ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಮಂಗಳೂರು- ಪುತ್ತೂರು: ವಿದ್ಯುತ್ ಚಾಲಿತ ರೈಲು ಪ್ರಾಯೋಗಿಕ ಓಡಾಟ

Posted by Vidyamaana on 2023-07-29 03:53:35 |

Share: | | | | |


ಮಂಗಳೂರು- ಪುತ್ತೂರು: ವಿದ್ಯುತ್ ಚಾಲಿತ ರೈಲು ಪ್ರಾಯೋಗಿಕ ಓಡಾಟ

ಮಂಗಳೂರು, ಜು.28: ನಗರ ಹೊರವಲಯದ ಪಡೀಲ್‌ನಿಂದ ಪುತ್ತೂರು ತನಕದ ವಿದ್ಯುದ್ದೀಕರಣಗೊಂಡ ರೈಲು ಮಾರ್ಗದಲ್ಲಿ ವಿದ್ಯುತ್ ಚಾಲಿತ ರೈಲು ಇಂಜಿನ್‌ನ ಪ್ರಾಯೋಗಿಕ ಓಡಾಟವು ಶುಕ್ರವಾರ ನಡೆಯಿತು.


ಮಧ್ಯಾಹ್ನ ಸುಮಾರು 2:30ಕ್ಕೆ ಪಡೀಲ್‌ನಿಂದ ಹೊರಟ ರೈಲು ಸಂಜೆ 4ಕ್ಕೆ ಪುತ್ತೂರು ತಲುಪಿತು. ಹಿಮ್ಮುಖ ದಿಕ್ಕಿನಲ್ಲಿ ಚಲಿಸುವಾಗ ವೇಗ ಪ್ರಯೋಗ ನಡೆಸಲಾಯಿತು ಎಂದು ಮೈಸೂರು ವಿಭಾಗದ ಹಿರಿಯ


ವಿಭಾಗೀಯ ಇಂಜಿನಿಯರ್ (ಇಲೆಕ್ನಿಕಲ್) ಸೌಂದ‌


ರಾಜನ್ ಮಾಹಿತಿ ನೀಡಿದ್ದಾರೆ.


ಈ ಮಾರ್ಗದಲ್ಲಿ ವಿದ್ಯುದ್ದೀಕರಣ ಕಾಮಗಾರಿಯು ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಆರಂಭಿಸಲಾಗಿತ್ತು. ಪ್ರಾಯೋಗಿಕ ಓಡಾಟ ನಡೆಸಿದ ವಿದ್ಯುದ್ದೀಕರ ಗೊಂಡ ಮಾರ್ಗದಲ್ಲಿ ರೈಲುಗಳನ್ನು ಓಡಿಸಲು ಟ್ರ್ಯಾಕ್ ಫಿಟ್ ಪ್ರಮಾಣಪತ್ರ ಶೀಘ್ರ ದೊರೆಯಬಹುದು ಎಂದು ರಾಜನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆನೈರುತ್ಯ ರೈಲ್ವೆ ಪ್ರಿನ್ಸಿಪಲ್ ಚೀಫ್ ಇಲೆಕ್ಟಿಕಲ್ ಇಂಜಿನಿಯರ್ ಜೈಪಾಲ್ ಸಿಂಗ್ ಪ್ರಾಯೋಗಿಕ ಓಡಾಟ ಮತ್ತು ಪರಿಶೀಲನೆಯ ನೇತೃತ್ವ ವಹಿಸಿದ್ದರು.


*ಸುಬ್ರಹ್ಮಣ್ಯ ರಸ್ತೆ ನಿಲ್ದಾಣ, ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ (ನೆಟ್ಟಣ) ವಿಭಾಗದಲ್ಲಿ (48 ಮಾರ್ಗ ಕಿ.ಮೀ) ವಿದ್ಯುದ್ದೀಕರಣ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ವರ್ಷದ ಸೆಪ್ಟೆಂಬರ್ ಅಥವಾ ಅಕ್ಟೋಬರ್‌ಗೆ ಕಾಮಗಾರಿ ಪೂರ್ಣಗೊಳ್ಳಬಹುದು. ಸುಬ್ರಹ್ಮಣ್ಯ ರಸ್ತೆ ಮತ್ತು ಹಾಸನ ನಡುವಿನ ಮಂಗಳೂರು-ಹಾಸನ ವಿಭಾಗದ ವಿದ್ಯುದ್ದೀಕರಣಕ್ಕೆ ಇನ್ನೂ ಸ್ವಲ್ಪಸಮಯ ಬೇಕಾಗಬಹುದು ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.


ಸುಬ್ರಹ್ಮಣ್ಯ ರಸ್ತೆ ನಿಲ್ದಾಣದವರೆಗೆ ವಿದ್ಯುದ್ದೀಕರಣ ಕಾರ್ಯವು ಪೂರ್ಣಗೊಂಡಾಗ, ಸ್ಥಳೀಯ ರೈಲುಗಳನ್ನು ಇಲೆಕ್ಟಿಕಲ್ ಲೊಕೊಗಳಿಂದ ನಿರ್ವಹಿಸಬಹುದಾಗಿದೆ.


ಮೈಸೂರು-ಹಾಸನ-ಮಂಗಳೂರು ಮಾರ್ಗವು 2021ರ ಜುಲೈನಲ್ಲಿ ಅರಸೀಕೆರೆ-ಹಾಸನ (47 ಕಿಮೀ) ಸಹಿತ ಮೈಸೂರು-ಹಾಸನ- ಮಂಗಳೂರು ಮಾರ್ಗವನ್ನು (300 ಕಿಮೀ) ವಿದ್ಯುದ್ದೀಕರಿಸುವ ಗುತ್ತಿಗೆಯನ್ನುಒದಗಿಸಲಾಗಿತ್ತು. ಜೂನ್ 2024ರೊಳಗೆ ಈ ಯೋಜನೆ ಪೂರ್ಣಗೊಳಿಸಲು2018ರ ಕೇಂದ್ರ ಬಜೆಟ್‌ನಲ್ಲಿ 315 ಕೋ.ರೂ ನಿಗದಿಪಡಿಸಲಾಗಿತ್ತು

ಆ.11ಕ್ಕೆ ಪುತ್ತೂರು ಬಿಲ್ಲವ ಮಹಿಳಾ ವೇದಿಕೆ ನೇತೃತ್ವದಲ್ಲಿ ಆಟಿದ ನೆಂಪುದ ಕೂಟ - ಸನ್ಮಾನ

Posted by Vidyamaana on 2024-08-10 22:18:07 |

Share: | | | | |


ಆ.11ಕ್ಕೆ  ಪುತ್ತೂರು ಬಿಲ್ಲವ ಮಹಿಳಾ ವೇದಿಕೆ ನೇತೃತ್ವದಲ್ಲಿ ಆಟಿದ ನೆಂಪುದ ಕೂಟ - ಸನ್ಮಾನ

ಪುತ್ತೂರು: ಸಾಧಕರನ್ನು ಸನ್ಮಾನಿಸುವಾಗ ಆ ಸನ್ಮಾನ ಅವರಿಗೆ ಮಾತ್ರವಲ್ಲ ಅವರ ಸಾಧನೆಗೆ ಕಾರಣಕರ್ತರಾದ ಇಡಿ ಕುಟುಂಬಕ್ಕೆ ಸಲ್ಲಬೇಕೆಂಬ ನಿಟ್ಟಿನಲ್ಲಿ ಸಾಧಕರ ಜೊತೆ ಅವರ ಕುಟುಂಬವನ್ನೂ ಸನ್ಮಾನಿಸುವ ವಿಶೇಷ ಕಾರ್ಯಕ್ರಮ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಮೂಲಕ ಬಿಲ್ಲವ ಮಹಿಳಾ ವೇದಿಕೆ ನೇತೃತ್ವದಲ್ಲಿ ಆ.11ರಂದು ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯುವ ಆಟಿದ ನೆಂಪುದ ಕೂಟ ಕಾರ್ಯಕ್ರಮದಲ್ಲಿ ನಡೆಯಲಿದೆ ಕಾರ್ಯಕ್ರಮದಲ್ಲಿ ಕುಟುಂಬವನ್ನೇ ಸನ್ಮಾನಿಸುವ ಚಿಂತನೆಗೆ ಪ್ರಥಮ ಹೆಜ್ಜೆ ಬಿಲ್ಲವ ಸಂಘ ಇಟ್ಟಿದೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಅವರು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಆ.11ಕ್ಕೆ ವಿಶೇಷ ರೀತಿಯಲ್ಲಿ ಆಟಿದ ನೆಂಪುದ ಕೂಟ ಎಂಬ ಕಾರ್ಯಕ್ರಮದಲ್ಲಿ ಬೆಳಗ್ಗಿನಿಂದ ಮಧ್ಯಾಹ್ನದ ತನಕ ಕಾರ್ಯಕ್ರಮ ನಡೆಯಲಿದೆ. ಬ್ರಹ್ಮಶ್ರೀ ನಾರಾಯಣಗುರುಗಳು ವಿದ್ಯೆಗೆ ಆದ್ಯತೆ ನೀಡಿದಂತೆ ಸಂಘದ ವಿದ್ಯಾರ್ಥಿವೇತನ ಪಡೆದು ಉನ್ನತ ಉದ್ಯೋಗ ಪಡೆದದವರನ್ನು ಕುಟುಂಬ ಸಮೇತ ಸನ್ಮಾನಿಸಲಾಗುವುದು.

