ಯು ಕೆ ಎಲೆಕ್ಷನ್ ನಲ್ಲಿ ಹೀನಾಯ ಸೋಲು; ರಿಶಿ ಸುನಕ್ ಫಸ್ಟ್ ರಿಯಾಕ್ಷನ್

ಸುದ್ದಿಗಳು News

Posted by vidyamaana on 2024-07-05 12:01:03 |

Share: | | | | |


ಯು ಕೆ ಎಲೆಕ್ಷನ್ ನಲ್ಲಿ ಹೀನಾಯ ಸೋಲು; ರಿಶಿ ಸುನಕ್ ಫಸ್ಟ್ ರಿಯಾಕ್ಷನ್

ಲಂಡನ್ : ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ(UK Election) ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್‌ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್‌ ನಂಬರ್‌ 320 ಅನ್ನು ದಾಟುವ ಮೂಲಕ ಸರ್ಕಾರ ರಚನೆಗೆ ಮುಂದಾಗಿದೆ.

ಹಾಲಿ ಪ್ರಧಾನಿ ರಿಷಿ ಸುನಕ್‌(Rishi Sunak) ಅವರ ಪಕ್ಷ ಕನ್ಸರ್ವೇಟಿವ್‌ ಪಕ್ಷ ಭಾರೀ ಹಿನ್ನಡೆ ಅನುಭವಿಸಿದ್ದು, ಲೇಬರ್‌ ಪಕ್ಷದ ಕೀರ್‌ ಸ್ಟಾರ್ಮರ್‌(Keir Starmer) ಅವರಿಗೆ ಪ್ರಧಾನಿ ಗಿಟ್ಟಿದೆ. ಇನ್ನು


ಫಲಿತಾಂಶ ಹೊರ ಬೀಳುತ್ತಿದ್ದಂತೆ ರಿಶಿ ಸುನಕ್‌ ಪ್ರತಿಕ್ರಿಯಿಸಿದ್ದು, ಈ ಸೋಲಿನ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೇ ಲೇಬರ್‌ ಪಕ್ಷದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲೇಬರ್ ಪಕ್ಷವು ಈ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದಿದೆ ಮತ್ತು ಅವರ ವಿಜಯಕ್ಕಾಗಿ ಅಭಿನಂದಿಸಲು ನಾನು ಸರ್ ಕೀರ್ ಸ್ಟಾರ್ಮರ್‌ಗೆ ಕರೆ ಮಾಡಿದ್ದೇನೆ. ಇಂದು, ಅಧಿಕಾರವು ಶಾಂತಿಯುತವಾಗಿ ಮತ್ತು ಕ್ರಮಬದ್ಧವಾಗಿ ಅಧಿಕಾರ ಹಸ್ತಾಂತರಗೊಂಡಿದೆ. ಎಲ್ಲಾ ಕಡೆಯಿಂದಲೂ ಸದ್ಭಾವನೆ ಇರುತ್ತದೆ. ಇದು ನಮ್ಮ ದೇಶದ ಸ್ಥಿರತೆ ಮತ್ತು ಭವಿಷ್ಯದ ಬಗ್ಗೆ ನಮಗೆಲ್ಲರಿಗೂ ವಿಶ್ವಾಸವನ್ನು ನೀಡುವ ವಿಷಯವಾಗಿದೆ ಎಂದು ಹೇಳಿದ್ದಾರೆ.

ಪಕ್ಷಗಳ ಬಲಾಬಲ ಹೇಗಿದೆ?

ಇನ್ನು ಕಣದಲ್ಲಿರುವ ಪಕ್ಷಗಳ ಬಲಾಬಲ ಹೇಗಿದೆ ಎಂದು ನೋಡುವುದಾದರೆ,

ಕನ್ಸರ್ವೇಟಿವ್‌ ಪಕ್ಷ ಕೇವಲ – 81

ಲೇಬರ್ ಪಾರ್ಟಿ - 360

ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP) - 3

ಲಿಬರಲ್ ಡೆಮೋಕ್ರಾಟ್‌ಗಳು - 49

ರಿಫಾರ್ಮ್‌ ಯುಕೆ - 3

ಇತರೆ - 1

ಎಕ್ಸಿಟ್‌ ಪೋಲ್‌ ಭವಿಷ್ಯ ಏನು?


ಇನ್ನು ಚುನಾವಣಾ ಪೂರ್ವ ಸಮೀಕ್ಷೆಗಳು ಕನ್ಸರ್ವೇಟಿವ್‌ ಪಕ್ಷ ಈ ಬಾರಿ ಸೋಲುವುದು ಖಚಿತ ಎಂಬ ಭವಿಷ್ಯ ನುಡಿದಿತ್ತು. ಈ ಬಾರಿ ಕನ್ಸರ್ವೇಟಿಕವ್‌ ಪಕ್ದ್ ಸ್ಥಾನ 131ಕ್ಕೆ ಇಳಿಯಲಿದ್ದು, ಲೇಬರ್‌ ಪಕ್ಷ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾಕ್ಕೆ ಬರಲಿದೆ ಎಂದು ಹೇಳಿದೆ. ಹಾಗಿದ್ದರೆ ಎಕ್ಸಿಟ್‌ ಪೋಲ್‌ ಪ್ರಕಾರ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ದೊರೆಯಲಿದೆ ನೋಡೋಣ.


ಕನ್ಸರ್ವೇಟಿವ್‌: 131

ಲೇಬರ್ ಪಕ್ಷ: 410

ಲಿಬರಲ್ ಡೆಮೋಕ್ರಾಟ್‌ಗಳು: 61

ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP): 10

ರಿಫಾರ್ಮ್ ಯುಕೆ: 13

ಪ್ಲೈಡ್ ಸಿಮ್ರು: 4

ಗ್ರೀನ್ಸ್: 2

ರಿಷಿ ಸುನಕ್‌ಗೆ ಆಡಳಿತ ವಿರೋಧಿ ಅಲೆ

44 ವರ್ಷದ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, 61 ವರ್ಷದ ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಾರ್ಟಿಗಿಂತ ಕಳೆದ 6 ವಾರಗಳ ಪ್ರಚಾರದಲ್ಲಿ ಅತ್ಯಂತ ಹಿಂದುಳಿದಿದ್ದಾರೆ. ಇಂಗ್ಲೆಂಡ್, ಸ್ಕಾಟ್‌ಲ್ಯಾಂಡ್, ವೇಲ್ಸ್ ಮತ್ತು ಉತ್ತರ ಐರ್ಲೆಂಡ್‌ನಾದ್ಯಂತ 650 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ, ಮೊದಲ ಬಾರಿಗೆ ಪೋಸ್ಟ್ ಸಿಸ್ಟಮ್‌ನಲ್ಲಿ ಬಹುಮತಕ್ಕೆ 326 ಮತಗಳ ಅಗತ್ಯವಿದೆ.

 Share: | | | | |


ಬುಳೇರಿಕಟ್ಟೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-05-01 10:40:09 |

Share: | | | | |


ಬುಳೇರಿಕಟ್ಟೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಬೆಲೆ ಏರಿಕೆಯ ಮೂಲಕ ಬಡವರ ಬದುಕನ್ನು ಮೂರಾಬಟ್ಟೆ ಮಾಡಿದ ಬಿಜೆಪಿ ಸರಕಾರ . ಈ ಪಕ್ಷದ ಕಾರ್ಯಕರ್ತರು ,ಮುಖಂಡರು ಬಡವರ ಮನೆಗೆ ಯಾವ ಮುಖ ಹೊತ್ತು ವೋಟು ಬಡವರ ಮನೆಗೆ ವೋಟು ಕೇಳಲು ಹೋಗುತ್ತಾರೆ ಎಂದು ವಿಟ್ಲ -ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ರಾಜಾರಾಂ ಕೆ ಬಿ ಹೇಳಿದರು.

ಬುಳೇರಿಕಟ್ಟೆಯಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಇದೆ. ದೇಶದಲ್ಲಿ‌ಅಚ್ಚೇದಿನ್ ಕೊಡುವುದಾಗಿ ಹೇಳಿದವರು ಬಡವರ ಅನ್ನಕ್ಕೂ ಕಲ್ಲು ಹಾಕುವ ಕೆಲಸವನ್ನು ಮಾಡಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆ,ಇಂಧನ, ಅಡುಗೆ ಅನಿಲ ಬೆಲೆ ಏರಿಕೆ ಇವೆಲ್ಲವೂ ಜನರನ್ನು ಕಂಗೆಡಿಸಿದೆ. ಬೆಲೆ ಏರಿಕೆಯಿಂದ ನಾಳೆ ಏನಾಗುತ್ತದೋ ಎಂಬ ಭಯ ಜನರಲ್ಲಿ ನಿತ್ಯವೂ ಇದೆ ಎಂದು ಹೇಳಿದರು. 

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದರೆ ಎಲ್ಲಾ‌ಸಮಸ್ಯೆಗಳಿಗೆ ಪರಿಹಾರವಾಗಲಿದೆ. ಬಡವರು ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್ ಜನ ಸ್ನೇಹಿ ಪ್ರಣಾಳಿಕೆಯನ್ನು ಜಾರಿ‌ಮಾಡಿದೆ. ಪುತ್ತೂರಿನಲ್ಲಿ ಅಶೋಕ್ ರೈ ಯವರನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ‌ಮುಂದೆ ಬರುವ ಕಾಂಗ್ರೆಸ್ ಸರಕಾರಕ್ಕೆ ಬಲ‌ಕೊಡುವ ಕೆಲಸವನ್ನು ಮಾಡಬೇಕು. ಪ್ರತೀ ಬೂತ್ ನಲ್ಲೂ ಟಾರ್ಗೆಟ್ ವೋಟು ಎಂಬ ಆಲೋಚನೆಯನ್ನು ಇಟ್ಟುಕೊಂಡು ಹೆಚ್ಚಿನ‌ಮತಗಳು ಈ ಭಾಗದಿಂದ ಕಾಂಗ್ರೆಸ್ ಗೆ ಬೀಳುವಂತೆ  ನಾವು ಕಾರ್ಯಪೃವೃತ್ತರಾಗಬೇಕು ಎಂದು‌ಹೇಳಿದರು.

ಸೈಲೆಂಟ್ ವೋಟು ಕಾಂಗ್ರೆಸ್ ಪಾಲಾಗುವಂತೆ ಪ್ರತೀಯೊಬ್ಬ ಕಾರ್ಯಕರ್ತರು ಒಟ್ಟುಗೂಡಿ ಕೆಲಸ ಮಾಡಬೇಕು. ಬಿಜೆಪಿ ಕಾರ್ಯಕರ್ತರನ್ನು ಪಕ್ಷಕ್ಕೆ ಸೆಳೆಯಬೇಕು ಎಂದು ಅಭ್ಯರ್ಥಿ ಅಶೋಕ್ ರೈ ಹೇಳಿದರು.

ಅಕ್ರನಸಕ್ರಮದಲ್ಲಿ ಪುತ್ತೂರಿನ ಶಾಸಕರು ಭೃಷ್ಟಾಚಾರ ಮಾಡಿದ್ದು ಅದು ಅವರ ದೊಡ್ಡ ಸಾಧನೆಯಾಗಿದೆ. ಯಾರು ಲಕ್ಷಾಂತರ ರೂ ಕೊಟ್ಟಿದ್ದಾರೋ ಅವರಿಗೆಲ್ಲಾ ಅಕ್ರಮ ಸಕ್ರಮ ಮಾಡಿಕೊಡಲಾಗಿದೆ. ನಾನು ಶಾಸಕನಾದರೆ ರಾಜಧರ್ಮ ಪಾಲನೆ ಮಾಡಲಿದ್ದೇನೆ. ಬಿಜೆಪಿಯವರು ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡು ಪಕ್ಷಕ್ಕೆ ಬಲ ಕೊಡುವ ಕೆಲಸವನ್ನು ಮಾಡುವಂತೆ ಮನವಿ ಮಾಡಿದರು. ಯಾವುದೇ ತಾರತಮ್ಯ ಮಾಡದೆ ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸವನ್ನು‌ ಮಾಡಿತೋರಿಸುತ್ತೇನೆ ಎಂದು ಹೇಳಿದರು. ಅಭಿವೃದ್ದಿಯಾಗಬೇಕಾದರೆ ಶಾಂತಿ,ಸೌಹಾರ್ಧತೆ ಮುಖ್ಯ. ಪುತ್ತೂರಿನಲ್ಲಿ ಎಲ್ಲಾ ಧರ್ಮದ ಜನರೂ ಒಂದೇ ತಾಯಿ‌ಮಕ್ಕಳಂತೆ ಬದುಕುವ ವಾತಾವರಣ ಸೃಷ್ಟಿಯಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಪ್ರವೀಣ್ ಚಂದ್ರ ಳ್ವ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

ನಟಿ ಪೂನಂ ಪಾಂಡೆ ನಿಧನ

Posted by Vidyamaana on 2024-02-02 12:24:54 |

Share: | | | | |


ನಟಿ ಪೂನಂ ಪಾಂಡೆ ನಿಧನ

ಉತ್ತರಪ್ರದೇಶ :ನಟಿ ಪೂನಂ ಪಾಂಡೆ ವಿಧಿವಶರಾಗಿದ್ದಾರೆ. ನಟಿಯ ಸಾವನ್ನು ಅವರ ಮ್ಯಾನೇಜರ್ Instagram ನಲ್ಲಿ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ಖಚಿತಪಡಿಸಿದ್ದಾರೆ. ಇವರಿಗೆ 32 ವರ್ಷ ವಯಸ್ಸಾಗಿತ್ತು. ನಟಿ ಹಾಗೂ ಮಾಡೆಲ್‌ ಆಗಿ ತನ್ನ ವೃತ್ತಿ ಜೀವನ ಆರಂಭಿಸಿದ ಪೂನಂ ಪಾಂಡೆ ಅವರು ವಿವಾದಗಳಿಂದಲೇ ಜನಪ್ರಿಯತೆಯನ್ನು ಪಡೆದಿದ್ದರು. ಪೂನಂ ಅವರು ಶುಕ್ರವಾರ (ಫೆ.2) ರಂದು ಮುಂಜಾನೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ.


ಬಾಲಿವುಡ್ ನಾಯಕಿ ಹಾಗೂ ರೂಪದರ್ಶಿ ಪೂನಂ ಪಾಂಡೆ ವಿಧಿವಶರಾಗಿದ್ದಾರೆ. ಅವರಿಗೆ ಗರ್ಭಕಂಠದ ಕ್ಯಾನ್ಸರ್ ಇತ್ತು. ಈ ಮಾಹಿತಿಯನ್ನು ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನೀಡಲಾಗಿದೆ

ಬೆಂಬಲ ಬೆಲೆಯನ್ನು ಘೋಷಿಸುವ ಜವಾಬ್ದಾರಿ ಈಗ ಕೇಂದ್ರಕ್ಕೆ ಸೇರಿದ್ದು

Posted by Vidyamaana on 2024-02-27 16:21:42 |

Share: | | | | |


ಬೆಂಬಲ ಬೆಲೆಯನ್ನು ಘೋಷಿಸುವ ಜವಾಬ್ದಾರಿ ಈಗ ಕೇಂದ್ರಕ್ಕೆ ಸೇರಿದ್ದು

ಪುತ್ತೂರು: ಪುತ್ತೂರಿನ ರಾಜಕೀಯದಲ್ಲಿ ತನ್ನ ಅಸ್ತಿತ್ವವನ್ನು ಸ್ಥಾಪಿಸಲು ಮತ್ತು ಪುತ್ತೂರು ಬಿಜೆಪಿಯಲ್ಲಿ ತನ್ಙ ಯಾಜಮಾನ್ಯ ಪುನರ್ ಸ್ಥಾಪಿಸಲು ಹೆಣಗಾಡುವ ಸಂಜೀವ ಮಠಂದೂರು ಅವರ, ಪ್ರಯತ್ನದ ಅಂಗವಾಗಿ ಅಡಿಕೆಯ ಬೆಲೆ ಕುಸಿತವನ್ನು ಬಳಸಿಕೊಂಡು ಕರ್ನಾಟಕ ಸರಕಾರವನ್ನು ರೈತ ವಿರೋಧಿ ಎಂದು ಬಿಂಬಿಸುವ ವ್ಯರ್ಥ ಪ್ರಯತ್ನ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಹೇಳಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಸಿಯುತ್ತಿರುವ ಅಡಿಕೆ ಬೆಲೆಗೆ ಕರ್ನಾಟಕ ರಾಜ್ಯ ಸರ್ಕಾರ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಲ್ಲಿ ಬೆಂಬಲ ಬೆಲೆಯನ್ನು ಘೋಷಿಸಬೇಕು ಎಂದು ಒಂದು ಕಡೆ ಹೇಳುವ ಸಂಜೀವ ಮಠಂದೂರ್ರವರು ಎಪಿಎಂಸಿಯಲ್ಲಿ  ಸಂಗ್ರಹವಾಗುವ ಸೆಸ್ ಹಣ  ರಾಜ್ಯ ಸರ್ಕಾರಕ್ಕೆ ಹೋಗುತ್ತದೆ. ಈ ಹಣದ ಆವರ್ತನ ನಿಧಿಯಿಂದ ರಾಜ್ಯ ಸರ್ಕಾರ ಅಡಿಕೆಗೆ ಬೆಂಬಲ ಬೆಲೆ ನೀಡಬೇಕು ಎಂದು ಹೇಳುತ್ತಾರೆ. ಹೀಗೆ ಸ್ಪಷ್ಟತೆ ಇಲ್ಲದೆ ಮಾತನಾಡಿದ ಸಂಜೀವ ಮಠಂದೂರ್ರವರಿಗೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ ಅಂದರೆ ಏನು ಅನ್ನುವುದೇ ಗೊತ್ತಿಲ್ಲ. ಎಪಿಎಂಸಿಯಲ್ಲಿ ಏನು ಆಗುತ್ತಿದೆ ಅನ್ನುವುದೂ ಗೊತ್ತಿಲ್ಲ ಅನ್ನುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಕುಟುಕಿದರು.

ರಾಜ್ಯ ಸರ್ಕಾರ ನಿರ್ದಿಷ್ಟ ಬೆಳೆಯ ಮಾರುಕಟ್ಟೆ ದರ ಕುಸಿದಿರುವುದನ್ನು ಉಲ್ಲೇಖಿಸಿ ಕೇಂದ್ರ ಸರಕಾರಕ್ಕೆ ಮಾರುಕಟ್ಟೆ ಮಧ್ಯ ಪ್ರವೇಶಕ್ಕಾಗಿ ಪ್ರಸ್ತಾವನೆಯನ್ನು ಕಳುಹಿಸಬೇಕಾಗುತ್ತದೆ. ಇದಕ್ಕೆ ಕೇಂದ್ರ ಸರಕಾರ ಒಪ್ಪಿಗೆ ನೀಡಿ ಶೇಕಡ 50:50ರ ಅನುಪಾತದ ಪಾಲುಗಾರಿಕೆಯಲ್ಲಿ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ. ಹಿಂದೆ ಎಸ್.ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್ ಸರಕಾರ ಅಡಿಕೆಗೆ ಬೆಂಬಲ ಬೆಲೆಯನ್ನು ಘೋಷಿಸಿದ್ದು ಇದೇ ವ್ಯವಸ್ಥೆಯಲ್ಲಿ. ಈಗ ಭಾರತದ ಗಡಿಗಳಲ್ಲಿ ವಿದೇಶೀ ಅಡಿಕೆ  ಭಾರತದ ಮಾರುಕಟ್ಟೆಗೆ ಕಳ್ಳಸಾಗಾಟದ ಮುಖಾಂತರ ಬಂದು ಮಾರುಕಟ್ಟೆ ದರ ತೀವ್ರವಾಗಿ ಕುಸಿದ ಈ ಸಂದರ್ಭದಲ್ಲಿ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಲ್ಲಿ ರಾಜ್ಯ ಸರ್ಕಾರ ಅಡಿಕೆಗೆ ಬೆಂಬಲ ಬೆಲೆ ಘೋಷಿಸಬೇಕೆಂದು ಸಂಜೀವ ಮಠಂದೂರ್ರವರು ಒತ್ತಾಯಿಸುತ್ತಿರುವುದು ಮತ್ತು ಈಗ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಶಾಸಕರು ಬೆಂಬಲ ಬೆಲೆಗಾಗಿ ಸರಕಾರವನ್ನು ಒತ್ತಾಯಿಸಲಿದ್ದಾರೆ ಎಂದು ಹೇಳಿರುವುದು ನಗೆ ಪಾಟಲಿನ ವಿಚಾರವಾಗಿದೆ ಎಂದರು.

ಸಂಜೀವ ಮಠಂದೂರ್ರವರಿಗೆ ಈ ರಾಜ್ಯದಲ್ಲಿ ಏನು ಆಗುತ್ತಾ ಇದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಯಾವ ರೀತಿಯಲ್ಲಿ ರೈತರ ಪರವಾಗಿ ಕೆಲಸ ಮಾಡುತ್ತಿದೆ ಅನ್ನುವುದರ ಅರಿವೇ ಇಲ್ಲ. ಅವರು ದಯವಿಟ್ಟು ಮೊನ್ನೆ ನಡೆದ ಬಜೆಟ್ ಅಧಿವೇಶನದಲ್ಲಿ ಸಿದ್ದರಾಮಯ್ಯನವರು ಮಾಡಿದ ಬಜೆಟ್ ಭಾಷಣವನ್ನು ಒಮ್ಮೆ ಸರಿಯಾಗಿ ಕೇಳಬೇಕು. ಕೇಳುವುದಕ್ಕೆ ಸಾಧ್ಯವಿಲ್ಲವೆಂದಾದರೆ ಬಜೆಟ್ ಪ್ರತಿಯನ್ನು ಪಡೆದು ಅದನ್ನು ಓದಬೇಕು. ಈ ಬಾರಿಯ  ಕರ್ನಾಟಕ ರಾಜ್ಯ ಸರ್ಕಾರದ ಬಜೆಟಿನಲ್ಲಿ ಇತರ ಕೆಲವು ಬೆಳೆಗಳು ಸೇರಿದಂತೆ ಅಡಿಕೆಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸುವುದಕ್ಕಾಗಿ ಈಗಾಗಲೇ ಪ್ರಸ್ತಾವನೆಯನ್ನು ಕಳುಹಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಅಧಿಕೃತವಾಗಿ ಮತ್ತು ಸ್ಪಷ್ಟವಾಗಿ ಘೋಷಿಸಿದ್ದಾರೆ.  ಇದರ ಅರಿವಿಲ್ಲದ ಮಾಜಿ ಶಾಸಕರು ಈಗ ಬೆಂಬಲೆ ಬೆಲೆಗಾಗಿ ಬೇಡಿಕೆ ಇಟ್ಟಿದ್ದಾರೆ. 

ಅಡಿಕೆಗೆ ಬೆಂಬಲ ಬೆಲೆ ನೀಡಬೇಕೆಂಬ ಪ್ರಸ್ತಾವನೆಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ಈಗಾಗಲೇ ಕೇಂದ್ರ ಸರಕಾರಕ್ಕೆ ಸಲ್ಲಿಸಿ ಆಗಿದೆ. ಆದ್ದರಿಂದ ಸಂಜೀವಣ್ಣ, ನಿದ್ದೆಯಿಂದ ಬೇಗ ಏಳಬೇಕಿತ್ತು ಎಂದು ಲೇವಡಿ ಮಾಡಿದರು.

ಕರ್ನಾಟಕ ಸರಕಾರದ ಈ ಪ್ರಸ್ತಾವನೆಯನ್ನು ಅಂಗೀಕರಿಸಿ ಬೆಂಬಲ ಬೆಲೆಯನ್ನು ಘೋಷಿಸುವ ಜವಾಬ್ದಾರಿ ಈಗ ಇರುವುದು ಮೋದಿ ನೇತೃತ್ವದ ಬಿಜೆಪಿಯ ಕೇಂದ್ರ ಸರ್ಕಾರಕ್ಕೆ. ಚೆಂಡು ಈಗ ಕೇಂದ್ರ ಸರ್ಕಾರದ ಅಂಗಳದಲ್ಲಿದೆಯೇ ಹೊರತು ರಾಜ್ಯ ಸರಕಾರದಿಂದ ಯಾವ ನಿರ್ಲಕ್ಷವೂ ಆಗಿಲ್ಲ. ಸಂಜೀವ ಮಠಂದೂರ್ರವರಿಗೆ ಈ ಹಂತದಲ್ಲಿ ಅಡಿಕೆಗೆ ಬೆಂಬಲ ಬೆಲೆ ಸಿಗಬೇಕೆಂಬ  ಅವರ ಮಾತಿನಲ್ಲಿ ಕಿಂಚಿತ್ತಾದರೂ ಸತ್ಯ ಇರುವುದಾದರೆ, ಅಡಿಕೆ ಬೆಳೆಗಾರರ ಬಗ್ಗೆ ನಿಜವಾಗಿಯೂ ಕಾಳಜಿ ಇರುವುದಾದರೆ ಅವರು ಒತ್ತಾಯ ಮಾಡಬೇಕಾಗಿರುವುದು ಕರ್ನಾಟಕ ಕಾಂಗ್ರೆಸ್ ಸರಕಾರವನ್ನಲ್ಲ,  ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ಮೋದಿ ಅವರ ಆಡಳಿತವನ್ನು. ಕಳ್ಳ ಸಾಗಾಟದ ಮೂಲಕ ದೇಶವನ್ನು ಪ್ರವೇಶಿಸಿ ಇಲ್ಲಿನ ಅಡಿಕೆ ಮಾರುಕಟ್ಟೆಯನ್ನು ಕೆಡಿಸುತ್ತಿರುವ ವಿದೇಶೀ ಅಡಿಕೆಯನ್ನು ದೇಶ ಪ್ರವೇಶಿಸದಂತೆ ತಡೆಯುವುದಕ್ಕೆ ಸಾದ್ಯವಾಗದ ಕೇಂದ್ರ ಸರಕಾರದ ವೈಫಲ್ಯಗಳನ್ನು ಮರೆಮಾಚಿ ಜನರ ಕಣ್ಣಿಗೆ ಮಣ್ಣೆರಚುವ ಉದ್ದೇಶದಿಂದ ಸಂಜೀವ ಮಠಂದೂರು ಈ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದರು.

ಅಕ್ರಮ ಅಡಕೆ ಅಂದರೆ ಕಳ್ಳಸಾಗಾಣಿಕೆಯೇ!!:

ಅಡಿಕೆ ಮಾರುಕಟ್ಟೆ ಪುನಶ್ಚೇತನಕ್ಕೆ ಈಗ ಆಗಬೇಕಾಗಿರುವುದಾದರೂ ಏನು?: ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರಿಂದ ತೊಡಗಿ ಅಡಿಕೆಯ ಕಟ್ಟ ಕಡೆಯ ಕೃಷಿಕರವರೆಗೆ  ಭಾರತಕ್ಕೆ ಕಳ್ಳ ಸಾಗಾಣಿಕೆಯ ಮೂಲಕ ಅವ್ಯಾಹತವಾಗಿ  ಕಳಪೆ ಗುಣಮಟ್ಟದ ಅಡಿಕೆ ಪೂರೈಕೆ ಆಗುತ್ತಿದೆ. ಈ ಕಳಪೆ ಗುಣಮಟ್ಟದ ಅಡಿಕೆಯನ್ನು ನಮ್ಮ ರೈತರು ಬೆಳೆದ ಶ್ರೇಷ್ಠ ಗುಣಮಟ್ಟದ ಅಡಿಕೆಗೆ ಮಿಶ್ರಣ ಮಾಡಿ, ಅಡಿಕೆಯ ಮಾರುಕಟ್ಟೆಯನ್ನು ಹಾಳುಗೆಡಹಿ ಅಡಿಕೆಯ ಬೆಲೆಯ ಕುಸಿತಕ್ಕೆ ಕಾರಣವಾಗಿದೆ ಎಂದು ಸ್ಪಷ್ಟವಾಗಿ ಗೊತ್ತಿದೆ. ಆದ್ದರಿಂದ, ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರವು ತಕ್ಷಣ ದೇಶದ ಗಡಿಗಳನ್ನು ಭದ್ರಪಡಿಸಿ, ವಿದೇಶೀ ಅಡಿಕೆಯ ಅಕ್ರಮ ಕಳ್ಳಸಾಗಾಟವನ್ನು ತಡೆದು, ತನ್ಮೂಲಕ ಅಡಿಕೆಯ ಕಲಬೆರಕೆಯನ್ನು ನಿಲ್ಲಿಸಿ ಮಾರುಕಟ್ಟೆ ಚೇತರಿಕೆಗೆ ಕ್ರಮ ಕೈಗೊಳ್ಳುವುದೇ ಅಡಿಕೆ ಮಾರುಕಟ್ಟೆಯ ಪುನಶ್ಚೇತನಕ್ಕೆ ಅಗತ್ಯವಾಗಿ ಆಗಬೇಕಾಗಿರುವುದಾಗಿದೆ. ಇದನ್ನೇ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿಯವರು ಹೇಳಿದ್ದಾರೆ. ಯಾವ ಕ್ಷಣದಲ್ಲಿ ಸಂಜೀವ ಮಠಂದೂರ್ರವರು ಅಡಿಕೆಗೆ ಬೆಂಬಲ ಬೆಲೆ ಘೋಷಿಸಬೇಕೆಂದು ಒತ್ತಾಯಿಸಿದರೋ ಅದರ ಮರು ದಿವಸವೇ ಕ್ಯಾಂಪ್ಕೋ ಅಧ್ಯಕ್ಷರು ಅಡಿಕೆ ಮಾರುಕಟ್ಟೆಯ ಪುನಶ್ಚೇತನಕ್ಕೆ ಕಳ್ಳ ಸಾಗಾಣಿಕೆಯನ್ನು  ತಡೆಯುವಬೇಕು ಎಂದು ಹೇಳಿಕೆ ನೀಡಿ ಸಂಜೀವ ಮಠಂದೂರ್ರವರ ವಾದವನ್ನು ಸುಳ್ಳು ಎಂದು ನಿರೂಪಿಸಿದ್ದಾರೆ ಎಂದರು.

ಅಡಿಕೆಯ ಕಳ್ಳ ಸಾಗಾಣಿಕೆಯಿಂದಾಗಿ  ಅಡಿಕೆಯ ಮಾರುಕಟ್ಟೆ ಕುಸಿದಿದೆ ಎಂದು ಕ್ಯಾಂಪ್ಕೋದ ಅಧ್ಯಕ್ಷರೇ ಮತ್ತೆ ಮತ್ತೆ ಹೇಳುತ್ತಿದ್ದರೂ  ದಕ್ಷಿಣ ಕನ್ನಡ ಜಿಲ್ಲೆಯ ಸಂಸತ್ ಸದಸ್ಯರಾದ ಮಾನ್ಯ ನಳಿನ್ ಕುಮಾರ್ ಕಟೀಲ್ ಆಗಲಿ ಕೇಂದ್ರದ ಕೃಷಿ ಸಚಿವರಾದ ಶೋಭಾ ಕರಂದ್ಲಾಜೆಯವರಾಗಲಿ ಈ ವಿಚಾರದಲ್ಲಿ ಯಾಕೆ ಬಾಯಿಯನ್ನೇ ಬಿಡುತ್ತಿಲ್ಲ?  ಅಡಿಕೆ ಕಳ್ಳ ಸಾಗಾಣಿಕೆಯ ಕಿಂಗ್ ಪಿನ್ನುಗಳು ಇವರ ಬಾಯಿಯನ್ನು ಮುಚ್ಚಿದ್ದಾರೆಯೇ?  ಊರಿಗೆಲ್ಲ ತಿಳಿದಿರುವಂತೆ ಬಿಜೆಪಿಯ ದೊಡ್ಡ ದೊಡ್ಡ ಕುಳಗಳು  ಅಡಿಕೆ ಮಾರುಕಟ್ಟೆಯಲ್ಲಿ ಕೈಯಾಡಿಸುತ್ತಿರುವುದೇ ಇದಕ್ಕೆ ಕಾರಣ. ಬಿಜೆಪಿಯ ಚುನಾವಣಾ ಚಾಣಕ್ಯರ ಸುಪುತ್ರ ನಡೆಸುತ್ತಿರುವ ಅಡಿಕೆ ವ್ಯವಹಾರಕ್ಕೆ ಅನುಕೂಲವಾಗಬೇಕೆಂಬ ದೃಷ್ಟಿಯಿಂದಲೇ ಈ ಅಡಿಕೆ ಕಳ್ಳ ಸಾಗಾಣಿಕೆಯನ್ನು ಕೇಂದ್ರ ಸರಕಾರ  ಕಂಡು ಕಾಣದಂತೆ ಕಣ್ಣು ಮುಚ್ಚಿ  ಕುಳಿತಿದೆ.  ಇದೇ ಕಾರಣಕ್ಕಾಗಿಯೇ ಕ್ಯಾಂಪ್ಕೋ ಅಧ್ಯಕ್ಷರಾದಿಯಾಗಿ ಬಿಜೆಪಿಯವರೆಲ್ಲರೂ  ಅಡಿಕೆ ಅಕ್ರಮವಾಗಿ ಆಮದಾಗುತ್ತಿದೆ ಎಂದು ಹೇಳುತ್ತಾರಷ್ಟೇ ಹೊರತು  ಅಂತರಾಷ್ಟ್ರೀಯ ಗಡಿಗಳಲ್ಲಿ ವಿದೇಶಿ ಅಡಿಕೆ ಕಳ್ಳ ಸಾಗಾಣಿಕೆಯಾಗಿ ಭಾರತಕ್ಕೆ  ಬಂದು ನಮ್ಮ ಮಾರುಕಟ್ಟೆಯನ್ನು ಹಾಳುಗೆಡಹುತ್ತಿದೆ ಎಂದು ಹೇಳುತ್ತಿಲ್ಲ . ಅಕ್ರಮ ಆಮದು ಎಂದರೆ ಕಳ್ಳ ಸಾಗಾಣಿಕೆಯಲ್ಲದೆ ಮತ್ತೇನು ? ಎಂದು ಪ್ರಶ್ನಿಸಿದರು.

ಎ.ಪಿ.ಎಂ.ಸಿ. ಸೆಸ್ : 

ಎಪಿಎಂಸಿಯಲ್ಲಿ ಸೆಸ್ ರೂಪದಲ್ಲಿ ಹಣ ಸಂಗ್ರಹವಾಗುತ್ತದೆ,  ಈ ಹಣ ರಾಜ್ಯ ಸರ್ಕಾರಕ್ಕೆ ಹೋಗುತ್ತದೆ,  ಈ ಹಣದಲ್ಲಿ ರಾಜ್ಯ ಸರಕಾರ ಬೆಂಬಲ ಬೆಲೆ ನೀಡಬೇಕು ಎಂದು ಹೇಳುತ್ತಿರುವ ಮಾನ್ಯ ಸಂಜೀವ ಮಠಂದೂರ್ರವರಿಗೆ  ಎಪಿಎಂಸಿಯ ಪರಿಸ್ಥಿತಿಯ ಬಗ್ಗೆ ಯಾವುದೇ ರೀತಿಯ ತಿಳುವಳಿಕೆ ಇಲ್ಲದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಎಪಿಎಂಸಿಯಲ್ಲಿ ಸೆಸ್ ರೂಪದಲ್ಲಿ  ಸಂಗ್ರಹವಾಗುವ  ಹಣ ಇಂದು ರಾಜ್ಯ ಸರ್ಕಾರಕ್ಕೆ ಹೋಗುತ್ತಿಲ್ಲ.  ಸೆಸ್ ಹಣ ಒಂದಷ್ಟು ರಸ್ತೆಗಳನ್ನು ನಿರ್ಮಿಸುವುದಕ್ಕೆ ಎಪಿಎಂಸಿ ಸದಸ್ಯರಿಗೆ ನೀಡುವ ಅನುದಾನ, ರೈತರು ಅಪಘಾತದಿಂದ ಅಕಾಲಿಕ ಮರಣ ಹೊಂದಿದಾಗ ನೀಡುವ ಪರಿಹಾರ, ಇತ್ಯಾದಿ ಬಳಕೆಗೆ ಎಪಿಎಂಸಿ ಸೆಸ್ ಹಣ ಬಳಕೆಯಾಗುತ್ತದೆಯಷ್ಟೇ ಹೊರತು ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಆ ಹಣ ಹೋಗುತ್ತಿಲ್ಲ ಎನ್ನುವ  ಪ್ರಾಥಮಿಕ ಜ್ಞಾನವೂ ಮಾಜಿ ಶಾಸಕರಿಗೆ ಇಲ್ಲದಿರುವುದು ದುರ್ದೈವದ ಸಂಗತಿಯಾಗಿದೆ. ಕೇಂದ್ರ ಸರಕಾರ 3 ಕರಾಳ  ಕೃಷಿ ಕಾಯಿದೆಗಳನ್ನು ತಂದು ಎಪಿಎಂಸಿ ಕಾಯ್ದೆಯನ್ನ ತಿದ್ದುಪಡಿ ಮಾಡುವವರೆಗೆ ಎಪಿಎಂಸಿಗೆ ಸೆಸ್ ರೂಪದಲ್ಲಿ ಪ್ರತಿ ವರ್ಷ ಕೋಟ್ಯಂತರ ರೂಪಾಯಿ  ಆದಾಯ ಬರುತ್ತಿತ್ತು.  ಕೇಂದ್ರ ಸರ್ಕಾರವನ್ನು ಅನುಸರಿಸಿ ಕರ್ನಾಟಕ ರಾಜ್ಯವನ್ನು ಆಗ ಆಳುತ್ತಿದ್ದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ  ಕರ್ನಾಟಕ ಎಪಿಎಂಸಿ ಕಾಯ್ದೆಗೂ ತಿದ್ದುಪಡಿ ತಂದಿದ್ದು,   ರೈತರ ಪ್ರತಿಭಟನೆಗಳ ನಂತರ ಕೇಂದ್ರ ಸರ್ಕಾರ ಈ ವಿವಾದಿತ ಎಪಿಎಂಸಿ ಮಸೂದೆಯನ್ನು ಹಿಂತೆಗೆದುಕೊಂಡರೂ ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ತಾನು ತಂದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂತೆಗೆದುಕೊಂಡಿರಲಿಲ್ಲ. ರೈತರು ತಮ್ಮ ಕೃಷಿ ಉತ್ಪನ್ನಗಳನ್ನು  ಎಪಿಎಂಸಿಯಲ್ಲಿಯೇ  ಮಾರಾಟ ಮಾಡಬೇಕೆಂದೇನಿಲ್ಲ , ಎಲ್ಲಿ ಬೇಕಿದ್ದರೂ ಮಾರಬಹುದು ಎಂಬ ಕಾನೂನು ಬಂದ ನಂತರ ನಗರ ಮತ್ತು ಹಳ್ಳಿಗಳ ಅಡಿಕೆ ವ್ಯಾಪಾರಿಗಳ ಮೇಲಿದ್ದ ಎಪಿಎಂಸಿ ಹಿಡಿತ ತಪ್ಪಿ ಹೋಗಿ ಏಪಿಎಂಸಿಗೆ ಬರುತ್ತಿದ್ದ ಆದಾಯ ಕುಸಿದು ಹೋಯಿತು. ಇದರ ಜೊತೆಗೆ 2020ರಲ್ಲಿ  ಬಿಜೆಪಿ ಸರಕಾರವು 1.5℅  ಇದ್ದ ಸೆಸ್ ಧರವನ್ನು 1℅ ಕ್ಕೆ , ತದನಂತರ 0.35ಕ್ಕೆ ಇಳಿಸಿ  ಎಪಿಎಂಸಿ ಆದಾಯವನ್ನು ಕನಿಷ್ಠ ಮಟ್ಟಕ್ಕೆ ತಂದು ಹಾಕಿತು. 2020ನೇ ಇಸವಿಯಲ್ಲಿ ಈ ಬಗ್ಗೆ ಮಾತನಾಡಿದ್ದ ಅಂದಿನ ಬಿಜೆಪಿ ಸರಕಾರದ ಕಾನೂನು ಸಚಿವರಾದ ಮಾಧುಸ್ವಾಮಿಯವರು ವ್ಯಾಪಾರಿಗಳ ಒತ್ತಡದಿಂದಾಗಿ ಈ ಸೆಸ್ ದರವನ್ನು ಇಳಿಕೆ ಮಾಡಲಾಗಿದೆ ಮತ್ತು ಇದರಿಂದಾಗಿ ಎಪಿಎಂಸಿಯನ್ನು ನಡೆಸುವುದೇ ನಮಗೆ ಕಷ್ಟವಾಗಿದೆ ಎಂಬ ಹೇಳಿಕೆಯನ್ನು ನೀಡಿದ್ದನ್ನು ಗಮನಿಸಬಹುದಾಗಿದೆ. ಹೀಗಿದ್ದರೂ ಸಂಜೀವ ಮಠಂದೂರ್ರವರು ಎಪಿಎಂಸಿ ಸೆಸ್ ಹಣದಲ್ಲಿ ಬೆಂಬಲ ಬೆಲೆ ನೀಡಿ ಎಂದು ಹೇಳಿರುವುದು ಹಾಸ್ಯಾಸ್ಪದವಾಗಿದೆ ಎಂದು ಲೇವಡಿ ಮಾಡಿದರು.

ಅಡಿಕೆ ಬೆಳೆಗಾರರ ಲಾಬಿಯಂತೆ :  

ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರ್ರವರು, ಅಡಿಕೆ ವ್ಯಾಪಾರಿಗಳ ಲಾಬಿ ಇದೆ, ಬೆಳೆಗಾರರ ಲಾಬಿ ಇಲ್ಲ ಎಂಬ ಮಾತನ್ನು ಹೇಳಿದ್ದಾರೆ.  ಈ ಮಾತನ್ನು ಹೇಳಲು ಅವರಿಗೆ ನಾಚಿಕೆ ಆಗಬೇಕು.  ವ್ಯಾಪಾರಿಗಳ ಲಾಭಿಯನ್ನು ವ್ಯಾಪಾರಿಗಳೇ ತಮ್ಮ ಹಣ ಬಲದಿಂದ ಮಾಡುತ್ತಾರೆ.  ಆದರೆ ಅಡಿಕೆ ಬೆಳೆಗಾರರ ಲಾಭಿಯನ್ನು ಮಾಡಬೇಕಾದವರು ಯಾರು?  ಅಡಿಕೆ ಬೆಳೆಗಾರರ ಲಾಬಿಯನ್ನು ಮಾಡಬೇಕಾದವರು ನಮ್ಮ ಜನಪ್ರತಿನಿಧಿಗಳು. ಅಡಿಕೆ ಬೆಳೆಗಾರರಿಗೆ ಸಮಸ್ಯೆ ಬಂದಾಗ, ಅಡಿಕೆ ಮಾರುಕಟ್ಟೆ ಕುಸಿದು ಹೋದಾಗ, ಸರಕಾರಗಳಿಗೆ ಒತ್ತಡವನ್ನು ತಂದು, ಬೆಳಗಾರರ ಹಿತರಕ್ಷಣೆಗೆ ಜನಪ್ರತಿನಿಧಿಗಳೇ ಪ್ರಯತ್ನಿಸಬೇಕು. ಇದೇ ಲಾಬಿ.  ಇಂದು ಅಡಿಕೆ ಬೆಳೆಗಾರರಿಗೆ ಲಾಬಿ ಇಲ್ಲ ಎಂದು ಹೇಳುತ್ತಿರುವ ಮಾನ್ಯ ಸಂಜೀವ ಮಠಂದೂರ್ರವರು  ತಾವು ಶಾಸಕರಾಗಿದ್ದ ಸಂದರ್ಭದಲ್ಲಿ ಅಡಿಕೆ ಬೆಳೆಗಾರರ ಪರವಾಗಿ ಯಾವುದೇ ಲಾಬಿಯನ್ನು ಮಾಡಿದವರಲ್ಲ.  ವಿಧಾನಸಭೆಯಲ್ಲಿ ಅಡಿಕೆ ಬೆಳೆಗಾರರ ಪರವಾಗಿ ಯಾವುದೇ ಒತ್ತಡವನ್ನು ಸರಕಾರದ ಮೇಲೆ ತಂದಿಲ್ಲ.  "ಅಡಿಕೆ ಒಂದು ಜಗಿದು ಉಗಿಯುವ ವಸ್ತು" ಎಂದು ಮತ್ತೆ ಮತ್ತೆ ಹೀಯಾಳಿಸಿದವರು ಮಾನ್ಯ ಸಂಜೀವ ಮಠಂದೂರ್ರವರು.  ಮೊನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲೂ  ಪತ್ರಕರ್ತರ ತೀವ್ರ ಆಕ್ಷೇಪದ ಹೊರತಾಗಿಯೂ ಮಾನ್ಯ ಸಂಜೀವ ಮಠಂದೂರ್ರವರು  "ಅಡಿಕೆ ಒಂದು ಜಗಿದು ಉಗುಳುವ ವಸ್ತು" ಎಂದು ಮತ್ತೆ ಮತ್ತೆ ಪ್ರತಿಪಾದಿಸಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.

ಅಡಿಕೆಯನ್ನು ಹೀಯಾಳಿಸಿದವರು ಅಡಿಕೆ ಬೆಳೆಗಾರರ ಪರವಾಗಿ ಇರುವುದಕ್ಕೆ ಸಾಧ್ಯವೇ?  ಕಳೆದ ವರ್ಷ ನಡೆದ ಕ್ಯಾಂಪ್ಕೋ  ಮಹಾಸಭೆಯಲ್ಲಿ ಮಾನ್ಯ ಸಂಜೀವ ಮಠಂದೂರ್ರವರು  ಎಲೆ ಚುಕ್ಕಿ ರೋಗ ಮತ್ತು  ಅಡಿಕೆಯ ಹಳದಿ ರೋಗಕ್ಕೆ  ಸಂಶೋಧನೆಗಳನ್ನು ನಡೆಸಬೇಕೆಂದು  ಒತ್ತಾಯಿಸಿದಾಗ ಸಭಾಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಂಪ್ಕೋದ ಅಧ್ಯಕ್ಷರು  ನಾವು 3-4 ಬಾರಿ ಒತ್ತಾಯಿಸಿದರೂ ಅಡಿಕೆಯ ಬಗ್ಗೆ ವಿಧಾನಸಭೆಯಲ್ಲಿ ನೀವೆಷ್ಟು ಮಾತನಾಡಿದ್ದೀರಿ ಎಂದು ಛೇಡಿಸುವ ಮೂಲಕ  ಮಾನ್ಯ ಸಂಜೀವ ಮಠಂದೂರ್ರವರ ನಿಜ ಬಣ್ಣವನ್ನು ಸಾರ್ವಜನಿಕವಾಗಿ ಬಯಲುಗೊಳಿಸಿದ್ದರು. ಅಡಿಕೆಯನ್ನು ಜಗಿದು ಉಗಿಯುವ ವಸ್ತು ಎಂದು ಹೀಯಾಳಿಸಿ ಬೆಳೆಗಾರರ ಮನಸ್ಸನ್ನು ನೋಯಿಸಿದ ಕಾರಣಕ್ಕಾಗಿಯೇ ಅವರನ್ನು ಅವರ ಕಳೆದ ಚುನಾವಣೆಯಲ್ಲಿ ಪಕ್ಷ ಜಗಿದು ಉಗಿದಿದೆ. ಅಡಿಕೆ ಬೆಳೆಗಾರರ ಪರವಾದ ಲಾಭಿ ಮಾಡುವುದೆಂದರೆ  ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಸಮರ್ಥವಾಗಿ ಸರಕಾರಗಳ ಮುಂದೆ ಇಡುವುದು. ವ್ಯಾಪಾರಿಗಳು ಹಣಬಲದಿಂದ ತಮ್ಮ ಲಾಬಿಯನ್ನು ನಡೆಸಿದರೆ ಜನಪ್ರತಿನಿಧಿಗಳು ಜನ ಬಲದಿಂದ ಬೆಳೆಗಾರರ ಲಾಬಿಯನ್ನು ನಡೆಸಬೇಕಾಗಿದೆ. ಈಗ ಅಡಿಕೆ ಬೆಳೆಗಾರರ ಪರವಾದ ಲಾಬಿ ಪುತ್ತೂರಿನಿಂದ  ಆರಂಭವಾಗಿದೆ. ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈಯವರು ಅಡಿಕೆ ಬೆಳೆಗಾರರ ಪರವಾದ ಲಾಬಿಯ ನೇತೃತ್ವವನ್ನು ವಹಿಸಿದ್ದಾರೆ. ತಾವು ಎದುರಿಸಿದ ಮೊದಲನೆಯ ಅಧಿವೇಶನದಲ್ಲಿಯೇ ಅಡಿಕೆ ಹಳದಿ ರೋಗದ ಬಗ್ಗೆ ವಿಧಾನಸಭೆಯಲ್ಲಿ ಧ್ವನಿಯೆತ್ತಿದ ಮಾನ್ಯ ಶಾಸಕರು, ಇತ್ತೀಚೆಗೆ ಅಡಕೆಯ ಕಲಬೆರಕೆಯ ವಿಚಾರದಲ್ಲಿ ಧ್ವನಿ ಎತ್ತಿ ಕೇಂದ್ರ ಸರಕಾರಕ್ಕೆ ಪತ್ರವನ್ನು ಬರೆದು ಅಡಿಕೆಯ ಆಮದು ನಿಲ್ಲಿಸಬೇಕೆಂದು ಕೇಂದ್ರ ಸರಕಾರಕ್ಕೆ ಒತ್ತಡ ಹಾಕಿ ಅಡಿಕೆ ಕಳ್ಳಸಾಗಾಣಿಕೆಯ ವಿರುದ್ಧ ಮಾತನಾಡಿದ ಮೊದಲ ಮತ್ತು ಏಕೈಕ ಶಾಸಕರಾಗಿದ್ದಾರೆ.  ದ.ಕ. ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಅಕ್ರಮ ಸಕ್ರಮ ಯೋಜನೆಯಲ್ಲಿ ತೊಡಕಾಗಿರುವ ಕುಮ್ಕಿ ಭೂಮಿಯ ವಿಚಾರವನ್ನು ವಿಧಾನಸಭೆಯಲ್ಲಿ ಸಮರ್ಥವಾಗಿ ಮಂಡಿಸಿ ಕುಮ್ಕಿ ಭೂಮಿಯನ್ನು ಸಕ್ರಮಗೊಳಿಸಿ ರೈತರಿಗೆ ನೀಡಬೇಕೆಂದು ಸರಕಾರವನ್ನು ಒತ್ತಾಯಿಸಿದ್ದಾರೆ. ಮೊನ್ನೆ ನಡೆದ ಬಜೆಟ್ ಅಧಿವೇಶಕ್ಕೆ  ಪೂರ್ವಭಾವಿಯಾಗಿ,  ಸರಕಾರದ ಮೇಲೆ ಒತ್ತಡ ತಂದು,  ಬಜೆಟ್ ಭಾಷಣದಲ್ಲಿ ಅಡಿಕೆಯ ಬೆಂಬಲ ಬೆಲೆಯ ವಿಚಾರ ಪ್ರಸ್ತಾಪವಾಗುವುದಕ್ಕೆ, ಅಡಿಕೆಯ ಬೆಂಬಲ ಬೆಲೆಗಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾಪನೆಯನ್ನು ಈಗಾಗಲೇ ಸಲ್ಲಿಸಲಿರುವುದಕ್ಕೆ, ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈಯವರು ಮೂಲ ಕಾರಣಕರ್ತರಾಗಿದ್ದಾರೆ. ಸಂಜೀವ ಮಠಂದೂರ್ರವರು ಅಡಿಕೆ ಬೆಳೆಗಾರರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವುದನ್ನು ತೊರೆದು ಇನ್ನಾದರೂ ಅಡಿಕೆ ಬೆಳೆಗಾರರ ಪರವಾಗಿ ಮಾತನಾಡಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಿಸಾನ್ ಘಟಕದ ಅಧ್ಯಕ್ಷ ಮುರಳೀಧರ್ ಶೆಟ್ಟಿ, ಎಪಿಎಂಸಿ ಸದಸ್ಯ ಶಕೂರ್ ಹಾಜಿ, ಎಪಿಎಂಸಿ ಮಾಜಿ ಸದಸ್ಯ ಶಶಿಕಿರಣ್ ರೈ ಉಪಸ್ಥಿತರಿದ್ದರು.

ಸುಳ್ಯ : ವಾಹನ ಅಡ್ಡ ಗಟ್ಟಿ ಯುವಕರಿಂದ ಹಲ್ಲೆ ಆರೋಪ

Posted by Vidyamaana on 2023-08-13 08:32:23 |

Share: | | | | |


ಸುಳ್ಯ : ವಾಹನ ಅಡ್ಡ ಗಟ್ಟಿ   ಯುವಕರಿಂದ ಹಲ್ಲೆ ಆರೋಪ

ಸುಳ್ಯ : ಪರಿಚಯದ ಯುವತಿಯೋರ್ವಳನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಹೋದ ವಿಷಯವಾಗಿ ಯುವಕರ ತಂಡವೊಂದು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ವ್ಯಕ್ತಿಯೋರ್ವರು ಸುಳ್ಯ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ.


ಕೇರಳ ಮಲಪುರಂ ನಿವಾಸಿ ಮೊಹಮ್ಮದ್ ಜಲೀಲ್ (39) ನೀಡಿದ ದೂರಿನ ಮೇರೆಗೆ ಲತೀಶ್ ಗುಂಡ್ಯ, ವರ್ಷಿತ್, ಪುನೀತ್ ಹಾಗೂ ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.


ಕೇರಳ ಮಲಪುರಂ ನಿವಾಸಿ ಮೊಹಮ್ಮದ್ ಜಲೀಲ್ ಪ್ರಸ್ತುತ ಸುಳ್ಯ ತಾಲೂಕು ಅರಂತೋಡಿನಲ್ಲಿ ರಬ್ಬರ್ ತೋಟವನ್ನು ಕಳೆದ 3 ತಿಂಗಳ ಹಿಂದೆ ಗುತ್ತಿಗೆ ಪಡೆದು ಅರಂತೋಡಿನಲ್ಲಿ ವಾಸವಾಗಿದ್ದು, ಆ.12 ರಂದು ತನ್ನ ಪರಿಚಯದ ಯುವತಿಯೋರ್ವಳು ತಾನು ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದು, ತನಗೆ ವಿಶ್ರಾಂತಿ ಪಡೆಯಲು ರೂಮ್ ಬೇಕೆಂದು ಕೇಳಿಕೊಂಡ ಮೇರೆಗೆ ಜಲೀಲ್ ಸುಳ್ಯದಲ್ಲಿ ರೂಂ ವ್ಯವಸ್ಥೆ ಮಾಡಿ ಬಳಿಕ ವೈಯಕ್ತಿಕ ಕೆಲಸ ನಿಮಿತ್ತ ಸುಳ್ಯ ತಾಲೂಕು ತೋಡಿಕಾನಕ್ಕೆ ತೆರಳಿದ್ದಾಗ 5 ಜನರು ಕಾರು ಮತ್ತು ಸ್ಕೂಟರ್ ಮೂಲಕ ಜಲೀಲ್ ಕಾರನ್ನು ಪಡೆದು ಜಲೀಲ್ ರವರಿಗೆ ಅವ್ಯಾಚವಾಗಿ ಬೈದು ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿ ತೆರಳಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.


ಸದರಿ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 87/2023 ಕಲಂ 143, 147, 341, 323, 504, 506, 153(A) ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಆರೋಪಿಗಳ ಪೈಕಿ ಸುಳ್ಯ ಸೊಣಂಗೇರಿ ನಿವಾಸಿ ಪುನೀತ್ ಎಂಬಾತನನ್ನು ಬಂಧಿಸಿದ್ದು, ತನಿಖೆ ನಡೆಸಲಾಗುತ್ತಿದೆ..

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ : ಓರ್ವ ಸಾವು ; ಇಬ್ಬರಿಗೆ ಗಾಯ

Posted by Vidyamaana on 2024-03-29 19:53:12 |

Share: | | | | |


ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ : ಓರ್ವ ಸಾವು ; ಇಬ್ಬರಿಗೆ ಗಾಯ

ಬೆಳ್ತಂಗಡಿ : ಕಾರು ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಗುರುವಾಯನಕೆರೆಯ ಶಕ್ತಿ ನಗರದ ಬಳಿ ನಡೆದಿದೆ.ಬೆಳ್ತಂಗಡಿಯಿಂದ ಮೂಡಬಿದಿರೆಗೆ ಹೋಗುತ್ತಿದ್ದ ಐ20 ಕಾರು ಶಕ್ತಿನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ ಗೆ ಡಿಕ್ಕಿಯಾದ ಘಟನೆ ನಡೆದಿದೆ.


ಚೆಲ್ಯಡ್ಕ ಮುಳುಗು ಸೇತುವೆ ಸಂಚಾರ ಸ್ಥಗಿತಕ್ಕೆ ಜಿಲ್ಲಾಧಿಕಾರಿ‌ ಆದೇಶ

Posted by Vidyamaana on 2024-06-29 13:06:13 |

Share: | | | | |


ಚೆಲ್ಯಡ್ಕ ಮುಳುಗು ಸೇತುವೆ ಸಂಚಾರ ಸ್ಥಗಿತಕ್ಕೆ ಜಿಲ್ಲಾಧಿಕಾರಿ‌ ಆದೇಶ

ಪುತ್ತೂರು: ಚೆಲ್ಯಡ್ಯ ಮುಳುಗು ಸೇತುವೆ ಮಳೆಗಾಲ ಮುಗಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ.ಈ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಈ ಬಾರಿಯ ಮಳೆಗೂ ಚೆಲ್ಯಡ್ಕ ಮುಳುಗು ಸೇತುವೆ ನೀರಿನಿಂದ ಮುಳುಗಿ, ಸಂಚಾರ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬದಲಿ ಸಂಚಾರ ಸೂಚಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.



Leave a Comment: