Posted by vidyamaana on 2024-05-27 18:41:30 |
ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ.
ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.
ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.
Posted by Vidyamaana on 2023-06-10 03:37:31 |
ಪುತ್ತೂರು: ಉಪ್ಪಿನಂಗಡಿ ಸಮೀಪದ ಪಂಜಳದಲ್ಲಿ ಟಿಪ್ಪರ್ ಹಾಗೂ ದ್ವಿಚಕ್ರ ನಡುವೆ ಜೂ 2 ಶುಕ್ರವಾರ ರಾತ್ರಿ ನಡೆದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ನಡೆದಿದೆ.
ಮೃತ ಸವಾರ ಮಹಮ್ಮದ್ ಅನೀಸ್ ಮೃತಪಟ್ಟವರು. ಸಹಸವಾರ ಹಮೀದ್ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಬಿಸಿರೋಡ್ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿಗೆ ನೀರಕಟ್ಟೆಯಿಂದ ಬಿಸಿರೋಡ್ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸವಾರ ಅನೀಸ್ ಅವರ ಮುಖಕ್ಕೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿದ್ದು, ಸಹಸವಾರ ಹಮೀದ್ ಅವರ ಕಾಲಿಗೆ ಗಾಯವಾಗಿತ್ತು.
ಗಂಭೀರ ಗಾಯಗೊಂಡಿದ್ದ ಅನೀಸ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ದಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಅನೀಸ್ ಅವರು ಮುಂಭಾಗದಿಂದ ಬರುತ್ತಿದ್ದ ಬೇರೆ ನಂಬರ್ ನ ಮೋಟಾರ್ ಸೈಕಲ್ ಸವರನಿಗೆ ನಮಸ್ಕಾರ ಮಾಡುತ್ತಾ, ರಾಂಗ್ ಸೈಡಿನಿಂದ ವಾಹನ ಚಲಾಯಿಸುತ್ತಿದ್ದರು. ಇದರಿಂದಾಗಿ ಎದುರಿನಿಂದ ಬಂದ ಟಿಪ್ಪರ್ ಲಾರಿಗೆ ಢಿಕ್ಕಿ ಹೊಡೆದಿದ್ದಾರೆ ಎಂದು ಟಿಪ್ಪರ್ ಚಾಲಕ ಆಶಿಫ್ ದೂರಿನಲ್ಲಿ ತಿಳಿಸಲಾಗಿದೆ. ಆದ್ದರಿಂದ ಮೃತಪಟ್ಟ ಅನೀಸ್ ವಿರುದ್ಧ ಐಪಿಸಿ ಕಲಂ 279, 337, 304(ಎ) ಅಡಿಯಲ್ಲಿ ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Posted by Vidyamaana on 2024-07-17 13:07:31 |
ಕೋಲಂಬೊ : ಶ್ರೀಲಂಕಾದ ಮಾಜಿ ಕ್ರಿಕೆಟಿಗ ಧಮ್ಮಿಕಾ ನಿರೋಶನಾ (41) ಅವರನ್ನು ಮಂಗಳವಾರ ರಾತ್ರಿ (ಜುಲೈ 16) ಗಾಲೆ ಜಿಲ್ಲೆಯ ಸಣ್ಣ ಪಟ್ಟಣವಾದ ಅಂಬಲಂಗೋಡದಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಸ್ಥಳೀಯ ಪೊಲೀಸರ ಪ್ರಕಾರ, ನಿರೋಶನಾ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಇದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಆತನ ಮೇಲೆ ಗುಂಡು ಹಾರಿಸಿದ್ದಾನೆ
Posted by Vidyamaana on 2024-08-08 17:54:31 |
ವದೆಹಲಿ : ನಾಸಾ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್ನೊಂದಿಗೆ ಹಾರಾಟ ನಡೆಸಲು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) 10 ದಿನಗಳ ಕಾರ್ಯಾಚರಣೆಯನ್ನ ಎಂಟು ತಿಂಗಳವರೆಗೆ ವಿಸ್ತರಿಸಬಹುದು.
10 ದಿನಗಳ ಕಾರ್ಯಾಚರಣೆಯಲ್ಲಿ ಬೋಯಿಂಗ್ನ ಸ್ಟಾರ್ಲೈನರ್ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಿದ ಗಗನಯಾತ್ರಿಗಳು 2025ರ ಫೆಬ್ರವರಿಯಲ್ಲಿ ಸ್ಪೇಸ್ಎಕ್ಸ್ನ ಕ್ರೂ ಡ್ರ್ಯಾಗನ್ ಆಗಿ ಮರಳಬಹುದು ಎಂದು ನಾಸಾ ಬುಧವಾರ ಹೇಳಿದೆ.
ಅಂದ್ಹಾಗೆ, ವಿಲಿಯಮ್ಸ್ ಮತ್ತು ವಿಲ್ಮೋರ್ ಜೂನ್ ನಲ್ಲಿ ಬೋಯಿಂಗ್ ಸ್ಟಾರ್ ಲೈನರ್ ನಲ್ಲಿ ಹೊರಟರು ಮತ್ತು ಅದೇ ತಿಂಗಳ ಆರನೇ ತಾರೀಕಿನಿಂದ ಐಎಸ್ಎಸ್ನಲ್ಲಿದ್ದಾರೆ. ಸರಣಿ ಹೀಲಿಯಂ ಸೋರಿಕೆಯ ನಂತರ ಸ್ಟಾರ್ಲೈನರ್ ಪ್ರೊಪಲ್ಷನ್ ವ್ಯವಸ್ಥೆಯಲ್ಲಿ ತೊಂದರೆಗಳನ್ನ ಎದುರಿಸಿದೆ.
Posted by Vidyamaana on 2024-05-07 07:49:06 |
ಮಂಗಳೂರು, ಮೇ.6: ಮಾನಸಿಕ ಖಿನ್ನತೆಯಿಂದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯಾಗಿದ್ದ ಯುವಕನೊಬ್ಬ ಆಸ್ಪತ್ರೆ ಕೊಠಡಿಯಲ್ಲಿ ನೇಣು ಹಾಕ್ಕೊಂಡು ಸಾವಿಗೆ ಶರಣಾಗಿದ್ದಾನೆ.
ಮಂಜೇಶ್ವರ ಬಳಿಯ ಬಂದ್ಯೋಡು ನಿವಾಸಿ ಮಹಮ್ಮದ್ ನೌಫಾಲ್ (24) ಮೃತ ಕೈದಿ. 2022ರ ಡಿಸೆಂಬರ್ ನಲ್ಲಿ ನೌಫಾಲ್ ಎನ್ ಡಿಪಿಎಸ್ ಕಾಯ್ದೆಯಡಿ ಕೋಣಾಜೆ ಪೊಲೀಸರಿಂದ ಬಂಧನಕ್ಕೀಡಾಗಿದ್ದ. ಆನಂತರ ಮಂಗಳೂರು ಜೈಲಿನಲ್ಲೇ ಇದ್ದು ಯುವಕನ ಪರವಾಗಿ ಜಾಮೀನು ಕೊಡಿಸುವುದಕ್ಕೂ ಯಾರೂ ಬಂದಿರಲಿಲ್ಲ.
Posted by Vidyamaana on 2024-02-19 21:09:04 |
ಕಡಬ : ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ನಡೆದಿದೆ.
ಮೃತ ಬೈಕ್ ಸವಾರನನ್ನು ಕೊಂಬಾರು ಮಣಿಭಾಂಡ ತೇರೆಬೀದಿ ನಿವಾಸಿ ನೆಟ್ಟಣದಲ್ಲಿ ಮೆಕ್ಯಾನಿಕ್ ಆಗಿದ್ದ ವಾಸುದೇವ ಗೌಡ ಎಂದು ಗುರುತಿಸಲಾಗಿದೆ.
ಕೆಎಸ್ಸಾರ್ಟಿಸಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಎದುರುನಿಂದ ಬಂದ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ವಾಸುದೇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಸಹೋದರರನ್ನು ಅಗಲಿದ್ದಾರೆ.
Posted by Vidyamaana on 2024-08-15 06:20:43 |
ಪುತ್ತೂರು: ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ನನ ಕೇಂದ್ರ ಸಮಿತಿಯಿಂದ ನೀಡುವ 2024ರ ಪ್ರಶಸ್ತಿಯಲ್ಲಿ ಆಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಪುತ್ತೂರು ಸಮಿತಿ ಎರಡು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ ಎಂದು ಪುತ್ತೂರು ಸಮಿತಿ ಅಧ್ಯಕ್ಷರಾಗಿರುವ ಲೋಕೋಪಯೋಗಿ ಇಲಾಖೆ ಸುಬ್ರಹ್ಮಣ್ಯ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಮೋದ್ ಕೆ.ಕೆ.ಅವರು ತಿಳಿಸಿದ್ದಾರೆ.