Posted by vidyamaana on 2024-07-25 13:38:46 |
ನಾವೆಲ್ಲರೂ ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ಗಳನ್ನು ಬಳಸುತ್ತೇವೆ, ಇದು ನಮ್ಮ ಜೀವನದ ಪ್ರಮುಖ ಭಾಗವಾಗಿದೆ, ಆದರೆ ನಿಮ್ಮ ಸ್ಮಾರ್ಟ್ಫೋನ್ ಅಡಿಯಲ್ಲಿ ಸಣ್ಣ ರಂಧ್ರವನ್ನು ನೀವು ಎಂದಾದರೂ ಗಮನಿಸಿದ್ದೀರಾ, ಆದರೆ ಅದು ಏನು ಬಳಸುತ್ತದೆ ಎಂಬುದರ ಬಗ್ಗೆ ನೀವು ಯೋಚಿಸಿದ್ದೀರಾ, ಜನರು ಇದನ್ನು ಮೈಕ್ರೊಫೋನ್ ಎಂದು ಪರಿಗಣಿಸುತ್ತಾರೆ, ಇದನ್ನು ಮೈಕ್ರೊಫೋನ್ ಗ್ರಿಲ್ ಎಂದು ಕರೆಯಲಾಗುತ್ತದೆ, ಇದು ನಿರ್ದಿಷ್ಟವಾಗಿ ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಗಳನ್ನು ಒಳಗೊಂಡಿದೆ.ಶಬ್ದವನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಫೋನ್ ಕರೆಗಳ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ, ಅದರ ಬಗ್ಗೆ ಸಂಪೂರ್ಣ ಮಾಹಿತಿಯ ಬಗ್ಗೆ ತಿಳಿದುಕೊಳ್ಳೋಣ
ಇದು ಹೇಗೆ ಕಾರ್ಯನಿರ್ವಹಿಸುತ್ತದೆ
ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ನಿಮ್ಮ ಫೋನ್ನ ಪ್ರಾಥಮಿಕ ಮೈಕ್ರೊಫೋನ್ನೊಂದಿಗೆ ಕಾರ್ಯನಿರ್ವಹಿಸುತ್ತದೆ, ಇದು ಸಾಮಾನ್ಯವಾಗಿ ಮುಂಭಾಗ ಅಥವಾ ಮೇಲ್ಭಾಗದಲ್ಲಿದೆ. ಕರೆ ಸಮಯದಲ್ಲಿ, ಮುಖ್ಯ ಮೈಕ್ರೊಫೋನ್ ನಿಮ್ಮ ಧ್ವನಿಯನ್ನು ಸೆರೆಹಿಡಿಯುತ್ತದೆ, ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಸುತ್ತಮುತ್ತಲಿನ ಶಬ್ದಗಳನ್ನು ತೆಗೆದುಕೊಳ್ಳುತ್ತದೆ.
ಮೈಕ್ರೊಫೋನ್ ಗ್ರಿಲ್ ನ ಪ್ರಾಮುಖ್ಯತೆ
ಮೈಕ್ರೊಫೋನ್ ಗ್ರಿಲ್ ಶಬ್ದವನ್ನು ತೆಗೆದುಹಾಕುವುದು ಅಥವಾ ತಿರುಚುವುದು ನಿಮ್ಮ ಕರೆಯ ಗುಣಮಟ್ಟದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಈ ಘಟಕವಿಲ್ಲದೆ, ಹಿನ್ನೆಲೆ ಶಬ್ದಗಳು ಹೆಚ್ಚು ಸ್ಪಷ್ಟವಾಗುತ್ತವೆ, ಸಂವಹನವನ್ನು ಕಷ್ಟಕರವಾಗಿಸುತ್ತದೆ.ಎಲ್ಲೆಲ್ಲೂ ಇಲ್ಲ
ಎಲ್ಲಾ ಸ್ಮಾರ್ಟ್ಫೋನ್ಗಳು ಶಬ್ದ-ರದ್ದುಗೊಳಿಸುವ ಮೈಕ್ರೊಫೋನ್ ಅನ್ನು ಹೊಂದಿಲ್ಲ ಎಂಬುದನ್ನು ಗಮನಿಸುವುದು ಮುಖ್ಯ. ನಿಮ್ಮ ಸಾಧನವು ಈ ವೈಶಿಷ್ಟ್ಯವನ್ನು ಹೊಂದಿದೆಯೇ ಎಂದು ನಿಮಗೆ ಖಚಿತವಿಲ್ಲದಿದ್ದರೆ, ನಿಮ್ಮ ಫೋನ್ನ ಕೈಪಿಡಿಯನ್ನು ನೀವು ನೋಡಿಕೊಳ್ಳಬಹುದು.
Posted by Vidyamaana on 2023-02-21 03:47:27 |
ಸುಳ್ಯ: ಕಳೆದ ಜುಲೈನಲ್ಲಿ ಸುಳ್ಯ ತಾಲೂಕಿನ ಕಳಂಜ ಎಂಬಲ್ಲಿ ಹತ್ಯೆಗೀಡಾದ ಮಸೂದ್ ಕುಟುಂಬಕ್ಕೆ ಹೊಸ ಮನೆಯನ್ನು ಹಸ್ತಾಂತರ ಮಾಡಲಾಗಿದೆ.
ಮಸೂದ್ ಕುಟುಂಬಕ್ಕೆ ಅನೇಕ ದಾನಿಗಳು, ಸಂಘಟನೆಗಳು, ರಾಜಕೀಯ ನಾಯಕರುಗಳು ಭೇಟಿ ನೀಡಿ ಸಾಂತ್ವನ ಮತ್ತು ಸಹಾಯ ಹಸ್ತವನ್ನು ಚಾಚಿದ್ದರು. ಈ ಪೈಕಿ ದ.ಕ. ಮತ್ತು ಉಡುಪಿ ಜಿಲ್ಲೆ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷರಾದ ಹಾಜಿ ಕೆ.ಎಸ್. ಮುಹಮ್ಮದ್ ಮಸೂದ್ ಅವರು ಸೆಂಟ್ರಲ್ ಕಮಿಟಿಯಿಂದ ನೀಡಿದ 30 ಲಕ್ಷ ರೂ., ತಾಲೂಕು ಜಮಾಅತ್ ಮತ್ತು ದಾನಿಗಳು ನೀಡಲಾದ ಮೊತ್ತದಲ್ಲಿ ಸುಳ್ಯ ತಾಲೂಕು ಬೆಳ್ಳಾರೆ ಎಂಬಲ್ಲಿ ಮನೆಯನ್ನು ಹಾಗೂ ಉಳಿದ ಮೊತ್ತದಲ್ಲಿ ಮಸೂದ್ ಸಹೋದರಿಯ ಮದುವೆಗೆ ಚಿನ್ನಾಭರಣ ಖರೀದಿಸುವ ಯೋಜನೆ ರೂಪಿಸಿ ನಿನ್ನೆ ಬೆಳ್ಳಾರೆಯಲ್ಲಿ ಮಸೂದ್ ಕುಟುಂಬಕ್ಕೆ ಮನೆ ಹಸ್ತಾಂತರಿಸಿದ್ದಾರೆ.ದ.ಕ. ಮತ್ತು ಉಡುಪಿ ಜಿಲ್ಲಾ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ.ಎಸ್. ಮುಹಮ್ಮದ್ ಮಸೂದ್ ಅವರು ಮನೆ ಹಸ್ತಾಂತರ ಕಾರ್ಯಕ್ರಮ ನೆರವೇರಿಸಿ ಮಾತನಾಡಿ, ಮನೆ ಇಲ್ಲದೆ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಈ ನಿರ್ಗತಿಕ ಕುಟುಂಬ ಸಂಕಷ್ಟದಲ್ಲಿದ್ದಾಗ ಜಾತಿ, ಮತ ಭೇದ ಇಲ್ಲದೆ ನೆರವಿಗೆ ಧಾವಿಸಿ ಸಾಂತ್ವನ ಹೇಳಿ ಸಹಾಯ ಮಾಡಿ ಮಾನವೀಯತೆ ಮೆರೆದ ಎಲ್ಲರಿಗೂ ನಮ್ಮ ಅಭಿನಂದನೆಗಳು. ಎಲ್ಲರೂ ಪ್ರೀತಿ, ವಿಶ್ವಾಸದಿಂದ ಪರಸ್ಪರ ಸೌಹಾರ್ದತೆಯಿಂದ ದೇಶದ ಜಾತ್ಯತೀತ ಮೌಲ್ಯದ ಸೌಂದರ್ಯ ಹೆಚ್ಚಿಸಲು ಕಾರಣ ಕಾರಣಕರ್ತರಾಗೋಣ ಎಂದರು.
Posted by Vidyamaana on 2023-05-21 11:14:43 |
ವಿಟ್ಲ : ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರಿಗೊಪ್ಪಿಸಿ ಎರಡು ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರು ಎಂಬಲ್ಲಿ ನಡೆದಿದೆ.ಕಂಬಳ ಕೋಣ ಎಂದು ನೆಪವೊಡ್ಡಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.
ಈ ಬಗ್ಗೆ ತಿಳಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪಿಕಪ್ ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
Posted by Vidyamaana on 2023-10-07 20:22:31 |
ಬಂಟ್ವಾಳ : ದ್ವಿಚಕ್ರ ವಾಹನದಲ್ಲಿ ಇರಿಸಲಾಗಿದ್ದ ಲಕ್ಷಾಂತರ ರೂ.ನಗದು ಕಳವಾಗಿರುವ ಬಗ್ಗೆ ಬಿಸಿರೋಡಿನಲ್ಲಿ ವರದಿಯಾಗಿದೆ.
ನರಿಕೊಂಬು ನಿವಾಸಿ ಪ್ರಕಾಶ್ ಕೋಡಿಮಜಲು ಎಂಬವರ ರೂಪಾಯಿ ಒಂದು ಲಕ್ಷ ಹಣ ಕಳವಾಗಿದೆ ಎಂದು ಅವರು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಅವರು ಶುಕ್ರವಾರ ಬೆಳಿಗ್ಗೆ ರೂ.1.40 ಲಕ್ಷ ಹಣವನ್ನು ಬ್ಯಾಂಕಿನಿಂದ ಡ್ರಾ ಮಾಡಿ ಬಳಿಕ ಬಿಸಿರೋಡಿನ ಮಿನಿವಿಧಾನ ಸೌಧದ ಕಚೇರಿಯ ಮುಂಭಾಗದಲ್ಲಿ ಇರಿಸಲಾಗಿದ್ದ, ದ್ವಿಚಕ್ರವಾಹನದ ಸೀಟಿನಡಿ ಇರುವ ಬಾಕ್ಸ್ ನಲ್ಲಿ ಇರಿಸಿದ್ದರು.
ಬಳಿಕ ಬೇರೆಬೇರೆ ಕೆಲಸ ನಿಮಿತ್ತ ಅಲ್ಲಿಂದ ತೆರಳಿದ್ದರು.
ಮಧ್ಯಾಹ್ನ ಬಳಿಕ ಬಂದು ಸೀಟು ಲಾಕ್ ತೆರೆದಾಗ ಅದರೊಳಗೆ ಇರಿಸಲಾಗಿದ್ದ 1.40 ಲಕ್ಷದಲ್ಲಿ 40 ಸಾವಿರ ಮಾತ್ರ ಇದ್ದು ಉಳಿದ 1ಲಕ್ಷ ಹಣ ಕಳವಾಗಿದೆ ಎಂದು ತಿಳಿಸಿದ್ದಾರೆ.
ಬಂಟ್ವಾಳ ನಗರ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.
Posted by Vidyamaana on 2024-08-21 03:43:06 |
ಬಂಟ್ವಾಳ: ಮಹಿಳೆಯೋರ್ವರ ಮೃತದೇಹ ನೇತ್ರಾವತಿ ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ.
ಶಂಭೂರು ಗ್ರಾಮದ ಎ.ಎಮ್.ಆರ್. ಪವರ್ ಲಿಮಿಟೆಡ್ ಡ್ಯಾಂ ನ 6ನೇ ಗೇಟ್ ನ ಬಳಿ ಸುಮಾರು 40 ರಿಂದ 50 ವರ್ಷದ ಅಪರಿಚಿತ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದ್ದು, ಸುಮಾರು 15 ದಿನಗಳ ಹಿಂದೆ ಮಹಿಳೆ ನೀರಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
Posted by Vidyamaana on 2023-09-08 09:08:42 |
ಬೆಂಗಳೂರು : ಕರ್ನಾಟಕದ ಈ 8 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರದಲ್ಲಿ ಸಾಧಾರಣ ಮಲೆಯಾಗಲಿದೆ, ಸೆಪ್ಟೆಂಬರ್ 13ರ ನಂತರ ಮುಂಗಾರು ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
Posted by Vidyamaana on 2023-08-22 09:34:04 |
ಅಹಮದಾಬಾದ್: ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಶಿಶಿರನೆಡೆಗೆ ಯಾತ್ರೆ ಕೈಗೊಂಡಿರುವ ಚಂದ್ರಯಾನ- 3 ನೌಕೆಯು ಬುಧವಾರ ಸಂಜೆ ಶಶಿಯ ಅಂಗಳನಲ್ಲಿ ನೆಲೆಯೂರಲು ಇಡೀ ವಿಶ್ವವೇ ಕಾಯುತ್ತಿದೆ. ಇಸ್ರೋ ಅಂದುಕೊಂಡಂತೆ ನಡೆದರೆ ಬುಧವಾರ ಸಂಜೆ 6.04ಕ್ಕೆ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಮತ್ತು ಅದರ ಮೇಲೆ ಕುಳಿತಿರುವ ಪ್ರಗ್ಯಾನ್ ರೋವರ್ ಚಂದ್ರನ ಮಡಿಲು ಸ್ಪರ್ಷಿಸಲಿದೆ.
ಆದರೆ ಇದೀಗ ಈ ಚಂದ್ರ ಸ್ಪರ್ಷ ವಿಳಂಬವಾಗಬಹುದು ಎಂದು ಇಸ್ರೋ ಮಾಹಿತಿ ನೀಡಿದೆ. ಒಂದು ವೇಳೆ ತಾಂತ್ರಿಕ ಕಾರಣಗಳಿಂದ ಆ. 23ರಂದು ಚಂದ್ರನ ಅಂಗಳದ ಮೇಲೆ ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ಆಗದಿದ್ದರೆ, ಆ. 27ರಂದು ಲ್ಯಾಂಡ್ ಆಗಲಿದೆ ಎಂದು ಇಸ್ರೋ ತಿಳಿಸಿದೆ.
ಲ್ಯಾಂಡರ್ ಮಾಡ್ಯೂಲ್ ನ ಆರೋಗ್ಯ ಮತ್ತು ಚಂದ್ರನ ಮೇಲಿನ ಪರಿಸ್ಥಿತಿಗಳ ಆಧಾರದ ಮೇಲೆ ಲ್ಯಾಂಡಿಂಗ್ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಹಮದಾಬಾದ್ ನ ಬಾಹ್ಯಾಕಾಶ ಅಪ್ಲಿಕೇಶನ್ ಕೇಂದ್ರ-ಇಸ್ರೋ ನಿರ್ದೇಶಕ ನಿಲೇಶ್ ಎಂ ದೇಸಾಯಿ ಹೇಳಿದ್ದಾರೆಆಗಸ್ಟ್ 23 ರಂದು, ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವ ಎರಡು ಗಂಟೆಗಳ ಮೊದಲು, ಲ್ಯಾಂಡರ್ ಮಾಡ್ಯೂಲ್ ನ ಆರೋಗ್ಯ ಮತ್ತು ಚಂದ್ರನ ಮೇಲಿನ ಪರಿಸ್ಥಿತಿಗಳ ಆಧಾರದ ಮೇಲೆ ಆ ಸಮಯದಲ್ಲಿ ಅದನ್ನು ಇಳಿಸುವುದು ಸೂಕ್ತವೇ ಅಥವಾ ಇಲ್ಲವೇ ಎಂಬುದನ್ನು ನಾವು ನಿರ್ಧರಿಸುತ್ತೇವೆ. ಒಂದು ವೇಳೆ ಯಾವುದೇ ಅಂಶವು ಅನುಕೂಲಕರವಾಗಿಲ್ಲ ಎಂದು ತೋರಿದರೆ, ನಾವು ಆಗಸ್ಟ್ 27 ರಂದು ಮಾಡ್ಯೂಲ್ ಅನ್ನು ಚಂದ್ರನ ಮೇಲೆ ಇಳಿಸುತ್ತೇವೆ. ಯಾವುದೇ ಸಮಸ್ಯೆ ಉಂಟಾಗಬಾರದು, ನಾವು ಆಗಸ್ಟ್ 23 ರಂದು ಮಾಡ್ಯೂಲ್ ಅನ್ನು ಇಳಿಸಲು ಸಾಧ್ಯವಾಗುತ್ತದೆ ಎಂದು ದೇಸಾಯಿ ಹೇಳಿದರು.
ಆರ್ಬಿಟರ್ ಜತೆ ಸಂಪರ್ಕ: ಮತ್ತೂಂದು ಮಹತ್ವದ ಬೆಳವಣಿಗೆಯೊಂದರಲ್ಲಿ ಈಗಾಗಲೇ ಚಂದಿರನ ಕಕ್ಷೆಯಲ್ಲಿ ಸುತ್ತುತ್ತಿರುವ ಚಂದ್ರಯಾನ-2ರ ಆರ್ಬಿಟರ್ ಸೋಮವಾರ ಚಂದ್ರಯಾನ-3ರ ಲ್ಯಾಂಡರ್ ಮಾಡ್ನೂಲ್ನೊಂದಿಗೆ ಸಂಪರ್ಕ ಸಾಧಿಸಿದೆ.
ಈ ಕುರಿತು ಎಕ್ಸ್ (ಟ್ವಿಟರ್) ಜಾಲತಾಣದ ಮೂಲಕ ಮಾಹಿತಿ ನೀಡಿರುವ ಇಸ್ರೋ, “ವೆಲ್ಕಂ, ಬಡ್ಡಿ! ಚಂದ್ರಯಾನ-2ರ ಆರ್ಬಿಟರ್ ಅಧಿಕೃತವಾಗಿ ಇಂದು ಚಂದ್ರಯಾನ-3ರ ಲ್ಯಾಂಡರ್ ಮಾಡ್ನೂಲ್ ಅನ್ನು ಸ್ವಾಗತಿಸಿದೆ. ಇವೆರಡರ ಮಧ್ಯೆ ಸಂವಹನವೂ ಏರ್ಪಟ್ಟಿದೆ’ ಎಂದು ಹೇಳಿಕೊಂಡಿದೆ.
2019ರಲ್ಲಿ ಚಂದ್ರಯಾನ-2 ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಆಗುವಲ್ಲಿ ವಿಫಲಗೊಂಡಿತ್ತಾದರೂ, ಆರ್ಬಿಟರ್ ಮಾತ್ರ ಸುಗಮವಾಗಿ ಕಾರ್ಯ ನಿರ್ವಹಿಸುತ್ತಿತ್ತು. ಈ ಆರ್ಬಿಟರ್ ಚಂದ್ರನ ಕಕ್ಷೆಯಲ್ಲಿ ಸುತ್ತುತ್ತಿದ್ದು, ಸೋಮವಾರ ತನ್ನ ಗೆಳೆಯ ಚಂದ್ರ ಯಾನ-3ರ ಜತೆ ಸಂಪರ್ಕ ಸಾಧಿಸಿದೆ.