ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ಸುದ್ದಿಗಳು News

Posted by vidyamaana on 2024-07-24 23:15:54 |

Share: | | | | |


ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಮತ್ತೆ ಯಾರ ಕೈಗೂ ಸಿಗದೆ ಮನೆ ಸೇರಿದ ಅನಂತಕುಮಾರ್ ಹೆಗಡೆ

Posted by Vidyamaana on 2024-03-24 13:14:15 |

Share: | | | | |


ಮತ್ತೆ ಯಾರ ಕೈಗೂ ಸಿಗದೆ ಮನೆ ಸೇರಿದ ಅನಂತಕುಮಾರ್ ಹೆಗಡೆ

ಕಾರವಾರ: ಬರೋಬ್ಬರಿ ನಾಲ್ಕೂವರೆ ವರ್ಷಗಳ ಕಾಲ ಯಾರ ಸಂಪರ್ಕಕ್ಕೂ ಬಾರದೆ ಸೈಲೆಂಟ್ ಆಗಿದ್ದ ಉತ್ತರ ಕನ್ನಡ (Uttara Kann

non

a) ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde), ಲೋಕಸಭೆ ಚುನಾವಣೆಗೆ (Lok Sabha Election) ಕೆಲವೇ ತಿಂಗಳು ಬಾಕಿ ಇರುವಂತೆ ಮತ್ತೆ ಆಕ್ಟಿವ್ ಆಗಿದ್ದರು. ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದು ಆರಂಭಿಸಿದ್ದ ಅನಂತಕುಮಾರ್ ಹೆಗಡೆ ಇದೀಗ ಮತ್ತೆ ಯಾರ ಸಂಪರ್ಕಕ್ಕೂ ಸಿಗದೆ ಮನೆ ಸೇರಿದ್ದಾರೆ.ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ಅನಂತಕುಮಾರ್ ಹೆಗಡೆ, ವಿವಾದಾತ್ಮಕ ಹೇಳಿಕೆಗಳ ಮೂಲಕ ಕಾರ್ಯಕರ್ತರನ್ನು ಸೆಳೆಯುವ ಪ್ರಯತ್ನಕ್ಕೆ ಕೈ ಹಾಕಿದ್ದರು. ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಕರ್ನಾಟಕದಿಂದ ಯಾರ ಹೆಸರು ಕೂಡ ಘೋಷಣೆ ಆಗಿರಲಿಲ್ಲ. ಯಾವಾಗ ಬಿಜೆಪಿ 2ನೇ ಪಟ್ಟಿ ಬಿಡುಗಡೆಯಾಯ್ತೋ ಅಂದಿನಿಂದ ಅನಂತಕುಮಾರ್ ಹೆಗಡೆ ಸೈಲೆಂಟ್ ಆಗಿದ್ದಾರೆ.ಈ ಬಾರಿ ಅನಂತಕುಮಾರ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಲಿದೆ ಎಂದು ಹೇಳಲಾಗುತ್ತಿದೆ. ಹೀಗಿದ್ದರೂ ನಾಲ್ಕೂವರೆ ವರ್ಷಗಳ ನಂತರ ಸಾರ್ವಜನಿಕ ರಂಗಕ್ಕೆ ಎಂಟ್ರಿಕೊಟ್ಟ ಹೆಗಡೆ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದರು. ಇದೇ ವಿಶ್ವಾಸದಲ್ಲಿ ಕಾರ್ಯಕರ್ತರ ಸಭೆಗಳನ್ನು ನಿರಂತರವಾಗಿ ನಡೆಸುತ್ತಾ ಬಂದಿದ್ದರು. ಆದರೆ, ಎರಡನೇ ಪಟ್ಟಿಯಲ್ಲಿ ತನ್ನ ಹೆಸರು ಘೋಷಣೆ ಆಗದಿರುವುದನ್ನು ಕಂಡ ಹೆಗಡೆ, ಟಿಕೆಟ್ ಕೈ ತಪ್ಪುವ ಸಾಧ್ಯತೆ ಹಿನ್ನೆಲೆ ಮತ್ತೆ ಯಾರ ಕೈಗೂ ಸಿಗದೆ ಶಿರಸಿ ಪಟ್ಟಣದಲ್ಲಿರುವ ತನ್ನ ನಿವಾಸದಲ್ಲಿದಲ್ಲೇ ಕುಳಿತುಕೊಂಡಿದ್ದಾರೆ.ಶಿರಸಿಯಲ್ಲಿದ್ದರೂ ಯಾವೊಬ್ಬ ಕಾರ್ಯಕರ್ತನನ್ನೂ ಹೆಗಡೆ ಭೇಟಿ ಆಗುತ್ತಿಲ್ಲ. ಮತ್ತೊಮ್ಮೆ ಮೋದಿ ಘೋಷಣೆಯಡಿ ಪ್ರಚಾರ ಆರಂಭಿಸಿದ್ದ ಹೆಗಡೆ, 2ನೇ ಪಟ್ಟಿ ಬಿಡುಗಡೆ ಬಳಿಕ ಒಂದೇ ಒಂದು ಸಭೆಯನ್ನೂ ಮಾಡಿಲ್ಲ.ಯಾರೇ ನಿಂತ್ರೂ ಎಲ್ರೂ ಒಗ್ಗಟ್ಟಾಗಿ ಮತ್ತೆ ಮೋದಿಯನ್ನ ಪ್ರಧಾನಿ ಮಾಡಬೇಕು. ಈಗ ನಾವು ಯಾವುದೇ ಕಾರಣಕ್ಕೂ ವಿರಮಿಸಬಾರದೆಂದು ಕಾರ್ಯಕರ್ತರಿಗೆ ಹೇಳಿದ್ದ ಅನಂತಕುಮಾರ್ ಹೆಗಡೆಯೇ ಇದೀಗ ಕಾರ್ಯಕರ್ತರ ಸಂಪರ್ಕಕ್ಕೆ ಸಿಗದೆ ಮನೆಯಲ್ಲೇ ವಿರಮಿಸಿದ್ದಾರೆ.

