ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಸುದ್ದಿಗಳು News

Posted by vidyamaana on 2024-07-25 06:35:41 |

Share: | | | | |


ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್‌ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.

ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.

ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್‌ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್‌ಐ ಹೇಳಿದ್ದಾರೆ.

 Share: | | | | |


ಬಂಟ್ವಾಳ; ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ 3ನೇ ಮಹಡಿಯಿಂದ ಬಿದ್ದು ಯುವಕ ಸಾವು

Posted by Vidyamaana on 2023-06-30 16:40:35 |

Share: | | | | |


ಬಂಟ್ವಾಳ; ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ 3ನೇ ಮಹಡಿಯಿಂದ ಬಿದ್ದು ಯುವಕ ಸಾವು

ಬಂಟ್ವಾಳ; ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ 3ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಬಂಟ್ವಾಳದ ಕೈಕಂಬದಲ್ಲಿ ನಡೆದಿದೆ.

ಆಚಾರಿಪಲ್ಕೆ ನಿವಾಸಿ ಯತೀಶ್ (32) ಮೃತ ಯುವಕ. ಯತೀಶ್ ಕೈಕಂಬದ ಹೋಲಿ ಫ್ಯಾಮಿಲಿ ವಸತಿ ನಿಲಯದ ಮನೆಯೊಂದರ ಡಿಶ್ ರಿಪೇರಿ ಮಾಡುವ ವೇಳೆ ಆಯತಪ್ಪಿ 3ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ.

ಈ ವೇಳೆ ವಸತಿ ನಿಲಯದ ಕೆಳ ಭಾಗದಲ್ಲಿರುವ ಬಾವಿಯ ಮೇಲೆ ಹಾಕಿದ್ದ ಕಬ್ಬಿಣದ ರಕ್ಷಣಾ ಬೇಲಿಯ ಮೇಲೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡ ಯತೀಶ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಇಂದಿನ ಪ್ರಚಾರ ಸಭೆಗಳು

Posted by Vidyamaana on 2023-04-26 03:18:31 |

Share: | | | | |


ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಇಂದಿನ ಪ್ರಚಾರ ಸಭೆಗಳು

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಚುನಾವಣಾ ಪ್ರಚಾರ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಗ್ರಾಮಾಂತರ ಭಾಗಗಳಲ್ಲಿ ಪ್ರಚಾರ ಸಭೆಗಳನ್ನು ಆಯೋಜಿಸಲಾಗುತ್ತಿದೆ.

ಅಶೋಕ್ ಕುಮಾರ್ ರೈ ಅವರ ಇಂದಿನ ಪ್ರಚಾರ ಸಭೆಗಳು ಹೀಗಿವೆ -

ಬೆಳಿಗ್ಗೆ 9.30ಕ್ಕೆ ಅರಿಯಡ್ಕ, 10.30ಕ್ಕೆ ಮಾಡ್ನೂರು, 11.30ಕ್ಕೆ ಕೊಳ್ತಿಗೆ, ಮಧ್ಯಾಹ್ನ 2.30ಕ್ಕೆ ನೆಟ್ಟಣಿಗೆ ಮುಡ್ನೂರು, 3.30ಕ್ಕೆ ಪಡುವನ್ನೂರು, 4.30ಕ್ಕೆ ಬಡಗನ್ನೂರು, ಸಂಜೆ 6ಕ್ಕೆ ಬೆಟ್ಟಂಪಾಡಿ, 7 ಗಂಟೆಗೆ ನಗರದಲ್ಲಿ ಪ್ರಚಾರ ಸಭೆಗಳು ನಡೆಯಲಿವೆ ಎಂದು ತಿಳಿದುಬಂದಿದೆ.

ಗೃಹಜ್ಯೋತಿಗೆ ಇದುವರೆಗೂ ಅರ್ಜಿ ಸಲ್ಲಿಸದವರಿಗೆ ಉಚಿತ ವಿದ್ಯುತ್ ಇಲ್ವಾ

Posted by Vidyamaana on 2023-07-13 17:07:27 |

Share: | | | | |


ಗೃಹಜ್ಯೋತಿಗೆ ಇದುವರೆಗೂ ಅರ್ಜಿ ಸಲ್ಲಿಸದವರಿಗೆ ಉಚಿತ ವಿದ್ಯುತ್ ಇಲ್ವಾ

ಚಿಕ್ಕಮಗಳೂರು : ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಇಂದಿನಿಂದ (ಜುಲೈ 1) ಜಾರಿಗೆ ಬರುತ್ತಿದೆ. ಆದರೆ, ಅರ್ಜಿ ಹಾಕದವರಿಗೆ ಉಚಿತ ವಿದ್ಯುತ್ ಇಲ್ಲ, ಅರ್ಜಿ ಹಾಕದೇ ಉಚಿತ ಹೇಗೆ ಕೊಡೋದು. ಜುಲೈ ಕೊನೆ ವಾರದೊಳಗೆ ಅರ್ಜಿ ಸಲ್ಲಿಸಿದವರಿಗೆ ಉಚಿತ ವಿದ್ಯುತ್ ಯೋಜನೆಯ ಲಾಭ ಸಿಗಲಿದೆ ಎಂದು ಇಂಧನ


ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಗೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ಈಗಾಗಲೇ 86.5 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ. ಜುಲೈ 1ರಿಂದ ಎಲ್ಲರಿಗೂ ಉಚಿತ ವಿದ್ಯುತ್ ಸಿಗಲಿದೆ. ಜೂನ್ ತಿಂಗಳಿನ ವಿದ್ಯುತ್ ಬಿಲ್ ಜುಲೈ ತಿಂಗಳಲ್ಲಿ ಬರಲಿದೆ. ಗೃಹಜ್ಯೋತಿ ಯೋಜನೆಗೆ ಅರ್ಹತೆ ಹೊಂದಿರುವವರಿಗೆ ಆಗಸ್ಟ್ ಒಂದಕ್ಕೆ ಈ ಯೋಜನೆಯ ಲಾಭ ಸಿಗಲಿದೆ ಎಂದು ಹೇಳಿದರು.ಗೃಹ ಜ್ಯೋತಿ ಯೋಜನೆಗೆ ಅರ್ಜಿ ಹಾಕದವರು ಬೇಗ ಹಾಕಬೇಕು. ಕೆಇಬಿ ಆಫೀಸ್‌ಗೆ ಹೋಗಿ ಅರ್ಜಿಯನ್ನು ಕೊಡಬಹುದು. ಅರ್ಜಿ ಹಾಕಲು ಈಗ ಅಷ್ಟು ಸಮಸ್ಯೆ ಇಲ್ಲ, ಒತ್ತಡ ಕಡಿಮೆ ಆಗಿದೆ. ಅರ್ಜಿ ಹಾಕಲು ಯಾವುದೇ ಡೆಡ್‌ಲೈನ್ ಅನ್ನು ನಾವು ನೀಡಿಲ್ಲ. ಆದರೆ, ಅರ್ಜಿ ಹಾಕದಿದ್ದರೆ ಉಚಿತ ವಿದ್ಯುತ್ ಸಿಗುವುದಿಲ್ಲ. ಅರ್ಜಿ ಹಾಕಲೇಬೇಕು. ಅರ್ಜಿ ಸಲ್ಲಿಸುವುದು ತಡವಾದರೆ, ಸೌಲಭ್ಯ ಸಿಗುವುದು ಕೂಡ ವಿಳಂಬ ಆಗುತ್ತದೆ ಎಂದರು.ಆಗಸ್ಟ್ 1 ರಿಂದ ಜುಲೈ ತಿಂಗಳಿನಿಂದ ಬಿಲ್ಲಿಂಗ್ ಮಾಡುತ್ತೇವೆ. ಅಷ್ಟರೊಳಗೆ ಅರ್ಜಿಯನ್ನು ಸಲ್ಲಿಸಿದ್ದವರಿಗೆ ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಸಿಗುತ್ತದೆ. ಅರ್ಜಿ ಹಾಕದಿದ್ದರೆ ಮುಂದಿನ ತಿಂಗಳ ಬಿಲ್‌ನಲ್ಲಿ ವಿನಾಯಿತಿ ಸಿಗಲ್ಲ. ಎಲ್ಲರೂ ಆದಷ್ಟು ಬೇಗ ಅರ್ಜಿ ಹಾಕುವುದು ಒಳ್ಳೆಯದು. ಇನ್ನು ಟೈಂ ಇದೆ, ಬೇಗ ಅರ್ಜಿ ಹಾಕಲಿ ಎಂದು ಕೆಜೆ ಜಾರ್ಜ್ ಜನರಿಗೆ ಕರೆ ನೀಡಿದರು.ಶನಿವಾರದಿಂದ ಯೋಜನೆ ಜಾರಿ!


ಕಾಂಗ್ರೆಸ್ ಸರ್ಕಾರ ತಾನೂ ಚುನಾವಣೆ ವೇಳೆ ಘೋಷಿಸಿದಂತೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡುವ ಯೋಜನೆ ಗೃಹಜ್ಯೋತಿ ಜುಲೈ 1ರಿಂದ ಜಾರಿಯಾಗಿದೆ. ಜೂನ್ 18ರಿಂದಲೇ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಈಗಾಗಲೇ 86 ಲಕ್ಷಕ್ಕೂ ಹೆಚ್ಚು ಜನರು ಅರ್ಜಿ ಸಲ್ಲಿಸಿದ್ದಾರೆ. ಕಳೆದ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣದ ಸರಾಸರಿ ಜೊತೆಗೆ ಹೆಚ್ಚುವರಿ ಶೇ.10ರಷ್ಟು ವಿದ್ಯುತ್ ಅನ್ನು ಉಚಿತವಾಗಿ ಸರ್ಕಾರ ನೀಡಲಿದೆ. 200 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಬಳಸಿದರೆ ಉಚಿತ ವಿದ್ಯುತ್ ಲಾಭ ಜನರಿಗೆ ಸಿಗುವುದಿಲ್ಲ.ಶನಿವಾರದಿಂದ ಯೋಜನೆ ಜಾರಿ!


ಕಾಂಗ್ರೆಸ್ ಸರ್ಕಾರ ತಾನೂ ಚುನಾವಣೆ ವೇಳೆ ಘೋಷಿಸಿದಂತೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡುವ ಯೋಜನೆ ಗೃಹಜ್ಯೋತಿ ಜುಲೈ 1ರಿಂದ ಜಾರಿಯಾಗಿದೆ. ಜೂನ್ 18ರಿಂದಲೇ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಈಗಾಗಲೇ 86 ಲಕ್ಷಕ್ಕೂ ಹೆಚ್ಚು ಜನರು ಅರ್ಜಿ ಸಲ್ಲಿಸಿದ್ದಾರೆ. ಕಳೆದ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣದ ಸರಾಸರಿ ಜೊತೆಗೆ ಹೆಚ್ಚುವರಿ ಶೇ.10ರಷ್ಟು ವಿದ್ಯುತ್ ಅನ್ನು ಉಚಿತವಾಗಿ ಸರ್ಕಾರ ನೀಡಲಿದೆ. 200 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಬಳಸಿದರೆ ಉಚಿತ ವಿದ್ಯುತ್ ಲಾಭ ಜನರಿಗೆ ಸಿಗುವುದಿಲ್ಲ.ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಸೇವಾಸಿಂಧು ಪೋರ್ಟಲ್ ಅನ್ನು ರೂಪಿಸಲಾಗಿದೆ. ಮೊದಲ ವಾರ ಸರ್ವರ್ ಬ್ಯುಸಿಯಿಂದ ಜನರು ಅರ್ಜಿ ಸಲ್ಲಿಸಲು ಪರದಾಡಿದ್ದರು. ಈಗ ಸರ್ವರ್ ಸಮಸ್ಯೆ ಅಷ್ಟೊಂದು ಕಾಣುತ್ತಿಲ್ಲ. ಈಗ ಅರ್ಜಿಯನ್ನು ಜನರ ತಮ್ಮ ಮೊಬೈಲ್ ಮತ್ತು ಕಂಪ್ಯೂಟರ್‌ಗಳಲ್ಲಿ ಸಲ್ಲಿಸಬಹುದಾಗಿದೆ

ವಿರೋಧ ಪಕ್ಷಗಳ ಸಭೆಯಲ್ಲಿ ಮೈತ್ರಿಗೆ INDIA ಎಂದು ಹೆಸರಿಟ್ಟ ನಾಯಕರು

Posted by Vidyamaana on 2023-07-18 10:00:32 |

Share: | | | | |


ವಿರೋಧ ಪಕ್ಷಗಳ ಸಭೆಯಲ್ಲಿ ಮೈತ್ರಿಗೆ INDIA ಎಂದು ಹೆಸರಿಟ್ಟ ನಾಯಕರು

ಬೆಂಗಳೂರು : ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ರಾಜಕೀಯ ಪಕ್ಷಗಳು ಇಂದು ದೆಹಲಿ ಮತ್ತು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸುತ್ತಿವೆಮಹಾಮೈತ್ರಿಕೂಟದ ನಾಯಕರು ತನ್ನ ಎರಡನೇ ಏಕತಾ ಸಭೆಯನ್ನು ಬೆಂಗಳೂರಿನಲ್ಲಿ ನಡೆಸುತ್ತಿದ್ದರೆ, ಬಿಜೆಪಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (INDA) ಪ್ರತಿಪಕ್ಷಗಳ ವಿರುದ್ಧ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸಭೆ ನಡೆಸಲಿದೆ.ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕರು ಬೆಂಗಳೂರಿನಲ್ಲಿ ಮೈತ್ರಿಗೆ ಇಂಡಿಯಾ ಎಂದು ನಾಮಕರಣ ಮಾಡಿದ್ದಾರೆ.


I – Indian

N – National

D – Democractic

I – Inclusive

A - Alliance ಎಂದು ನಾಮಕರಣ ಮಾಡಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಕೇಂದ್ರದ ವಿರೋಧ ಪಕ್ಷಗಳ ಸಭೆಯಲ್ಲಿ ಇಂದು ವಿವಿಧ ಪಕ್ಷದ ನಾಯಕರೊಂದಿಗೆ 2024ರ ಲೋಕಸಭಾ ಚುನಾವಣೆಯಲ್ಲಿ ಸಾಮೂಹಿಕ ಹೋರಾಟ ನಡೆಸಲು ಕೈಗೊಳ್ಳಬೇಕಾದ ಪ್ರಮುಖ ಕ್ರಮಗಳು ಹಾಗೂ ಕಾರ್ಯತಂತ್ರಗಳ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು.

ಬೆಟ್ಟಂಪಾಡಿ: ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಶಂಕುಸ್ಥಾಪನೆ

Posted by Vidyamaana on 2022-12-16 13:44:26 |

Share: | | | | |


ಬೆಟ್ಟಂಪಾಡಿ: ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಶಂಕುಸ್ಥಾಪನೆ


ಪುತ್ತೂರು: ಲೋಕೋಪಯೋಗಿ ವಿಶೇಷ ಅನುದಾನದಲ್ಲಿ ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಚೆಲ್ಯಡ್ಕ ಪುಳಿತ್ತಡಿ ರಸ್ತೆ ಕಾಮಗಾರಿಗೆ 10 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಶಾಸಕ ಸಂಜೀವ ಮಠಂದೂರು ಅವರು ಡಿ. 16ರಂದು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ  ಅಧ್ಯಕ್ಷ ಜಗನಾಥ್ ರೈ ಕೋರ್ಮಂಡ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್, ಬೆಂದ್ರ್ ತೀರ್ಥ ಶಿವಾಜಿ ಫ್ರೆಂಡ್ ಕಾರ್ಯಕರ್ತರು PLD ಬ್ಯಾಂಕ್ ಸದಸ್ಯ ಪ್ರವೀಣ್ ರೈ , ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.

ಇಂಟಕ್ ಅಧ್ಯಕ್ಷರಾಗಿ ನ್ಯೂಸ್ ಅಕ್ಕರೆ ಯ ಮುಖ್ಯಸ್ಥ ಜಯಪ್ರಕಾಶ್ ಬದಿನಾರು ಪುನರಾಯ್ಕೆ

Posted by Vidyamaana on 2024-02-13 07:50:16 |

Share: | | | | |


ಇಂಟಕ್ ಅಧ್ಯಕ್ಷರಾಗಿ ನ್ಯೂಸ್ ಅಕ್ಕರೆ ಯ ಮುಖ್ಯಸ್ಥ ಜಯಪ್ರಕಾಶ್ ಬದಿನಾರು ಪುನರಾಯ್ಕೆ

ಪುತ್ತೂರು: ಕಾಂಗ್ರೆಸ್ ಪಕ್ಷದ ಕಾರ್ಮಿಕ ಘಟಕ `ಇಂಟಕ್‌ನ ಪುತ್ತೂರು ತಾಲೂಕು ಅಧ್ಯಕ್ಷರಾಗಿ ಜಯಪ್ರಕಾಶ್‌ ಬದಿನಾರು ಪುನರಾಯ್ಕೆಯಾಗಿದ್ದಾರೆ.ಕೋಡಿಂಬಾಡಿ ಗ್ರಾಮದ ಬದಿನಾರು ನಿವಾಸಿಯಾಗಿರುವ ಜಯಪ್ರಕಾಶ್‌ ಅವರು ಪ್ರಸ್ತುತ ಕೋಡಿಂಬಾಡಿ ಗ್ರಾಮ ಪಂಚಾಯತ್‌ ಉಪಾಧ್ಯಕ್ಷರಾಗಿದ್ದು, ಸೇಡಿಯಾಪು ಫ್ರೆಂಡ್ಸ್ ಕ್ಲಬ್‌ ಗೌರವಾಧ್ಯಕ್ಷರಾಗಿ, ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರಾಗಿ, ಕೋಡಿಂಬಾಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷರಾಗಿ, ಜಯಕರ್ನಾಟಕ ಕೋಡಿಂಬಾಡಿ ಘಟಕದ ಗೌರವಾಧ್ಯಕ್ಷರಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ. ಕಾಸರಗೋಡು ಚಿಪ್ಪಾರು ಕೋಟಿ ಚೆನ್ನಯ ಬ್ರಹ್ಮಬೈದರ್ಕಳ ಗರಡಿಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ, ಯುವವಾಹಿನಿ ಪುತ್ತೂರು ಘಟಕದ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಜಯಪ್ರಕಾಶ್ ಬದಿನಾರು ಅವರು `ನ್ಯೂಸ್ ಅಕ್ಕರೆಯ ಮುಖ್ಯಸ್ಥರಾಗಿದ್ದಾರೆ. ಪುತ್ತೂರು ತಾಲೂಕು ಇಂಟಕ್ ಅಧ್ಯಕ್ಷರಾಗಿರುವ ಜಯಪ್ರಕಾಶ್‌ರವರನ್ನು ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್ ಮಲ್ಲಿ ಅವರು ಪುನರಾಯ್ಕೆಗೊಳಿಸಿ ಆದೇಶಿಸಿದ್ದಾರೆ.

Recent News


Leave a Comment: