ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಪಿಡಿಓ ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಪಂಚಾಯತ್ ರಾಜ್ ಇಲಾಖೆ- ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪ್ರಾರಂಭ

Posted by Vidyamaana on 2024-03-18 16:52:23 |

Share: | | | | |


ಪಿಡಿಓ ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಪಂಚಾಯತ್ ರಾಜ್ ಇಲಾಖೆ- ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪ್ರಾರಂಭ

ಪುತ್ತೂರು  ಕರ್ನಾಟಕ ಸರಕಾರವು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಓ) 150 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದು ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಮತ್ತು ಆನ್ಲೈನ್ ಮೂಲಕ ಲಿಖಿತ ಪರೀಕ್ಷಾ ತರಬೇತಿಯನ್ನು ಪ್ರಾರಂಭಿಸಲಿದ್ದು 18/03/2024 ಸೋಮವಾರದಿಂದ ಪ್ರವೇಶಾತಿ ಪ್ರಾರಂಭಗೊಳ್ಳಲಿದೆ.


ತರಬೇತಿ ಅವಧಿ ಎರಡುವರೆ ತಿಂಗಳು. ಕಳೆದ ಎರಡುವರೆ ವರ್ಷದಿಂದ ಪೊಲೀಸ್ ,ಅರಣ್ಯ ಇಲಾಖೆ, ಬ್ಯಾಂಕಿಂಗ್, ಕೆ.ಎಂ.ಎಫ್ ,ಶಿಕ್ಷಕರ ನೇಮಕಾತಿ ಸೇರಿದಂತೆ 116 ಎಷ್ಟು ಅಭ್ಯರ್ಥಿಗಳು ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಸರಕಾರಿ ಹುದ್ದೆಗಳನ್ನು ಏರಿರುತ್ತಾರೆ. ಕರ್ನಾಟಕ ಸರಕಾರವು ಇತ್ತೀಚೆಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿರುವ ಗ್ರಾಮ ಆಡಳಿತ ಅಧಿಕಾರಿ(VAO) ಹುದ್ದೆಗಳಿಗೂ ಅಕಾಡೆಮಿಯಲ್ಲಿ ತರಬೇತಿ ಪ್ರಾರಂಭವಾಗಿದ್ದು, ಸದ್ಯ ಕರೆದಿರುವ ಪಿಡಿಓ ಹುದ್ದೆಗಳಿಗೆ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದೆ.


ನೇರ ತರಗತಿಗಳು – ಬೆಳಗ್ಗೆ 9:30 ರಿಂದ ಮಧ್ಯಾಹ್ನ 1:00 ರವರೆಗೆ (ವಾರದ 5 ದಿನ) ಆನ್ಲೈನ್ ತರಗತಿಗಳು – ರಾತ್ರಿ 7:00 ರಿಂದ 8:00 ರವರೆಗೆ (ವಾರದ ಎಲ್ಲಾ ದಿನ) ಉದ್ಯೋಗಸ್ಥರಿಗೆ, ವಿದ್ಯಾರ್ಥಿಗಳಿಗೆ , ಗೃಹಿಣಿಯರಿಗಾಗಿ ಅನುಕೂಲವಾಗುವಂತೆ ನಡೆಯುತ್ತವೆ.


ಪಿಡಿಓ ನೇಮಕಾತಿಯ ಅರ್ಹತೆಗಳು :-

ವಿದ್ಯಾರ್ಹತೆ : ಯಾವುದೇ ಪದವಿ

ವೇತನ : 70,000 ವರೆಗೆ

ಹುದ್ದೆಗಳು :150

ವಯಸ್ಸಿನ ಮಿತಿ :18 ರಿಂದ 40 (ಸಾಮಾನ್ಯ 35 , ಒ.ಬಿ.ಸಿ 38 , SC,ST 40)

ನೇಮಕಾತಿ ಪ್ರಕ್ರಿಯೆ : ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ

ಅರ್ಜಿ ಪ್ರಾರಂಭ ದಿನಾಂಕ : 15/04/2024 ರಿಂದ 15/05/2024

ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು: ಫೋಟೋ ,ಅಂಕಪಟ್ಟಿ ,ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ,ಕನ್ನಡ ಮಾಧ್ಯಮ ಮತ್ತು ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ.


ತರಬೇತಿಗಾಗಿ ಪ್ರವೇಶಾತಿ ಪಡೆಯಲು ಇಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ :

ವಿದ್ಯಾಮಾತಾ ಅಕಾಡೆಮಿ – ಹಿಂದೂಸ್ತಾನ್ ಕಾಂಪ್ಲೆಕ್ಸ್,1 ನೇ ಮಹಡಿ ,ಎ.ಪಿ.ಎಂ.ಸಿ ರಸ್ತೆ ಪುತ್ತೂರು.

9620468869/ 9148935808

ಸುಳ್ಯ ಶಾಖೆ : TAPCMS ಬಿಲ್ಡಿಂಗ್ ,ಕಾರ್ ಸ್ಟ್ರೀಟ್

9448527606

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ

Posted by Vidyamaana on 2024-05-24 17:22:27 |

Share: | | | | |


ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ

ಬೆಳ್ತಂಗಡಿ : ಅಕ್ರಮ ಗಣಿಗಾರಿಕೆ‌ ಮೇಲೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇ.18 ರಂದು ಸಂಜೆ  ದಾಳಿ ಮಾಡಿದ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೇ.18 ರಂದು ಒಂದು ಪ್ರಕರಣ ದಾಖಲಿಸಿದ್ದರು. ಬೆಳ್ತಂಗಡಿ ಪೊಲೀಸರು ಮತ್ತು ಬೆಳ್ತಂಗಡಿ ತಹಶೀಲ್ದಾರ್ ನೀಡಿದ ವರದಿಯ ಆಧಾರದಲ್ಲಿ ದಕ್ಷಿಣ ಕನ್ನಡ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು ಮೇ.20 ರಂದು ಸ್ಥಳ ಮಹಜರು ಮಾಡಿ ಪ್ರಮೋದ್ ಗೌಡ ದಿಡುಪೆ, ಶಶಿರಾಜ್ ಶೆಟ್ಟಿ , ಸೂರಪ್ಪ ಪೂಜಾರಿ ಸೇರಿ ಮೂವರ ವಿರುದ್ಧ ಬೆಳ್ತಂಗಡಿ ನ್ಯಾಯಾಲಯದಲ್ಲಿ ಮೇ.23 ರಂದು ಪ್ರಕರಣ ದಾಖಲಿಸಿದ್ದಾರೆ.

ಬಾಯಲ್ಲಿ ಬುರು ಬುರು ನೊರೆ ಎಲ್ಲಾ ಲೊಟ್ಟೆ! – ಚೈತ್ರಾ ಆಸ್ಪತ್ರೆಯಿಂದ ಡಿಸ್ಚಾರ್ಜ್

Posted by Vidyamaana on 2023-09-18 15:46:31 |

Share: | | | | |


ಬಾಯಲ್ಲಿ ಬುರು ಬುರು ನೊರೆ ಎಲ್ಲಾ ಲೊಟ್ಟೆ! – ಚೈತ್ರಾ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಬೈಂದೂರು ಮೂಲದ ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಟಿಕೆಟ್ ತೆಗಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿಗಳನ್ನು ಪಡೆದುಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರಿಂದ ಬಂಧಿಸಲ್ಟಟ್ಟಿರುವ ಹಿಂದು ನಾಯಕಿ ಮತ್ತು ವಾಗ್ಮಿ ಚೈತ್ರ ಕುಂದಾಪುರ ಮತ್ತು ಆಕೆಯ ಸಹಚರರ ತೀವ್ರ ವಿಚಾರಣೆ ನಡೆಯುತ್ತಿದೆ.

ಈ ನಡುವೆ ವಿಚಾರಣೆ ಸಂದರ್ಭದಲ್ಲಿ ಬಾಯಲ್ಲಿ ನೊರೆ ಬಂದು ಕುಸಿದು ಬಿದ್ದಿದ್ದ ಚೈತ್ರಾ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಇದೀಗ ಚೈತ್ರಾ ಕುಂದಾಪುರ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಹಿನ್ನಲೆಯಲ್ಲಿ ಅವರನ್ನು ಇಂದು (ಸೆ.18) ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮತ್ತೆ ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಕರೆತರಲಾಗಿದೆ. ಇನ್ನು ಅವರ ಅಸಲಿ ವಿಚಾರಣೆ ಪ್ರಾರಂಭಗೊಳ್ಳಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು, ಚೈತ್ರಾಳ ದೇಹಾರೋಗ್ಯ ಸ್ಥಿತಿ ನಾರ್ಮಲ್ ಆಗಿದ್ದು ಮಾಡಲಾಗಿರುವ ಎಲ್ಲಾ ಟೆಸ್ಟ್ ಗಳಲ್ಲಿಯೂ ಆಕೆಗೆ ಯಾವುದೇ ರೀತಿಯ ಗಂಭೀರ ಸಮಸ್ಯೆಗಳಿರಲಿಲ್ಲ ಎಂದು ತಿಳಿದು ಬಂದಿದೆ.

ಇನ್ನು ವಿಚಾರಣೆ ಸಂದರ್ಭದಲ್ಲಿ ಬಾಯಲ್ಲಿ ನೊರೆ ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಇದು ಚೈತ್ರಾ ಆಡಿರುವ ಮಹಾ ಡ್ರಾಮಾ ಎಂಬ ಅಂಶವೂ ಇದೀಗ ಖಚಿತಗೊಂಡಿದ್ದು, ಇದೀಗ ಆಸ್ಪತ್ರೆಯಿಂದ ನೇರವಾಗಿ ವಿಚಾರಣಾ ಸ್ಥಳಕ್ಕೆ ಆಕೆಯನ್ನು ಅಧಿಕಾರಿಗಳು ಕರೆದೊಯ್ದಿರುವ ಕಾರಣ, ಸಿಸಿಬಿ ಪೊಲೀಸರ ಅಸಲೀ ವಿಚಾರಣೆ ಇನ್ನು ಶುರುವಾಗಲಿದೆ!

ಚೈತ್ರಾಳ ಆರೋಗ್ಯ ಸ್ಥಿತಿಯ ಬಗ್ಗೆ ಡಾ. ದಿವ್ಯ ಪ್ರಕಾಶ್ ಮಾಹಿತಿ ನೀಡಿದ್ದು, ‘ಎಲ್ಲಾ ಪರೀಕ್ಷೆಗಳನ್ನು ಮಾಡಲಾಗಿದ್ದು, ಎಲ್ಲವೂ ನಾರ್ಮಲ್ ಆಗಿದೆ..’ ಎಂದು ಅವರು ಮಾಹಿತಿ ನೀಡಿದ್ದಾರೆ. ಇನ್ನು ಬಾಯಲ್ಲಿ ನೊರೆ ಬಂದಿರುವ ವಿಚಾರಕ್ಕೆ ಸಂಬಂಧಿಸಿ ಮಾಹಿತಿ ನೀಡಿರುವ ವೈದ್ಯರು, ‘ಅದು ಫಂಕ್ಷನಲ್ ಆಗಿ ಆಗಿರುವಂತದ್ದು, ಅವರೇ ಅದನ್ನು ಮಾಡಿಕೊಂಡಿದ್ದಾರೆ. ಫಿಟ್ಸ್ ಸ್ಥಿತಿ ಏನೂ ಕಂಡುಬಂದಿಲ್ಲ, ಬಹುಷಃ ಅದು ಸಾಬೂನು ನೊರೆಯಾಗಿರಬಹುದು..’ ಎಂದು ಹೇಳಿದ್ದಾರೆ.

‘ಆಕೆಯಲ್ಲಿ ಫಿಟ್ಸ್ ಸಮಸ್ಯೆ ಪತ್ತೆಗಾಗಿ ಎಂ.ಆರ್.ಐ ಸ್ಕ್ಯಾನಿಂಗ್ ನಡೆಸಲಾಗಿದೆ ಮಾತ್ರವಲ್ಲದೇ ಇಸಿಜಿ  ಕೂಡ ಮಾಡಲಾಗಿದೆ. ಈ ಎಲ್ಲಾ ಟೆಸ್ಟ್ ರಿಪೋರ್ಟ್ ನಾರ್ಮಲ್ ಆಗಿದೆ. ಆದರೆ ನ್ಯೂರಾಲಜಿಸ್ಟ್ ಕೆಲವೊಂದು ಮಾತ್ರೆಗಳನ್ನು ಕೊಟ್ಟಿದ್ದಾರೆ..’ ಎಂದು ಡಾ. ದಿವ್ಯ ಪ್ರಕಾಶ್ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆಗೊಂಡ ಚೈತ್ರಾ ಅವರನ್ನು ಸಿಸಿಬಿ ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಯ ಹಿಂಬಾಗಿಲಿನ ಮೂಲಕ ಕರೆದೊಯ್ದಿದ್ದಾರೆ. ಇದೀಗ ಆಕೆಯ ವಿಚಾರಣೆ ಮತ್ತೆ ಪ್ರಾರಂಭಗೊಳ್ಳಲಿದ್ದು, ಯಾರಿಗೆಲ್ಲಾ ಹಣ ವರ್ಗಾವಣೆಯಾಗಿದೆ ಮತ್ತು ಈ ಪ್ರಕರಣದಲ್ಲಿ ಯಾರ್ಯಾರ ಕೈವಾಡ ಇದೆ ಎನ್ನುವ ವಿಚಾರಗಳಿಗೆ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುವ ಸಾಧ್ಯತೆಗಳಿವೆ.

ಚಿಕ್ಕಪುತ್ತೂರು ಶೇಖ್ ಅಬ್ದುಲ್ ಸತ್ತಾರ್ ನಿಧನ

Posted by Vidyamaana on 2024-06-24 18:06:25 |

Share: | | | | |


ಚಿಕ್ಕಪುತ್ತೂರು ಶೇಖ್ ಅಬ್ದುಲ್ ಸತ್ತಾರ್  ನಿಧನ

ಪುತ್ತೂರು :- ಇಲ್ಲಿನ ಚಿಕ್ಕಪುತ್ತೂರು ರೈಲ್ವೆ ನಿಲ್ದಾಣ  ನಿವಾಸಿ  ಚಿಕ್ಕಪುತ್ತೂರು ಹಸನ್ ಸಾಹೇಬ್ ರವರ ಪುತ್ರ ಕೂಲಿ ಕೆಲಸ ಜೊತೆಗೆ ಗೋಳಿಕಟ್ಟೆ ಮೊಹ್ಯಿಯ್ಯದ್ದೀನ್ ಜುಮಾ ಮಸೀದಿಯ ಖಬರ್ ತೋಡುವ ಕೆಲಸ ನಿರ್ವಹಿಸುತ್ತಿದ್ದ  ಶೇಖ್ ಅಬ್ದುಲ್ ಸತ್ತಾರ್ (40) 

ಮುಕ್ವೆ ನಿವಾಸಿ, ಪಿ.ಎಚ್.ಡಿ. ವಿದ್ಯಾರ್ಥಿನಿ ಚೈತ್ರಾ ನಾಪತ್ತೆ!!

Posted by Vidyamaana on 2024-02-20 16:27:26 |

Share: | | | | |


ಮುಕ್ವೆ ನಿವಾಸಿ, ಪಿ.ಎಚ್.ಡಿ. ವಿದ್ಯಾರ್ಥಿನಿ ಚೈತ್ರಾ ನಾಪತ್ತೆ!!

ಉಳ್ಳಾಲ: ಪುತ್ತೂರು ಮೂಲದ ವಿದ್ಯಾರ್ಥಿನಿಯೋರ್ವಳು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಇದೀಗ ಯುವಕನೊಂದಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ.


ಕೋಟೆಕಾರು ಬಳಿಯ ಮಾಡೂರಿನ ಪಿಜಿಯಲ್ಲಿದ್ದು, ದೇರಳಕಟ್ಟೆಯ ಖಾಸಗಿ ಯುನಿವರ್ಸಿಟಿಯಲ್ಲಿ ಪಿಎಚ್ ಡಿ ಅಧ್ಯಯನ ಮಾಡುತ್ತಿದ್ದ, ಪುತ್ತೂರು ಮುಕ್ವೆ ನಿವಾಸಿ ಚೈತ್ರಾ (27) ನಾಪತ್ತೆಯಾದ ವಿದ್ಯಾರ್ಥಿನಿ. 


ಚೈತ್ರಾ ದೇರಳಕಟ್ಟೆಯ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಎಂಎಸ್ಸಿ ಮುಗಿಸಿ ಫುಡ್ ಸೆಕ್ಯುರಿಟಿ ವಿಷಯದಲ್ಲಿ ಪಿಎಚ್ ಡಿ ಅಧ್ಯಯನ ನಡೆಸುತ್ತಿದ್ದಳು. ಕೋಟೆಕಾರು ಮಾಡೂರಿನ ಅಹನಾ ಎಂಬ ಪಿಜಿಯಲ್ಲಿ ಚೈತ್ರಾ ನೆಲೆಸಿದ್ದಳು. 


ಚೈತ್ರಾಳ ತಂದೆ ಮೃತರಾಗಿದ್ದು ಮಂಗಳೂರಿನ ಸಂಬಂಧಿಕರ ಆಶ್ರಯದಲ್ಲಿದ್ದುಕೊಂಡು ಎಂಎಸ್ಸಿ ಪೂರೈಸಿದ್ದಳು. ಕಳೆದ ಫೆ.17ರಂದು ಬೆಳಗ್ಗೆ 9 ಗಂಟೆಗೆ ಮಾಡೂರಿನ ಪಿಜಿಯಿಂದ ತನ್ನ ಸ್ಕೂಟರಲ್ಲಿ ತೆರಳಿದ್ದ ಚೈತ್ರಾ ಕದ್ರಿಯ ಮನೆಗೂ ತೆರಳದೆ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಳು ಎಂದು ದೂರಲಾಗಿದೆ.


 ಫೆ.17 ರಂದು ಚೈತ್ರಾ ನಾಪತ್ತೆಯಾದ ಬಗ್ಗೆ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿದೆ. ಇದಾಗಿ ಮೂರು ದಿನ ಕಳೆದರೂ ಚೈತ್ರಾ ಮರಳಿ ಬಂದಿಲ್ಲ.

ಮಂಗಳಮುಖಿ ಸ್ನೇಹದಿಂದ ಲಿಂಗ ಪರಿವರ್ತನೆಗೆ ಮುಂದಾದ 3 ಮಕ್ಕಳ ತಾಯಿ

Posted by Vidyamaana on 2023-10-07 12:45:59 |

Share: | | | | |


ಮಂಗಳಮುಖಿ ಸ್ನೇಹದಿಂದ ಲಿಂಗ ಪರಿವರ್ತನೆಗೆ ಮುಂದಾದ 3 ಮಕ್ಕಳ ತಾಯಿ

ಹಾವೇರಿ, ಅಕ್ಟೋಬರ್​ 4: ಮೂರು ಮಕ್ಕಳ ತಾಯಿಯೊಬ್ಬರು (Mother) ಲಿಂಗ ಪರಿವರ್ತನೆಗೆ ಮುಂದಾಗಿದ್ದಾರೆ. ಮಂಗಳಮುಖಿಯ (Transgender) ಸ್ನೇಹದಿಂದಾಗಿ ಸದರಿ ಮಹಿಳೆಯು ಈ ಪರಿವರ್ತನೆ ಬಯಸಿದ್ದಾರೆ. ಇದು ಹಾವೇರಿ ಜಿಲ್ಲೆ ರಾಣೇಬೆನ್ನೂರಿನ ಮಹಿಳೆಯೊಬ್ಬರ ಕಥೆ. ಈ ಮಧ್ಯೆ, ಇದೇ ವಿಷಯವಾಗಿ ರಾಣೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸದರಿ ಮಹಿಳೆಯು ಮೂಲತಃ ವಿಜಯಪುರ ಜಿಲ್ಲೆಯವರು. ಸುಮಾರು 40 ವರ್ಷಗಳಿಂದ ರಾಣೇಬೆನ್ನೂರಿನಲ್ಲಿ (Ranebennur, Haveri district) ವಾಸವಿದ್ದಾರೆ. ಮಂಗಳಮುಖಿಯ ಜೊತೆಗೆ ಸ್ನೇಹದಿಂದಾಗಿ ಗಂಡನಿಗೆ ವಿಚ್ಚೇದನ ನೀಡಿ, ಲಿಂಗ ಪರಿವರ್ತನೆಗೆ ಮುಂದಾಗಿದ್ದಾರೆ. ಈ ಮಧ್ಯೆ, ಮಂಗಳಮುಖಿ ಜೊತೆಗಿನ ಸಹವಾಸದಿಂದಾಗಿ ಮಹಿಳೆಗೆ ಡ್ರಗ್ಸ್ ಚಟ ಹತ್ತಿದೆ.ಈ ಬೆಳವಣಿಗಳಿಂದಾಗಿ ಆ ಮಹಿಳೆಯು ಮಂಗಳಮುಖಿಯ ಜೊತೆಗೆ ಜೀವನ ನಡೆಸುವ ಪ್ಲ್ಯಾನ್ ಹಾಕಿಕೊಂಡಿದ್ದಾರೆ. ಆದರೆ ಮಹಿಳೆ ಲಿಂಗ ಪರಿವರ್ತನೆ ಬಯಸಿದ್ದರಾದರೂ, ತಾಂತ್ರಿಕ ದೋಷದಿಂದ ಅದು ಸಾಧ್ಯವಾಗಿಲ್ಲ.


ಹಾವೇರಿ ಇಡಾರಿ ಸಂಸ್ಥೆಯ ಮೂಲಕ ಸಮಾಲೋಚನೆ ನಡೆಸಿ ಲಿಂಗ‌ ಪರಿವರ್ತನೆಗೆ ಸದ್ಯ ತಡೆಯೊಡ್ಡಲಾಗಿದೆ. ಸದರಿ ಮಹಿಳೆಯು ತನ್ನ ಜೊತೆಗೆ ತನ್ನ ಎರಡು ಮಕ್ಕಳಿಗೂ ಲಿಂಗ ಪರಿವರ್ತನೆ ಮಾಡಿಸಲು ಮುಂದಾಗಿದ್ದರು ಎಂಬ ಆತಂಕಕಾರಿ ಮಾಹಿತಿ ದೊರೆತಿದೆ.



Leave a Comment: