ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ಸುದ್ದಿಗಳು News

Posted by vidyamaana on 2024-07-24 17:19:41 |

Share: | | | | |


ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್‌ ಗಳಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಇದು ಭಾರೀ ಸಂಚಲನವನ್ನೇ ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಣೆಯ ಸಂಘಟಕರು ಗೊಂದಲದಲ್ಲಿದ್ದಾರೆ.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ 2013ರ ಫೆ.7 ರಂದು ಮತ್ತು 2023ರ ಡಿ.1ರಂದು ರಾಜ್ಯದ ಎಲ್ಲ ಡಿಡಿಪಿಐ ಕಚೇರಿಗಳಿಗೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಕಟ್ಟಡ ಅಥವಾ ಶಾಲಾ ಮೈದಾನ ಅನುಮತಿ ನೀಡಬಾರದೆಂದು ಸುತ್ತೋಲೆ ಬಂದಿತ್ತು. ಈ ಆಧಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಡಿಪಿಐ ವೆಂಕಟೇಶ್ ಪಟಗಾರ ಅವರು ಜು.16ರಂದು ಜ್ಞಾಪನಾ ಪತ್ರವನ್ನು ಎಲ್ಲ ಬಿಇಒಗಳಿಗೆ ರವಾನಿಸಿದ್ದಾರೆ.

ಜ್ಞಾಪನಾ ಪತ್ರದಲ್ಲಿ ಏನಿದೆ?

ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ, ಶಾಲಾ ಮೈದಾನ ಅಥವಾ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನು ನೀಡಬಾರದೆಂದು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಬಿಜೆಪಿಯಿಂದ ಹೋರಾಟ :

ರಾಜ್ಯಾದ್ಯಂತ ಹಲವು ದಶಕಗಳಿಂದ ಶಾಲೆಯ ಕ್ಯಾಂಪಸ್, ಶಾಲಾ ಕಟ್ಟಡದಲ್ಲಿ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜಕೀಯ ಮಾಡಲು ಹೊರಟಿದ್ದು, ಶಾಲಾ ವಠಾರದಲ್ಲಿ ಧಾರ್ಮಿಕ ಆಚರಣೆ ನಡೆಸದಂತೆ ಆದೇಶ ಹೊರಡಿಸಿದೆ. ಇದು ಖಂಡನೀಯವಾಗಿದ್ದು, ಈ ಹಿಂದೆ ನಿಗದಿತ ಸ್ಥಳದಲ್ಲೇ ಕಾರ್ಯಕ್ರಮ ಆಯೋಜಿಸುತ್ತೇವೆ. ಇದನ್ನು ತಡೆಯಲು ಬಂದರೆ ಸುಮ್ಮನಿರಲ್ಲ ಎಂದು ಬಿಜೆಪಿ ತಾಕೀತು ಮಾಡಿದೆ. ಇದೇ ರೀತಿ ಜಿಲ್ಲಾದ್ಯಂತ ಹೋರಾಟ ನಡೆಯುತ್ತಿದೆ.

ಬಿಜೆಪಿ ಸರಕಾರದಲ್ಲೇ ಆದೇಶ :

2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು ಆದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಒ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಈ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದು ಕಾವೇರತೊಡಗಿದೆ.

 Share: | | | | |


ಪುತ್ತೂರಿಗೆ ನಾಲ್ಕೇ ತಿಂಗಳಲ್ಲಿ 1010 ಕೋಟಿ ಅನುದಾನ ಕೊಯ್ಲು ಪಶು ವೈದ್ಯಕೀಯ ಕಾಲೇಜಿಗೆ ಧೂಳು ಹಿಡಿಸಿದ್ದು ಬಿಜೆಪಿ:ಶಾಸಕ ಅಶೋಕ್ ಕುಮಾರ್ ರೈ

Posted by Vidyamaana on 2023-10-31 17:32:07 |

Share: | | | | |


ಪುತ್ತೂರಿಗೆ ನಾಲ್ಕೇ ತಿಂಗಳಲ್ಲಿ 1010 ಕೋಟಿ ಅನುದಾನ ಕೊಯ್ಲು ಪಶು ವೈದ್ಯಕೀಯ ಕಾಲೇಜಿಗೆ ಧೂಳು ಹಿಡಿಸಿದ್ದು ಬಿಜೆಪಿ:ಶಾಸಕ ಅಶೋಕ್ ಕುಮಾರ್ ರೈ

ಮಂಗಳೂರು, ಅ.31: ಪುತ್ತೂರು ವಿಧಾನಸಭೆ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕಾಗಿ ಒಂದು ಸಾವಿರದ ಹತ್ತು ಕೋಟಿ ಅನುದಾನ ಬಂದಿದೆ. ಅದರ ಟೆಂಡರ್ ಆಗಿದ್ದು, ಶೀಘ್ರದಲ್ಲೇ ಕಾಮಗಾರಿ ಶುರು ಮಾಡುತ್ತೇವೆ. ಕೊಯ್ಲದಲ್ಲಿ ಪಶು ವೈದ್ಯಕೀಯ ಕಾಲೇಜಿಗೆ 24 ಕೋಟಿ ಅನುದಾನ ಬಂದಿದ್ದು, ಮುಂದಿನ ವರ್ಷದಿಂದಲೇ ಕಾಲೇಜು ಆರಂಭಿಸುತ್ತೇವೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದ್ದಾರೆ. 


ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕಳೆದು ಐದು ವರ್ಷಗಳಲ್ಲಿ ಬಿಜೆಪಿ ಸರಕಾರ ಇತ್ತು. ಪಶು ವೈದ್ಯಕೀಯ ಕಾಲೇಜಿಗೆ ಕಳೆದ ಸಿದ್ದರಾಮಯ್ಯ ಸರಕಾರ ಇದ್ದಾಗಲೇ ಅನುದಾನ ಬಿಡುಗಡೆಗೊಂಡು ಕಟ್ಟಡ ರೆಡಿಯಾಗಿತ್ತು. ಐದು ವರ್ಷ ಕಾಲ ಅದನ್ನು ಆರಂಭಿಸಲು ಆಗಿರಲಿಲ್ಲ. ಧೂಳು ತಿನ್ನುತ್ತಿದ್ದ ಕಟ್ಟಡದಲ್ಲಿ ನವೀಕರಣ ಕೈಗೊಂಡು ಮುಂದಿನ ವರ್ಷದಲ್ಲೇ ಕಾಲೇಜು ಆರಂಭಿಸಲಾಗುವುದು ಎಂದು ಹೇಳಿದರು. 


ಸುಳ್ಯ, ಪುತ್ತೂರಿನಿಂದ ಹಾಲನ್ನು ಮಂಗಳೂರಿಗೆ ತಂದು ಸಂಸ್ಕರಣೆ ಮಾಡುವುದರ ಬದಲು ಕೆಎಂಎಫ್ ಸಂಸ್ಥೆಯ ಇನ್ನೊಂದು ಪ್ಲಾಂಟನ್ನು ಪುತ್ತೂರಿನಲ್ಲೇ ಸ್ಥಾಪಿಸಲು ಯೋಜನೆ ಹಾಕಿದ್ದೇವೆ. ಅದಕ್ಕಾಗಿ ಹತ್ತು ಎಕರೆ ಜಾಗ ನೋಡಿದ್ದು ಹಾಲು ಸಂಸ್ಕರಣಾ ಕೇಂದ್ರ ಮಾಡುತ್ತೇವೆ ಎಂದು ಅಶೋಕ್ ರೈ ಹೇಳಿದರು. ಇದಲ್ಲದೆ, ಬೆಂಗಳೂರಿನಲ್ಲಿ ತುಳು ಭವನ ನಿರ್ಮಿಸಲಾಗುವುದು. ಕರಾವಳಿ ಭಾಗದ ಬಹಳಷ್ಟು ಮಂದಿ ಬೆಂಗಳೂರಿನಲ್ಲಿದ್ದಾರೆ. ಇಲ್ಲಿನವರು ತತ್ಕಾಲಕ್ಕೆ ಉಳಿದುಕೊಳ್ಳಲು ತುಳು ಭವನ ಸ್ಥಾಪನೆ ಮಾಡಲಾಗುವುದು. ತುಳು ಭಾಷೆಯನ್ನು ದ್ವಿತೀಯ ರಾಜ್ಯಭಾಷೆಯನ್ನಾಗಿ ಮಾನ್ಯತೆ ಕೊಡಲು ಯಾವುದೇ ಅನುದಾನ ಬೇಕಿಲ್ಲ. ನಮ್ಮವರ ಇಚ್ಛಾಶಕ್ತಿ ತೋರದೆ ಇರುವುದೇ ಸಮಸ್ಯೆ ಆಗಿದ್ದು. ತುಳು ಭಾಷೆಯ ಬಗ್ಗೆ ಮುತುವರ್ಜಿ ವಹಿಸಿದ್ದು, ಇನ್ನು ನಾಲ್ಕು ಇಲಾಖೆಗಳ ಎನ್ಓಸಿ ಬರಬೇಕಿದೆ. ನಾಲ್ಕೈದು ತಿಂಗಳಲ್ಲಿ ತುಳುವನ್ನು ದ್ವಿತೀಯ ಭಾಷೆಯನ್ನಾಗಿ ಮಾಡಿಸುತ್ತೇನೆ ಎಂದು ಹೇಳಿದರು. 


ಬಿಜೆಪಿಯವರಿಗೆ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳನ್ನು ತಡೆದುಕೊಳ್ಳಲು ಆಗುತ್ತಿಲ್ಲ. ಇದಕ್ಕಾಗಿ ಏನೇನು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ರಸ್ತೆಯಿಂದ 15 ಕಿಮೀ ಆಸುಪಾಸಿನ ನಗರಗಳಿಗೆ ಆ ರಸ್ತೆ ವಿಸ್ತರಣೆ ಮಾಡಲು ಅವಕಾಶ ಇದೆ. ಮಾಣಿಯಿಂದ 18 ಕಿಮೀ ದೂರ ಇರುವ ಪುತ್ತೂರಿಗೆ ಚತುಷ್ಪಥ ರಸ್ತೆ ಮಾಡಬೇಕಿದೆ. ಅದಕ್ಕಾಗಿ ಕೇಂದ್ರ ಹೆದ್ದಾರಿ ಇಲಾಖೆಯ ಜೊತೆಗೆ ಪ್ರಸ್ತಾಪ ಕೊಟ್ಟಿದ್ದು, ಅದನ್ನು ಮಾಡಿಸುತ್ತೇನೆ ಎಂದರು. 


ಕಲ್ಲಡ್ಕ- ಉಪ್ಪಿನಂಗಡಿ ಹೆದ್ದಾರಿ ದುರವಸ್ಥೆ ಬಗ್ಗೆ ಕೇಳಿದ ಪ್ರಶ್ನೆಗೆ, ಅದನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಯವರು ಮಾಡೋದು. ರಾಜ್ಯ ಸರಕಾರಕ್ಕೆ ಯಾವುದೇ ಹಸ್ತಕ್ಷೇಪ ಮಾಡಲಾಗದು. ಆದರೂ ಹೆದ್ದಾರಿ ಕೆಲಸ ಶೀಘ್ರಗೊಳಿಸಲು ಅಧಿಕಾರಿಗಳಿಗೆ ಒತ್ತಡ ಹೇರಲಾಗಿದೆ. ಇದನ್ನೆಲ್ಲ ಆಯಾ ಭಾಗದ ಸಂಸದರು ಮಾಡಬೇಕು. ಕೇರಳದಲ್ಲಿ ಒಳ್ಳೆಯ ರಸ್ತೆ ಆಗ್ತಾ ಇದೆ, ಅದಕ್ಕಾಗಿ ಅಭಿನಂದಿಸಬೇಕು. ಇಲ್ಲಿನ ಸಂಸದರು ಮುತುವರ್ಜಿ ವಹಿಸಿದರೆ ಹೆದ್ದಾರಿ ದುರವಸ್ಥೆ ಆಗುತ್ತಿರಲಿಲ್ಲ ಎಂದರು

ಇಂಡೋ-ಕಿವೀಸ್ ಆಸೀಸ್-ಆಫ್ರಿಕಾ ಸೆಮೀಸ್ ಪಂದ್ಯಗಳು ಎಲ್ಲಿ ಯಾವಾಗ ಎಷ್ಟೊತ್ತಿಗೆ? ಇಲ್ಲಿದೆ ವಿವರ

Posted by Vidyamaana on 2023-11-12 10:57:43 |

Share: | | | | |


ಇಂಡೋ-ಕಿವೀಸ್ ಆಸೀಸ್-ಆಫ್ರಿಕಾ ಸೆಮೀಸ್ ಪಂದ್ಯಗಳು ಎಲ್ಲಿ ಯಾವಾಗ ಎಷ್ಟೊತ್ತಿಗೆ? ಇಲ್ಲಿದೆ ವಿವರ

      ಐಸಿಸಿ ಏಕದಿನ ವಿಶ್ವಕಪ್​ ಟೂರ್ನಿಯಿಂದ (ICC ODI World Cup 2023) ಪಾಕಿಸ್ತಾನ ಕ್ರಿಕೆಟ್ ತಂಡವು (Pakistan Cricket Team) ಅಧಿಕೃತವಾಗಿ ಹೊರಬಿದ್ದಿದೆ. ಇಂಗ್ಲೆಂಡ್ ಎದುರಿನ ಪಂದ್ಯದ ನಡುವೆಯೇ ಬಾಬರ್ ಅಜಮ್ ಬಳಗ (England vs Pakistan) ಟೂರ್ನಿಯಿಂದ ಹೊರ ಬಿತ್ತು.ಹಾಗಾಗಿ ನ್ಯೂಜಿಲೆಂಡ್ 4ನೇ ತಂಡವಾಗಿ ವಿಶ್ವಕಪ್ ಸೆಮಿಫೈನಲ್​ಗೆ ಅರ್ಹತೆ ಪಡೆಯಿತು. ಕಿವೀಸ್​ ಸತತ 5ನೇ ಬಾರಿಗೆ ಸೆಮೀಸ್​ ಟಿಕೆಟ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಯಿತು. ಆದರೆ, ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದೆ.


6.4 ಓವರ್​​​ಗಳಲ್ಲಿ ಗುರಿ ಬೆನ್ನಟ್ಟಬೇಕಿತ್ತು!


ಪಾಕಿಸ್ತಾನ ಎದುರಿನ ಪಂದ್ಯದಲ್ಲಿ ಇಂಗ್ಲೆಂಡ್, ನಿಗದಿತ 50 ಓವರ್​​​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 337 ರನ್ ಗಳಿಸಿತು. ಆದರೆ ನೆಟ್​ ರನ್​ ರೇಟ್​ನಲ್ಲಿ ನ್ಯೂಜಿಲೆಂಡ್ ಹಿಂದಿಕ್ಕಲು 6.4 ಓವರ್​​ಗಳಲ್ಲಿ ಈ ಗುರಿ ಬೆನ್ನಟ್ಟಬೇಕಿತ್ತು. ಆದರೆ ಈ ಅಸಾಧ್ಯವಾದ ಗುರಿಯನ್ನು 40 ಎಸೆತಗಳಲ್ಲಿ ಬೆನ್ನಟ್ಟಲು ಬಾಬರ್ ಬಳಗಕ್ಕೆ ಸಾಧ್ಯವಾಗಿಲ್ಲ. ಹಾಗಾಗಿ ಪಾಕ್ ಸೆಮೀಸ್​ ಕನಸು ಭಗ್ನಗೊಂಡರೆ, ಕಿವೀಸ್ ಅಧಿಕೃತವಾಗಿ ಸೆಮೀಸ್​ಗೆ ಲಗ್ಗೆ ಇಟ್ಟಿತು.ಭಾರತ-ನ್ಯೂಜಿಲೆಂಡ್ ನಡುವೆ ಸೆಮೀಸ್ ಫೈಟ್


ವಿಶ್ವಕಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಮತ್ತು 4ನೇ ಸ್ಥಾನ ಪಡೆದಿರುವ ತಂಡಗಳು ಮೊದಲ ಸೆಮಿಫೈನಲ್​​ನಲ್ಲಿ ಸೆಣಸಾಟ ನಡೆಸಲಿವೆ. ಅದರಂತೆ ಮೊದಲ ಸೆಮಿಫೈನಲ್​​ನಲ್ಲಿ ಭಾರತ - ನ್ಯೂಜಿಲೆಂಡ್ (India vs New Zealand)​​ ಫೈನಲ್​ ಟಿಕೆಟ್​ಗಾಗಿ ಕಾದಾಟ ನಡೆಸಲಿವೆ. ನವೆಂಬರ್​ 15ರಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಈ ಹೈವೋಲ್ಟೇಜ್​ ಕದನ ಜರುಗಲಿದೆ.


2ನೇ ಸೆಮೀಸ್​ನಲ್ಲಿ ಆಸೀಸ್-ಆಫ್ರಿಕಾ ಹಣಾಹಣಿ


ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ 2 ಮತ್ತು 3ನೇ ಸ್ಥಾನದಲ್ಲಿರುವ ತಂಡಗಳು ಕಾದಾಟ ನಡೆಸಲಿವೆ. ಅದರಂತೆ 2ನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ ಮತ್ತು 3ನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ತಂಡಗಳು (South Africa vs Australia) ಫೈನಲ್ ಪ್ರವೇಶಿಸಲು ಹೋರಾಟ ನಡೆಸಲಿವೆ. ಈ ಹೈವೋಲ್ಟೇಜ್ ಪಂದ್ಯ ಕೋಲ್ಕತ್ತಾದ ಈಡನ್​ ಗಾರ್ಡನ್ಸ್​ ಮೈದಾನದಲ್ಲಿ ಜರುಗಲಿದೆ. ಮಧ್ಯಾಹ್ನ 2 ಗಂಟೆಗೆ ನೇರ ಪ್ರಸಾರ ಇರಲಿದ್ದು, ಟಾಸ್ ಪ್ರಕ್ರಿಯೆ 1.30ಕ್ಕೆ ನಡೆಯಲಿದೆ.


2019ರ ವಿಶ್ವಕಪ್​ ನಂತರ ಮತ್ತೆ ಮುಖಾಮುಖಿ


2019ರಲ್ಲಿ ಭಾರತದ ಫೈನಲ್​ ಕನಸಿಗೆ ಅಡ್ಡಿಯಾಗಿದ್ದ ನ್ಯೂಜಿಲೆಂಡ್ ತಂಡವೇ ಈ ಬಾರಿಯೂ ಸೆಮಿಫೈನಲ್​​ನಲ್ಲಿ ಎದುರಾಗಿದೆ. ಅಂದು ಇಂಗ್ಲೆಂಡ್​ನ ಓಲ್ಡ್​ ಟ್ರಾಫರ್ಡ್ ಕ್ರಿಕೆಟ್ ಗ್ರೌಂಡ್​​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ್ದ ಕಿವೀಸ್ 239 ರನ್ ಗಳಿಸಿತ್ತು. ಆದರೆ ಭಾರತ 221 ರನ್ ಗಳಿಸಿ 18 ರನ್​ ಗಳಿಂದ ಶರಣಾಗಿತ್ತು. ಇದೀಗ ಭಾರತ ಅಂದಿನ ಸೇಡು ತೀರಿಸಿಕೊಳ್ಳಲು ಭರ್ಜರಿ ತಯಾರಿ ನಡೆಸಿದೆ.ಯಾವ ತಂಡ ಎಷ್ಟು ಬಾರಿ ವಿಶ್ವಕಪ್ ಗೆದ್ದಿವೆ?


ಸದ್ಯ ಸೆಮಿಫೈನಲ್ ಪ್ರವೇಶಿಸಿರುವ ನಾಲ್ಕು ತಂಡಗಳ ಪೈಕಿ ಯಾವ ತಂಡ ಎಷ್ಟು ಬಾರಿ ವಿಶ್ವಕಪ್ ಗೆದ್ದಿವೆ ಎಂಬುದನ್ನು ನೋಡುವುದಾದರೆ, ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಒಂದು ಬಾರಿಯೂ ಏಕದಿನ ವಿಶ್ವಕಪ್ ಗೆದ್ದಿಲ್ಲ. 2019ರ ವಿಶ್ವಕಪ್ ಫೈನಲ್​​ನಲ್ಲಿ ನ್ಯೂಜಿಲೆಂಡ್ ಚೊಚ್ಚಲ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ವಿಫಲವಾಗಿತ್ತು. ಮತ್ತೊಂದೆಡೆ ಸೌತ್​ ಆಫ್ರಿಕಾ ಹಲವು ಸೆಮೀಸ್ ಪ್ರವೇಶಿಸಿದರೂ ಫೈನಲ್​​ಗೇರುತ್ತಿಲ್ಲ.


ವಿಶ್ವಕಪ್ ಇತಿಹಾಸದಲ್ಲಿ ಅತ್ಯಧಿಕ ಟ್ರೋಫಿ ಗೆದ್ದ ತಂಡ ಹೆಗ್ಗಳಿಕೆಗೆ ಆಸ್ಟ್ರೇಲಿಯಾ ಪಾತ್ರವಾಗಿದೆ. 1987, 1999, 2003, 2007 ಮತ್ತು 2015ರಲ್ಲಿ ಆಸೀಸ್​ ಪ್ರಶಸ್ತಿ ಗೆದ್ದಿದೆ. ಇನ್ನು ಟೀಮ್ ಇಂಡಿಯಾ ಎರಡು ಸಲ ಏಕದಿನ ವಿಶ್ವಕಪ್ ಕಿರೀಟಕ್ಕೆ ಮುತ್ತಿಕ್ಕಿದೆ. 1983ರಲ್ಲಿ 2011ರಲ್ಲಿ ಭಾರತ ಚಾಂಪಿಯನ್ ಆಗಿತ್ತು. ಇದೀಗ 3ನೇ ಟ್ರೋಫಿ ಎತ್ತಿ ಹಿಡಿಯಲು ರೋಹಿತ್ ಪಡೆ ಸಜ್ಜಾಗಿದೆ.

ಜಾಹೀರಾತು ಬ್ಲಾಕ್‌ ಮಾಡುವ ಯೂಟ್ಯೂಬ್‌ ಬಳಕೆದಾರರಿಗೆ ಬ್ರೇಕ್‌ ಹಾಕಿದ ಗೂಗಲ್‌; ವೀಕ್ಷಕರಿಗೆ 3 ಆಯ್ಕೆ ನೀಡಿದ ಯೂಟ್ಯೂಬ್‌

Posted by Vidyamaana on 2023-10-25 15:45:27 |

Share: | | | | |


ಜಾಹೀರಾತು ಬ್ಲಾಕ್‌ ಮಾಡುವ ಯೂಟ್ಯೂಬ್‌ ಬಳಕೆದಾರರಿಗೆ ಬ್ರೇಕ್‌ ಹಾಕಿದ ಗೂಗಲ್‌; ವೀಕ್ಷಕರಿಗೆ 3 ಆಯ್ಕೆ ನೀಡಿದ ಯೂಟ್ಯೂಬ್‌

ಯೂಟ್ಯೂಬ್‌ ಬಳಕೆ ಜಾಗತಿಕವಾಗಿ ಗಮನಾರ್ಹವಾಗಿ ಹೆಚ್ಚಾಗುತ್ತಿದೆ. ಎಲ್ಲರೂ ಗೂಗಲ್‌ನ ಯೂಟ್ಯೂಬ್‌ನಲ್ಲಿ ವಿಡಿಯೋ ನೋಡಲು ಬಯಸುತ್ತಾರೆ. ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಸುದ್ದಿ, ಸಿನಿಮಾ, ಮನರಂಜನೆ, ಮಾಹಿತಿಯ ವಿಡಿಯೋಗಳನ್ನು ನೋಡಲು ಎಲ್ಲರೂ ಬಯಸುತ್ತಾರೆ. ಈ ರೀತಿ ಯೂಟ್ಯೂಬ್‌ನಲ್ಲಿ ವೀಕ್ಷಣೆ ಮಾಡುವಾಗ ಕಾಣಿಸುವ ಜಾಹೀರಾತುಗಳು ಸಾಕಷ್ಟು ಜನರಿಗೆ ಕಿರಿಕಿರಿ ಉಂಟು ಮಾಡುತ್ತಾರೆ.ಇಂತಹ ಕಿರಿಕಿರಿ ತಪ್ಪಿಸಲು ಕೆಲವು ಜಾಣರು ಆಡ್‌ ಬ್ಲಾಕರ್‌ ಸಾಫ್ಟ್‌ವೇರ್‌ಗಳನ್ನು ಬಳಸುತ್ತಾರೆ. ಈ ರೀತಿ ಜನರು ಆಡ್‌ ಬ್ಲಾಕರ್‌ ಬಳಸಿ ಯೂಟ್ಯೂಬ್‌ ಸೇವೆ ಪಡೆಯುವುದನ್ನು ತಪ್ಪಿಸಲು ಮತ್ತು ಇಂತಹ ಬಳಕೆದಾರರನ್ನು ಕಂಡುಹಿಡಿಯಲು ಗೂಗಲ್‌ ಆರಂಭಿಸಿದೆ.


ಯೂಟ್ಯೂಬ್‌ನಲ್ಲಿ ವಿಡಿಯೋ ನೋಡಲು ಆಡ್‌ ಬ್ಲಾಕರ್‌ ಸಾಫ್ಟ್‌ವೇರ್‌ ಬಳಸುವವರಿಗೆ ಗೂಗಲ್‌ನ ಸೇವೆಗಳನ್ನು ಕಡಿತ ಮಾಡಲಾಗುತ್ತಿದೆ. ಎಲ್ಲಾದರೂ ಯೂಟ್ಯೂಬ್‌ ವೀಕ್ಷಿಸುವಾಗ ಆಡ್‌ ಬ್ಲಾಕಿಂಗ್‌ ಸಾಫ್ಟ್‌ವೇರ್‌ ಪತ್ತೆಯಾದರೆ ನಿಮಗೆ ಯೂಟ್ಯೂಬ್‌ನಲ್ಲಿ ಪಾಪ್‌ಅಪ್‌ ಸಂದೇಶ ಕಾಣಿಸಲಿದೆ. ಆ ಸಂದೇಶದಲ್ಲಿ ಈ ರೀತಿ ಆಡ್‌ ಬ್ಲಾಕರ್‌ ಬಳಸಬಾರದು ಎಂಬ ವಿವರದ ಜತೆಗೆ ಮೂರು ಆಯ್ಕೆಗಳನ್ನು ನೀಡಲಾಗುತ್ತದೆ.


ಆ ಯೂಟ್ಯೂಬ್‌ ಅಲಾರ್ಟ್‌ನಲ್ಲಿ ಈ ರೀತಿ ಬರೆದಿರುತ್ತದೆ. ಯೂಟ್ಯೂಬ್‌ ಬಳಸುವಾಗ ಆಡ್‌ ಬ್ಲಾಕರ್‌ ಬಳಸುವುದನ್ನು ನಿಷೇಧಿಸಲಾಗಿದೆ. ಜಾಹೀರಾತುಗಳು ಈ ಸೇವೆಯ ಅಗತ್ಯ ಭಾಗವಾಗಿದೆ. ನೀವು ಯೂಟ್ಯೂಬ್‌ ಪ್ರೀಮಿಯಂಗೆ ಹಣ ಪಾವತಿಸಿದರೆ ಮಾತ್ರ ಜಾಹೀರಾತು ಕಾಣಿಸುವುದಿಲ್ಲ.ನಿಮಗೆ ಒಟ್ಟು ಮೂರು ಆಯ್ಕೆಗಳು ಇವೆ. ನೀವು ಯೂಟ್ಯೂಬ್‌ ಜಾಹೀರಾತುಗಳಿಗೆ ಅನುಮತಿ ನೀಡುವುದು. ಯೂಟ್ಯೂಬ್‌ನಲ್ಲಿ ಜಾಹೀರಾತು ಕಾಣಿಸುವುದನ್ನು ತಡೆಯುವುದನ್ನು ನಿಲ್ಲಿಸಲು ಆಡ್‌ ಬ್ಲಾಕರ್‌ ಆಯ್ಕೆಯನ್ನು ಯೂಟ್ಯೂಬ್‌ ಈ ಸಂದರ್ಭದಲ್ಲಿ ಪ್ರದರ್ಶಿಸುತ್ತದೆ. ಅಥವಾ ಯೂಟ್ಯೂಬ್‌ ಪ್ರೀಮಿಯಂಗೆ ಸೈನ್‌ಅಪ್‌ ಆಗಿ. ಅಥವಾ ಈ ಸಂದೇಶ ಇಗ್ನೋರ್‌ ಮಾಡಿ. ಈ ರೀತಿ ಮೂರು ಆಯ್ಕೆ ನೀಡುತ್ತದೆ. ಸಂದೇಶ ಇಗ್ನೋರ್‌ ಮಾಡಿದ ಬಳಿಕವೂ ನೀವು ಆಡ್‌ ಬ್ಲಾಕರ್‌ ಬಳಸುವುದು ಖಾತ್ರಿಯಾದರೆ ಯೂಟ್ಯೂಬ್‌ ಸೇವೆ ಸ್ಥಗಿತಗೊಳ್ಳಲಿದೆ.


