ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸುದ್ದಿಗಳು News

Posted by vidyamaana on 2024-07-25 16:43:22 |

Share: | | | | |


ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

 ಮುಂಬೈ: ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.

ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

ಬಿಟೆಕ್ ಮಾಡಿದ್ದ ಶ್ರೀನಿವಾಸ್ ಮುಂಬೈನ ಲೋಧಾದಲ್ಲಿ 2023ರಲ್ಲಿ ಕೆಲ ಕಾಲ ಕೆಲಸ ಮಾಡಿದ್ದರು. ಇದಕ್ಕೂ ಮೊದಲು ಅರಬ್ ರಾಷ್ಟ್ರ ಕುವೈತ್‌ನಲ್ಲಿ ಕೆಲಸ ಮಾಡಿದ್ದರು. 2023ರಲ್ಲಿ ಮುಂಬೈಗೆ ವಾಪಸಾದ ಅವರು ಲೋಧಾ ಗ್ರೂಪ್‌ಗೆ ಕೆಲಸಕ್ಕೆ ಸೇರಿದ್ದರು. ಇದಾದ ನಂತರ ಇವರು ತಮ್ಮ ಪಾಲುದಾರರ ಜೊತೆಗೂಡಿ ಇಲೆಕ್ಟ್ರಿಕ್ ಕಂಟ್ರಾಕ್ಟ್ ಕೆಲಸ ಶುರು ಮಾಡಿದ್ದರು. ಶ್ರೀನಿವಾಸ್ ಪತ್ನಿಯಿಂದಲೂ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದು, ಶ್ರೀನಿವಾಸ್ ಈ ಹಿಂದೆಯೂ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಜೀವ ಕಳೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಸಮಯಕ್ಕೆ ಸರಿಯಾಗಿ ಯಾರೋ ಪಾರು ಮಾಡಿದ್ದರಿಂದ ಅವರ ಜೀವ ಉಳಿದಿತ್ತು ಎಂದು ಪತ್ನಿ ಹೇಳಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಶ್ರೀನಿವಾಸ್ ಕಡೆಯದಾಗಿ ಸಂಬಂಧಿಕರೊಬ್ಬರ ಜೊತೆ ಮಾತನಾಡಿದ್ದು, ಈ ವೇಳೆ ಅವರು ಸಹಜವಾಗಿ ಮಾತನಾಡಿದ್ದರು ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಇದುವರೆಗೂ ನೀರಿಗೆ ಹಾರಿದ ಶ್ರೀನಿವಾಸ್ ಅವರನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಇದು ಮೊದಲ ಪ್ರಕರಣ ಅಲ್ಲ ಈ ಹಿಂದೆ ಮಹಿಳಾ ವೈದ್ಯರೊಬ್ಬರು ಅಟಲ್ ಸೇತುವಿನಿಂದ ಕೆಳಗೆ ಹಾರಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದರು.

 Share: | | | | |


ರಾಜ್ಯ ಸರ್ಕಾರ ಕ್ಕೆ ಜಾತಿಗಣತಿ ವರದಿ ಸಲ್ಲಿಸಿದ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ

Posted by Vidyamaana on 2024-02-29 15:37:23 |

Share: | | | | |


ರಾಜ್ಯ ಸರ್ಕಾರ ಕ್ಕೆ ಜಾತಿಗಣತಿ ವರದಿ ಸಲ್ಲಿಸಿದ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ

ಬೆಂಗಳೂರು : ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರಕ್ಕೆ ಇಂದು ಜಾತಿಗಣತಿ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಇಂತಹ ಜಾತಿಗಣತಿ ವರದಿಯನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ವೀಕರಿಸಿದರು.ಇಂದು ವಿಧಾನಸೌಧಕ್ಕೆ ತೆರಳಿದಂತ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು, ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಜಾತಿಗಣತಿ ವರದಿಯನ್ನು ಸಲ್ಲಿಸಿದರು.ತೀವ್ರ ವಿರೋಧದ ನಡುವೆಯೂ ವಿಧಾನಸೌಧದ ಸಿಎಂ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಾತಿಗಣತಿ ವರದಿಯನ್ನು ಸ್ವೀಕರಿಸಿದರು.


ಲೋಕಸಭಾ ಚುನಾವಣೆಗೂ ಮುನ್ನವೇ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲೇ ಇಂದು ಜಯಪ್ರಕಾಶ್ ಹೆಗ್ಡೆ ಅವರು ಜಾತಿಗಣತಿ ವರದಿಯನ್ನು ಸಿಎಂ ಸಿದ್ಧರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.

ಜಾತಿಗಣತಿ ವರದಿಯಲ್ಲಿ ಏನಿದೆ.?

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸಲ್ಲಿಸಿರುವಂತ ಜಾತಿಗಣತಿ ವರದಿಯಲ್ಲಿ ಜಾತಿವಾರು ಸಂಖ್ಯೆಯನ್ನು ನಮೂದಿಸಲಾಗಿದೆ ಎನ್ನಲಾಗುತ್ತಿದೆ.ಈ ವರದಿಯಲ್ಲಿ ಎಸ್ಸಿ, ಎಸ್ಟಿ ಹೊರತುಪಡಿಸಿ ಜಾತಿವಾರು ಲಕ್ಷಣಗಳನ್ನು ಸಮೀಕ್ಷೆ ಮಾಡಿ ನೀಡಲಾಗಿದೆ. ಎಸ್ಸಿ ವರ್ಗದ ಪ್ರಮುಖ ಲಕ್ಷಣಗಳು ವರದಿಯಲ್ಲಿವೆ ಎನ್ನಲಾಗುತ್ತಿದೆ.

ಇದಲ್ಲದೇ ವಿಧಾನಸಭಾ ಕ್ಷೇತ್ರವಾರು ಸಮೀಕ್ಷೆಯ ಸೇರಿದಂತೆ ರಾಜ್ಯದ ವಿವಿಧ ಜಾತಿಗಳ ಬಗ್ಗೆ ವರದಿಯಲ್ಲಿ ಮಹತ್ವದ ಅಂಶಗಳನ್ನು ವಿವರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ವರದಿ ಬಹಿರಂಗಗೊಂಡ ನಂತ್ರ ಖಚಿತ ಮಾಹಿತಿ ಹೊರಬೀಳಬೇಕಿದೆ.

ವರ ನಾಪತ್ತೆ- ಮದುವೆ ರದ್ದು.ವರನ ಮೊದಲ ಪತ್ನಿಯಿಂದ ಬೆಳ್ಳಾರೆ ಠಾಣೆಯಲ್ಲಿ ದೂರು

Posted by Vidyamaana on 2023-02-09 08:42:58 |

Share: | | | | |


ವರ ನಾಪತ್ತೆ- ಮದುವೆ ರದ್ದು.ವರನ ಮೊದಲ ಪತ್ನಿಯಿಂದ ಬೆಳ್ಳಾರೆ ಠಾಣೆಯಲ್ಲಿ ದೂರು

 ಸುಳ್ಯದ ಪುರಭವನದಲ್ಲಿಫೆ 9 ನಡೆಯಬೇಕಾಗಿದ್ದ ಮದುವೆಯೊಂದು ವರ ಬಾರದ ಕಾರಣ ರದ್ದುಗೊಂಡ ಘಟನೆ ವರದಿಯಾಗಿದ್ದು, ವರನ ಮೊದಲ ಪತ್ನಿ ಗಂಡನ ಮೇಲೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ದೂರು ನೀಡಿರುವಳೆಂದು ತಿಳಿದುಬಂದಿದೆ. ಉಬರಡ್ಕ ಗ್ರಾಮದ ಯುವತಿಗೆ ಪುತ್ತೂರು ತಾಲೂಕು ರೆಂಜ ಗ್ರಾಮದ ಗುಮ್ಮಟಗದ್ದೆಯ ಕೃಷ್ಣ ಎಂಬಾತನೊಂದಿಗೆ ಮದುವೆ ನಿಗದಿಯಾಗಿತ್ತು.ಇಂದು ಕೆ.ವಿ.ಜಿ. ಪುರಭವನದಲ್ಲಿ ಮದುವೆ ನಡೆಯಬೇಕಾಗಿತ್ತು. ಮದುಮಗನ ಕಡೆಯಿಂದ ಜನ ಬಂದು ಟೌನ್ ಹಾಲ್ ಅಲಂಕಾರವೂ ನಡೆದಿತ್ತು. ನಿನ್ನೆಯ ದಿನ ವಧುವಿನ ಮನೆಯಲ್ಲಿ ಡಿ.ಜೆ. ಅಳವಡಿಸಿ ಸಂಭ್ರಮಪಡಲಾಗಿತ್ತು. ಇಂದು ವಧುವಿನ ಕಡೆಯವರು ಮದುವೆಗಾಗಿ ಕೆ.ವಿ.ಜಿ. ಟೌನ್ ಹಾಲ್ ಗೆ ಬಂದು ಸಿದ್ಧತೆ ನಡೆಸುತ್ತಿದ್ದರು. 500 ಮಂದಿಗೆ ಭೋಜನದ ವ್ಯವಸ್ಥೆ ಮಾಡಲಾಗುತ್ತಿತ್ತು.ಇದ್ದಕ್ಕಿದ್ದಂತೆ ಮಾಹಿತಿ ಬಂತು - ವರ ಕಾಣುತ್ತಿಲ್ಲ ಎಂದು.ಅವನ ಫೋನ್ ನಂಬರಿಗೆ ಕರೆ ಮಾಡುವಾಗ ಸ್ವಿಚ್ ಆಫ್.ವಧುವಿನ ಕಡೆಯವರು ಕಂಗಾಲು. ವಿಷಯ ತಿಳಿದು ಬಂದದಲಿತ ಮುಖಂಡೆ ಸರಸ್ವತಿಯವರ ನೇತೃತ್ವದಲ್ಲಿ ಸುಳ್ಯಪೋಲೀಸ್ ಠಾಣೆಗೆ ವಿಷಯ ತಿಳಿಸಲಾಯಿತು.ಇಷ್ಟೊತ್ತಿಗೆ ತಿಳಿದು ಬಂದ ಮತ್ತೊಂದು ವಿಷಯವೆಂದರೆ, ಆ ವರನಿಗೆ ಈ ಹಿಂದೆ ಒಂದು ಮದುವೆಯಾಗಿದ್ದು, ಅವನ ಹೆಂಡತಿ ಗಂಡನ ವಿರುದ್ಧ ಬೆಳ್ಳಾರೆ ಪೋಲೀಸ್ ಠಾಣೆಗೆ ಹೋಗಿ ದೂರು ಕೊಡಲು ಹೋಗಿದ್ದಾಳೆ ಎಂದು. ಇನ್ನು ಈ ಮದುವೆ ಆಗುವುದಿಲ್ಲವೆಂದು ತಿಳಿದು ವಧುವಿನ ಕಡೆಯವರು ಸಭಾಂಗಣದಿಂದ ತೆರಳಿದರು. ಸಿದ್ಧಗೊಂಡಿದ್ದ ಊಟವನ್ನು ಹಾಸ್ಟೆಲ್ ಗಳಿಗೆ ಕೊಡುವುದೆಂದು ನಿರ್ಧರಿಸಿದರು.

ಪುತ್ತೂರು : ಸ್ವಾಗತ್ ಬೇಕರಿ ಮಾಲಕ ಜಯರಾಮ್ ಶೆಟ್ಟಿ ನಿಧನ

Posted by Vidyamaana on 2023-06-09 06:32:29 |

Share: | | | | |


ಪುತ್ತೂರು : ಸ್ವಾಗತ್ ಬೇಕರಿ ಮಾಲಕ ಜಯರಾಮ್ ಶೆಟ್ಟಿ ನಿಧನ

ಪುತ್ತೂರು : ಅರುಣ್ ಥೀಯೇಟರ್ ಸಮೀಪ ಹಲವು ವರುಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ‘ಸ್ವಾಗತ್ ಬೇಕರಿ’ ಮಾಲಕ ಜಯರಾಮ್ ಶೆಟ್ಟಿ (72) ನಿಧನರಾದರುಸಾಮೆತ್ತಡ್ಕ ನಿವಾಸಿ ಜಯರಾಮ್ ಶೆಟ್ಟಿ ರವರು ಕೆಲ ಸಮಯಗಳಿಂದ ಅನಾರೋಗ್ಯದಿಂದಿದ್ದರು. ಮೇ.9 (ಇಂದು) ನಿಧನರಾದರು.

ಮೃತರು ಪತ್ನಿ, ಮಕ್ಕಳು, ಅಳಿಯ, ಸೊಸೆ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಕಾರಿಂಜೇಶ್ವರ ದೇವಸ್ಥಾನದ ಸುತ್ತ ಗಣಿಗಾರಿಕೆ ನಿಷೇಧ ರಾಜ್ಯ ಸರಕಾರದ ಮಹತ್ವದ ಆದೇಶಕ್ಕೆ ಇದುವೇ ಕಾರಣ...!

Posted by Vidyamaana on 2023-03-14 09:32:15 |

Share: | | | | |


ಕಾರಿಂಜೇಶ್ವರ ದೇವಸ್ಥಾನದ ಸುತ್ತ ಗಣಿಗಾರಿಕೆ ನಿಷೇಧ  ರಾಜ್ಯ ಸರಕಾರದ ಮಹತ್ವದ ಆದೇಶಕ್ಕೆ ಇದುವೇ ಕಾರಣ...!

ಬಂಟ್ವಾಳ: ಮಹತ್ವದ ಬೆಳವಣಿಗೆಯಲ್ಲಿ ಐತಿಹಾಸಿಕ ಖ್ಯಾತಿಯ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸುತ್ತಲಿನ ೨ ಕಿ.ಮೀ. ಪರಿಸರದಲ್ಲಿ ಯಾವುದೇ ಗಣಿಗಾರಿಕೆ ಅಥವಾ ಕ್ರಷರ್ ಗಣಿಗಾರಿಕೆಯನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶಿಸಿದೆ.

ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತಲಿನ ೨ ಕಿಲೋ ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳಿಗೆ ಕಾಯ್ದಿರಿಸಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಆದ್ದರಿಂದ ಸುತ್ತಲಿನ ೨ ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಗಾರಿಕೆ ಮಾಡುವಂತಿಲ್ಲ ಎಂದು ಆದೆಶದಲ್ಲಿ ತಿಳಿಸಲಾಗಿದೆ‌.

ಕಳೆದ ಕೆಲ ವರ್ಷಗಳಿಂದ ಈ ಭಾಗದಲ್ಲಿ ಅವ್ಯಾಹತವಾಗಿ ಗಣಿಗಾರಿಕೆ ನಡೆಯುತ್ತಿತ್ತು. ಇದರಿಂದಾಗಿ ಧಾರ್ಮಿಕ ಹಾಗೂ ಐತಿಹಾಸಿಕ ಪ್ರಾಧಾನ್ಯತೆ ಹೊಂದಿರುವ ಶ್ರೀ ಕಾರಿಂಜೇಶ್ವರ ದೇವಸ್ಥಾನ ಅಪಾಯವನ್ನು ಎದುರು ನೋಡುವಂತಾಗಿತ್ತು. ಆದ್ದರಿಂದ ಹಿಂದೂ ಜಾಗರಣಾ ವೇದಿಕೆ ಬಂಟ್ವಾಳ ಪ್ರಬಲ ವಿರೋಧವನ್ನು ವ್ಯಕ್ತಪಡಿಸಿತ್ತು. ಹಿಂದೂ‌ ಪರ ಸಂಘಟ‌ನೆಗಳು ಹಾಗೂ ಭಕ್ತರು ಹೋರಾಟಕ್ಕೆ ಸಾಥ್ ನೀಡಿದ್ದರು. ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಸಮಸ್ಯೆಯ ಗಂಭೀರತೆ ಅರಿತು, ರಾಜ್ಯ ಸರಕಾರದಿಂದ ಆದೇಶ ಹೊರಡಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಇದೀಗ ರಾಜ್ಯ ಸರ್ಕಾರದ ಆದೇಶ ಸ್ಥಳೀಯರಿಗೆ ನಿರಾಳತೆಯನ್ನು ನೀಡಿದೆ.

ಜಿ20 ಶೃಂಗಸಭೆಗೆ ಪಾಲ್ಗೊಳ್ಳುವ -ಗೈರಾಗುವ ನಾಯಕರ ಪಟ್ಟಿ ಇಲ್ಲಿದೆ

Posted by Vidyamaana on 2023-09-08 15:54:34 |

Share: | | | | |


ಜಿ20 ಶೃಂಗಸಭೆಗೆ ಪಾಲ್ಗೊಳ್ಳುವ -ಗೈರಾಗುವ ನಾಯಕರ ಪಟ್ಟಿ ಇಲ್ಲಿದೆ

ನವದೆಹಲಿ: ಬಹುನಿರೀಕ್ಷೆಯ ಜಿ20 ಶೃಂಗಸಭೆಯು ಇದೇ ವಾರಾಂತ್ಯದಲ್ಲಿ ಸೆ.9 ಮತ್ತು 10ಎಂದು ರಾಷ್ಟ್ರ ರಾಜಧಾನಿಯ ದೆಹಲಿಯಲ್ಲಿ ನಡೆಯಲಿದೆ. ಈ ಸಂಬಂಧ ಅಗತ್ಯ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.ಶೃಂಗಸಭೆ ಸಲುವಾಗಿ ವಿಶ್ವದ ಕೆಲವು ಶಕ್ತಿಶಾಲಿ ಹಾಗೂ ಪ್ರಭಾವಿ ನಾಯಕರುಗಳು ಭಾರತಕ್ಕೆ ಆಗಮಿಸಲಿದ್ದಾರೆ.ಅಮೆರಿಕಾ (US) ಅಧ್ಯಕ್ಷ ಜೋ ಬೈಡೆನ್, ಇಂಗ್ಲೆಂಡ್ (UK) ಪ್ರಧಾನಿ ರಿಷಿ ಸುನಕ್ ಸೇರಿದಂತೆ ಇನ್ನಿತರ ರಾಷ್ಟ್ರಗಳ ಮುಖ್ಯಸ್ಥರು ವರ್ಷದ ಪ್ರಮುಖ ಜಾಗತಿಕ ಕೂಟಗಳಲ್ಲಿ ಒಂದಾಗಲಿದ್ದಾರೆ. ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು, ಆರ್ಥಿಕ ಕುಸಿತ, ಇಂದನ ಬೆಲೆ ಸೇರಿದಂತೆ ಜಾಗತಿಕ ವಿಚಾರಗಳ ಕುರಿತು ಎರಡು ದಿನ ಚರ್ಚೆ ನಡೆಸಲಿದ್ದಾರೆ.


ಹಾಗಾದರೆ ಭಾರತದಲ್ಲಿಯ ನಡೆಯುತ್ತಿರುವ ಇಂಥಹ ಮಹತ್ವ ಸಮ್ಮೇಳನಕ್ಕೆ ಯಾವ ಗಣ್ಯರು ಹಾಜರಾಗುತ್ತಾ, ಯಾರು ಗೈರಾಗುತ್ತಿದ್ದಾರೆ ಎಂಬ ಮಾಹಿತಿ ಇಲ್ಲಿ ತಿಳಿಯಬಹುದಾಗಿದೆ.

G20 ಶೃಂಗಸಭೆಯಲ್ಲಿ ಭಾಗವಹಿಸುವವರ ವಿವರ

ಅಮೆರಿಕಾ (US) ಜೋ ಬೈಡೆನ್ ಅವರು ಇಂದು ಸೆ. 8ರಂದು ನವದೆಹಲಿಗೆ ಆಗಮಿಸಲಿದ್ದಾರೆ. ಅವರು ಸಮ್ಮೇಳನದಲ್ಲಿ ಪಾಲ್ಗೊಳ್ಳುವುದು ಖಚಿತವಾಗಿದೆ. ಅವರು ಸಭೆಯಲ್ಲಿ ಉಕ್ರೇನ್‌ನಲ್ಲಿನ ಯುದ್ಧದ ಸಾಮಾಜಿಕ ಪರಿಣಾಮ, ಶುದ್ಧ ಶಕ್ತಿಯ ಪರಿವರ್ತನೆ, ಹವಾಮಾನ ಬದಲಾವಣೆಗಳ ವಿರುದ್ಧದ ಹೋರಾಟ ಹಾಗೂ ಬಡತನದ ನೀಗಿಸಲು ಬಹುಪಕ್ಷೀಯ ಬ್ಯಾಂಕುಗಳ ಸಾಮರ್ಥ್ಯ ಹೆಚ್ಚಳ ವಿಚಾರಗಳ ಕುರಿತು ಅವರು ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ.* ಇಂಗ್ಲೆಂಡ್ (UK) ಅಧ್ಯಕ್ಷ ರಿಷಿ ಸುನಕ್ ಅವರು ಪ್ರಧಾನ ಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಸ್ವದೇಶ ಭಾರತಕ್ಕೆ ಆಗಮಿಸುತ್ತಿದ್ದಾರೆ. ಅವರು ನವದೆಹಲಿಯಲ್ಲಿ ನಾಳೆಯಿಂದ ಎರಡು ದಿನ ನಡೆಯಲಿರುವ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.


* ಜಪಾನ್ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ಅವರ ಆಗಮನ ಸಹ ಖಚಿತವಾಗಿದೆ. G7 ನ ಪ್ರಸ್ತುತ ಅಧ್ಯಕ್ಷರಾಗಿ ಉಕ್ರೇನ್ ಯುದ್ಧಕ್ಕಾಗಿ ರಷ್ಯಾ ವಿರುದ್ಧ ಅವರು ಟೀಕಿಸುವ ಸಾಧ್ಯತೆಗಳು ಇವೆ.


* ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಪ್ರಸ್ತುತ ಇಂಡೋನೇಷ್ಯಾದಲ್ಲಿದ್ದಾರೆ. ಆದರೆ G20 ಶೃಂಗಸಭೆಗಾಗಿ ನಾಳೆ ಸೆಪ್ಟೆಂಬರ್ 9ಕ್ಕೆ ಅವರು ಆಗಮಿಸಲಿದ್ದಾರೆ ಎಂದು ಅವರು ಕಚೇರಿ ಮಾಹಿತಿ ನೀಡಿದೆ.


* ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಜಿ20 ಶೃಂಗಸಭೆಯಲ್ಲಿ ಭಾಗವಹಿಸುವುದು ಪಕ್ಕಾ ಆಗಿದೆ. ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆಗಳು ಇವೆ.


* ಭಾರತ, ಇಂಡೋನೇಷ್ಯಾ ಹಾಗೂ ಫಿಲಿಪೈನ್ಸ್ ‌ಒಳಗೊಂಡ ಮೂರು ದೇಶಗಳ ಪ್ರವಾಸದ ಭಾಗವಾಗಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಸದರಿ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.* ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಸಹ ನಾಳೆ ರಾಷ್ಟ್ರ ರಾಜಧಾನಿಗೆ ಬಂದಿಳಿಯಲಿದ್ದಾರೆ. ರಷ್ಯಾ ಹಾಗೂ ಚೀನಾದ ಅನುಪಸ್ಥಿತಿಯ ಹೊರತಾಗಿಯೂ ಶೃಂಗಸಭೆ ಮಹತ್ವ ಪಡೆದುಕೊಂಡಿದೆ.


* ಅಧ್ಯಕ್ಷ ಯೂನ್ ಸುಕ್ ಯೋಲ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಜೊತೆಗೆ ಉತ್ತರ ಕೊರಿಯಾದ ಪರಮಾಣು ಬೆದರಿಕೆ, ಕ್ಷಿಪಣಿ ಪ್ರಚೋದನೆ ಇನ್ನಿತರ ಕುರಿತು ಸದಸ್ಯರ ರಾಷ್ಟ್ರಗಳ ನಾಯಕರನ್ನು ಒತ್ತಾಯಿಸುವ ಸಾಧ್ಯತೆಯಿದೆ.


* ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಹಾಗೂ ಟರ್ಕಿ ದೇಶದ ಅಧ್ಯಕ್ಷರಾದ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ಸಹ ಶೃಂಗಸಭೆಗೆ ಹಾಜರಿರಲಿದ್ದಾರೆ.

ಶೃಂಗಸಭೆಗೆ ಗೈರಾಗುವವರ ಮಾಹಿತಿ

* ಶೃಂಗಸಭೆಯಲ್ಲಿ ಗೈರು ಆಗುವವರ ಪೈಕಿ ಗಮನಾರ್ಹ ವ್ಯಕ್ತಿ ಎಂದರೆ ಅದು ಚೀನಾ ಅಧ್ಯಕ್ಷ ಲ್ಲಿ ಕ್ಸಿ ಜಿನ್‌ಪಿಂಗ್. ಚೀನಾ ಅಧ್ಯಕ್ಷರ ಅನುಪಸ್ಥಿತಿಯಲ್ಲಿ, ಸ್ಟೇಟ್ ಕೌನ್ಸಿಲ್‌ನ ಚೀನಾದ ಪ್ರಧಾನ ಮಂತ್ರಿ ಲಿ ಕಿಯಾಂಗ್ ಅವರು ದೇಶದ ನಿಯೋಗವನ್ನು ಮುನ್ನಡೆಸಲಿದ್ದಾರೆ. ಚೀನಾ ಗೈರಾಗುತ್ತಿರುವುದು ಇದೇ ಮೊದಲು ಎನ್ನಲಾಗಿದೆ.* ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಈ ವರ್ಷ G20 ಶೃಂಗಸಭೆ ಬರಬೇಕಿತ್ತು. ಆದರೆ ರಷ್ಯಾ ಉಕ್ರೇನ್ ವಿಚಾರವಾಗಿ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ICC) ರಷ್ಯಾದ ಅಧ್ಯಕ್ಷರಿಗೆ ಉಕ್ರೇನ್‌ನಲ್ಲಿ ಯುದ್ಧ ಅಪರಾಧಗಳ ಆರೋಪ ಹೊರಿಸಿ ಬಂಧನ ವಾರಂಟ್ ಹೊರಡಿಸಿದೆ. ಹೀಗಾಗಿ ಅವರು ಗೈರಾಗಲಿದ್ದು, ಅವರ ಪರವಾಗಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಹಾಜರಿರಲಿದ್ದಾರೆ.


* ಸ್ಪೇನ್ ಅಧ್ಯಕ್ಷ ಪೆಡ್ರೊ ಸ್ಯಾಂಚೆಝ್ ಅವರಿಗೆ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಗುರುವಾರ ನಡೆಸಿದ ಆರೋಗ್ಯ ತಪಾಸಣೆಯಲ್ಲಿ ಅವರಿಗೆ ಕೋವಿಡ್-19 ಪಾಸಿಟಿವ್ ಬಂದಿರುವುದು ಗೊತ್ತಾಗಿದೆ. ಈ ಸಂಬಂಧ ಅವರು ಈ ಬಾರಿಗೆ ಜಿ20 ಶೃಂಗಸಭೆಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.


* ಮೆಕ್ಸಿಕೋ ದೇಶದ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಈ ಸಮ್ಮೇಳನಕ್ಕೆ ಹಾಜರಾಗುವುದಿಲ್ಲ ಎಂದು ಅವರ ಕಚೇರಿ ಮಾಹಿತಿ ನೀಡಿದೆ.


ಶೃಂಗಸಭೆಯಲ್ಲಿ ಪಾಲ್ಗೊಳ್ಳುವ G20 ಅಲ್ಲದ ಸದಸ್ಯರ ಪಟ್ಟಿಜಿ20 ರಾಷ್ಟ್ರಗಳ ಸದಸ್ಯರ ಜೊತೆಗೆ ಬಾಂಗ್ಲಾದೇಶ, ಈಜಿಪ್ಟ್, ಒಮನ್, ಮಾರಿಷಸ್, ನೆದರ್ಲ್ಯಾಂಡ್ಸ್, ನೈಜೀರಿಯಾ, ಸಿಂಗಾಪುರ, UAE ಹಾಗೂ ಸ್ಪೇನ್ ದೇಶಗಳ ನಾಯಕರು ಸಹ ಭಾರತದ ಆಹ್ವಾನದ ಮೇರೆಗೆ ನವದೆಹಲಿಗೆ ಆಗಮಿಸಲಿದ್ದಾರೆ.ಇವರೊಂದಿಗೆ ಶೃಂಗಸಭೆಯಲ್ಲಿ ವಿಶ್ವಸಂಸ್ಥೆ, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹಾಗೂ ವಿಶ್ವಬ್ಯಾಂಕ್‌ನಂತಹ ಅಂತಾರಾಷ್ಟ್ರೀಯ ಸಂಸ್ಥೆಗಳ ಉನ್ನತ ಆಡಳಿತಗಾರರು ಸಹ ಪಾಲ್ಗೊಳ್ಳಲಿದ್ದಾರೆ.ಇವರೊಂದಿಗೆ ಶೃಂಗಸಭೆಯಲ್ಲಿ ವಿಶ್ವಸಂಸ್ಥೆ, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹಾಗೂ ವಿಶ್ವಬ್ಯಾಂಕ್‌ನಂತಹ ಅಂತಾರಾಷ್ಟ್ರೀಯ ಸಂಸ್ಥೆಗಳ ಉನ್ನತ ಆಡಳಿತಗಾರರು ಸಹ ಪಾಲ್ಗೊಳ್ಳಲಿದ್ದಾರೆ.

ನಾಪತ್ತೆಯಾಗಿದ್ದ ಕುಂಬ್ರ ನಿವಾಸಿ ಉಮ್ಮರ್ ಪತ್ತೆ

Posted by Vidyamaana on 2023-07-03 01:48:04 |

Share: | | | | |


ನಾಪತ್ತೆಯಾಗಿದ್ದ ಕುಂಬ್ರ ನಿವಾಸಿ ಉಮ್ಮರ್ ಪತ್ತೆ


ಪುತ್ತೂರು: ಒಳಮೊಗ್ರು ಗ್ರಾಮದ ಕುಂಬ್ರ ನಿವಾಸಿ ಉಮ್ಮರ್ ಎಂಬವರು ಜು. 1ರಂದು ದಿಡೀರನೆ ನಾಪತ್ತೆಯಾಗಿದ್ದು, ಇದೀಗ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. 

ಜು. 1 ರಂದು ಮಧ್ಯಾಹ್ನ 3 ಗಂಟೆಯವರೆಗೆ ಪುತ್ತೂರಿನಲ್ಲಿದ್ದ ಇವರು ಆ ಬಳಿಕ ನಾಪತ್ತೆಯಾಗಿದ್ದು ಮೊಬೈಲ್ ಸ್ವಿಚಾಫ್ ಆಗಿತ್ತು.

ಇವರ ಮಗನ ಮದುವೆ ಜು. 3ರಂದು ನಡೆಯಲಿದ್ದು, ಜು. 2ರಂದು ನಡೆಯಬೇಕಿದ್ದ ಮದರಂಗಿ ರದ್ದು ಮಾಡಲಾಗಿತ್ತು. ಜು 2 ರಂದು ರಾತ್ರಿ ಮಂಗಳೂರಿನಲ್ಲಿ ಪತ್ತೆ ಆಗಿದ್ದಾರೆ.

Recent News


Leave a Comment: