್ಕೊ ಕ್ಲಬ್‌ನಿಂದ ಪುತ್ತೂರು, ಮರೀಲ್, ಬನ್ನೂರು ಚರ್ಚ್ ವ್ಯಾಪ್ತಿಯ ಕ್ರಿಕೆಟ್ ಆಟಗಾರರ `ಸಿಪಿಎಲ್ ಸೀಸನ್-2′ ಸಂಭ್ರಮದ ತೆರೆ

Posted by Vidyamaana on 2023-01-12 09:31:18 |

Share: | | | | |


ಡೊನ್ ಬೊಸ್ಕೊ ಕ್ಲಬ್‌ನಿಂದ ಪುತ್ತೂರು, ಮರೀಲ್, ಬನ್ನೂರು ಚರ್ಚ್ ವ್ಯಾಪ್ತಿಯ ಕ್ರಿಕೆಟ್ ಆಟಗಾರರ `ಸಿಪಿಎಲ್ ಸೀಸನ್-2′ ಸಂಭ್ರಮದ ತೆರೆ

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಡೊನ್ ಬೊಸ್ಕೊ ಕ್ಲಬ್ ಸಂಘಟನೆಯ ವತಿಯಿಂದ ಪುತ್ತೂರು ಮಾಯಿದೆ ದೇವುಸ್ ಚರ್ಚ್, ಮರೀಲ್ ಸೆಕ್ರೇಡ್ ಹಾರ್ಟ್ ಚರ್ಚ್ ಹಾಗೂ ಬನ್ನೂರು ಸಂತ ಅಂತೋನಿ ಚರ್ಚ್ ವ್ಯಾಪ್ತಿಯ ಕ್ರಿಶ್ಚಿಯನ್ ಸಮುದಾಯದ ಕ್ರಿಕೆಟ್ ಆಟಗಾರರನ್ನೊಳಗೊಂಡ `ಕ್ರಿಶ್ಚಿಯನ್ ಪ್ರೀಮಿಯರ್ ಲೀಗ್(ಸಿಪಿಎಲ್) 2023-ಸೀಸನ್ 2 ‘ .8  ರಂದು ದರ್ಬೆ ಸಂತ ಫಿಲೋಮಿನಾ ಕಾಲೇಜಿನ ಐತಿಹಾಸಿಕ ಕ್ರೀಡಾಂಗಣದಲ್ಲಿ ಜರಗಿದ್ದು, ಕ್ರಿಕೆಟ್ ಪಂದ್ಯಾಟವು ಇದೀಗ ಸಂಭ್ರಮದ ತೆರೆ ಕಂಡಿದೆ.

 

 

ತನ್ನ ಹೆಸರಿನ ಟೀ ಶರ್ಟ್ ಧರಿಸಿದ್ದ ಅಭಿಮಾನಿಯ ಹಿಂಬಾಲಿಸಿ ಹೋಗಿ ಮಾತನಾಡಿಸಿದ ಸಚಿನ್‌: ವೀಡಿಯೋ ವೈರಲ್

Posted by Vidyamaana on 2024-02-05 07:24:24 |

Share: | | | | |


ತನ್ನ ಹೆಸರಿನ ಟೀ ಶರ್ಟ್ ಧರಿಸಿದ್ದ ಅಭಿಮಾನಿಯ ಹಿಂಬಾಲಿಸಿ ಹೋಗಿ ಮಾತನಾಡಿಸಿದ ಸಚಿನ್‌: ವೀಡಿಯೋ ವೈರಲ್

        ಕ್ರಿಕೆಟ್  ಹಾಗೂ ಸಿನಿಮಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ತಾರೆಯರಿಗೆ ತಮ್ಮದೇ ಆದ ಅಭಿಮಾನಿಗಳಿರುತ್ತಾರೆ. ತಮ್ಮ ನೆಚ್ಚಿನ ನಾಯಕಿ /ನಾಯಕಿಗಾಗಿ ಅಭಿಮಾನಿಗಳು ಏನೂ ಮಾಡಲು ಸಿದ್ಧರಿರುತ್ತಾರೆ. ಕೆಲವರು ದೇವಸ್ಥಾನ ಕಟ್ಟುತ್ತಾರೆ, ಇನ್ನು ಕೆಲವರು ದೇವರಂತೆ ಪೂಜೆ ಮಾಡುತ್ತಾರೆ.

ಕೆಲ ಅಭಿಮಾನಿಗಳು ತಮ್ಮ ನೆಚ್ಚಿನ ವ್ಯಕ್ತಿಯ ಹುಟ್ಟುಹಬ್ಬದಂದು ರಕ್ತದಾನ ಮಾಡುತ್ತಾರೆ. ಬಡವರಿಗೆ ಹಣ್ಣು ಹಂಪಲು ನೀಡುತ್ತಾರೆ, ವೃದ್ಧಾಶ್ರಮಗಳಲ್ಲಿ ಸೇವೆ ಮಾಡುತ್ತಾರೆ ಹೀಗೆ ವಿವಿಧ ರೀತಿಯಲ್ಲಿ ತಮ್ಮ ಅಭಿಮಾನವನ್ನು ಮೆರೆಯುತ್ತಾರೆ. ಹಾಗೆಯೇ ಭಾರತದಲ್ಲಿ ಕ್ರಿಕೆಟ್‌ಗೆ ಇರುವ ಅಭಿಮಾನಕ್ಕೆ ಬೇರೆಯದೇ ಸ್ಥಾನವಿದೆ. ಅನೇಕರು ತಮ್ಮ ನೆಚ್ಚಿನ ನಾಯಕನ ಹೆಸರಿರುವ ಟೀ ಶರ್ಟ್ ಧರಿಸಿ ಆ ಮೂಲಕ ಅಭಿಮಾನ ಮೆರೆಯುವುದನ್ನು ನೋಡಬಹುದು . ಹೀಗೆ ತಮ್ಮ ನೆಚ್ಚಿನ ಕ್ರಿಕೆಟಿಗನ ಟೀ ಶರ್ಟ್ ಧರಿಸಿ ರಸ್ತೆಯಲ್ಲಿ ಓಡಾಡ್ತಿರಬೇಕಾದರೆ ಅವರೇ ಬಂದು ನಿಮ್ಮನ್ನ ಮಾತನಾಡಿಸಿದರೆ ನಿಮ್ಮ ಪ್ರತಿಕ್ರಿಯೆ ಹೇಗಿರಬಹುದು. ಒಂದು ಕ್ಷಣ ಇದು ನಿಜನಾ ಕನಸಾ ಅಂತ ನಿಮ್ಮನೇ ನೀವು ಚಿವುಟಿ ನೋಡುವುದಂತೂ ಪಕ್ಕಾ ಅದೇ ರೀತಿಯ ಅನುಭವ ಈಗ ಇಲ್ಲಿ ವ್ಯಕ್ತಿಯೊಬ್ಬರಿಗೆ ಆಗಿದೆ. ಇವರನ್ನು ಭೇಟಿಯಾಗಿದ್ದು ಬೇರೆ ಯಾರು ಅಲ್ಲ, ಕ್ರಿಕೆಟ್ ಗಾಡ್ ಎಂದೇ ಖ್ಯಾತಿ ಗಳಿಸಿರುವ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್‌.


💥ವಿಡಿಯೋ ನೋಡಲು ಕ್ಲಿಕ್ ಮಾಡಿ!!!!

ಹೌದು, ತಮ್ಮ ಕಟ್ಟ ಅಭಿಮಾನಿಯನ್ನು ಆತನಿಗೆ ತಿಳಿಯದಂತೆ ಆತ ಊಹೆಯೂ ಮಾಡದಂತೆ ಸಡನ್ ಆಗಿ ಭೇಟಿ ಮಾಡಿ ಆತನ ಬದುಕಿನಲ್ಲಿ ಸಾರ್ಥಕ್ಯದ ಭಾವ ಮೂಡಿಸಿದ್ದಾರೆ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ತಾನೂ ಸ್ವಲ್ಪವೂ ನಿರೀಕ್ಷೆ ಮಾಡಿರದ ಈ ಕ್ಷಣ ನೋಡಿ ಅಭಿಮಾನಿ ಪೂರ್ತಿ ಭಾವುಕನಾಗಿದ್ದು ಕ್ರಿಕೆಟ್ ದೇವರಿಗೆ ದೊಡ್ಡ ನಮಸ್ಕಾರ ಮಾಡಿದ್ದಾನೆ ಈ ಅಭಿಮಾನಿ.ಹಾಗಿದ್ದರೆ ನಡೆದಿದ್ದೇನು?


ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ತಮ್ಮ ಕಾರಿನಲ್ಲಿ ಸಾಗುತ್ತಿದ್ದ ವೇಳೆ ಅವರ ಕಾರಿನ ಮುಂದೆಯೇ ಭಾರತ ಕ್ರಿಕೆಟ್ ಟೀಮ್‌ ಪ್ರತಿನಿಧಿಸುವ ನೀಲಿ ಬಣ್ಣದ ಟೀ ಶರ್ಟ್‌ ಮೇಲೆ ಸಚಿನ್ ತೆಂಡೂಲ್ಕರ್ ಐ ಮಿಸ್ ಯೂ ಎಂದು ಬರೆದಿರುವ ಟೀ ಶರ್ಟ್ ತೊಟ್ಟು ಸ್ಕೂಟರ್‌ನಲ್ಲಿ ವ್ಯಕ್ತಿಯೊಬ್ಬ ಸಾಗುತ್ತಿದ್ದು, ಇದನ್ನು ನೋಡಿದ ಸಚಿನ್ ತೆಂಡೂಲ್ಕರ್‌ ಕಾರಿನಲ್ಲಿ ಆತನನ್ನು ಹಿಂಬಾಲಿಸಿಕೊಂಡು ಹೋಗಿ ಭೇಟಿ ಮಾಡಿದ್ದಾರೆ. ಆದರೆ ಇದನ್ನು ನಿರೀಕ್ಷೆ ಮಾಡಿರದ ಆತ ಕೆಲ ಕಾಲ ಶಾಕ್ ಆಗಿದ್ದಾನೆ. ಬಳಿಕ ನನಗೆ ನಿಜವಾಗಿಯೂ ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ, ಇವತ್ತು ನನಗೆ ನನ್ನ ಭಗವಂತನ ದರ್ಶನವಾಯ್ತು ಎಂದು ಆತ ಹೇಳಿಕೊಂಡಿದ್ದಾನೆ. ಅಲ್ಲದೇ ತನ್ನ ಬಳಿ ಇದ್ದ ಸಚಿನ್ ತೆಂಡೂಲ್ಕರ್ ಅವರ ಸಾಧನೆಯ ಫೋಟೋಗಳ ಪೇಪರ್ ಕಟ್ಟಿಂಗ್ ಅಂಟಿಸಿ ಫೋಟೋಗಳನ್ನು ಅಂಟಿಸಿದ್ದ ಪುಸ್ತಕವನ್ನು ಸಚಿನ್‌ಗೆ ತೋರಿಸಿದ್ದಾರೆ. ತನ್ನ ನೆಚ್ಚಿನ ಅಭಿಮಾನಿ ಜೊತೆ ಮಾತನಾಡಿದ ಸಚಿನ್ ಟೀ ಶರ್ಟ್ ನೋಡಿ ನಿಮ್ಮನ್ನು ಮಾತನಾಡಿಸಬೇಕು ಎನಿಸಿತು ಅದಕ್ಕೆ ಗಾಡಿ ನಿಲ್ಲಿಸಿದೆವು ಎಂದು ಹೇಳಿದ್ದಾರೆ. ಜೊತೆಗೆ ಆತನಿಗೆ ಆಟೋಗ್ರಾಫ್ ನೀಡಿದರೆ, ಮೊದಲಿಗೆ ಸಚಿನ್ ಏರ್‌ಫೋರ್ಟ್‌ಗೆ ಹೋಗೋದು ಹೇಗೆ ಎಂದು ಕೇಳಿದ್ದಾರೆ. ಈ ವೇಳೆ ಇವರತ್ತ ತಿರುಗಿದ ಅಭಿಮಾನಿ ಶಾಕ್‌ನಿಂದ ನೋಡಿ ನಾನಿವತ್ತೂ ನಿಜವಾಗಿಯೂ ಭಗವಂತನನ್ನು ನೋಡಿದೆ ಎಂದು ಹೇಳಿದ್ದಾರೆ.ನೀವು ಹೆಲ್ಮೆಟ್ ಧರಿಸಿದ್ದೀರಿ ನಾನು ಸೀಟ್ ಬೆಲ್ಟ್ ಧರಿಸಿದ್ದೇನೆ, ಸದಾ ಹೆಲ್ಮೆಟ್ ಧರಿಸಿ ಪ್ರಯಾಣಿಸಿ ಚೆನ್ನಾಗಿರಿ ಎಂದು ಹಾರೈಸಿ ಸಚಿನ್ ಅಲ್ಲಿಂದ ಹೊರಟು ಹೋಗಿದ್ದಾರೆ. ಇನ್ನು ಈ ವಿಡಿಯೋ ನೋಡಿದ ಸಚಿನ್ ಅಭಿಮಾನಿಗಳು ಕೂಡ ಭಾವುಕರಾಗಿದ್ದು, ಕೇವಲ ಕ್ರಿಕೆಟ್ ಗಾಡ್ ಈ ರೀತಿ ಮಾಡಲು ಸಾಧ್ಯ ಎಂದೆಲ್ಲಾ ತಮ್ಮ ನೆಚ್ಚಿನ ಕ್ರಿಕೆಟಿಗನನ್ನು ಹೊಗಳಿದ್ದಾರೆ. ಆದರೆ ಮತ್ತೆ ಕೆಲವರು ಇದು ಸ್ಕ್ರಿಪ್ಟೆಡ್( ಪ್ಲಾನ್ ಮಾಡಿ ಮಾಡಿದ ವೀಡಿಯೋ) ಎಂದು ದೂರಿದ್ದಾರೆ. ಸ್ಕ್ರಿಫ್ಟ್ ಚೆನ್ನಾಗಿ ಬರೀತೀರಾ ಎಂದು ಟೀಕಿಸಿದ್ದಾರೆ.


ಆದರೆ ಸ್ವತಃ ಸಚಿನ್ ಈ ವೀಡಿಯೋವನ್ನು ಪೋಸ್ಟ್ ಮಾಡಿದ್ದು, ನನ್ನ ಮೇಲೆ ಇಷ್ಟೊಂದು ಪ್ರೀತಿ ತೋರಿದ ಈ ವ್ಯಕ್ತಿಯ ಕಂಡು ನನ್ನ ಹೃದಯ ಖುಷಿಯಿಂದ ಭಾರವಾಯ್ತು. ನಾವು ನಿರೀಕ್ಷೆಯೇ ಮಾಡದ ಕಡೆಯಿಂದೆಲ್ಲಾ ಬರುವ ಈ ರೀತಿಯ ಅಗಾಧ ಪ್ರೀತಿಯಿಂದ ನಮಗೆ ಜೀವನ ತುಂಬಾ ವಿಶೇಷ ಎನಿಸುವುದು ಎಂದು ಸಚಿನ್ ತೆಂಡೂಲ್ಕರ್ ಬರೆದುಕೊಂಡಿದ್ದಾರೆ. ಸಚಿನ್ ಭೇಟಿ ಮಾಡಿದ ಈ ಅಭಿಮಾನಿಯ ಹೆಸರು ಹರೀಶ್‌ಒಟ್ಟಿನಲ್ಲಿ ಸಚಿನ್ ಭೇಟಿಯಿಂದ ಅಭಿಮಾನಿ ಒಂದು ಕ್ಷಣ ಮಾತೇ ಹೊರಡದಂತಾಗಿ ಭಾವುಕರಾಗಿದ್ದು ಈ ವೀಡಿಯೋದಲ್ಲಿ ಕಣ್ಣಿಗೆ ಕಟ್ಟಿದಂತಿದೆ

ಚುನಾವಣೆ ಪ್ರಚಾರ ; ಚಿಲಿಂಬಿ ಸಾಯಿಮಂದಿರದ ಬಳಿ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ವಾಗ್ವಾದ, ಗುಂಪು ಚದುರಿಸಿದ ಪೊಲೀಸರು

Posted by Vidyamaana on 2024-04-18 18:43:59 |

Share: | | | | |


ಚುನಾವಣೆ ಪ್ರಚಾರ ; ಚಿಲಿಂಬಿ ಸಾಯಿಮಂದಿರದ ಬಳಿ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ವಾಗ್ವಾದ, ಗುಂಪು ಚದುರಿಸಿದ ಪೊಲೀಸರು

ಮಂಗಳೂರು, ಎ.18: ನಗರದ ಉರ್ವಾ ಚಿಲಿಂಬಿಯ ಸಾಯಿಮಂದಿರದ ಬಳಿ ಚುನಾವಣೆ ಪ್ರಚಾರ ನಡೆಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದ್ದಲ್ಲದೆ, ವಾಗ್ವಾದ ನಡೆಸಿದ ಘಟನೆ ನಡೆದಿದೆ.

ರಾಮನವಮಿ ಪ್ರಯುಕ್ತ ಸಾಯಿ ಮಂದಿರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ಭಕ್ತರ ಸಂಖ್ಯೆಯೂ ಹೆಚ್ಚಿತ್ತು. ಇದೇ ವೇಳೆ, ಮಂದಿರದ ಎದುರಿನ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತ ತೆರಳುತ್ತಿದ್ದರು. ಇದನ್ನು ಕಂಡ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ಹೇಳಿದ್ದು ವಾಗ್ವಾದಕ್ಕೆ ಕಾರಣವಾಯಿತು.

ಕೇರಳದ ಈ ಪಟ್ಟಣಕ್ಕೆ ಕಳೆದ 8 ವರ್ಷಗಳಿಂದ ಇಸ್ರೇಲ್ ಜತೆ ಇದೆ ವಿಶೇಷ ನಂಟು

Posted by Vidyamaana on 2023-10-19 16:23:09 |

Share: | | | | |


ಕೇರಳದ ಈ ಪಟ್ಟಣಕ್ಕೆ ಕಳೆದ 8 ವರ್ಷಗಳಿಂದ ಇಸ್ರೇಲ್ ಜತೆ ಇದೆ ವಿಶೇಷ ನಂಟು

ಕಣ್ಣೂರು: ಇಸ್ರೇಲ್ ಹಾಗೂ ಪ್ಯಾಲೆಸ್ತೀನ್

ವಿಚಾರದಲ್ಲಿ ದೇಶದ ರಾಜಕೀಯ ಪಕ್ಷಗಳು ಮತ್ತು ಜನರು ವಿಭಿನ್ನ ಅಭಿಪ್ರಾಯಗಳನ್ನು ಹೊಂದಿದ್ದಾರೆ. ಕೇರಳ ಕೂಡ ಇದರಿಂದ ಹೊರತಲ್ಲ. ಆದರೆ ಕೇರಳದ ಒಂದು ಪಟ್ಟಣಕ್ಕೂ, ಇಸ್ರೇಲ್ ಪೊಲೀಸ್ ಇಲಾಖೆಗೂ ಒಂದು ವಿಶಿಷ್ಟ ನಂಟು ಇದೆ ಎನ್ನುವುದು ಗೊತ್ತೇ? ಮುಖ್ಯವಾಗಿ ಅ 7ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ನಡೆಸಿದ ಬಳಿಕ ಕೇರಳದ ಉತ್ತರ ಭಾಗದಲ್ಲಿನ ಈ ಪಟ್ಟಣದ ಜನರ ಗುಂಪೊಂದು ಇಸ್ರೇಲ್‌ಗಾಗಿ ಮತ್ತಷ್ಟು ಚುರುಕಿನಿಂದ ಕೆಲಸ ಮಾಡುತ್ತಿದೆ!.


ಕಣ್ಣೂರಿನಲ್ಲಿನ ಮರ್ಯಮ್ ಅಪಾರೆಲ್ ಪ್ರೈ ಲಿಮಿಟೆಡ್ ಎಂಬ ಉಡುಪು ತಯಾರಿಕಾ ಕಂಪೆನಿಯು ಕಳೆದ ಎಂಟು ವರ್ಷಗಳಿಂದ ಇಸ್ರೇಲಿ ಪೊಲೀಸರಿಗಾಗಿ ಸಮವಸ್ತ್ರಗಳನ್ನು ಹೊಲೆದು ಕೊಡುತ್ತಿದೆ. ವರ್ಷಕ್ಕೆ ಸರಾಸರಿ ಒಂದು ಲಕ್ಷ ಯುನಿಟ್‌ಗಳಷ್ಟು ಸಮವಸ್ತ್ರಗಳನ್ನು ಪೂರೈಕೆ ಮಾಡುತ್ತಿದೆ.ಸಮವಸ್ತ್ರಗಳ ಗುಣಮಟ್ಟ ಪರಿಶೀಲಿಸಲು ಪ್ರತಿ ವರ್ಷವೂ ಇಸ್ರೇಲ್ ಪೊಲೀಸ್ ಅಧಿಕಾರಿಗಳು ಫ್ಯಾಕ್ಟರಿಗೆ ಭೇಟಿ ನೀಡುತ್ತಾರೆ. ಮುಂಬಯಿಯಲ್ಲಿ ನೆಲೆಯೂರಿರುವ ಕೇರಳದ ಉದ್ಯಮಿ ಥಾಮಸ್ ಒಲಿಕ್ಕಲ್ ಮಾಲೀಕತ್ವದ ಫ್ಯಾಕ್ಟರಿ ಇದು. ಎಂಟು ವರ್ಷಗಳಿಂದ ಪೂರೈಕೆ


ಇಸ್ರೇಲಿ ಪೊಲೀಸರ ಜತೆಗಿನ ವ್ಯವಹಾರದ ಕುರಿತು ಮಾತನಾಡಿದ ಫ್ಯಾಕ್ಟರಿ ವ್ಯವಸ್ಥಾಪಕ ಶಿಜಿನ್ ಕುಮಾರ್, ಎಂಟು ವರ್ಷಗಳ ಹಿಂದೆ ಇಸ್ರೇಲಿ ಪೊಲೀಸರು ಈ ಬಗ್ಗೆ ವಿಚಾರಿಸಿದ್ದರು. ಅಂದಿನಿಂದಲೂ ಅವರಿಗೆ ಸಮವಸ್ತ್ರಗಳನ್ನು ಫ್ಯಾಕ್ಟರಿ ಪೂರೈಕೆ ಮಾಡುತ್ತಿದೆ ಎಂದು ತಿಳಿಸಿದರು. "ನಾವು ಫಿಲಿಪ್ಪಿನ್ಸ್ ಸೇನೆಗೆ ಹಾಗೂ ಕುವೈತ್ ಸರ್ಕಾರದ ಅಧಿಕಾರಿಗಳಿಗೆ ಈ ಮೊದಲು ಸಮವಸ್ತ್ರಗಳನ್ನು ಪೂರೈಕೆ ಮಾಡುತ್ತಿದ್ದೆವು. ಬಳಿಕ ಇಸ್ರೇಲ್‌ನಿಂದ ಬೇಡಿಕೆ ಬಂದಿತ್ತು.

ಸಮವಸ್ತ್ರಗಳಪೂರೈಕೆಯ ಒಪ್ಪಂದ ಮಾಡಿಕೊಳ್ಳುವುದಕ್ಕೂ ಮುನ್ನ ನಮ್ಮ ಫ್ಯಾಕ್ಟರಿ ಹೇಗೆ ಕೆಲಸ ಮಾಡುತ್ತದೆ ಎಂದು ಪರಿಶೀಲಿಸಲು ಇಸ್ರೇಲಿ ಪೊಲೀಸ್ ಅಧಿಕಾರಿಗಳು ಕೇರಳಕ್ಕೆ ಭೇಟಿ ನೀಡಿದ್ದರು ಎಂದು ಶಿಜಿನ್ ಹೇಳಿದರು."ಪ್ರತಿ ವರ್ಷವೂ ನಮಗೆ ಬರುವ ಬೇಡಿಕೆಗಳನ್ನು ಯಶಸ್ವಿಯಾಗಿ ಪೂರೈಕೆ ಮಾಡಿದ್ದೇವೆ ಎಂದು ತಿಳಿಸಿದರು.


ಕೇರಳದ ಕಂಪೆನಿ ಘಟಕವು ಮೊದಲು ತಿರುವನಂತಪುರಂನಲ್ಲಿತ್ತು. ಬಳಿಕ ಅದು ಕಣ್ಣೂರಿಗೆ ಸ್ಥಳಾಂತರಗೊಂಡಿತು. ಸುಮಾರು 1500 ಮಂದಿ ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ ಶೇ 95ಕ್ಕೂ ಹೆಚ್ಚು ಮಂದಿ ಮಹಿಳೆಯರು. ಉದ್ಯಮದ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುವ ಸಾಮರ್ಥ್ಯ ಪಡೆಯಲು ತನ್ನ ಉದ್ಯೋಗಿಗಳಿಗೆ ಕಂಪೆನಿಯು ವಿಶೇಷ ಹಾಗೂ ನಿರ್ದಿಷ್ಟ ತರಬೇತಿಗಳನ್ನು ನೀಡುತ್ತದೆ.ಇಸ್ರೇಲ್ ಪೊಲೀಸರಿಗೆ ಸಮವಸ್ತ್ರದ ಅಂಗಿಗಳನ್ನು ಸಿದ್ಧಪಡಿಸಲು ಸ್ಥಳೀಯ ಘಟಕದ ನೂರಾರು ದರ್ಜಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಎರಡು ಜೇಬುಗಳ ಅಂಗಿಗಳ ಜತೆಗೆ, ತೋಳುಗಳಿಗೆ ಇಸ್ರೇಲ್ ಪೊಲೀಸ್ ಇಲಾಖೆಯ ಟ್ರೇಡ್‌ಮಾರ್ಕ್ ಚಿಹ್ನೆಯನ್ನು ವಿನ್ಯಾಸಗೊಳಿಸಿ ಅಳವಡಿಸುವ ಕಾರ್ಯವನ್ನೂ ಮಾಡುತ್ತಿದ್ದಾರೆ.

ಇಡುಕ್ಕಿ ಜಿಲ್ಲೆಯ ತೊಡುಪುಳದವರಾದ ಥಾಮಸ್ ಒಲಿಕ್ಕಲ್, ಯುದ್ಧ ಆರಂಭವಾದ ಬಳಿಕವೂ ಇಸ್ರೇಲ್ ಪೊಲೀಸರು ಕಂಪೆನಿಯನ್ನು ಸಂಪರ್ಕಿಸಿದ್ದು, ಮತ್ತಷ್ಟು ಸಮವಸ್ತ್ರಗಳಿಗಾಗಿ ಹೆಚ್ಚುವರಿ ಆರ್ಡ‌್ರಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.

ಫೆ.21-22 : ಬನ್ನೂರು ಆನೆಮಜಲು ದೈಯ್ಯೆರೆ ಮಾಡ ನಡಿಮಾರ್ ಬಾವದಕೆರೆ ಶ್ರೀ ನಾಗಸನ್ನಿಧಿ, ಶ್ರೀ ಇಷ್ಟದೇವತೆ, ರಕ್ತೇಶ್ವರಿ, ಅಣ್ಣಪ್ಪ ಪಂಜುರ್ಲಿ ಸಾನಿಧ್ಯದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Posted by Vidyamaana on 2024-02-21 04:36:15 |

Share: | | | | |


ಫೆ.21-22 : ಬನ್ನೂರು ಆನೆಮಜಲು  ದೈಯ್ಯೆರೆ ಮಾಡ ನಡಿಮಾರ್ ಬಾವದಕೆರೆ ಶ್ರೀ ನಾಗಸನ್ನಿಧಿ, ಶ್ರೀ ಇಷ್ಟದೇವತೆ, ರಕ್ತೇಶ್ವರಿ, ಅಣ್ಣಪ್ಪ ಪಂಜುರ್ಲಿ ಸಾನಿಧ್ಯದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಪುತ್ತೂರು: ಬನ್ನೂರು ಆನೆಮಜಲು  ದೈಯ್ಯೆರೆ ಮಾಡ ನಡಿಮಾರ್ ಬಾವದಕೆರೆ ಶ್ರೀ ನಾಗಸನ್ನಿಧಿ, ಶ್ರೀ ಇಷ್ಟದೇವತೆ, ರಕ್ತೇಶ್ವರಿ, ಅಣ್ಣಪ್ಪ ಪಂಜುರ್ಲಿ ಸಾನಿಧ್ಯದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಫೆ.21 ಹಾಗೂ 22 ರಂದು ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಗೌಡ ಅಯೋಧ್ಯಾನಗರ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎ.ವಿ.ನಾರಾಯಣ,ತಿಳಿಸಿದ್ದಾರೆ.


ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬ್ರಹ್ಮಕಲಶೋತ್ಸವದ ಅಂಗವಾಗಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಫೆ.21 ಬುಧವಾರ ಬೆಳಿಗ್ಗೆ 11 ಕ್ಕೆ ಹಸಿರುವಾಣಿ ಸಮರ್ಪಣೆ, ಸಂಜೆ 7 ರಿಂದ ಪುಣ್ಯಾಹವಾಚನ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ವಾಸ್ತು ಪುಣ್ಯಾಹಾಂತ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 6.30 ರಿಂದ ಗುಡ್ಡಪ್ಪ ಗೌಡ ಬಲ್ಯ ತಂಡದಿಂದ ತಾಳಮದ್ದಳೆ ಪ್ರದರ್ಶನಗೊಳ್ಳಲಿದೆ ಎಂದು ಹೇಳಿದರು.


ಫೆ.22 ಗುರುವಾರ ಬೆಳಿಗ್ಗೆ 7 ರಿಂದ ಗಣಪತಿ ಹೋಮ, ನಾಗತಂಬಿಲ,  ಬ್ರಹ್ಮಕಲಶ ಪೂಜೆ, 11.33 ರ ವೃಷಭಲಗ್ನ ಸುಮುಹೂರ್ತದಲ್ಲಿ  ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ನಡೆದು ಬಳಿಕ ಮಹಾಪೂಜೆ, ನಿತ್ಯನೈಮಿತ್ಯಾದಿಗಳ ನಿರ್ಣಯ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತ್ರಪಣೆ ಜರಗಲಿದೆ. ಸಾಂಸ್ಕೃತಿ ಕಾರ್ಯಕ್ರಮಗಳ ಅಂಗವಾಗಿ ಬೆಳಿಗ್ಗೆ 8 ರಿಂದ ವಿವಿಧ ಭಜನಾ ತಂಡದಿಂದ ಭಜನೆ, ಮಧ್ಯಾಹ್ನ 2 ರಿಂದ ಹರಿದಾಸ ಮಂಡ್ಯ ಮಧುಸೂದನ್ ತಂಡದಿಂದ ಹರಿಕಥಾ ಕಾಲಕ್ಷೇಪ ‘ಗಿರಿಜಾ ಕಲ್ಯಾಣ’, ಸಂಜೆ 4 ರಿಂದ ಪುತ್ತೂರು ಜಗದೀಶ್ ಆಚಾರ್ಯ ತಂಡದಿಂದ ‘ಸಂಗೀತ ಗಾನ ಸಂಭ್ರಮ’ ನಡೆಯಲಿದೆ ಎಂದು ಅವರು ತಿಳಿಸಿದರು.

ಸಂಜೆ 6.30 ರಿಂದ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕ ಸಂಜೀವ ಮಠಂದೂರು ವಹಿಸಲಿದ್ದು, ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಧಾರ್ಮಿಕ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಶೋಕ್ ಕುಮಾರ್ ರೈ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಸುರೇಶ್ ಪೂಂಜಾ ಪಾಳ್ಗೊಳ್ಳುವರು. ಅತಿಥಿಗಳಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯಸವ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ರಾಜಶೇಖರ ಜೈನ್, ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಮನೋಹರ್, ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್, ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದ ಅಧ್ಯಕ್ಷ ರಾಮಣ್ಣ ಗೌಡ ಹಲಂಗ, ಬನ್ನೂರು ಗ್ರಾಪಂ ಅಧ್ಯಕ್ಷೆ ಸ್ಮಿತಾ ಎನ್., ನಗರಸಭೆ ಸದಸ್ಯರಾದ ಗೌರಿ ಬನ್ನೂರು, ಮೋಹಿನಿ ವಿಶ್ವನಾಥ ಗೌಡ ಪಾಲ್ಗೊಳ್ಳಲಿದ್ದಾರೆ ಎಂದು ಅವರು ವಿವರಿಸಿದರು.


ಪತ್ರಿಕಾಗೋಷ್ಠಿಯಲ್ಲಿ  ಪ್ರಧಾನ ಕಾರ್ಯದರ್ಶಿ ಮೌನೀಶ್ ಎನ್., ಬ್ರಹ್ಮಕಲಶೋತ್ಸವ ಸಮಿತಿ ಖಜಾಂಚಿ ರಮೇಶ್ ಗೌಡ ನೀರ್ಪಾಜೆ, ಪ್ರಧಾನ ಕಾರ್ಯದರ್ಶಿ ರತ್ನಾಕರ ರೈ ಕೆಳಗಿನಮನೆ ಉಪಸ್ಥಿತರಿದ್ದರು.

ಪಿಯುಸಿ ಪರೀಕ್ಷೆ ಸಮಾನ ಅಂಕ ಪಡೆದ ಬೆಳ್ತಂಗಡಿಯ ಅವಳಿ ಸಹೋದರಿಯರು!

Posted by Vidyamaana on 2023-04-21 17:24:51 |

Share: | | | | |


ಪಿಯುಸಿ ಪರೀಕ್ಷೆ ಸಮಾನ ಅಂಕ ಪಡೆದ ಬೆಳ್ತಂಗಡಿಯ ಅವಳಿ ಸಹೋದರಿಯರು!

ಬೆಳ್ತಂಗಡಿ : ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿಯ ಅವಳಿ ಸಹೋದರಿಯರು ಸಮಾನ (ಶೇಕಡಾ 99%)ಅಂಕ ಪಡೆದು ವಿಶೇಷ ಸಾಧನೆ ಮಾಡಿ ರಾಜ್ಯದ ಗಮನ ಸೆಳೆದಿದ್ದಾರೆ.ಉಮೇಶ್ ಗೌಡ ಪಿ ಹೆಚ್ ‌ಮತ್ತು ಗೀತಾ ದಂಪತಿಗಳ ಅವಳಿ ಮಕ್ಕಳಾದ ಸ್ಪಂದನಾ ಮತ್ತು ಸ್ಪರ್ಷಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (ವಾಣಿಜ್ಯ ವಿಭಾಗದಲ್ಲಿ ) ಇಬ್ಬರೂ 600 ರಲ್ಲಿ 594 ಸಮಾನ (ಶೇಕಡಾ 99%)ಅಂಕ ಪಡೆದಿದ್ದಾರೆ. ಎಸ್ ಡಿಎಂ ಕಾಲೇಜು ಉಜಿರೆಯ ವಿದ್ಯಾರ್ಥಿಗಳು.ಪೋಷಕರು ಸಂತಸ ವ್ಯಕ್ತಪಡಿಸಿದ್ದು, ಕಾಲೇಜು ಆಡಳಿತ ಮಂಡಳಿ ಪ್ರಾಧ್ಯಾಪಕರು ಇಬ್ಬರ ಸಾಧನೆಗೆ ಅಪಾರ ಮೆಚ್ಚುಗೆ ಸೂಚಿಸಿದ್ದಾರೆ.

Recent News


Leave a Comment: