Posted by vidyamaana on 2024-07-25 13:38:46 |
ನಾವೆಲ್ಲರೂ ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ಗಳನ್ನು ಬಳಸುತ್ತೇವೆ, ಇದು ನಮ್ಮ ಜೀವನದ ಪ್ರಮುಖ ಭಾಗವಾಗಿದೆ, ಆದರೆ ನಿಮ್ಮ ಸ್ಮಾರ್ಟ್ಫೋನ್ ಅಡಿಯಲ್ಲಿ ಸಣ್ಣ ರಂಧ್ರವನ್ನು ನೀವು ಎಂದಾದರೂ ಗಮನಿಸಿದ್ದೀರಾ, ಆದರೆ ಅದು ಏನು ಬಳಸುತ್ತದೆ ಎಂಬುದರ ಬಗ್ಗೆ ನೀವು ಯೋಚಿಸಿದ್ದೀರಾ, ಜನರು ಇದನ್ನು ಮೈಕ್ರೊಫೋನ್ ಎಂದು ಪರಿಗಣಿಸುತ್ತಾರೆ, ಇದನ್ನು ಮೈಕ್ರೊಫೋನ್ ಗ್ರಿಲ್ ಎಂದು ಕರೆಯಲಾಗುತ್ತದೆ, ಇದು ನಿರ್ದಿಷ್ಟವಾಗಿ ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಗಳನ್ನು ಒಳಗೊಂಡಿದೆ.ಶಬ್ದವನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಫೋನ್ ಕರೆಗಳ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ, ಅದರ ಬಗ್ಗೆ ಸಂಪೂರ್ಣ ಮಾಹಿತಿಯ ಬಗ್ಗೆ ತಿಳಿದುಕೊಳ್ಳೋಣ
ಇದು ಹೇಗೆ ಕಾರ್ಯನಿರ್ವಹಿಸುತ್ತದೆ
ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ನಿಮ್ಮ ಫೋನ್ನ ಪ್ರಾಥಮಿಕ ಮೈಕ್ರೊಫೋನ್ನೊಂದಿಗೆ ಕಾರ್ಯನಿರ್ವಹಿಸುತ್ತದೆ, ಇದು ಸಾಮಾನ್ಯವಾಗಿ ಮುಂಭಾಗ ಅಥವಾ ಮೇಲ್ಭಾಗದಲ್ಲಿದೆ. ಕರೆ ಸಮಯದಲ್ಲಿ, ಮುಖ್ಯ ಮೈಕ್ರೊಫೋನ್ ನಿಮ್ಮ ಧ್ವನಿಯನ್ನು ಸೆರೆಹಿಡಿಯುತ್ತದೆ, ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಸುತ್ತಮುತ್ತಲಿನ ಶಬ್ದಗಳನ್ನು ತೆಗೆದುಕೊಳ್ಳುತ್ತದೆ.
ಮೈಕ್ರೊಫೋನ್ ಗ್ರಿಲ್ ನ ಪ್ರಾಮುಖ್ಯತೆ
ಮೈಕ್ರೊಫೋನ್ ಗ್ರಿಲ್ ಶಬ್ದವನ್ನು ತೆಗೆದುಹಾಕುವುದು ಅಥವಾ ತಿರುಚುವುದು ನಿಮ್ಮ ಕರೆಯ ಗುಣಮಟ್ಟದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಈ ಘಟಕವಿಲ್ಲದೆ, ಹಿನ್ನೆಲೆ ಶಬ್ದಗಳು ಹೆಚ್ಚು ಸ್ಪಷ್ಟವಾಗುತ್ತವೆ, ಸಂವಹನವನ್ನು ಕಷ್ಟಕರವಾಗಿಸುತ್ತದೆ.ಎಲ್ಲೆಲ್ಲೂ ಇಲ್ಲ
ಎಲ್ಲಾ ಸ್ಮಾರ್ಟ್ಫೋನ್ಗಳು ಶಬ್ದ-ರದ್ದುಗೊಳಿಸುವ ಮೈಕ್ರೊಫೋನ್ ಅನ್ನು ಹೊಂದಿಲ್ಲ ಎಂಬುದನ್ನು ಗಮನಿಸುವುದು ಮುಖ್ಯ. ನಿಮ್ಮ ಸಾಧನವು ಈ ವೈಶಿಷ್ಟ್ಯವನ್ನು ಹೊಂದಿದೆಯೇ ಎಂದು ನಿಮಗೆ ಖಚಿತವಿಲ್ಲದಿದ್ದರೆ, ನಿಮ್ಮ ಫೋನ್ನ ಕೈಪಿಡಿಯನ್ನು ನೀವು ನೋಡಿಕೊಳ್ಳಬಹುದು.
Posted by Vidyamaana on 2023-05-15 23:19:46 |
ಬೆಂಗಳೂರು : ಕರ್ನಾಟಕದ ಈ ಬಾರಿಯ ವಿಧಾನಸಭಾ ಚುನಾವಣಾ ಫಲಿತಾಂಶಗಳು ರಾಜಕೀಯದ ಪ್ರಸ್ತುತತೆ, ಧ್ರುವೀಕರಣ ಅನೇಕ ನಿರೂಪಣೆಗಳು ಮತ್ತು ತೀರ್ಮಾನಗಳನ್ನು ಹುಟ್ಟುಹಾಕಿದ್ದು, ಕಾಂಗ್ರೆಸ್ ಪಕ್ಷದ ಹೋರಾಟದಲ್ಲಿ ಮಾಜಿ ಐಎಎಸ್ ಅಧಿಕಾರಿಯೊಬ್ಬರ ಪಾತ್ರವೂ ಗಮನಾರ್ಹವಾಗಿದೆ.ಕಾಂಗ್ರೆಸ್ ವಾರ್ ರೂಮ್ ಮುಖ್ಯಸ್ಥರಾಗಿ ಸಸಿಕಾಂತ್ ಸೆಂಥಿಲ್ ಅವರು ತನ್ನದೇ ಆದ ದೊಡ್ಡ ಕೊಡುಗೆಯನ್ನು ಕಾಂಗ್ರೆಸ್ ಗೆಲುವಿನಲ್ಲಿ ಕೊಟ್ಟು ಯಶಸ್ಸನ್ನು ಸಂಭ್ರಮಿಸಿದ್ದಾರೆ. ಸೆಂಥಿಲ್ ಮತ್ತು ಅನುಭವಿ ಯುವ ತಂಡ ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ ಯಶಸ್ಸು ‘ಕೈ’ಗೆ ತಂದು ಕೊಟ್ಟಿದೆ.ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ತಮಿಳುನಾಡು ಮೂಲದ ಮಾಜಿ ಐಎಎಸ್ ಅಧಿಕಾರಿ (ಕರ್ನಾಟಕ ಕೇಡರ್) ಸಸಿಕಾಂತ್ ಸೆಂಥಿಲ್ ಅವರು ನಾಗರಿಕ ಸೇವೆಯನ್ನು ತೊರೆದು 2019 ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದರು
Posted by Vidyamaana on 2023-06-24 16:06:21 |
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ ಶನಿವಾರ ಒಳ ಪವೇಶಿಸಿ ಮೌಢ್ಯದ ವಿರುದ್ಧ ತಮ್ಮ ನಿಲುವನ್ನು ಮತ್ತೆ ಸಾಬೀತುಪಡಿಸಿದ್ದಾರೆ.ಜನರ ಬಗ್ಗೆ ಕಾಳಜಿ,ನಡತೆಯಲ್ಲಿ ಪ್ರಾಮಾಣಿಕತೆ, ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ.ವಾಸ್ತುದೋಷದ ಕಾರಣಕ್ಕಾಗಿ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ,ಅದೇ ಬಾಗಿಲಿನಿಂದ ಕಚೇರಿ ಪ್ರವೇಶ ಮಾಡಿದೆ.ಕೊಠಡಿಯೊಳಗೆ ಒಳ್ಳೆಯ ಗಾಳಿ, ಬೆಳಕು ಬರುವಂತಿದ್ದರೆ ಅದಕ್ಕಿಂತ ಉತ್ತಮ ವಾಸ್ತು ಬೇರಿಲ್ಲ.ನಡೆ – ನುಡಿ ಶುದ್ಧವಿದ್ದರೆ ಮತ್ತೆಲ್ಲವೂ ಶುಭದಾಯಕವಾಗಿರಲಿದೆ.ಜನತೆಯ ಆಶೀರ್ವಾದ ಇರಲಿ.” ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.ಅನ್ನಭಾಗ್ಯ ಯೋಜನೆ ಕುರಿತು ಅಧಿಕಾರಿಗಳೊಂದಿಗೆ ನಡೆಸಿದ ಸಭೆ ವೇಳೆ ಸಿಎಂ ಬಾಗಿಲು ತೆರೆಸುವ ನಿರ್ಧಾರ ಕೈಗೊಂಡಿದ್ದಾರೆ. ಲಿಫ್ಟ್ ನಲ್ಲಿ ವಿಧಾನಸೌಧದ ಮೂರನೇ ಮಹಡಿಗೆ ಬಂದ ಸಿಎಂ ದಕ್ಷಿಣ ದ್ವಾರ ಬಂದ್ ಆಗಿರುವುದನ್ನು ಗಮನಿಸಿ ಜತೆಗಿದ್ದ ಅಧಿಕಾರಿಗಳಿಗೆ ಬಾಗಿಲು ಏಕೆ ಮುಚ್ಚಿದೆ ಎಂದು ಪ್ರಶ್ನಿಸಿದ್ದಾರೆ. ಸಿಬಂದಿ ಪಶ್ಚಿಮ ದ್ವಾರ ಮುಖೇನ ಒಳ ಹೋಗಿ ದಕ್ಷಿಣ ಬಾಗಿಲು ತೆರೆದ ಬಳಿಕ ಸಿದ್ದರಾಮಯ್ಯ ಅದೇ ದಾರಿಯಲ್ಲಿ ಒಳ ಪ್ರವೇಶಿಸಿ ಸಭೆ ನಡೆಸಿದರು. 2013ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಮುಚ್ಚಿದ್ದ ದಕ್ಷಿಣ ದ್ವಾರವನ್ನು ಅಧಿಕಾರಿಗಳಿಗೆ ಸೂಚನೆ ನೀಡಿ ತೆರೆಸಿದ್ದರು.
Posted by Vidyamaana on 2024-07-23 19:43:42 |
ಪುಣೆ: ಅತಿ ವೇಗ ಅಪಘಾತಕ್ಕೆ ಕಾರಣವೆಂದು ತಿಳಿದರೂ ಕೂಡ ಕೆಲವು ಚಾಲಕರು ಅವಸರದಲ್ಲಿ ವೇಗವಾಗಿ ವಾಹನ ಚಲಾಯಿಸಿ ಜನರ ಜೀವಕ್ಕೆ ಆಪತ್ತು ತರುತ್ತಿದ್ದಾರೆ. ಎಲ್ಲೆಂದರಲ್ಲಿ ನಿಂತ ಜನರ ಮೇಲೂ ವಾಹನವನ್ನು ಹಾರಿಸಿಕೊಂಡು ಹೋಗುತ್ತಾರೆ. ಇದೀಗ ಅಂತಹದೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Hit and Run Case)ಆಗಿದೆ.ಪ್ರಿ-ಚಿಂಚ್ವಾಡ್ನಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಟ್ಯಾಕ್ಸಿ ಮಹಿಳೆಗೆ ಡಿಕ್ಕಿ ಹೊಡೆದು ನಂತರ ಚಾಲಕ ಅಪಘಾತದ ಸ್ಥಳದಿಂದ ಓಡಿಹೋದ ಹೊಸ ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Posted by Vidyamaana on 2024-01-30 19:04:19 |