ಪುತ್ತೂರು : ಪೊಲೀಸ್ ದೌರ್ಜನ್ಯದಿಂದ ಹಲ್ಲೆಗೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಆಶಾ ತಿಮ್ಮಪ್ಪ ಗೌಡ

Posted by Vidyamaana on 2023-05-18 10:43:00 |

Share: | | | | |


ಪುತ್ತೂರು : ಪೊಲೀಸ್ ದೌರ್ಜನ್ಯದಿಂದ ಹಲ್ಲೆಗೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಆಶಾ ತಿಮ್ಮಪ್ಪ ಗೌಡ

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಯುವಕರ ಆರೋಗ್ಯವನ್ನು ಪುತ್ತೂರು ವಿಧಾನ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪ ಗೌಡ ರವರು ವಿಚಾರಿಸಿದರು.ಆಸ್ಪತ್ರೆಗೆ ಭೇಟಿ ನೀಡಿದ ಆಶಾ ತಿಮ್ಮಪ್ಪ ಗೌಡ ರವರು ಯುವಕರ ಆರೋಗ್ಯ ವಿಚಾರಿಸಿದರು.ಈ ವೇಳೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಕುರಿಯ : ಸಿಡಿಲು ಬಡಿದು ಮನೆಗೆ ಹಾನಿ

Posted by Vidyamaana on 2023-11-04 09:06:48 |

Share: | | | | |


ಕುರಿಯ : ಸಿಡಿಲು ಬಡಿದು ಮನೆಗೆ ಹಾನಿ

ಪುತ್ತೂರು : ಪುತ್ತೂರು ಸುತ್ತಮುತ್ತಲ ಗ್ರಾಮ ಗಳಲ್ಲಿ ನ 3 ರಂದು ರಾತ್ರಿ  ಗುಡುಗು, ಮಿಂಚು ಸಹಿತ ಮಳೆ ಸುರಿದಿದ್ದು,ಆರ್ಯಾಪು ಗ್ರಾಮದ ಕುರಿಯ ಅಜಲಾಡಿ ನಿವಾಸಿ ರುಖ್ಯ  ಅವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದೆ.


ಸಿಡಿಲ ಆಘಾತಕ್ಕೆ ಮನೆಯ ವಯರಿಂಗ್‌ ಸಂಪೂರ್ಣ ಕೆಟ್ಟುಹೋಗಿದೆ.ವಿದ್ಯುತ್‌ ಉಪಕರಣಗಳಿಗೆ ಹಾನಿಯಾಗಿ ಅಪಾರ ನಷ್ಟ ಸಂಭವಿಸಿದೆ.

ಸ್ಥಳಕ್ಕೆ ಆರ್ಯಾಪು ಗ್ರಾ.ಪಂ. ಸದಸ್ಯ ಯಾಕುಬ್ ಸಾಹೇಬ್ ಭೇಟಿ ನೀಡಿದರು

ಕಾಂಗ್ರೆಸ್ಸಿನ ಗ್ಯಾರಂಟಿ ಸ್ಕೀಂಗಳಿಂದ ಬಿಜೆಪಿ ಅಸ್ತಿತ್ವಕ್ಕೇ ಗ್ಯಾರಂಟಿ’ ಇಲ್ಲದಾಗಿದೆ

Posted by Vidyamaana on 2023-09-14 04:35:30 |

Share: | | | | |


ಕಾಂಗ್ರೆಸ್ಸಿನ ಗ್ಯಾರಂಟಿ ಸ್ಕೀಂಗಳಿಂದ ಬಿಜೆಪಿ ಅಸ್ತಿತ್ವಕ್ಕೇ ಗ್ಯಾರಂಟಿ’ ಇಲ್ಲದಾಗಿದೆ

ಪುತ್ತೂರು: ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಯ ಕಾರಣಕ್ಕೆ ಬಿಜೆಪಿ ತತ್ತರಿಸಿಹೋಗಿದ್ದು ಅಸ್ತಿತ್ವ ಉಳಿಸುದಕ್ಕೋಸ್ಕರ ಪ್ರತಿಭಟನೆ ಮಾಡಿ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಹೇಳಿದ್ದಾರೆ.

ಸೆ. ೧೩ ರಂದು ಪುತ್ತೂರಿನಲ್ಲಿ ರಾಜ್ಯ ಸರಕಾರದ ವಿರುದ್ದ ಪುತ್ತೂರು ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯನ್ನು ವ್ಯಂಗ್ಯವಾಡಿದ ಬ್ಲಾಕ್ ಅಧ್ಯಕ್ಷರು ಇದು ಪ್ರತಿಭಟನೆಗೋಸ್ಕರ ನಡೆದ ಪ್ರತಿಭಟನೆಯಾಗಿದೆ, ಪುತ್ತೂರಿನಲ್ಲಿ ಬಿಜೆಪಿಗೆ ಉಳಿಗಾಲವಿಲ್ಲದಂತ ಪರಿಸ್ಥಿತಿ ಇದೆ, ಕಾರ್ಯಕರ್ತರಿಲ್ಲದೆ ಬಿಜೆಪಿ ಕಂಗಾಲಾಗಿದೆ, ರಾಜ್ಯದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಜನತೆ ನೆಮ್ಮದಿಯಿಂದ ಇದ್ದಾರೆ ಇದನ್ನು ಸಹಿಸಲು ಬಿಜೆಪಿಗೆ ಆಗುತ್ತಿಲ್ಲ ಈ ಕಾರಣಕ್ಕೆ ರೈತರ ಹೆಸರಿನಲ್ಲಿ ಪ್ರತಿಭಟನೆ ಮಾಡುವುದಕ್ಕೆ ಮುಂದಾಗಿದೆ. ಮುಂದಿನ ಲೋಕಸಭಾ ಚುನಾವಣೆಯ ದೃಷ್ಟಿಯಲ್ಲಿ ಈ ಪ್ರತಿಭಟನಾ ನಾಟಕ ಇಂದು ಪ್ರದರ್ಶನವಾಗಿದೆ ವಿನ ಅವರು ಮಡಿದ ಆರೋಪದಲ್ಲಿ ಎಳ್ಳಷ್ಟು ಸತ್ಯವಿಲ್ಲ ಎಂದು ಹೇಳಿದರು. ರಾಜ್ಯದ ಕಾಂಗ್ರೆಸ್ ಸರಕರದ ಗ್ಯಾರಂಟಿ ಯೋಜನೆಯ ಫಲವಾಗಿ ಇಂದು ರಾಜ್ಯಾದ್ಯಂತ ಬಿಜೆಪಿ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಕುಟುಂಬಕ್ಕೆ ಸೇರ್ಪಡೆಯಗುತ್ತಿದ್ದಾರೆ ಇದೆಲ್ಲವೂ ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಪುತ್ತೂರಿನಲ್ಲಿ ಕಾಂಗ್ರೆಸ್ ಶಾಸಕರ ಅಭಿವೃದ್ದಿ ಕೆಲಸವನ್ನು ಕಂಡು ಬಿಜೆಪಿಗರು ಬೆಚ್ಚಿ ಬಿದ್ದಿದ್ದಾರೆ ಅದರ ಪರಿಣಾಮವೇ ಇಂದು ನಡೆದ ಪ್ರತಿಭಟನೆಯಾಗಿದೆ ಎಂದು ಎಂ ಬಿ ವಿಶ್ವನಾಥ ರೈ ಹೇಳಿದ್ದಾರೆ.

ಉಡುಪಿ: ರಘುಪತಿ ಭಟ್ ಜೊತೆ ಗುರುತಿಸಿಕೊಂಡ ನಾಲ್ವರು ಬಿಜೆಪಿ ಪದಾಧಿಕಾರಿಗಳು ಪಕ್ಷದಿಂದ ಉಚ್ಛಾಟನೆ

Posted by Vidyamaana on 2024-05-31 07:59:03 |

Share: | | | | |


ಉಡುಪಿ: ರಘುಪತಿ ಭಟ್ ಜೊತೆ ಗುರುತಿಸಿಕೊಂಡ ನಾಲ್ವರು ಬಿಜೆಪಿ ಪದಾಧಿಕಾರಿಗಳು ಪಕ್ಷದಿಂದ ಉಚ್ಛಾಟನೆ

ಉಡುಪಿ, ಮೇ 30: ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸುತ್ತಿರುವ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಜೊತೆ ಗುರುತಿಸಿಕೊಂಡಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್ ಸಹಿತ ನಾಲ್ವರು ಬಿಜೆಪಿ ಪದಾಧಿಕಾರಿಗಳನ್ನು ಪಕ್ಷದಿಂದ ಉಚ್ಛಾಚನೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

Recent News


Leave a Comment: