Posted by vidyamaana on 2024-07-23 21:09:49 |
ಬೆಂಗಳೂರು : ಬಸವೇಶ್ವರನಗರದ ಮಾರುತಿ ಡ್ರೈವಿಂಗ್ ಸ್ಕೂಲ್ನ ಪರವಾನಗಿ ಹಾಗೂ ಅದೇ ಶಾಲೆಯ ತರಬೇತುದಾರನ ಚಾಲನಾ ಪರವಾನಗಿಯನ್ನು (ಡಿಎಲ್) ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆ ರದ್ದುಗೊಳಿಸಿದೆ.
ಯುವತಿಗೆ ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಅಡಿ ಕಾರು ತರಬೇತಿದಾರನ ವಿರುದ್ಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯಂತೆ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.
ನಗರದ ಯಾವುದೇ ಡ್ರೈವಿಂಗ್ ಶಾಲೆಯಲ್ಲೂ ಈ ರೀತಿಯ ಘಟನೆಗಳು ನಡೆಯಬಾರದು. ಈ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಹಾಲಕ್ಷ್ಮೀಪುರದ 18 ವರ್ಷದ ಯುವತಿ ನೀಡಿದ್ದ ದೂರು ಆಧರಿಸಿ, ಬಸವೇಶ್ವರನಗರದ ಮಾರುತಿ ಡ್ರೈವಿಂಗ್ ಸ್ಕೂಲ್ನ ತರಬೇತುದಾರ ಅಣ್ಣಪ್ಪ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಏನಿದು ಪ್ರಕರಣ?:
ದೂರು ನೀಡಿದ್ದ ಯುವತಿ ಕಾರು ಚಾಲನೆ ಕಲಿಯಲು ಮಾರುತಿ ಡ್ರೈವಿಂಗ್ ಸ್ಕೂಲ್ಗೆ ಸೇರಿದ್ದರು. ಅಣ್ಣಪ್ಪ ಎಂಬಾತ ಕಾರು ಚಾಲನೆ ಬಗ್ಗೆ ತರಬೇತಿ ನೀಡಿದ್ದರು. ಒಂದು ತಿಂಗಳ ಕೋರ್ಸ್ ಮುಕ್ತಾಯವಾದ ಮೇಲೆ ಅಣ್ಣಪ್ಪ, ನಿಮ್ಮ ಮನೆಯ ಕಾರಿನಲ್ಲೇ ಪರಿಪೂರ್ಣವಾಗಿ ಚಾಲನೆ ಬಗ್ಗೆ ಹೇಳಿಕೊಡುತ್ತೇನೆ. ಒಂದು ಗಂಟೆಯ ವಿಶೇಷ ಕ್ಲಾಸ್ಗೆ ₹750 ಕೊಡಬೇಕು ಎಂದು ಯುವತಿಯನ್ನು ಕೇಳಿಕೊಂಡಿದ್ದರು. ಯುವತಿ 15 ದಿನಗಳ ವಿಶೇಷ ಕ್ಲಾಸ್ಗೆ ಅಣ್ಣಪ್ಪ ಅವರಿಗೆ ₹10,500 ಪಾವತಿಸಿದ್ದರು. ಅದರಂತೆ ಅಣ್ಣಪ್ಪ ವಿಶೇಷ ತರಬೇತಿ ಆರಂಭಿಸಿದ್ದರು ಎಂದು ಪೊಲೀಸರು ಹೇಳಿದರು.
ಪ್ರತಿದಿನ ಯುವತಿಯ ಮನೆ ಬಳಿ ಬಂದು ಆಕೆಯ ಕಾರಿನಲ್ಲೇ ಅಣ್ಣಪ್ಪ ಚಾಲನೆ ತರಬೇತಿ ನೀಡುತ್ತಿದ್ದರು. ಜುಲೈ 7ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಯುವತಿ ಮನೆ ಬಳಿ ಬಂದಿದ್ದ ಅಣ್ಣಪ್ಪ, ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಚಾಲನೆ ಬಗ್ಗೆ ಹೇಳಿಕೊಡಲು ಮುಂದಾಗಿದ್ದರು. ಬಸವೇಶ್ವರ ನಗರದ ನ್ಯಾಷನಲ್ ಶಾಲೆಯ ಮೇಲ್ಸೇತುವೆಯಲ್ಲಿ ತೆರಳುವಾಗ, ಯುವತಿ ಕಾರು ಚಾಲನೆ ಮಾಡುತ್ತಿದ್ದರು. ಆಗ ಅಣ್ಣಪ್ಪ ಅಸಭ್ಯವಾಗಿ ವರ್ತಿಸಿದ್ದರು ಎಂದು ಪೊಲೀಸರು ತಿಳಿಸಿದರು.
ತರಬೇತುದಾರನ ಅಸಭ್ಯ ವರ್ತನೆಯಿಂದ ಗಾಬರಿಗೊಂಡಿದ್ದ ಯುವತಿ ಕಾರನ್ನು ಮನೆಯತ್ತ ತಿರುಗಿಸಿದ್ದರು. ಅದಾದ ಮೇಲೆ ತರಬೇತುದಾರ ಸುಮ್ಮನಾಗಿದ್ದರು. ಅಣ್ಣಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಯುವತಿ ಪೊಲೀಸರಿಗೆ ದೂರು ನೀಡಿದ್ದರು.
Posted by Vidyamaana on 2024-07-18 19:57:14 |
ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ
Posted by Vidyamaana on 2023-06-26 06:54:34 |
ಕಾರ್ಕಳ : ಕ್ಷುಲ್ಲಕ ವಿಚಾರಕ್ಕಾಗಿ ದಂಪತಿಗಳ ಮಧ್ಯೆ ಜಗಳವಾಗಿದ್ದು ಸಾವಿನೊಂದಿಗೆ ಅಂತ್ಯ ಕಂಡಿರುವ ಘಟನೆ ಜೂ. 25ರಂದು ಕಾರ್ಕಳ ತಾಲೂಕು ನಲ್ಲೂರಿನಲ್ಲಿ ನಡೆದಿದೆ. ಯಲ್ಲಾಪುರ ಮೂಲದ ಇಮ್ಯಾನುಲ್ ಸಿದ್ದಿ (40) ಹಾಗೂ ಯಶೋಧಾ (32) ಎಂಬವರೇ ಸಾವಿಗೀಡಾದ ದಂಪತಿ
ಭಾನುವಾರ ಬೆಳಿಗ್ಗೆ ಟಿವಿ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿಗಳ ಮಧ್ಯೆ ಜಗಳವಾಗಿದ್ದು, ಈ ವೇಳೆ ಯಶೋಧಾ ತೋಟದಲ್ಲಿದ್ದ ಬಾವಿಗೆ ಹಾರಿದರು. ಯಶೋಧಾರನ್ನು ರಕ್ಷಿಸಲು ತೆರಳಿದ್ದ ಪತಿ ಇಮ್ಯಾನುಲ್ ಕೂಡ ನೀರುಪಾಲಾದವರು ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳಿಂದ ಇಮ್ಯಾನುಲ್, ಯಶೋಧಾ ದಂಪತಿ ನಲ್ಲೂರಿನ ತೋಟವೊಂದರಲ್ಲಿ ಕೆಲಸಕ್ಕಿದ್ದರು. ದಂಪತಿ ಸಾವಿನಿಂದ ಇದೀಗ 10 ವರ್ಷದ ಬಾಲಕ ಹಾಗೂ 9 ವರ್ಷದ ಬಾಲಕಿ ಅನಾಥರಾಗಿದ್ದಾರೆ.
ಡಿವೈಎಸ್ಪಿ ಅರವಿಂದ್ ಕಲಗುಜ್ಜಿ, ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ತೇಜಸ್ವಿ, ಪೊಲೀಸರಾದ ಪ್ರಕಾಶ್, ಸುಭಾಶ್ ಕಾಮತ್, ಸುಂದರ ಗೌಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.ಶವ ಸ್ಥಳೀಯರು ಗ್ರಾಮ ಪಂಚಾಯತ್ ಸದಸ್ಯರಾದ ಸುಮಿತ್ ನಲ್ಲೂರು ಲೋಕೇಶ್ ಶೆಟ್ಟಿ, ಸ್ಥಳೀಯರಾದ ಹರಿಪ್ರಸಾದ್ ಬಜಗೋಳಿ, ಶಿವಣ್ಣ ನಲ್ಲೂರು, ನಾರಾಯಣ ಗೌಡ ಅವರು ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತುವಲ್ಲಿ ಸಹಕರಿಸಿದರು.
Posted by Vidyamaana on 2024-04-22 13:28:29 |
ಮಂಗಳೂರು, ಎ.22: ಜೀ ಕನ್ನಡ ವಾಹಿನಿಯ ಡ್ರಾಮಾ ಜೂನಿಯರ್ ಸೀಸನ್ 5ರಲ್ಲಿ ಮಂಗಳೂರಿನ ರಿಷಿಕಾ ಕುಂದೇಶ್ವರ ಮತ್ತು ತುಮಕೂರು ಜಿಲ್ಲೆಯ ಕುಣಿಗಲ್ನ ವಿಷ್ಣು ಡ್ರಾಮಾ ಜೂನಿಯರ್ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ.
ಭಾನುವಾರ ರಾತ್ರಿ ಸೀಸನ್ 5ರ ವಿಜೇತರು ಯಾರು ಎಂಬುದನ್ನು ಘೋಷಿಸುವ ಮೂಲಕ ಕಾರ್ಯಕ್ರಮ ಮುಕ್ತಾಯ ಕಂಡಿದೆ. ಈ ಸಲ ಇಬ್ಬರನ್ನು ವಿಜೇತರಾಗಿ ಆಯ್ಕೆ ಮಾಡಲಾಗಿದೆ. ರಾಜ್ಯದ 31 ಜಿಲ್ಲೆಗಳಿಂದ ಹಲವಾರು ಬಾಲ ಪ್ರತಿಭೆಗಳನ್ನು ಆಡಿಷನ್ ಮೂಲಕ ಆಯ್ಕೆ ಮಾಡಲಾಗಿತ್ತು. ಮೊದಲ ವಾರದಿಂದಲೇ ಶುರುವಾದ ಮಕ್ಕಳ ಆಟ, ಫಿನಾಲೆ ಹಂತಕ್ಕೆ ಬರುವ ವರೆಗೂ ಬರೋಬ್ಬರಿ 200ಕ್ಕೂ ಅಧಿಕ ಸ್ಕಿಟ್ಗಳನ್ನು ಮಾಡಿ ಮುಗಿಸಿದ್ದರು. ಪುಟಾಣಿಗಳು. ಪೌರಾಣಿಕ, ಸಾಮಾಜಿಕ, ಹಾಸ್ಯ ಪ್ರಧಾನ ಎಲ್ಲ ಬಗೆಯ ಶೋಗಳಿಂದಲೇ ಈ ಸಲದ ವೇದಿಕೆಯನ್ನು ರಂಗಾಗಿಸಿದ್ದರು. 21 ವಾರ ಕರುನಾಡನ್ನು ಮನರಂಜಿಸಿದ 14 ಮಕ್ಕಳ ಪೈಕಿ ಯಾರು ವಿಜೇತರು ಎಂಬ ಕೌತುಕಕ್ಕೆ ಭಾನುವಾರ ತೆರೆಬಿದ್ದಿದೆ. ಈ ಬಾರಿ ಎಲ್ಲ14 ಮಂದಿ ಪುಟಾಣಿಗಳು ಫಿನಾಲೆ ಸುತ್ತಿನಲ್ಲಿದ್ದರು. ಆ ಪೈಕಿ ಫಿನಾಲೆ ರೌಂಡ್ನಲ್ಲಿ ಭದ್ರಾವತಿಯ ಇಂಚರ, ಶಿವಮೊಗ್ಗದ ಮಹಾಲಕ್ಷ್ಮೀ, ಮಂಗಳೂರಿನ ರಿಶಿಕಾ,
Posted by Vidyamaana on 2023-09-17 14:49:48 |
ಬೆಂಗಳೂರು (ಸೆ.17): ರಾಜ್ಯದಲ್ಲಿ ಹಿಂದೂಪರ ಹೋರಾಟಗಾರ ಹಾಗೂ ಗೋರಕ್ಷಕ ಎಂದು ವಿವಿಧ ಹೋರಾಟಗಳ ಮೂಲಕ ಹಲ್ಲೆ ಹಾಗೂ ವಿವಿಧ ಪ್ರಕರಣಗಳಡಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಿ ಜೈಲಿಗಟ್ಟಿದ್ದರು. ಆದರೆ, ಗಣೇಶ ಹಬ್ಬಕ್ಕೆ ಒಂದು ದಿನ ಮುಂಚಿತವಾಗಿ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿಗೆ ಗುಡ್ ನ್ಯೂಸ್ ನೀಡಿರುವ ಸರ್ಕಾರ, ಅವರ ವಿರುದ್ಧ ದಾಖಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಗೊಳಿಸಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ
ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಇವರು ಕರ್ನಾಟಕ ಕಳ್ಳ ಭಟ್ಟಿ ವ್ಯಾಪಾರಿಗಳ, ಮಾದಕ ವಸ್ತು ಅಪರಾಧಿಗಳ, ಜೂಜುಕೋರರ, ಗೂಂಡಾಗಳ, ಅನೈತಿಕ ವ್ಯವಹಾರ ಅಪರಾಧಿಗಳ, ಕೊಳಚೆ ಪ್ರದೇಶಗಳನ್ನು ಕಬಳಿಸುವವರ, ವಿಡಿಯೋ ಅಥವಾ ಆಡಿಯೋ ಪೈರೇಟ್ ಚಟುವಟಿಕೆಗಳ ತಡೆ ಅಧಿನಿಯಮ, 1985ರಡಿಯಲ್ಲಿ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ (32 ವರ್ಷ) ವಿರುದ್ಧ ಆ.11ರಂದು ಹೊರಡಿಸಿರುವ ಬಂಧನ ಆದೇಶವನ್ನು ಆ.17ರಂದು ಅನುಮೋದಿಸಲಾಗಿತ್ತು. ಆದರೆ, ಸಲಹಾ ಮಂಡಳಿಯು ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ಸೆ.13ರ ವರದಿಯಲ್ಲಿ ಅಭಿಪ್ರಾಯಪಟ್ಟಿರುತ್ತದೆ.ಆದ್ದರಿಂದ ಕರ್ನಾಟಕ ಸರ್ಕಾರವು ಸದರಿ ಅಧಿನಿಯಮದ 12ನೇ ಪುಕರಣದ 2ನೇ ಉಪ ಪುಕರಣದಡಿ ಪುದತ್ತವಾದ ಅಧಿಕಾರವನ್ನು ಚಲಾಯಿಸಿ, ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಇವರು, ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ವಿರುದ್ಧ ಹೊರಡಿಸಿರುವ ಬಂಧನ ಆದೇಶವನ್ನು ಹಿಂಪಡೆದು, ಈ ಪುಕರಣಕ್ಕೆ ಅನ್ವಯವಾಗುವಂತೆ ಮಾತ್ರ ತಕ್ಷಣದಿಂದ ಜಾರಿಗೆ ಬರುವಂತೆ ಬಂಧಮುಕ್ತಗೊಳಿಸಿ ಆದೇಶಿಸಿದೆ.
ಗೂಂಡಾ ಕಾಯ್ದೆ ಜಾರಿ ಬಗ್ಗೆ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದ್ದ ಹೈಕೋರ್ಟ್: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿರುವ ಸಂಬಂಧ ರಾಜ್ಯ ಸರ್ಕಾರ, ನಗರ ಪೊಲೀಸ್ ಆಯುಕ್ತರು ಮತ್ತು ಸಿಸಿಬಿ ಪೊಲೀಸರಿಗೆ ಹೈಕೋರ್ಟ್ನಿಂದ ಆ.24ರಂದು ನೋಟಿಸ್ ಜಾರಿ ಮಾಡಿತ್ತು. ಗೂಂಡಾ ಕಾಯ್ದೆಯಡಿ ತಮ್ಮನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದುಆರೋಪಿಸಿ ಪುನೀತ್ ಕೆರೆಹಳ್ಳಿ (Puneeth kerehalli) ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿ (Habeas Corpus Petition) ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿತ್ತು.
ಸಮಾಜ ಸೇವಕ ಪುನೀತ್ ಕೆರೆಹಳ್ಳಿ ಎಂದು ವಾದ ಮಂಡನೆ:
ಇನ್ನು ಈ ಅರ್ಜಿಯ ಕುರಿತು ವಿಚಾರಣೆ ವೇಳೆ ಪುನೀತ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ (Arun shyam) ವಾದ ಮಂಡಿಸಿ, ಅರ್ಜಿದಾರರು ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಅರ್ಜಿದಾರರು ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಕಟ್ಟಿದೇಶಕ್ಕಾಗಿ ಹೋರಾಡುವ ಸಮಾನ ಮನಸ್ಕರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ದುರುದ್ದೇಶಪೂರ್ವಕವಾಗಿ ಹಲವು ಪ್ರಕರಣ ಹೂಡಿ ಮತ್ತು ರಾಜಕೀಯ ದ್ವೇಷದ ಕಾರಣಕ್ಕೆ ಅರ್ಜಿದಾರರನ್ನು ಆ.11ರಂದು ಗೂಂಡಾ ಕಾಯ್ದೆಯಡಿ ಅಕ್ರಮವಾಗಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರ ಪೊಲೀಸ್ ಆಯುಕ್ತರು ಯಾವುದೇ ವಿವೇಚನೆ ಬಳಸದೆ ಏಕಾಏಕಿ ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದಾರೆ. ಇದು ಏಕಪಕ್ಷೀಯ ನಡೆಯಾಗಿದ್ದು, ಆ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು.
Posted by Vidyamaana on 2024-04-18 20:45:03 |
ಧಾರವಾಢ: ಸಂಸದ ಪ್ರಹ್ಲಾದ್ ಜೋಷಿ ವಿರುದ್ಧ ಸಮರ ಸಾರಿ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಗದಗ ಜಿಲ್ಲೆಯ ಬಾಳೆಹೊಸೂರ-ಶಿರಹಟ್ಟಿಯ ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಸಾಮೀಜಿ ನಾಮಪತ್ರ ಸಲ್ಲಿಸಿದ್ದು, ₹ 9.75 ಕೋಟಿ ಆಸ್ತಿ ಘೋಷಿಸಿದ್ದಾರೆ.
ಧಾರವಾಡ ಕ್ಷೇತ್ರದ ಲೋಕಸಭೆ ಚುನಾವಣೆಗೆ ಇಂದು ಐವರು ಆರು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಶಿರಹಟ್ಟಿಯ ದಿಂಗಾಗಲೇಶ್ವರ ಸ್ವಾಮೀಜಿ ಎರಡು ಪ್ರತಿ ನಾಮಪತ್ರ ಸಲ್ಲಿಸಿದ್ದಾರೆ.
Posted by Vidyamaana on 2023-11-28 21:10:08 |
ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರ್ ಸುರಂಗದೊಳಗೆ ಸಿಲುಕಿ, ಕಳೆದ 17 ದಿನಗಳಿಂದ ಜೀವ ಕೈಯಲ್ಲಿ ಹಿಡಿದುಕೊಂಡು ಹೊಸ ಬದುಕಿಗಾಗಿ ಆಸೆಗಣ್ಣುಗಳಿಂದ ಎದುರು ನೋಡುತ್ತಿದ್ದ ಎಲ್ಲ 41 ಕಾರ್ಮಿಕರನ್ನು ಸುರಕ್ಷಿತವಾಗಿ ಸುರಂಗದಿಂದ ಇಂದು ಹೊರಕರೆತರಲಾಗಿದೆ.17 ದಿನಗಳ ನಿರಂತರ ಶ್ರಮ ಮತ್ತು ಅಸಂಖ್ಯಾತ ಜನಗಳ ಪ್ರಾರ್ಥನೆಗೆ ಫಲ ಸಿಕ್ಕಿದ್ದು, ಬಹುದೊಡ್ಡ ರಕ್ಷಣಾ ಕಾರ್ಯಾಚರಣೆ ದೊಡ್ಡ ಯಶಸ್ಸು ಸಾಧಿಸಿದೆ. ನಿಜಕ್ಕೂ ಇದೊಂದು ಬಿಗ್ ಅಂಡ್ ಸ್ವೀಟ್ ನ್ಯೂಸ್ ಎಂದೇ ಹೇಳಬಹುದಾಗಿದೆ.ಸುಮಾರು 50 ಮೀಟರ್ಗೂ ಅಧಿಕ ದೂರದಲ್ಲಿ ಸುರಂಗದ ಒಳಗಡೆ ಸಿಲುಕಿದ್ದ ಎಲ್ಲ 41 ಕಾರ್ಮಿಕರನ್ನು ಒಬ್ಬೊಬ್ಬರಾಗಿ ಪೈಪ್ ಮೂಲಕ ಗಾಲಿ ಸ್ಟ್ರೆಚರ್ ಸಹಾಯದಿಂದ ರಕ್ಷಣಾ ತಂಡಗಳು ಹೊರಗೆಳೆದು ರಕ್ಷಣೆ ಮಾಡಿದವು. ಹೊರಗೆ ಬಂದರ ಕಾರ್ಮಿಕರಿಗೆ ತಕ್ಷಣ ಪ್ರಾಥಮಿಕ ಚಿಕಿತ್ಸೆ ಅಡಿಯಲ್ಲಿ ದೇಹ ಪರೀಕ್ಷೆ ಮಾಡಿ ತಕ್ಷಣ ಆಂಬ್ಯುಲೆನ್ಸ್ಗಳ ಸಹಾಯದಿಂದ ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಎಲ್ಲ ಕಾರ್ಮಿಕರು ಆರೋಗ್ಯಯುತವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ಪ್ರತೀ ಹಂತದಲ್ಲೂ ನಾಲ್ಕು ನಾಲ್ಕು ಕಾರ್ಮಿಕರನ್ನು ಹೊರಗೆ ಕರೆತರಲಾಯಿತು. ಕಾರ್ಮಿಕರ ರಕ್ಷಣೆಗೆ ಶತಕೋಟಿ ಭಾರತೀಯರು ಪ್ರಾರ್ಥಿಸಿದ್ದರು. ಎಲ್ಲರ ಪ್ರಾರ್ಥನೆ ಇಂದು ಫಲಿಸಿದ್ದು, ಕಾರ್ಯಾಚರಣೆ ಯಶಸ್ವಿಯಾಗಿದೆ. ಕಾರ್ಮಿಕರು ಹೊರಗೆ ಬರುತ್ತಿದ್ದಂತೆ ಸುತ್ತಲೂ ಜೈಕಾರಗಳು ಮೊಳಗಿದವು ಮತ್ತು ಸ್ಥಳದಲ್ಲಿ ನೆರೆದಿದ್ದ ಜನರು ಸಿಹಿ ಹಂಚಿ ಸಂಭ್ರಮಿಸಿದರು.ಸುರಂಗ ಮಾರ್ಗ ನಿರ್ಮಾಣದ ಉದ್ದೇಶವೇನು?
ಕೇಂದ್ರದ ಮಹತ್ವಾಕಾಂಕ್ಷೆಯ ಚಾರ್ ಧಾಮ್ ಯೋಜನೆಯ ಭಾಗವಾದ ಸುರಂಗವು ಉತ್ತರಾಖಂಡದ ಸಿಲ್ಕ್ಯಾರಾ ಮತ್ತು ದಂಡಲ್ಗಾಂವ್ ನಡುವೆ ಉತ್ತರಕಾಶಿ ಮತ್ತು ಯಮುನೋತ್ರಿಯನ್ನು ಸಂಪರ್ಕಿಸಲು ಉದ್ದೇಶಿಸಿರುವ ರಸ್ತೆಯಲ್ಲಿದೆ. ಇದರ ಕಾಮಗಾರಿ ಭರದಿಂದ ಸಾಗಿತ್ತು. ಆದರೆ, ಮಣ್ಣು ಕುಸಿತದಿಂದಾಗಿ ನ.12 ರಂದು 41 ಕಾರ್ಮಿಕರು ಸುರಂಗದಲ್ಲಿ ಸಿಲುಕಿಕೊಂಡಿದ್ದಾರೆ.