ಪುತ್ತೂರು: ನೇಣು ಬಿಗಿದು ಅನ್ಸರ್ ಆತ್ಮಹತ್ಯೆ

ಸುದ್ದಿಗಳು News

Posted by vidyamaana on 2024-07-05 12:22:17 |

Share: | | | | |


ಪುತ್ತೂರು: ನೇಣು ಬಿಗಿದು  ಅನ್ಸರ್  ಆತ್ಮಹತ್ಯೆ

ಪುತ್ತೂರು : ವಿವಾಹಿತ ಯುವಕನೊಬ್ಬ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಗುರುವಾರ ನಡೆದಿದೆ.

ಮೂಲತಃ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿಯಾಗಿದ್ದು, ಪ್ರಸ್ತುತ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯವಿದ್ದ ಸಿದ್ದೀಕ್ ಅನ್ಸರ್(32) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಕೊಪ್ಪಳದಲ್ಲಿರುವ ತನ್ನ ಮಾವನ ಅಡಕೆ ತೋಟದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಡಕೆ ಗಾರ್ಬಲ್‌ನಲ್ಲಿ ದುಡಿಯುತ್ತಿದ್ದ ಸಿದ್ದೀಕ್ ಅನ್ಸರ್ ಸರ್ವೆ ಗ್ರಾಮದ ಕಲ್ಪನೆಯಲ್ಲಿ 10 ಸೆಂಟ್ಸ್ ಜಾಗ ಖರೀದಿಸಿ ಮನೆ ನಿರ್ಮಿಸಲು ಅಡಿಪಾಯ ಹಾಕಿದ್ದರು. ಆರ್ಯಾಪು ಗ್ರಾಮದ ಕೊಪ್ಪಳದಲ್ಲಿ ಬಾಡಿಗೆ ಮನೆ ಮಾಡಿ ಅಲ್ಲಿ ತಂದೆ, ತಾಯಿ ಹಾಗೂ ಪತ್ನಿ ಮಕ್ಕಳ ಜತೆ ವಾಸ್ತವ್ಯವಿದ್ದರು. ಕಳೆದ ಒಂದೂವರೆ ತಿಂಗಳಿನಿಂದ ವಿಪರೀತ ಹೊಟ್ಟೆನೋವು ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪುತ್ತೂರಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗದ ಅವರು ಗಾರ್ಬಲ್ ಕೆಲಸಕ್ಕೆ ಹೋಗದೆ ಮನೆಯಲ್ಲೇ ಉಳಿದುಕೊಂಡಿದ್ದರು. ಮನೆ ನಿರ್ಮಿಸುವ ಉದ್ದೇಶದಿಂದ ಸಾಲ ಪಡೆದಿದ್ದ ಅವರು ಸಾಲ ತೀರಿಸಲಾಗದೆ ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ಮಂಗಳೂರು ಕೆಡಿಪಿ ಸಭೆ

Posted by Vidyamaana on 2023-08-02 06:36:27 |

Share: | | | | |


ಮಂಗಳೂರು ಕೆಡಿಪಿ ಸಭೆ

ಪುತ್ತೂರು: ಅಡಿಕೆ,ತೆಂಗು,ಮರ ಮತ್ತು ಇನ್ನಿತರ ಕಾರಣಗಳಿಂದ ಮೂಲೆ ಮುರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ,ಮನೆಯಲ್ಲಿ ಮಲಗಿದ್ದಲ್ಲೇ ಇರುವವರಿಗೆ ಸರಕಾರ ಮಾಸಾಶನ ನೀಡಬೇಕು, ಅವರು ಅತ್ತ ಸಾವೂ ಇಲ್ಲ ಇತ್ತ ಬದುಕೂ ಇಲ್ಲ  ಎಂಬಂತೆ ಅವರ ಜೀವನ ಇದೆ ಅವರಿಗೆ ನೆರವಾಗಲು ಮಾಸಾಶನ ಕೊಡಬೇಕಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಸೀಎಂ ಸಿದ್ದರಾಮಯ್ಯ ಬಳಿ ಮನವಿ ಮಾಡಿಕೊಂಡರು.

ಮಂಗಳೂರಿನ ಜಿಪಂ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು ಮಾನವೀಯತೆ ನೆಲೆಯಲ್ಲಿ ಅವರಿಗೆ ಬದುಕಲು ಸಹಾಯ ಮಾಡಬೇಕು, ಇಂಥವರು ಬಹುತೇಕ ಬಡವರೇ ಆಗಿದ್ದಾರೆ, ಅವರಿಗೆ ಸಹಾಯ ಮಾಡಿದರೆ ನಮಗೆ ,ನಮ್ಮ ಸರಕಾರಕ್ಕೆ ಪುಣ್ಯ ಬರುತ್ತದೆ ಎಂದು ಸೀಎಂ ಬಳಿ ಕೇಳಿಕೊಂಡರು. ಶಾಸಕರು ಈ ವಿಚಾರವನ್ನು ಹೇಳುವಾಗ ಸಿದ್ದರಾಮಯ್ಯ ಅವರೂ ಒಂದು ಕ್ಷಣ ಮೌನವಾದರು, ಶಾಸಕರು ಹೇಳಿದ ವಿಚಾರ ಸೀಎಂ ಮನಸ್ಸಿನಲ್ಲಿ ಬೇಸರವಾದಂತೆ ಕಂಡು ಬಂತು, ತಕ್ಷಣವೇ ಈ ವಿಚಾರದ ಬಗ್ಗೆ ಪರಿಶೀಲನೆ ಮಾಡುವುದಾಗಿ ಭರವಸೆ ನೀಡಿದರು. ಇದೇ ವಿಚಾರವನ್ನಹ ವಿಧಾನಸಭಾ ಅಧಿವೇಶನದಲ್ಲಿ ಶಾಸಕರು ಸೀಎಂ ಗಮನಕ್ಕೆ ತಂದಿದ್ದರು.

ಲಕ್ಷ್ಮೀ ದೇವಿ ಬೆಟ್ಟಕ್ಕೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ

Posted by Vidyamaana on 2023-04-21 16:46:13 |

Share: | | | | |


ಲಕ್ಷ್ಮೀ ದೇವಿ ಬೆಟ್ಟಕ್ಕೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ

ಪುತ್ತೂರು : ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಇರುವ ಶ್ರೀ ಲಕ್ಷ್ಮೀ ದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕ್ಕೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಶುಕ್ರವಾರ ಭೇಟಿ ನೀಡಿದರು.


ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಭೇಟಿ ನೀಡಿದ ಆಶಾ ತಿಮ್ಮಪ್ಪ ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಹಾಲಿ ಶಾಸಕ ಸಂಜೀವ ಮಠಂದೂರು ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು

ಬಂಟ್ವಾಳ :ಮಂಚಿಯಲ್ಲಿ ಆ್ಯಕ್ಟೀವಾಗೆ ಹಿಟ್ ಆ್ಯಂಡ್ ರನ್ ಪುತ್ತೂರಿನ ನೆಹರುನಗರ ನಿವಾಸಿ ಚಿದಾನಂದ ಕಾಮತ್ ಸ್ಥಳದಲ್ಲೇ ಮೃತ್ಯು

Posted by Vidyamaana on 2024-05-20 15:33:02 |

Share: | | | | |


ಬಂಟ್ವಾಳ :ಮಂಚಿಯಲ್ಲಿ ಆ್ಯಕ್ಟೀವಾಗೆ ಹಿಟ್ ಆ್ಯಂಡ್ ರನ್  ಪುತ್ತೂರಿನ ನೆಹರುನಗರ ನಿವಾಸಿ ಚಿದಾನಂದ ಕಾಮತ್ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ‌ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಘಟನೆಯಲ್ಲಿ ಆ್ಯಕ್ಟೀವಾ ಸವಾರ, ಪುತ್ತೂರಿನ ನೆಹರುನಗರ ರಕ್ತೇಶ್ವರಿ ಗುಡಿಯ ಹಿಂಬದಿ ನಿವಾಸಿ, ನಿವೃತ್ತ ಸೈನಿಕ ಚಿದಾನಂದ್ ಕಾಮತ್ (55) ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಹೇಳಲಾಗಿದೆ.

ಬೆಳ್ಳಾರೆಯ ಬಾಡಿಗೆ ಮನೆ ಮೇಲೆ ಬೆಳ್ಳಂಬೆಳಗ್ಗೆ NIA ದಾಳಿ

Posted by Vidyamaana on 2024-03-05 16:13:39 |

Share: | | | | |


ಬೆಳ್ಳಾರೆಯ ಬಾಡಿಗೆ ಮನೆ ಮೇಲೆ ಬೆಳ್ಳಂಬೆಳಗ್ಗೆ NIA ದಾಳಿ

ಬೆಳ್ಳಾರೆ : ಎನ್.ಐ.ಎ ಅಧಿಕಾರಿಗಳ ತಂಡ ಪ್ರಕರಣವೊಂದರ ಸಂಬಂಧ ಮಾ‌.5 ರಂದು ಬೆಳ್ಳಾರೆಯ ಬಾಡಿಗೆ ಮನೆಗೆ ಬೆಳಗ್ಗೆ ದಾಳಿ ಮಾಡಿ ಮನೆಯನ್ನು ಶೋಧ ನಡೆಸಿ ನಂತರ ಬೀಜು ಎಂಬಾತನಿಗೆ ಸಮನ್ಸ್ ನೀಡಿ ಮೊಬೈಲ್ ಫೋನ್ ವಶಕ್ಕೆ ಪಡೆದು ಮಹಜರು ನಡೆಸಿ ಹೋಗಿರುವ ಅಧಿಕಾರಿಗಳು. 

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನಿಂತಿಕಲ್ಲು ಬಳಿಯ ಕಲ್ಮಡ್ಕ ನಿವಾಸಿ ಚಿದಾನಂದ ಎಂಬವರ ಬಾಡಿಗೆ ಮನೆ ಮೇಲೆ ಬೆಂಗಳೂರು ಬ್ರಾಂಚ್ ನ ಎನ್.ಐ.ಎ ಅಧಿಕಾರಿಗಳಾದ ಡಿವೈಎಸ್ಪಿ ರಾಜನ್ ಪಿ.ವಿ , ಸಬ್ ಇನ್ಸ್ಪೆಕ್ಟರ್ ಮಂಜಪ್ಪ , ಕಾನ್ಟೇಬಲ್ ಸುರೇಶ್.ಸಿ ನೇತೃತ್ವದ ಮೂರು ಜನರ ತಂಡ ಬೆಳ್ಳಾರೆ ಪೊಲೀಸರ ಸಹಕಾರದಲ್ಲಿ ಮಾ.5 ರಂದು ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿ ಮನೆಯನ್ನು ಪರಿಶೀಲನೆ ನಡೆಸಿದ್ದಾರೆ‌.


*ಪ್ರಕರಣದ ವಿವರ:* 25-10-2023 ರಂದು RC-28/2023/NIA/DLI ಯಲ್ಲಿ 120B,121,121A&122 ಜೊತೆಗೆ 3,25 ಆರ್ಮ್ಸ್ 13 ,18 ಮತ್ತು UA(P) ಅಡಿಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿದಂತೆ ಬೆಳ್ಳಾರೆಯ ಚಿದಾನಂದ ಎಂಬವರ ಬಾಡಿಗೆ ಮನೆಗೆ ಎರಡು ದಿನದ ಹಿಂದೆ ಬಂದ ಕೇರಳ ರಾಜ್ಯದ ಇಡುಕ್ಕಿಯ ಬಿಜು ಅಬ್ರಾಹಂ @ ಬಿಜು ಎಮ್.ಎ (45) ಎಂಬಾತನ ವಾಸವಾಗಿದ್ದ ಮನೆಗೆ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ ನಂತರ ಬಿಜುಗೆ  ಸಮನ್ಸ್ ನೀಡಿದ್ದಾರೆ‌.


*ಮೊಬೈಲ್ ವಶಕ್ಕೆ:* ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ ಬಳಿಕ ಬಿಜು ಬಳಸುತ್ತಿದ್ದ ಮೊಬೈಲ್ ಫೋನ್‌ ಮತ್ತು ಅದರಲ್ಲಿದ್ದ ಜಿಯೋ ಕಂಪನಿಯ ಸಿಮ್ ಕಾರ್ಡ್ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಬೆಳ್ಳಾರೆ ಪೊಲೀಸರ ಸಹಕಾರದಲ್ಲಿ ಮಹಜರು ನಡೆಸಿ ಹೋಗಿದ್ದಾರೆ.

ವೈದ್ಯರೂ ಪತ್ತೆಹಚ್ಚಲಾಗದ ಸ್ಲೋ ಪಾಯ್ಸನ್​ ಕೊಟ್ಟು ಪತಿ ಅತ್ತೆ ಮಾವ ಸೇರಿ ಐವರನ್ನು ಕೊಂದಿದ್ದಳು ಸೊಸೆ: ಆ ವಿಷ ಯಾವುದು?

Posted by Vidyamaana on 2023-10-22 08:15:37 |

Share: | | | | |


ವೈದ್ಯರೂ ಪತ್ತೆಹಚ್ಚಲಾಗದ ಸ್ಲೋ ಪಾಯ್ಸನ್​ ಕೊಟ್ಟು ಪತಿ ಅತ್ತೆ ಮಾವ ಸೇರಿ ಐವರನ್ನು ಕೊಂದಿದ್ದಳು ಸೊಸೆ: ಆ ವಿಷ ಯಾವುದು?

ನಾಗಪುರ: ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಒಂದೇ ಕುಟುಂಬದ ಐವರು ತಿಂಗಳೊಳಗೆ ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಅ.18 ರಂದು ಸೊಸೆ ಮತ್ತು ಸಂಬಂಧಿ ಮಹಿಳೆಯ ಬಂಧನವಾಗಿತ್ತು. ಇವರಿಬ್ಬರು ಕಳೆದ ಒಂದು ತಿಂಗಳಿಂದ ಎಲ್ಲರಿಗೂ ಆಹಾರದಲ್ಲಿ ಸ್ಲೋ ಪಾಯ್ಸನ್ ನೀಡುತ್ತಿದ್ದುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.ಗೂಗಲ್​ನಲ್ಲಿ ಅತಿ ಭಯಂಕರ ವಿಷದ ಬಗ್ಗೆ ಸರ್ಚ್​ ಮಾಡಿ, ತೆಲಂಗಾಣದಿಂದ ತರಿಸಿಕೊಂಡು ಚಾಲಾಕಿತನ ಮೆರೆದ ಸೊಸೆ ಈಗ ಜೈಲುಪಾಲಾಗಿದ್ದಾಳೆ.

ಇದರ ಪೂರ್ಣ ವಿವರ ಇಲ್ಲಿದೆ….

ಸಂಘಮಿತ್ರ ಕುಂಬಾರೆ (22), ರೋಜಾ ರಾಮಟೆಕೆ (36) ಆರೋಪಿಗಳು. ಮೃತರನ್ನು ಸಂಘಮಿತ್ರ ಪತಿ ರೋಷನ್ ಕುಂಬಾರೆ, ಶಂಕರ ಕುಂಬಾರೆ (ಮಾವ), ವಿಜಯ (ಅತ್ತೆ), ಕೋಮಲ್ (ಅತ್ತಿಗೆ) ಮತ್ತು ವರ್ಷಾ ಉರಾಡೆ (ಅತ್ತೆಯ ಸಹೋದರಿ) ಸೆ.26ರಿಂದ ಅ.15ರ ನಡುವೆ ಮೃತಪಟ್ಟಿದ್ದರು.

ಕೊಲ್ಲಲು ಕಾರಣ:

ಅಕೋಲಾದ ಸಂಘಮಿತ್ರ ಮನೆಯವರ ವಿರೋಧದ ನಡುವೆ ಡಿಸೆಂಬರ್​ 2022 ರಲ್ಲಿ ರೋಷನ್ ನನ್ನು ಪ್ರೀತಿಸಿ ಮದುವೆಯಾಗಿದ್ದಳು. ಆದರೆ ಮದುವೆಯ ನಂತರ ರೋಷನ್ ಥಳಿಸಲು ಆರಂಭಿಸಿದ್ದ. ಆತನ ಕುಟುಂಬಸ್ಥರೂ ಕೆಟ್ಟದಾಗಿ ನಡೆಸಿಕೊಂಡರು. ಆಕೆ ತಂದೆಗೆ ವಿಷಯ ತಿಳಿದಾಗ ಆತ ಏಪ್ರಿಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ತನ್ನ ತವರಿಗೆ ಹೋಗಬೇಕೆಂದು ಒತ್ತಾಯಿಸಿದರೂ ಪತಿ ಮತ್ತು ಅತ್ತೆ ಇದಕ್ಕೆ ಅನುಮತಿಸಲಿಲ್ಲ. ಇದರಿಂದ ಆಕೆ ಚಿಂತತೆಗೀಡಾದಳು.

ಈ ವಿಷ ವೈದ್ಯಕೀಯ ಪರೀಕ್ಷೆಯಲ್ಲೂ ಪತ್ತೆಯಾಗದು!:

ಆಸ್ತಿ ವಿಚಾರವಾಗಿ ಸಂಬಂಧಿ ರೋಜಾ ಹಾಗೂ ಸಂಗಮಿತ್ರಾ ಅತ್ತೆ ವಿಜಯಾ ನಡುವೆ ಜಗಳ ನಡೆಯುತ್ತಿತ್ತು. ಇದನ್ನು ಅರಿತಿದ್ದ ಸಂಘಮಿತ್ರಾ ರೋಜಾಗೆ ತನ್ನ ಅತ್ತೆಯನ್ನು ಕೊಲ್ಲಲು ಬಯಸಿರುವುದಾಗಿ ಹೇಳಿದಾಗ ಆಕೆ ಕೈಜೋಡಿಸುತ್ತಾಳೆ. ಇಬ್ಬರೂ ಸೇರಿ ಗೂಗಲ್ ನಲ್ಲಿ ಜನರನ್ನು ಕೊಲ್ಲಲು ಇರುವ ಮಾರ್ಗಗಳನ್ನು ಹುಡುಕುತ್ತಾರೆ. ಆಗ ಥಾಲಿಯಮ್ ವಿಷದ ಬಗ್ಗೆ ತಿಳಿದುಕೊಳ್ಳುತ್ತಾರೆ. ಇದರ ಸೇವನೆಯಿಂದ ವ್ಯಕ್ತಿಯು ಕ್ರಮೇಣ ಅನಾರೋಗ್ಯಕ್ಕೆ ಒಳಗಾಗಿ ಸಾಯುತ್ತಾನೆ. ವೈದ್ಯಕೀಯ ಪರೀಕ್ಷೆಯಲ್ಲಿ ಮಾನವ ದೇಹದಲ್ಲಿ ಥಾಲಿಯಮ್ ಅನ್ನು ಕಂಡುಹಿಡಿಯುವುದು ಕಷ್ಟ. ಹೀಗಾಗಿ ಸಿಕ್ಕಿಬೀಳುವುದಿಲ್ಲ ಎಂಬುದನ್ನು ಮನಗಾಣುತ್ತಾರೆ. ಬಳಿಕ ತೆಲಂಗಾಣದಿಂದ ವಿಷ ಖರೀದಿಸಿ ಸೆ.20 ರಂದು ಮೊದಲು ರೋಷನ್ ತಂದೆ ಶಂಕರ್ ಮತ್ತು ಆತನ ತಾಯಿ ವಿಜಯಾಗೆ ಆಹಾರದಲ್ಲಿ ಬೆರೆಸಿ ನೀಡುತ್ತಾರೆ. ಅವರ ಆರೋಗ್ಯ ಹದಗೆಟ್ಟು ಸೆ.26ಮತ್ತು 27 ರಂದು ಮೃತಪಡುತ್ತಾರೆ. ನಂತರ ಅ.8 ರಂದು ಕೋಮಲ್, ಅ.14 ರಂದು ವರ್ಷ ಮತ್ತು ಅ.15 ರಂದು ರೋಷನ್ ಕೂಡ ಸಾವನ್ನಪ್ಪುತ್ತಾರೆ.


ತುಟಿ ಕಪ್ಪಾಗಿದ್ದರೂ ವಿಷ ಪತ್ತೆಯಾಗಿರಲಿಲ್ಲ:

ಸತ್ತವರೆಲ್ಲರೂ ಒಂದೇ ರೀತಿಯ ರೋಗಲಕ್ಷಣಗಳನ್ನು ಹೊಂದಿದ್ದರು. ಪ್ರತಿಯೊಬ್ಬರಿಗೂ ದೇಹದಲ್ಲಿ ಜುಮ್ಮೆನಿಸುವಿಕೆ, ಕೆಳ ಬೆನ್ನು ಮತ್ತು ತಲೆಯಲ್ಲಿ ತೀವ್ರವಾದ ನೋವು ಇತ್ತು. ತುಟಿಗಳು ಕಪ್ಪು ಬಣ್ಣಕ್ಕೆ ತಿರುಗಿದ್ದವು. ಆದರೆ ವಿಷ ಪತ್ತೆಯಾಗಿರಲಿಲ್ಲ ಎಂದು ವೈದ್ಯರು ತಿಳಿಸಿದ್ದರು. ಇದರ ನಂತರ, ಪೊಲೀಸರಿಗೆ ಆರೋಗ್ಯದಿಂದ ಇದ್ದ ಸಂಘಮಿತ್ರಾ ಬಗ್ಗೆ ಅನುಮಾನ ಬಂದಿತ್ತು. ಆಕೆಯನ್ನು ಹೆಚ್ಚಿನ ವಿಚಾರಣೆ ನಡೆಸಿದಾಗ ಸಂಪೂರ್ಣ ಸತ್ಯ ಹೊರಬಂದಿದೆ. ರೋಜಾ ಪಾತ್ರವನ್ನೂ ಸಂಘಮಿತ್ರ ಬಹಿರಂಗಪಡಿಸಿದ್ದಾಳೆ. ಘಟನೆಯಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ ಸೊಸೆ ನೀಡಿದ ಸ್ಲೋಪಾಯ್ಸನ್​ಗೆ ಒಂದಿಡೀ ಕುಟುಂಬ ಅವಸಾನ ಕಂಡಿದೆ. ಆಕೆ ಜೈಲು ಸೇರಿದ್ದಾಳೆ.

ಮಹಿಳೆಯರೇ ಗಮನಿಸಿ: ಗೃಹಲಕ್ಷ್ಮಿ ಯೋಜನೆಯ ಮತ್ತೊಂದು ಅಪ್ಡೇಟ್ : ಮಿಸ್‌ ಮಾಡ್ದೇ ಓದಿ!

Posted by Vidyamaana on 2024-03-08 12:49:54 |

Share: | | | | |


ಮಹಿಳೆಯರೇ ಗಮನಿಸಿ: ಗೃಹಲಕ್ಷ್ಮಿ ಯೋಜನೆಯ ಮತ್ತೊಂದು ಅಪ್ಡೇಟ್ : ಮಿಸ್‌ ಮಾಡ್ದೇ ಓದಿ!

ಬೆಂಗಳೂರು : ಮಹಿಳೆಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಗೃಹಲಕ್ಷ್ಮಿ ಯೋಜನೆಯ ಇನ್ನೊಂದು ಬಿಗ್ ಅಪ್ಡೇಟ್ ಸುದ್ದಿ ಮಿಸ್ ಏನಾಪ್ಪಾ ಅಂದ್ರೆ ಗೃಹ ಲಕ್ಷ್ಮಿ ಯೋಜನೆಯ ಹಣ ಯಾರ ಖಾತೆಗೆ ಜಮಾ ಆಗುತ್ತಿಲ್ಲವೋ ಅವರ ಸಮಸ್ಯೆಯನ್ನು ಪರಿಹರಿಸಲು ಅಧಿಕಾರಿಗಳು ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.ಬ್ಯಾಂಕ್ ಖಾತೆಯಲ್ಲಿ ಸಮಸ್ಯೆ ಇದ್ದರೆ ಅಂತವರಿಗೆ ಅಂಚೆ ಇಲಾಖೆಯಲ್ಲಿ ಖಾತೆ ತೆರೆಸಿ ಆ ಖಾತೆಗೆ ಹಣ ಜಮಾ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಇನ್ನು ಗೃಹಿಣಿಯ ಸಮಸ್ಯೆಯ ಪರಿಹಾರಕ್ಕೆ ಅಧಿಕಾರಿಗಳನ್ನು ನೇಮಿಸಿರುವುದರ ಜೊತೆಗೆ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರು ಗೃಹಿಣಿಯರ ಜೊತೆ ನಿಂತು ಅವರ ಸಮಸ್ಯೆ ನಿವಾರಿಸಿ ಹಣ ಜಮಾ ಮಾಡಿಕೊಡುವಂತೆ ಸರ್ಕಾರ ಸೂಚಿಸಿದೆ. ಆಯಾ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಮಸ್ಯೆ ಇದ್ದವರ ಜೊತೆಗೆ ಹೋಗಿ ಸಮಸ್ಯೆ ಪರಿಹರಿಸಲಿದ್ದಾರೆ.

ಆದಷ್ಟು ಬೇಗ ಗೃಹ ಲಕ್ಷ್ಮಿ ಯೋಜನೆಯ ಎಲ್ಲ ಲೋಪದೋಷಗಳು ನಿವಾರಣೆ ಆಗಲಿದೆ. ಫಲಾನುಭವಿಗಳ ಸಮಸ್ಯೆಯನ್ನು ಪರಿಹರಿಸಲು ಸದ್ಯ ಸರ್ಕಾರವೇ ಮುಂದೆ ಬಂದಿದೆ. ಫಲಾನುಭವಿಗಳ ಸಮಸ್ಯೆ ಪರಿಹಾರವಾದ ಎಲ್ಲ ಕಂತುಗಳ ಹಣವನ್ನು ಸರ್ಕಾರ ಒಂದೇ ಬಾರಿಗೆ ಜಮಾ ಮಾಡಲಿದೆ ಎನ್ನಲಾಗುತ್ತಿದೆ.

Recent News


Leave a Comment: