ಪುತ್ತೂರು: ನೇಣು ಬಿಗಿದು ಅನ್ಸರ್ ಆತ್ಮಹತ್ಯೆ

ಸುದ್ದಿಗಳು News

Posted by vidyamaana on 2024-07-05 12:22:17 |

Share: | | | | |


ಪುತ್ತೂರು: ನೇಣು ಬಿಗಿದು  ಅನ್ಸರ್  ಆತ್ಮಹತ್ಯೆ

ಪುತ್ತೂರು : ವಿವಾಹಿತ ಯುವಕನೊಬ್ಬ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಗುರುವಾರ ನಡೆದಿದೆ.

ಮೂಲತಃ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿಯಾಗಿದ್ದು, ಪ್ರಸ್ತುತ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯವಿದ್ದ ಸಿದ್ದೀಕ್ ಅನ್ಸರ್(32) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಕೊಪ್ಪಳದಲ್ಲಿರುವ ತನ್ನ ಮಾವನ ಅಡಕೆ ತೋಟದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಡಕೆ ಗಾರ್ಬಲ್‌ನಲ್ಲಿ ದುಡಿಯುತ್ತಿದ್ದ ಸಿದ್ದೀಕ್ ಅನ್ಸರ್ ಸರ್ವೆ ಗ್ರಾಮದ ಕಲ್ಪನೆಯಲ್ಲಿ 10 ಸೆಂಟ್ಸ್ ಜಾಗ ಖರೀದಿಸಿ ಮನೆ ನಿರ್ಮಿಸಲು ಅಡಿಪಾಯ ಹಾಕಿದ್ದರು. ಆರ್ಯಾಪು ಗ್ರಾಮದ ಕೊಪ್ಪಳದಲ್ಲಿ ಬಾಡಿಗೆ ಮನೆ ಮಾಡಿ ಅಲ್ಲಿ ತಂದೆ, ತಾಯಿ ಹಾಗೂ ಪತ್ನಿ ಮಕ್ಕಳ ಜತೆ ವಾಸ್ತವ್ಯವಿದ್ದರು. ಕಳೆದ ಒಂದೂವರೆ ತಿಂಗಳಿನಿಂದ ವಿಪರೀತ ಹೊಟ್ಟೆನೋವು ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪುತ್ತೂರಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗದ ಅವರು ಗಾರ್ಬಲ್ ಕೆಲಸಕ್ಕೆ ಹೋಗದೆ ಮನೆಯಲ್ಲೇ ಉಳಿದುಕೊಂಡಿದ್ದರು. ಮನೆ ನಿರ್ಮಿಸುವ ಉದ್ದೇಶದಿಂದ ಸಾಲ ಪಡೆದಿದ್ದ ಅವರು ಸಾಲ ತೀರಿಸಲಾಗದೆ ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ಜನ ಪ್ರತಿನಿಧಿ ಎಂಬ ಕಾರಣಕ್ಕೆ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ?

Posted by Vidyamaana on 2024-05-31 14:17:34 |

Share: | | | | |


ಜನ ಪ್ರತಿನಿಧಿ ಎಂಬ ಕಾರಣಕ್ಕೆ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ?

ಬೆಂಗಳೂರು : ಪರವಾನಿಗೆ ಪಡೆಯದೆ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಗಳ ಅಕ್ರಮ ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕ್ರಮಕ್ಕೆ ಮೇ.31 ರಂದು(ಇಂದು) ಹೈಕೊರ್ಟ್ ತೀವ್ರ ತರಾಟೆ ತೆಗೆದು ಕೊಂಡಿದೆ.ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂಧಿಸಿದ ಹಾಗೂ ಪ್ರತಿಭಟನೆ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಎರಡು ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಇಂದು ನಡೆಸಿದ ನ್ಯಾಯಮೂರ್ತಿ ಕೃಷ್ಣ ಧೀಕ್ಷಿತ್ ಅವರಿದ್ದ ನ್ಯಾಯಪೀಠ, ಶಾಸಕರ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದಲ್ಲಿ ಹೆಬಿಯಾಸ್ ಕಾರ್ಪಸ್ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಆದರೆ, ಜನ ಪ್ರತಿನಿಧಿ ಎಂಬ ಕಾರಣಕ್ಕೆ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ ?, ಅಲ್ಲದೆ, ಶಾಸಕರು ಕಾನೂನು ಮಾಡುವ ಕೆಲಸವನ್ನು ಮಾಡಬೇಕು. ಅದರ ಬದಲಾಗಿ ನ್ಯಾಯಾಲಯದ ಕೆಲಸದಲ್ಲಿ ಮಾಡುವುದಕ್ಕೆ ಮುಂದಾಗುವದು ಎಷ್ಟು ಸರಿ ಎಂದು ಪ್ರಶ್ನಿಸಿದರು.ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಿದ್ದಾರೆ, ನ್ಯಾಯಾಲಯದ ಕಾರ್ಯವನ್ನು ನೀವು ಮಾಡುವುದಕ್ಕೆ ಮುಂದಾಗಬೇಡಿ. ನಿಮ್ಮ ಕೆಲಸ ಕಾನೂನು ಮಾಡುವುದನ್ನು ಮಾಡಿ, ನ್ಯಾಯಾಲಯ ತನ್ನ ಕಾರ್ಯ ಕಾಡುವುದಕ್ಕೆ ಬಿಡಿ ಎಂದು ಪೀಠ ಸಲಹೆ ನೀಡಿತು.ಮುಂದೊಂದು ದಿನ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ನಮ್ಮ ಹಿಂದೆ ಬಂದು ಕೂತರೆ ನಾವೆಲ್ಲರೂ ಹೆಗೆ ಕೆಲಸ ಮಾಡಬೇಕು. ಈ ರೀತಿಯ ವರ್ತನೆಯನ್ನು ಸಹಿಸಲಾಗುವುದಿಲ್ಲ ಎಂದು ಪೀಠ ತಿಳಿಸಿತು.

ಶಾಸಕರ ಇಂದಿನ ಕಾರ್ಯಕ್ರಮ(ಜೂ 9)

Posted by Vidyamaana on 2023-06-09 00:42:09 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ(ಜೂ 9)

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಜೂನ್ 9 ರಂದು  ಬೆಳಿಗ್ಗೆ 10 ಗಂಟೆಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹೆಚ್ಚುವರಿ ಡಯಾಲಿಸಿಸ್ ಘಟಕ ಉದ್ಘಾಟನೆ ಕಾರ್ಯಕ್ರಮ ಭಾಗಿ.

ಅಪರಾಹ್ನ ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಭಾಗಿಯಾಗುವರು.

ಕೆಟ್ಟು ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಢಿಕ್ಕಿ

Posted by Vidyamaana on 2024-03-17 07:53:06 |

Share: | | | | |


ಕೆಟ್ಟು ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಢಿಕ್ಕಿ

ಚಾಮರಾಜನಗರ, ಮಾ.17: ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಢಿಕ್ಕಿ ಹೊಡೆದ ಘಟನೆ ಹನೂರು ತಾಲೂಕಿನ ಗಡಿ ಭಾಗವಾದ ಗರಿಕೆಕಿಂಡಿ ಸಮೀಪ ಇಂದು ಮುಂಜಾನೆ ನಡೆದಿದೆ.ಚಾಮರಾಜನಗರದಿಂದ ತಮಿಳುನಾಡಿಗೆ ತೆರುಳುತ್ತಿದ್ದ ಲಾರಿಯೊಂದು ಕೆಟ್ಟು ರಸ್ತೆಯ ಪಕ್ಕದಲ್ಲಿ ನಿಂತಿತ್ತು.ವೇಳೆ ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುತ್ತಿದ್ದಂತಹ ಲಾರಿಯೊಂದು ಢಿಕ್ಕಿ ಹೊಡೆದು ರಸ್ತೆಯ ಪಕ್ಕದ ಗೋಡೆಗೂ ಸಹ ಗುದ್ದಿದೆ. ಇದರ ಪರಿಣಾಮ ಲಾರಿಗಳೆರಡು ಜಖಂಗೊಂಡು ಚಾಲಕನಿಗೆ ಗಾಯಗಳಾಗಿವೆ. 


ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಅವಘಡ ಶನಿವಾರ ಮುಂಜಾನೆ 5 ಗಂಟೆಯಲ್ಲಿ ಸಂಭವಿಸಿದೆ ಹಾಗೂ ಕೆಲ ಕಾಲ ರಸ್ತೆ ಅಡಚಣೆ ಉಂಟಾಗಿತ್ತು ಎಂದು ತಿಳಿದುಬಂದಿದೆ.

ಕಲ್ಲಡ್ಕ: ರೈಲಿನಡಿಗೆ ಬಿದ್ದು ಮಾಣಿ ಮಜಲು ನಿವಾಸಿ ಅರ್ಜುನ್ ಮೃತ್ಯು

Posted by Vidyamaana on 2023-03-17 04:42:27 |

Share: | | | | |


ಕಲ್ಲಡ್ಕ: ರೈಲಿನಡಿಗೆ ಬಿದ್ದು ಮಾಣಿ ಮಜಲು ನಿವಾಸಿ ಅರ್ಜುನ್ ಮೃತ್ಯು

ಕಲ್ಲಡ್ಕ: ರೈಲಿನಡಿಗೆ ಬಿದ್ದು ಯುವಕ ಮೃತಪಟ್ಟ ದಾರುಣ ಘಟನೆ ಮಾ 17 ರಂದು  ಬೆಳಗ್ಗೆ ಗೋಳ್ತಮಜಲು ಎಂಬಲ್ಲಿ ನಡೆದಿದೆ. ಮಾಣಿ ಮಜಲು ನಿವಾಸಿ ಅರ್ಜುನ್ (26) ಮೃತಪಟ್ಟ ದುರ್ದೈವಿ.

ಈ ಅಪಘಾತಕ್ಕೆ ಮೂಲ ಕಾರಣ ಏನೆಂದು ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.

ಡ್ರೀಮ್ ಡೀಲ್ - ಸದಸ್ಯರಿಗೆ ಭರಪೂರ ಬಹುಮಾನ ಇಲ್ಲಿ ಗೆದ್ದವನೇ ಯಜಮಾನ!

Posted by Vidyamaana on 2024-05-01 13:12:24 |

Share: | | | | |


ಡ್ರೀಮ್ ಡೀಲ್ - ಸದಸ್ಯರಿಗೆ ಭರಪೂರ ಬಹುಮಾನ ಇಲ್ಲಿ ಗೆದ್ದವನೇ ಯಜಮಾನ!

(Advertisement)

ಸುರತ್ಕಲ್: ರಾಜ್ಯದಲ್ಲೇ ಪ್ರಥಮ‌ ಎಂಬಂತೆ ತಮ್ಮ ಸದಸ್ಯರಿಗೆ ಭರಪೂರ ಬಹುಮಾನ, ನೂರಾರು ಉಡುಗೊರೆಗಳೊಂದಿಗೆ ಸಾವಿರಾರು ಸದಸ್ಯರನ್ನು ಹೊಂದಿರುವ ಸ್ಕೀಮ್ ಆಗಿದೆ‌ "ಡ್ರೀಮ್ ಡೀಲ್". 

ಡ್ರೀಮ್ ಡೀಲ್ ಬಡವರ ಕನಸಿಗೆ ಬೆಳಕಾಗುವ ಒಂದು ವಿಭಿನ್ನ ಯೋಜನೆ. ಮಂಗಳೂರು, ಬೆಳ್ತಂಗಡಿ, ಮಡಿಕೇರಿ, ಮೈಸೂರು, ಉತ್ತರಕನ್ನಡ, ಚಿಕ್ಕಮಂಗಳೂರು, ಉಡುಪಿ, ಬೆಂಗಳೂರು ಜಿಲ್ಲೆಗಳಲ್ಲಿ ಪ್ರಪ್ರಥಮವಾಗಿ ಆರಂಭವಾಗಿರುವ, ಆರು ಮನೆಗಳು, ಆರು ಕಾರು, ಬೈಕು, ಆಕ್ಟಿವಾ, ಚಿನ್ನದ ಆಭರಣಗಳು, ಡೈಮಂಡ್ ಆಭರಣಗಳು, ನಗದು, ಟೂರ್ ಪ್ಯಾಕೇಜ್ ಹೀಗೆ ಲಕ್ಷಾಂತರ ರೂ.ಮೌಲ್ಯದ ಬಹುಮಾನಗಳ ಸುರಿಮಳೆ ಸುರಿಯುವ ಒಂದು ವಿಭಿನ್ನ ಸ್ಕೀಮ್ ಯೋಜನೆಯಾಗಿದೆ ಡ್ರೀಮ್ ಡೀಲ್. 

ಡ್ರೀಮ್ ಡೀಲ್‌ನಲ್ಲಿ 20ತಿಂಗಳವರೆಗೆ ಪ್ರತಿ ತಿಂಗಳು 1ಸಾವಿರ ರೂ.ಯಂತೆ ಪಾವತಿಸಬೇಕು. ಬಹುಮಾನ ಲಭಿಸದೇ ಇರುವ ಸದಸ್ಯರಿಗೆ, ಅವರ ಉಳಿತಾಯದ ಮೌಲ್ಯಕ್ಕೆ ಸಮಾನವಾದ ಅಥವಾ ಮೊತ್ತಕ್ಕಿಂತ ಹೆಚ್ಚಿನ ಮೌಲ್ಯದ ಬ್ರಾಂಡ್ ಮತ್ತು ಉತ್ತಮ ಗುಣಮಟ್ಟದ ವಸ್ತುಗಳನ್ನು ಆಯ್ಕೆ ಮಾಡಲು ಅವಕಾಶವನ್ನು ಹೊಂದಿರುತ್ತಾರೆ.

ದುಬೈನಲ್ಲಿ ಮತ್ತೊಂದು ಅದ್ಭುತ ಕಟ್ಟಡ ನಿರ್ಮಾಣ.. ನೀರಿನಲ್ಲಿ ತೇಲುವ ಮಸೀದಿ ಏನೆಲ್ಲಾ ಇರುತ್ತದೆ ಗೊತ್ತಾ?

Posted by Vidyamaana on 2023-09-23 16:20:57 |

Share: | | | | |


ದುಬೈನಲ್ಲಿ ಮತ್ತೊಂದು ಅದ್ಭುತ ಕಟ್ಟಡ ನಿರ್ಮಾಣ.. ನೀರಿನಲ್ಲಿ ತೇಲುವ ಮಸೀದಿ ಏನೆಲ್ಲಾ ಇರುತ್ತದೆ ಗೊತ್ತಾ?

   

ದುಬೈ :ವಿಶ್ವದಲ್ಲಿಯೇ ಮೊದಲ ಬಾರಿಗೆ ತೇಲುವ ಮಸೀದಿಯನ್ನು ನಿರ್ಮಿಸುವುದಾಗಿ ಯುಎಇ ಘೋಷಿಸಿದೆ. ಈ ಮಸೀದಿಯಲ್ಲಿ ಮೂರು ಮಹಡಿಗಳನ್ನು ನಿರ್ಮಿಸಲಾಗುವುದು ಎಂದು ಘೋಷಿಸಲಾಗಿದೆ. ಎಮಿರೇಟ್ಸ್​ ಇಸ್ಲಾಮಿಕ್ ಅಫೇರ್ಸ್ ಮತ್ತು ಚಾರಿಟಬಲ್ ಆಕ್ಟಿವಿಟೀಸ್ ಡಿಪಾರ್ಟ್‌ಮೆಂಟ್‌ನ ಕೃಪೆಯಿಂದಾಗಿ ಈ ವಿಶಿಷ್ಟ ಪ್ರಾರ್ಥನಾ ಸ್ಥಳವು ಪ್ರಸ್ತುತ ದುಬೈ ವಾಟರ್ ಕೆನಾಲ್‌ನಲ್ಲಿ ನಿರ್ಮಾಣ ಹಂತದಲ್ಲಿದೆ.ದುಬೈನಲ್ಲಿ ಸ್ಪಟಿಕದಂತಹ ನೀರು ಇರುವ ಕಾಲುವೆಗಳಲ್ಲಿ 5.5 ಕೋಟಿ ದಿರಹಂ ವೆಚ್ಚ ಮಾಡಿ ಅಂದರೆ ಸುಮಾರು 125 ಕೋಟಿ ರೂ. ವೆಚ್ಚ ಮಾಡಿ, ನೀರಿನ ಮೇಲೆ ತೇಲುವ ಮಸೀದಿ (floating mosque) ನಿರ್ಮಿಸಲಾಗುವುದು. ಇಸ್ಲಾಮಿಕ್ ವ್ಯವಹಾರಗಳು ಮತ್ತು ಚಾರಿಟಬಲ್ ಚಟುವಟಿಕೆಗಳ ಇಲಾಖೆ (ಐಸಿಎಡಿ -Islamic Affairs and Charitable Activities Department in Dubai) ಅಧಿಕಾರಿಗಳು ಮುಂದಿನ ವರ್ಷ ಮಸೀದಿಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವಂತೆ (Religious Tourism Project) ಮಾಡಲಾಗುವುದು ಎಂದು ಹೇಳಿದ್ದಾರೆ.


ವಿಶ್ವದಲ್ಲಿಯೇ ಮೊದಲ ಬಾರಿಗೆ ತೇಲುವ ಮಸೀದಿಯನ್ನು ನಿರ್ಮಿಸುವುದಾಗಿ ಯುಎಇ ಘೋಷಿಸಿದೆ. ಈ ಮಸೀದಿಯಲ್ಲಿ ಮೂರು ಮಹಡಿಗಳನ್ನು ನಿರ್ಮಿಸಲಾಗುವುದು ಎಂದು ಘೋಷಿಸಲಾಗಿದೆ. ಎಮಿರೇಟ್ಸ್​ ಇಸ್ಲಾಮಿಕ್ ಅಫೇರ್ಸ್ ಮತ್ತು ಚಾರಿಟಬಲ್ ಆಕ್ಟಿವಿಟೀಸ್ ಡಿಪಾರ್ಟ್‌ಮೆಂಟ್‌ನಕೃಪೆಯಿಂದಾಗಿ ಈ ವಿಶಿಷ್ಟ ಪ್ರಾರ್ಥನಾ ಸ್ಥಳವು ಪ್ರಸ್ತುತ ದುಬೈ ವಾಟರ್ ಕೆನಾಲ್‌ನಲ್ಲಿ ನಿರ್ಮಾಣ ಹಂತದಲ್ಲಿದೆ. ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತು ದುಬೈಗೆ ಭೇಟಿ ನೀಡುವವರ ಸಂಖ್ಯೆಯನ್ನು ಹೆಚ್ಚಿಸುವ ಪ್ರಯತ್ನಗಳ ಭಾಗವಾಗಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.


ಮಸೀದಿಯು ವಿಶಿಷ್ಟ ಲಕ್ಷಣಗಳನ್ನು ಹೊಂದಿರುವ ಮೂರು ಅಂತಸ್ತಿನ ರಚನೆಯಾಗಿದೆ. ಒಂದೇ ಸಮಯದಲ್ಲಿ 50 ರಿಂದ 75 ಭಕ್ತರು ಪ್ರಾರ್ಥನೆ ಸಲ್ಲಿಸಲು ಇದನ್ನು ವಿನ್ಯಾಸಗೊಳಿಸಲಾಗಿದೆ. ಮುಸಲ್ಮಾನರು ಪ್ರಾರ್ಥನೆಗಾಗಿ ವಿಶೇಷವಾಗಿ ನಿರ್ಮಿಸಲಾದ ಈ ತೇಲುವ ಮಸೀದಿಗೆ ಭೇಟಿ ನೀಡಬಹುದು(Islamic tourism). ಇದು ಎಮಿರೇಟ್ಸ್​​ನಲ್ಲಿ ಪ್ರಮುಖ ಆಕರ್ಷಣೆಯಾಗಿದೆ. ಹೆಚ್ಚುವರಿಯಾಗಿ, ಮಸೀದಿಯು ಶೇಖ್ ಮಕ್ತೌಮ್ ಬಿನ್ ರಶೀದ್ ಅಲ್ ಮಕ್ತೌಮ್ ಅವರ ಕುರಾನ್‌ ಪ್ರದರ್ಶನವನ್ನು ಆಯೋಜಿಸುತ್ತದೆ.ಮಸೀದಿಯು ನೀರಿನ ಮೇಲೆ ಎರಡು ಮಹಡಿಗಳನ್ನು ಹೊಂದಿರುತ್ತದೆ, ಮುಂದಿನ ವರ್ಷದ ವೇಳೆಗೆ ಸಂದರ್ಶಕರಿಗೆ ಇಸ್ಲಾಮಿಕ್ ಉಪನ್ಯಾಸಗಳು, ಕಾರ್ಯಾಗಾರಗಳು ಇತ್ಯಾದಿಗಳಿಗಾಗಿ ಇಲ್ಲಿ ಸಭಾಂಗಣ ನಿರ್ಮಿಸಲಾಗುವುದು. ಗಮನಾರ್ಹ ಸಂಗತಿಯೆಂದರೆ, ಈ ತೇಲುವ ಮಸೀದಿ ಎಲ್ಲಾ ಧರ್ಮದ ಜನರನ್ನು ಆಹ್ವಾನಿಸುತ್ತದೆ. ಸಂದರ್ಶಕರು ಸಾಧಾರಣವಾದ ಸಾಮಾನ್ಯವಾದ ಉಡುಗೆ ತೊಟ್ಟುಬರಬಹುದು. ಆದರೂ ಇಸ್ಲಾಮಿಕ್ ಪದ್ಧತಿಗಳನ್ನು ಗೌರವಿಸಲು ವಿನಂತಿಸಲಾಗಿದೆ.

Recent News


Leave a Comment: