Posted by vidyamaana on 2024-07-05 17:20:19 |
ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದರಾಗಿದ್ದಂತ ಕುಂಬ್ಳೆ ಶ್ರೀಧರ ರಾವ್ ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದಾಗಿ ತಿಳಿದು ಬಂದಿದೆ.
ಇಂದು ನೆಕ್ಕಿಲಾಡಿ ಗ್ರಾಮದ ಶಾಂತಿನಗರದ ಸಮೀಪದಲ್ಲಿನ ಬೇರಿಕೆ ನಿವಾಸಿಯಾಗಿದ್ದಂತ ಶ್ರೀಧರ ರಾವ್ ಅವರಿಗೆ ಇಂದು ಬೆಳಿಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು.
ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದ್ರೇ ಚಿಕಿತ್ಸೆ ಫಲಿಸದೇ ಅವರು ಇಂದು ನಿಧನರಾಗಿದ್ದಾರೆ.
ಮೃತರು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರುವ ಪತ್ನಿ ಸುಲೋಚನಾ, ಪುತ್ರರಾದ ಬೆಂಗಳೂರಿನಲ್ಲಿ ಪತ್ರಕರ್ತರಾಗಿರುವ ಗಣೇಶ್ ಪ್ರಸಾದ್, ಕೃಷ್ಣಪ್ರಸಾದ್ ಮತ್ತು ದೇವಿಪ್ರಸಾದ್, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
Posted by Vidyamaana on 2023-10-19 16:23:09 |
ಕಣ್ಣೂರು: ಇಸ್ರೇಲ್ ಹಾಗೂ ಪ್ಯಾಲೆಸ್ತೀನ್
ವಿಚಾರದಲ್ಲಿ ದೇಶದ ರಾಜಕೀಯ ಪಕ್ಷಗಳು ಮತ್ತು ಜನರು ವಿಭಿನ್ನ ಅಭಿಪ್ರಾಯಗಳನ್ನು ಹೊಂದಿದ್ದಾರೆ. ಕೇರಳ ಕೂಡ ಇದರಿಂದ ಹೊರತಲ್ಲ. ಆದರೆ ಕೇರಳದ ಒಂದು ಪಟ್ಟಣಕ್ಕೂ, ಇಸ್ರೇಲ್ ಪೊಲೀಸ್ ಇಲಾಖೆಗೂ ಒಂದು ವಿಶಿಷ್ಟ ನಂಟು ಇದೆ ಎನ್ನುವುದು ಗೊತ್ತೇ? ಮುಖ್ಯವಾಗಿ ಅ 7ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ನಡೆಸಿದ ಬಳಿಕ ಕೇರಳದ ಉತ್ತರ ಭಾಗದಲ್ಲಿನ ಈ ಪಟ್ಟಣದ ಜನರ ಗುಂಪೊಂದು ಇಸ್ರೇಲ್ಗಾಗಿ ಮತ್ತಷ್ಟು ಚುರುಕಿನಿಂದ ಕೆಲಸ ಮಾಡುತ್ತಿದೆ!.
ಕಣ್ಣೂರಿನಲ್ಲಿನ ಮರ್ಯಮ್ ಅಪಾರೆಲ್ ಪ್ರೈ ಲಿಮಿಟೆಡ್ ಎಂಬ ಉಡುಪು ತಯಾರಿಕಾ ಕಂಪೆನಿಯು ಕಳೆದ ಎಂಟು ವರ್ಷಗಳಿಂದ ಇಸ್ರೇಲಿ ಪೊಲೀಸರಿಗಾಗಿ ಸಮವಸ್ತ್ರಗಳನ್ನು ಹೊಲೆದು ಕೊಡುತ್ತಿದೆ. ವರ್ಷಕ್ಕೆ ಸರಾಸರಿ ಒಂದು ಲಕ್ಷ ಯುನಿಟ್ಗಳಷ್ಟು ಸಮವಸ್ತ್ರಗಳನ್ನು ಪೂರೈಕೆ ಮಾಡುತ್ತಿದೆ.ಸಮವಸ್ತ್ರಗಳ ಗುಣಮಟ್ಟ ಪರಿಶೀಲಿಸಲು ಪ್ರತಿ ವರ್ಷವೂ ಇಸ್ರೇಲ್ ಪೊಲೀಸ್ ಅಧಿಕಾರಿಗಳು ಫ್ಯಾಕ್ಟರಿಗೆ ಭೇಟಿ ನೀಡುತ್ತಾರೆ. ಮುಂಬಯಿಯಲ್ಲಿ ನೆಲೆಯೂರಿರುವ ಕೇರಳದ ಉದ್ಯಮಿ ಥಾಮಸ್ ಒಲಿಕ್ಕಲ್ ಮಾಲೀಕತ್ವದ ಫ್ಯಾಕ್ಟರಿ ಇದು. ಎಂಟು ವರ್ಷಗಳಿಂದ ಪೂರೈಕೆ
ಇಸ್ರೇಲಿ ಪೊಲೀಸರ ಜತೆಗಿನ ವ್ಯವಹಾರದ ಕುರಿತು ಮಾತನಾಡಿದ ಫ್ಯಾಕ್ಟರಿ ವ್ಯವಸ್ಥಾಪಕ ಶಿಜಿನ್ ಕುಮಾರ್, ಎಂಟು ವರ್ಷಗಳ ಹಿಂದೆ ಇಸ್ರೇಲಿ ಪೊಲೀಸರು ಈ ಬಗ್ಗೆ ವಿಚಾರಿಸಿದ್ದರು. ಅಂದಿನಿಂದಲೂ ಅವರಿಗೆ ಸಮವಸ್ತ್ರಗಳನ್ನು ಫ್ಯಾಕ್ಟರಿ ಪೂರೈಕೆ ಮಾಡುತ್ತಿದೆ ಎಂದು ತಿಳಿಸಿದರು. "ನಾವು ಫಿಲಿಪ್ಪಿನ್ಸ್ ಸೇನೆಗೆ ಹಾಗೂ ಕುವೈತ್ ಸರ್ಕಾರದ ಅಧಿಕಾರಿಗಳಿಗೆ ಈ ಮೊದಲು ಸಮವಸ್ತ್ರಗಳನ್ನು ಪೂರೈಕೆ ಮಾಡುತ್ತಿದ್ದೆವು. ಬಳಿಕ ಇಸ್ರೇಲ್ನಿಂದ ಬೇಡಿಕೆ ಬಂದಿತ್ತು.
ಸಮವಸ್ತ್ರಗಳಪೂರೈಕೆಯ ಒಪ್ಪಂದ ಮಾಡಿಕೊಳ್ಳುವುದಕ್ಕೂ ಮುನ್ನ ನಮ್ಮ ಫ್ಯಾಕ್ಟರಿ ಹೇಗೆ ಕೆಲಸ ಮಾಡುತ್ತದೆ ಎಂದು ಪರಿಶೀಲಿಸಲು ಇಸ್ರೇಲಿ ಪೊಲೀಸ್ ಅಧಿಕಾರಿಗಳು ಕೇರಳಕ್ಕೆ ಭೇಟಿ ನೀಡಿದ್ದರು ಎಂದು ಶಿಜಿನ್ ಹೇಳಿದರು."ಪ್ರತಿ ವರ್ಷವೂ ನಮಗೆ ಬರುವ ಬೇಡಿಕೆಗಳನ್ನು ಯಶಸ್ವಿಯಾಗಿ ಪೂರೈಕೆ ಮಾಡಿದ್ದೇವೆ ಎಂದು ತಿಳಿಸಿದರು.
ಕೇರಳದ ಕಂಪೆನಿ ಘಟಕವು ಮೊದಲು ತಿರುವನಂತಪುರಂನಲ್ಲಿತ್ತು. ಬಳಿಕ ಅದು ಕಣ್ಣೂರಿಗೆ ಸ್ಥಳಾಂತರಗೊಂಡಿತು. ಸುಮಾರು 1500 ಮಂದಿ ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ ಶೇ 95ಕ್ಕೂ ಹೆಚ್ಚು ಮಂದಿ ಮಹಿಳೆಯರು. ಉದ್ಯಮದ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುವ ಸಾಮರ್ಥ್ಯ ಪಡೆಯಲು ತನ್ನ ಉದ್ಯೋಗಿಗಳಿಗೆ ಕಂಪೆನಿಯು ವಿಶೇಷ ಹಾಗೂ ನಿರ್ದಿಷ್ಟ ತರಬೇತಿಗಳನ್ನು ನೀಡುತ್ತದೆ.ಇಸ್ರೇಲ್ ಪೊಲೀಸರಿಗೆ ಸಮವಸ್ತ್ರದ ಅಂಗಿಗಳನ್ನು ಸಿದ್ಧಪಡಿಸಲು ಸ್ಥಳೀಯ ಘಟಕದ ನೂರಾರು ದರ್ಜಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಎರಡು ಜೇಬುಗಳ ಅಂಗಿಗಳ ಜತೆಗೆ, ತೋಳುಗಳಿಗೆ ಇಸ್ರೇಲ್ ಪೊಲೀಸ್ ಇಲಾಖೆಯ ಟ್ರೇಡ್ಮಾರ್ಕ್ ಚಿಹ್ನೆಯನ್ನು ವಿನ್ಯಾಸಗೊಳಿಸಿ ಅಳವಡಿಸುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ಇಡುಕ್ಕಿ ಜಿಲ್ಲೆಯ ತೊಡುಪುಳದವರಾದ ಥಾಮಸ್ ಒಲಿಕ್ಕಲ್, ಯುದ್ಧ ಆರಂಭವಾದ ಬಳಿಕವೂ ಇಸ್ರೇಲ್ ಪೊಲೀಸರು ಕಂಪೆನಿಯನ್ನು ಸಂಪರ್ಕಿಸಿದ್ದು, ಮತ್ತಷ್ಟು ಸಮವಸ್ತ್ರಗಳಿಗಾಗಿ ಹೆಚ್ಚುವರಿ ಆರ್ಡ್ರಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.
Posted by Vidyamaana on 2023-08-13 00:43:48 |
ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 13 ರಂದು
ಬೆಳ್ಳಗ್ಗೆ 10:00 ಆಟಿಡೊಂಜಿ ದಿನ ಕರ್ನಾಟಕ ರಾಜ್ಯ ದೇವಾಡಿಗರ ಸಂಘ,ಮಣ್ಣ ಗುಡ್ಡ ಮಂಗಳೂರು
ಬೆಳ್ಳಗ್ಗೆ 11
ಆಟಿದ ಕೂಟ ಬಂಟರ ಭವನ ಸುರತ್ಕಲ್
ಮದ್ಯಾಹ್ನ 1:00 ಆಟಿದ ಕೂಟ ಬಂಟರ ಭವನ ಪುತ್ತೂರು
ಮದ್ಯಾಹ್ನ 2:00 ವಿಟ್ಲ ವಲಯ ಬಂಟರ ಸಂಘದ ಆಟಿದ ಕೂಟ ಪುಣಚ ಬೈಲು ಗುತ್ತು
ಮದ್ಯಾಹ್ನ 2:30 ಕೆಸರು ಗದ್ದೆ ವಿಟ್ಲ
ಮದ್ಯಾಹ್ನ 3:30 ಕೆಸರು ಗದ್ದೆ ಬಿಳಿಯೂರು
ಮದ್ಯಾಹ್ನ 4:00 ಕೆಸರು ಗದ್ದೆ ಪುಳಿತ್ತಡಿ ಉಪ್ಪಿನಂಗಡಿ
ಸಂಜೆ 5:30 ಕೆಸರು ಗದ್ದೆ ಕೈಕಾರ
ಕಾರ್ಯಕ್ರಮದ ಲ್ಲಿ ಭಾಗವಹಿಸಲಿದ್ದಾರೆ
Posted by Vidyamaana on 2024-03-20 15:57:15 |
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಾ.20ರ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ (7) ಮೃತಪಟ್ಟ ವಿದ್ಯಾರ್ಥಿನಿ.
ಶಹಿಮಾ ಅವರು ಮೂರು ವಾರಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದಿದ್ದರು. ತಕ್ಷಣ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಮೂರು ದಿನ ಕೋಮ ವ್ಯವಸ್ಥೆಯಲ್ಲಿದ್ದರು. ನಂತರ ಹೆಚ್ಚಿನ ಚಿಕಿತ್ಸೆ ನೀಡಿದ್ದಾದ್ದರೂ ಸ್ವಲ್ಪ ಮಟ್ಟಿಗೆ ಸ್ಪಂದಿಸುತ್ತಿದ್ದರು ಎಂದು ಹೇಳುತ್ತಿದ್ದರೂ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯಿಸಿರೆಳೆದಿದ್ದಾರೆ.
Posted by Vidyamaana on 2024-03-09 05:12:48 |
ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಮಂಜುನಾಥನ ಸೇವೆ ಸಲ್ಲಿಸುತ್ತಿದ್ದ ಆನೆ ಲತಾ ಶಿವರಾತ್ರಿಯಂದೇ ಶಿವೈಕ್ಯಳಾಗಿದ್ದಾಳೆ. ಶುಕ್ರವಾರ ಮಧ್ಯಾಹ್ನ ಹೃದಾಯಾಘಾತದಿಂದ ಗಜರಾಣಿ ಲತಾ ಇಹಲೋಕ ತ್ಯಜಿಸಿ ಶಿವನ ಪಾದ ಸೇರಿದ್ದಾಳೆ. 60 ವರ್ಷ ಪ್ರಾಯವಾಗಿರುವ ಲತಾ ಧರ್ಮಸ್ಥಳ ಕ್ಷೇತ್ರದ ಜಾತ್ರೋತ್ಸವ, ಲಕ್ಷಾದೀಪೋತ್ಸವ, ಶಿವರಾತ್ರಿ ಉತ್ಸವ ಹೀಗೆ ಎಲ್ಲಾ ಉತ್ಸವದಲ್ಲೂ ಮುಂಚೂಣಿಯಲ್ಲಿದ್ದಳು.
ಉತ್ಸವಗಳು ನಡೆಯುವಾಗ ಸೊಂಡಿಲು ಎತ್ತಿ ನಮಸ್ಕರಿಸುತ್ತಾ ಸಾಗುವುದನ್ನು ನೋಡುವುದೇ ಒಂದು ಖುಷಿಯಾಗಿತ್ತು. ಭಕ್ತಾದಿಗಳಿಗೂ ಯಾವುದೇ ತೊಂದರೆ ನೀಡದೆ ಏನನ್ನೂ ಅಪೇಕ್ಷಿಸದೇ ಇದ್ದ ಲತಾ ಧರ್ಮಸ್ಥಳ ಧರ್ಮಾಧಿಕಾರಿಗಳಿಗೂ ಅಚ್ಚುಮೆಚ್ಚಿನವಳಾಗಿದ್ದಳು.
ಶಿವಾನಿ ಹಾಗೂ ಲಕ್ಷ್ಮಿ ಕ್ಷೇತ್ರದಲ್ಲಿ ಇದ್ದರೂ ಕೂಡಾ ಲತಾ ನಡೆದುಕೊಂಡಂತೆ ಆಕೆಯನ್ನು ಅನುಸರಿಸುತ್ತಿದ್ದವು. ಲತಾಳಿಗೆ ಜನಿಸಿದವಳು ಲಕ್ಷ್ಮಿಯಾಗಿದ್ದರೆ, ಲಕ್ಷ್ಮಿಯಲ್ಲಿ ಜನಿಸಿದ ಆನೆ ಶಿವಾನಿ. ಶಿವಾನಿ ಜನನವಾದ ಬಳಿಕ ಲಕ್ಷ್ಮೀ ಉತ್ಸವದಲ್ಲಿ ಭಾಗವಹಿಸುತ್ತಿರಲಿಲ್ಲವಾಗಿದ್ರೂ, ಲತಾ ಮಾತ್ರ ನಿರಂತರವಾಗಿ ದೇವರ ಸೇವೆಯಲ್ಲಿ ಭಾಗಿಯಾಗಿದ್ದಳು.
ವಯಸ್ಸಾಗಿರೋ ಲತಾ ಶಿವರಾತ್ರಿಯಂದೇ ಶಿವನ ಪಾದ ಸೇರಿದ್ದು, ಧರ್ಮಸ್ಥಳ ಕ್ಷೇತ್ರದ ಜನರು ಕಂಬನಿ ಮಿಡಿದಿದ್ದಾರೆ. ಶುಕ್ರವಾರ ಸಂಜೆ ಧರ್ಮಸ್ಥಳದಲ್ಲಿ ಲತಾ ಅಂತ್ಯಕ್ರಿಯೆ ನಡೆಯಲಿದೆ.
Posted by Vidyamaana on 2023-10-15 16:21:58 |
ಕಾರ್ಕಳ: ಪ್ರವಾಸಿ ಕೇಂದ್ರ ಪರಶುರಾಮ ಥೀಮ್ ಪಾರ್ಕ್ ನಲ್ಲಿ ದಿಢೀರ್ ಆಗಿ ಪರುಶುರಾಮ ಮೂರ್ತಿ ಕಾಣೆಯಾಗಿದ್ದು, ಮತ್ತೆ ವಿವಾದಕ್ಕೆ ಒಳಗಾಗಿದೆ. ಎರಡು ದಿನಗಳಿಂದ ಮೂರ್ತಿಯ ಸುತ್ತ ಕಪ್ಪು ಪ್ಲಾಸ್ಟಿಕ್ ಹೊದಿಕೆ ಹಾಕಿರುವುದು ಪತ್ತೆಯಾಗಿತ್ತು. ಇದೀಗ ಡ್ರೋಣ್ ಕ್ಯಾಮರಾದಲ್ಲಿ ಕಪ್ಪು ಪ್ಲ್ಯಾಸ್ಟಿಕ್ ಹೊದಿಕೆಯ ಒಳಗಿನ ಅಸಲಿ ಬಣ್ಣ ಬಯಲಾಗಿದ್ದು, ಪರಶುರಾಮ ಮೂರ್ತಿಯ ಪಾದ ಮತ್ತು ಕಾಲು ಬಿಟ್ಟು ಮೇಲಿನ ಭಾಗ ಮಾಯವಾಗಿರುವುದು ಕಂಡುಬಂದಿದೆ.
ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಲಾಗಿರುವ ಪರುಶುರಾಮನ ಮೂರ್ತಿ ನಕಲಿ ಎನ್ನುವ ಬಗ್ಗೆ ಭಾರೀ ಆರೋಪ ಕೇಳಿಬಂದಿತ್ತು. ಇದೀಗ ಮೂರ್ತಿ ನಾಪತ್ತೆ ಆಗುತ್ತಲೇ ಹೋರಾಟಗಾರರು ಮೂರ್ತಿ ಕಾಣೆಯಾಗಿದೆ ಎಂದು ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೂರ್ತಿ ತೆರವು ಹಿನ್ನೆಲೆಯಲ್ಲಿ ಉಮ್ಮಿಕಲ್ ಬೆಟ್ಟಕ್ಕೆ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಭೇಟಿ ನೀಡಿದ್ದು ಶಾಸಕ ಸುನಿಲ್ ಕುಮಾರ್ ಬಗ್ಗೆ ಆರೋಪ ಮಾಡಿದ್ದಾರೆ.ಪರಶುರಾಮನ ಕಂಚಿನ ಮೂರ್ತಿಯ ಕಾಲಿನ ಭಾಗ ಮಾತ್ರವಿದ್ದು, ದೇಹದ ಉಳಿದ ಭಾಗ ತೆರವು ಮಾಡಲಾಗಿದೆ. ಜಿಲ್ಲಾ ನಿರ್ಮಿತಿ ಕೇಂದ್ರದ ಮೇಲ್ವಿಚಾರಣೆಯಲ್ಲಿ ಸ್ಥಳದಲ್ಲಿ ಕಾಮಗಾರಿ ನಡೆಯುತ್ತಿದೆ. ಆದರೆ ಮೂರ್ತಿ ತೆರವಿನ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಜನರ ದಿಕ್ಕು ತಪ್ಪಿಸಿ ಕಾಮಗಾರಿ ನಡೆಸುವ ಅಗತ್ಯ ಇಲ್ಲ. ಈ ಬಗ್ಗೆ ಎನ್ಐಟಿಕೆ ಹಾಗೂ ಎಂಐಟಿ ತಂತ್ರಜ್ಞರ ತಂಡ ಅಗಮಿಸಿ ಮೂರ್ತಿಯ ಅಡಿಪಾಯ ಪರಿಶೀಲನೆ ನಡೆಸಬೇಕು ಎಂದು ಉದಯಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಮೂರ್ತಿಯ ಮೇಲಿನ ಭಾಗ ಫೈಬರ್ ನಿಂದ ನಿರ್ಮಾಣ ಮಾಡಲಾಗಿದೆ ಎನ್ನುವ ಮಾತನ್ನು ಹೋರಾಟಗಾರರು ಹೇಳಿಕೊಂಡಿದ್ದರು. ಇದೀಗ ಮೂರ್ತಿಯನ್ನು ತೆರವುಗೊಳಿಸಿ ಜನರ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವುದು ನಾನಾ ರೀತಿಯ ಶಂಕೆಗೆ ಕಾರಣವಾಗಿದೆ
Posted by Vidyamaana on 2024-01-15 21:47:52 |
ಪುತ್ತೂರು: ತಾಲೂಕಿನ ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಹೆಚ್. ಮಹಮ್ಮದ್ ಆಲಿ ಮೂರನೇ ಬಾರಿಗೆ ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಸುರೇಂದ್ರ ರೈ ಬಳ್ಳಮಜಲು ಅವರು ಆಯ್ಕೆಗೊಂಡರು. ಇಬ್ಬರ ಆಯ್ಕೆಯು ಅವಿರೋಧವಾಗಿ ನಡೆಯಿತು.
ಸಹಕಾರ ಸಂಘದ ಕಚೇರಿಯಲ್ಲಿ ಸೋಮವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಸಹಕಾರಿ ಇಲಾಖೆಯ ಅಧೀಕ್ಷಕ ನಾಗೇಂದ್ರ ಅವರು ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.ಸಂಘದ ನಿರ್ದೇಶಕರಾದ ಸಂಶುದ್ದೀನ್, ರಂಜಿತ್ ಬಂಗೇರಾ, ಗಣೇಶ್ ರೈ ಸದಾನಂದ ಶೆಟ್ಟಿ ಕೂರೇಲು, ಚಂದ್ರಕಲಾ ಪಿ, ತೆರೆಜಾ ಎಂ ಸಿಕ್ವೆರಾ, ಇಸ್ಮಾಯಿಲ್ ಎಂ, ಗಣೇಶ್ ರೈ ಶೀನಪ್ಪ ಮತ್ತು ತಿಮ್ಮಪ್ಪ ನಾಯ್ಕ ಉಪಸ್ಥಿತರಿದ್ದರು.