ಪುತ್ತೂರು: ಜ.೨೭ ರಂದು ಬೆಳಿಗ್ಗೆ ಆರಂಭಗೊಂಡಿದ್ದ ೩೧ನೇ ವರ್ಷದ ಪುತ್ತೂರಿನ ಐತಿಹಾಸಿಕ ಕೋಟಿ ಚೆನ್ನಯ ಜೋಡು ಕರೆ ಕಂಬಳ ಜ.೨೯ರಂದು ಬೆಳಗಿನ ಜಾವ ಸಂಪನ್ನಗೊಂಡಿದೆ. ಎರಡು ಹಗಲು ಎರಡು ರಾತ್ರಿ ಕಂಬಳ ನಡೆಯುವ ಮೂಲಕ ಇತಿಹಾಸ ನಿರ್ಮಿಸಿದೆ. ಒಟ್ಟು ೬ ವಿಭಾಗಗಳ ೧೮೭ ಜೊತೆ ಕೋಣಗಳು ಭಾಗವಹಿಸಿದ್ದು ಜ.೨೯ರಂದು ಬೆಳಿಗ್ಗೆ ೫ ಗಂಟೆಯ ಸುಮಾರಿಗೆ ಅಂತಿಮ ಸ್ಪರ್ಧೆಯು ನಡೆಯಿತು. ಬಳಿಕ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಎನ್ ಚಂದ್ರಹಾಸ ಶೆಟ್ಟಿ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವರ್ಷಂಪ್ರತಿಯಂತೆ ಈ ಬಾರಿಯೂ ೩೧ನೇ ವರ್ಷದ ಕೋಟಿ ಚೆನ್ನಯ ಜೋಡು ಕರೆ ಕಂಬಳವು ಬಹಳ ಅದ್ದೂರಿಯಾಗಿ ವಿಜ್ರಂಭಣೆಯಿಂದ ನಡೆದು ಹೊಸ ಇತಿಹಾಸ ನಿರ್ಮಿಸಿದೆ. ಕಂಬಳವು ಯಶಸ್ವಿಯಾಗಿ ನೆರವೇರಲು ಹಲವಾರು ದಿನಗಳಿಂದ ಹಗಲು ರಾತ್ರಿ ದುಡಿದ ಕಂಬಳ ಸಮಿತಿಯ ವಿವಿಧ ಪದಾಧಿಕಾರಿಗಳಿಗೆ, ಸದಸ್ಯರಿಗೆ ಎಲ್ಲಾ ಸ್ವಯಂಸೇವಕರಿಗೆ ಕಂಬಳ ಅಭಿಮಾನಿಗಳಿಗೆ ಹಾಗೂ ಇದಕ್ಕಾಗಿ ತನು, ಮನ ,ಧನಗಳಿಂದ ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿ ಮುಂದೆಯೂ ಕಂಬಳವು ಇದೇ ರೀತಿಯಾಗಿ ಯಶಸ್ವಿಯಾಗಿ ಮುಂದುವರಿಯಲು ತಮ್ಮೆಲ್ಲರ ಸಹಕಾರ ಅಗತ್ಯ ಎಂದರು.
ಇದಕ್ಕೂ ಮೊದಲು ನಡೆದ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಮಲ್ಲಿಕಾ ಪಕ್ಕಳ ,ಚನಿಲ ತಿಮ್ಮಪ್ಪ ಶೆಟ್ಟಿ ,ರಾಧಾಕೃಷ್ಣ ಆಳ್ವ, ಲಕ್ಷ್ಮೀನಾರಾಯಣ ಶೆಟ್ಟಿ, ಆರಿಯಡ್ಕ ಜೈರಾಜ್ ಭಂಡಾರಿ, ಸಿದ್ದನಾಥ ಎಸ್.ಕೆ. ಮೂಕಾಂಬಿಕ ಗ್ಯಾಸ್ ಏಜೆನ್ಸಿನ ಮಾಲಕ ಸಂಜೀವ ಆಳ್ವ, ಪ್ರಶಾಂತ್ ಶೆಣೈ, ನಗರಸಭಾ ಸದಸ್ಯರಾದ ರಮೇಶ್ ರೈ ನೆಲ್ಲಿಕಟ್ಟೆ , ಮುಹಮ್ಮದ್ ರಿಯಾಜ್, ಯೂಸುಫ್ ಡ್ರೀಮ್, ಶೈಲಾ ಪೈ, ಬಾಲಚಂದ್ರ, ಕೋಡಿಂಬಾಡಿ ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಪೂಜಾರಿ ಸೂರ್ಯನಾಥ ಆಳ್ವ, ದಯಾನಂದ ರೈ ಕೋರ್ಮಂಡ, ಸಂತೋಷ್ ಕುಮಾರ್ ರೈ ಕೈಕಾರ, ಬೆಳ್ಳಿಪ್ಪಾಡಿ ಕೈಪ ಕೇಶವ ಭಂಡಾರಿ, ಬಿ ಕೆ ಶಿವಕುಮಾರ್, ನಗರಸಭಾ ನಿಕಟಪೂರ್ವಾಧ್ಯಕ್ಷ ಜೀವಂಧರ್ ಜೈನ್, ಅರಿಯಡ್ಕ ಚಿಕ್ಕಪ್ಪ ನಾಕ್, ಡಾ. ದೀಪಕ್ ರೈ, ಕೇಶವ ಯಂ, ನರಸಿಂಹ ಕಾಮತ್, ಕಿಶೋರ್ ಕುಮಾರ್ ಬೊಟ್ಯಾಡಿ, ಬವಿನ್ ಸವಜಾನಿ, ಶರತ್ ಕುಮಾರ್ ರೈ, ಬೆಟ್ಟ ಈಶ್ವರ ಭಟ್, ಭಾಸ್ಕರ ಗೌಡ ಕೋಡಿಂಬಾಳ, ಅರಿಯಡ್ಕ ಉದಯ ಶಂಕರ ಶೆಟ್ಟಿ,ಸಂತೋಷ್ ಶೆಟ್ಟಿ ಪ್ರಸಾದ್ ಪಾಣಾಜೆ, ದಯಾನಂದ ರೈ ಮನವಳಿಕೆ, ಬೂಡಿಯಾರ್ ಪುರುಷೋತ್ತಮ ರೈ ,ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಜಿಲ್ಲಾ ಯಂಗ್ ಬ್ರಿಗೇಡ್ ಸೇವಾದಳದ ಅಧ್ಯಕ್ಷ ರಂಜಿತ್ ಬಂಗೇರ, ಪ್ರವೀಣ್ ಶೆಟ್ಟ ತಿಂಗಳಾಡಿ, ರೂಪ ರೇಖಾ ಆಳ್ವ, ಎಂ ಕುಶಲ ಪೆರಾಜೆ ,ಪ್ರವೀಣ್ ಕುಮಾರ್, ನಿಹಾಲ್ ಪಿ. ಶೆಟ್ಟಿ, ಶಿವಪ್ರಸಾದ್ ಶೆಟ್ಟಿ ,ಜಗನ್ನಾಥ ರೈ ಜಿ, ಉಮಾನಾಥ್ ಶೆಟ್ಟಿ ಪೆರ್ನೆ,ತಿಂಗಳಾಡಿ ಬಾಲಯ ಲೋಹಿತ್ ಬಂಗೇರ,ದಯಾನಂದ ರೈ, ರಾಮನಾಥ್ ವಿಟ್ಲ ,ರೂಪೇಶ್ ರೈ ಆಲಿಮಾರ ,ದಿನಕರ ರೈ, ಸುಧೀರ್ ಶೆಟ್ಟಿ, ಗಂಗಾಧರ ಶೆಟ್ಟಿ ಕೈಕಾರ, ರಾಮಣ್ಣ ಪೂಜಾರಿ, ಅಬ್ದುಲ್ ರಜಾಕ್ ಬಿ ಎಚ್, ಹರಿಪ್ರಸಾದ್ ರೈ, ಬಾಲಕೃಷ್ಣ ಆಳ್ವ ಕೊಡಾಜೆ ,ಸತೀಶ್ ರೈ ಕಟಾವು ಶಿವರಾಮ ಭಟ್ ಬಿಕರ್ನ ಕಟ್ಟೆ, ಆಕಾಶ್ ಐತಾಳ್, ಕೃಷ್ಣ ಪ್ರಸಾದ್ ಭಂಡಾರಿ, ರವಿ ಪ್ರೊವಿಜನ್ ಸ್ಟೋರ್ , ನವೀನ್ ಶೆಟ್ಟಿ, ಶಾಪಿ ಸುಳ್ಯ, ಮೋಹನ್ ನಾಯಕ್, ಚಂದ್ರಹಾಸ ಶೆಟ್ಟಿ, ಶೀನಪ್ಪ ಪೂಜಾರಿ ಎಂ .ಜಿ. ಅಬೂಬಕ್ಕರ್ ಉಪ್ಪಿನಂಗಡಿ, ಉಮೇಶ ನಾಯಕ್, ಗಿರಿಧರ ಹೆಗ್ಡೆ, ಹರ್ಷಕುಮಾರ್ ರೈ ಮಾಡಾವು, ಕೃಷ್ಣಪ್ಪ ಸಂಪ್ಯ, ಕೃಷ್ಣಲ್ ಸ್ಟೀಲ್ ಇಂಡಸ್ಟ್ರೀಸ್ನ ಮಾಲಕ ಕಿರಣ್ ಡಿಸೋಜಾ, ನಿರೀಕ್ಷಿತ್ ರೈ, ಮಂಜುನಾಥ ಗೌಡ, ಯೂಸುಫ್ ಗೌಸಿಯ, ಹಾಜಿ ಯೂಸುಫ್ ಕೈಕಾರ ನ್ಯಾಯವಾದಿ ರಾಕೇಶ್ ಮಸ್ಕರೇನಸ್, ಎಂ ಪಿ ಉಮ್ಮರ್ ,ಶರೂನ್ ಸಿಕ್ವೇರಾ, ಲೋಕೇಶ್ ಪಡ್ಡಾಯೂರು, ಹರೀಶ್ ವಾಲ್ತಾಜೆ ,ಆಯ್ಕೆ ಸಪ್ಲಾಯಿಸ್ ಮಾಲಕ ಇಮ್ರಾನ್ ಖಾನ್ ಮೊದಲಾದವರು ಅತಿಥಿಗಳಾಗಿ ಆಗಮಿಸಿದ್ದರು.
ಕಂಬಳದ ಸಮಾರೋಪ ಸಮಾರಂಭದ ಆರಂಭದಲ್ಲಿ ತೀರ್ಪುಗಾರರಿಗೆ ಆರೋಗ್ಯ ಇಲಾಖೆಯವರಿಗೆ, ಶಾಮಿಯಾನ ಬ್ಯಾಂಡ್ ಸಹಿತ ವಿವಿಧ ರೀತಿಯಲ್ಲಿ ಸಹಕರಿಸಿದವರನ್ನು ಗೌರವಿಸಲಾಯಿತು. ವಿಜಯಕುಮಾರ್ ಜೈನ್ ಕಂಚಿನ ಮನೆ ,ಅಪ್ಪು ಯಾನೆ ವಲೇರಿಯನ್ ಡೇಸಾ, ಅಲ್ಲಿಪಾದೆ , ರಾಜೀವ ಶೆಟ್ಟಿ ಹೆಡ್ತೂರು , ಸುದರ್ಶನ್ ನಾಯಕ್ ಕಂಪ, ರಾಜೇಶ್ ನಾಯಕ್ ನೆಲ್ಲಿಕಟ್ಟೆ, ನವೀನ್ ನಾಯಕ್ ಬೆದ್ರಾಳ, ಸದಾಶಿವ ಸಾಮಾನಿ ಸಂಪಿಗೆದಡಿ, ಸಚಿನ್ ಸರೋಳಿ, ಗೋಪಾಲ ಶೆಟ್ಟಿ, ಸುಮಿತ್ ಶೆಟ್ಟಿ, ಸುಜಿತ್ ಶೆಟ್ಟಿ, ರತ್ನಾಕರ ನಾಯಕ್, ಗಂಗಾಧರ, ಆಲಿಕುಂಞ, ಪ್ರವೀಣ್ ಸಚಿನ್ ಸರೋಳಿ ಉಮಾಶಂಕರ್ ನಾಯಕ್ ಪಾಂಗಳಾಯಿ ಮೊದಲಾದವರನ್ನು ಸನ್ಮಾನಿಸಲಾಯಿತು
ಸಮಿತಿಯ ವಿವಿಧ ಪದಾಧಿಕಾರಿಗಳಾದ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ .ಖಜಾಂಜಿ ಪಂಜಿಗುಡ್ಡೆ ಈಶ್ವರ ಭಟ್, ಸಂಚಾಲಕ ವಸಂತಕುಮಾರ್ ರೈ ದುಗ್ಗಲ, ಉಪಾಧ್ಯಕ್ಷರಾದ ಶಿವರಾಮ ಆಳ್ವ ಬಳ್ಳಮಜಲು, ಜಿನ್ನಪ್ಪ ಪೂಜಾರಿ ಮುರ, ರೋಶನ್ ರೈ ಬನ್ನೂರು, ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ, ಗೋಪಾಲ ಕಡಂಬು ಮೂಡಬಿದ್ರೆ, ಹಸೈನಾರ್ ಬನಾರಿ, ಖಾದರ್ ಪೊಳ್ಯ ,ಪ್ರಕಾಶ ನೆಕ್ಕಿಲಾಡಿ , ಶಶಿಕಿರಣ್ ರೈ ನೂಜಿ ಬೈಲು ಪೂರ್ಣೇಶ್ ಭಂಡಾರಿ, ಶಶಿ ನೆಲ್ಲಿಕಟ್ಟೆ, ಸುರೇಶ್ ಚಿಕ್ಕ ಪುತ್ತೂರು, ಮೊದಲಾದವರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಉಪಾಧ್ಯಕ್ಷ ನಿರಂಜನ ರೈ ಮಠಂತಬೆಟ್ಟು ಕಾರ್ಯಕ್ರಮ ನಿರ್ವಹಿಸಿದರು. ಸಂಚಾಲಕ ವಸಂತಕುಮಾರ್ ರೈ ದುಗ್ಗಳ ಸಹಕರಿಸಿದರು.
ಕನಹಲಗೆ: ೦೬ ಜೊತೆ ಅಡ್ಡಹಲಗೆ: ೦೪ ಜೊತೆ
ಹಗ್ಗ ಹಿರಿಯ: ೧೫ ಜೊತೆ ನೇಗಿಲು ಹಿರಿಯ: ೪೦ ಜೊತೆ
ಹಗ್ಗ ಕಿರಿಯ: ೨೫ ಜೊತೆ ನೇಗಿಲು ಕಿರಿಯ: ೯೭ ಜೊತೆ
ಒಟ್ಟು ಕೋಣಗಳ ಸಂಖ್ಯೆ: ೧೮೭ ಜೊತೆ
ಕನಹಲಗೆ:( ೬.೫ ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )
ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮೆಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
ಅಡ್ಡ ಹಲಗೆ: ಪ್ರಥಮ: ನಾರಾವಿ ಯುವರಾಜ್ ಜೈನ್
ಹಲಗೆ ಮೆಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮೆಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ಹಗ್ಗ ಹಿರಿಯ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ ಎ
ಓಡಿಸಿದವರು: ಬೈಂದೂರು ಮಂಜುನಾಥ ಗೌಡ
ದ್ವಿತೀಯ: ನೂಜಿಪ್ಪಾಡಿ ಡಾ.ಪ್ರವೀಣ್ ಹೊಳ್ಳ ಬಿ
ಓಡಿಸಿದವರು: ಬಾರಾಡಿ ಸತೀಶ್
ಹಗ್ಗ ಕಿರಿಯ:
ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗಿಶ್ ಪೂಜಾರಿ ಬಿ
ಓಡಿಸಿದವರು: ಭಟ್ಕಳ ಶಂಕರ್
ದ್ವಿತೀಯ: ನೂಜಿಪ್ಪಾಡಿ ಚಂದ್ರಶೇಖರ ಹೊಳ್ಳ ಬಿ
ಓಡಿಸಿದವರು: ಬೈಂದೂರು ಮಂಜುನಾಥ ಗೌಡ
ನೇಗಿಲು ಹಿರಿಯ:
ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ ಎ
ಓಡಿಸಿದವರು: ಬೈಂದೂರು ಮಂಜುನಾಥ ಗೌಡ
ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ತುಕ್ರ ಭಂಡಾರಿ
ಓಡಿಸಿದವರು: ಮಾಳ ಆಧೀಶ್ ಪೂಜಾರಿ
ನೇಗಿಲು ಕಿರಿಯ: ( ಸಮಾನ ಬಹುಮಾನ )
ಮುನಿಯಾಲ್ ಉದಯ ಕುಮಾರ್ ಶೆಟ್ಟಿ
ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್
ಉಡುಪಿ ಬ್ರಹ್ಮಗಿರಿ ಪ್ರಥಮ ಗಣನಾಥ ಹೆಗ್ಡೆ ಬಿ
ಓಡಿಸಿದವರು: ಉಜಿರೆ ಹೊಸಮನೆ ಸ್ಪಂದನ್ ಶೆಟ್ಟಿ
Posted by Vidyamaana on 2023-03-26 04:30:14 |
ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿರುವ ಆಯುಷ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಾಜ್ಯದಲ್ಲೇ ಪ್ರಥಮ ಬಾರಿಗೆ ಪ್ರಕೃತಿ ಚಿಕಿತ್ಸಾ ವಿಭಾಗ ಆರಂಭಿಸಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದ್ದಾರೆ.
ಮಾರ್ಚ್ 25ರ ಶನಿವಾರ ನಗರದ ವೆನ್ಲಾಕ್ ಆಯುಷ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 20 ಲಕ್ಷ ರೂ. ವೆಚ್ಚದ ಅತ್ಯಾಧುನಿಕ ನ್ಯಾಚುರೋಪತಿ ಉಪಕರಣಗಳ ಹಸ್ತಾಂತರ ಮತ್ತು ನೂತನ ಪ್ರಕೃತಿ ಚಿಕಿತ್ಸಾ ವಿಭಾಗಕ್ಕೆ ಚಾಲನೆ ನೀಡಿ ಅವರು ಶನಿವಾರ ಮಾತನಾಡಿದರು.
ಮುಂಬರುವ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಪ್ರದೇಶಗಳಾದ ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಆಸ್ಪತ್ರೆಗಳಲ್ಲೂ ಪ್ರಕೃತಿ ಚಿಕಿತ್ಸೆ ಆರಂಭಿಸಲು ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ಹಾಗೂ ನೆರವು ನೀಡಲಾಗುವುದು ಎಂದವರು ಹೇಳಿದರು.ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಈ ರೀತಿಯ ಪ್ರಕೃತಿ ಚಿಕಿತ್ಸೆಗೆ ಅನುಕೂಲವಾಗಬೇಕಾದ ಭೂಮಿ ಮತ್ತು ಮೂಲ ಸೌಲಭ್ಯಕ್ಕೆ ಜಿಲ್ಲಾಡಳಿತ ಸಹಕಾರ ನೀಡಲಿದೆ ಎಂದ ಅವರು, ಇತ್ರೀಚೆಗೆ ಆಯುರ್ವೇದ, ನ್ಯಾಚುರೋಪತಿ, ಯುನಾನಿ ಚಿಕಿತ್ಸೆಗೆ ಹೆಚ್ಚಿನ ಬೇಡಿಕೆ ಇದೆ. ಸರ್ಕಾರಿ ಆಯುಷ್ ಆಸ್ಪತ್ರೆಯೊಂದರಲ್ಲಿ ಸುಸಜ್ಜಿತವಾದ ಪ್ರಕೃತಿ ಚಿಕಿತ್ಸಾ ವಿಭಾಗ ಆರಂಭಿಸಿರುವುದು ನಗರದ ಬಡ ರೋಗಿಗಳಿಗೆ ವರವಾಗಿದೆ. ಜಿಲ್ಲೆಯ ಗ್ರಾಮೀಣ ಪ್ರದೇಶದ ಜನರಿಗೂ ಈ ಸೌಲಭ್ಯ ದೊರೆಯಬೇಕು. ಇದಕ್ಕಾಗಿ ತಾಲೂಕು ಮಟ್ಟದಲ್ಲಿ ಕಟ್ಟಡ, ಮೂಲ ಸೌಲಭ್ಯ ಒದಗಿಸಲಾಗುವುದು ಎಂದರು.
ಆಯುಷ್ ಆಸ್ಪತ್ರೆಗೆ ಮಂಗಳೂರು ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ (ಎಂಸಿಎಫ್) ಸುಮಾರು 20 ಲಕ್ಷ ರೂ. ಮೌಲ್ಯದ ಅತ್ಯಾಧುನಿಕ ಪ್ರಕೃತಿ ಚಿಕಿತ್ಸೆ ಸಂಬಂಧಿತ ಉಪಕರಣಗಳನ್ನು ಒದಗಿಸಿದೆ. ಈ ಮೂಲಕ ಎಂಸಿಎಫ್ ಸಿಎಸ್ಆರ್ ನಿಧಿ ಉತ್ತಮ ಕಾರ್ಯಕ್ಕೆ ವಿನಿಯೋಗವಾಗಿದೆ ಎಂದು ಜಿಲ್ಲಾಧಿಕಾರಿಯವರು ಅಭಿಪ್ರಾಯಪಟ್ಟರು.
Posted by Vidyamaana on 2024-08-10 10:58:56 |
ಮಂಡ್ಯ :ರೈಲಿಗೆ ಸಿಲುಕಿ ಗೋಲ್ಡ್ ಮೆಡಲ್ ಪದವೀಧರೆ ಸಾವನ್ನಪ್ಪಿದ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ಜರುಗಿದೆ.ಮಂಡ್ಯದ ಸ್ವರ್ಣಸಂದ್ರ ಬಡಾವಣೆಯ ರಮ್ಯ(24)ಮೃತ ಯುವತಿ. ರೈಲು ನಿಲ್ದಾಣದ ರೈಲ್ವೆ ಮೇಲ್ಸೇತುವೆ ಬಳಿ ಹಳಿ ದಾಟುವ ವೇಳೆ ಘಟನೆ ಸಂಭವಿಸಿದೆ.