ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಪತ್ರಕರ್ತೆಯ ಮೃತದೇಹ ಕೆರೆಯಲ್ಲಿ ಪತ್ತೆ

Posted by Vidyamaana on 2024-08-29 06:24:03 |

Share: | | | | |


ಪತ್ರಕರ್ತೆಯ ಮೃತದೇಹ ಕೆರೆಯಲ್ಲಿ ಪತ್ತೆ

ಬಾಂಗ್ಲಾದೇಶದ ಪತ್ರಕರ್ತೆ ಸಾರಾ ರಹನುಮಾ ಅವರ ಮೃತದೇಹ ಬುಧವಾರ ಢಾಕಾದ ಹತಿರ್ಜೀಲ್ ಕೆರೆಯಲ್ಲಿ ಪತ್ತೆಯಾಗಿದೆ.33 ವರ್ಷದ ಸಾರಾ ಬಂಗಾಳಿ ಭಾಷೆಯ ಸುದ್ದಿವಾಹಿನಿಯ ನ್ಯೂಸ್‍ರೂಂ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಅಪಘಾತದಲ್ಲಿ ಮೃತಪಟ್ಟ ಹನಾ ಮನೆಗೆ ಭೇಟಿ ನೀಡಿದ ಅಶೋಕ್ ರೈ

Posted by Vidyamaana on 2023-07-08 12:48:10 |

Share: | | | | |


ಅಪಘಾತದಲ್ಲಿ ಮೃತಪಟ್ಟ ಹನಾ ಮನೆಗೆ ಭೇಟಿ ನೀಡಿದ ಅಶೋಕ್ ರೈ

ಪುತ್ತೂರು: ತುಂಬೆಯ ರಾಮಲ್ ಕಟ್ಟೆಯಲ್ಲಿ ನಡೆದ ಕಾರು ಅಪಘಾತದಲ್ಲಿ ಮೃತಪಟ್ಟ ಹನಾ ಅವರ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಭೇಟಿ ನೀಡಿದರು.

ಕುಟುಂಬ ಸದಸ್ಯರೊಂದಿಗೆ ಮಾತನಾಡಿದ ಅವರು, ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಈ ಸಂದರ್ಭ ಪ್ರಸನ್ನ ರೈ ಸಿಝ್ಲರ್, ಮೃತ ಹನಾ ಅವರ ತಂದೆ ಮಜೀದ್ ಹಾಗೂ ಮನೆಯವರು ಉಪಸ್ಥಿತರಿದ್ದರು.

ಪುತ್ತೂರು : ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ : ಚಾಲಕನಿಗೆ ಗಾಯ

Posted by Vidyamaana on 2023-10-19 07:22:53 |

Share: | | | | |


ಪುತ್ತೂರು : ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ : ಚಾಲಕನಿಗೆ ಗಾಯ

ಪುತ್ತೂರು: ಮಂಗಳೂರುನಿಂದ ಸುಳ್ಯದ ಕಡೆಗೆ ಪಾಮ್‌ ಆಯಿಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರೊಂದು ಪಲ್ಟಿಯಾಗಿ ಪಾಮ್ ಆಯಿಲ್‌ ಸೋರಿಕೆ ರಸ್ತೆಯಲ್ಲೆಲ್ಲಾ ಹರಿದು ಹೋದ ಘಟನೆ ಅ.18ರ ರಾತ್ರಿ ಇಲ್ಲಿನ ಬೈಪಾಸ್‌ ರಸ್ತೆ ಉರ್ಲಂಡಿಯಲ್ಲಿ ನಡೆದಿದೆ.


ರಾತ್ರಿ 10.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ.ಟ್ಯಾಂಕ‌ ಪಲ್ಟಿಯಾದ ಶಬ್ದ ಕೇಳುತ್ತಲೇ ಸ್ಥಳೀಯರು ಆಗಮಿಸಿ ಇತರರಿಗೆ ಮಾಹಿತಿ ನೀಡಿದ್ದರುಘಟನೆಯಿಂದ ವಿದ್ಯುತ್‌ ತಂತಿ ತುಂಡರಿಸಲ್ಪಟ್ಟಿದ್ದು ಸಂಪರ್ಕ ಕಡಿತಗೊಂಡಿದೆ.ಟ್ಯಾಂಕರ್‌ ವಿದ್ಯುತ್‌ ಕಂಬ, ತಂತಿಗಳಿಗೆ ತಾಗಿತ್ತಾದರೂ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರೊಂದಕ್ಕೆ ಅಪಘಾತವಾಗುವುದನ್ನು ತಪ್ಪಿಸುವ ಯತ್ನದಲ್ಲಿ ಟ್ಯಾಂಕ‌ ಪಲ್ಟಿಯಾಗಿದೆ ಎನ್ನಲಾಗಿದೆ. ಟ್ಯಾಂಕರ್ ಚಾಲಕನಿಗೆ ಗಾಯವಾಗಿದ್ದು ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಗಾಯಾಳು ಚಾಲಕನನ್ನು ತಮ್ಮ ಕಾರಿನಲ್ಲಿ ಕರೆದೊಯ್ದು ಮಹಾವೀರ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.ಅಗ್ನಿ ಶಾಮಕ ದಳದವರು ಹಾಗೂ ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮುನ್ನೆಚ್ಚರಿಕಾ ಕ್ರಮಕೈಗೊಂಡಿದ್ದಾರೆ.ಘಟನಾಸ್ಥಳದಲ್ಲಿ ಹಲವು ಮಂದಿ ಜಮಾಯಿಸಿದ್ದರು.


10 ಸಾವಿರ ಲೀ ಪಾಮ್ ಆಯಿಲ್ ಸೋರಿಕೆ: ಟ್ಯಾಂಕರ್‌ನಲ್ಲಿ 30 ಸಾವಿರ ಲೀ. ಪಾಮ್ ಆಯಿಲ್ ತುಂಬಿಸಲಾಗಿದ್ದು, ಅದರಲ್ಲಿದ್ದ 10 ಸಾವಿರ ಲೀ. ಪಾಮ್ ಆಯಿಲ್ ಸೋರಿಕೆಯಾಗಿ ಹೋಗಿದೆ ಎಂದು ತಿಳಿದು ಬಂದಿದೆ.

ಪುತ್ತೂರು : ಚಿಕಿತ್ಸೆಗೆ ಬಂದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು : ಸೇರಿದ ಜನ - ದೂರು ದಾಖಲು

Posted by Vidyamaana on 2024-05-16 07:59:27 |

Share: | | | | |


ಪುತ್ತೂರು : ಚಿಕಿತ್ಸೆಗೆ ಬಂದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು : ಸೇರಿದ ಜನ - ದೂರು ದಾಖಲು

ಪುತ್ತೂರು : ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ವ್ಯಕ್ತಿಯೋರ್ವರು ಚಿಕಿತ್ಸೆ ಸಂದರ್ಭ ಮೃತಪಟ್ಟಿದ್ದು ಆಸ್ಪತ್ರೆಯಲ್ಲಿ ಮೃತರ ಕಡೆಯವರು ನೂರಕ್ಕೂ ಮಿಕ್ಕಿ ಜನ ಸೇರಿದ ಘಟನೆ ಮೇ.15ರಂದು ನಡೆದಿದೆ. 

ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಬೆಳ್ತಂಗಡಿ ತಾಲೂಕಿನ ಕಕ್ಕೆಪದವು ಪಿಲಿಬೈಲು ನಿವಾಸಿ ಕೃಷ್ಣಪ್ಪ ಗೌಡ ಎನ್ನುವವರು ಜ್ವರ ಹಾಗೂ ನಿಶಕ್ತಿಯಿಂದ ಚಿಕಿತ್ಸೆಗೆ ಇಂದು ಮಧ್ಯಾಹ್ನ ಬಂದಿದ್ದರು. 

ಪುತ್ತೂರಿಗೆ ಬಂತು ನ್ಯೂ ಚೆನ್ನೈ ಶಾಪಿಂಗ್ -ಇಂದಿನಿಂದ ಶಾಪಿಂಗ್ ಪ್ರಿಯರಿಗೆ ಧಮಾಕಾ

Posted by Vidyamaana on 2023-06-05 03:00:41 |

Share: | | | | |


ಪುತ್ತೂರಿಗೆ ಬಂತು ನ್ಯೂ ಚೆನ್ನೈ ಶಾಪಿಂಗ್ -ಇಂದಿನಿಂದ ಶಾಪಿಂಗ್ ಪ್ರಿಯರಿಗೆ ಧಮಾಕಾ

ಪುತ್ತೂರು: ಬೃಹತ್ ಬಟ್ಟೆಗಳ ಮೇಳ “ನ್ಯೂ ಚೆನ್ನೈ ಶಾಪಿಂಗ್” ಜೂ.5 ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶುಭಾರಂಭಗೊಳ್ಳಲಿದೆ.

ಈ ಮೇಳದಲ್ಲಿ ಕ್ಯಾಶುವಲ್ ಶರ್ಟ್ & ಫಾರ್ಮಲ್ ಶರ್ಟ್, ಲಾಂಗ್ ಫ್ರಾಕ್ & ಲಾಂಗ್ ಚೂಡಿದಾರ್, ಸೀರೆಗಳು ಹಾಗೂ ರೆಡಿಮೆಡ್ ಬಟ್ಟೆಗಳು ಲಭ್ಯವಿದ್ದು, ಮಕ್ಕಳಿಂದ ತೊಡಗಿ ದೊಡ್ಡವರ ವರೆಗೆ ಯಾವುದೇ ವಸ್ತುಗಳನ್ನು ತೆಗೆದುಕೊಂಡರೂ ಕೇವಲ 199 ರೂಪಾಯಿ ಮಾತ್ರ ಆಗಿರುತ್ತದೆ.

ದಿ ಫ್ಯಾಮಿಲಿ ಶಾಪ್ ಧ್ಯೇಯ ವಾಕ್ಯದೊಂದಿಗೆ ಆರಂಭಗೊಳ್ಳುವ ಈ ಮೇಳದ ಸದುಪಯೋಗವನ್ನು ಗ್ರಾಹಕರ ಪಡೆದುಕೊಳ್ಳಬಹುದು ಎಂದು ಶಾಪಿಂಗ್ ಮೇಳದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಕಾವು : ಪಕ್ಷೇತರ ಅಭ್ಯರ್ಥಿ ಪುತ್ತಿಲ ಪರ ಸಮಾವೇಶ : ಹಲವಾರು ಮಂದಿ ಭಾಗಿ

Posted by Vidyamaana on 2023-05-02 04:31:44 |

Share: | | | | |


ಕಾವು : ಪಕ್ಷೇತರ ಅಭ್ಯರ್ಥಿ ಪುತ್ತಿಲ ಪರ ಸಮಾವೇಶ : ಹಲವಾರು ಮಂದಿ ಭಾಗಿ

ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಪರ ಸಮಾವೇಶ ಕಾವು ಪಂಚವಟಿಯಲ್ಲಿ ನಡೆಯಿತುಸಮಾವೇಶದಲ್ಲಿ ಅರುಣ್ ಪುತ್ತಿಲ ರವರ ಪರ ಮತಯಾಚನೆ ಮಾಡಲಾಯಿತು. ವೇದಿಕೆ ಪಕ್ಷೇತರ ಅಭ್ಯರ್ಥಿ ಪುತ್ತಿಲ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.ನೂರಾರು ಮಂದಿ ಕಾರ್ಯಕರ್ತರು, ಮಹಿಳೆಯರು, ಅಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Recent News


Leave a Comment: