2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಸುದ್ದಿಗಳು News

Posted by vidyamaana on 2024-07-23 07:07:38 |

Share: | | | | |


2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಪುತ್ತೂರು: ರಾಜ್ಯದಲ್ಲಿ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಪ್ರಯತ್ನ ಕೈಗೂಡುವ ವಿಶ್ವಾಸವಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಹಯೋಗದಲ್ಲಿ ಪುತ್ತೂರಿನ ರೋಟರಿ ಮನೀಷಾ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ - ಉಪನ್ಯಾಸ- ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಶ್ಚಿಮ ಬಂಗಾಳ ಸೇರಿದ ಅನೇಕ ರಾಜ್ಯಗಳಲ್ಲಿ ೨ನೇ ರಾಜ್ಯಭಾಷೆ ಘೋಷಣೆ ಸಂದರ್ಭ ಯಾವೆಲ್ಲ ಮಾನದಂಡ ಅನುಸರಿಸಲಾಗಿದೆ ಎಂಬುದರ ಅಧ್ಯಯನ ನಡೆಸಿ ವರದಿ ತಯಾರಿಸಲಾಗಿದೆ. ಇದನ್ನು ಸರಕಾರ ಪರಿಶೀಲಿಸಿ ಶೀಘ್ರದಲ್ಲೇ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯನ್ನಾಗಿ ಘೋಷಣೆ ಮಾಡುವ ಸಂಬAಧ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡ ಮೇಲೆ ಗೆಜೆಟ್ ನೋಟಿಫೀಕೇಶನ್ ಹೊರಡಿಸಲಾಗುವುದು. ಅದೇ ರೀತಿ ತುಳು ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಸೇರಿಸುವ ವಿಚಾರದಲ್ಲೂ ಕೇಂದ್ರದ ಮೇಲೆ ರಾಜ್ಯದಿಂದ ಒತ್ತಡ ತರುವ ಕೆಲಸ ಮಾಡಲಾಗುತ್ತದೆ. ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರಕಾರದ ಮೇಲೆ ಒತ್ತಡ ಹೇರುತ್ತಿದ್ದೇನೆ. ಮುಂದಿನ ಬಜೆಟ್‌ನಲ್ಲಿ ಘೋಷಣೆಯ ಆಶಾವಾದ ಇದೆ ಎಂದವರು ಹೇಳಿದರು.

ಸೋಷಿಯಲ್ ಮೀಡಿಯಾದ ಅಬ್ಬರದ ನಡುವೆಯೇ ಜನ ಪತ್ರಿಕೆ ಓದುವುದು ಕಡಿಮೆ ಮಾಡಿಲ್ಲ. ಪತ್ರಿಕಾ ರಂಗದಲ್ಲಿ ಪ್ರಾಮಾಣಿಕತೆ ಬೇಕು. ಅದಿರುವ ಕಾರಣವೇ ದಕ್ಷಿಣಕನ್ನಡದ ಪತ್ರಕರ್ತರು ಎಲ್ಲಿ ಹೋದರೂ ಛಾಪು ಮೂಡಿಸುತ್ತಾರೆ ಎಂದು ಹೇಳಿದರು.

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭ ಅಭಿವ್ಯಕ್ತಿ ಸ್ವಾತಂತ್ರö್ಯ ಮತ್ತು ಪತ್ರಿಕಾ ಸ್ವಾತಂತ್ರö್ಯ ದಮನ ಮಾಡಲಾಗಿತ್ತು. ಆಗ ಧೀಮಂತ ಪತ್ರಿಕೆಗಳು ಭೂಗತರಾಗಿದ್ದುಕೊಂಡೇ ಪತ್ರಿಕೆ ನಡೆಸಿ ಜನಜಾಗೃತಿ ಮೂಡಿಸಿದ್ದರು. ದೇಶ ಕಟ್ಟುವಲ್ಲಿ ಪತ್ರಿಕೆಗಳ ಪಾತ್ರ ಬಹಳಷ್ಟು ದೊಡ್ಡದು. ಸೋಷಿಯಲ್ ಮೀಡಿಯಾದಿಂದ ಉಪಯೋಗವಿದೆಯಾದರೂ ಅಷ್ಟೇ ಕೆಟ್ಟದೂ ಇದೆ ಎಂದರು.


ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಉಪನ್ಯಾಸ ನೀಡಿದರು. ಮಾಧ್ಯಮ ವರದಿ ಇವತ್ತು ಪ್ರತಿಯೊಬ್ಬರ ಕೈಗೂ ಬಂದಿದೆ. ಜಗತ್ತಿನಲ್ಲಿ ಜೀವರಕ್ಷಕ ಔಷಧಿ ಮೊದಲ ಸ್ಥಾನದಲ್ಲಿದ್ದರೆ, ೨ನೇ ಸ್ಥಾನದಲ್ಲಿ ಮುದ್ರಣ ಮಾಧ್ಯಮಗಳಿವೆ. ಇಷ್ಟಾದರೂ ಮಾಧ್ಯಮಗಳು ಕೆಲವೊಂದು ಅಪವಾದಗಳನ್ನು ಕೂಡ ಎದುರಿಸುತ್ತಿವೆ. ಆರೋಪಿಯೊಬ್ಬನನ್ನು ನ್ಯಾಯಾಲಯ ವಿಚಾರಣೆ ನಡೆಸುವ ಮೊದಲೇ ಮಾಧ್ಯಮಗಳು ವಿಚಾರಣೆ ನಡೆಸಿ ತಪ್ಪಿತಸ್ಥನೆಂದು ಘೋಷಿಸುವುದು ಆತಂಕಕಾರಿ ಬೆಳವಣಿಗೆ. ಅದೇ ರೀತಿ ಪೀತ ಪತ್ರಿಕೋದ್ಯಮದ ಬಗ್ಗೆಯೂ ಜಾಗೃತಿ ಅಗತ್ಯ ಎಂದರು. ಪ್ರತಿಯೊಬ್ಬ ಪತ್ರಕರ್ತರಿಗೂ ವೃತ್ತಿಪರತೆ ಮತ್ತು ನೈತಿಕತೆ ಅಗತ್ಯವಾಗಿ ಬೇಕು ಎಂದವರು ನುಡಿದರು. ಮಾಹಿತಿ ಎಂಬುದು ನೀರಿನ ಥರ. ಕಡಿಮೆಯಾದರೂ ಕಷ್ಟ, ಜಾಸ್ತಿಯಾದರೂ ಕಷ್ಟ. ಇದನ್ನು ಪತ್ರಕರ್ತರು ಅರ್ಥಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.


ಇದೇ ಸಂದರ್ಭದಲ್ಲಿ ಶೇಟ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಕೊಡುಗೆಯಾಗಿ ನೀಡಿದ ಸಿಸಿ ಕ್ಯಾಮೆರಾವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪತ್ರಕರ್ತರಿಗೆ ಹಸ್ತಾಂತರ ಮಾಡಿದರು.


ಪತ್ರಿಕಾ ವಿತರಕರಾದ ವಿಶ್ವನಾಥ್ ಪುತ್ತೂರು ಅವರನ್ನು ಶಾಸಕರು ಪತ್ರಕರ್ತರ ಸಂಘದ ಪರವಾಗಿ ಸನ್ಮಾನಿಸಿದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಾದ ಹಷೇಂದ್ರ ಪ್ರಸಾದ್, ಮಹೇಶ್ ಪ್ರಸಾದ್, ದೀಪ್ತಿ ಭಟ್, ಎ.ಯು. ಅವನೀಶ್ ಕುಮಾರ್, ಸಮ್ಯಕ್, ಸಿಹಾ ಶಮ್ರಾ, ಪುಣ್ಯಶ್ರೀ ಪಿ. ಅವರನ್ನು ಸಂಘದ ಪರವಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಸನ್ಮಾನಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಸಿದ್ಧಿಕ್ ನೀರಾಜೆ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್,ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ,ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವನಿಕೃಷ್ಣ, ಎಸೋಸಿಯೇಶನ್ ಆಫ್ ಸಿವಿಲ್ ಎಂಜಿನಿರ‍್ಸ್ (ಎಸಿಸಿಇ-ಐ) ಪುತ್ತೂರು ಸೆಂಟರ್ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಕೆ.ಕೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸುಧಾಕರ ಸುವರ್ಣ, ಕಾರ್ಯಕಾರಿ ಸಮಿತಿ ಸದಸ್ಯ ಮೇಘಾ ಪಾಲೆತ್ತಾಡಿ ಮತ್ತು ರೋಟರಿ ಯುವ ಸಂಸ್ಥೆಯ ಕಾರ್ಯದರ್ಶಿ ವಚನಾ ಜಯರಾಂ,ಪ್ರಧಾನ ಕಾರ್ಯದರ್ಶಿ ಶಶಿಧರ ರೈ ಕುತ್ಯಾಳ, ಕೋಶಾಧಿಕಾರಿ ಸಂಶುದ್ದೀನ್ ಸಂಪ್ಯ,ಕಾರ್ಯಕಾರಿ ಸಮಿತಿ ಸದಸ್ಯರಾದ ಐ. ಬಿ. ಸಂದೀಪ್,ಕುಮಾರ್,ಪ್ರಸಾದ್ ಬಲ್ನಾಡ್, ಸಂಘದ ಕಾರ್ಯದರ್ಶಿ ಅಜಿತ್ ಕುಮಾರ್, ಸದಸ್ಯರಾದ ಅನಿಶ್ ಕುಮಾರ್ ಮರೀಲ್,ಶರತ್, ರಾಜೇಶ್ ಪಟ್ಟೆ, ಪಾರೂಕ್ ಶೇಕ್ , ಮತ್ತಿತ್ತರರು ಉಪಸ್ಥಿತರಿದ್ದರು.

 Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ನ 12

Posted by Vidyamaana on 2023-11-12 07:38:42 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ನ 12

ಪುತ್ತೂರು : ಶಾಸಕ ಅಶೋಕ್ ಕುಮಾರ್ ಅವರು  ನವಂಬರ್ 12 ರಂದು

ಬೆಳಿಗ್ಗೆ 10 ಗಂಟೆಗೆ ಕೋಡಿಂಬಾಡಿ‌ಮಹಿಷಮರ್ಧಿನಿ‌ದೇವಸ್ಥಾನಕ್ಕೆ ಭೇಟಿ,ಪೂಜಾ ಕಾರ್ಯಕ್ರಮ

12._ಗಂಟೆಗೆ ಕೊಡಿಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ

1 ಗಂಟೆಗೆ ಮುಳಿಯ ಹಾಲ್ ನಲ್ಲಿ ಗೂಡುದೀಪ ಸ್ಪರ್ದೆಯಲ್ಲಿ ಭಾಗವಹಿಸುವುದು

ಸಂಜೆ 3 ಗಂಟೆಗೆ ಕೊಂಬೆಟ್ಟು ಮೈದಾನದಲ್ಲಿ‌ರೈ ಚಾರಿಟೇಬಲ್ ಟ್ರಸ್ಟ್ ಸಭೆ ಯಲ್ಲಿ  ಭಾಗವಹಿಸಲಿದ್ದಾರೆ

ರೂಪಾಯಿ- ದಿರ್ಹಮ್‌ ವ್ಯವಹಾರಕ್ಕೆ ಭಾರತ- ಯುಎಇ ಒಪ್ಪಿಗೆ

Posted by Vidyamaana on 2023-07-15 14:36:39 |

Share: | | | | |


ರೂಪಾಯಿ- ದಿರ್ಹಮ್‌ ವ್ಯವಹಾರಕ್ಕೆ ಭಾರತ- ಯುಎಇ ಒಪ್ಪಿಗೆ

ಅಬುಧಾಬಿ: ಭಾರತ ಮತ್ತು ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ಇನ್ನು ಮುಂದೆ ರೂಪಾಯಿ – ದಿರ್ಹಮ್‌ನಲ್ಲಿ ವ್ಯವಹಾರ ನಡೆಸಲು ಪರಸ್ಪರ ಸಹಿ ಹಾಕಿವೆ.


ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರ ಸಮ್ಮುಖದಲ್ಲಿ ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಮತ್ತು ಯುಎಇಯ ಸೆಂಟ್ರಲ್ ಬ್ಯಾಂಕ್ ಗವರ್ನರ್ ಹೆಚ್ ಇ ಖಲೀದ್ ಮೊಹಮದ್ ತಿಳುವಳಿಕಾ ಒಪ್ಪಂದಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.


ಈ ಒಪ್ಪಂದದಿಂದ ಭಾರತ ಮತ್ತು ಯುಎಇ ಇನ್ನು ಮುಂದೆ ರಫ್ತು ಮತ್ತು ಆಮದನ್ನು ದೇಶಿಯ ಕರೆನ್ಸಿಯಲ್ಲಿ ಮಾಡಬಹುದಾಗಿದೆ. ಇಷ್ಟೇ ಅಲ್ಲದೆ ಭಾರತದಲ್ಲಿ ಅತ್ಯಂತ ಯಶಸ್ವಿಯಾಗಿರುವ ಪಾವತಿ ವ್ಯವಸ್ಥೆ ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ಮತ್ತು ಯುಎಇಯ ಸುರಕ್ಷಿತ ಆನ್‌ಲೈನ್ ಪಾವತಿ ವ್ಯವಸ್ಥೆಯಾದ ಐಪಿಪಿ (IPP) ಇನ್ನು ಮುಂದೆ ಲಿಂಕ್‌ ಆಗಲಿದೆ.

UPI-IPP ಸಂಪರ್ಕವು ಎರಡೂ ದೇಶದ ಬಳಕೆದಾರರಿಗೆ ವೇಗವಾಗಿ, ಅನುಕೂಲಕರ, ಸುರಕ್ಷಿತವಾಗಿ ಪರಿಣಾಮಕಾರಿ ಎರಡು ದೇಶಗಳ ಮಧ್ಯೆ ಹಣ ವರ್ಗಾವಣೆ ಮಾಡಲು ಅನುವು ಮಾಡಿಕೊಡುತ್ತದೆ.

ಲಾಭ ಏನು?

ಎರಡು ದೇಶಗಳ ನಡುವಿನ ಚಿಲ್ಲರೆ ಪಾವತಿಗಳು ಸಾಮಾನ್ಯವಾಗಿ ಕಡಿಮೆ ಪಾರದರ್ಶಕವಾಗಿರುತ್ತವೆ ಮತ್ತು ಇದು ದೇಶೀಯ ವಹಿವಾಟುಗಳಿಗಿಂತ ಹೆಚ್ಚು ದುಬಾರಿ. UPI-IPP ಲಿಂಕ್‌ ಆದರೆ ಭಾರತ ಮತ್ತು ಫ್ರಾನ್ಸ್‌ ನಡುವಿನ ಗಡಿಯಾಚೆಗಿನ ಹಣ ವ್ಯವಹಾರ ಪಾರದರ್ಶಕವಾಗಿರುತ್ತದೆ. ಅಷ್ಟೇ ಅಲ್ಲದೇ ಅಗ್ಗ ಮತ್ತು ವೇಗವಾಗಿ ಹಣವನ್ನು ಕಳುಹಿಸಬಹುದಾಗಿದೆ. ಯುಎಇಯಲ್ಲಿರುವ ಭಾರತೀಯ ವಲಸಿಗರಿಗೆ, ವಿಶೇಷವಾಗಿ ವಲಸೆ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಗೆ, ಪ್ರವಾಸಿಗರಿಗೆ ಲಾಭವಾಗಲಿದೆ. ಯುಪಿಐ ಮೂಲಕ ಚಿಲ್ಲರೆ ಪಾವತಿಗಳನ್ನು ಭಾರತೀಯ ರೂಪಾಯಿಗಳಲ್ಲಿ ಮಾಡಲಾಗುವುದರಿಂದ ಇದು ವಿದೇಶೀ ವಿನಿಮಯ ಮೀಸಲುಗಳನ್ನು ಉಳಿಸಲು ಸಹಾಯ ಮಾಡುತ್ತದೆ.

