ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುದ್ದಿಗಳು News

Posted by vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 Share: | | | | |


ಮಂಗಳೂರು : ಖಾಸಗಿ ಬಸ್ ನಿರ್ವಾಕರ ನಡುವೆ ಜಗಳ; ಇಬ್ಬರ ಬಂಧನ

Posted by Vidyamaana on 2024-09-06 07:17:20 |

Share: | | | | |


ಮಂಗಳೂರು : ಖಾಸಗಿ ಬಸ್ ನಿರ್ವಾಕರ ನಡುವೆ ಜಗಳ; ಇಬ್ಬರ ಬಂಧನ

ಮಂಗಳೂರು : ತಲಪಾಡಿ - ಮಂಗಳೂರು ನಡುವೆ ಸಂಚರಿಸುವ ಪದ್ಮ ಟ್ರಾವೆಲ್ಸ್ ಬಸ್ ಮತ್ತು ಹೊಸಂಗಡಿ ಜಂಕ್ಷನ್ ನಿಂದ ಮಂಗಳೂರು ನಡುವೆ ಸಂಚರಿಸುವ ಅಸರ್ ಟ್ರಾವೆಲ್ಸ್ ಬಸ್ ನಿರ್ವಾಕರ ನಡುವೆ ಜಗಳ ನಡೆದಿದ್ದು, ಇದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಬಸ್ ನಿರ್ವಾಹಕರಾದ ಅಜಯ್ ಮತ್ತು ವಿಷ್ಣು ಎಂಬವರು ಪರಸ್ಪರ ಹೊಡೆದಾಡಿಕೊಂಡಿದ್ದು,ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿಕ್ಷಕಿಯರಿಂದ ಕಳ್ಳತನ ಆರೋಪ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

Posted by Vidyamaana on 2024-03-17 17:23:49 |

Share: | | | | |


ಶಿಕ್ಷಕಿಯರಿಂದ ಕಳ್ಳತನ ಆರೋಪ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲಕೋಟೆ:ಶಿಕ್ಷಕಿಯರು ವಿದ್ಯಾರ್ಥಿನಿಯ ವಿರುದ್ಧ ಕಳ್ಳತನ ಆರೋಪ ಮಾಡಿ ವಿದ್ಯಾರ್ಥಿನಿಯ ಸಮವಸ್ತ್ರ ಬಿಚ್ಚಿಸಿ ಅವಮಾನವಾಗಿ ವರ್ತಿಸಿದ್ದ ಸಲುವಾಗಿ ಇದರಿಂದ ಮನನೊಂದು ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.ಬಾಗಲಕೋಟೆ ತಾಲೂಕಿನ ಕದಂಪುರ ಗ್ರಾಮದ ಪ್ರೌಢ ಶಾಲೆಯ ಕನ್ನಡ ಶಿಕ್ಷಕಿ ಜಯಶ್ರೀ ಮಿಶ್ರೀಕೋಟಿ, ಮುಖ್ಯಶಿಕ್ಷಕ ಕೆ.ಹೆಚ್.ಮುಜಾವರ ಹಾಗೂ ಇತರೆ ಶಿಕ್ಷಕರು ಶಾಲೆಯಲ್ಲಿ 2 ಸಾವಿರ ರೂಪಾಯಿ ಕಳೆದುಹೋಗಿದೆ ಅಂಥ ಹೇಳಿ, 8ನೇ ತರಗತಿ ಓದುತ್ತಿದ್ದ ದಿವ್ಯಾ ಬಾರಕೇರ ಎನ್ನುವ ವಿದ್ಯಾರ್ಥಿನಿಯ ಬಳಿಯಲ್ಲಿ ಅಮಾನೀಯವಾಗಿ ವರ್ತನೆ ಮಾಡಿದ್ದಾರೆ ಎನ್ನಲಾಗಿದೆ.ಇದಲ್ಲದೇ ವಿದ್ಯಾರ್ಥಿನಿಯ ಮೇಲೆ ಸಂಶಯ ಪಟ್ಟು ಶಿಕ್ಷಕಿಯರು ವಿದ್ಯಾರ್ಥಿನಿಯ ಸಮವಸ್ತ್ರ ಬಿಚ್ಚಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಈ ನಡುವೆ ಇದರಿಂದ ಮನನೊಂದ ದಿವ್ಯಾ ಬಾರಕೇರ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಸದ್ಯ ಪ್ರಕರಣ ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿಡಿಓ ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಪಂಚಾಯತ್ ರಾಜ್ ಇಲಾಖೆ- ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪ್ರಾರಂಭ

Posted by Vidyamaana on 2024-03-18 16:52:23 |

Share: | | | | |


ಪಿಡಿಓ ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಪಂಚಾಯತ್ ರಾಜ್ ಇಲಾಖೆ- ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪ್ರಾರಂಭ

ಪುತ್ತೂರು  ಕರ್ನಾಟಕ ಸರಕಾರವು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಓ) 150 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದು ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಮತ್ತು ಆನ್ಲೈನ್ ಮೂಲಕ ಲಿಖಿತ ಪರೀಕ್ಷಾ ತರಬೇತಿಯನ್ನು ಪ್ರಾರಂಭಿಸಲಿದ್ದು 18/03/2024 ಸೋಮವಾರದಿಂದ ಪ್ರವೇಶಾತಿ ಪ್ರಾರಂಭಗೊಳ್ಳಲಿದೆ.


ತರಬೇತಿ ಅವಧಿ ಎರಡುವರೆ ತಿಂಗಳು. ಕಳೆದ ಎರಡುವರೆ ವರ್ಷದಿಂದ ಪೊಲೀಸ್ ,ಅರಣ್ಯ ಇಲಾಖೆ, ಬ್ಯಾಂಕಿಂಗ್, ಕೆ.ಎಂ.ಎಫ್ ,ಶಿಕ್ಷಕರ ನೇಮಕಾತಿ ಸೇರಿದಂತೆ 116 ಎಷ್ಟು ಅಭ್ಯರ್ಥಿಗಳು ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಸರಕಾರಿ ಹುದ್ದೆಗಳನ್ನು ಏರಿರುತ್ತಾರೆ. ಕರ್ನಾಟಕ ಸರಕಾರವು ಇತ್ತೀಚೆಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿರುವ ಗ್ರಾಮ ಆಡಳಿತ ಅಧಿಕಾರಿ(VAO) ಹುದ್ದೆಗಳಿಗೂ ಅಕಾಡೆಮಿಯಲ್ಲಿ ತರಬೇತಿ ಪ್ರಾರಂಭವಾಗಿದ್ದು, ಸದ್ಯ ಕರೆದಿರುವ ಪಿಡಿಓ ಹುದ್ದೆಗಳಿಗೆ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದೆ.


ನೇರ ತರಗತಿಗಳು – ಬೆಳಗ್ಗೆ 9:30 ರಿಂದ ಮಧ್ಯಾಹ್ನ 1:00 ರವರೆಗೆ (ವಾರದ 5 ದಿನ) ಆನ್ಲೈನ್ ತರಗತಿಗಳು – ರಾತ್ರಿ 7:00 ರಿಂದ 8:00 ರವರೆಗೆ (ವಾರದ ಎಲ್ಲಾ ದಿನ) ಉದ್ಯೋಗಸ್ಥರಿಗೆ, ವಿದ್ಯಾರ್ಥಿಗಳಿಗೆ , ಗೃಹಿಣಿಯರಿಗಾಗಿ ಅನುಕೂಲವಾಗುವಂತೆ ನಡೆಯುತ್ತವೆ.


ಪಿಡಿಓ ನೇಮಕಾತಿಯ ಅರ್ಹತೆಗಳು :-

ವಿದ್ಯಾರ್ಹತೆ : ಯಾವುದೇ ಪದವಿ

ವೇತನ : 70,000 ವರೆಗೆ

ಹುದ್ದೆಗಳು :150

ವಯಸ್ಸಿನ ಮಿತಿ :18 ರಿಂದ 40 (ಸಾಮಾನ್ಯ 35 , ಒ.ಬಿ.ಸಿ 38 , SC,ST 40)

ನೇಮಕಾತಿ ಪ್ರಕ್ರಿಯೆ : ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ

ಅರ್ಜಿ ಪ್ರಾರಂಭ ದಿನಾಂಕ : 15/04/2024 ರಿಂದ 15/05/2024

ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು: ಫೋಟೋ ,ಅಂಕಪಟ್ಟಿ ,ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ,ಕನ್ನಡ ಮಾಧ್ಯಮ ಮತ್ತು ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ.


ತರಬೇತಿಗಾಗಿ ಪ್ರವೇಶಾತಿ ಪಡೆಯಲು ಇಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ :

ವಿದ್ಯಾಮಾತಾ ಅಕಾಡೆಮಿ – ಹಿಂದೂಸ್ತಾನ್ ಕಾಂಪ್ಲೆಕ್ಸ್,1 ನೇ ಮಹಡಿ ,ಎ.ಪಿ.ಎಂ.ಸಿ ರಸ್ತೆ ಪುತ್ತೂರು.

9620468869/ 9148935808

ಸುಳ್ಯ ಶಾಖೆ : TAPCMS ಬಿಲ್ಡಿಂಗ್ ,ಕಾರ್ ಸ್ಟ್ರೀಟ್

9448527606

ಕಲ್ಲರ್ಪೆಯಲ್ಲಿ ಕಾರು, ಆ್ಯಕ್ಟೀವ್ ಅಪಘಾತ: ಸವಾರ ಇಸ್ಮಾಯಿಲ್ ನೈತ್ತಾಡಿ ಮೃತ್ಯು

Posted by Vidyamaana on 2023-06-20 04:29:42 |

Share: | | | | |


ಕಲ್ಲರ್ಪೆಯಲ್ಲಿ ಕಾರು, ಆ್ಯಕ್ಟೀವ್ ಅಪಘಾತ: ಸವಾರ ಇಸ್ಮಾಯಿಲ್ ನೈತ್ತಾಡಿ ಮೃತ್ಯು

ಪುತ್ತೂರು: ಕಾರು ಹಾಗೂ ಆ್ಯಕ್ಟೀವಾ ನಡುವೆ ನಡೆದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಕಲ್ಲರ್ಪೆಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ನೈತ್ತಾಡಿ ಮೂಲದ ನಿವಾಸಿಯಾಗಿರುವ ಇಸ್ಮಾಯಿಲ್ . ಅಡಿಕೆ ವ್ಯಾಪಾರಸ್ಥರಾಗಿರುವ ಇವರು, ಅಜ್ಜಿಕಟ್ಟೆ ಜಮಾತ್ ಕಮಿಟಿ ಸದಸ್ಯರಾಗಿದ್ದಾರೆ.

ಮಂಗಳವಾರ ಬೆಳಿಗ್ಗೆ ಸುಮಾರು 7 ಗಂಟೆಯ ಹೊತ್ತಿಗೆ ಅಪಘಾತ ಸಂಭವಿಸಿದ್ದು, ಸವಾರ ಗಂಭೀರ ಗಾಯಗೊಂಡಿದ್ದರು. ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುವ ಹಾದಿಯಲ್ಲಿ ಕೊನೆಯುಸಿರೆಳೆದಿದ್ದಾರೆ.ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಹಾಗೂ ಓರ್ವ ಪುತ್ರ ಸಹೋದರ ಸಹೋದರಿಯರನ್ನು ಅಗಲಿದ್ದಾರೆ.

ಡಿ.31ರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಸಾವು

Posted by Vidyamaana on 2024-01-07 19:51:34 |

Share: | | | | |


ಡಿ.31ರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಸಾವು

ಪುತ್ತೂರು : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿಯಲ್ಲಿ ಡಿ.31ರಂದು ನಡೆದ ಹೋಂಡಾ ಆಕ್ಟೀವಾ ಹಾಗೂ ಕಾರು ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕ್ಟೀವಾ ಸಹ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.ಇರ್ದೆ ಗ್ರಾಮದ ಉಪ್ಪಳಿಗೆ ನಾರಾಯಣ ನಾಯ್ಕ ಮತ್ತು ಕಲ್ಯಾಣ ದಂಪತಿ ಪುತ್ರ ಪ್ರವೀಣ (18) ಮೃತ ಯುವಕ.ಡಿ.31 ರಂದು ರಾತ್ರಿ ತನ್ನ ಪರಿಚಿತರೊಂದಿಗೆ ಪುತ್ತೂರಿಗೆ ಬಂದಿದ್ದ ಪ್ರವೀಣ್ ಮನೆಗೆ ಹಿಂತಿರುಗುವ ವೇಳೆ ಮುಕ್ರಂಪಾಡಿ ಸಮೀಪಿಸುತ್ತಿದ್ದಂತೆ ಎದುರುಗಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.


ಘಟನೆಯಿಂದ ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದ ಪ್ರವೀಣ್ ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜ್ಯೋತಿಯಲ್ಲಿರುವ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರವೀಣ್ ಜ.7 ರಂದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.


ಮೃತ ಪ್ರವೀಣ ನ ಕಣ್ಣು, ಲಿವರ್ ಹಾಗೂ ಕಿಡ್ನಿ ದಾನ ಮಾಡಲು ಮನೆಯವರು ಒಪ್ಪಿಗೆ ನೀಡಿರುವುದಾಗಿ ವರದಿಯಾಗಿದೆ.

ಬೆಳ್ತಂಗಡಿ: ವಿದ್ಯುತ್ ತಗುಲಿ ಕಬಡ್ಡಿ ಆಟಗಾರ ಹರೀಶ ಮೃತ್ಯು

Posted by Vidyamaana on 2024-07-15 16:01:09 |

Share: | | | | |


ಬೆಳ್ತಂಗಡಿ: ವಿದ್ಯುತ್ ತಗುಲಿ ಕಬಡ್ಡಿ ಆಟಗಾರ ಹರೀಶ ಮೃತ್ಯು

ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾತಕ್ಕೆ ಬಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

Recent News


Leave a Comment: