ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಇಟ್ಟ ಬೇಡಿಕೆ ಏನು?: ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್!

Posted by Vidyamaana on 2023-12-20 09:51:04 |

Share: | | | | |


ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಇಟ್ಟ ಬೇಡಿಕೆ ಏನು?: ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್!

ಬೆಂಗಳೂರು : ರಾಜ್ಯದಲ್ಲಿರುವ ಬರ ಸಮಸ್ಸೆಗೆ ಪರಿಹಾರ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಅವರು, ಪ್ರಧಾನಿಗೆ ಕರ್ನಾಟಕ ಸರ್ಕಾರದ ಮನವಿ ಪತ್ರ ನೀಡಿ, ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.ರಾಜ್ಯದಲ್ಲಿ 236 ತಾಲೂಕುಗಳ ಪೈಕಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಎನ್‌.ಡಿ.ಆರ್‌.ಎಫ್. ನಿಂದ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ. ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ.


ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನುಪರಿಗಣಿಸುವಂತೆ ಮನವಿ ಮಾಡಿದ್ದೇನೆ. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದ್ದೇನೆ.

ಅ.23: ಉರ್ವ ಕ್ರಿಕೆಟ್ ಮೈದಾನದಲ್ಲಿ ಪಿಲಿ ನಲಿಕೆ-2023

Posted by Vidyamaana on 2023-10-20 17:54:31 |

Share: | | | | |


ಅ.23: ಉರ್ವ ಕ್ರಿಕೆಟ್ ಮೈದಾನದಲ್ಲಿ ಪಿಲಿ ನಲಿಕೆ-2023

ಮಂಗಳೂರು: ಪಿಲಿನಲಿಕೆ ಪ್ರತಿಷ್ಠಾನ ಹಾಗೂ ನಮ್ಮ ಟಿ.ವಿ. ಸಂಸ್ಥೆಯ ಜಂಟಿ ಆಶ್ರಯದಲ್ಲಿ ಜಿಲ್ಲೆಯ ಆಯ್ದ 10 ಪ್ರಸಿದ್ಧ ಹುಲಿವೇಷ ತಂಡಗಳ ಮಧ್ಯೆ "ಪಿಲಿ ನಲಿಕೆ-2023" 8ನೇ ಆವೃತ್ತಿಯ ಸ್ಪರ್ಧೆ ಅ.23ರಂದು ಸೋಮವಾರ ಮಂಗಳೂರಿನ ಉರ್ವ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವುದು ಎಂದು ಪಿಲಿನಲಿಕೆ ಪ್ರತಿಷ್ಠಾನದ ಅಧ್ಯಕ್ಷ ಮಿಥುನ್ ರೈ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. 


ತುಳುನಾಡಿನ ಅಪ್ರತಿಮ ಕಲಾ ಪರಂಪರೆಯಲ್ಲಿ ಒಂದಾದ ಹುಲಿವೇಷ ಇಂದು ಕುಣಿತ, ಬಣ್ಣಗಾರಿಕೆ, ನರ್ತನ, ಹಿನ್ನೆಲೆ ಸಂಗೀತ ಹೀಗೆ ಎಲ್ಲ ವಿಭಾಗದಲ್ಲೂ ತನ್ನ ಮೂಲ ಸ್ವರೂಪವನ್ನು ಕಳೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಮೂಲ ಸೊಗಡಿನೊಂದಿಗೆ ಉಳಿಸಿ, ಪೋಷಿಸುವ ನಿಟ್ಟಿನಲ್ಲಿ ಪ್ರತೀ ವರ್ಷವೂ ಮಂಗಳೂರು ದಸರಾದ ಸಂದರ್ಭದಲ್ಲಿ ಪಿಲಿ ನಲಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದು, ಈ ಬಾರಿ ಮಂಗಳೂರಿನ ಉರ್ವ ಕ್ರಿಕೆಟ್ ಮೈದಾನದಲ್ಲಿ 8ನೇ ಆವೃತ್ತಿ ನಡೆಯಲಿರುವುದು‌ ಎಂದರು. 




ಪ್ರತಿಷ್ಠಿತ 10 ತಂಡಗಳು ಭಾಗವಹಿಸಲಿರುವ ಪಿಲಿನಲಿಕೆ ಸ್ಪರ್ಧೆಯನ್ನು ಬೆಳಗ್ಗೆ 11 ಗಂಟೆಗೆ ಶ್ರೀಮದ್ ಆನೆಗುಂದಿ ಜಗದ್ಗುರು ಮಹಾ ಸಂಸ್ಥಾನ ಮಹಾ ಸರಸ್ವತಿ ಪೀಠ, ಕಟಪಾಡಿಯ ಜಗದ್ಗುರು, ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಉದ್ಘಾಟಿಸಲಿರುವರು. ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹಾಗೂ ಹಾಗೂ ಮಂಗಳೂರಿನ ಪೊಲೀಸ್ ಅಧೀಕ್ಷಕ ಅನುಪಮ್ ಅಗರ್‌ವಾಲ್ ಉಪಸ್ಥಿತರಿರಲಿದ್ದಾರೆ.


ಸ್ಪರ್ಧೆಯಲ್ಲಿ ವಿಜೇತ ತಂಡಗಳಿಗೆ ಪ್ರಥಮ ರೂ.5 ಲಕ್ಷ ಹಾಗೂ ಟ್ರೋಫಿ, ದ್ವಿತೀಯ ರೂ. 3 ಲಕ್ಷ ಹಾಗೂ ಟ್ರೋಫಿ, ತೃತೀಯ ರೂ. 2 ಲಕ್ಷ, ಟ್ರೋಫಿ ನೀಡಲಾಗುವುದು. ವೈಯಕ್ತಿಕ ವಿಭಾಗದಲ್ಲಿ ಅತ್ಯುತ್ತಮ ಬಣ್ಣಗಾರಿಕೆ, ಕರಿ ಹುಲಿ, ಮರಿ ಹುಲಿ, ತಾಸೆ, ಮುಡಿ ಹಾರಿಸುವುದು, ನರ್ತನ ವಿಜೇತರಿಗೆ ತಲಾ ರೂ. 50 ಸಾವಿರ ನಗದು ಪುರಸ್ಕಾರ ನೀಡಲಾಗುವುದು. ಭಾಗವಹಿಸುವ ಎಲ್ಲಾ ತಂಡಗಳಿಗೆ ತಲಾ 50 ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡಲಾಗುವುದು. ಜಿಲ್ಲೆಯ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಸ್ಪರ್ಧಾ ಕಾರ್ಯಕ್ರಮವೊಂದಕ್ಕೆ ಜರ್ಮನ್ ಸ್ಟ್ರಕ್ಚರ್ ಅಳವಡಿಸಲಾಗುತ್ತಿದ್ದು, 10 ಸಾವಿರ ಜನರು ಕುಳಿತು ನೋಡುವ ಅವಕಾಶ ಕಲ್ಪಿಸಲಾಗಿದೆ. ಮಹಿಳೆಯರು ಹಾಗೂ ಮಕ್ಕಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆಯನ್ನು ಮಾಡಲಾಗುವುದು.


ಹಿಂದಿ, ಕನ್ನಡ, ತುಳು ಚಿತ್ರ ರಂಗದ ತಾರೆಯರು, ವಿಶೇಷವಾಗಿ ಸುನೀಲ್ ಶೆಟ್ಟಿ, ರಿಷಭ್ ಶೆಟ್ಟಿ, ರಾಜ್ ಶೆಟ್ಟಿ ಹಾಗೂ ಕ್ರಿಕೆಟ್ ಲೋಕದ ಸಾಧಕರಾದ ಹರ್ಭಜನ್ ಸಿಂಗ್, ಜಾಂಟಿ ರೋಡ್ಸ್, ಪಿಲಿನಲಿಕೆಗೆ ತಾರಾ ಮೆರುಗು ನೀಡಲಿದ್ದಾರೆ. ರಾಜಕೀಯ ನಾಯಕರು ಸೇರಿದಂತೆ ಹಲವು ಕ್ಷೇತ್ರದ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವರು ಎಂದು ಮಿಥುನ್ ರೈ ಮಾಹಿತಿ ನೀಡಿದರು.


ಪತ್ರಿಕಾಗೋಷ್ಠಿಯಲ್ಲಿ ನಮ್ಮ ಟಿವಿಯ ಡಾ.ಶಿವಚರಣ್ ಶೆಟ್ಟಿ, ಅವಿನಾಶ್, ವಿಕಾಸ್, ನವೀನ್ ಶೆಟ್ಟಿ ಎಡ್ಮೆಮಾರ್ ಉಪಸ್ಥಿತರಿದ್ದರು.

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿಗೆ ಶಿಲಾನ್ಯಾಸ | 35 ಲಕ್ಷ ರೂ. ಯೋಜನೆಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು

Posted by Vidyamaana on 2023-03-11 09:04:59 |

Share: | | | | |


ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿಗೆ ಶಿಲಾನ್ಯಾಸ | 35 ಲಕ್ಷ ರೂ. ಯೋಜನೆಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು

ಪುತ್ತೂರು: ಅತ್ಯಂತ ಪಾವಿತ್ರ್ಯತೆ ಹೊಂದಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿ ಬಹುದಿನಗಳ ಬೇಡಿಕೆಯಾಗಿದ್ದು, ಇದೀಗ 35 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೆ ಶಿಲಾನ್ಯಾಸ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚುವರಿ ಅನುದಾನ ತರಿಸಿಕೊಂಡು, ಇನ್ನಷ್ಟು ಅಭಿವೃದ್ಧಿಗೆ ಪ್ರಯತ್ನಿಸಲಾಗುವುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಿಣಿ ಅಭಿವೃದ್ಧಿಗಾಗಿ ಪುಡಾದ 35 ಲಕ್ಷ ರೂ. ಅನುದಾನದ ಕಾಮಗಾರಿಗೆ ಶನಿವಾರ ತೆಂಗಿನಕಾಯಿ ಒಡೆಯುವ ಮೂಲಕ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರುಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಪುಷ್ಕರಿಣಿ ಧಾರ್ಮಿಕ ಮಹತ್ವವನ್ನು ಹೊಂದಿದೆ. ಆದ್ದರಿಂದ ಈ ಕೆರೆಯನ್ನು ಅಭಿವೃದ್ಧಿ ಮಾಡುವ ದೃಷ್ಟಿಯಿಂದ ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಹಂತಹಂತವಾಗಿ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದರು

.ಬನ್ನೂರು ಕೆರೆಗೆ 1.75 ಕೋಟಿ ಅಂದಾಜು ಪಟ್ಟಿ ತಯಾರಿ : ಭಾಮಿ ಅಶೋಕ್ ಶೆಣೈ

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್‍ ಶೆಣೈ ಮಾತನಾಡಿ, ನಗರ ಸೇರಿದಂತೆ ಹೊರವಲಯದ ಹಲವು ಕೆರೆಗಳ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು. ಈಗಾಗಲೇ ಬನ್ನೂರು ಕೆರೆ ಅಭಿವೃದ್ಧೀಗೆ 1.75 ಕೋಟಿ ರೂ. ಅಂದಾಜು ಪಟ್ಟಿ ತಯಾರಿಸಲಾಗಿದೆ. ಈ ಪ್ರಕ್ರಿಯೆ ಕೇವಲ ನಾಲ್ಕು ದಿನಗಳಲ್ಲಿ ನಿರ್ಐಯ ತೆಗೆದುಕೊಂಡು ಮಾಡಲಾಗಿದೆ ಎಂದ ಅವರು, ದೇವಸ್ಥಾನದ ಕೆರೆ ಅಭಿವೃದ್ಧಿಗೆ 35 ಲಕ್ಷ ರೂ. ಅನುದಾನ ಪುಡಾ ವತಿಯಿಂದ ನೀಡಲಾಗಿದ್ದು, ಅನುದಾನ ನೀಡುವಲ್ಲಿ ಶಾಸಕ ಸಂಜೀವ ಮಠಂದೂರು ಅವರು ಪಾತ್ರ ಮಹತ್ವದ್ದಾಗಿದೆ. ಇನ್ನಷ್ಟು ಅನುದಾನ ಒದಗಿಸುವ ಭರವಸೆ ನೀಡಿದರು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಒಂದು ಚಕ್ರದಿಂದ ಕೆಲಸ ಕಾರ್ಯಗಳು ನಡೆಯುವುದಿಲ್ಲ. ಪುಷ್ಕರಣಿ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡುವಲ್ಲಿ ಪುತ್ತೂರು ಶಾಸಕರು ಸೇರಿದಂತೆ ಎಲ್ಲರೂ ಕೈಜೋಡಿಸುವಿಕೆಯಿಂದ ಆಗಿದೆ. ಒಟ್ಟಾರೆಯಾಗಿ ದೇವಸ್ಥಾನದ ಅಭಿವೃದ್ಧಿ ಕೆಲಸಗಳು ಸರಿಯಾದ ರೀತಿಯಲ್ಲಿ ಸಾಗುತ್ತಿದೆ ಎಂದರು.

ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್‍ ಮಾತನಾಡಿದರು. ವೇದಿಕೆಯಲ್ಲಿ ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ನಗರಸಭೆ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, , ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳೀಕೃಷ್ಣ ಹಸಂತಡ್ಕ, ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಭಿಲಾಷ್ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಯೋಜನಾ ಪ್ರಾಧಿಕಾರದ ಸದಸ್ಯರಾದ ರಮೇಶ್‍ ಭಟ್, ಜಯಶ್ರೀ ಶೆಟ್ಟಿ, ನ್ಯಾಯವಾದಿ ಚಿದಾನಂದ ಬೈಲಾಡಿ ಮತ್ತಿತರರು ಉಪಸ್ಥಿತರಿದ್ದರು.

ಅಪೂರ್ವ ಪ್ರಾರ್ಥನೆ ಹಾಡಿದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಸ್ವಾಗತಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ವಂದಿಸಿದರು. ಮಾಜಿ ಪುರಸಭಾ ಅಧ್ಯಕ್ಷ ರಾಜೇಶ್ ಬನ್ನೂರು ಕಾರ್ಯಕ್ರಮ ನಿರೂಪಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಿ.ಐತ್ತಪ್ಪ ನಾಯ್ಕ, ರಾಮದಾಸ್ ಗೌಡ, ವೀಣಾ ಬಿ.ಕೆ.ಶೇಖರ್ ನಾರಾವಿ, ಮ್ಯಾನೇಜರ್ ಹರೀಶ್‍ ಶೆಟ್ಟಿ ಅತಿಥಿಗಳನ್ನು ಗೌರವಿಸಿದರು

142 ಕೋಟಿ ಜನಸಂಖ್ಯೆಯೊಂದಿಗೆ ಚೀನಾವನ್ನು ಹಿಂದಿಕ್ಕಿದ ಭಾರತ

Posted by Vidyamaana on 2023-04-19 08:33:01 |

Share: | | | | |


142 ಕೋಟಿ ಜನಸಂಖ್ಯೆಯೊಂದಿಗೆ ಚೀನಾವನ್ನು ಹಿಂದಿಕ್ಕಿದ ಭಾರತ

ಹೊಸದಿಲ್ಲಿ: ಭಾರತವು 142.86 ಕೋಟಿ ಜನಸಂಖ್ಯೆಯೊಂದಿಗೆ ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದೆ ಎಂದು ವಿಶ್ವಸಂಸ್ಥೆ ಇಂದು ಬಿಡುಗಡೆ ಮಾಡಿರುವ  ಅಂಕಿ-ಅಂಶಗಳಿಂದ ತಿಳಿದುಬಂದಿದೆ.

1960ರಲ್ಲಿ ಮಾಜಿ ನಾಯಕ ಮಾವೋ ಝೆಡಾಂಗ್ ಅವರ ವಿನಾಶಕಾರಿ ಕೃಷಿ ನೀತಿಗಳ ಅಡಿಯಲ್ಲಿ ಲಕ್ಷಾಂತರ ಜನರು ಹಸಿವಿನಿಂದ ಸತ್ತ ನಂತರ ಮೊದಲ ಬಾರಿಗೆ ಚೀನಾದಲ್ಲಿ ಜನರ ಸಂಖ್ಯೆ ಕಳೆದ ವರ್ಷ ಕುಸಿತ ಕಂಡಿತ್ತು.

ಕಂಠಪೂರ್ತಿ ಕುಡಿದು ಯುವತಿಯರ ಹೈಡ್ರಾಮ: ರಸ್ತೆಯಲ್ಲಿ ಬಿದ್ದು ಒದ್ದಾಡಿದ ನಾರಿಮಣಿಯರು

Posted by Vidyamaana on 2023-10-20 20:54:38 |

Share: | | | | |


ಕಂಠಪೂರ್ತಿ ಕುಡಿದು ಯುವತಿಯರ ಹೈಡ್ರಾಮ: ರಸ್ತೆಯಲ್ಲಿ ಬಿದ್ದು ಒದ್ದಾಡಿದ ನಾರಿಮಣಿಯರು

ಬೆಂಗಳೂರು ;- ಕೋರಮಂಗಲದ ಡ್ರಂಕನ್ ಡ್ಯಾಡಿ ಎಂಬ ಪಬ್‌ನಲ್ಲಿ ಹುಡುಗಿಯರು ಕಂಠ ಪೂರ್ತಿ ಕುಡಿದಿದ್ದರು. ಬಳಿಕ ಕುಡಿದು ಟೈಟ್‌ ಆಗಿ ರಾತ್ರಿ 12: 30ರ ಸುಮಾರಿಗೆ ರಸ್ತೆಗಿಳಿದು ಹೈಡ್ರಾಮಾವನ್ನೇ ಮಾಡಿದ್ದಾರೆ. ಮೈಮೇಲೆ ಪ್ರಜ್ಞೆಯೇ ಇಲ್ಲದಷ್ಟು ಕುಡಿದು ರಸ್ತೆಯಲ್ಲಿ ಬಿದ್ದು ಒದ್ದಾಡಿದ್ದಾರೆ.ಒಬ್ಬ ಯುವತಿಯಂತೂ ನಡುರಸ್ತೆಯಲ್ಲೇ ಮಲಗಿಕೊಂಡರೆ, ಮತ್ತೊಬ್ಬಳು ಕಾರಿನ ಮೇಲೆ ಕುಳಿತುಕೊಂಡು ಪೋಸ್‌ ನೀಡಿದ್ದಾಳೆ. ಮತ್ತೊಬ್ಬಳು ಎಲ್ಲೆಂದರಲ್ಲಿ ಬಿದ್ದು ‌ಒದ್ದಾಡಿದ್ದಾಳೆ. ಕುಡಿದ‌ ಮತ್ತಿನಲ್ಲಿ ತಾವು ಏನು ಮಾಡುತ್ತಿದ್ದೇವೆ ಎಂಬುದೇ ಅರಿವಿಲ್ಲದಂತೆ ಹುಚ್ಚಾಟವಾಡಿದ್ದಾರೆ.


ನಡುರಸ್ತೆಯಲ್ಲೇ ಹುಡುಗಿಯರ ಆಟೋಟಾಪದಿಂದ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಇತ್ತ ಇವರ ರಂಪಾಟವನ್ನೆಲ್ಲ ನೋಡುತ್ತಿದ್ದ ಜನರು ವಿಡಿಯೊ ಮಾಡಿಕೊಂಡಿದ್ದಾರೆ. ಕೆಲ ಸ್ಥಳೀಯರು ಮತ್ತು ಸಾರ್ವಜನಿಕರಿಗೆ ಹಲ್ಲೆ‌ ಮಾಡಿದ ಆರೋಪವು ಕೇಳಿ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿ ಯುವತಿಯರಿಗೆ ವಾರ್ನ್ ಮಾಡಿ ಕಳುಹಿಸಿದ್ದಾರೆ.

ಖ್ಯಾತ ತಮಿಳುನಟ ವಿಜಯ್ ಪುತ್ರಿ ಮೀರಾ ಆತ್ಮಹತ್ಯೆ

Posted by Vidyamaana on 2023-09-19 08:54:10 |

Share: | | | | |


ಖ್ಯಾತ ತಮಿಳುನಟ ವಿಜಯ್  ಪುತ್ರಿ ಮೀರಾ ಆತ್ಮಹತ್ಯೆ

ಚೆನ್ನೈ:ಖ್ಯಾತ ತಮಿಳು ನಟ ವಿಜಯ್ ಆಂಟನಿ ಮಗಳು ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.ಸಂಗೀತ ಸಂಯೋಜಕ, ನಟ ಮತ್ತು ನಿರ್ಮಾಪಕ ವಿಜಯ್ ಆಂಟೋನಿ ಅವರ ಪುತ್ರಿ ಮೀರಾ ಅವರು ಸೆಪ್ಟೆಂಬರ್ 19 ರ ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 16 ವರ್ಷ ವಯಸ್ಸಾಗಿತ್ತುವರದಿಗಳ ಪ್ರಕಾರ, ಮೀರಾ ಅವರ ಚೆನ್ನೈನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದ ನಂತರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು. ವರದಿಗಳ ಪ್ರಕಾರ, ಅವರು ಒತ್ತಡದಲ್ಲಿದ್ದರು ಮತ್ತು ಅದಕ್ಕಾಗಿಯೇ ಚಿಕಿತ್ಸೆ ಪಡೆಯುತ್ತಿದ್ದರು.


ಚೆನ್ನೈನ ಜನಪ್ರಿಯ ಶಾಲೆಯಲ್ಲಿ ಓದುತ್ತಿದ್ದಳು. ದೃಢೀಕರಿಸದ ವರದಿಗಳ ಪ್ರಕಾರ ಬಾಲಕಿ ಖಿನ್ನತೆಯಿಂದ ಬಳಲುತ್ತಿದ್ದಳು.


ಮನೆಯ ಸಹಾಯಕರು ಕೋಣೆಯಲ್ಲಿದ್ದ ಮೀರಾ ಅವರನ್ನು ಚೆನ್ನೈನ ಆಸ್ಪತ್ರೆಗೆ ಸಾಗಿಸಿದರು. ಆದರೆ, ಆಕೆಯನ್ನು ಪರೀಕ್ಷಿಸಿದ ವೈದ್ಯರು ಆಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.ವಿಜಯ್ ಆಂಟೋನಿ ತಮಿಳಿನ ಅನೇಕ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 

Recent News


Leave a Comment: