Posted by vidyamaana on 2024-07-24 19:54:18 |
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.
ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ
Posted by Vidyamaana on 2023-08-26 04:06:58 |
ಬೆಂಗಳೂರು: ಚಂದ್ರಯಾನ-3 ಯೋಜನೆ ಯಶಸ್ವಿಯಾದ, ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್ ಆದ ದಿನವನ್ನು, ಅಂದರೆ ಆಗಸ್ಟ್ 23 ಅನ್ನು ಇನ್ನು ಮುಂದೆ ‘ರಾಷ್ಟ್ರೀಯ ಬಾಹ್ಯಾಕಾಶ ದಿನ (National Space Day)’ ಎಂದು ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದರು.
ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕೇಂದ್ರದಲ್ಲಿ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಚಂದ್ರಯಾನ-3 ರ ಯಶಸ್ಸಿನಲ್ಲಿ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದರು.
ಚಂದ್ರಯಾನ-2 ಪತನ ಸ್ಥಳಕ್ಕೆ ‘ತಿರಂಗ ಪಾಯಿಂಟ್’ ಎಂದು ನಾಮಕರಣ ಮಾಡಿದ ಅವರು, ಈ ತಿರಂಗ ಪಾಯಿಂಟ್ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು. ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಮೇಕ್ ಇನ್ ಇಂಡಿಯಾ ಚಂದ್ರನವರೆಗೂ ತಲುಪಿದೆ. ವಿಜ್ಞಾನಿಗಳ ಸಾಧನೆ ದೇಶದ ಪ್ರತಿಯೊಬ್ಬರಿಗೂ ತಿಳಿಯಬೇಕಿದೆ. ಚಂದ್ರಯಾನ-3 ರ ಯಶಸ್ಸಿನಿಂದ ಯುವ ಪೀಳಿಗೆಗೆ ನಿರಂತರವಾಗಿ ಪ್ರೇರಣೆ ಸಿಗಲಿದೆ. ಹೀಗಾಗಿ ಆಗಸ್ಟ್ 23ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಘೋಷಣೆ ಮಾಡಲಾಗುವುದು ಎಂದು ಮೋದಿ ಹೇಳಿದರು.
ಕೇಂದ್ರ, ರಾಜ್ಯ ಸರ್ಕಾರ ಸಹಯೋಗದಲ್ಲಿ ಬಾಹ್ಯಾಕಾಶ, ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿ ರಾಷ್ಟ್ರಮಟ್ಟದ ಹ್ಯಾಕಥಾನ್ ಆಯೋಜಿಸಲಾಗುವುದು. ಇಸ್ರೋ ವಿಜ್ಞಾನಿಗಳು ಹಲವು ಉಪಗ್ರಹ ಉಡಾವಣೆ ಮಾಡಿದ್ದಾರೆ. ಈ ಉಪಗ್ರಹಗಳ ನೆರವಿನಿಂದ ಹಲವು ಕ್ಷೇತ್ರಗಳಿಗೆ ಅನುಕೂಲ ಆಗಲಿದೆ. ಕೃಷಿ, ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಗಳಿಗೆ ಅನುಕೂಲವಾಗುತ್ತಿದೆ. ತಂತ್ರಜ್ಞಾನ ಬೆಳವಣಿಗೆಯಾದರೆ ದೇಶದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಮೋದಿ ಹೇಳಿದರು.
ಇದಕ್ಕೂ ಮುನ್ನ ಅವರು, ಚಂದ್ರಯಾನ-3 ರ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಮೋದಿ ಘೋಷಣೆ ಮಾಡಿದರು.
Posted by Vidyamaana on 2023-05-02 04:31:44 |
ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಪರ ಸಮಾವೇಶ ಕಾವು ಪಂಚವಟಿಯಲ್ಲಿ ನಡೆಯಿತುಸಮಾವೇಶದಲ್ಲಿ ಅರುಣ್ ಪುತ್ತಿಲ ರವರ ಪರ ಮತಯಾಚನೆ ಮಾಡಲಾಯಿತು. ವೇದಿಕೆ ಪಕ್ಷೇತರ ಅಭ್ಯರ್ಥಿ ಪುತ್ತಿಲ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.ನೂರಾರು ಮಂದಿ ಕಾರ್ಯಕರ್ತರು, ಮಹಿಳೆಯರು, ಅಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Posted by Vidyamaana on 2023-05-26 10:10:57 |
ಪುತ್ತೂರು: ಅಂಕಪಟ್ಟಿ ನೈಜತೆ ಪರಿಶೀಲನೆಯ ದುಬಾರಿ ಶುಲ್ಕದ ಬಗ್ಗೆ ಶಾಸಕ ಅಶೋಕ್ ಕುಮಾರ್ ರೈ ಅವರ ಗಮನಕ್ಕೆ ತಂದಾಗ, ಕುಲ ಸಚಿವರ ಜೊತೆ ಮಾತನಾಡಿ ಶುಲ್ಕ ಕಡಿಮೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಡ ವಿದ್ಯಾರ್ಥಿಗಳ, ಬಡ ಉದ್ಯೋಗ ಆಕಾಂಕ್ಷಿತರ ಪರವಾಗಿ ಧ್ವನಿ ಎತ್ತಿದ ಅಶೋಕ್ ಕುಮಾರ್ ರೈ ಅವರ ಕಾರ್ಯ ಅಭಿನಂದನಾರ್ಹ ಎಂದು ಜಿ.ಪಿ.ಎಸ್.ಟಿ.ಆರ್. (ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷಾ) ಅಭ್ಯರ್ಥಿ ಗಣೇಶ್ ತಿಳಿಸಿದ್ದಾರೆ.
ಉದ್ಯೋಗಕ್ಕಾಗಿ ಅಂಕಪಟ್ಟಿ ನೈಜತೆ ಪರಿಶೀಲನೆಯನ್ನು ವಿಶ್ವವಿದ್ಯಾಲಯ ಮಾಡುತ್ತದೆ. ಹೀಗೆ ಒಂದು ಅಂಕಪಟ್ಟಿಯ ಪರಿಶೀಲನೆಗೆ 1500 ರೂ. ಶುಲ್ಕ ವಿಧಿಸಲಾಗುತ್ತದೆ. ಅಂದರೆ ಎಲ್ಲಾ ಅಂಕಪಟ್ಟಿಗಳ ನೈಜತೆ ಪರಿಶೀಲನೆಗೆ 13500 ರೂ. ಶುಲ್ಕ ತಗುಲುತ್ತದೆ. ಉದ್ಯೋಗಕ್ಕಾಗಿ ಹಾತೊರೆಯುವ ಅಭ್ಯರ್ಥೀಗಳು ಇಷ್ಟು ದೊಡ್ಡ ಮೊತ್ತವನ್ನು ಪಾವತಿಸಲು ಪರದಾಡುವ ಪರಿಸ್ಥಿತಿ ಇದೆ. ಆದ್ದರಿಂದ ಇದರ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದು, ಶುಲ್ಕ ಕಡಿಮೆ ಮಾಡುವಂತೆ ಶಾಸಕರಾಗಿ ಆಯ್ಕೆಯಾಗಿರುವ ಅಶೋಕ್ ಕುಮಾರ್ ರೈ ಅವರಿಗೆ ಫೋನ್ ಮಾಡಿ ತಿಳಿಸಲಾಗಿತ್ತು.
ಕೂಡಲೇ ಸ್ಪಂದಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರು, ಮಂಗಳೂರು ವಿಶ್ವವಿದ್ಯಾಲಯದ ಕುಲ ಸಚಿವರ ಜೊತೆ ಮಾತನಾಡಿದ್ದರು. ಇದರ ಪರಿಣಾಮ ಎಂಬಂತೆ ನಿನ್ನೆ ನಡೆದ ಸಿಂಡಿಕೇಟ್ ಸಭೆ ಅಂಕಪಟ್ಟಿ ನೈಜತೆ ಪರಿಶೀಲನೆಯ ಶುಲ್ಕವನ್ನು ಕಡಿಮೆ ಮಾಡಲು ಅನುಮೋದನೆ ನೀಡಲಾಗಿದೆ. ಹೀಗಾಗಿ 1500 ರೂ. ಇದ್ದ ಶುಲ್ಕವನ್ನು 500 ರೂ.ಗೆ ಇಳಿಸಲಾಗಿದೆ. ಇದಕ್ಕೆ ಕಾರಣರಾದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Posted by Vidyamaana on 2024-01-08 07:54:09 |
ಪುತ್ತೂರು: ಪುತ್ತೂರು ನಗರ ವ್ಯಾಪ್ತಿಯಲ್ಲಿ ರೂ ೨೪ ಕೋಟಿ ರೂ ಕಾಮಗಾರಿ ನಡೆಯಲಿದ್ದು ಇದಕ್ಕಾಗಿ ವಿವಿಧ ಕಡೆಗಳಿಗೆ ಅನುದಾನ ಹಂಚಿಕೆ ಕೆಲಸ ನಡೆದಿದ್ದು ಮುಂದಿನ ದಿನಗಳಲ್ಲಿ ನಗರದಲ್ಲಿ ಹೆಚ್ಚಿನ ಅಭಿವೃದ್ದಿ ಕಾರ್ಯಗಳು ನನಡೆಯಲಿದ್ದು ದೂರ ದೃಷ್ಟಿಯ ಕಾಮಗಾರಿಗಳು ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಮರೀಲ್ ಬೆದ್ರಾಳ ರಸ್ತೆ ಅಗಲೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಪುತ್ತೂರು ನಗರಕ್ಕೆ ೨೪ ಗಂಟೆಯೂ ಕುಡಿಯುವ ನೀರಿನ ವ್ಯವಸ್ಥೆ ಆಗಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ೧೦೧೦ ಕೋಟಿ ರಊ ಅನುದಾನ ಬಿಡುಗಡೆಯಾಗಿದ್ದು ಮುಂದಿನ ಒಂದೂವರೆ ವರ್ಷದೊಳಗೆ ಗ್ರಾಮೀಣ ಭಾಗದಲ್ಲೂ ದಿನದ ೨೪ ಗಂಠೆ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ಹೇಳಿದರು.
ಕೆಎಂಎಫ್ ಪುತ್ತೂರಿಗೆ ಶಿಫ್ಟ್ ಆಗಲಿದ್ದು ಇದರಿಂದ ಇಲ್ಲಿನ ಸುಮಾರು ೬೦೦ ಮಂದಿಗೆ ಉದ್ಯೋಗ ದೊರೆಯಲಿದೆ. ಯುವಕರಿಗೆ ಉದ್ಯೋಗ ನೀಡುವ ಕೆಲಸವನ್ನು ಮಾಡಬೇಕು. ಪುತ್ತೂರಿನಲ್ಲಿ ಉದ್ಯಮ ಆರಂಭವಾದರೆ ಎಲ್ಲರಿಗೂ ಆದಾಯ ಬರಲಿದೆ. ಆಟೋ ಚಾಲಕರಿಗೆ, ಲರಿ ಚಾಲಕರಿಗೆ ಸೇರಿದಂತೆ ವಿದ್ಯಾವಂತ ನಿರುದ್ಯೋಗಿಗಳಿಗೂ ಉದ್ಯೋಗಕವಾಶ ದೊರೆಯಲಿದೆ. ಪಕ್ಷಾತೀತವಾಗಿ ಪುತ್ತೂರಿನಲ್ಲಿ ಅಭಿವೃದ್ದಿ ಕಾರ್ಯಗಳನ್ನು ನಡೆಸುತ್ತೇನೆ. ಅಭಿವೃದ್ದಿಯಲ್ಲಿ ಯಾವುದೇ ರಾಜಕೀಯ ಖಂಡಿತವಾಗಿಯೂ ಮಾಡುವುದಿಲ್ಲ. ಪುತ್ತೂರಿನ ಜನತೆಯ ಕ್ಷೇಮವೇ ನನ್ನ ಕ್ಷೇಮವಾಗಿದೆ, ನನ್ನ ಕ್ಷೇತ್ರದಲ್ಲಿ ಸೂರು, ನೀರು, ಮತ್ತು ಕರೆಂಟ್ ಇಲ್ಲದೆ ವಂಚಿತರಾಗಿರುವ ಯವುದೇ ಕುಟುಂಬ ಇರಬಾರದು, ಯಾವ ಕುಟುಂಬವೂ ಹಸಿವಿನಿಂದ ಇರಬಾರದು ಎಂಬುದೇ ನನ್ನ ಉದ್ದೇಶವಾಗಿದೆ ಎಂದು ಹೇಳಿದರು.
ಬೆದ್ರಾಳದಿಂದ ಸರ್ವೆತನಕ ಚತುಷ್ಪಥ ರಸ್ತೆ
ಬೆದ್ರಾಳದಿಂದ ಸರ್ವೆ ತನಕ ಚತುಷ್ಪಥ ರಸ್ತೆ ನಿರ್ಮಾಣವಾಗಲಿದೆ ಈ ವಿಚಾರಕ್ಕೆ ಸಂಬಂಧಿಸಿಂದಂತೆ ಈಗಾಗಲೇ ಅನುದಾನಕ್ಕಾಗಿ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ಶಾಸಕರು ಹೇಳಿದರು. ಸರಕಾರ ಐದು ಗ್ಯಾರಂಟಿಯನ್ನು ನೀಡಿ ಪ್ರತೀ ಕುಟುಂಬಕ್ಕೂ ನೆರವಾಗಿದೆ, ಎಲ್ಲರ ಖಾತೆಗೂ ಹಣ ಜಮೆಯಾಗುತ್ತಿದೆ, ಕಾಂಗ್ರೆಸ್ ಸರಕಾರ ಬಂದ ಬಳಿಕ ಜನತೆ ನೆಮ್ಮದಿಯಿಂದ ಇದ್ದಾರೆ. ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಕಾಂಗ್ರೆಸ್ ಸರಕಾರ ಬಂದ ಬಳಿಕ ಕೊಂಚ ನೆಮ್ಮದಿ ದೊರಕಿದೆ. ಮುಂದಿನ ದಿನಗಳಲ್ಲಿ ಅಭಿವೃದ್ದಿಗೂ ಸರಕಾರ ಹೆಚ್ಚಿನ ಅನುದಾನವನ್ನು ನೀಡಲಿದೆ ಎಂದು ಶಾಸಕರು ಹೇಳಿದರು.
ಅಶೋಕ್ ರೈ ಶಾಸಕರಾಗಿದ್ದೇ ನಮ್ಮ ಭಾಗ್ಯ: ಆಲಿ
ಅಶೋಕ್ ರೈ ಶಾಸಕರಾಗಿದ್ದೇ ನಮ್ಮೆಲಲ್ಲರ ಭಾಗ್ಯವಾಗಿದೆ. ಪುತ್ತೂರಿಗೆ ಗಟ್ಸ್ ಇರುವ ಶಾಸಕರು ಬೇಕು ಎಂದು ಜನ ಆಸೆಪಟ್ಟಿದ್ದರು ಅದರಂತೆ ಗಟ್ಸ್ ಇರುವ ಶಸಕರು ನಮಗೆ ಸಿಕ್ಕಿದ್ದಾರೆ. ಈಗಾಗಲೇ ಕೋಟಿಗಟ್ಟಲೆ ಅನುದಾನವನ್ನು ಎಂಟು ತಿಂಗಳಲ್ಲಿ ಕ್ಷೇತ್ರಕ್ಕೆ ತಂದಿದ್ದಾರೆ. ಬಡವರ ಪರ ಅಪಾರ ಕಾಳಜಿ ಇರುವ ಶಾಸಕರು ಇಂದು ಕ್ಷೇತ್ರದ ಬಡವರಿಗಾಗಿ ಸರ್ವಸ್ವವನ್ನೂ ನೀಡುತ್ತಿದ್ದಾರೆ ಎಂಬುದನ್ನು ನಾವು ತಿಳಿದುಕೊಳ್ಳಬೇಕು. ನಗರೋತ್ತಾನ ಯೋಜನೆಯಡಿ ಮರೀಲ್ ಬೆದ್ರಾಳ ರಸ್ತೆಗೆ ರೂ. ೫೦ ಲಕ್ಷ ವನ್ನು ಶಾಸಕರು ಮಂಜೂರು ಮಾಡಿಸುವ ಮೂಲಕ ಇಲ್ಲಿನ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ್ದಾರೆ. ಮುಂದಿನ ದಿನಗಳಲ್ಲಿ ನಗರಸಭಾ ವ್ಯಾಪ್ತಿಯ ಜನರ ಎಲ್ಲಾ ಬೇಡಿಕೆಗಳು ಖಂಡಿತವಾಗಿಯೂ ಈಡೇರಲಿದೆ. ಕುಡಿಯುವ ನೀರು, ದಾರಿ ದೀಪ, ಚರಂಡಿ ಸೇರಿದಂತೆ ಜನತೆಯ ಬಹುಕಾಲದ ಬೇಡಿಕೆಗಳು ಈಡೇರಲಿದೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಮಹಮ್ಮದಾಲಿ ಹೇಳಿದರು.
ಸನ್ಮಾನ
ಇದೇ ಸಂದರ್ಭದಲ್ಲಿ ಆರ್ಯಾಪು ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದ ಮಹಮ್ಮದಾಲಿ ಹಗೂ ನೂತನ ನಿರ್ದೆಶಕರುಗಳಾಗಿ ಆಯ್ಕೆಯಾದ ರಂಜಿತ್ ಬಂಗೇರ ಹಾಗೂ ತೆರೆಸಾ ಎಂ ಸಿಕ್ವೆರಾ ಅವರನ್ನು ಶಾಸಕರು ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬನ್ನೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಈಶ್ವರಭಟ್ ಪಂಜಿಗುಡ್ಡೆ, ಕಾಂಗ್ರೆಸ್ ಮುಖಂಡರುಗಳಾದ ಶಿವರಾಮ ಆಳ್ವ ಬಳ್ಳಮಜಲು, ಕೃಷ್ಣಪ್ರಸಾದ್ ಆಳ್ವ, ರೋಶನ್ ರೈ ಬನ್ನೂರು, ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಯಾಕೂಬ್ ಮುಲಾರ್, ರೆಝಾಕ್ ಖಾನ್, ಹೆರಾಲ್ಡ್ ಮಾಡ್ತಾ, ಇಬ್ರಾಹಿಂ ಟಿ ಎಂ, ಲಿಯೋ ಮಾರ್ಟಿಸ್,ದಿನೇಶ್, ಬೆನ್ನಿ ಡಿಸೋಜ, ತೆರೆಸಾ ಸಿಕ್ವೆರಾ, ಬೂತ್ ಅಧ್ಯಕ್ಷ ಜೀವನ್ ಮರ್ವಿನ್ ಡೆಲ್ಮೆದಾ, ಆರ್ಯಾಪು ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ರಂಜಿತ್ ಬಂಗೇರ, ಮರೀಲ್ ರಿಕ್ಷಾ ಚಾಲಕರ ಸಂಘದ ಪಧಾಧಿಕಾರಿಗಳು ಹಗೂ ಸ್ಥಳೀಯರು ಉಪಸ್ಥಿತರಿದ್ದರು.
Posted by Vidyamaana on 2023-04-04 10:03:55 |
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಈ ಮಧ್ಯೆ ವಿವಿಧ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳ ಎದೆಬಡಿತವೂ ನಾರ್ಮಲ್ ಗಿಂತ ಜಾಸ್ತಿನೇ ಇದೆ. ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಫರ್ಸ್ಟ್ ಲಿಸ್ಟ್ ಬಿಡುಗಡೆಗೊಳಿಸಿದ್ದು, ಜೆಡಿಎಸ್ ಸಹ ತನ್ನ ಅಭ್ಯರ್ಥಿಗಳನ್ನು ಬಹುತೇಕ ಫೈನಲ್ ಮಾಡಿದೆ. ಆದ್ರೆ ಕ್ಯಾಡಿಂಡೇಟ್ ಸೆಲೆಕ್ಷನ್ ವಿಚಾರದಲ್ಲಿ ಬಿಜೆಪಿ ಮಾತ್ರ ಅಳೆದು ತೂಗಿ ನೋಡುವುದ್ರಲ್ಲೇ ಇದೆ.
ಈ ನಡುವೆ ಇಂದು ಸೋಷಿಯಲ್ ಮೀಡಿಯಾದಲ್ಲಿ ಒಂದು ಸಂಚಲನ ಉಂಟಾಯ್ತು. ಭಾರತೀಯ ಜನತಾ ಪಾರ್ಟಿ ವಿಧಾನ ಸಭಾ ಚುನಾವಣೆಗಾಗಿ 100 ಜನರ ಪಟ್ಟಿಯನ್ನು ರಿಲೀಸ್ ಮಾಡಿದ್ದು ವಿವಿಧ ದ.ಕ., ಉಡುಪಿ ಸೇರಿದಂತೆ ರಾಜ್ಯದ ಒಟ್ಟು 100 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯ ಹೆಸರಿರುವ ಪಟ್ಟಿಯ ಪಿಡಿಎಫ್ ಫೈಲೊಂದು ಹರಿದಾಡ್ತಿದೆ.
ಈ ಪಟ್ಟಿಯಲ್ಲಿರುವಂತೆ ಪುತ್ತೂರಿಗೆ ಸಂಜೀವ ಮಠಂದೂರು, ಸುಳ್ಯ ಕ್ಷೇತ್ರಕ್ಕೆ ಅಂಗಾರ, ಬೆಳ್ತಂಗಡಿಗೆ ಹರೀಶ್ ಪೂಂಜಾ ಮತ್ತು ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ವೇದವ್ಯಾಸ ಕಾಮತ್ ಹೆಸರುಗಳನ್ನೇ ಫೈನಲ್ ಮಾಡಲಾಗಿದೆ. ಆದ್ರೆ ಸದ್ಯ ಡಾ. ಭರತ್ ಶೆಟ್ಟಿ ಪ್ರತಿನಿಧಿಸ್ತಿರೋ ಮಂಗಳೂರು ಉತ್ತರ (ಸುರತ್ಕಲ್) ಕ್ಷೇತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ನೀಡಲಾಗಿದೆ!
ಈ ಪಟ್ಟಿಯಲ್ಲಿರೋ ಇನ್ನೊಂದು ಮೇಜರ್ ಶಾಕ್ ಏನಪ್ಪಾ ಅಂದ್ರೆ ತೀವ್ರ ಕುತೂಹಲ ಕೆರಳಿಸಿದ್ದ ಕಾರ್ಕಳ ಕ್ಷೇತ್ರಕ್ಕೆ ಸಚಿವ ಸುನಿಲ್ ಕುಮಾರ್ ಬದಲಿಗೆ ಪ್ರಮೋದ್ ಮುತಾಲಿಕ್ ಅವರಿಗೆ ಪಕ್ಷ ಟಿಕೆಟ್ ನೀಡಿದ್ದು ಸುನಿಲ್ ಅವರನ್ನು ಉಡುಪಿ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಇನ್ನುಳಿದಂತೆ ಯಾರ್ಯಾರಿಗೆ ಪಕ್ಷ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡಿದೆ ಎಂಬುದನ್ನು ನೀವೇ ಚೆಕ್ ಮಾಡ್ಕೊಳ್ಳಿ..!
ವಿಶೇಷವಂದ್ರೆ ಬಿಜೆಪಿಯ ಕೇಂದ್ರ ಕಚೇರಿಯ ಹೆಸ್ರಿನಲ್ಲಿ ರಿಲೀಸ್ ಆಗಿರೋ ಈ ಪಟ್ಟಿಯಲ್ಲಿ ಪ್ರತೀ ಪೇಜಿನಲ್ಲಿ ಪಕ್ಷದ ಸೀಲ್ ಮತ್ತು ನ್ಯಾಷನಲ್ ಜನರಲ್ ಸೆಕ್ರೆಟರಿ ಅರುಣ್ ಸಿಂಗ್ ಅವರ ಸಹಿಯೂ ಇದೆ. ಆದರೆ ಈ ಪಟ್ಟಿ ಫೇಕ್ ಎನ್ನಲಾಗುತ್ತಿದ್ದು . ಏನೇ ಆದ್ರೂ ಬಿಜೆಪಿಯ ಒರಿಜಿನಲ್ ಪಟ್ಟಿ ರಿಲೀಸ್ ಆದ್ಮೇಲೆ ಈ ‘ಫೇಕ್’ ಪಟ್ಟಿಯೊಂದಿಗೆ ಕಂಪೇರ್ ಮಾಡ್ಕೊಳ್ಳಿ...!
Posted by Vidyamaana on 2024-09-05 02:50:40 |
ಗುರು ಬ್ರಹ್ಮ:ಗುರು ವಿಷ್ಣು: ಗುರು ದೇವೋ ಮಹೇಶ್ವರ: ಗುರು ಸಾಕ್ಷಾತ್ ಪರಬ್ರಹ್ಮ :ತಸ್ಮೈ ಶ್ರೀ ಗುರವೇ ನಮಃ
ಅಕ್ಕರೆಯ ತೈಲವನ್ನೆರೆದು ಜ್ಞಾನ ದೀವಿಗೆಯನ್ನು ಬೆಳಗಿ, ನನ್ನ ಜೀವನಕ್ಕೆ ಬೆಳಕು ತೋರಿ, ಸ್ವಾವಲಂಬಿ ಬದುಕನ್ನು ಕಟ್ಟಿಕೊಟ್ಟು, ಮತ್ತೆ ಅಕ್ಕರೆಯ ತೈಲವೆರೆಸಿ ,ಕಿರು ಹಣತೆಗಳ ಬೆಳಗಲು ದಾರಿ ತೋರಿದ ಪರಬ್ರಹ್ಮ ಸ್ವರೂಪಿ ನನ್ನೆಲ್ಲ ಗುರುಗಳಿಗೆ ಸಾಷ್ಟಾಂಗ ನಮಿಸುತ್ತ, ಶಿಕ್ಷಕ ವೃತ್ತಿ ಬದುಕಿನ ಧನ್ಯತೆಯ ಅಭಿಮಾನವನ್ನು ಹಂಚಿಕೊಳ್ಳಬಯಸುತ್ತಿರುವೆನು.
ವೃತ್ತಿಗಳಲ್ಲಿ ಅತ್ಯಂತ ಗೌರವಾನ್ವಿತ ಮತ್ತು ತೃಪ್ತಿ ನೀಡಬಲ್ಲ ಹೆಮ್ಮೆಯ ವೃತ್ತಿ ಎಂದರೆ, ಅದು ಶಿಕ್ಷಕ ವೃತ್ತಿ ಎಂದರೆ ತಪ್ಪಾಗಲಾರದು. ಏಕೆಂದರೆ ಉಳಿದೆಲ್ಲ ವೃತ್ತಿಗಳಲ್ಲಿರುವವರು ಕೇವಲ ಸಮಾಜದೊಡನೆ ಅಥವಾ ಯಾಂತ್ರಿಕ ಜಗತ್ತಿನಲ್ಲಿ ವ್ಯವಹರಿಸುತ್ತಿದ್ದರೆ, ಶಿಕ್ಷಕರು ಜೀವಂತ ದೇವರುಗಳೆಂಬ ಹೂ ಮನಸಿನ ಮಕ್ಕಳ ಜೊತೆ ಸದಾ ಸಂತೋಷದಿಂದಿರುವವರು. ಅದರಲ್ಲೂ ಪ್ರಾಥಮಿಕ ಶಾಲಾ ಶಿಕ್ಷಕರು ಎಂದರೆ ತುಂಬಾ ಭಾಗ್ಯವಂತರು ಎಂದೇ ಹೇಳಬಹುದು.
ಸುಮಾರು ಮೂರು ವರ್ಷದ ನಂತರ ಅಮ್ಮನ ಬೆಚ್ಚನೆಯ ಮಡಿಲಿನಿಂದ ಶಾಲೆ ಎನ್ನುವ ಹೊಸ ಪರಿಸರವನ್ನು ಕುತೂಹಲದಿಂದ, ಭಯದಿಂದ ಪ್ರವೇಶಿಸುವ ಮಗುವಿಗೆ ಅಲ್ಲಿನ ಶಿಕ್ಷಕಿಯೇ ಸರ್ವಸ್ವವಾಗಿ ಕಾಣುತ್ತಾಳೆ. ಅದು ತನ್ನ ತಾಯಿ ಸ್ವರೂಪವನ್ನು ಶಿಕ್ಷಕಿಯಲ್ಲಿ ಕಾಣುತ್ತಾ ತಾಯಿಯ ಮಮತೆಯನ್ನು ನಿರೀಕ್ಷಿಸುತ್ತಿರುತ್ತದೆ. ಆ ಸಮಯದಲ್ಲಿ ಶಿಕ್ಷಕರಾದ ನಾವು ಕೊಡುವ ಧೈರ್ಯ ಭರವಸೆ ಪ್ರೀತಿ ಕಾಳಜಿಯು ಮಗು ನಮ್ಮನ್ನು ಸದಾ ಅನುಕರಿಸುವಂತೆ ಮಾಡುತ್ತದೆ. ಒಮ್ಮೆ ಮಕ್ಕಳು ಶಿಕ್ಷಕರಡೆಗೆ ಆಕರ್ಷಿತರಾದರೆ ಮುಂದೆ ಅವರು ಶಿಕ್ಷಕರು ಕಲಿಸುವ ಯಾವುದೇ ವಿಷಯವನ್ನು ತುಂಬಾ ಇಷ್ಟಪಟ್ಟು ಮತ್ತು ಶ್ರದ್ಧೆಯಿಂದ ಕಲಿಯುತ್ತಾರೆ .