Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34
ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.
*💥Whats App Group ಗೆ ಸೇರಲು ಕ್ಲಿಕ್ ಮಾಡಿ
*ಹಣ ತೆಗೆದುಕೊಂಡು ಹೋದ ವಿಚಾರ*: ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.
ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.
ಮೂವರು ಕೂಡ ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
Posted by Vidyamaana on 2023-06-26 12:23:12 |
ಬಂಟ್ವಾಳ: ಯುವಶಕ್ತಿ ಸೇವಾಪಥ ದ.ಕ. ಇದರ ನೇತೃತ್ವದಲ್ಲಿ ನರಹರಿ ಶ್ರೀ ಸದಾಶಿವ ಪರ್ವತ ದೇವಸ್ಥಾನದಲ್ಲಿ ಎರಡನೇ ವರ್ಷದ ಶ್ರಮದಾನ ಹಾಗೂ ಸ್ವಚ್ಚತಾ ಅಭಿಯಾನ ಭಾನುವಾರ ನಡೆಯಿತು.
ಸ್ವಚ್ಛ ನರಹರಿಯತ್ತ ಸೇವಾಪಥದ ಚಿತ್ತ ಎಂಬ ಶೀರ್ಷಿಕೆಯಡಿಯಲ್ಲಿ ರವಿವಾರ ಬೆಳಗ್ಗೆ 7ರಿಂದ ಮದ್ಯಾಹ್ನ 1ರವರೆಗೆ ಸ್ವಚ್ಚತಾ ಕಾರ್ಯಕ್ರಮ ಜರಗಿದ್ದು, ಸುಮಾರು 80ಕ್ಕೂ ಅಧಿಕ ಸ್ವಯಂಸೇವಕರು ಭಾಗವಹಿಸಿದ್ದರು.
ಓಂ ಶ್ರೀ ಸಾಯಿಗಣೇಶ್ ಸೇವಾ ಟ್ರಸ್ಟ್ ಕಲ್ಲಡ್ಕ, ಯುವಕೇಸರಿ ಫ್ರೆಂಡ್ಸ್ ಅರೆಬೆಟ್ಟು ಎರ್ಮೆಮಜಲು, ಶ್ರೀ ಮಂತ್ರದೇವತಾ ಟ್ರಸ್ಟ್ ಅಮ್ಮೂರು, ಕೋಡಿ ಫ್ರೆಂಡ್ಸ್ ಸರ್ಕಲ್ ಕರಿಂಗಾಣ, ಕೆ.ಎಫ್.ಎಂ. ಮುಡಿಪು, ಹಿಂದೂ ಜನಸೇವಾ ಸಮಿತಿ ಬೊಂಡಾಲ ಕಲ್ಲಡ್ಕ, ಶಿವ ಛತ್ರಪತಿ ಫ್ರೆಂಡ್ಸ್ ಬಡೆಕೊಟ್ಟು, ಯುವಶಕ್ತಿ ಕಡೇಶಿವಾಲಯ ತಂಡಗಳು ಭಾಗವಹಿಸಿದ್ದವು.
Posted by Vidyamaana on 2023-06-10 14:43:06 |
ಪುತ್ತೂರು: ನನ್ನ ಎರಡು ಕಾಲುಗಳು ಬಲಹೀನವಾಗಿದೆ. ವಿಕಲಚೇತನರಿಗೆ ಅಥವಾ ನಡೆದಾಡಲು ಸಾಧ್ಯವಾಗದ ಚೇತನರಿಗೆ ಸರಕಾರದಿಂದ ನಾಲ್ಕು ಚಕ್ರದ ಸ್ಕೂಟರ್ ನೀಡುತ್ತಾರೆ. ನನಗು ಒಂದು ಸ್ಕೂಟರ್ ಕೊಡಿ ಎಂದು ಕಳೆದ ನಾಲ್ಕು ವರ್ಷಗಳಿಂದ ಸಾಸಕರಿಗೆ ಮನವಿ ಮಾಡುತ್ತಿದ್ದೇನೆ ಸ್ಕೂಟರ್ ಕೊಟ್ಟಿಲ್ಲ. ನೀವು ನನಗೊಂದು ಸ್ಕೂಟರ್ ಕೊಡಿಸಿ ಎಂದು ವಿಕಲಚೇತನ ಯುವಕ ಅಜ್ಜಿನಡ್ಕದ ಕೃಷ್ಣಪ್ಪ ಎಂಬವರು ಶಾಸಕರಾದ ಅಶೋಕ್ ರೈ ದೂರಿನ ಜೊತೆ ಮನವಿಯನ್ನು ಸಲ್ಲಿಸಿದ್ದಾರೆ.
ಸುಧಾನ ಶಾಲೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ ಕೃಷ್ಣಪ್ಪರು ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ ವೇದಿಕೆಗೆ ಅವರನ್ನು ಸಂಬಂಧಿಕರು ಎತ್ತಿಕೊಂಡು ಬಂದರು. ಇವರ ಸ್ಥಿತಿಯನ್ನು ಕಂಡು ಶಾಸಕರೇ ಅವರನ್ನು ಕುರ್ಚಿಯ ಮೇಲೆ ಕೂರಿಸಿದರು. ಬಳಿಕ ಅವರ ಅರ್ಜಿಯನ್ನುನ ಸ್ವೀಕರಿಸಿದ ಶಾಸಕರು ನಿಮಗೆ ಏನು ಬೇಕು ಎಂದು ಕೇಳಿದ್ದಾರೆ. ಆ ವೇಳೆ ತನ್ನ ಸಮಸ್ಯೆಯನ್ನು ಕೃಷ್ಣಪ್ಪರು ಶಾಸಕರ ಬಳಿ ತೋಡಿಕೊಂಡರು. ನಿಮ್ಮ ಬೇಡಿಕೆಯನ್ನು ಈಡೇರಿಸುತ್ತೇನೆ ಎಂದು ಶಾಸಕರು ಭರವಸೆ ನೀಡಿದಾಗ ಕೃಷ್ಣಪ್ಪರು ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು.
Posted by Vidyamaana on 2023-03-22 11:06:23 |
ಪುತ್ತೂರು: ಜಿಲ್ಲಾಕೇಂದ್ರದ ಸನ್ನಿಹಿತದಲ್ಲಿರುವ ಪುತ್ತೂರಿಗೆ ಪೂರಕವೆಂಬಂತೆ ಜಿಎಲ್ ಒನ್ ಶಾಪಿಂಗ್ ಮಾಲ್ ತಲೆಎತ್ತಿದ್ದು, ಏಪ್ರಿಲ್ 2ರಂದು ಲೋಕಾರ್ಪಣೆಗೊಳ್ಳಲಿದೆ.
ಪುತ್ತೂರಿನ ಪ್ರಪ್ರಥಮ ಸರ್ವಸುಸಜ್ಜಿತ ಶಾಪಿಂಗ್ ಮಾಲ್ ಇದಾಗಿದ್ದು, ಪಟ್ಟಣವಾಗಿ ಪುತ್ತೂರು ಹೊಸ ಮೈಲಿಗಲ್ಲನ್ನು ಸಾಧಿಸುವುದು ನಿಶ್ಚಿತ.
ಏಪ್ರಿಲ್ 2ರಂದು ಸಂಜೆ 5.30ಕ್ಕೆ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ಉದ್ಘಾಟನೆ ಮಾಡಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಲಾಂಛನ ಅನಾವರಣಗೊಳಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಕಟ್ಟಡವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಪುತ್ತೂರು ಎಸ್.ಜಿ. ಕಾರ್ಪೋರೇಟ್ಸ್ ಚೇರ್ಮೆನ್ ಕೆ. ಸತ್ಯಶಂಕರ್, ಪುತ್ತೂರು ಛೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸಿನ ಅಧ್ಯಕ್ಷ ಜಾನ್ ಕುಟಿನ್ಹಾ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಮಂಗಳೂರು ಭಾರತ್ ಸಮೂಹ ಸಂಸ್ಥೆಗಳ ನಿರ್ದೇಶಕ ಆನಂದ್ ಪೈ, ಪುತ್ತೂರು ಅನ್ಸಾರುದ್ದೀನ್ ಜಮಾತ್ ಸಮಿತಿ ಅಧ್ಯಕ್ಷ ಎಲ್.ಟಿ. ಅಬ್ದುಲ್ ರಝಾಕ್ ಉಪಸ್ಥಿತರಿರುವರು ಎಂದು ಜಿ.ಎಲ್. ಸಮೂಹ ಸಂಸ್ಥೆಗಳ ಚೇರ್ಮೆನ್ ಜಿ.ಎಲ್ ಬಲರಾಮ್ ಆಚಾರ್ಯ, ನಿರ್ದೇಶಕರಾದ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Posted by Vidyamaana on 2024-07-21 07:23:05 |
ಕೊಡಗು,: ಪತ್ನಿಯನ್ನೇ ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ(Virajpet)ತಾಲ್ಲೂಕಿನ ಬೆಟೋಳಿ ಎಂಬ ಗ್ರಾಮದಲ್ಲಿ ನಡೆದಿದೆ. ಶಿಲ್ಪ (34) ಮೃತ ರ್ದುದೈವಿ. ಪ್ರೀತಿಸಿ ಮದುವೆಯಾದ ಗಂಡನಿಂದಲೆ ಕೊಲೆಯಾಗಿ ಹೋಗಿದ್ದಾಳೆ. 18 ವರ್ಷದ ಹಿಂದೆ ಶಿಲ್ಪ ಹಾಗೂ ಬೋಪಣ್ಣ ಪ್ರೀತಿಸಿ ಮದುವೆಯಾಗಿದ್ದರು. ಪ್ರೀತಿಯ ಸಂಕೇತ ಎಂಬಂತೆ ಇಬ್ಬರು ಮುದ್ದಾದ ಮಕ್ಕಳು ಇದ್ದರು. ಅದ್ಯಾಕೋ ಗೊತ್ತಿಲ್ಲ ಅವರ ಕುಟುಂಬದಲ್ಲಿ ಬಿರುಗಾಳಿ ಎದ್ದಿತ್ತು. ಇದರಿಂದ ಇಬ್ಬರೂ ಕೂಡ ಬೇರೆ ಬೇರೆ ಆಗಿದ್ದರಂತೆ. ಆದರೆ, ಒಂದೆ ವಾಸವಾಗಿದ್ದ ಅವರು, ಪ್ರತ್ಯೇಕ ಒಲೆಯಲ್ಲಿ ಅಡುಗೆ ಮಾಡುತ್ತಿದ್ದರು. ಬಳಿಕ ಇಬ್ಬರ ಕಟುಂಬದಲ್ಲಿ ಬಿರುಕು ಮೂಡಿದ್ದು, ವಿಚ್ಚೇದನಕ್ಕೆ ಅರ್ಜಿಕೂಡ ಹಾಕಿ ಕಾಯುತ್ತಿದ್ದರು.
ಇನ್ನು ನಿನ್ನೆ(ಶುಕ್ರವಾರ) ರಾತ್ರಿ ಮೃತ ಶಿಲ್ಪ ಮೊಬೈಲ್ನಲ್ಲಿ ಬೇರೆ ವ್ಯಕ್ತಿಯ ಜೊತೆಯಲ್ಲಿ ಸಂಭಾಷಣೆ ನಡೆಸುತ್ತಿದ್ದಳಂತೆ, ಮಾರನೇ ದಿನವೂ ಬೆಳಗ್ಗೆ 8.45ರ ಸಮಯದಲ್ಲಿ ಮತ್ತೆ ಆ ವ್ಯಕ್ತಿಯ ಜೊತೆಯಲ್ಲಿ ಮಾತುಕತೆ ನಡೆಸಿದ್ದಳಂತೆ. ಅದೇ ಸಮಯದಲ್ಲಿ ಅಡಿಗೆ ಮನೆಗೆ ಹೋದ ಗಂಡ ಬೋಪಣ್ಣ, ಕೋವಿ ಸಮೇತ ಆಗಮಿಸಿ ಶಿಲ್ಪಾಳ ಎದೆಗೆ ಗುಂಡು ಹಾರಿಸಿ ಕೊಂದು ಹಾಕಿದ್ದಾನೆ.
Posted by Vidyamaana on 2024-08-17 08:14:46 |
ಕೊಲ್ಕತಾ: ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೈನಿ ವೈದ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ದೇಹದಲ್ಲಿ 150 ಗ್ರಾಂ ವೀರ್ಯ ಕಂಡು ಬಂದಿತ್ತು ಎಂಬ ವದಂತಿ ಗಳು ಹಬ್ಬಿದ್ದವು. ಇದಕ್ಕೆ ಸ್ಪಷ್ಟನೆ ನೀಡಿರುವ ವೈದ್ಯರೊಬ್ಬರು, ಮರಣೋತ್ತರ ಪರೀಕ್ಷಾ ವರದಿಯಲ್ಲಿ 150 ಗ್ರಾಂ ಎಂದಿರುವುದು ಗರ್ಭಾಶಯದ ತೂಕವೇ ಹೊರತು, ಯಾವುದೇ ದ್ರವದ ತೂಕವಲ್ಲ ಎಂದಿದ್ದಾರೆ.
ಇಂತಹ ಪ್ರಕರಣಗಳಲ್ಲಿ ಒಳ ಅಂಗಗಳ ತೂಕವನ್ನು ವರದಿಯಲ್ಲಿ ನಮೂದಿಸಲಾಗುತ್ತದೆ. ಹೀಗಾಗಿ ಇದು ಗರ್ಭಾಶಯದ ಅಂಗರಚನಾಶಾಸ್ತ್ರದ ಅಳತೆಯಾಗಿದೆ. ಯಾವುದೇ ದ್ರವವಲ್ಲ ಎಂದಿದ್ದಾರೆ. ಘಟನೆ ನಡೆದ 5 ಗಂಟೆಗಳ ಬಳಿಕ ವಿಧಿವಿಜ್ಞಾನ ಪ್ರಯೋಗಾಲಯದ ಸಿಬಂದಿ ಭೇಟಿ ಕೊಟ್ಟಿದ್ದರು. ಹೀಗಾಗಿ ಯಾವುದೇ ದ್ರವ ವಸ್ತು, ಅದೇ ಸ್ಥಿತಿಯಲ್ಲಿ ಉಳಿದುಕೊಳ್ಳುವುದು ಅಸಾಧ್ಯ ಎನ್ನಲಾಗಿದೆ.
Posted by Vidyamaana on 2023-09-16 05:24:21 |
ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುತ್ತೇವೆಂದು ಮತ್ತೊಂದು ವಂಚನೆ ಪ್ರಕರಣ ಕೊಪ್ಪಳ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಉದ್ಯಮಿ ಗೋವಿಂದ ಪೂಜಾರಿ ರೀತಿಯಲ್ಲೇ ಕೊಪ್ಪಳ ಜಿಲ್ಲೆಯ ಬಿಜೆಪಿ ಮುಖಂಡನಿಂದ 21 ಲಕ್ಷ ಪಡೆದು ಟೋಪಿ ಹಾಕಲಾಗಿದೆ.
ವಿಧಾನಸಭೆ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆಯ ಕನಕಗಿರಿ ಎಸ್ಸಿ ಮೀಸಲು ಕ್ಷೇತ್ರದ ಟಿಕೆಟ್ ಕೊಡಿಸುತ್ತೇವೆಂದು ಬಿಜೆಪಿ ಮುಖಂಡ ಜಿ.ತಿಮ್ಮಾರೆಡ್ಡಿ ಗಿಲ್ಲೆಸೂಗುರ್ ಅವರನ್ನು ನಂಬಿಸಿ ಹಣ ಪಡೆದಿದ್ದಾರೆ. ತಿಮ್ಮಾರೆಡ್ಡಿ ಅವರು ತಮ್ಮ ಪತ್ನಿ ಗಾಯತ್ರಿಗೆ ಟಿಕೆಟ್ ಕೊಡಿಸುವಲ್ಲಿ ಭಾರಿ ಪ್ರಯತ್ನ ಮಾಡಿದ್ದರು. ಬಿಜೆಪಿ ಟಿಕೆಟಿಗಾಗಿ ಭಾರೀ ಪೈಪೋಟಿ ನಡೆಸಿದ್ದ ತಿಮ್ಮಾರೆಡ್ಡಿಯನ್ನು ಚೈತ್ರಾ ಕುಂದಾಪುರ ತಂಡದ ಮಾದರಿಯಲ್ಲೇ ಮೂವರ ತಂಡ ಸಂಪರ್ಕಿಸಿ ಮೋಸ ಮಾಡಿದೆ. ಅಮಿತ್ ಷಾ ಹೆಸರಲ್ಲಿ ವಂಚನೆ
ತಾವು ಗೃಹ ಸಚಿವ ಅಮಿತ್ ಷಾ ಆಪ್ತರೆಂದು ಹೇಳಿಕೊಂಡು ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು, ಗೌರವ್ ಎಂಬವರು ತಿಮ್ಮಾರೆಡ್ಡಿಯನ್ನು ಸಂಪರ್ಕಿಸಿದ್ದರು. 19 ಲಕ್ಷ ನಗದು ಮತ್ತು ಎರಡು ಲಕ್ಷ ರೂ. ಖಾತೆಗೆ ಹಾಕಿಸಿಕೊಂಡಿದ್ದರು. ಚೈತ್ರಾಳ ಡೀಲ್ ಪುರಾಣ ಹೊರಬರುತ್ತಲೇ ತಿಮ್ಮಾರೆಡ್ಡಿ ಅವರು ಮೂವರು ವಂಚಕರ ವಿರುದ್ಧ ಬೆಂಗಳೂರಿನ ಅಶೋಕ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಅಮಿತ್ ಷಾ ಸೂಚನೆಯಂತೆ, ರಾಜ್ಯದಲ್ಲಿ ಸಮೀಕ್ಷೆ ಮಾಡ್ತಿದ್ದೇವೆ. ಅದರಲ್ಲಿ ನಿಮ್ಮ ಹೆಸರು ಮುಂಚೂಣಿಗೆ ತರುತ್ತೇವೆ ಎಂದು ಹೇಳಿಕೊಂಡಿದ್ದ ತಂಡದ ವಿಶಾಲ್ ನಾಗ್ ಎಂಬಾತ ತಾನು ಕೇಂದ್ರ ಬಿಜೆಪಿ ಚುನಾವಣೆ ಸಮೀಕ್ಷೆ ತಂಡದಲ್ಲಿ ಮುಖ್ಯಸ್ಥನೆಂದು ಪರಿಚಯಿಸಿಕೊಂಡಿದ್ದ. ಹೀಗಾಗಿ ಆತನನ್ನ ನಂಬಿ ವಿಶಾಲ್ ನಾಗ್ ಅವರ ಬ್ಯಾಂಕ್ ಖಾತೆಗ 2 ಲಕ್ಷ ರೂ., 19 ಲಕ್ಷ ನಗದನ್ನು ನೇರವಾಗಿ ನೀಡಿದ್ದೆ. ಇವರು, ನನ್ನ ರೀತಿ ಬಹಳ ಜನರಿಗೆ ಮೋಸ ಮಾಡಿದ್ದಾರೆ ಎಂದು ತಿಮ್ಮಾರೆಡ್ಡಿ ತಿಳಿಸಿದ್ದಾರೆ.
ಹೀಗಾಗಿ ಬಿಜೆಪಿ ಟಿಕೆಟ್ ಗಾಗಿ ರಾಜ್ಯದಲ್ಲಿ ಹಲವಾರು ಮಂದಿ ಆಕಾಂಕ್ಷಿಗಳು ಕೋಟ್ಯಂತರ ರೂಪಾಯಿ ಹಣ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಚೈತ್ರಾ ಕುಂದಾಪುರ ಮತ್ತು ತಂಡ ಬೈಂದೂರು ಕ್ಷೇತ್ರದ ಟಿಕೆಟ್ ಕೊಡಿಸುತ್ತೇವೆಂದು ಐದು ಕೋಟಿ ಡೀಲ್ ಮಾಡಿರೋದು ಬೆಳಕಿಗೆ ಬರುತ್ತಲೇ ಮತ್ತೊಂದು ವಂಚನೆ ಪುರಾಣ ಹೊರಬಂದಿದೆ.