Posted by vidyamaana on 2024-07-23 07:07:38 |
ಪುತ್ತೂರು: ರಾಜ್ಯದಲ್ಲಿ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಪ್ರಯತ್ನ ಕೈಗೂಡುವ ವಿಶ್ವಾಸವಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಹಯೋಗದಲ್ಲಿ ಪುತ್ತೂರಿನ ರೋಟರಿ ಮನೀಷಾ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ - ಉಪನ್ಯಾಸ- ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪಶ್ಚಿಮ ಬಂಗಾಳ ಸೇರಿದ ಅನೇಕ ರಾಜ್ಯಗಳಲ್ಲಿ ೨ನೇ ರಾಜ್ಯಭಾಷೆ ಘೋಷಣೆ ಸಂದರ್ಭ ಯಾವೆಲ್ಲ ಮಾನದಂಡ ಅನುಸರಿಸಲಾಗಿದೆ ಎಂಬುದರ ಅಧ್ಯಯನ ನಡೆಸಿ ವರದಿ ತಯಾರಿಸಲಾಗಿದೆ. ಇದನ್ನು ಸರಕಾರ ಪರಿಶೀಲಿಸಿ ಶೀಘ್ರದಲ್ಲೇ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯನ್ನಾಗಿ ಘೋಷಣೆ ಮಾಡುವ ಸಂಬAಧ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡ ಮೇಲೆ ಗೆಜೆಟ್ ನೋಟಿಫೀಕೇಶನ್ ಹೊರಡಿಸಲಾಗುವುದು. ಅದೇ ರೀತಿ ತುಳು ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಸೇರಿಸುವ ವಿಚಾರದಲ್ಲೂ ಕೇಂದ್ರದ ಮೇಲೆ ರಾಜ್ಯದಿಂದ ಒತ್ತಡ ತರುವ ಕೆಲಸ ಮಾಡಲಾಗುತ್ತದೆ. ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರಕಾರದ ಮೇಲೆ ಒತ್ತಡ ಹೇರುತ್ತಿದ್ದೇನೆ. ಮುಂದಿನ ಬಜೆಟ್ನಲ್ಲಿ ಘೋಷಣೆಯ ಆಶಾವಾದ ಇದೆ ಎಂದವರು ಹೇಳಿದರು.
ಸೋಷಿಯಲ್ ಮೀಡಿಯಾದ ಅಬ್ಬರದ ನಡುವೆಯೇ ಜನ ಪತ್ರಿಕೆ ಓದುವುದು ಕಡಿಮೆ ಮಾಡಿಲ್ಲ. ಪತ್ರಿಕಾ ರಂಗದಲ್ಲಿ ಪ್ರಾಮಾಣಿಕತೆ ಬೇಕು. ಅದಿರುವ ಕಾರಣವೇ ದಕ್ಷಿಣಕನ್ನಡದ ಪತ್ರಕರ್ತರು ಎಲ್ಲಿ ಹೋದರೂ ಛಾಪು ಮೂಡಿಸುತ್ತಾರೆ ಎಂದು ಹೇಳಿದರು.
ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭ ಅಭಿವ್ಯಕ್ತಿ ಸ್ವಾತಂತ್ರö್ಯ ಮತ್ತು ಪತ್ರಿಕಾ ಸ್ವಾತಂತ್ರö್ಯ ದಮನ ಮಾಡಲಾಗಿತ್ತು. ಆಗ ಧೀಮಂತ ಪತ್ರಿಕೆಗಳು ಭೂಗತರಾಗಿದ್ದುಕೊಂಡೇ ಪತ್ರಿಕೆ ನಡೆಸಿ ಜನಜಾಗೃತಿ ಮೂಡಿಸಿದ್ದರು. ದೇಶ ಕಟ್ಟುವಲ್ಲಿ ಪತ್ರಿಕೆಗಳ ಪಾತ್ರ ಬಹಳಷ್ಟು ದೊಡ್ಡದು. ಸೋಷಿಯಲ್ ಮೀಡಿಯಾದಿಂದ ಉಪಯೋಗವಿದೆಯಾದರೂ ಅಷ್ಟೇ ಕೆಟ್ಟದೂ ಇದೆ ಎಂದರು.
ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಉಪನ್ಯಾಸ ನೀಡಿದರು. ಮಾಧ್ಯಮ ವರದಿ ಇವತ್ತು ಪ್ರತಿಯೊಬ್ಬರ ಕೈಗೂ ಬಂದಿದೆ. ಜಗತ್ತಿನಲ್ಲಿ ಜೀವರಕ್ಷಕ ಔಷಧಿ ಮೊದಲ ಸ್ಥಾನದಲ್ಲಿದ್ದರೆ, ೨ನೇ ಸ್ಥಾನದಲ್ಲಿ ಮುದ್ರಣ ಮಾಧ್ಯಮಗಳಿವೆ. ಇಷ್ಟಾದರೂ ಮಾಧ್ಯಮಗಳು ಕೆಲವೊಂದು ಅಪವಾದಗಳನ್ನು ಕೂಡ ಎದುರಿಸುತ್ತಿವೆ. ಆರೋಪಿಯೊಬ್ಬನನ್ನು ನ್ಯಾಯಾಲಯ ವಿಚಾರಣೆ ನಡೆಸುವ ಮೊದಲೇ ಮಾಧ್ಯಮಗಳು ವಿಚಾರಣೆ ನಡೆಸಿ ತಪ್ಪಿತಸ್ಥನೆಂದು ಘೋಷಿಸುವುದು ಆತಂಕಕಾರಿ ಬೆಳವಣಿಗೆ. ಅದೇ ರೀತಿ ಪೀತ ಪತ್ರಿಕೋದ್ಯಮದ ಬಗ್ಗೆಯೂ ಜಾಗೃತಿ ಅಗತ್ಯ ಎಂದರು. ಪ್ರತಿಯೊಬ್ಬ ಪತ್ರಕರ್ತರಿಗೂ ವೃತ್ತಿಪರತೆ ಮತ್ತು ನೈತಿಕತೆ ಅಗತ್ಯವಾಗಿ ಬೇಕು ಎಂದವರು ನುಡಿದರು. ಮಾಹಿತಿ ಎಂಬುದು ನೀರಿನ ಥರ. ಕಡಿಮೆಯಾದರೂ ಕಷ್ಟ, ಜಾಸ್ತಿಯಾದರೂ ಕಷ್ಟ. ಇದನ್ನು ಪತ್ರಕರ್ತರು ಅರ್ಥಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಶೇಟ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಕೊಡುಗೆಯಾಗಿ ನೀಡಿದ ಸಿಸಿ ಕ್ಯಾಮೆರಾವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪತ್ರಕರ್ತರಿಗೆ ಹಸ್ತಾಂತರ ಮಾಡಿದರು.
ಪತ್ರಿಕಾ ವಿತರಕರಾದ ವಿಶ್ವನಾಥ್ ಪುತ್ತೂರು ಅವರನ್ನು ಶಾಸಕರು ಪತ್ರಕರ್ತರ ಸಂಘದ ಪರವಾಗಿ ಸನ್ಮಾನಿಸಿದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಾದ ಹಷೇಂದ್ರ ಪ್ರಸಾದ್, ಮಹೇಶ್ ಪ್ರಸಾದ್, ದೀಪ್ತಿ ಭಟ್, ಎ.ಯು. ಅವನೀಶ್ ಕುಮಾರ್, ಸಮ್ಯಕ್, ಸಿಹಾ ಶಮ್ರಾ, ಪುಣ್ಯಶ್ರೀ ಪಿ. ಅವರನ್ನು ಸಂಘದ ಪರವಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಸನ್ಮಾನಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಸಿದ್ಧಿಕ್ ನೀರಾಜೆ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್,ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ,ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವನಿಕೃಷ್ಣ, ಎಸೋಸಿಯೇಶನ್ ಆಫ್ ಸಿವಿಲ್ ಎಂಜಿನಿರ್ಸ್ (ಎಸಿಸಿಇ-ಐ) ಪುತ್ತೂರು ಸೆಂಟರ್ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಕೆ.ಕೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸುಧಾಕರ ಸುವರ್ಣ, ಕಾರ್ಯಕಾರಿ ಸಮಿತಿ ಸದಸ್ಯ ಮೇಘಾ ಪಾಲೆತ್ತಾಡಿ ಮತ್ತು ರೋಟರಿ ಯುವ ಸಂಸ್ಥೆಯ ಕಾರ್ಯದರ್ಶಿ ವಚನಾ ಜಯರಾಂ,ಪ್ರಧಾನ ಕಾರ್ಯದರ್ಶಿ ಶಶಿಧರ ರೈ ಕುತ್ಯಾಳ, ಕೋಶಾಧಿಕಾರಿ ಸಂಶುದ್ದೀನ್ ಸಂಪ್ಯ,ಕಾರ್ಯಕಾರಿ ಸಮಿತಿ ಸದಸ್ಯರಾದ ಐ. ಬಿ. ಸಂದೀಪ್,ಕುಮಾರ್,ಪ್ರಸಾದ್ ಬಲ್ನಾಡ್, ಸಂಘದ ಕಾರ್ಯದರ್ಶಿ ಅಜಿತ್ ಕುಮಾರ್, ಸದಸ್ಯರಾದ ಅನಿಶ್ ಕುಮಾರ್ ಮರೀಲ್,ಶರತ್, ರಾಜೇಶ್ ಪಟ್ಟೆ, ಪಾರೂಕ್ ಶೇಕ್ , ಮತ್ತಿತ್ತರರು ಉಪಸ್ಥಿತರಿದ್ದರು.
Posted by Vidyamaana on 2023-06-12 08:22:08 |
ನವದೆಹಲಿ: ಭಾರತೀಯ ರೈಲ್ವೆಯಲ್ಲಿ ಪ್ರಯಾಣಿಕರು ತಮ್ಮ ಎಲ್ಲಾ ವಿಚಾರಣೆಗಳು ಮತ್ತು ದೂರುಗಳನ್ನು ಗಮನದಲ್ಲಿಟ್ಟುಕೊಂಡು ಕೇವಲ ಒಂದು ಸಂಖ್ಯೆಯನ್ನು ಮಾತ್ರ ನೆನಪಿಟ್ಟುಕೊಳ್ಳಬೇಕು. ವಿವಿಧ ರೀತಿಯ ಕಾಳಜಿಗಳು ಅಥವಾ ಸೇವೆಗಳಿಗಾಗಿ ಅನೇಕ ಸಹಾಯವಾಣಿಗಳನ್ನು ಡಯಲ್ ಮಾಡುವ ಬದಲು, ಪ್ರಯಾಣಿಕರು ಈಗ ಒಂದೇ ಸಹಾಯವಾಣಿ ಸಂಖ್ಯೆ 139 ಗೆ ಕರೆ ಮಾಡುವ ಮೂಲಕ ತಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರಗಳನ್ನು ಪಡೆಯಬಹುದು.ಪ್ರಯಾಣದ ಸಮಯದಲ್ಲಿ ಯಾವುದೇ ರೀತಿಯ ಸಹಾಯಕ್ಕಾಗಿ ಪ್ರವಾಸಿಗರು ಅಧಿಕೃತ website-railm
non
non
@rb.railnet.gov.in ಭೇಟಿ ನೀಡಬಹುದು. ಉದಾಹರಣೆಗೆ, ವೈದ್ಯಕೀಯ ಸಹಾಯ. ರೈಲು ಸಹಾಯ ಅಪ್ಲಿಕೇಶನ್ ಅನ್ನು ಉಮಾಂಗ್ ಅಪ್ಲಿಕೇಶನ್ ಮೂಲಕವೂ ಪ್ರವೇಶಿಸಬಹುದು. ಪ್ರಯಾಣದ ಸಮಯದಲ್ಲಿ ಗ್ರಾಹಕರ ಪ್ರಶ್ನೆಗಳು ಮತ್ತು ದೂರುಗಳನ್ನು ತ್ವರಿತವಾಗಿ ಪರಿಹರಿಸಲು ಅನುಕೂಲವಾಗುವಂತೆ, ರೈಲ್ವೆ 182 ಸೇವೆಗಳು ಸೇರಿದಂತೆ ಎಲ್ಲಾ ಸಹಾಯವಾಣಿಗಳನ್ನು 139 ಎಂಬ ಒಂದೇ ಸಂಖ್ಯೆಯ ಅಡಿಯಲ್ಲಿ ಸಂಪರ್ಕಿಸಿದೆ. ಕಳ್ಳತನ ಮತ್ತು ಇತರ ಅಪರಾಧ ಘಟನೆಗಳಿಗೆ ಸಹಾಯ ಮಾಡಲು ಸಹಾಯವಾಣಿ ಸಂಖ್ಯೆ 182 ಆಗಿದೆಪ್ರಯಾಣಿಕರು ಯಾವ ಸೌಲಭ್ಯಗಳನ್ನು ಪಡೆಯುತ್ತಾರೆ?ರೈಲು ದೂರುಗಳು
ಈ ಸೇವೆಯು ನಾಗರಿಕರಿಗೆ ದೂರು ಸಲ್ಲಿಸಲು ಅಥವಾ ಘಟನೆಯ ಆಯ್ದ ದಿನಾಂಕಗಳಿಗೆ (ಪ್ರಸ್ತುತ ದಿನಾಂಕ ಅಥವಾ ಕೊನೆಯ ನಾಲ್ಕು ದಿನಾಂಕಗಳು) ಸಲಹೆಗಳನ್ನು ಒದಗಿಸುತ್ತದೆ. ದೂರು ನೀಡಲು, ಪ್ರಯಾಣಿಕರು ಘಟನೆಯ ದಿನಾಂಕದ ನಂತರ ರೈಲು ಸಂಖ್ಯೆಯನ್ನು ನಮೂದಿಸಬಹುದು, ನಂತರ ಕಾಯ್ದಿರಿಸದ ಟಿಕೆಟಿಂಗ್ ಸಿಸ್ಟಮ್ (ಯುಟಿಎಸ್) ಸಂಖ್ಯೆ ಅಥವಾ ಪಿಎನ್ಆರ್ ಸಂಖ್ಯೆಯನ್ನು ನಮೂದಿಸಬಹುದು.ಸ್ಟೇಷನ್ ದೂರು ಆಯ್ಕೆ ಮಾಡಿದ ಘಟನೆಯ ದಿನಾಂಕಕ್ಕೆ (ಪ್ರಸ್ತುತ ದಿನಾಂಕ ಅಥವಾ ಕೊನೆಯ ನಾಲ್ಕು ದಿನಾಂಕಗಳು) ಸ್ಟೇಷನ್-ಸಂಬಂಧಿತ ದೂರು ಅಥವಾ ಸಲಹೆಯನ್ನು ಸಲ್ಲಿಸಲು ಈ ಸೇವೆಯು ನಾಗರಿಕರನ್ನು ಒದಗಿಸುತ್ತದೆ.
ನಿಮ್ಮ ದೂರನ್ನು ಟ್ರ್ಯಾಕ್ ಮಾಡಿ ಈ ಸೇವೆಯು ನಾಗರಿಕರಿಗೆ ರೈಲು ಅಥವಾ ನಿಲ್ದಾಣಕ್ಕೆ ಸಂಬಂಧಿಸಿದ ತಮ್ಮ ನೋಂದಾಯಿತ ದೂರುಗಳನ್ನು ಉಲ್ಲೇಖ ಸಂಖ್ಯೆಯನ್ನು ಒದಗಿಸುವ ಮೂಲಕ ಟ್ರ್ಯಾಕ್ ಮಾಡಲು ಅನುವು ಮಾಡಿಕೊಡುತ್ತದೆ.
ಸರಕುಗಳು / ಪಾರ್ಸೆಲ್ ವಿಚಾರಣೆಘಟನೆಯ ದಿನಾಂಕದಿಂದ 30 ದಿನಗಳ ಒಳಗೆ ಆಯ್ದ ಘಟನೆಯ ದಿನಾಂಕಕ್ಕಾಗಿ ಸರಕು / ಪಾರ್ಸೆಲ್ ವಿಚಾರಣೆಗಳಿಗೆ ಸಂಬಂಧಿಸಿದ ವಿಚಾರಣೆಗಳು / ದೂರುಗಳನ್ನು ಸಲ್ಲಿಸಲು ಈ ಸೇವೆಯು ನಾಗರಿಕರಿಗೆ ಅನುವು ಮಾಡಿಕೊಡುತ್ತದೆ.
Posted by Vidyamaana on 2023-09-12 11:08:54 |
ಪುತ್ತೂರು: ಕಬಕ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕ ಬಾಲಕಿಯರ ಫುಟ್ಬಾಲ್ ಪಂದ್ಯಾಟ ಸೆ. 9ರಂದು ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಯ್ಯ ಅವರ ನೇತೃತ್ವದಲ್ಲಿ ನಡೆಯಿತು.
ಕಬಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲಾ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಎಂ.ಪಿ. ಅಬ್ಬಾಸ್ ಅಧ್ಯಕ್ಷತೆ ವಹಿಸಿದ್ದರು.
ಕಬಕ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಸದಸ್ಯರು, ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್ ಸಿ., ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಾಹಂ ಹಾಗೂ ಗಣ್ಯರು ಉಪಸ್ಥಿತರಿದ್ದರು.
ಶಾಲಾ ಮುಖ್ಯಗುರು ಸುರೇಖಾ ಸ್ವಾಗತಿಸಿ, ಸುಮಿತ್ರಾ ವಂದಿಸಿದರು. ಶಿಕ್ಷಕಿ ಶಾಂತ ಕಾರ್ಯಕ್ರಮ ನಿರೂಪಿಸಿದರು. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಹಕರಿಸಿದರು.
Posted by Vidyamaana on 2023-03-23 11:14:38 |
ಪುತ್ತೂರು: ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂಭಾಗದ ಸೂಪರ್ ಟವರ್ನಲ್ಲಿ ಸಿಗ್ನೇಚರ್ ಮೆನ್ಸ್ ವೆಡ್ಡಿಂಗ್ ಸ್ಟುಡಿಯೋ ಮಾ. 20ರಂದು ಉದ್ಘಾಟನೆಗೊಂಡಿತು.
ಮಧು ಮನೋಹರ್ ಹಾಗೂ ಉದ್ಯಮಿ ಅಬ್ಬಾಸ್ ಹಾಜಿ ಕೊಯಿಲ ಮಳಿಗೆಯನ್ನು ಉದ್ಘಾಟಿಸಿದರು.ಪುತ್ತೂರು ನಗರಸಭೆ ಪೌರಾಯುಕ್ತ ಮಧು ಎಸ್. ಮನೋಹರ್ ಮಾತನಾಡಿ, ಉದ್ಯಮ ಬೆಳೆದಾಗ ಪಟ್ಟಣ ಬೆಳೆಯುತ್ತದೆ. ಇದೀಗ 2ನೇ ಮಳಿಗೆಯನ್ನು ತೆರೆಯುತ್ತಿರುವ ಸಿಗ್ನೇಚರ್ ಮಳಿಗೆಗೆ ಉತ್ತಮ ಸ್ಪಂದನೆ ಜನರಿಂದ ಮೂಡಿಬರಲಿ ಎಂದು ಹಾರೈಸಿದರು.
ಉದ್ಯಮಿ ಅಶೋಕ್ ಕುಮಾರ್ ರೈ ಮಾತನಾಡಿ, ಪುತ್ತೂರಿನ ಹೃದಯ ಭಾಗದಲ್ಲಿರುವ ಸಿಗ್ನೇಚರ್ ಮೆನ್ಸ್ ವೆಡ್ಡಿಂಗ್ ಸ್ಟುಡಿಯೋ, ಪುರುಷರ ಅಭಿರುಚಿಗೆ ತಕ್ಕಂತಹ ಬಟ್ಟೆಗಳನ್ನು ನೀಡಲು ಉತ್ಸುಕವಾಗಿದೆ. ಪುತ್ತೂರಿನ ಜನರ ಅಭಿರುಚಿಗೆ ಪೂರಕವಾದಂತಹ ಬಟ್ಟೆಗಳನ್ನು ಒದಗಿಸುವ ಜೊತೆಗೆ, ಗ್ರಾಹಕರ ಮನೋಭಿಲಾಷೆಯನ್ನು ಈ ಸಂಸ್ಥೆ ಪೂರೈಸಲಿ. ಗ್ರಾಹಕರಿಂದಲೂ ಉತ್ತಮ ಸ್ಪಂದನೆ ಸಂಸ್ಥೆಗೆ ದೊರಕಲಿ ಎಂದು ಶುಭಹಾರೈಸಿದರು.
ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಬ್ರಾಂಡೆಡ್ ಉತ್ಪನ್ನಗಳ ಮಳಿಗೆ ಪುತ್ತೂರಿಗೆ ಅಗತ್ಯವಿತ್ತು. ಪುತ್ತೂರಿನ ಮುಖ್ಯಪೇಟೆಯಲ್ಲೇ ಸಿಗ್ನೇಚರ್ ಮೆನ್ಸ್ ವೆಡ್ಡಿಂಗ್ ಸ್ಟುಡಿಯೋ ಮೂಲಕ ಜನರ ಅಗತ್ಯತೆಯನ್ನು ಪೂರೈಸಲು ಮುಂದಾಗಿದೆ. ಪುತ್ತೂರಿನ ಹೃದಯ ಭಾಗದಲ್ಲಿ ಇಂತಹದ್ದೊಂದು ಬೃಹತ್ ಮಳಿಗೆಯನ್ನು ತೆರೆಯುವುದು ಸುಲಭದ ಮಾತಲ್ಲ. ಆದರೆ ಸಿಗ್ನೇಚರ್ ಮಳಿಗೆಯ ಪಾಲುದಾರರು ಸವಾಲಾಗಿ ಸ್ವೀಕರಿಸಿ, ಮುಂದಡಿ ಇಟ್ಟಿದ್ದಾರೆ. ಅವರಿಗೆ ಬೆಂಬಲ ನೀಡುವುದು ನಮ್ಮೆಲ್ಲರ ಕರ್ತವ್ಯ. ಆದ್ದರಿಂದ ಪುತ್ತೂರಿನ ಜನರು ನಮ್ಮೂರಿನ ಮಳಿಗೆಯಲ್ಲೇ ಉತ್ಪನ್ನಗಳನ್ನು ಖರೀದಿಸಬೇಕು. ಇದರಿಂದ ಖರೀದಿಗಾಗಿ ದೂರದ ಊರಿಗೆ ಹೋಗುವ ಪ್ರಮೇಯ ತಪ್ಪುತ್ತದೆ. ಮಾತ್ರವಲ್ಲ, ನಮ್ಮೂರಿನಲ್ಲೇ ಉದ್ಯಮವನ್ನು ಬೆಳೆಸಿದಂತಹ ತೃಪ್ತಿಯೂ ನಮಗೆ ಸಿಗುತ್ತದೆ ಎಂದರು.
ಎಸ್.ಡಿ.ಪಿ.ಐ. ರಾಜ್ಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಮಾತನಾಡಿ, ಪ್ರಾಮಾಣಿಕತೆ ಹಾಗೂ ಸೇವೆ ಉದ್ಯಮದ ಯಶಸ್ಸಿನ ಸೂತ್ರಗಳು. ಇವನ್ನು ಅಳವಡಿಸಿಕೊಂಡು ಉದ್ಯಮದಲ್ಲಿ ಯಶಸ್ವಿಯಾಗಿ ಎಂದು ಶುಭಹಾರೈಸಿದರು.
ವರ್ತಕ ಸಂಘದ ಅಧ್ಯಕ್ಷ ಜಾನ್ ಕುಟಿನ್ಹಾ ಮಾತನಾಡಿ, ಉದ್ಯಮವಾದರೂ ಅದರ ಹಿಂದೆ ಸೇವೆಯ ರೂಪ ಇರುತ್ತದೆ. ಆದ್ದರಿಂದ ಪುತ್ತೂರಿನ ಜನರು ಇಂತಹ ಉದ್ಯಮಕ್ಕೆ ಬೆಂಬಲ ನೀಡಬೇಕು ಎಂದ ಅವರು, ಇಲ್ಲಿ ತಾನೊಬ್ಬನೇ ಬೆಳೆಯಬೇಕು ಎಂಬ ಭಾವನೆಯ ಬದಲಾಗಿ, ನಮ್ಮ ಜೊತೆಗಿರುವವರು ಬೆಳೆಯಬೇಕು ಎನ್ನುವ ಭಾವನೆಯೇ ಮುಖ್ಯವಾಗಿರುತ್ತದೆ. ಎಲ್ಲರೂ ಜೊತೆಗೆ ಬೆಳೆದಾಗ, ಸಂಸ್ಥೆಯೂ ಬೆಳೆಯುತ್ತದೆ ಎಂದರು.
ಡಾ. ನಝಿರ್ ಅಹಮದ್ ಕ್ಲಿನಿಕ್ನ ಡಾ. ನಝೀರ್ ಅಹಮದ್ ಮಾತನಾಡಿ, ಪುತ್ತೂರು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂಭಾಗದಲ್ಲೇ ಇಂತಹ ಬೃಹತ್ ಮಳಿಗೆ ತೆರೆಯುವುದು ಸುಲಭದ ಮಾತಲ್ಲ. ಆದರೆ ಸಿಗ್ನೇಚರ್ ಸಂಸ್ಥೆಯ ಮಾಲಕರು ಅಂತಹ ಧೈರ್ಯವನ್ನು ತೋರಿಸಿದ್ದಾರೆ. ಇದೀಗ ಸಿಗ್ನೇಚರ್ ಸಂಸ್ಥೆಯ 2ನೇ ಮಳಿಗೆಯನ್ನು ಪುತ್ತೂರಿನಲ್ಲಿ ಆರಂಭಿಸುತ್ತಿದ್ದು, ಪುರುಷರಿಗೆಂದೇ ವಿಶೇಷವಾಗಿ ಮಳಿಗೆಯನ್ನು ವಿನ್ಯಾಸಗೊಳಿಸಲಾಗಿದೆ. ಪುತ್ತೂರಿನ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡರು.
ರಾಜ್ಯ ವಾಲಿಬಾಲ್ ಅಸೋಸಿಯೇಶನ್ ಸದಸ್ಯ ಇಬ್ರಾಹಿಂ ಗೋಳಿಕಟ್ಟೆ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ಎಸ್.ಡಿ.ಪಿ.ಐ. ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಇಬ್ರಾಹಿಂ ಸಾಗರ್, ವಕೀಲರಾದ ನೂರುದ್ದೀನ್ ಸಾಲ್ಮರ, ಸಿದ್ದೀಕ್ ಕೆ.ಎಂ., ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರ್ಷದ್ ದರ್ಬೆ, ಉಪ್ಪಿನಂಗಡಿ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಯು.ಟಿ. ತೌಸೀಫ್, ಮದರ್ ಇಂಡಿಯಾದ ಮಾಲಕ ಅಬ್ದುಲ್ ರಝಾಕ್. ವರ್ತಕ ಸಂಘದ ಕಾರ್ಯದರ್ಶಿ ಉಲ್ಲಾಸ್ ಪೈ, ಡ್ಯಾಶ್ ಮಾರ್ಕೆಟಿಂಗಿನ ನಿಹಾಲ್ ಶೆಟ್ಟಿ, ಪ್ರಮುಖರಾದ ಇಸಾಕ್ ಸಾಲ್ಮರ, ಸಿದ್ದೀಕ್, ರಾಕೇಶ್ ರೈ ಪಡುಮಲೆ, ಉದ್ಯಮಿ ಶಬೀರ್ ಕೆಂಪಿ, ಉದ್ಯಮಿ ಹಸನ್ ಸಜ್ಜದ್ ಮೊದಲಾದವರು ಉಪಸ್ಥಿತರಿದ್ದರು.
ಸಿಯಾರಾಮ್, ಅರವಿಂದ್, ರೇಮಂಡ್, ಲಿನೆನ್ ಕ್ಲಬ್ ಬ್ರಾಂಡೆಡ್ ಕಂಪೆನಿಗಳ ಉಡುಗೆಗಳು ಇಲ್ಲಿ ಲಭ್ಯವಿದೆ. ಪುರುಷರ ಪ್ಯಾಂಟ್, ಶರ್ಟ್ಸ್, ಕುರ್ತಾ, ಪೈಜಾಮ್, ಕೋಟ್ಸ್, ಶೇರ್ವಾನಿ, ಸೂಟ್ಸ್, ಕಂದೂರ, ಜೋಧ್ ಪುರಿ, ಡ್ರೆಸ್ ಕೋಡ್ ಮೊದಲಾದ ಹಲವು ವಿನ್ಯಾಸದ ಬಟ್ಟೆಗಳು ಗ್ರಾಹಕರಿಗೆ ವಿಶೇಷ ದರದಲ್ಲಿ ಲಭ್ಯವಾಗಲಿದೆ ಎಂದು ಪಾಲುದಾರರಾದ ನಾಸಿರ್ ಕೊಯಿಲ, ಇಶಾಮ್ ಪರ್ಲಡ್ಕ, ಫಾರೂಕ್ ಸಾಲ್ಮರ, ಆಸೀಫ್ ಕೊಯಿಲ ತಿಳಿಸಿದ್ದಾರೆ.ರಿಯಾಜ್ ಇಂಡಿಯನ್ ಉಪ್ಪಿನಂಗಡಿ,ಹಮೀದ್ ಮುಕ್ವೆ,ಜಬ್ಬಾರ್ ಬೋಳುವರ್,ಉನೈಸ್ ಬಂಡಡ್,ರೆಹಮಾನ್ ಬಡಮೆ ಉಪ್ಪಿನಂಗಡಿ, ಹುಸೇನ್, ಹಂಝ, ಝಕರಿಯ,ಅಲಿ,ಸಿರಾಜ್,
ನವಾಜ್ ಪಿಎಸ್ ಕೆರೆಮೋಳೆ,ನೌಫಲ್ ಸಾಲ್ಮರ,ತಾಜು ಫಟಾಫಟ್,ಆದಿಲ್ ಪರ್ಲಡ್ಕ,ಸುಹೇಲ್ ಹುಬಿಯೋ ಇಂಟೀರಿಯರ್,ತ್ವಾಹಿರ್ ಸೈಮನ್,ಇಮ್ತಿಯಾಜ್,ಶಾಹಿರ್,ಫಾರೂಕ್ ಐ ಮ್ಯಾಕ್ಸ್, ಸೈಫ್ ಪರ್ದ್ ಪ್ಯಾಲೇಸ್ ಮೊದಲಾದವರು ಬಂದು ನೂತನ ಸಂಸ್ಥೆಗೆ ಶುಭ ಹಾರೈಸಿದರು.
Posted by Vidyamaana on 2023-12-18 12:53:55 |
ಕಾಪುವಿನ ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ಅಪ್ರಾಪ್ತ ವಯಸ್ಸಿನ ಸಾಕು ಮಗಳ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ಆಕೆಯ ಸ್ನೇಹಿತ ಶಿರ್ವ ನಿವಾಸಿ ಗಿರೀಶ್ (20), ನಾಪತ್ತೆಯಾಗಲು ಸಹಕರಿಸಿದ ಶಿರ್ವದ ರೂಪೇಶ್ (22), ಜಯಂತ್ (23) ಮತ್ತು ಮಜೂರು ನಿವಾಸಿ ಮೊಹಮ್ಮದ್ ಅಜೀಝ್ ಎಂದು ಗುರುತಿಸಲಾಗಿದೆ.
ಆರೋಪಿಗಳನ್ನು ಮತ್ತು ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಪೊಲೀಸರು ಕುಂಬ್ಳೆ ಬಳಿ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.
ಲೀಲಾಧರ ಶೆಟ್ಟಿ ಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವೊಂದನ್ನು ದತ್ತು ಪಡೆದಿದ್ದು, ಆಕೆ ಡಿಸೆಂಬರ್ 11 ರಂದು ಏಕಾಏಕಿ ನಾಪತ್ತೆಯಾಗಿದ್ದಳು.
ಈ ಘಟನೆಯಿಂದ ನೊಂದು ಸಮಾಜಕ್ಕೆ ಹೆದರಿ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆಗೆ ಸಂಬಂಧಪಟ್ಟಂತೆ ಕಾಪು ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ಮತ್ತು ನಾಪತ್ತೆ ಪ್ರಕರಣಗಳು ದಾಖಲಾಗಿದ್ದವು.
ಆರೋಪಿ ಗಿರೀಶ್ ವಿರುದ್ದ ಪೋಕ್ಸೋ, ಅತ್ಯಾಚಾರ, ಅಪಹರಣ ಪ್ರಕರಣ ಮತ್ತು ಸ್ನೇಹಿತರ ವಿರುದ್ದ ಪೋಕ್ಸೋ ಪ್ರಕರಣವನ್ನು ದಾಖಲಿಸಲಾಗಿದೆ.
ಜಿಲ್ಲಾ ಪೋಲಿಸ್ ವರಿಷ್ಟಾದಿಕಾರಿ ಡಾಕ್ಟರ್ ಅರುಣ್ ಕೆ, ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ, ಕಾರ್ಕಳ ಡಿವೈಎಸ್ ಪಿ ಅರವಿಂದ ಕಲ್ಲಗುಜ್ಜಿ ಮಾರ್ಗದರ್ಶನದಲ್ಲಿ ಕಾಪು ಎಸ್ ಐ ಅಬ್ದುಲ್ ಖಾದರ್ ಮತ್ತು ತಂಡ ಆರೋಪಿಗಳನ್ನು ಬಂಧಿಸಿದೆ.
Posted by Vidyamaana on 2023-03-15 14:20:07 |
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ 5 ಮತ್ತು 8ನೇ ತರಗತಿಗೆ ಇದೇ ಮಾರ್ಚ್ 27ರಿಂದ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.ಈ ಬಾರಿ ಪಬ್ಲಿಕ್ ಪರೀಕ್ಷೆ ನಡೆಸಬಾರದು ಎಂದು ಖಾಸಗಿ ಶಾಲೆಗಳ ಒಕ್ಕೂಟವು ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಕೋರ್ಟ್ ಆದೇಶದಿಂದ ಒಕ್ಕೂಟದ ನಿಲುವಿಗೆ ಹಿನ್ನಡೆಯಾದಂತಾಗಿದೆ.ನ್ಯಾ.ನರೇಂದರ್ ಹಾಗೂ ಅಶೋಕ್ ಕಿಣಗಿ ಅವರನ್ನೊಳಗೊಂಡ ವಿಭಾಗೀಯ ಪೀಠದಲ್ಲಿ ಬುಧವಾರ ಸಂಜೆ ವಿಚಾರಣೆ ನಡೆದು ಕೋರ್ಟ್ ಪರೀಕ್ಷೆಗೆ ಅನುಮತಿ ನೀಡಿದೆ. ಈ ಬಾರಿಯಿಂದಲೇ ಪಬ್ಲಿಕ್ ಪರೀಕ್ಷೆ ನಡೆಸುವ ನಿರ್ಧಾರವನ್ನು ಏಕಸದಸ್ಯ ಪೀಠ ರದ್ದುಪಡಿಸಿತ್ತು. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಅದರ ವಿಚಾರಣೆ ಎರಡು ದಿನಗಳ ಕಾಲ ನಡೆದು ಬುಧವಾರ ಸಂಜೆ ಕೋರ್ಟ್ ತನ್ನ ಅಭಿಪ್ರಾಯವನ್ನು ತಿಳಿಸಿದೆ.
Posted by Vidyamaana on 2022-11-29 16:47:29 |
ಇನ್ನೂ ೬ ಡಯಾಲಿಸಿಸ್ ಯಂತ್ರಗಳ ಅವಶ್ಯಕತೆ
ದಾನಿಗಳ ನೆರವು ಪಡೆಯಲು ಆರೋಗ್ಯ ರಕ್ಷಾ ಸಮಿತಿ ತೀರ್ಮಾನ
ಪುತ್ತೂರು: ತಾಲೂಕು ಸಾರ್ವಜನಿಕ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆ ಸಂದರ್ಭದಲ್ಲಿ ಅವಶ್ಯಕತೆ ಇರುವ ಇನ್ನೂ ೬ ಡಯಾಲಿಸಿಸ್ ಯಂತ್ರಗಳನ್ನು ದಾನಿಗಳ ನೆರವಿನಿಂದ ಹೊಂದಿಸಿಕೊಳ್ಳುವ ಅಗತ್ಯವಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.
ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಸಮಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಆರೋಗ್ಯ ರಕ್ಷಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪುತ್ತೂರು ಹಾಗೂ ಕಡಬ ತಾಲೂಕಿಗೆ ಏಕೈಕ ಡಯಾಲಿಸಿಸ್ ಕೇಂದ್ರ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿದೆ. ಇದು ಸಾಕಾಗುತ್ತಿಲ್ಲ. ಆದ್ದರಿಂದ ಮಂಗಳೂರು ಸೇರಿದಂತೆ ಇತರ ಕಡೆಗಳಿಗೆ ಜನರು ಹೋಗಬೇಕಾದ ಪರಿಸ್ಥಿತಿ ಇದೆ. ಆದ್ದರಿಂದ ಉದ್ಘಾಟನೆಗೆ ಸಿದ್ಧವಾಗಿರುವ ಡಯಾಲಿಸಿಸ್ ಕೇಂದ್ರದ ಕಟ್ಟಡವನ್ನು ಸಾರ್ವಜನಿಕ ಬಳಕೆಗೆ ಮುಕ್ತವಾಗುವಂತೆ ಮಾಡಲು ಒತ್ತಡ ಬರುತ್ತಿದೆ. ಉದ್ಘಾಟನೆಯ ಸಂದರ್ಭದಲ್ಲಿ ಅವಶ್ಯಕತೆ ಇರುವ ಇನ್ನೂ ೬ ಡಯಾಲಿಸಿಸ್ ಮೆಷಿನ್ಗಳನ್ನು ಹೊಂದಿಸಿಕೊಳ್ಳುವ ಅಗತ್ಯವಿದೆ. ಇದಕ್ಕಾಗಿ ರೋಟರಿ ಮೊದಲಾದ ಸಂಸ್ಥೆ ಹಾಗೂ ದಾನಿಗಳ ಸಹಾಯ ಪಡೆದುಕೊಳ್ಳಬೇಕಾಗಿದೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳ ವತಿಯಿಂದ ೪ ಡಯಾಲಿಸಿಸ್ ಮೆಷಿನ್ ಕೊಡಿಸುವುದಾಗಿ ಹಿಂದಿನ ಜಿಲ್ಲಾಧಿಕಾರಿಗಳು ತಿಳಿಸಿದ್ದರು ಎಂದು ನೆನಪಿಸಿದ ಅವರು, ಆರ್.ಓ. ಪ್ಲಾಂಟ್ಗೆ ಅಗತ್ಯವಿರುವ ೧೦ ಲಕ್ಷ ರೂ.ವನ್ನು ಸರಕಾರದಿಂದ ಮಂಜೂರುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಆಸ್ಪತ್ರೆ ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ ಮಾಹಿತಿ ನೀಡಿ, ಈಗಾಗಲೇ ಪುತ್ತೂರು ಡಯಾಲಿಸಿಸ್ ಕೇಂದ್ರದಲ್ಲಿ ೫೪ ಮಂದಿಗೆ ನಿರಂತರವಾಗಿ ಡಯಾಲಿಸಿಸ್ ನೀಡಲಾಗುತ್ತಿದೆ. ೪೮ ಮಂದಿ ಇನ್ನೂ ವೈಟಿಂಗ್ನಲ್ಲಿದ್ದಾರೆ. ಆದ್ದರಿಂದ ಈ ಬೇಡಿಕೆಯನ್ನು ಪೂರೈಸಲು ಒಟ್ಟು ೧೨ ಡಯಾಲಿಸಿಸ್ ಯಂತ್ರಗಳ ಅಗತ್ಯವಿದೆ. ಆದರೆ ಆಸ್ಪತ್ರೆಯಲ್ಲಿ ಇರುವುದು ೬ ಡಯಾಲಿಸಿಸ್ ಯಂತ್ರಗಳು ಮಾತ್ರ. ಆದ್ದರಿಂದ ಉಳಿದ ೬ ಯಂತ್ರಗಳನ್ನು ಜೋಡಿಸಿಕೊಳ್ಳಬೇಕಾದ ಅಗತ್ಯವಿದೆ. ಇದಕ್ಕೆ ಅಗತ್ಯವಿರುವ ಡಯಾಲಿಸಿಸ್ ಕೇಂದ್ರದ ಕಾಮಗಾರಿಯನ್ನು ಸುಮಾರು ೬೦ ಲಕ್ಷ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಆಲುಕ್ಕಾಸ್ ಸ್ವರ್ಣ ಮಳಿಗೆಯವರು ಒಂದು ಯಂತ್ರವನ್ನು ಕೊಡುಗೆಯಾಗಿ ನೀಡುವುದಾಗಿ ತಿಳಿಸಿದ್ದಾರೆ. ಹೊಸ ಯಂತ್ರದ ಕೇಂದ್ರಕ್ಕೆ ಹೊಸದಾಗಿ ಆರ್.ಓ. ಪ್ಲಾಂಟ್ ನಿರ್ಮಿಸಲು ೧೦ ಲಕ್ಷ ರೂ. ಅಗತ್ಯವಿದೆ. ಇದರೊಂದಿಗೆ ಕೊಠಡಿಗೆ ಹವಾನಿಯಂತ್ರಿಣ ಅಳವಡಿಸಲು ೩ ಲಕ್ಷ ರೂ. ಬೇಕಾಗಿದೆ. ೬ ಡಯಾಲಿಸಿಸ್ ಯಂತ್ರ ಖರೀದಿಗೆ ಒಟ್ಟು ೬೦ ಲಕ್ಷ ರೂ. ವೆಚ್ಚ ತಗುಲಲಿದೆ ಎಂದು ಮಾಹಿತಿ ನೀಡಿದರು.
ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿರುವಂತೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿಯೂ ಬ್ಲಡ್ ಬ್ಯಾಂಕ್ ತೆರೆಯುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಆಸ್ಪತ್ರೆಯಲ್ಲಿ ರಕ್ತ ಸಂಗ್ರಹಣಾ ವ್ಯವಸ್ಥೆಯಿದೆ. ಬ್ಲಡ್ ಬ್ಯಾಂಕ್ ಮಾಡುವುದಾದಲ್ಲಿ ಅದಕ್ಕೆ ಬೇಕಾದಂತೆ ಕೊಠಡಿ ಸೇರಿದಂತೆ ಎಲ್ಲಾ ವ್ಯವಸ್ಥೆಗಳಿವೆ. ಅದರೆ ಬ್ಲಡ್ ಬ್ಯಾಂಕ್ ಮಾಡಿದಲ್ಲಿ ಅದಕ್ಕೆ ಸಿಬ್ಬಂದಿಗಳ ನೇಮಕಗೊಳಿಸಬೇಕು. ಇದಕ್ಕೂ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಗೆ ಈ ಬಗ್ಗೆ ಪ್ರಯತ್ನಿಸುವುದಾಗಿ ಶಾಸಕರು ಭರವಸೆ ನೀಡಿದರು.
ಪುತ್ತೂರು ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ಒಂದು ವರ್ಷಗಳಾಗಿದೆ. ಅದಕ್ಕೆ ಪೂರಕವಾಗಿ ೫.೧೬ ಎಕ್ರೆ ಜಮೀನು ಮೀಸಲಿಟ್ಟು, ಆಸ್ಪತ್ರೆಯ ಹೆಸರಿನಲ್ಲಿ ಪಹಣಿ ಪತ್ರವನ್ನು ಮಾಡಲಾಗಿದೆ. ಈ ಬಗ್ಗೆ ತಾಂತ್ರಿಕ ವರದಿಯನ್ನು ನೀಡುವಂತೆ ಇಂಜಿನಿಯರ್ ಅವರಿಗೆ ಶಾಸಕರು ಸೂಚನೆ ನೀಡಿದರು.
ಸಭೆಯಲ್ಲಿ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ಪೌರಾಯುಕ್ತ ಮಧು ಎಸ್. ಮನೋಹರ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ರಫೀಕ್ ದರ್ಬೆ, ಡಾ. ಕೃಷ್ಣ ಪ್ರಸನ್ನ, ದಿನೇಶ್ ಜೈನ್, ಕೃಷ್ಣ ನಾಯ್ಕ ಉಪಸ್ಥಿತರಿದ್ದರು. ಡಾ. ಜಯದೀಪ್ ಸ್ವಾಗತಿಸಿದರು.