ಎಲ್ಲಾದರೂ ನೀವು ಯೂಟ್ಯೂಬ್‌ನ ಈ ಎಚ್ಚರಿಕೆಯನ್ನು ಕಡೆಗಣಿಸಿದ್ದೀರಿ ಎಂದಿರಲಿ. ಮತ್ತೆ ನೀವು ಹಲವು ವಿಡಿಯೋಗಳನ್ನು ನೋಡಬಹುದು. ಈ ಸಂದರ್ಭದಲ್ಲಿ ನೀವು ಆಡ್‌ ಬ್ಲಾಕರ್‌ ಮೂಲಕ ಜಾಹೀರಾತುಗಳಿಗೆ ತಡೆ ನೀಡುತ್ತಿದ್ದೀರಾ ಎಂದು ಪರಿಶೀಲಿಸುತ್ತದೆ. ಮೂರು ಸ್ಟ್ರೈಕ್‌ ಬಳಿಕ ನಿಮಗೆ ಯೂಟ್ಯೂಬ್‌ ವೀಕ್ಷಣೆಗೆ ಅವಕಾಶ ಇರುವುದಿಲ್ಲ.


ಬಹುತೇಕರು ಆನ್‌ಲೈನ್‌ ಬಳಸುವಾಗ ಆಡ್‌ ಬ್ಲಾಕರ್‌ಗಳನ್ನು ಬಳಸುತ್ತಾರೆ. ವೆಬ್‌ಸೈಟ್‌ಗಳಲ್ಲಿ ಜಾಹೀರಾತುಗಳು ಕಾಣಿಸದಂತೆ ಮಾಡಲು ಈ ರೀತಿ ಮಾಡುತ್ತಾರೆ. ಈ ರೀತಿಯ ಆಡ್‌ ಬ್ಲಾಕರ್‌ಗಳು ನಿಮ್ಮ ಕಂಪ್ಯೂಟರ್‌ಗಳಿಗೂ ಹಾನಿ ಮಾಡಬಹುದು. ನಿಮ್ಮ ಕಂಪ್ಯೂಟರ್‌ನ ಸುರಕ್ಷತೆಗೂ ತೊಂದರೆ ನೀಡಬಹುದು. ನಿಮ್ಮ ಇಂಟರ್‌ನೆಟ್‌ ಚಟುವಟಿಕೆ ಮೇಲೆ ನಿಗಾ ಇಡಬಹುದು. ಕೆಲವೊಂದು ಆಡ್‌ ಬ್ಲಾಕರ್‌ಗಳು ಉತ್ತಮ ಸೇವೆ ನೀಡುತ್ತವೆ. ಖಾಸಗಿತನಕ್ಕೆ ಧಕ್ಕೆಯಾಗದಂತೆ ಸೇವೆ ನೀಡುತ್ತಾವೆ.


ಕಳೆದ ಹಲವು ವರ್ಷಗಳಿಂದ ಯೂಟ್ಯೂಬ್‌ ಈ ಆಡ್‌ ಬ್ಲಾಕರ್‌ಗಳನ್ನು ಗಮನಿಸುತ್ತಿತ್ತು. ಈ ರೀತಿ ಬಳಸುವ ಜನರ ಬಗ್ಗೆ ಮೌನವಾಗಿದ್ದಿತ್ತು. ಇದೀಗ ಈ ಮೂಲಕ ತನ್ನ ಸೇವೆಯನ್ನು ದುರುಪಯೋಗ ಪಡಿಸಿಕೊಳ್ಳುವವರಿಗೆ ಯೂಟ್ಯೂಬ್‌ ವೀಕ್ಷಣೆಗೆ ಅವಕಾಶ ನೀಡದೆ ಇರಲು ನಿರ್ಧರಿಸಿದೆ. ಇದರಿಂದ ಯೂಟ್ಯೂಬ್‌ ಪ್ರೀಮಿಯಂ ಬಳಕೆದಾರರ ಸಂಖ್ಯೆಯೂ ಹೆಚ್ಚಾಗುವ ಸಾಧ್ಯತೆಯಿದೆ.


ಈ ರೀತಿ ಅಲಾರ್ಟ್‌ ಸಂದೇಶ ಬರುವ ತನಕ ನಿರಾಂತಕವಾಗಿ ಇತರರು ಯೂಟ್ಯೂಬ್‌ನಲ್ಲಿ ಆಡ್‌ ಬ್ಲಾಕರ್‌ ಬಳಕೆ ಮುಂದುವರೆಸಬಹುದು.

ಬಂಟ್ವಾಳ:ಭವಿಷ್ಯ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Posted by Vidyamaana on 2024-08-08 15:53:10 |

Share: | | | | |


ಬಂಟ್ವಾಳ:ಭವಿಷ್ಯ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ವೇಳೆ ನಡೆದಿದೆ.

ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ.

ಕುರಿಯದಲ್ಲಿ ಬಾಲಕಿಗೆ ಕಿರುಕುಳ ಆರೋಪಿಗಳಿಗೆ ನ್ಯಾಯಾಂಗ ಬಂಧನ

Posted by Vidyamaana on 2024-02-16 16:52:05 |

Share: | | | | |


ಕುರಿಯದಲ್ಲಿ ಬಾಲಕಿಗೆ ಕಿರುಕುಳ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಪುತ್ತೂರು:ಕುರಿಯ ಸಮೀಪ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೊಕ್ಸಿ ಕಾಯ್ದೆಯಡಿ ಪ್ರಕರಣ ದಾಖಲಾಗಿ ಬಂಧಿತರಾಗಿದ್ದ ಇಬ್ಬರಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.ಘಟನೆ ಫೆ.14ರಂದು ಸಂಜೆ ನಡೆದಿತ್ತು.ಬಾಲಕಿಯು ತನ್ನ ಈರ್ವರು ಗೆಳತಿಯರೊಂದಿಗೆ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪರ್ಪುಂಜ ಕಡೆಗೆ ಸ್ಕೂಟರ್(ಕೆಎ21-ಆರ್.8659)ನಲ್ಲಿ ಬಂದಿದ್ದ ಆರೋಪಿಗಳು ಬಾಲಕಿಯ ಕೈಹಿಡಿದೆಳೆಯಲು ಪ್ರಯತ್ನಿಸಿದ್ದರು.ಬಾಲಕಿಯ ಬೊಬ್ಬೆ ಕೇಳಿ ಸುತ್ತಮುತ್ತಲಿನ ಜನ ಬರುವುದನ್ನು ನೋಡಿ ಆರೋಪಿಗಳು ಸ್ಕೂಟರ್‌ನಲ್ಲಿ ಪರಾರಿಯಾಗಿದ್ದರು ಎಂದು ಸಂತ್ರಸ್ತ ನೀಡಿದ್ದ ದೂರಿನ ಮೇರೆಗೆ ಪೊಕ್ಸಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಸಂಪ್ಯ ಪೊಲೀಸರು ಆರೋಪಿಗಳಾದ ಪುತ್ತೂರು ಸಿಂಹವನ ನಿವಾಸಿ ರಿತೀಶ್ (39ವ) ಮತ್ತು ಏನೆಕಲ್ಲು ಗ್ರಾಮದ ಕಿಶನ್ ಎಂಬವರನ್ನು ಬಂಧಿಸಿದ್ದರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಅಕ್ಕನ ಮನೆಯಲ್ಲೇ ಚಿನ್ನಾಭರಣ ಎಗರಿಸಿದ ಕಳ್ಳಿ ತಂಗಿ ಅಂದರ್!

Posted by Vidyamaana on 2024-05-08 07:16:07 |

Share: | | | | |


ಅಕ್ಕನ ಮನೆಯಲ್ಲೇ ಚಿನ್ನಾಭರಣ ಎಗರಿಸಿದ ಕಳ್ಳಿ ತಂಗಿ ಅಂದರ್!

ಬೆಂಗಳೂರು, ಮೇ.07: ತನ್ನ ಅಕ್ಕನ ಮನೆಯಲ್ಲೇ ಹಣ ಹಾಗೂ ಚಿನ್ನಾಭರಣ ಕದ್ದಿದ್ದ ಆರೋಪಿ ತಂಗಿಯನ್ನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಮಾ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಅಕ್ಕ ಊರಿಗೆ ತೆರಳಿದ್ದ ವೇಳೆ ನಕಲಿ ಕೀ ಬಳಸಿ 52 ಲಕ್ಷ ರೂ. ಕ್ಯಾಶ್ ಹಾಗೂ 180 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಬಂಧಿತ ಆರೋಪಿಯಿಂದ 65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ. 

ಚೌಡೇಶ್ವರಿ ದೇವರ ಹಬ್ಬ ಎಂದು ಉಮಾಳ ಅಕ್ಕ ಊರಿಗೆ ಹೋಗಿದ್ದರು. ಹೋಗುವ ಮುನ್ನ ಸಂಬಂಧಿಗೆ ಮನೆಯ ಕೀ‌ ಕೊಟ್ಟು ಹೋಗಿದ್ದರು. ನಂತರ ಕಳೆದ ಏ. 24ರ ರಾತ್ರಿ ಆಕೆಯ ಸಂಬಂಧಿ ಮನೆಗೆ ಮಲಗಲು ಹೋಗಿದ್ದಾಗ ನಕಲಿ ಕೀ ಬಳಸಿ ಕಳ್ಳತನ ಮಾಡಿದ್ದಳು. ಉಮಾ 182 ಗ್ರಾಂ ಚಿನ್ನಾಭರಣ ಹಾಗು 52 ಲಕ್ಷ ನಗದು ಕಳ್ಳತನ ಮಾಡಿದ್ದಳು.

Recent News


Leave a Comment: