ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಸುದ್ದಿಗಳು News

Posted by vidyamaana on 2024-07-24 19:54:18 |

Share: | | | | |


ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.

ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ

 Share: | | | | |


ಅರುಣ್ ಕುಮಾರ್ ಪುತ್ತಿಲ ದಿಗ್ವಿಜಯ ಯಾತ್ರೆ

Posted by Vidyamaana on 2023-06-24 10:25:38 |

Share: | | | | |


ಅರುಣ್ ಕುಮಾರ್ ಪುತ್ತಿಲ ದಿಗ್ವಿಜಯ ಯಾತ್ರೆ

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಸಣ್ಣ ಮತಗಳ ಅಂತರದಿಂದ ಸೋಲು ಕಂಡಿರುವ, ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಅವರು ಶನಿವಾರ ಅಂದರೆ ಇಂದು ಸಂಜೆ 5.57ಕ್ಕೆ ದಿಗ್ವಿಜಯ ಚಾನೆಲ್ ಮೂಲಕ ಜನರ ಮುಂದೆ ಬರಲಿದ್ದಾರೆ.

ಇತ್ತೀಚೆಗೆ ಅರುಣ್ ಕುಮಾರ್ ಪುತ್ತಿಲ ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಾದ್ಯಂತ ಹಾಗೂ ಹೊರಗಡೆಯೂ ಹೆಚ್ಚು ಹೆಚ್ಚು ಅಭಿಮಾನಿಗಳನ್ನು ಸಂಪಾದಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆ ಸಂದರ್ಭವೇ ರಾಜ್ಯಾದ್ಯಂತ ಬೆಂಬಲ ಸೂಚಿಸಿ ಅನೇಕರು ಸಂದೇಶ ರವಾನಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಇದೀಗ ಅರುಣ್ ಕುಮಾರ್ ಪುತ್ತಿಲ ಅವರ ಸಂದರ್ಶನ ರಾಜ್ಯದ ಪ್ರತಿಷ್ಠಿತ ದಿಗ್ವಿಜಯ ಚಾನೆಲಿನಲ್ಲಿ ಪ್ರಸಾರಗೊಳ್ಳಲಿದೆ.

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಪುತ್ತಿಲ ಅವರ ಸಂದರ್ಶನ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಸಂದರ್ಶನದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧೆ, ತಮಗಿದ್ದ ಜೀವ ಬೆದರಿಕೆ, ಶನಿ ಪೂಜೆಯ ಘಟನೆ ಮೊದಲಾದ ವಿಚಾರಗಳ ಬಗ್ಗೆ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚಿನ ದಿನಗಳಲ್ಲಿ ಇದೊಂದು ಹುಚ್ಚು ಶುರುವಾಗಿದೆ

Posted by Vidyamaana on 2023-09-07 11:23:04 |

Share: | | | | |


ಇತ್ತೀಚಿನ ದಿನಗಳಲ್ಲಿ ಇದೊಂದು ಹುಚ್ಚು ಶುರುವಾಗಿದೆ

ಪುತ್ತೂರು: ಹಿಂದೂ ಧರ್ಮದ ಬಗ್ಗೆ ಗೃಹಸಚಿವ ವಿವಾದಾತ್ಮಕ ಜಿ. ಪರಮೇಶ್ವರ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರಿನಲ್ಲಿ ಪ್ರತಿಕ್ರಿಯಿಸಿದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ‌ ಭಟ್ ಪ್ರತಿಕ್ರಿಯೆ ನೀಡಿದ್ದಾರೆ.


ಇತ್ತೀಚಿನ ದಿನಗಳಲ್ಲಿ ಇದೊಂದು ಹುಚ್ಚು ಶುರುವಾಗಿದೆ. ಸನಾತನ ಧರ್ಮದ ಬಗ್ಗೆ ದೂಷಣೆ ಮಾಡಿದರೆ ಅಲ್ಪಸಂಖ್ಯಾತರ ಮತ ಸಿಗುತ್ತದೆ. ಅಧಿಕಾರಿ ಸಿಗುತ್ತೆ ಅನ್ನುವ ಕಾರಣಕ್ಕೆ ಈ ರೀತಿ ಹೇಳಿಕೆ ನೀಡುತ್ತಾರೆ. ಹಿಂದೂ ಧರ್ಮದ ಹುಟ್ಟು ಗೊತ್ತಿಲ್ಲದ ಪರಮೇಶ್ವರ್ ಅವರ ಹೆಸರನ್ನು ಇಸ್ಮಾಯಿಲ್ ಅಂತ ಯಾಕೆ ಇಟ್ಟುಕೊಂಡಿಲ್ಲ. ಸ್ಟಾಲಿನ್ ಎಂದು ಹೆಸರು ಇಟ್ಟುಕೊಳ್ಳುಬಹುದಿತ್ತಲ್ಲವೇ ಎಂದು ಪ್ರಶ್ನಿಸಿದ್ದಾರೆ.


ಇದ್ದ ದೇವಸ್ಥಾನಕ್ಕೆಲ್ಲಾ ಭೇಟಿ ನೀಡುವ ಪರಮೇಶ್ವರ್ ,ದೇವಸ್ಥಾನದ ಹೊರಗೆ ಬಂದ ಬಳಿಕ ಈ ರೀತಿ ಹೇಳಿಕೆ ನೀಡುತ್ತಾರೆ. ಸನಾತನ ಧರ್ಮದ ಹುಟ್ಟು ಯಾರಿಗೂ ತಿಳಿದಿಲ್ಲ. ಸನಾತನ ಧರ್ಮಕ್ಕೆ ಹುಟ್ಟೂ ಇಲ್ಲ, ನಾಶವೂ ಇಲ್ಲ. ಕ್ರಿಶ್ಚಿಯನ್, ಇಸ್ಲಾಂ ಮತ ಇತ್ತೀಚೆಗೆ ಹುಟ್ಟಿರುವ ಮತಗಳು. ಸನಾತನ ಧರ್ಮ ನಿತ್ಯ ನೂತನವಾದ ಧರ್ಮ.


ಎಲ್ಲಾ ಕಾಲಕ್ಕೂ ,ಎಲ್ಲವನ್ನೂ ಒಪ್ಪಿಕೊಳ್ಳುವ ಧರ್ಮ. ಕಾಲಕ್ಕೆ ತಕ್ಕಂತೆ ತನ್ನಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಕಾಶವಿರುವ ಧರ್ಮ. ಹಿಂದೆ ಹಿಂದು ಧರ್ಮದಲ್ಲಿದ್ದ ಬಾಲ್ಯವಿವಾಹ, ವರದಕ್ಷಿಣೆ ಮೊದಲಾದ ಪಿಡುಗನ್ನು ತೆಗೆದು ಹಾಕಲಾಗಿದೆ. ಮೂಢನಂಬಿಕೆಯನ್ನು ತೊಡೆದು‌ ಹಾಕುವ ಕೆಲಸವನ್ನು ಮಹಾಪುರುಷರು ಮಾಡಿದ್ದಾರೆ. ಈಗಿರುವ ಕೆಲವು ಆಚಾರಗಳನ್ನೂ ಬದಲಾಯಿಸಲಾಗುತ್ತದೆ.


ಆ ಬದಲಾವಣೆಯನ್ನು ನಾವು ಮಾಡುತ್ತೇವೆ. ಆದರೆ ಇಸ್ಲಾಂ ಮತ್ತು ಕ್ರಿಶ್ಚಿಯನ್ ಮತದಲ್ಲಿ ಈ ಅವಕಾಶವಿಲ್ಲ. ಆ ಕಾರಣಕ್ಕಾಗಿಯೇ ಆ ಮತದ ಜನರೇ ಮತವನ್ನು ಒಪ್ಪಿಕೊಳ್ಳುತ್ತಿಲ್ಲ. ಅಮೇರಿಕಾ ಮತ್ತು ಬ್ರಿಟನ್ ನಲ್ಲಿ ಚರ್ಚುಗಳಿಗೆ ಜನ ಬರುತ್ತಿಲ್ಲ. ಆ ಕಾರಣಕ್ಕಾಗಿ ಅಲ್ಲಿ ಚರ್ಚುಗಳನ್ನು ಹರಾಜಿಗೆ ಇಡುತ್ತಿದ್ದಾರೆ. ಚಂದ್ರನ ಬಗ್ಗೆ ಸನಾತನ ಧರ್ಮದಲ್ಲಿ ಉಲ್ಲೇಖವಿದೆ. ಅಲ್ಲಿನ ಕೃಷ್ಣ ಪರ್ವ, ಶ್ವೇತ ಪರ್ವದ ಉಲ್ಲೇಖವಿದೆ. ಆ ಸತ್ಯ ಇದೀಗ ಚಂದ್ರಯಾನ-3 ಉಡಾವಣೆ ಯಶಸ್ವಿಯಾದಾಗ ಬೆಳಕಿಗೆ ಬಂದಿದೆ. ಸನಾತನ ಧರ್ಮ ಮತ್ತು ವಿಜ್ಞಾನ ಪರಸ್ಪರ ಒಪ್ಪಿಕೊಂಡಿದೆ. ಹಿಂದೂ ಧರ್ಮ ಮತ್ತು ವಿಜ್ಞಾನ ಒಟ್ಟೊಟ್ಟಿಗೆ ಹೋಗುತ್ತದೆ.


ಸನಾತನ ಧರ್ಮದ ಬಗ್ಗೆ ಮಾತನಾಡುವ ಉದಯನಿಧಿ‌ ಸ್ಟಾಲಿನ್ ತಂದೆ ಹಿಂದೂ ಧರ್ಮದ ಸತ್ವ ಒಪ್ಪಿಕೊಂಡಿದ್ದರು. ಅವರ ಕಾರನ್ನು‌ ಅವರ ಮನೆ ಮುಂದೆ ದೇವಸ್ಥಾನಕ್ಕೆ ಮುಖಮಾಡಿ ನಿಲ್ಲಿಸುತ್ತಿದ್ದರು.


ಈಗ ಢೋಂಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸನಾತನ ಧರ್ಮದ ಬಗ್ಗೆ ಮಾತನಾಡುವವರು ಎಚ್ಚರಿಕೆಯಿಂದ ಮಾತನಾಡಬೇಕು. ಇದರಿಂದ ಅವರ ಮುಂದಿನ ಪೀಳಿಗೆ ಚೆನ್ನಾಗಿ ಇರುತ್ತದೆ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

ಅಧಿಕಾರಿಗಳು ಉದ್ಯಮಿಗಳಲ್ಲಿ ಹಣದ ಬೇಡಿಕೆ ನನ್ನ ಹೆಸರಿನಲ್ಲಿ ಹಣ ಕೇಳಿದರೆ ಕೊಡುವ ಅಗತ್ಯವಿಲ್ಲ: ಶಾಸಕ ಅಶೋಕ್ ರೈ

Posted by Vidyamaana on 2023-09-07 12:33:10 |

Share: | | | | |


ಅಧಿಕಾರಿಗಳು ಉದ್ಯಮಿಗಳಲ್ಲಿ ಹಣದ ಬೇಡಿಕೆ ನನ್ನ ಹೆಸರಿನಲ್ಲಿ ಹಣ ಕೇಳಿದರೆ ಕೊಡುವ ಅಗತ್ಯವಿಲ್ಲ: ಶಾಸಕ ಅಶೋಕ್ ರೈ

ಪುತ್ತೂರು: ನನ್ನ ಹೆಸರು ಹೇಳಿಕೊಂಡು ಕೆಲವರು ಸರಕಾರಿ ಇಲಾಖೆಯ ಅಧಿಕಾರಿಗಳ ಬಳಿ, ಉದ್ಯಮಿಗಳ ಬಳಿ ಹಣ ಕೇಳುತ್ತಿದ್ದಾರೆ ಎಂಬ ವಿಚಾರ ನನ್ನ ಗಮನಕ್ಕೆ ಬಂದಿದ್ದು ನನ್ನ ಹೆಸರು ಹೇಳಿ ಯಾರಾದರು ಹಣ ಕೇಳಿದರೆ ಕೊಡಬೇಕಾದ ಅವಶ್ಯಕತೆಯಿಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ತಿಳಿಸಿದ್ದಾರೆ.

ಕಳೆದ ಹಲವಾರು ದಿನಗಳಿಂದ ಈ ರೀತಿಯ ವಿಚಾರಗಳು ನಡೆಯುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ನಾನು ಯಾವುದೇ ಅಧಿಕಾರಿಗಳ ಬಳಿಯಾಗಲಿ, ಉದ್ಯಮಿಗಳ ಬಳಿಯಾಗಲಿ ಚುನಾವಣೆಗೆ ಮುನ್ನವೂ ಹಣ ಕೇಳಿಲ್ಲ ಆ ಬಳಿಕವೂ ಕೇಳಿಲ್ಲ ಇನ್ನು ಕೇಳುವುದೂ ಇಲ್ಲ ಅದರ ಅಗತ್ಯತೆ ನನಗಿಲ್ಲ. ನನ್ನ ಹೆಸರಿನಲ್ಲಿ ಯಾರಾದರೂ ಅಧಿಕಾರಿಗಳ ಬಳಿ , ಉದ್ಯಮಿಗಳ ಬಳಿ ಹಣ ಕೇಳಿದರೆ ಅವರು ಕೊಡಬೇಕಾದ ಅಗತ್ಯವಿಲ್ಲ. ಶಾಸಕರು ಹೇಳಿರಬಹುದೇ ಎಂಬ ಅನುಮಾನವೇ ಬೇಡ ನಾನು ಯಾರಲ್ಲೂ ಹಣ ಕಲೆಕ್ಷನ್ ಮಾಡಲು ಹೇಳಿಯೂ ಇಲ್ಲ , ಮುಂದಕ್ಕೆ ಹೇಳುವುದೂ ಇಲ್ಲಎಂದು ಶಾಸಕರು ಸ್ಪಷ್ಟಪಡಿಸಿದ್ದಾರೆ.

ಡಿಜಿ - ಐಜಿಪಿ ಅಲೋಕ್ ಮೋಹನ್‌ ಭೇಟಿ ಮಾಡಿದ ಬಿಜೆಪಿ ನಿಯೋಗ

Posted by Vidyamaana on 2023-09-06 21:03:33 |

Share: | | | | |


ಡಿಜಿ - ಐಜಿಪಿ ಅಲೋಕ್ ಮೋಹನ್‌ ಭೇಟಿ ಮಾಡಿದ ಬಿಜೆಪಿ ನಿಯೋಗ

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸ್ ವಿಚಾರಣೆ, ಬೆದರಿಕೆ, ಕಿರುಕುಳ ಆರೋಪ ಕೇಳಿಬಂದಿದ್ದು, ಹಾಗಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ನೇತೃತ್ವದಲ್ಲಿ ಡಿಜಿ&ಐಜಿಪಿ ಅಲೋಕ್ ಮೋಹನ್​ರನ್ನು ಬುಧವಾರ ಭೇಟಿ ಮಾಡಲಾಗಿದೆ.


ಶಾಸಕ ರವಿ ಸುಬ್ರಮಣ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಬಿಜೆಪಿ ಕಾನೂನು ಪ್ರಕೋಷ್ಠದ ಮುಖಂಡ ವಿವೇಕ್ ರೆಡ್ಡಿ ಉಪಸ್ಥಿತರಿದ್ದು, ನಿಯೋಗದ ಭೇಟಿ ವೇಳೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಗೈರಾಗಿದ್ದಾರೆ.


ಕಾರ್ಯಕರ್ತರನ್ನು ಅನಗತ್ಯ ವಿಚಾರಣೆ ಮಾಡುವುದನ್ನು ನಿಲ್ಲಿಸಬೇಕು: ಎನ್. ರವಿಕುಮಾರ್


ನಗದರಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್​ ಮಾತನಾಡಿ, ಬಿಜೆಪಿ ಕಾರ್ಯಕರ್ತರಾಗಿರುವ ಸೋಷಿಯಲ್ ಮೀಡಿಯಾ ಆಕ್ಟಿವಿಸ್ಟ್​ಗಳ ಮನೆಗೆ ಹೋಗಿ ಎಫ್​ಐಆರ್ ಮಾಡದೇ ಎರಡು ದಿನಗಳ ಕಾಲ ಕೂರಿಸಿಕೊಂಡಿದ್ದಾರೆ. ಪೊಲೀಸ್ ದೌರ್ಜನ್ಯದ ಮೂಲಕ ಕಾರ್ಯಕರ್ತರನ್ನು ಹೆದರಿಸಲಾಗುತ್ತಿದೆ.


ಪೊಲೀಸ್ ಅಧಿಕಾರಿಗಳು ಕಾನೂನಾತ್ಮಕ ಕರ್ತವ್ಯ ಮಾಡಲಿ. ಕಾರ್ಯಕರ್ತರನ್ನು ಅನಗತ್ಯ ವಿಚಾರಣೆ ಮಾಡುವುದನ್ನು ಬಂದ್ ಮಾಡಬೇಕು. ಏನೇ ಇದ್ದರೂ ನೋಟೀಸು ಕೊಡಿ, ಪಕ್ಷ ಉತ್ತರ ಕೊಡುತ್ತದೆ. ಬಿಜೆಪಿ ಕಾರ್ಯಕರ್ತರು ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಪಯೋಗಿಸಬೇಕು ಎಂದು ಹೇಳಿದ್ದಾರೆ.

ಸಿಡಿಪಿಓ ಶ್ರೀಲತಾ ಉಡುಪಿಗೆ ವರ್ಗ

Posted by Vidyamaana on 2023-10-12 14:27:37 |

Share: | | | | |


ಸಿಡಿಪಿಓ ಶ್ರೀಲತಾ ಉಡುಪಿಗೆ  ವರ್ಗ

ಪುತ್ತೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಅಧಿಕಾರಿಗಳ ವರ್ಗಾವಣೆ ಪರ್ವ ಶುರುವಾಗಿದೆ.

ಪುತ್ತೂರು ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಅಧಿಕಾರಿ ಶ್ರೀಲತಾ ಅವರಿಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ವರ್ಗಾವಣೆಯಾಗಿದ್ದು, ಸರಕಾರದಿಂದ ಆದೇಶವೂ ಬಂದಿದೆ. ಆದರೆ ಪುತ್ತೂರು ಸಿಡಿಪಿಓ ಹುದ್ದೆಗೆ ಯಾರು ಬರಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ.

ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಜಿ.ಹೆಚ್.ಸರೋಜಮ್ಮ ಆದೇಶ ಪತ್ರ ಹೊರಡಿಸಿದ್ದಾರೆ.

ದರ್ಬೆಯಲ್ಲಿರುವ ನ್ಯೂ ಮಂಗಳೂರು ಎಲೆಕ್ಟ್ರೋನಿಕ್ಸಿನಲ್ಲಿ ಕಾಂಬೋ ಆಫರ್

Posted by Vidyamaana on 2023-09-06 17:09:48 |

Share: | | | | |


ದರ್ಬೆಯಲ್ಲಿರುವ ನ್ಯೂ ಮಂಗಳೂರು ಎಲೆಕ್ಟ್ರೋನಿಕ್ಸಿನಲ್ಲಿ ಕಾಂಬೋ ಆಫರ್

ಪುತ್ತೂರು: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ನ್ಯೂ ಮಂಗಳೂರು ಎಲೆಕ್ಟ್ರೋನಿಕ್ಸ್ ವಿಶೇಷ ಆಫರ್ಗಳನ್ನು ಗ್ರಾಹಕರ ಮುಂದಿಟ್ಟಿದೆ.

ಪುತ್ತೂರಿನ ದರ್ಬೆ ಬುಶ್ರಾ ಟವರ್ಸ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯೂ ಮಂಗಳೂರು ಎಲೆಕ್ಟ್ರೋನಿಕ್ಸ್ ಕಾಂಬೋ ಆಫರ್ಗಳನ್ನು ಗ್ರಾಹಕರಿಗಾಗಿ ನೀಡುತ್ತಿದೆ. ಈ ಆಫರ್ ಉತ್ಸವದವರೆಗೆ ನೀಡಲಾಗುತ್ತಿದ್ದು, ಕೆಲವೇ ದಿನಗಳವರೆಗೆ ಸೀಮಿತಗೊಳಿಸಲಾಗಿದೆ.

ಆಯ್ದ ಉತ್ಪನ್ನಗಳ ಖರೀದಿ ಮೇಲೆ ಶೇ. 26ರವರೆಗೆ ಕ್ಯಾಶ್ಬ್ಯಾಕ್ ನೀಡಲಾಗುತ್ತದೆ. ಮಾತ್ರವಲ್ಲ, ಆಯ್ದ ಉತ್ಪನ್ನಗಳಿಗೆ 888 ರೂ.ನಿಂದ ನಿಗದಿತ ಇಎಂಐ ಪ್ರಾರಂಭವಾಗಲಿದೆ. ಆಯ್ದ ಕೆಲ ಉತ್ಪನ್ನಗಳಿಗೆ 1 ಕಂತು ಉಚಿತವಾಗಿಯೂ ನೀಡಲಾಗುತ್ತಿದೆ.

ಇದರೊಂದಿಗೆ ಕಾಂಬೋ ಆಫರ್ಗಳು ಗ್ರಾಹಕರನ್ನು ಸೆಳೆಯುತ್ತಿವೆ. 4345 ರೂ.ನ ವಿಕ್ಟರ್ 600 ವ್ಯಾಟಿನ ಕುಕ್ಕರ್ ಹಾಗೂ 6944 ರೂ.ನ ವಿವಾ ಸ್ಕೈ - 2b ಗ್ಯಾಸ್ ಸ್ಟೌ ಅನ್ನು 6790 ರೂ.ಗೆ ನೀಡಲಾಗುತ್ತಿದೆ. ವೀಡಿಯಂ ಕಂಪೆನಿಯ ಈ ಉತ್ಪನ್ನಗಳಿಗೆ 5 ವರ್ಷದ ವಾರೆಂಟಿಯೂ ಇದೆ.

ಇನ್ನು, 14100 ರೂ.ನ 4 ಬರ್ನಲಿನ ಗ್ಯಾಸ್ ಸ್ಟೌ ಹಾಗೂ 12595 ರೂ.ನ ಎಲೆಕ್ಟ್ರಿಕ್ ಕಿಚನ್ ಚಿಮ್ನಿ ಅನ್ನು 14690 ರೂ.ಗೆ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ಸಂಭ್ರಮ ನಿಮ್ಮ ಮನೆ ಬಾಗಿಲಿಗೆ ಎನ್ನುವ ಸ್ಲೋಗನಿನೊಂದಿಗೆ ನೀಡಲಾಗುತ್ತಿರುವ ಕಾಂಬೋ ಆಫರಿನ ಜೊತೆಗೆ 100ಕ್ಕೂ ಹೆಚ್ಚು ಮಾಡೆಲ್‌ನ ಫ್ಯಾನ್‌ಗಳು, 75ಕ್ಕೂ ಹೆಚ್ಚು ಮಾಡೆಲ್‌ನ ಮಿಕ್ಸಿಗಳು, 40ಕ್ಕೂ ಹೆಚ್ಚು ಮಾಡೆಲ್‌ನ ಗ್ಯಾಸ್ ಸ್ಟವ್‌ಗಳು, 25ಕ್ಕೂ ಹೆಚ್ಚು ಮಾಡೆಲ್‌ನ ಎಲ್.ಇ.ಡಿ. ಟಿವಿಗಳು, 55ಕ್ಕೂ ಹೆಚ್ಚು ಮಾಡೆಲ್‌ನ ವಾಷಿಂಗ್ ಮೆಷಿನ್, 25ಕ್ಕೂ ಹೆಚ್ಚು ಮಾಡೆಲ್‌ನ ಗ್ರೈಂಡರ್‌ಗಳು, 20ಕ್ಕೂ ಹೆಚ್ಚು ಮಾಡೆಲ್‌ನ ಇಂಡಕ್ಷನ್ ಸ್ಟವ್‌ಗಳು, 75ಕ್ಕೂ ಹೆಚ್ಚು ಮಾಡೆಲ್‌ನ ರೆಫ್ರಿಜರೇಟರ್ ಶೇ.40ರವರೆಗೆ ರಿಯಾಯಿತಿಯಲ್ಲಿ ಗ್ರಾಹಕರ ಖರೀದಿಗೆ ತೆರೆದುಕೊಳ್ಳಲಿದೆ.

ಸುಮಾರು 43 ವರ್ಷಗಳಿಂದ ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ನ್ಯೂ ಮಂಗಳೂರು ಫರ್ನಿಚರ್ ಸಹ ಸಂಸ್ಥೆಯಲ್ಲಿ ಟಿ.ವಿ., ಫ್ರಿಡ್ಜ್ ವಾಷಿಂಗ್ ಮೆಷಿನ್ ಇತ್ಯಾದಿ ಖರೀದಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ, ಪ್ರತೀ ಖರೀದಿಗೆ ಹಲವು ಆಕರ್ಷಕ ಉಡುಗೊರೆಗಳು ಮತ್ತು ಗಿಫ್ಟ್ ವೋಚರ್ ಪಡೆಯುವ ಸುವರ್ಣಾವಕಾಶವನ್ನು ನೀಡಲಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Recent News


Leave a Comment: