Posted by vidyamaana on 2024-07-23 06:33:29 | Last Updated by Vidyamaana on 2024-07-23 06:33:29
ಮುಂಬೈ :ಫಿಟ್ನೆಸ್ ಕಾಪಾಡಿಕೊಳ್ಳಲು ಹಲವರು ಜುಂಬಾ ಡ್ಯಾನ್ಸ್ ಮೊರೆ ಹೋಗುತ್ತಾರೆ. ಪ್ರತಿ ದಿನ ಜುಂಬಾ ಡ್ಯಾನ್ಸ್ ಕ್ಲಾಸ್ಗೆ ತೆರಳಿ ಬೆವರು ಹರಿಸುತ್ತಾರೆ. ಹೀಗೆ ಮಹಾರಾಷ್ಟ್ರದ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಫಿಟ್ನೆಸ್ಗಾಗಿ ಪ್ರತಿ ದಿನ ಜುಂಬಾ ಕ್ಲಾಸ್ಗೆ ತೆರಳಿ ಡ್ಯಾನ್ಸ್ ಮಾಡುತ್ತಾ ಬೆವರು ಹರಿಸುತ್ತಾರೆ.
ಇಂದು ಬೆಳಗ್ಗೆ ಜುಂಬಾ ಡ್ಯಾನ್ಸ್ ಮಾಡುತ್ತಿದ್ದಂತೆ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆ ದಾಖಲಿಸಿದರೂ ಉದ್ಯಮಿ ಬದುಕುಳಿಯಲಿಲ್ಲ.
ಛತ್ರಪತಿ ಸಂಭಾಜಿನಗರದ ನಿವಾಸಿಯಾಗಿರುವ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರತಿದಿನ ಜುಂಬಾ ಡ್ಯಾನ್ಸ್ ಮಾಡುತ್ತಾರೆ. ಎಂದಿನಂತೆ ಇಂದೂ ಕೂಡ ಅವಲ್ಜಿತ್ ಸಿಂಗ್ ಬಾಗ್ಗಾ ಜುಂಬಾ ಡ್ಯಾನ್ಸ್ಗೆ ತೆರಳಿದ್ದಾರೆ. ಅವಲ್ಜಿತ್ ಸಿಂಗ್ ರೀತಿಯಲ್ಲಿ ಇತರ ಕೆಲವರು ಜುಂಬಾ ಡ್ಯಾನ್ಸ್ ಮಾಡುತ್ತಿದ್ದಾರೆ. ಜುಂಬಾ ಕ್ಲಾಸ್ ತೆರಳಿ 15 ನಿಮಿಷಗಳ ಕಾಲ ಡ್ಯಾನ್ಸ್ ಮಾಡಿದ್ದಾರೆ. ಹಲವರು ಇದೇ ಕ್ಲಾಸ್ನಲ್ಲಿ ಅವಲ್ಜಿತ್ ಸಿಂಗ್ ಜೊತೆ ಡ್ಯಾನ್ಸ್ ಮಾಡಿದ್ದಾರೆ.
ಕೊನೆಯ ಸಾಲಿನ ಬದಿಯಲ್ಲಿದ್ದ ಅವಲ್ಜಿತ್ ಸಿಂಗ್ ಡ್ಯಾನ್ಸ್ ಮಾಡುತ್ತಿದ್ದಂತೆ ಹೃದಯಾಘಾತವಾಗಿದೆ. ಡ್ಯಾನ್ಸ್ ಮಾಡಲು ಸಾಧ್ಯವಾಗದೆ ನಿಂತಿದ್ದಾರೆ. ಚೇತರಿಸಿಕೊಳ್ಳಲು ಕೆಲ ಕ್ಷಣ ನಿಂತಿದ್ದಾರೆ. ಇತರರು ಡ್ಯಾನ್ಸ್ನಲ್ಲಿ ತಲ್ಲೀನರಾಗಿದ್ದರು. ಆದರೆ ಅವಲ್ಜಿತ್ ಸಿಂಗ್ ಚೇತರಿಸಿಕೊಳ್ಳಲಿಲ್ಲ. ಕಾರಣ ತೀವ್ರ ಹೃದಯಾಘಾತದಿಂದ ಅವಲ್ಜಿತ್ ಕುಸಿದಿದ್ದಾರೆ. ಈ ವೇಳೆ ಮೆಲ್ಲನೆ ಕುಳಿತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಅವಲ್ಜಿತ್ ಸಿಂಗ್ ಕುಸಿದು ಬೀಳುತ್ತಿದ್ದಂತೆ ಇತರರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ನೀರು ತಂದು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಯಾವುದಕ್ಕೂ ಅವಲ್ಜಿತ್ ಸಿಂಗ್ ಸ್ಪಂದಿಸಿಲ್ಲ.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಅವಲ್ಜಿತ್ ಎತ್ತಿಕೊಂಡು ವಾಹನದ ಮೂಲಕ ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆ ದಾಖಲಿಸುವ ಮೊದಲೇ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರಾಣ ಪಕ್ಷಿ ಹಾರಿಹೋಗಿದೆ. ತಪಾಸಣೆ ನಡೆಸಿದ ವೈದ್ಯರು ಅವಲ್ಜಿತ್ ಸಿಂಗ್ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.
ಜಿಮ್ ಅಭ್ಯಾಸದ ವೇಳೆ ಈ ರೀತಿ ಹೃದಯಾಘಾತಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಗೆ ಹೃದಯಾಘಾತದ ಪ್ರಮಾಣ ಹೆಚ್ಚಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಬೆಳವಣಿಗೆ ನಡುವೆ ಇದೀಗ ಉದ್ಯಮಿ ಅವಲ್ಜಿತ್ ಸಿಂಗ್ ಬಾಗ್ಗಾ ನಿಧನ ಸುದ್ದಿ ಆತಂಕ ಹೆಚ್ಚಿಸಿದೆ. ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದ ಕವಲ್ಜಿತ್ ಸಿಂಗ್ ದಿಢೀರ್ ನಿಧನ ಇದೀಗ ಮತ್ತೆ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.
Posted by Vidyamaana on 2023-08-15 14:44:58 |
ಪುತ್ತೂರು; ಕುಂಬ್ರ ಬದ್ರಿಯಾ ನಗರ ಬದ್ರಿಯಾ ಜುಮಾ ಮಸ್ಜಿದ್ ಹಾಗೂ ಮದ್ರಸ ವಠಾರದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಜಮಾತ್ ಅಧ್ಯಕ್ಷ ಉಸ್ಮಾನ್ ಮುಸ್ಲಿಯಾರ್ ದ್ವಜಾರೀಹಣಗೈದರು.ಖತೀಬರಾದ ಇಸ್ಮಾಯಿಲ್ ಸ ಅದಿ ದುವಾ ನೆರವೇರಿಸಿದರು.ಜಮಾತ್ ಕಾರ್ಯದರ್ಶಿ ಅದ್ರಾಮ ಕೊಯಿಲ, ಕೋಶಾಧಿಕಾರಿ ಇಸ್ಮಾಯಿಲ್ ಬದ್ರಿಯಾನಗರ, ಜಮಾತ್ ಮಾಜಿ ಕಾರ್ಯದರ್ಶಿ ಇಸ್ಮಾಯಿಲ್ ಕೋಳಿಗದ್ದೆ, ಫಾರೂಕ್ ಮಗಿರೆ, ಆದು ಕೊಯಿಲ, ಸಿಎಂಅಬ್ದುಲ್ ರಹಿಮಾನ್, ರಝಾಕ್ ಆಟೋ ಸಾಂತಿಯಡಿ,ಸಿರಾಜ್ ಬದ್ರಿಯಾನಗರ ,ಸಾದಿಕ್ ಮಗಿರೆ ಮತ್ತಿತರರು ಉಪಸ್ಥಿತರಿದ್ದರು. ಉಸ್ತಾದ್ ಖಲೀಲ್ ಸ ಅದಿ ಸ್ವಾಗತಿಸಿ, ಮುಅಲ್ಲಿಂ ವಂದಿಸಿದರು.
Posted by Vidyamaana on 2023-12-02 17:37:09 |
ಲಕ್ನೋ: ಉತ್ತರ ಪ್ರದೇಶ ಮೂಲದ ಯುವಕನೊಬ್ಬ ನೆದರ್ಲ್ಯಾಂಡ್ ಮೂಲದ ಯುವತಿಯನ್ನು ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಉತ್ತರ ಪ್ರದೇಶದ ಫತೇಪುರದ ಹಳ್ಳಿಯೊಂದರಲ್ಲಿ ವಾಸವಾಗಿದ್ದ ಹಾರ್ದಿಕ್ ವರ್ಮಾ(32) ಕೆಲಸದ ನಿಮಿತ್ತ ನೆದರ್ಲ್ಯಾಂಡ್ಗೆ ತೆರಳಿದ್ದರು. ಅಲ್ಲಿ ಫಾರ್ಮಾಸ್ಯುಟಿಕಲ್ ಕಂಪನಿಯಲ್ಲಿ ಮೇಲ್ವಿಚಾರಕರಾಗಿ ಕೆಲಸವನ್ನು ಪಡೆದುಕೊಂಡಿದ್ದರು. ಈ ವೇಳೆ ಅದೇ ಕಂಪೆನಿಯಲ್ಲಿದ್ದ ನೆದರ್ಲ್ಯಾಂಡ್ ಮೂಲದ ಗೇಬ್ರಿಯೆಲಾ ದುಡಾ(21) ಅವರ ಪರಿಚಯವಾಗಿದೆ.
ಪ್ರತಿನಿತ್ಯ ಕೆಲಸ ಮಾಡುತ್ತಾ, ಆತ್ಮೀಯತೆಯಲ್ಲಿ ಇದ್ದ ಇಬ್ಬರಲ್ಲಿ ಪ್ರೀತಿ ಹುಟ್ಟಿದೆ. ಹಾರ್ದಿಕ್ ಅವರು ತನ್ನ ಪ್ರೀತಿಯನ್ನು ಮೊದಲು ಗೇಬ್ರಿಯೆಲಾ ಅವರಲ್ಲಿ ಪ್ರಸ್ತಾಪ ಮಾಡಿದ್ದಾರೆ. ಅವರು ಕೂಡ ಹಾರ್ದಿಕ್ ಅವರನ್ನು ಇಷ್ಟಪಟಿದ್ದಾರೆ. ಮೂರು ವರ್ಷ ಸಹಜೀವನವಾಗಿ ಜೊತೆಗಿದ್ದ ಇಬ್ಬರು ಮದುವೆಯಾಗುವ ನಿಟ್ಟಿನಲ್ಲಿ ಕಳೆದ ವಾರ ಭಾರತಕ್ಕೆ ಬಂದಿದ್ದಾರೆ.
ಕುಟುಂಬದವರ ಒಪ್ಪಿಗೆಯ ಮೇರೆ ಬುಧವಾರ(ನ.29) ಹಿಂದೂ ಸಂಪ್ರದಾಯದಂತೆ ಎಲ್ಲಾ ವೈವಾಹಿಕ ವಿಧಿಗಳನ್ನು ಪೂರ್ಣಗೊಳಿಸಿ, ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಫತೇಪುರದಲ್ಲಿ ಹಾರ್ದಿಕ್ ಅವರ ಪೂರ್ವಜರ ಮನೆ ಇದೆ. ಅದಕ್ಕಾಗಿ ಅವರು ಅಲ್ಲಿಯೇ ವಿವಾಹವಾಗಿದ್ದಾರೆ ಎಂದು ʼಇಂಡಿಯಾ ಟುಡೇʼಗೆ ಹಾರ್ದಿಕ್ ಹೇಳಿದ್ದಾರೆ.
ಡಿಸೆಂಬರ್ 11 ರಂದು ಗಾಂಧಿನಗರದಲ್ಲಿ ಆರತಕ್ಷತೆಯನ್ನು ಆಯೋಜಿಸಲಾಗಿದೆ. ಇದರಲ್ಲಿ ಗೇಬ್ರಿಯೆಲಾ ಅವರ ತಂದೆ ಮಾರ್ಸಿನ್ ದುಡಾ, ಅವರ ತಾಯಿ ಬಾರ್ಬರಾ ದುಡಾ ಮತ್ತು ಇತರ ಕುಟುಂಬ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದೆಲ್ಲಾ ಆದ ಬಳಿಕ ಡಿ.25 ನಾವು ನೆದರ್ಲ್ಯಾಂಡ್ಗೆ ತೆರಳಿದ್ದೇವೆ. ಅಲ್ಲಿ ಚರ್ಚ್ ನಲ್ಲಿ ಕ್ರೈಸ್ತ ಸಂಪ್ರದಾಯದಂತೆ ವಿವಾಹವಾಗಲಿದ್ದೇವೆ ಎಂದು ಹಾರ್ದಿಕ್ ಹೇಳಿದ್ದಾರೆ.
Posted by Vidyamaana on 2024-08-09 07:46:30 |
ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ ನ ಬಹುನಿರೀಕ್ಷಿತ ಜಾವೆಲಿನ್ ಥೋನಲ್ಲಿ ಭಾರತದ ನೀರಜ್ ಚೋಪ್ರಾ 89.45 ಮೀಟರ್ ಎಸೆದು, ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.
ಪಾಕಿಸ್ತಾನದ ನದೀಮ್ ಅರ್ಷದ್ 92.97 ಮೀಟರ್ ದೂರ ಜಾವಲಿನ್ ಎಸೆದು, ಒಲಿಂಪಿಕ್ ರೆಕಾರ್ಡ್ ತನ್ನ ಹೆಸರಿಗೆ ಬರೆಯುವ ಮೂಲಕ ಚಿನ್ನ ಗೆದ್ದ ಸಾಧನೆ ಮಾಡಿದರು. ಈ ಹಿಂದೆ 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ನಾರ್ವೆಯ ಆಂಡ್ರಿಯಾಸ್ ಥೋರ್ಕಿಲ್ಡ್ ಸೆನ್ ಅವರು 90.57 ಮೀಟರ್ ದೂರಕ್ಕೆ ಜಾವಲಿನ್ ಎಸೆದು ಒಲಿಂಪಿಕ್ ರೆಕಾರ್ಡ್ ಮಾಡಿದ್ದರು.ನೀರಜ್ ಚೋಪ್ರಾ ಅವರು ಈ ಕ್ರೀಡಾಕೂಟದ ಫೈನಲ್ ನಲ್ಲಿ 3 ಫೌಲ್ ಮಾಡಿದರು. ಎರಡು ಎಸೆತ ಮಾತ್ರ ಮಾನ್ಯವಾಗಿತ್ತು.
Posted by Vidyamaana on 2024-04-28 06:19:08 |
ನ್ಯೂಯಾರ್ಕ್: ಅಮೆರಿಕಾದಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ (Ro
non
Accident) ಭಾರತದ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಗುಜರಾತ್ನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಮೃತ ದುರ್ದೈವಿಗಳಾಗಿದ್ದಾರೆ.ದಕ್ಷಿಣ ಕೆರೊಲಿನಾದ ಗ್ರೀನ್ವಿಲ್ಲೆ ಕೌಂಟಿಯ ಸೇತುವೆಯೊಂದರ ಮೇಲಿಂದ ಎಸ್ಯುವಿ ಉರುಳಿದ ಬಿದ್ದಿದ್ದರಿಂದ ಮೂವರು ಮೃತಪಟ್ಟಿದ್ದಾರೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ದಾಖಲಾಗಿದ್ದಾರೆ
Posted by Vidyamaana on 2023-05-09 13:30:27 |
ಭೋಪಾಲ್: ದಕ್ಷಿಣ ಆಫ್ರಿಕಾದಿಂದ ತಂದು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಇರಿಸಲಾಗಿದ್ದ ಹೆಣ್ಣು ಚೀತಾ ದಕ್ಷ ಉದ್ಯಾನವನದೊಳಗೆ ಇತರ ಚೀತಾಗಳೊಂದಿಗೆ ಕಾದಾಟದಲ್ಲಿ ಸಾವನ್ನಪ್ಪಿದೆ ಎಂದು ವರದಿಯಾಗಿದೆ.ಮೂಲಗಳ ಪ್ರಕಾರ, ಪುರುಷ ಚೀತಾಗಳೊಂದಿಗಿನ ಗಲಾಟೆಯಲ್ಲಿ ದಕ್ಷ ಚೀತಾ ಸಾವನ್ನಪ್ಪಿದೆ. ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ ಚೀತಾಗಳನ್ನು ತಂದ ನಂತರ ಕುನೋದಲ್ಲಿ ಸಾವನ್ನಪ್ಪಿದ ಮೂರನೇ ಚೀತಾ ಇದಾಗಿದೆ.ಕಳೆದ ವರ್ಷದಿಂದ ಇಪ್ಪತ್ತು ಚೀತಾಗಳನ್ನು ರಾಷ್ಟ್ರೀಯ ಉದ್ಯಾನವನಕ್ಕೆ ಕರೆತರಲಾಗಿದ್ದು, ಮಾರ್ಚ್ ಮತ್ತು ಏಪ್ರಿಲ್ನಲ್ಲಿ ಎರಡು ಚೀತಾಗಳು ಸಾವನ್ನಪ್ಪಿವೆ.ಸಶಾ ಎಂಬ ಹೆಸರಿನ ಚೀತಾ ಭಾರತಕ್ಕೆ ಕರೆತರುವ ಮೊದಲು ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿತ್ತು. ಎಪ್ರಿಲ್ನಲ್ಲಿ ಎರಡನೇ ಚೀತಾಉದಯ್ ರಾಷ್ಟ್ರೀಯ ಉದ್ಯಾನವನದಲ್ಲಿ ಅಸ್ವಸ್ಥಗೊಂಡಿದ್ದು ಚಿಕಿತ್ಸೆ ವೇಳೆ ಸಾವನ್ನಪ್ಪಿತ್ತು.ಇಂದು ಮುಂಜಾನೆ, ಕೇಂದ್ರ ಪರಿಸರ ಸಚಿವಾಲಯವು ಜೂನ್ ನಲ್ಲಿ ಮಾನ್ಸೂನ್ ಪ್ರಾರಂಭವಾಗುವ ಮೊದಲು ಐದು ಚೀತಾಗಳನ್ನು (ಮೂರು ಹೆಣ್ಣು ಮತ್ತು ಎರಡು ಗಂಡು) ಕ್ವಾರಂಟೈನ್ ನಿಂದ ಶಿಬಿರಗಳಿಂದ ಕುನೋ ರಾಷ್ಟ್ರೀಯ ಉದ್ಯಾನವನದ ಮುಕ್ತ ಪರಿಸ್ಥಿತಿಗಳಿಗೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದೆ.
Posted by Vidyamaana on 2023-11-29 20:27:55 |
ಪುತ್ತೂರು : ಬಸ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ ಮಹಿಳೆಯೊಬ್ಬರಿಗೆ ಮದ್ಯ ಕುಡಿಸಿ ಅತ್ಯಾಚಾರ ಮಾಡಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಮೂಲತಃ ಆರ್ಯಾಪು ನಿವಾಸಿ, ಪ್ರಸ್ತುತ ಬನ್ನೂರಿನಲ್ಲಿ ವಾಸವಿರುವ ಸಂಶುದ್ದೀನ್ ಆಸ್ಗರ್ ಆಲಿ (23) ಬಂಧಿತ ಆರೋಪಿ.
ಹಾಸನ ತಾಲೂಕು ಚೆನ್ನರಾಯಪಟ್ಟಣದ ನಿವಾಸಿಯಾಗಿರುವ ಮಹಿಳೆ ನ.24 ರಂದು ರಾತ್ರಿ ವೇಳೆ ಪುತ್ತೂರು ಬಸ್ ನಿಲ್ದಾಣದಲ್ಲಿ ಇದ್ದಾಗ, ಅಪರಿಚಿತ ವ್ಯಕ್ತಿಯೋರ್ವ ಸದರಿ ಮಹಿಳೆಗೆ ಮದ್ಯವನ್ನು ಸೇವಿಸಲು ನೀಡಿ, ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದು, ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ 114/2023 ಕಲಂ 376 ಐ.ಪಿ.ಸಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ನ.28 ರಂದು ಸಂಜೆ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ವರದಿಯಾಗಿದೆ.