ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ಸುದ್ದಿಗಳು News

Posted by vidyamaana on 2024-07-24 17:19:41 |

Share: | | | | |


ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್‌ ಗಳಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಇದು ಭಾರೀ ಸಂಚಲನವನ್ನೇ ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಣೆಯ ಸಂಘಟಕರು ಗೊಂದಲದಲ್ಲಿದ್ದಾರೆ.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ 2013ರ ಫೆ.7 ರಂದು ಮತ್ತು 2023ರ ಡಿ.1ರಂದು ರಾಜ್ಯದ ಎಲ್ಲ ಡಿಡಿಪಿಐ ಕಚೇರಿಗಳಿಗೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಕಟ್ಟಡ ಅಥವಾ ಶಾಲಾ ಮೈದಾನ ಅನುಮತಿ ನೀಡಬಾರದೆಂದು ಸುತ್ತೋಲೆ ಬಂದಿತ್ತು. ಈ ಆಧಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಡಿಪಿಐ ವೆಂಕಟೇಶ್ ಪಟಗಾರ ಅವರು ಜು.16ರಂದು ಜ್ಞಾಪನಾ ಪತ್ರವನ್ನು ಎಲ್ಲ ಬಿಇಒಗಳಿಗೆ ರವಾನಿಸಿದ್ದಾರೆ.

ಜ್ಞಾಪನಾ ಪತ್ರದಲ್ಲಿ ಏನಿದೆ?

ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ, ಶಾಲಾ ಮೈದಾನ ಅಥವಾ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನು ನೀಡಬಾರದೆಂದು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಬಿಜೆಪಿಯಿಂದ ಹೋರಾಟ :

ರಾಜ್ಯಾದ್ಯಂತ ಹಲವು ದಶಕಗಳಿಂದ ಶಾಲೆಯ ಕ್ಯಾಂಪಸ್, ಶಾಲಾ ಕಟ್ಟಡದಲ್ಲಿ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜಕೀಯ ಮಾಡಲು ಹೊರಟಿದ್ದು, ಶಾಲಾ ವಠಾರದಲ್ಲಿ ಧಾರ್ಮಿಕ ಆಚರಣೆ ನಡೆಸದಂತೆ ಆದೇಶ ಹೊರಡಿಸಿದೆ. ಇದು ಖಂಡನೀಯವಾಗಿದ್ದು, ಈ ಹಿಂದೆ ನಿಗದಿತ ಸ್ಥಳದಲ್ಲೇ ಕಾರ್ಯಕ್ರಮ ಆಯೋಜಿಸುತ್ತೇವೆ. ಇದನ್ನು ತಡೆಯಲು ಬಂದರೆ ಸುಮ್ಮನಿರಲ್ಲ ಎಂದು ಬಿಜೆಪಿ ತಾಕೀತು ಮಾಡಿದೆ. ಇದೇ ರೀತಿ ಜಿಲ್ಲಾದ್ಯಂತ ಹೋರಾಟ ನಡೆಯುತ್ತಿದೆ.

ಬಿಜೆಪಿ ಸರಕಾರದಲ್ಲೇ ಆದೇಶ :

2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು ಆದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಒ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಈ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದು ಕಾವೇರತೊಡಗಿದೆ.

 Share: | | | | |


ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಖಾಸಗಿ ಪಿಯು ಕಾಲೇಜು ವಿದ್ಯಾರ್ಥಿನಿ ಸಾವು!

Posted by Vidyamaana on 2023-11-26 11:23:14 |

Share: | | | | |


ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಖಾಸಗಿ ಪಿಯು ಕಾಲೇಜು ವಿದ್ಯಾರ್ಥಿನಿ ಸಾವು!

ಪುತ್ತೂರು : ತೋಟಕ್ಕೆ ಬಳಸುವ ವಿಷಕಾರಿ ಕೀಟನಾಶಕ ಸೇವಿಸಿದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.


ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡರ ಪುತ್ರಿ, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಶಾ (17) ಮೃತ ಯುವತಿ.


ಈ ಬಗ್ಗೆ ನಿಶಾ ರವರ ಸಹೋದರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.


ನಿಶಾ ಬಿ ಎಮ್ ರವರು ಪುತ್ತೂರು ನಗರ ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಹದಿನೈದು ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ (ಓಟ ಸ್ಪರ್ಧೆ) ಭಾಗವಹಿಸಿ ಅಲ್ಲಿ ಯಾವುದೇ ಬಹುಮಾನ ದೊರೆಯದೇ ಹಿಂತಿರುಗಿ ಮನೆಗೆ ಬಂದವರು ಬೇಸರದಲ್ಲಿದ್ದು ನ.14 ರಂದು ವಿಪರೀತವಾಗಿ ವಾಂತಿ ಮಾಡುತ್ತಿದ್ದು, ಇದರಿಂದ ಅಸ್ವಸ್ಥಳಾದವಳನ್ನು ಈ ಬಗ್ಗೆ ವಿಚಾರಿಸಿದಾಗ ನ.13 ರಂದು ಸಂಜೆ ತೋಟಕ್ಕೆ ಬೀಡುವ ಕೀಟನಾಶಕವನ್ನು ಸೇವಿಸಿರುವುದಾಗಿ ತಿಳಿಸಿದ್ದು, ನಂತರ ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರಲ್ಲಿ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಯ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದು, ನಿಶಾನನ್ನು ಪರೀಕ್ಷಿಸಿ ಒಳ ರೋಗಿಯನ್ನಾಗಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.


ನ.25 ರಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ನಿಶಾ ಬಿ ಎಮ್ ರವರು ಮೃತಪಟ್ಟಿದ್ದು, ಸದ್ರಿ ಮರಣದಲ್ಲಿ ಬೇರೆ ಯಾವುದೇ ಸಂಶಯವಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.


ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ UDR .No: 43/2023 ಕಲo: 174 CRPC ರಂತೆ ಪ್ರಕರಣ ದಾಖಲಾಗಿದೆ.

ಸುರತ್ಕಲ್ | ಮೀನು ರಫ್ತು ಕಂಪನಿಯಲ್ಲಿ ಭಾರೀ ಬೆಂಕಿ ಆಕಸ್ಮಿಕ: 10 ಕೋಟಿ ರೂ. ನಷ್ಟ

Posted by Vidyamaana on 2024-07-14 20:11:52 |

Share: | | | | |


ಸುರತ್ಕಲ್ | ಮೀನು ರಫ್ತು ಕಂಪನಿಯಲ್ಲಿ ಭಾರೀ ಬೆಂಕಿ ಆಕಸ್ಮಿಕ: 10 ಕೋಟಿ ರೂ. ನಷ್ಟ

ಸುರತ್ಕಲ್: ಕಾಟಿಪಳ್ಳದಲ್ಲಿರುವ ಅಥೆಂಟಿಕ್ ಓಷಿಯನ್ ಟ್ರೆಷರ್‌(AOT) ಎಂಬ ಮೀನು ರಫ್ತು ಘಟಕದ ಕಂಪನಿಯಲ್ಲಿ ಇಂದು ಮಧ್ಯಾಹ್ನ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, 10 ಕೋಟಿ ರೂ. ಮೌಲ್ಯದ ಸೊತ್ತು ನಷ್ಟವಾಗಿದೆ.

ಕಂಪೆನಿಯ ಕೋಲ್ಡ್ ಸ್ಟೋರ್ ಸೆಕ್ಷನ್ ಮತ್ತು ಕಟ್ಟಿಂಗ್ ಸೆಕ್ಷನ್ ಗಳಲ್ಲಿ ದುರಸ್ತಿ ಕಾರ್ಯನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಸೆಕ್ಷನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅವಘಡ ಸಂಭವಿಸಿದೆ. ಇಂದು ರಜಾದಿನವಾದ ಕಾರಣ ನೌಕರರು ಯಾರು ಇರಲಿಲ್ಲ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ

ಕಡಬ : ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಅಚ್ಚುತ ಗೌಡ ಮೃತ್ಯು : ಇನ್ನೋರ್ವನಿಗೆ ಗಾಯ

Posted by Vidyamaana on 2023-09-25 08:12:50 |

Share: | | | | |


ಕಡಬ : ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಅಚ್ಚುತ ಗೌಡ  ಮೃತ್ಯು : ಇನ್ನೋರ್ವನಿಗೆ ಗಾಯ

ಕಡಬ : ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟು, ಇನ್ನೋರ್ವ ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಕಡಬದ ಅಂಚೆ ಕಚೇರಿ ಸಮೀಪ ನಡೆದಿದೆ.


ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ಕೋಳಿ ನಿವಾಸಿ, ಕೃಷಿಕ ಅಚ್ಚುತ್ತ ಗೌಡ (63) ಎಂದು ಗುರುತಿಸಲಾಗಿದೆ.ಮೃತರು ಇಂದು ಸಂಜೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಹೊರಟಿದ್ದ ವೇಳೆ ಅಂಚೆ ಕಛೇರಿ ಸಮೀಪದ ತಿರುವಿನಲ್ಲಿ ಅಚ್ಚುತ್ತ ಗೌಡ ಹಾಗೂ ಬಲ್ಯ ನಿವಾಸಿ ಚಂದ್ರಶೇಖರ ಎಂಬವರು ಬಸ್ಸಿನಿಂದ ರಸ್ತೆಗೆಸೆಯಲ್ಪಟ್ಟಿದ್ದಾರೆ.


ಗಂಭೀರ ಗಾಯಗೊಂಡ ಅಚ್ಚುತ್ತ ಗೌಡರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಹಾದಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.


ಚಂದ್ರಶೇಖರ ಎಂಬವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.


ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮೃತರು ಪತ್ನಿ, ನಾಲ್ವರು ಮಕ್ಕಳು, ಸಹೋದರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ನನ್ನ ಹೆಂಡತಿಗೂ ಸಿಗುತ್ತೆ ರೀ: ಸಿದ್ದರಾಮಯ್ಯ ಹಾಸ್ಯ ಚಟಾಕಿ

Posted by Vidyamaana on 2023-06-02 14:25:24 |

Share: | | | | |


ನನ್ನ ಹೆಂಡತಿಗೂ ಸಿಗುತ್ತೆ ರೀ: ಸಿದ್ದರಾಮಯ್ಯ ಹಾಸ್ಯ ಚಟಾಕಿ

ಬೆಂಗಳೂರು : ಕಾಂಗ್ರೆಸ್ ಗ್ಯಾರಂಟಿ ಘೋಷಣೆ ವೇಳೆ ಸಿಎಂ ಸಿದ್ದರಾಮಯ್ಯ ಅವರು ರಫ್ & ಟಫ್ ಆಗಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು.ಸುದ್ದಿಗೋಷ್ಠಿಯ ವೇಳೆ ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಕುರಿತು ಪತ್ರಕರ್ತರೊಬ್ಬರು ಈ ಯೋಜನೆ ದುಡಿಯುವ ವರ್ಗ, ಸರ್ಕಾರಿ ಉದ್ಯೋಗಿ ಮಹಿಳೆಯರಿಗೆ ಸಿಗುತ್ತದೆಯಾ ಎಂದು ಪ್ರಶ್ನಿಸಿದರು. ಉತ್ತರಿಸಿದ ಸಿಎಂ, ”ಎಲ್ಲರಿಗೂ ಸಿಗುತ್ತದೆ, ನನ್ನ ಹೆಂಡತಿಗೂ ಸಿಗುತ್ತದೆ” ಎಂದು ಉತ್ತರಿಸಿದರು. ಈ ವೇಳೆ ಉಪಸ್ಥಿತರಿದ್ದ ಸಚಿವರೆಲ್ಲರೂ ಗೊಳ್ಳನೇ ನಕ್ಕು ನಗೆ ಗಡಲಲ್ಲಿ ತೇಲಾಡಿದರು.

ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ, ವಿದ್ಯಾರ್ಥಿನಿಯರನ್ನೊಳಗೊಂಡಂತೆ ಬಸ್ ನಲ್ಲಿ ಉಚಿತ ಪ್ರಯಾಣ ಜೂನ್ 11 ರಿಂದ ಜಾರಿ ಮಾಡುತ್ತೇವೆ. ಕರ್ನಾಟಕದೊಳಗೆ ಪ್ರಯಾಣಿಸಲು ಅನ್ವಯ. ರಾಜ್ಯದ ಒಳಗಡೆ ಎಸಿ, ರಾಜಹಂಸ ಬಸ್ ಹೊರತುಪಡಿಸಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ನಲ್ಲೂ ಫ್ರೀ ಆಗಿ ಪ್ರಯಾಣ ಮಾಡಬಹುದು. ಕೆಎಸ್ ಆರ್ ಟಿಸಿ ಯಲ್ಲಿ ಪುರುಷರಿಗೆ 50% ಮೀಸಲಿಡುತ್ತೇವೆ, ಇದು ಬಿಎಂಟಿಸಿ ಬಸ್ ನಲ್ಲಿ ಅನ್ವಯವಾಗುವುದಿಲ್ಲ ಎಂದರು.

ಕೇರಳದ ಯುವ ಜೋಡಿಗೆ ಕಿರುಕುಳ: ಬಂಟ್ವಾಳ ಮೂಲದ ಸಂದೇಶ್ ಸಹಿತ ಮೂವರ ಬಂಧನ

Posted by Vidyamaana on 2023-12-25 13:07:55 |

Share: | | | | |


ಕೇರಳದ ಯುವ ಜೋಡಿಗೆ ಕಿರುಕುಳ: ಬಂಟ್ವಾಳ ಮೂಲದ ಸಂದೇಶ್ ಸಹಿತ ಮೂವರ ಬಂಧನ

ಮಂಗಳೂರು: ಕೇರಳ ಯುವ ಜೋಡಿಯನ್ನು ತಡೆದು ಅವರ ಧರ್ಮದ ಬಗ್ಗೆ ವಿಚಾರಿಸಿ ಮತೀಯ ಗೂಂಡಾಗಿರಿ ನಡೆಸಿದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಹಂಪನಕಟ್ಟೆಯ ಮಳಿಗೆಯೊಂದರ ಬಳಿ ಗುರುವಾರ ರಾತ್ರಿ 1 ಗಂಟೆ ಸುಮಾರಿಗೆ ನಿಂತಿದ್ದ ಕೇರಳದ ಯುವಕ ಹಾಗೂ ಆತನ ಜೊತೆಗಿದ್ದ ಯುವತಿಯನ್ನು ಯುವಕರ ಗುಂಪೊಂದು ವಿಚಾರಿಸಿತ್ತು.ಕೇರಳದ ಯುವಕ ಮತ್ತು ಯುವತಿಯ ಧರ್ಮದ ಬಗ್ಗೆ ಪ್ರಶ್ನಿಸಿ, ಗುರುತಿನ ಚೀಟಿ ತೋರಿಸುವಂತೆ ಗುಂಪಿನಲ್ಲಿದ್ದ ಯುವಕನೊಬ್ಬ ಏರುಧ್ವನಿಯಲ್ಲಿ ಸೂಚಿಸಿದ ಹಾಗೂ ಅವರ ಸೊತ್ತುಗಳನ್ನು ಪರೀಶೀಲಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.


ಬಂಟ್ವಾಳ ನಿವಾಸಿ ಸಂದೇಶ (28), ಆತನ ಜೊತೆಗಿದ್ದ ಪ್ರಶಾಂತ್ (31) ಹಾಗೂ ರೋನಿತ್ (31) ಅವರನ್ನು ಬಂಧಿತರು. ಆರೋಪಿಗಳ ವಿರುದ್ಧ ಶಾಂತಿಭಂಗಕ್ಕೆ ಉದ್ದೇಶಪೂರ್ವಕ ಪ್ರಚೋದನೆ ಮತ್ತು ಅಕ್ರಮವಾಗಿ ನಿರ್ಬಂಧ ವಿಧಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ

ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

Posted by Vidyamaana on 2024-07-24 18:06:21 |

Share: | | | | |


ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಕಾರವಾರ: ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದನ್ನು ಖಚಿತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ.

ನದಿಯ ಕೆಳಭಾಗದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು ಅದಕ್ಕಾಗಿ ಶೋಧ ನಡೆಯುತ್ತಿದೆ.

ಶಿರೂರಿನಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನದಂದು, ಲಾರಿಯ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಪಡೆಯಲಾಗಿದೆ. ಇಂದು ಬೆಳಗ್ಗೆ ಬೂಮ್ ಲೆಂಗ್ತ್ ಕ್ರೇನ್ ಬಂದಿದ್ದು, ತಪಾಸಣೆ ಪುನರಾರಂಭವಾಗಿದೆ. ಈ ಯಂತ್ರವು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ.

Recent News


Leave a Comment: