Posted by vidyamaana on 2024-07-23 18:35:28 |
ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ.
ಕೇರಳ ಮಾಧ್ಯಮಗಳ ಕವರೇಜ್
ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ
Posted by Vidyamaana on 2023-07-25 11:42:05 |
ಪುತ್ತೂರು: ಪಾರಂಪರಿಕ ಹಾಗೂ ಆಧುನಿಕ ಶೈಲಿಯ ಚಿನ್ನಾಭರಣಗಳಿಗೆ ಹೆಸರುವಾಸಿಯಾಗಿರುವ ಜಿಲ್ಲೆಯ ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್, ಪ್ರತಿ ಬಾರಿಯೂ ವಿಶೇಷ ಆಫರ್ ಗಳೊಂದಿಗೆ ಗ್ರಾಹಕರ ಮುಂದೆ ಬರುತ್ತಿದೆ.
ಈ ಬಾರಿಯ ಮುಂಗಾರಿಗೆ ಸಿಂಚನ ನೀಡುವಂತೆ ಮುಳಿಯ ಮಾನ್ಸೂನ್ ಧಮಾಕವನ್ನು ಗ್ರಾಹಕರ ಮುಂದಿರಿಸಿದೆ. ಸೋಮವಾರದಿಂದ ಅಂದರೆ ಜುಲೈ 24ರಿಂದ ಮುಳಿಯ ಮಾನ್ಸೂನ್ ಧಮಾಕ ಆರಂಭಗೊಂಡಿದ್ದು, ಗ್ರಾಹಕರಿಂದ ಉತ್ತಮ ಸ್ಪಂದನೆ ದೊರಕಿದೆ.
ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸುವ ಉದ್ದೇಶದಿಂದಲೇ ಗ್ರಾಹಕರಿಗೆ ಹೊಸತನದ ಟಚ್ ನೀಡಲು ಮುಳಿಯ ವಿಶೇಷ ಆಫರ್ ಗಳನ್ನು ಗ್ರಾಹಕರ ಮುಂದಿರಿಸಿದೆ. ಮುಳಿಯದ ಪುತ್ತೂರು ಹಾಗೂ ಬೆಳ್ತಂಗಡಿಯ ಮಳಿಗೆಗಳಲ್ಲಿ ಈ ಆಫರ್ ಲಭ್ಯವಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬಹುದು.
ಗ್ರಾಹಕರು, ತಮ್ಮ ಹಳೆಯ ಚಿನ್ನಾಭರಣವನ್ನು ಹೊಸ 916 ಆಭರಣಗಳೊಂದಿಗೆ ವಿನಿಮಯ ಮಾಡಿ ಪ್ರತಿ ಗ್ರಾಂ ಮೇಲೆ 100 ರೂ. ಅಧಿಕ ಲಾಭ ಪಡೆಯಬಹುದು.
ವಿಎ ಚಾರ್ಜಸ್ ಮೇಲೆ ಶೇ. 50ರಷ್ಟು ಹಾಗೂ ವಜ್ರದ ಮೌಲ್ಯದ ಮೇಲೆ ಶೇ. 10ರವರೆಗೆ ಕಡಿತ ಕಡಿತ ನೀಡಲಾಗಿದೆ. ಬೆಳ್ಳಿ ಆಭರಣಗಳ ಮೇಲೆಯೂ ಶೇ. 5ರವರೆಗೆ ರಿಯಾಯಿತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮಾಹಿತಿಗೆ ಮುಳಿಯ ಜ್ಯುವೆಲ್ಸಿನ ಕೋರ್ಟ್ ರೋಡಿನಲ್ಲಿರುವ ಪುತ್ತೂರು ಶಾಖೆ : 9379202916, ಬೆಳ್ತಂಗಡಿ ಮುಖ್ಯರಸ್ತೆಯ ಮಳಿಗೆ: 9343004916ನ್ನು ಸಂಪರ್ಕಿಸಬಹುದು.
Posted by Vidyamaana on 2023-08-23 04:01:32 |
ಬಂಟ್ವಾಳ, ಆಗಸ್ಟ್ 22: ವಿಟ್ಲ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಿಂದ ತಪ್ಪಿಸಿಕೊಂಡಿದ್ದ ಇಬ್ಬರು ಬಾಲಕರನ್ನು ಪೊಲೀಸರು ಪುತ್ತೂರಿನಲ್ಲಿ ಪತ್ತೆ ಮಾಡಿದ್ದಾರೆ.
ನಿನ್ನೆ ಬೆಳಗ್ಗೆ ಹಾಸ್ಟೆಲಿನಿಂದ ದೀಕ್ಷಿತ್ (15) ಮತ್ತು ಗಗನ್ (14) ಎಂಬ ಇಬ್ಬರು ವಿದ್ಯಾರ್ಥಿಗಳು ಶಾಲೆಗೆಂದು ತೆರಳಿದ್ದರು. ಸಂಜೆ 4.30ಕ್ಕೆ ಹಾಸ್ಟೆಲಿಗೆ ಮರಳದೇ ಇದ್ದುದರಿಂದ ಇತರ ಮಕ್ಕಳಲ್ಲಿ ಕೇಳಿದಾಗ, ಅವರಿಬ್ಬರು ಶಾಲೆಗೆ ಬಂದಿಲ್ಲ ಎನ್ನುವುದು ತಿಳಿದುಬಂದಿತ್ತು. ಮಕ್ಕಳಿಬ್ಬರು ಶಾಲೆಗೆ ಬಾರದೆ ಎಲ್ಲಿ ಹೋಗಿದ್ದಾರೆಂದು ಗಾಬರಿಗೊಂಡ ಶಾಲೆಯ ವಾರ್ಡನ್ ಸೇರಿದಂತೆ ಇತರ ಸಿಬಂದಿ ಅಕ್ಕ ಪಕ್ಕದಲ್ಲಿ ಹುಡುಕಾಟ ನಡೆಸಿದ್ದಾರೆ.
ಆನಂತರ ವಿಟ್ಲ ಠಾಣೆಯಲ್ಲಿ ಇಬ್ಬರು ಬಾಲಕರ ನಾಪತ್ತೆ ಬಗ್ಗೆ ದೂರು ದಾಖಲಿಸಲಾಗಿತ್ತು. ಬಾಲಕರಿಬ್ಬರು ನಿನ್ನೆ ರಾತ್ರಿ ಪುತ್ತೂರು ಬಸ್ ನಿಲ್ದಾಣದಲ್ಲಿದ್ದಾಗ ಪತ್ತೆಯಾಗಿದ್ದಾರೆ. ಸಾರ್ವಜನಿಕರು ಬಾಲಕರಿಬ್ಬರನ್ನು ನೋಡಿ ಪ್ರಶ್ನೆ ಮಾಡದಾಗ, ಚಿತ್ರದುರ್ಗಕ್ಕೆ ಹೋಗಬೇಕು, ಹಣ ಇಲ್ಲದೆ ಬಸ್ ನಿಲ್ದಾಣದಲ್ಲಿ ಉಳಿದುಕೊಂಡಿದ್ದೇವೆ ಎಂದು ತಿಳಿಸಿದ್ದರು. ಬಳಿಕ ಪುತ್ತೂರು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಬಾಲಕರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ನಿಜ ವಿಚಾರ ತಿಳಿಸಿದ್ದಾರೆ.
ಆಗಸ್ಟ್ 21ರ ಬೆಳಗ್ಗೆ ಹಾಸ್ಟೆಲಿನಿಂದ ವಿಟ್ಲಕ್ಕೆ ಅಲ್ಲಿಂದ ಪುತ್ತೂರಿಗೆ ಬಸ್ಸಿನಲ್ಲಿ ಆಗಮಿಸಿದ್ದಾರೆ. ಪುತ್ತೂರು ತಲುಪಿದಾಗ, ಚಿತ್ರದುರ್ಗಕ್ಕೆ ಹೋಗುವ ಬಸ್ಸಿಗೆ ತೆರಳಲು ಕೈಯಲ್ಲಿ ಕಾಸಿಲ್ಲದಾಗಿತ್ತು. ಹಾಗಾಗಿ ನಿಲ್ದಾಣದಲ್ಲಿಯೇ ಕುಳಿತುಕೊಂಡಿದ್ದರು. ಮನೆಯವರನ್ನು ನೋಡುವುದಕ್ಕಾಗಿ ಚಿತ್ರದುರ್ಗಕ್ಕೆ ಹೊರಟಿದ್ದೇವೆಂದು ಪೊಲೀಸರಲ್ಲಿ ತಿಳಿಸಿದ್ದಾರೆ. ಇಬ್ಬರು ಬಾಲಕರನ್ನೂ ಪೋಷಕರಿಗೆ ಮಾಹಿತಿ ನೀಡಿ ಮತ್ತೆ ಹಾಸ್ಟೆಲಿಗೆ ಸೇರಿಸಲಾಗಿದೆ.
Posted by Vidyamaana on 2023-11-22 21:47:50 |
ಪುತ್ತೂರು: ನವೆಂಬರ್ 25ಮತ್ತು 26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರಿಗೆ ಗೃಹಕಛೇರಿಯಲ್ಲಿ ಕಂಬಳ ಸಮಿತಿ ಅಧ್ಯಕ್ಷರೂ ,ಪುತ್ತೂರು ಶಾಸಕರೂ ಆದ ಅಶೋಕ್ ರೈ ಯವರು ಆಮಂತ್ರಣ ಪತ್ರ ನೀಡಿ ಕಂಬಳಕ್ಕೆ ಆಹ್ವಾನ ನೀಡಿದರು. 25 ರಂದು ಸಂಜೆ ನಡೆಯುವ ಮುಖ್ಯ ಸಭಾ ಕಾರ್ಯಕ್ರಮದಲ್ಲಿ ಡಿ ಕೆ ಶಿವಕುಮಾರ್ ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಕಂಬಳ ಸಮಿತಿ ಉಪಾಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ,ಸಂಗೀತ ನಿರ್ದೇಶಕರೂ ಕಂಬಳ ಸಮಿತಿಯ ಕಾರ್ಯಾಧ್ಯಕ್ಷರಾದ ಗುರುಕಿರಣ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. .
Posted by Vidyamaana on 2024-04-06 13:10:16 |
ಕಡಬ: ಕಡಬ ತಾಲೂಕಿನ ಕೊಂಬಾರು ಸಮೀಪದ ಚೆರು ಗ್ರಾಮಕ್ಕೆ ಗರುವಾರ ಸಾಯಂಕಾಲ ನಕ್ಸಲರ ತಂಡ ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ.
ನಕ್ಸಲರು ಚೆರು ಗ್ರಾಮದ ಮನೆಯೊಂದಕ್ಕೆ ತೆರಳಿ, ಎರಡು ಗಂಟೆಗಳ ಕಾಲ ಅಲ್ಲೇ ಕಾಲ ಕಳೆದಿದ್ದಾರೆ. ನಂತರ ಅದೇ ಮನೆಯಲ್ಲಿ ಊಟ ಮಾಡಿ ಬಳಿಕ ದಿನಸಿ ಸಾಮಗ್ರಿ ಪಡೆದಿರುವ ಮಾಡಿರುವ ಮಾಹಿತಿ ದೊರೆತಿದೆ.
Posted by Vidyamaana on 2023-09-14 15:34:50 |
ಬೆಂಗಳೂರು : ರಾಜ್ಯದ ಜನತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿರುವಂತ ಕಾಂಗ್ರೆಸ್ ಸರ್ಕಾರವು, ಈಗ ದೈವ ಭಕ್ತರ ಭಾವನೆ ಗೌರವಿಸಲು ಮುಜರಾಯಿ ಇಲಾಖೆಯಿಂದ ಮಹತ್ವದ ನಿರ್ಧಾರ ಎನ್ನುವಂತೆ, ದೇವಸ್ಥಾನಗಳ ಸುತ್ತಮುತ್ತಾ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ.ಈ ಕುರಿತಂತೆ ಕಾಂಗ್ರೆಸ್ ಪಕ್ಷದಿಂದ ಎಕ್ಸ್ ಮಾಡಲಾಗಿದ್ದು, ಧರ್ಮ ಎಂದರೆ ಮನುಷ್ಯನಿಗೆ ಅಧ್ಯಾತ್ಮಿಕ ಅನುಭೂತಿ ನೀಡುವ ಮಾರ್ಗ ಮಾತ್ರ. ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ದೇವಾಲಯಗಳಲ್ಲಿ ಸ್ವಚ್ಛತೆ, ಪ್ರಶಾಂತತೆ ಇರಬೇಕಾಗುತ್ತದೆ ಎಂದು ಹೇಳಿದೆ.
ಮುಜರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ನಮ್ಮ ಸರ್ಕಾರ ಎಂದು ತಿಳಿಸಿದೆ.
ಧರ್ಮ ಎಂದರೆ ಮನುಷ್ಯನಿಗೆ ಅಧ್ಯಾತ್ಮಿಕ ಅನುಭೂತಿ ನೀಡುವ ಮಾರ್ಗ ಮಾತ್ರ.
ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ದೇವಾಲಯಗಳಲ್ಲಿ ಸ್ವಚ್ಛತೆ, ಪ್ರಶಾಂತತೆ ಇರಬೇಕಾಗುತ್ತದೆ.
ಮುಜರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಕಟ್ಟುನಿಟ್ಟಿನ.ಮುಜುರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವಂತ ದೇವಾಲಯಗಳ ಸುತ್ತಾಮುತ್ತ ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಮಸಾಲಗಳಂತಹ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶ್ರೀಘ್ರವೇ ಬ್ರೇಕ್ ಬೀಳಲಿದೆ. ಈ ಸಂಬಂಧ ಅಧಿಕೃತ ಆದೇಶವನ್ನು ಇಲಾಖೆ ಹೊರಡಿಸಿದೆ.
ಈ ನಿಯಮ ಇಲಾಖೆ ವ್ಯಾಪ್ತಿಯಲ್ಲಿ ಇರುವಂತ 33 ಸಾವಿರ ದೇವಾಲಯಗಳಿಗೂ ಅನ್ವಯ ಆಗಲಿದೆ. ದೇವಾಲಯದ ಹೊರ ಭಾಗದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹೆಚ್ಚಾಗಿದ್ದು, ಗುಟ್ಕಾ ತಿಂದು ಕಾಂಪೌಂಡ್ ಸುತ್ತಮುತ್ತ ಉಗಿಯುತ್ತಿರೋದು, ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟ್ ಬಳಕೆಗೆ ನಿಷೇಧ ವಿದ್ಧರೂ ನಿಯಮ ಅನುಸರಿಸದ ಕಾರಣ, ಸರ್ಕಾರ ಈ ನಿಯಮ ಜಾರಿಗೆ ನಿರ್ಧಾರ ಕೈಗೊಂಡಿದೆ.
ಈಗಾಗಲೇ ಶಾಲಾ-ಕಾಲೇಜು ಆವರಣ ವ್ಯಾಪ್ತಿಯ ನೂರು ಮೀಟರ್ ಗಳಲ್ಲಿ ಯಾವುದೇ ಅಂಗಡಿಗಳಲ್ಲಿ ಬೀಡಿ, ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನ ಮಾರಾಟ ಮಾಡುವಂತಿಲ್ಲ ಎಂಬ ಆದೇಶ ಮಾಡಲಾಗಿದೆ
Posted by Vidyamaana on 2023-05-31 14:38:38 |
ಪುತ್ತೂರು: ಗಡಿಗ್ರಾಮದ ಸರಕಾರಿ ಶಾಲೆಗಳ ಅಭಿವೃದ್ದಿಗೆ ವಿಶೆಷ ಒತ್ತು ನೀಡಲಾಗುವುದು ಮತ್ತು ಗಡಿಗ್ರಾಮದ ಸರಕಾರಿ ಶಾಲೆಗಳನ್ನು ಉಳಿಸುವಲ್ಲಿ , ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಪಾಣಾಜೆ ಸರಕಾರಿ ಹಿ ಪ್ರಾ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ದಾನಿಯೊಬ್ಬರು ನೀಡಿದ ಶಾಲಾ ಬ್ಯಾಗ್ ಮತ್ತು ಸರಕಾರದಿಂದ ನೀಡಲಾಗುವ ಯುನಿಫಾರಂ ಅನ್ನು ವಿತರಿಸಿ ಮಾತನಾಡಿದರು.
ಪಾಣಾಜೆ ಶಾಲೆ ಶತಮಾನವನ್ನು ಕಂಡಿದ್ದು ಇಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಶಾಲಾ ಕಟ್ಟಡದ ಕೊರತೆ ಮತ್ತು ಶೌಚಾಲಯದ ಕೊರತೆ ಇರುವ ಬಗ್ಗೆ ಪೋಷಕರು ಶಾಸಕರ ಗಮನಕ್ಕೆ ತಂದರು. ಪೀಠೋಪಕರಣಗಳ ಕೊರತೆ ಮತ್ತು ಹಾಲ್ಗಳ ಕೊರತೆಯಿಂದ ಮಕ್ಕಳಿಗೆ ಊಟ ಮಾಡಲು ಸೂಕ್ತ ಸ್ಥಳವಕಾಶದ ಕೊರತೆಯಿರುವ ಬಗ್ಗೆಯೂ ಶಾಸಕರಲ್ಲಿ ಪೋಷಕರು ತಿಳಿಸಿದರು. ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವ ಕಾರಣಕ್ಕೆ ಪುತ್ತೂರಿನ ಹಾರಾಡಿ, ಕೆಯ್ಯೂರು ಕೆಪಿಎಸ್ ಸ್ಕೂಲ್, ಕುಂಬ್ರ ಕೆಪಿಎಸ್ ಸ್ಕೂಲ್ ಸೇರಿದಂತೆ ತಾಲೂಕಿನ ವಿವಿಧ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ ಎಂದು ಹೇಳಿದ ಶಾಸಕರು ಮಕ್ಕಳನ್ನು ಸರಕಾರಿ ಶಾಲೆಗೆ ಕಳುಹಿಸುವ ಮೂಲಕ ಶಾಲೆಯನ್ನು ಉಳಿಸಿಕೊಳ್ಳುವ ಕೆಲಸವನ್ನು ನಾವು ಮಾಡಬೇಕಿದೆ ಎಂದು ಹೇಳಿದರು.
ವಿಶೇಷ ಅನುದಾನ
ಪಾಣಾಜೆ ಶಾಲೆಯಲ್ಲಿ ಅನೇಕ ಕೊರತೆಗಳಿದ್ದು ಅವುಗಳನ್ನು ನೀಗಿಸುವ ನಿಟ್ಟಿನಲ್ಲಿ ವಿಶೇಷ ಅನುದಾನವನ್ನು ನೀಡಲು ತನು ಬದ್ದನಾಗಿದ್ದೇನೆ ಎಂದು ಶಾಸಕರು ತಿಳಿಸಿದರು. ಇಲ್ಲಿರುವ ಹಳೆಯಕಾಲದ ಕಟ್ಟಡವನ್ನು ಕೆಡವು ಹೊಸ ಕಟ್ಟಡವನ್ನು ನಿರ್ಮಾಣ ಮಾಡುವಲ್ಲಿ ಮುತುವರ್ಜಿವಹಿಸುವುದಾಗಿ ಹೇಳಿದ ಸಾಸಕರು ಹಂತಹಂತವಾಗಿ ಇಲ್ಲಿಗೆ ನಾಲ್ಕು ಕೊಠಡಿಗಳನ್ನು ಮಂಜೂರು ಮಾಡುವುದಾಗಿ ಭರವಸೆ ನೀಡಿದರು.ಶಿಕ್ಷಕರ ಕೊರತೆ ಇರುವ ಕಾರಣ ಇಲ್ಲಿಗೆ ಎರಡು ಅತಿಥಿ ಶಿಕ್ಷಕರನ್ನು ನೇಮಕಮಾಡಲಾಗಿದೆ, ಧೈಹಿಕ ಶಿಕ್ಷಕರ ನೇಮಕಾತಿಯೂ ಶೀಘ್ರದಲ್ಲಿ ನಡೆಯಲಿದೆ ಎಂದು ಹೇಳಿದರು. ಶಾಲೆಗೆ ಕಳೆದ ಹಲವು ವರ್ಷಗಳಿಂದ ಯಾವುದೇ ರೀತಿಯ ಅನುದಾನ ಬಂದಿಲ್ಲ ಎಂದು ಪೋಷಕರು ತಿಳಿಸಿದ ಕಾರಣ ಶಾಸಕರು ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಸ್ಥಳದಿಂದಲೇ ಕರೆ ಮಾಡಿ ಮಾಹಿತಿ ಪಡೆದುಕೊಂಡರು.
ಶಾಸಕರಿಗೆ ಸನ್ಮಾನ
ಶಾಲಾ ಎಸ್ಡಿಎಂಸಿ ವತಿಯಿಂದ ಶಾಸಕರಿಗೆ ಸನ್ಮಾನ ಕಾರ್ಯ ನಡೆಯಿತು. ಶಾಲು ಹೊದಿಸಿ ಹೂಗುಚ್ಚ ನೀಡಿ ಎಸ್ಡಿಎಂಸಿ ಅಧ್ಯಕ್ಷೆ ಸೀತಾಭಟ್ ಸನ್ಮಾನಿಸಿದರು. ಬಾಳೆ ಮೂಲೆ ಪಟ್ಟೆಮನೆ ಉದ್ಯಮಿ ರಾಂಪ್ರಸಾದ್ ರೈಯವರು ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್ ಕೊಡುಗೆಯಾಗಿ ನೀಡಿದರು. ವೇದಿಕೆಯಲ್ಲಿ ಗ್ರಾಪಂ ಸದಸ್ಯೆ ವಿಮಲಾ, ನಾರಾಯಣ್ ನಾಯಕ್, ಮೈಮೂನತುಲ್ ಮೆಹ್ರಾ, ಕೃಷ್ಣಪ್ಪ ಪೂಜಾರಿ, ಪೋಷಕರಾದ ಅಬ್ದುಲ್ ರಹಿಮಾನ್ , ಉದ್ಯಮಿ ಪಟ್ಟೆಮನೆ ರಾಂಪ್ರಸಾದ್ ರೈ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶೀಲಾವತಿ ಸ್ವಾಗತಿಸಿದರು. ಎಸ್ಡಿಎಂಸಿ ಉಪಾಧ್ಯಕ್ಷರಾದ ಹಾಜಿ ಅಬೂಬಕ್ಕರ್ ಆರ್ಲಪದವು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಸೀತಾರಾಂ ಭಟ್ ವಂದಿಸಿದರು. ಶಿಕ್ಷಕ ಮಾಂಕುಮೂಲ್ಯ ಕಾರ್ಯಕ್ರಮ ನಿರೂಪಿಸಿದರು.