Posted by vidyamaana on 2024-07-08 17:22:55 |
ಉಡುಪಿ: ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ಜು.09 ರಂದು ರೆಡ್ ಅಲರ್ಟ್ ಘೋಷಿಸಿದ್ದು ಅದರಂತೆ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮಂಗಳವಾರ ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜು.9ರಂದು ರಜೆ ಘೋಷಿಸಿ ಉಡುಪಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ
Posted by Vidyamaana on 2023-09-20 15:25:32 |
ಬೆಂಗಳೂರು : ಚೈತ್ರ ಅಂಡ್ ಗ್ಯಾಂಗ್ 5 ಕೊಟ್ಟಿ ವಂಚನೆ ಸಂಬಂಧ ಹಾಲಾಶ್ರೀ ಸ್ವಾಮಿಜಿ ಸಿಸಿಬಿಗೆ ಲಾಕ್ ಆಗಿದ್ದೆ ರೋಚಕ ಸ್ವಾಮಿಜಿ ಅರೆಸ್ಟ್ ಹಿಂದಿದೆ ಎಸಿಪಿ ರೀನಾ ಸುವರ್ಣ ಟೆಕ್ನಿಕಲ್ ಎಫರ್ಟ್. ಸತತ ಐದು ದಿನಗಳಿಂದ ಸ್ವಾಮಿಜಿ ಹಿಂದೆ ಬಿದ್ದಿದ್ದ ಸಿಸಿಬಿ ತಂಡ.ಆದ್ರ ಮೈಸೂರಿನಿಂದ ಮಿಸ್ ಆಗಿದ್ದ ಸ್ವಾಮಿಜಿ ವೇಚ ಬದಲಿಸಿ ಮೊಬೈಲ್ ಸ್ವಿಟ್ಚ್ ಆಫ್ ಮಾಡಿ ಎಸ್ಕೇಪ್ ಆಗಿದ್ರು.ಹೈದರಬಾದ್ ಮಾಹಿತಿ ಪಡೆದು ಹೈದರಬಾದ್ ಗೂ ತೆರಳಿತ್ತು ಸಿಸಿಬಿ ಟೀಮ್. ಆದ್ರೆ ಹೈದರಾಬಾದ್ ಮಠದಿಂದ ಸ್ವಾಮಿಜಿ ಟ್ರೈನ್ ಮೂಲಕ ಕಾಶಿ ಕಡೆ ಪ್ರಯಾಣ ಮಾಡಿದ್ರು. ಹೈದರಬಾದ್ ಮಠವೊಂದರ ಕಾರ್ ನಲ್ಲೇ ಸ್ವಾಮಿಜಿ ರತಯಲ್ವೇ ಸ್ಟೇಷನ್ ಗೆ ಡ್ರಾಪ್ ಪಡೆದುಕೊಂಡಿದ್ರು. ಮಾರ್ಗ ಮಧ್ಯ ಹೈದರಬಾದ್ ನಲ್ಲಿ ಸ್ವಾಮಿಜಿ ಹೊಸ ಮೊಬೈಲ್ ಖರೀದಿ ಮಾಡಿದ್ರ.
ಸಿಸಿಬಿ ಪೊಲಿಲೀಸ್ರ ವಿಚಾರಣೆ ವೇಳೆ ಮಠದ ಕಾರು ಚಾಲಕ ಹೊಸ ಮೊಬೈಲ್ ಬಗ್ಗೆ ಮಾಹಿತಿ ನೀಡಿದ್ದ. ನಂತರ ಶುರುವಾಗಿದ್ದೆ ಅಸಲಿ ಕಹಾನಿ. ಮೊಬೈಲ್ ಐ ಎಂ ಐ ನಂಬರ್ ನಿಂದ ಸ್ವಾಮಿಜಿ ಟ್ರಾಕ್ ಮಾಡಿದ ಎಸಿಪಿ ರೀನಾ ಸುವರ್ಣ ಅಂಡ್ ಟೀಮ್. ಸ್ವಾಮಿಜಿ ಹೊಸ ಮೊಬೈಲ್ ನಿಂದ ತಮ್ಮಮಠ ಹಾಗೂ ಹೈದರಬಾದಗ ಮಠದ ಸ್ವಾಮಿಜಿ ಸಂಪರ್ಕ ಮಾಡಿದ್ರು. ಇದಾದ ಕೆಲವೇ ಹೊತ್ತಲ್ಲಿ ಸ್ವಾಮಿಜಿಗೆ ಪೊಲೀಸ್ರು ಹೈದರಬಾದ್ ಗೆ ಬಂದಿರೋ ವಿಷಯ ಕೂಡ ತಲುಪಿತ್ತು.ಹೈದರಾಬಾದ್ ನಲ್ಲಿ ತೆಗೆದುಕೊಂಡಿದ್ದ ಮೊಬೈಲ್ ಸ್ವಿಟ್ಚ್ ಆಫ್ ಮಾಡಿ ಒಡಿಶಾದಲ್ಲಿ ಹೊಸ ಸಿಮ್ಮತ್ತು ಮೊಬೈಲ್ಖರೀದಿಮಾಡಿದ್ರು. ಆದ್ರೆ ಸ್ವಾಮಿಜಿ ರೆಗ್ಯೂಲರ್ ಆಗಿ ಫೋನ್ಮಾಡಿದ್ದ ನಂಬರ್ ಮೇಲೆ ಸಿಸಿಬಿ ಕಣ್ಣಿಟ್ಟಿತ್ತು. ಮತ್ತೆ ಅದೇ ನಂಬರ್ ಗೆ ಸ್ವಾಮಿಜಿ ಕರೆ ಮಾಡಿದಾಗ ಸಿಸಿಬಿ ಟ್ರಾಕ್ ಗೆ ಮತ್ತೆ ಸ್ವಾಮಿಜಿ ಬಂದಿದ್ರು.
ಈ ಒಟ್ಟು ತನಿಖಾ ಸಮಯದಲ್ಲಿ ಮೊಬೈಲ್ ಐಎಂಇಐ ಸಿಡಿ ಆರ್ ಹಾಗೂ ಲೊಕೇಶ್ ಟ್ರೇಸ್ ಸೇರಿದಂತೆ ಎಲ್ಲಾ ಟೆಕ್ನಿಕಲ್ ಡಾಟವನ್ನ ಇದೇ ಎಸಿಪಿ ರೀನಾ ಸುವರ್ಣ ನಿರ್ವಹಿಸಿದ್ರು. ಸಿಸಿಬಿ ಕಚೇರಿಯಲ್ಲೇ ಕುಳಿತು ಈ ಎಲ್ಲಾ ಟೆಕ್ನಿಕಲ್ ಎವಿಡೆನ್ಸ್ ನ ಎಸಿಪಿ ರೀನಾ ಸುವರ್ಣ ಕಲೆಕ್ಟ್ ಮಾಡಿ ಸಿಸಿಬಿ ಸಿಬ್ಬಂದಿಗೆ ಕೊಟ್ಟಿದ್ರು . ಇದೇ ಕಾರಣಕ್ಕೆ ಸ್ವಾಮಿಜಿಯನ್ನ ಸಿಸಿಬಿ ಪೊಲೀಸ್ರು ಈಸಿಯಾಗಿ ಕ್ಯಾಚ್ ಮಾಡಲು ಸಹಕಾರಿಯಾಗಿದೆ.
Posted by Vidyamaana on 2024-06-28 19:50:37 |
ಉಪ್ಪಿನಂಗಡಿ;ಇಲ್ಲಿಗೆ ಸಮೀಪದ ಕರುವೇಲು ಜುಮಾ ಮಸೀದಿಯಲ್ಲಿ ಮರ್ಹೂಂ ಕೆಂಪಿ ಮುಸ್ತಫಾ ಹಾಜಿಯವರ ವಾರ್ಷಿಕ ಸಂಸ್ಮರಣಾ ಕಾರ್ಯಕ್ರಮವು ಇಂದು ಜುಮಾ ನಮಾಜಿನ ನಂತರ ನಡೆಯಿತು.
ಕುರ್ಅನ್ ಪಾರಾಯಣ ,ತಹ್ಲೀಲ್ ಸಮರ್ಪಣೆಯ ನಂತರ ಸ್ಥಳೀಯ ಖತೀಬ್ ಸಯ್ಯಿದ್ ಅನಸ್ ತಂಙಳ್ ದುಹಾಶಿರ್ವಚನ ಮಾಡಿ ಮುಸ್ತಪಾ ಹಾಜಿಯವರ ಗುಣಗಾನ ಮಾಡುತ್ತಾ ಸಮುದಾಯಕ್ಕಾಗಿ ತನ್ನ ಜೀವನ ಮುಡಿಪಾಗಿಟ್ಟಿದ್ದ ಹಾಜಿಯವರಲ್ಲಿ ಸಾಮಾಜಿಕ ಚಿಂತನೆ ಮೇಳೈಸಿತ್ತು.ಅವರು ನಿತ್ಯ ಸ್ಮರಣೀಯರು.ಕರವೇಲು ಮಸೀದಿಯ ಗೌರವದ್ಯಕ್ಷರಾಗಿ ನಮ್ಮ ಜಮಾತ್ ಗೆ ಅವರು ನೀಡಿದ ಕೊಡುಗೆ ಅಪಾರ ಎಂದರು.
ಮುಖ್ಯ ಭಾಷಣಗಾರರಾಗಿ ಆಗಮಿಸಿದ ಜನಾಬ್ ಎಸ್ ಬಿ ಮುಹಮ್ಮದ್ ದಾರಿಮಿ ಉಪ್ಪಿನಂಗಡಿ ಮಾತನಾಡಿ ಅವರ ಜೊತೆಗಿನ ದೀರ್ಘ ಒಡನಾಟದ ಅನುಭವವನ್ನು ಮೆಲುಕು ಹಾಕಿದರು.
Posted by Vidyamaana on 2024-05-04 08:27:14 |
ಬಳ್ಳಾರಿ, ಮೇ.03: ಬಳ್ಳಾರಿಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡ ಪರಿಣಾಮ ಅಲ್ಲಿದ್ದವರ ಪೈಕಿ 6 ಮಂದಿ ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಏರ್ ಕಂಡಿಷನರ್ ಸ್ಫೋಟಗೊಂಡ ಪರಿಣಾಮ 6 ಮಂದಿ ಗಂಭೀರವಾಗಿ ಗಾಯಗೊಂಡು ಘಟನೆ ಗುರುವಾರ ಸಂಜೆ ನಡೆದಿದ್ದು, ಬಳ್ಳಾರಿ ನಗರದ ರಥಬೀದಿಯ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಈ ದುರಂತ ಸಂಭವಿಸಿದೆ.
Posted by Vidyamaana on 2023-05-13 03:52:29 |
ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಸುರತ್ಕಲ್ ನಲ್ಲಿ ನಡೆಯುತ್ತಿರುವ ಮತ ಎಣಿಕೆಯಲ್ಲಿ ಪ್ರಾರಂಭದಿಂದಲೂ ಅಶೋಕ್ ಕುಮಾರ್ ರೈ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಸುಮಾರು ಸಾವಿರಕ್ಕೂ ಅಧಿಕ ಮತಗಳಿಂದ ಅಶೋಕ್ ಕುಮಾರ್ ರೈ ಮೇಲುಗೈ ಸಾಧಿಸುತ್ತಿದ್ದಾರೆ. ಅಶೋಕ್ ಕುಮಾರ್ ರೈ 3996 ಮತ ಪಡೆದುಕೊಂಡಿದ್ದು, ಅರುಣ್ ಕುಮಾರ್ ಪುತ್ತಿಲ 2962 ಮತ, ಆಶಾ ತಿಮ್ಮಪ್ಪ 2393 ಮತ ಬಾಚಿಕೊಂಡಿದ್ದಾರೆ
Posted by Vidyamaana on 2023-12-12 20:25:26 |
ಪುತ್ತೂರು : ಆತ್ರೇಯ ಮಲ್ಟಿಸ್ಟೆಷಾಲಿಟಿ ಕ್ಲಿನಿಕ್ ಹಾಗೂ ನಂದಿಕೇಶ್ವರ ಭಜನಾ ಮಂದಿರ ವತಿಯಿಂದ ಉಚಿತ ಆರೋಗ್ಯ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಡಿ. 10ರಂದು ಶ್ರೀ ನಂದಿಕೇಶ್ವರ ಭಜನಾ ಮಂದಿರದಲ್ಲಿ ನಡೆಯಿತು.ಬ್ರಹ್ಮಶ್ರೀ ಕೇಮ್ಮಿಂಜೆ ಲಕ್ಷೀಶ ತಂತ್ರಿಗಳು ದೀಪ ಬೆಳಗಿಸಿ ಕಾರ್ಯಕ್ರಮದ ಉದ್ಘಾಟನೆ ಮಾಡಿದರು ಅರುಣ್ ಜೈನ ಅವರು ಸಭಾಧ್ಯಕ್ಷತೆ ವಹಿಸಿದರು ವೇದಿಕೆಯಲ್ಲಿ ಬ್ರಹ್ಮಶ್ರೀ ಉದಯ ತಂತ್ರಿಗಳು ಉಪಸ್ಥಿತರಿದ್ದರು ಹಾಗೂ ಶಿಬಿರದ ಸದುಪಯೋಗವನ್ನು ಭಜನಾ ಮಂದಿರದ ಭಕ್ತರು ಹಾಗೂ ಸಾರ್ವಜನಿಕರು ಪಡೆದುಕೊಳ್ಳಬೇಕು ಹಾಗೂ ಆರೋಗ್ಯದ ವಿಚಾರದಲ್ಲಿ ಯಾರೂ ಕಡೆಗಣಿಸದೆ ಇಂತಹ ಶಿಬಿರದ ಮುಖಾಂತರ ಈಸಿಜಿ, ರಕ್ತದ ಒತ್ತಡ, ಮಧುಮೇಹ ತಪಾಸಣೆ ಮಾಡಬೇಕು ಎಂದು ಹಿತ ನುಡಿಗಳನ್ನಡಿದರು. ವೇದಿಕೆಯಲ್ಲಿ ಶ್ರೀ ಸುಧೀಂದ್ರ ತಂತ್ರಿ, ಕೆಮ್ಮಿಂಜೆ ಮತ್ತು ಶ್ರೀ ಚಂದ್ರ ಕೂಡಮಾರಾ ಉಪಸ್ಥಿತರಿದ್ದರು.ಇದೇ ವೇಳೆ ಬೇಸಿಕ್ ಹೆಲ್ತ್ ಚೆಕಪ್ ಪ್ಯಾಕೇಜನ್ನು ಅನಾವರಣ ಗೊಳಿಸಲಾಯಿತು. ಕೇವಲ ರೂ 1200ಕ್ಕೆ ಕಿಡ್ನಿ ಲಿವರ್ ಹಾರ್ಟ್ ಮಧುಮೇಹ ಕೆ ಸಂಬಂಧಿಸಿದ ವಿವಿಧ ರಕ್ತ ಮತ್ತು ಮೂತ್ರ ಪರೀಕ್ಷೆ ಹಾಗೂ ಈ ಸೀ ಜಿ ಒಳಪ್ಪಟ್ಟಿರುತ್ತದೆ. 70ಕೂ ಅಧಿಕ ಜನ ಸದುಪಯೋಗ ಪಡಿಸಿಕೊಂಡರು ಎಂದು ಡಾ ಸುಜಯ್ ತಂತ್ರಿ ಕೆಮ್ಮಿಂಜೆ ತಿಳಿಸಿದ್ದಾರೆ
Posted by Vidyamaana on 2023-05-24 07:18:31 |
ಕೊಪ್ಪಳ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ವಿದ್ಯುತ್ ಬಿಲ್ ವಿಚಾರದಲ್ಲಿ ಲೈನ್ಮ್ಯಾನ್ ಮತ್ತು ಜನಸಾಮಾನ್ಯರ ನಡುವೆ ಜಟಾಪಟಿಗಳು ನಡೆಯುತ್ತಿದೆ. ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ಎಂದು ಕಾಂಗ್ರೆಸ್ ಹೇಳಿತ್ತು.ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಕೆಲ ಜನರು ವಿದ್ಯುತ್ ಬಿಲ್ ಕಟ್ಟುವುದಿಲ್ಲ ಎಂದು ಲೈನ್ಮ್ಯಾನ್ಗಳ ಜತೆ ಜಗಳಕ್ಕೆ ಇಳಿದಿದ್ದಾರೆ.
ಇಷ್ಟು ದಿನ ಬರೀ ಮಾತಿನಲ್ಲಿ ನಡೆಯುತ್ತಿದ್ದ ಜಗಳ ಇಂದು ಹಲ್ಲೆ ಮಾಡುವ ಮಟ್ಟಿಗೆ ಬೆಳೆದಿರುವುದು ನಿಜಕ್ಕೂ ಆತಂಕಕಾರಿ ಸಂಗತಿಯಾಗಿದೆ. ಕೊಪ್ಪಳದ ಕುಕನಪಲ್ಲಿ ಗ್ರಾಮದಲ್ಲಿ ವಿದ್ಯುತ್ ಬಿಲ್ ವಸೂಲಿಗೆ ಬಂದ ಲೈನ್ಮ್ಯಾನ್ ಮೇಲೆ ವ್ಯಕ್ತಿಯೊಬ್ಬ ಅವಾಚ್ಯ ಶಬ್ದದಿಂದ ನಿಂದಿಸಿದ್ದಲ್ಲದೆ, ಚಪ್ಪಲಿಯಿಂದ ಹೊಡೆದು ಹಲ್ಲೆ ಮಾಡಿದ್ದಾನೆ.ವಿದ್ಯುತ್ ಉಚಿತ ಅಂತ ಹೇಳಿದ್ದಾರೆ
ಕಳೆದ ಆರು ತಿಂಗಳಿನಿಂದ ಚಂದ್ರಶೇಖರಯ್ಯ ಎಂಬುವವರು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬಿಲ್ ಪಾವತಿ ಮಾಡದ ಹಿನ್ನೆಲೆಯಲ್ಲಿ ಬಿಲ್ ವಸೂಲಾತಿಗೆಂದು ಅವರ ಮನೆಗೆ ಲೈನ್ಮ್ಯಾನ್ ಮಂಜುನಾಥ್ ಎಂಬುವರು ತೆರಳಿದ್ದರು. ಬಿಲ್ ಪಾವತಿಸುವಂತೆ ಚಂದ್ರಶೇಖರಯ್ಯ ಅವರನ್ನು ಕೇಳಿದರೆ, ಆತ ನಾನು ಯಾವುದೇ ಕಾರಣಕ್ಕೂ ವಿದ್ಯುತ್ ಬಿಲ್ ಕಟ್ಟುವುದಿಲ್ಲ. ವಿದ್ಯುತ್ ಉಚಿತ ಅಂತ ಹೇಳಿದ್ದಾರೆ ಎಂದು ವಾಗ್ವಾದಕ್ಕೆ ಇಳಿದನು.
ಚಪ್ಪಲಿಯಿಂದ ಹಲ್ಲೆ ಸರ್ಕಾರ ಇನ್ನು ಅಧಿಕೃತವಾಗಿ ಜಾರಿ ಮಾಡಿಲ್ಲ. ಜಾರಿ ಮಾಡಿದ ಬಳಿಕ ನೋಡೋಣ, ಸದ್ಯಕ್ಕೆ ಹಳೆಯ ಬಿಲ್ ಅನ್ನು ಪಾವತಿಸಿ ಎಂದು ಮಂಜುನಾಥ್ ಕೇಳಿದ್ದಾರೆ. ಆದರೆ, ಬಿಲ್ ಕಟ್ಟಲು ಒಪ್ಪದ ಚಂದ್ರಶೇಖರಯ್ಯ,ಅವಾಚ್ಯ ಶಬ್ದಗಳಿಂದ ಮಂಜುನಾಥ್ರನ್ನು ನಿಂದಿಸಿದ್ದಾರೆ. ಬಳಿಕ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಮಂಜುನಾಥ್ ಮೇಲೆ ಚಂದ್ರಶೇಖರಯ್ಯ ಚಪ್ಪಲಿಯಿಂದ ಹಲ್ಲೆ ಮಾಡಿ, ದುರ್ವರ್ತನೆ ತೋರಿದ್ದಾರೆ.ಹಲ್ಲೆ ನಡೆಸಿದ ಚಂದ್ರಶೇಖರಯ್ಯ ವಿರುದ್ಧ ಮಂಜುನಾಥ್ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