ಪುತ್ತೂರು : ಫೆ 29 ಮತ್ತು ಮಾ.01ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ

Posted by Vidyamaana on 2024-02-27 12:04:37 |

Share: | | | | |


ಪುತ್ತೂರು : ಫೆ 29 ಮತ್ತು ಮಾ.01ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ

ಪುತ್ತೂರು: ಫೆ.29 ಮತ್ತು ಮಾ.1ರಂದು ಪಡೀಲು, ಹಾರಾಡಿ,ಚಿಕ್ಕಮುಡ್ನೂರು    ಬನ್ನೂರು ವಠಾರಕ್ಕೆ ನಗರಭೆಯ ಕುಡಿಯುವ ನೀರು ಸರಬರಾಜು ಇರುವುದಿಲ್ಲ. ಪುತ್ತೂರು ನಗರಸಭೆಯ ನೀರು ಸರಬರಾಜು ನೆಕ್ಕಿಲಾಡಿ ಮೇಲ್ಮಟ್ಟದ ಸ್ಥಾವರದಲ್ಲಿ ಜಲಸಿರಿ ಟ್ರಾಂಚ್ -2 ನಲ್ಲಿ ಟ್ರಾನ್ಸ್ ಫಾರ್ಮ‌್ರಗಳ ಮತ್ತು ಪಂಪ್‌ಗಳ ಬದಲಾವಣೆ ಕಾರ್ಯನಿಮಿತ್ತ ನೀರಿನ ಸರಬರಾಜು ಇರುವುದಿಲ್ಲ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಪೌರಾಯುಕ್ತ ಮಧು ಎಸ್ ಮನೋಹರ್ ಅವರು ವಿನಂತಿಸಿದ್ದಾರೆ.

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

Posted by Vidyamaana on 2024-05-03 08:25:04 |

Share: | | | | |


ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

ಬೆಂಗಳೂರು : ಹಾಸನ ರಾಜಕಾರಣಕ್ಕೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕುಟುಂಬದ ವಿರುದ್ಧ ತೊಡೆತಟ್ಟಿದ್ದ ಹಾಸನ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಪ್ರೀತಮ್‌ ಗೌಡ ಅವರು, ಪ್ರಜ್ವಲ್‌ ರೇವಣ್ಣ ಪ್ರಕರಣ ದೇಶಾದ್ಯಂತ ತೀವ್ರ ಬಿರುಗಾಳಿ ಎಬ್ಬಿಸಿದರೂ ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವುದು ಚರ್ಚೆಗೆ ಗ್ರಾಸವಾಗಿದೆ.ತಮ್ಮ ವಾಟ್ಸಾಪ್‌ ನಂಬರ್‌ನಲ್ಲಿ ಆಗಾಗ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಟೇಟಸ್‌ ಅಪ್‌ಡೇಟ್‌ ಮಾಡುತ್ತಿರುವುದನ್ನು ಬಿಟ್ಟರೆ, ಮಾಧ್ಯಮಗಳಿಗೆ ಹೇಳಿಕೆಯನ್ನೂ ಕೊಟ್ಟಿಲ್ಲ. ಪ್ರೀತಮ್‌ ಇದ್ದಕ್ಕಿದ್ದಂತೆ ತಟಸ್ಥರಾದಂತೆ ವರ್ತಿಸುತ್ತಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಶಾಫಿ ಸಅದಿ ರಾಜೀನಾಮೆ

Posted by Vidyamaana on 2023-07-05 15:21:53 |

Share: | | | | |


ಶಾಫಿ ಸಅದಿ ರಾಜೀನಾಮೆ

ಬೆಂಗಳೂರು: ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಜುಲೈ 05 ರಂದು ರಾಜೀನಾಮೆ ಸಲ್ಲಿಸಿದ್ದಾರೆ.

ಕಳೆದ ಸಾಲಿನ ನವೆಂಬರ್ 18ಕ್ಕೆ ಶಾಫಿ ಸಅದಿ ವಕ್ಸ್ ಬೋರ್ಡ್‌ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದರು. ನೂತನ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅವರ ನಾಮ ನಿರ್ದೇಶನವನ್ನು ರದ್ದುಗೊಳಿಸಿತ್ತು. ಆದರೆ, ಒಂದೇ ದಿನದಲ್ಲಿ ಆ ಆದೇಶವನ್ನು ಹಿಂಪಡೆಯಲಾಗಿತ್ತು.

ಸುಮಾರು ಎರಡು ಕೋಟಿ ರೂ.ವೆಚ್ಚದಲ್ಲಿ ನವೀಕೃತಗೊಂಡಿರುವ ವಕ್ಸ್ ಬೋರ್ಡ್ ಕಚೇರಿಯ ಕಟ್ಟಡದ ಉದ್ಘಾಟನೆವರೆಗೆ ತಮ್ಮನ್ನು ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲು ಅವಕಾಶ ನೀಡುವಂತೆ ಶಾಫಿ ಸಅದಿ ಮನವಿ ಮಾಡಿದ್ದರು ಎಂದು ತಿಳಿದು ಬಂದಿದೆ. ಅದರಂತೆ, ಜು.3ರಂದು ನವೀಕೃತ ಕಟ್ಟಡ ಉದ್ಘಾಟನೆಯಾಗಿದ್ದು, ಅವರು ಇಂದು ರಾಜೀನಾಮೆ ನೀಡಿದ್ದಾರೆ.

ವಕ್ಸ್‌ ಬೋರ್ಡ್‌ಗೆ ಕಳೆದ ಸರಕಾರದ ಅವಧಿಯಲ್ಲಿ ತನ್ವಿರ್ ಸೇರ್ ಹಾಗೂ ಕನೀಝ್ ಫಾತಿಮಾ ಅವರನ್ನು ಶಾಸಕರ ಕೋಟಾದಲ್ಲಿ ನಾಮ ನಿರ್ದೇಶನ ಮಾಡಲಾಗಿತ್ತು. ಇದೀಗ ಹೊಸ ವಿಧಾನಸಭೆ ಅಸ್ತಿತ್ವಕ್ಕೆ ಬಂದಿರುವುದರಿಂದ ವಕ್ಸ್‌ ಬೋರ್ಡ್‌ಗೆ ಹೊಸದಾಗಿ ಶಾಸಕರನ್ನು ನಾಮ ನಿರ್ದೇಶನ ಮಾಡಬೇಕಿದೆ.


ಅಲ್ಲದೆ, ವಕ್ಸ್ ಬೋರ್ಡ್ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಬೇಕಿದೆ. ನೂತನ ಅಧ್ಯಕ್ಷರ ಆಯ್ಕೆಯಾಗುವವರೆಗೆ ಶಾಫಿ ಸಅದಿ ಹಂಗಾಮಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ


ಜಾಗದ ವಿವಾದ ಸಹಿತ ಅಯೋಧ್ಯಾ ಮಂತ್ರಾಕ್ಷತೆ ಕಾರಣಕ್ಕೇ ಹಲ್ಲೆ ನಡೆಸಲಾಗಿದೆ ಹಲ್ಲೆಗೊಳಗಾದ ಸಂತೋಷ್ ಬಿ.ಕೆ. ಪತ್ರಿಕಾಗೋಷ್ಠಿಯಲ್ಲಿ ಆರೋಪ

Posted by Vidyamaana on 2024-01-18 07:28:03 |

Share: | | | | |


ಜಾಗದ ವಿವಾದ ಸಹಿತ ಅಯೋಧ್ಯಾ ಮಂತ್ರಾಕ್ಷತೆ ಕಾರಣಕ್ಕೇ ಹಲ್ಲೆ ನಡೆಸಲಾಗಿದೆ  ಹಲ್ಲೆಗೊಳಗಾದ ಸಂತೋಷ್ ಬಿ.ಕೆ. ಪತ್ರಿಕಾಗೋಷ್ಠಿಯಲ್ಲಿ ಆರೋಪ

ಪುತ್ತೂರು: ಜಾಗದ ವಿವಾದ ಸಹಿತ ಅಯೋಧ್ಯೆಯ ಮಂತ್ರಾಕ್ಷತೆ ವಿತರಣಾ ಜವಾಬ್ದಾರಿ ನಮಗೆ ನೀಡಲಿಲ್ಲ ಎಂಬ ಕಾರಣಕ್ಕೆ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡವರಿಂದ ನಮಗೆ ಹಲ್ಲೆ ನಡೆದಿದೆ ಎಂದು ಸೋಮವಾರ ರಾತ್ರಿ ಹಲ್ಲೆಗೊಳಗಾದ ಮುಂಡೂರು ನಿವಾಸಿ ಸಂತೋಷ್ ಬಿ.ಕೆ. ಆರೋಪಿಸಿದ್ದಾರೆ.


ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮುಂಡೂರು ಪರಿಸರದಲ್ಲಿ ಅಕ್ಷತೆ ವಿತರಣೆ ಜವಾಬ್ದಾರಿಯನ್ನು ನನಗೆ ನೀಡಲಾಗಿದ್ದು, ಶುಕ್ರವಾರ ಮಂತ್ರಾಕ್ಷತೆ ವಿತರಿಸಿ ಉಳಿದ ಮಂತ್ರಾಕ್ಷತೆಯನ್ನು ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಇಟ್ಟಿದ್ದೇವು. ಅದೇ ರಾತ್ರಿ ಪುತ್ತಿಲ ಪರಿವಾರದವರು ನಮ್ಮಲ್ಲಿ ಕೇಳದೆ ಮಂತ್ರಾಕ್ಷತೆಯನ್ನು ದೇವಸ್ಥಾನದಿಂದ ತೆಗೆದುಕೊಂಡು ಹೋಗಿ ವಿತರಿಸಿದ್ದಾರೆ. ಇದೆಲ್ಲಾ ನಡೆದ ಬಳಿಕ ಸೋಮವಾರ ಕುಕ್ಕಿನಡ್ಕ ದೇವಸ್ಥಾನದಲ್ಲಿ ಮಂತ್ರಾಕ್ಷತೆ ಕುರಿತು ಸಭೆ ನಡೆದಿದ್ದು, ಸಭೆ ಮುಗಿಸಿ ರಾತ್ರಿ ಮನೆಗೆ ಹೋಗುವಾಗ ಕಾಲುದಾರಿಯಲ್ಲಿ ಧನಂಜಯ, ಕೇಶವ ಹಾಗೂ ಜಗದೀಶ್ ಎಂಬವರು ಏಕಾಏಕಿ ಕಬ್ಬಿಣದ ರಾಡು ಹಾಗೂ ಹೆಲ್ಮೆಟ್ ನಿಂದ ಹಲ್ಲೆ ಮಾಡಿದ್ದಾರೆ. ಬೊಬ್ಬೆ ಕೇಳಿ ನನ್ನ ತಾಯಿ ಸವಿತಾ ಅವರು ಸ್ಥಳಕ್ಕೆ ಬಂದಾಗ ಅವರನ್ನು ದೂಡಿ ಹಾಕಿದ್ದಾರೆ. ಪರಿಣಾಮ ಅವರಿಗೂ ಗಾಯವಾಗಿದೆ ಎಂದು ತಿಳಿಸಿದರು.




ಇದಲ್ಲದೆ ನಾಡಾಜೆ – ಬರೆಕೊಲಾಡಿ ರಸ್ತೆ ವಿವಾದವಿದ್ದು, ರಸ್ತೆಗಾಗಿ ನಮ್ಮ ವರ್ಗ ಜಾಗವನ್ನು ಬಳಸಿಕೊಂಡಿದ್ದರು. ಇದೇ ರಸ್ತೆಯನ್ನು ಮೂರು ವರ್ಷದ ಹಿಂದೆ ಬಂದ್ ಮಾಡಿದ್ದರು. ಬಳಿಕ ಜಾಗದ ವಿವಾದ ಮತ್ತೆ ಮತ್ತೆ ಮರುಕಳಿಸಿತ್ತು. ಈ ಘಟನೆಯಲ್ಲಿ ಸಂಪೂರ್ಣ ಪುತ್ತಿಲ ಪರಿವಾರದ ಕೈವಾಡವಿದೆ. ಈ ಕುರಿತು ಎಲ್ಲಿ ಬೇಕಾದರೂ ಬಂದು ನಾನು ಪ್ರಮಾಣ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಬಹಿಷ್ಕಾರ ಕರೆ ನೀಡಿದ್ದಕ್ಕೆ ಫೆಲೆಸ್ತೀನ್ ಪರ ಗುಂಪಿನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಮೆಕ್ ಡೊನಾಲ್ಡ್ಸ್

Posted by Vidyamaana on 2023-12-31 04:39:55 |

Share: | | | | |


ಬಹಿಷ್ಕಾರ ಕರೆ ನೀಡಿದ್ದಕ್ಕೆ ಫೆಲೆಸ್ತೀನ್ ಪರ ಗುಂಪಿನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಮೆಕ್ ಡೊನಾಲ್ಡ್ಸ್

ಹೊಸದಿಲ್ಲಿ: ಸರಣಿ ಫಾಸ್ಟ್‌ಫುಡ್ ಮಳಿಗೆಗಳನ್ನು ಹೊಂದಿರುವ ಮೆಕ್‌ಡೊನಾಲ್ಡ್ಸ್ ಮಲೇಶಿಯಾವು ಇಸ್ರೇಲ್‌ ಅನ್ನು ಬೆಂಬಲಿಸುವ ಕಂಪನಿಗಳನ್ನು ಬಹಿಷ್ಕರಿಸುವಂತೆ ಕರೆಗಳನ್ನು ನೀಡಿದ್ದಕ್ಕಾಗಿ ಫೆಲೆಸ್ತೀನ್ ಪರ ಗುಂಪು ಬಿಡಿಎಸ್ ಮಲೇಶಿಯಾದಿಂದ ಆರು ಮಿಲಿಯನ್ ರಿಂಗಿಟ್ (1.3 ಮಿಲಿಯನ್ ಡಾಲರ್)ಗಳ ಮಾನನಷ್ಟ ಪರಿಹಾರವನ್ನು ಕೋರಿ ಮೊಕದ್ದಮೆಯನ್ನು ದಾಖಲಿಸಿದೆ.ಬಿಡಿಎಸ್ ಮಲೇಶಿಯಾ ವಿರುದ್ಧ ದಾವೆಯು ಕಾನೂನಿಗನುಗುಣವಾಗಿ ನಮ್ಮ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳುವ ಉದ್ದೇಶವನ್ನು ಹೊಂದಿದೆ" ಎಂದು ಮೆಕ್‌ಡೊನಾಲ್ಡ್ಸ್ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ.


"ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವನ್ನು ತಾನು ಬೆಂಬಲಿಸುವುದಿಲ್ಲ ಅಥವಾ ಕ್ಷಮಿಸುವುದೂ ಇಲ್ಲ ಎಂದು ಹೇಳಿರುವ ಮೆಕ್‌ಡೊನಾಲ್ಡ್ಸ್ ಮಲೇಶಿಯಾ, ಬಹಿಷ್ಕಾರ ಕರೆಯು ವೈಯಕ್ತಿಕ ನಿರ್ಧಾರವಾಗಿದೆ ಎನ್ನುವುದನ್ನು ನಾವು ತಿಳಿದುಕೊಂಡಿದ್ದೇವೆ ಮತ್ತು ಅದನ್ನು ಗೌರವಿಸುತ್ತೇವೆ, ಆದರೆ ಅದು ಸತ್ಯಾಂಶಗಳನ್ನು ಆಧರಿಸಿರಬೇಕು, ಸುಳ್ಳು ಆರೋಪಗಳನ್ನಲ್ಲ ಎಂದು ನಾವು ನಂಬಿದ್ದೇವೆ" ಎಂದು ತಿಳಿಸಿದೆ.


"ಈ ಮಾನನಷ್ಟ ಆರೋಪವನ್ನು ನಾವು ಸ್ಪಷ್ಟವಾಗಿ ನಿರಾಕರಿಸುತ್ತೇವೆ" ಎಂದು ಬಿಡಿಎಸ್ ಮಲೇಶಿಯಾ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದೆ.ಬಿಡಿಎಸ್ ಮಲೇಶಿಯಾ 2005ರಲ್ಲಿ ಫೆಲೆಸ್ತೀನಿ ನಾಗರಿಕ ಸಮಾಜ ಸಂಸ್ಥೆಗಳು ಆರಂಭಿಸಿದ್ದ ಜಾಗತಿಕ ಬಹಿಷ್ಕಾರ, ಹೂಡಿಕೆ ಹಿಂದೆಗೆತ ಮತ್ತು ನಿರ್ಬಂಧಗಳ ಆಂದೋಲನದ ಭಾಗವಾಗಿದೆ.


ಆಂದೋಲನವು ಇಸ್ರೇಲ್ ಫೆಲೆಸ್ತೀನಿಗಳನ್ನು ನಡೆಸಿಕೊಳ್ಳುತ್ತಿರುವ ರೀತಿಗಾಗಿ ಅದರ ವಿರುದ್ಧ ರಾಜಕೀಯ ಮತ್ತು ಆರ್ಥಿಕ ಕ್ರಮಗಳನ್ನು ಪ್ರತಿಪಾದಿಸುತ್ತದೆ.


ಗಾಝಾದಲ್ಲಿ ಇಸ್ರೇಲ್‌ನ ಮಿಲಿಟರಿ ಕಾರ್ಯಾಚರಣೆಗೆ ಪ್ರತಿಕ್ರಿಯೆಯಾಗಿ ಬಿಡಿಎಸ್ ಮಲೇಶಿಯಾ ಮೆಕ್‌ಡೊನಾಲ್ಡ್ಸ್, ಕೆಎಫ್‌ಸಿ ಮತ್ತು ಝರಾ ಸೇರಿದಂತೆ ಪಾಶ್ಚಾತ್ಯ ಬ್ರ್ಯಾಂಡ್‌ಗಳನ್ನು ಬಹಿಷ್ಕರಿಸುವಂತೆ ಮಲೇಶಿಯಾದ ಜನರಿಗೆ ಕರೆಗಳನ್ನು ತೀವ್ರಗೊಳಿಸಿದೆ. ಈ ಕಂಪನಿಗಳು ಫೆಲೆಸ್ತೀನಿಗಳ ಮೇಲೆ ಇಸ್ರೇಲಿ ದೌರ್ಜನ್ಯಗಳಲ್ಲಿ ಶಾಮೀಲಾಗಿವೆ ಎಂದು ಅದು ಆರೋಪಿಸಿದೆ.

Recent News


Leave a Comment: