Posted by vidyamaana on 2024-07-24 08:25:31 | Last Updated by Vidyamaana on 2024-07-24 08:25:31
ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಲಾರಿ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ
ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.
Posted by Vidyamaana on 2023-10-24 06:43:19 |
ಮಂಗಳೂರು: ನಗರದ ಸ್ಟೇಟ್ಬ್ಯಾಂಕ್ ಬಳಿಯ ರಾವ್ ಅಂಡ್ ರಾವ್ ಸರ್ಕಲ್ ನಲ್ಲಿ ಖಾಸಗಿ ಬಸ್ಸಿನ ಧಾವಂತಕ್ಕೆ ಪಾದಚಾರಿ ಒಬ್ಬರು ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ.
ಮಂಗಳೂರಿನ ಸ್ಟೇಟ್ ಬ್ಯಾಂಕ್ ವೃತ್ತದಿಂದ ಕೊಣಾಜೆ ಬಳಿಯ ಹೂಹಾಕುವ ಕಲ್ಲು ಎಂಬಲ್ಲಿಗೆ ತೆರಳುತ್ತಿದ್ದ ಖಾಸಗಿ ಬಸ್ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ತಿರುವು ಪಡೆಯುತ್ತಿದ್ದಂತೆ ವ್ಯಕ್ತಿಯೊಬ್ಬರು ಅಡ್ಡ ಬಂದಿದ್ದು ನೇರವಾಗಿ ಬಸ್ಸಿನ ಮುಂದಿನ ಚಕ್ರದಡಿಗೆ ಬಿದ್ದು ಸಾವು ಕಂಡಿದ್ದಾರೆ.
ವ್ಯಕ್ತಿಯ ತಲೆ ಪೂರ್ತಿ ಛಿದ್ರಗೊಂಡಿದ್ದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಖ ಛಿದ್ರಗೊಂಡಿದ್ದರಿಂದ ವ್ಯಕ್ತಿಯ ಮುಖ ಪರಿಚಯವೂ ಇಲ್ಲದೆ ಮೃತರ ಪತ್ತೆ ಸಾಧ್ಯವಾಗಿಲ್ಲ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು ಪಾಂಡೇಶ್ವರ ಪೊಲೀಸರು ಸೆಕ್ಷನ್ 304 ಅಡಿ ಕೊಲೆಗೆ ಸಮಾನ ಆಗಬಲ್ಲ ಅಪರಾಧ ಎಸಗಿದ್ದಾಗಿ ಪ್ರಕರಣ ದಾಖಲಿಸಿದ್ದಾರೆ. ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ವ್ಯಕ್ತಿ 40-42 ವಯಸ್ಸಿನವರು ಎನ್ನಲಾಗುತ್ತಿದ್ದು ಅಪರಿಚಿತನ ಪತ್ತೆಗಾಗಿ ಸಂಶಯ ಇದ್ದವರು ಪಾಂಡೇಶ್ವರ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ. ಶವವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇಡಲಾಗಿದೆ.
Posted by Vidyamaana on 2024-06-02 23:35:39 |
ಪುತ್ತೂರು: ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿ ಮತಗಟ್ಟೆ ಸಮೀಪ ಪುತ್ತೂರು ಕಿಲ್ಲೆ ಮೈದಾನದ ಸೋಮವಾರದ ಸಂತೆ ನಡೆಯಲಿರುವ ಹಿನ್ನೆಲೆಯಲ್ಲಿ ಸಂತೆಯನ್ನು ರದ್ದುಗೊಳಿಸದೆ ಸಂತೆಯ ಪ್ರವೇಶದ ಮುಖ್ಯ ದ್ವಾರವನ್ನು ಬಂದ್ ಮಾಡಲಾಗುವುದು.
ಹಿಂಬಂದಿಯ ಗೇಟಿನ ಮೂಲಕ ಸಾರ್ವಜನಿಕರಿಗೆ ಸಂತೆಗೆ ಆಗಮಿಸಲು ಅವಕಾಶ ಮಾಡಲಾಗಿದೆ ಎಂದು ಪುತ್ತೂರು ತಹಸೀಲ್ದಾರ್ ಕುಂಞ ಅಹಮ್ಮದ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮತದಾನ ಪ್ರಕ್ರಿಯೆ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಮುಕ್ತ ಹಾಗು ನ್ಯಾಯೋಚಿತ ನಿಷ್ಪಕ್ಷವಾಗಿ ಚುನಾವಣೆಯನ್ನು ನಡೆಸುವ ಸಲುವಾಗಿ ಜಿಲ್ಲಾಧಿಕಾರಿಗಳ ಆದೇಶದಂತೆ ಕಿಲ್ಲೆ ಮೈದಾನದ ಸೋಮವಾರ ಸಂತೆಯು ಕೂಡಾ ಚುನಾವಣೆ ಸಂದರ್ಭದಲ್ಲಿ ನಡೆಯುತ್ತದೆ.
Posted by Vidyamaana on 2024-01-29 18:51:49 |
ಪುತ್ತೂರು:ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಬೈಕ್ ಹಾಗೂ ಟಿಪ್ಪರ್ ಲಾರಿ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ನ ಹಿಂಬದಿ ಸವಾರೆ, ಮಾಣಿ ಖಾಸಗಿ ಶಾಲಾ ಶಿಕ್ಷಕಿ ಮೃತಪಟ್ಟಿರುವ ಘಟನೆ ಜ.29ರಂದು ಮಧ್ಯಾಹ್ನ ನಡೆದಿದೆ.ಬಂಟ್ವಾಳ ತಾಲೂಕು ಇಡಿದು ಗ್ರಾಮದ ಮಿತ್ತೂರು ಮದಕ ಸುರೇಶ್ ಕುಲಾಲ್ ಪತ್ನಿ ಅನಿತಾ(35ವ.) ಮೃತಪಟ್ಟವರು. ಮಾಣಿ ಸಮೀದ ಗಡಿಯಾರ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಅನಿತಾ ಕೆಲ ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಜ.29ರಂದು ಬೆಳಿಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದರು. ಚಿಕಿತ್ಸೆ ಪಡೆದು ಬೈಕ್ನಲ್ಲಿ ಹಿಂತಿರುಗುವ ವೇಳೆ ಕಬಕ ಸಮೀಪ ಪೋಳ್ಯ ಎಂಬಲ್ಲಿ ಮಣ್ಣು ರಸ್ತೆಯಲ್ಲಿ ನಿಲ್ಲಿಸಿದ್ದ ಟಿಪ್ಪರ್ ಲಾರಿ ಏಕಾಏಕಿ ಡಂಬಾರು ರಸ್ತೆ ಗೆ ಬಂದಾಗ ಬೈಕ್ ಸಾವರನಿಗೆ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಿಂಬದಿ ಸವಾರೆ ಅನಿತಾ ಹಾಗೂ ಅವರು ಮಗು ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಬೊಳುವಾರು ಮಹಾವೀರ ಆಸ್ಪತ್ರೆಗೆ ಕರೆ ತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಮಗುವಿನ ಭುಜದ ಭಾಗಕ್ಕೆ ಸಣ್ಣ ಪುಟ್ಟ ಗಾಯವಾಗಿದ್ದು, ಸುರೇಶ್ ಕುಲಾಲ್ ಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.ಮೃತರ ಪತಿ ಸುರೇಶ್ ಕುಲಾಲ್ ನೀಡಿದ ದೂರಿನಂತೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತಿ ಸುರೇಶ್ ಕುಲಾಲ್, ಪುತ್ರಿ ಋತ್ವಿಯವರನ್ನು ಅಗಲಿದ್ದಾರೆ.
Posted by Vidyamaana on 2024-06-11 12:37:21 |
ಮಂಗಳೂರು :ಪುತ್ತೂರು, ಸುಳ್ಯ, ಸುಬ್ರಹ್ಮಣ್ಯದಲ್ಲಿ ಸಿಡಿಲು ಬಡಿದು ಸಂಭವಿಸಿದ 4-6 ಸ್ಥಳಗಳಲ್ಲಿ ಜಿಲ್ಲಾಡಳಿತ ಮಿಂಚು ನಿರೋಧಕಗಳನ್ನು ಅಳವಡಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಪುತ್ತೂರು, ಸುಳ್ಯ ಮತ್ತು ಸುಬ್ರಹ್ಮಣ್ಯವನ್ನು ಸಿಡಿಲು ಬಡಿದು ಹಾಟ್ಸ್ಪಾಟ್ ಎಂದು ಪರಿಗಣಿಸಲಾಗಿದ್ದು, ಈ ಪ್ರದೇಶಗಳಲ್ಲಿಯೂ ಸಿಡಿಲು ಹೊಡೆತದಿಂದ ಸಾವುಗಳು ಸಂಭವಿಸಿವೆ.ಹೀಗಾಗಿ, ಮಿಂಚು ನಿರೋಧಕಗಳನ್ನು ಅಳವಡಿಸುವ ಪ್ರಾಯೋಗಿಕ ಯೋಜನೆಯನ್ನು ಕೈಗೆತ್ತಿಕೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದೆ.
Posted by Vidyamaana on 2024-03-29 19:53:12 |
ಬೆಳ್ತಂಗಡಿ : ಕಾರು ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಗುರುವಾಯನಕೆರೆಯ ಶಕ್ತಿ ನಗರದ ಬಳಿ ನಡೆದಿದೆ.ಬೆಳ್ತಂಗಡಿಯಿಂದ ಮೂಡಬಿದಿರೆಗೆ ಹೋಗುತ್ತಿದ್ದ ಐ20 ಕಾರು ಶಕ್ತಿನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ ಗೆ ಡಿಕ್ಕಿಯಾದ ಘಟನೆ ನಡೆದಿದೆ.
Posted by Vidyamaana on 2023-04-19 08:33:01 |
ಹೊಸದಿಲ್ಲಿ: ಭಾರತವು 142.86 ಕೋಟಿ ಜನಸಂಖ್ಯೆಯೊಂದಿಗೆ ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದೆ ಎಂದು ವಿಶ್ವಸಂಸ್ಥೆ ಇಂದು ಬಿಡುಗಡೆ ಮಾಡಿರುವ ಅಂಕಿ-ಅಂಶಗಳಿಂದ ತಿಳಿದುಬಂದಿದೆ.
1960ರಲ್ಲಿ ಮಾಜಿ ನಾಯಕ ಮಾವೋ ಝೆಡಾಂಗ್ ಅವರ ವಿನಾಶಕಾರಿ ಕೃಷಿ ನೀತಿಗಳ ಅಡಿಯಲ್ಲಿ ಲಕ್ಷಾಂತರ ಜನರು ಹಸಿವಿನಿಂದ ಸತ್ತ ನಂತರ ಮೊದಲ ಬಾರಿಗೆ ಚೀನಾದಲ್ಲಿ ಜನರ ಸಂಖ್ಯೆ ಕಳೆದ ವರ್ಷ ಕುಸಿತ ಕಂಡಿತ್ತು.