ಉಡುಪಿ: ಆನ್‌ಲೈನ್ ವಂಚನೆ ಪ್ರಕರಣ : ಆರೋಪಿ ಬಂಧನ, ಲಕ್ಷಾಂತರ ರೂ. ನಗದು ವಶ

Posted by Vidyamaana on 2024-09-05 07:48:51 |

Share: | | | | |


ಉಡುಪಿ: ಆನ್‌ಲೈನ್ ವಂಚನೆ ಪ್ರಕರಣ : ಆರೋಪಿ ಬಂಧನ, ಲಕ್ಷಾಂತರ ರೂ. ನಗದು ವಶ

ಉಡುಪಿ, ಸೆ.5: ಆನ್‌ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಿರುವ ಉಡುಪಿ ಸೆನ್ ಪೊಲೀಸರು, ಲಕ್ಷಾಂತರ ರೂ. ನಗದು ವಶಪಡಿಸಿಕೊಂಡಿದ್ದಾರೆ. 

ಒಡಿಶಾ ರಾಜ್ಯದ ಗಂಜಮ್ ಜಿಲ್ಲೆಯ ಕೊನಪಾಲದ ವಿಶಾಲ್ ಕೋನಪಾಲ (30) ಬಂಧಿತ ಆರೋಪಿ. ಈತನಿಂದ 1,56,100ರೂ

ಜಿಎಲ್ ವನ್ ಮಾಲ್ ಲೋಕಾರ್ಪಣೆ

Posted by Vidyamaana on 2023-04-02 15:39:58 |

Share: | | | | |


ಜಿಎಲ್ ವನ್ ಮಾಲ್ ಲೋಕಾರ್ಪಣೆ

ಪುತ್ತೂರು: ಬಹುನಿರೀಕ್ಷಿತ ಪುತ್ತೂರಿನ ಪ್ರಥಮ ಸರ್ವಸುಸಜ್ಜಿತ ಜಿಎಲ್ ವನ್ ಮಾಲ್ ಏ 2ರಂದು ಲೋಕಾರ್ಪಣೆಗೊಂಡಿತು.

ಒಂದೇ ಸೂರಿನಡಿ ಎಲ್ಲಾ ವಸ್ತು: ಎಡನೀರು ಶ್ರೀ

ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಿದ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಸಂಸ್ಕ್ರತಿ, ಪರಿಕಲ್ಪನೆ ನಮ್ಮ ದೇಶದ್ದೇ ಆಗಿರಬೇಕು. ಅದರಂತೆ ಜಿಎಲ್ ವನ್ ಮಾಲ್ ಪುತ್ತೂರಿಗೆ ಬಂದಿದೆ‌. ಮುಂದಿನ ದಿನಗಳಲ್ಲಿ ಹೆಚ್ಚಿನ ಗ್ರಾಹಕರನ್ನು ಸೆಳೆಯುವಂತಾಗಲಿ.

ನೋ ಬಾಲ್‌ ಕೊಟ್ಟ ಅಂಪೈರ್ ನನ್ನು ಚಾಕುವಿನಿಂದ ಇರಿದ ಆಟಗಾರ

Posted by Vidyamaana on 2023-04-03 08:48:19 |

Share: | | | | |


ನೋ ಬಾಲ್‌ ಕೊಟ್ಟ ಅಂಪೈರ್ ನನ್ನು ಚಾಕುವಿನಿಂದ ಇರಿದ ಆಟಗಾರ

ಭುವನೇಶ್ವರ್: ಕ್ರಿಕೆಟ್‌ ಆಡುವಾಗ ಸಣ್ಣಪುಟ್ಟ ವಿಚಾರಕ್ಕೆ ವಾಗ್ವಾದ ನಡೆಯುವುದು ಸಾಮಾನ್ಯ. ಆದರೆ ಇಲ್ಲೊಂದು ಘಟನೆ ಒಡಿಶಾ ರಾಜ್ಯವನ್ನು ಬೆಚ್ಚಿ ಬೀಳಿಸಿದೆಭಾನುವಾರ (ಏ. 2 ರಂದು) ಒಡಿಶಾದ ಕಟಕ್‌ ನಲ್ಲಿ ಬ್ರಹ್ಮಪುರ ಮತ್ತು ಶಂಕರಪುರ ಎಂಬ ಎರಡು ತಂಡಗಳ ನಡುವೆ ಕ್ರಿಕೆಟ್‌ ಮ್ಯಾವ್‌ ನಡೆಯುತ್ತಿತ್ತು. ಈ ಪಂದ್ಯಕ್ಕೆ 22 ವರ್ಷದ ಲಕ್ಕಿ ರಾವುತ್ ತೀರ್ಪುಗಾರನಾಗಿ ನಿಂತಿದ್ದರು. ಪಂದ್ಯ ನಡೆಯುತ್ತಿದ್ದ ವೇಳೆ ಎಸೆತವೊಂದಕ್ಕೆ ʼನೋ ಬಾಲ್‌ʼ ಎಂದು ಅಂಪೈರ್ ತೀರ್ಪು ನೀಡಿದ್ದಾರೆ. ಈ ವೇಳೆ ಇದು ನೋ ಬಾಲ್‌ ಅಲ್ಲ ಎಂದು ಸ್ಮೃತಿ ರಂಜನ್ ರೌತ್ ಎಂಬಾತ ಅಂಪೈರ್  ನೊಂದಿಗೆ ವಾದಕ್ಕೆ ಇಳಿದಿದ್ದಾನೆ.ವಾದ ಜಗಳಕ್ಕೆ ತಿರುಗಿ ಚೂರಿಯಿಂದ ತೀರ್ಪುಗಾರನಾಗಿ ನಿಂತಿದ್ದ ಲಕ್ಕಿ ರಾವುತ್ ಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಲಕ್ಕಿ ರಾವುತ್‌ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸುವಾಗಲೇ ಆತ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ.

ಗದಗ ನಾಲ್ವರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ :ತಂದೆ, ತಾಯಿ ಕೊಲೆಗೆ ಮನೆ ಮಗನಿಂದಲೇ ಸುಪಾರಿ, ಗುರಿ ತಪ್ಪಿ ಸಂಬಂಧಿಕರನ್ನು ಮುಗಿಸಿದ್ದ ಕಿಲ್ಲರ್ ಗ್ಯಾಂಗ್

Posted by Vidyamaana on 2024-04-23 04:50:30 |

Share: | | | | |


ಗದಗ ನಾಲ್ವರ ಹತ್ಯೆ ಪ್ರಕರಣಕ್ಕೆ  ಟ್ವಿಸ್ಟ್ :ತಂದೆ, ತಾಯಿ ಕೊಲೆಗೆ ಮನೆ ಮಗನಿಂದಲೇ ಸುಪಾರಿ, ಗುರಿ ತಪ್ಪಿ ಸಂಬಂಧಿಕರನ್ನು ಮುಗಿಸಿದ್ದ ಕಿಲ್ಲರ್ ಗ್ಯಾಂಗ್

ಗದಗ, ಎ.22: ಇಡೀ ರಾಜ್ಯದ ಜನರನ್ನು ಬೆಚ್ಚಿಬೀಳುವಂತೆ ಮಾಡಿದ್ದ ಗದಗ ಜಿಲ್ಲೆಯ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ. ಪೊಲೀಸರ ವಿಚಾರಣೆಯಲ್ಲಿ ಮನೆಯ ಮಗನೇ ಇಡೀ ಕುಟುಂಬವನ್ನು ಮುಗಿಸಲು ಸುಪಾರಿ ನೀಡಿರುವುದು ಬೆಳಕಿಗೆ ಬಂದಿದೆ. 


ಮನೆಯ ಹಿರಿಯ ಮಗನೇ ಆಸ್ತಿ ಮೇಲಿನ ದಾಹದಿಂದ ತನ್ನ ತಂದೆ, ತಾಯಿಯನ್ನು ಕೊಲೆ ಮಾಡಲು ಸುಪಾರಿ ನೀಡಿರುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಆದರೆ, ಸುಪಾರಿ ಕಿಲ್ಲರ್‌ಗಳ ಎಡವಟ್ಟಿನಿಂದಾಗಿ, ಆ ದಿನ ಮನೆಗೆ ಬಂದು ಉಳಿದುಕೊಂಡಿದ್ದ ಅಮಾಯಕ ನೆಂಟರು ಜೀವ ತೆತ್ತಿದ್ದಾರೆ! 


ಗದಗ ನಗರದ ದಾಸರ ಓಣಿಯಲ್ಲಿ ಎರಡು ದಿನಗಳ ಹಿಂದೆ ನಾಲ್ವರ ಭೀಕರ ಹತ್ಯೆ ನಡೆದಿತ್ತು. ಶುಕ್ರವಾರ ಬೆಳಗಿನ ಜಾವ ಮೂರು ಗಂಟೆಗೆ ಕೊಲೆ ನಡೆದಿತ್ತು. ಬೆಟಗೇರಿ ನಗರಸಭೆ ಮಾಜಿ ಅಧ್ಯಕ್ಷ ಪ್ರಕಾಶ್ ಬಾಕಳೆ, ಹಾಲಿ ಉಪಾಧ್ಯಕ್ಷೆ ಸುನಂದಾ ಬಾಕಳೆ ಟಾರ್ಗೆಟ್ ಮಾಡಿ ಕೃತ್ಯ ನಡೆದಿತ್ತು. ಆದರೆ ಹಂತಕರು ಮನೆಗೆ ನುಗ್ಗಿ ಮೇಲಿನ ಮಹಡಿಯಲ್ಲಿ ಮಲಗಿದ್ದ ಪ್ರಕಾಶ್ ಅವರ ಕಿರಿಯ ಮಗ ಕಾರ್ತಿಕ್ ಬಾಕಳೆ (28), ಸಂಬಂಧಿಕರಾಗಿ ಮನೆಗೆ ಬಂದಿದ್ದ ಪರಶುರಾಮ್ ಹಾದಿಮನಿ (55), ಲಕ್ಷ್ಮೀ ಹಾದಿಮನಿ (45) ಮತ್ತು ಅವರ ಮಗಳು ಆಕಾಂಕ್ಷಾ (16) ಅವರನ್ನು ಹತ್ಯೆ ಮಾಡಿದ್ದರು. ಮಹಡಿಯಲ್ಲಿ ಸದ್ದು ಕೇಳಿ ಆತಂಕಗೊಂಡ ಪ್ರಕಾಶ್‌ ಬಾಕಳೆ ಪೊಲೀಸರಿಗೆ ಫೋನ್‌ ಮಾಡಿದಾಗ ಕೊಲೆಗಾರರು ಪರಾರಿಯಾಗಿದ್ದರು.

Recent News


Leave a Comment: