ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಗುಂಡು ಹಾರಿಸಿ ನಟೋರಿಯಸ್ ರೌಡಿ ರೋಹಿದಾಸ್‌ ಕೆ. ಆಲಿಯಾಸ್‌ ಆಕಾಶಭವನ ಶರಣ್‌ ಬಂಧನ

Posted by Vidyamaana on 2024-01-10 04:29:14 |

Share: | | | | |


ಗುಂಡು ಹಾರಿಸಿ ನಟೋರಿಯಸ್ ರೌಡಿ ರೋಹಿದಾಸ್‌ ಕೆ. ಆಲಿಯಾಸ್‌ ಆಕಾಶಭವನ ಶರಣ್‌ ಬಂಧನ

ಮಂಗಳೂರು, ಜ.10: ನಟೋರಿಯಸ್ ರೌಡಿ ಆಕಾಶಭವನ್ ಶರಣ್ ಬೆನ್ನು ಬಿದ್ದಿದ್ದ ಮಂಗಳೂರಿನ ಸಿಸಿಬಿ ಪೊಲೀಸರು ಆತನನ್ನು ಕಡೆಗೂ ಬಲೆಗೆ ಹಾಕಿದ್ದು ರೋಚಕ ಮಿಸ್ಟರಿ. ಮೂರು ದಿನಗಳ ಹಿಂದೆ ಕಾವೂರಿನಲ್ಲಿ ಬಂಧಿಸಲು ಹೋಗಿದ್ದಾಗ ಪೊಲೀಸರ ಮೇಲೆಯೇ ಕಾರು ಹಾಯಿಸಿದ್ದ ರೌಡಿಯನ್ನು ಬಂಧಿಸಲೇಬೇಕೆಂದು ಪೊಲೀಸರು ಬೆನ್ನು ಬಿದ್ದಿದ್ದರು. ಕೊನೆಗೆ, ಮಲ್ಪೆಯಲ್ಲಿ ಅಡಗಿದ್ದಾನೆಂಬ ಮಾಹಿತಿ ಪಡೆದು ಅಲ್ಲಿಂದ ಚೇಸಿಂಗ್ ಮಾಡಿಕೊಂಡು ಬಂದು ಕಡೆಗೂ ಮಂಗಳೂರಿನಲ್ಲಿ ಅಡ್ಡಹಾಕಿ ಬಂಧಿಸಿದ್ದಾರೆ.


ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಒಟ್ಟು ಪ್ರಕರಣದ ಪಿನ್ ಟು ಪಿನ್ ಮಾಹಿತಿಯನ್ನು ಮಾಧ್ಯಮದ ಜೊತೆ ಹಂಚಿಕೊಂಡಿದ್ದಾರೆ. ಎರಡು ಜಿಲ್ಲೆಯಲ್ಲಿ ಆತನ ಮೇಲೆ ಸುಮಾರು 25ಕ್ಕೂ ಹೆಚ್ಚು ಕೇಸುಗಳಿವೆ. ಜೈಲಿನಲ್ಲಿ ಕೊಲೆಯತ್ನ, ಸುಳ್ಯದ ಕೊಲೆ ಪ್ರಕರಣ ಸೇರಿದಂತೆ ಕೊಲೆ, ಕೊಲೆಯತ್ನ ಸೇರಿ 20ಕ್ಕೂ ಹೆಚ್ಚು ಪ್ರಕರಣ ಮಂಗಳೂರಿನಲ್ಲೇ ಇವೆ. ಹಲವಾರು ಪ್ರಕರಣಗಳಲ್ಲಿ ಅರೆಸ್ಟ್ ವಾರೆಂಟ್ ಇತ್ತು. ಹೀಗಾಗಿ 15 ದಿನಗಳಿಂದ ಶರಣ್ ಬಂಧನ ಮಾಡುವುದಕ್ಕಾಗಿ ನಮ್ಮ ಪೊಲೀಸರು ಹಿಂದೆ ಬಿದ್ದಿದ್ದರು.ಮೂರು ದಿನಗಳ ಹಿಂದೆ ಕಾವೂರಿನಲ್ಲಿ ಅಪಾರ್ಟ್ಮೆಂಟ್ ನಲ್ಲಿದ್ದ ಮಾಹಿತಿ ಅರಿತು ಬಂಧನಕ್ಕೆ ಬಲೆ ಬೀಸಿದ್ದರು. ಆ ಸಂದರ್ಭದಲ್ಲಿ ಪೊಲೀಸರ ಮೇಲೆ ಕಾರು ಹಾಯಿಸಿ ಪರಾರಿಯಾಗಿದ್ದ ಬಗ್ಗೆ ಕಾವೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ಈ ನಡುವೆ, ಆತನಿಗೆ ಯಾರೆಲ್ಲ ಸಪೋರ್ಟ್ ಮಾಡಿದ್ದಾರೆಂದು ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿತ್ತು. ಶರತ್ ಭಂಡಾರಿ, ಮಯೂರಿ, ನೀಲಾ ಮತ್ತಿತರರನ್ನು ವಶಕ್ಕೆ ಪಡೆದು ಮಾಹಿತಿ ಪಡೆಯಲಾಗಿತ್ತು. ಮಲ್ಪೆಯಲ್ಲಿ ಮನೆಯೊಂದರಲ್ಲಿ ಅಡಗಿದ್ದಾನೆಂದು ಮಾಹಿತಿ ತಿಳಿದು ಇಂದು ಬೆಳಗ್ಗೆ ಸಿಸಿಬಿ ಎಸ್ಐ ಸುದೀಪ್ ಮತ್ತು ಶರಣಪ್ಪ ಅವರ ತಂಡ ಉಡುಪಿಗೆ ತೆರಳಿತ್ತು.ಪೊಲೀಸರು ಮಲ್ಪೆ ತಲುಪಿದಾಗ ಶರಣ್ ತಪ್ಪಿಸಿಕೊಂಡಿದ್ದ. ಆಶ್ರಯ ಕೊಟ್ಟಿದ್ದ ಮಂಜೇಶ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಬಿಳಿ ಐ20 ಕಾರಿನಲ್ಲಿ ಪರಾರಿಯಾಗಿರುವುದು ತಿಳಿದುಬಂದಿತ್ತು. ಟೋಲ್ ಗೇಟ್ ನಲ್ಲಿ ಚೆಕ್ ಮಾಡಿದಾಗ ಮಂಗಳೂರಿಗೆ ಬಂದಿರುವುದು ತಿಳಿದು ಪೊಲೀಸರು ಬೆನ್ನತ್ತಿ ಬಂದಿದ್ದರು. ಪಂಪ್ವೆಲ್ ನಲ್ಲಿ ಐ20 ಕಾರಿನಲ್ಲಿ ಒಬ್ಬಂಟಿಯಾಗಿ ಕಂಕನಾಡಿ ಕಡೆಗೆ ಎಸ್ಕೇಪ್ ಆಗಿರುವುದು ತಿಳಿದು ಚೇಸ್ ಮಾಡಲಾಗಿತ್ತು. ಜೆಪ್ಪು ಕುದ್ಪಾಡಿಯಲ್ಲಿ ನಮ್ಮ ಪೊಲೀಸ್ ತಂಡ ಖಾಸಗಿ ಕಾರಿನಲ್ಲಿ ಆತನನ್ನು ಅಡ್ಡಹಾಕಿತ್ತು. ಕುದ್ಪಾಡಿಯಲ್ಲಿ ಡೆಡ್ ಎಂಡ್ ಆಗಿದ್ದರಿಂದ ಯು ಟರ್ನ್ ಪಡೆಯುತ್ತಲೇ ಪೊಲೀಸರು ಸುತ್ತುವರಿದಿದ್ದಾರೆ. ಅಷ್ಟರಲ್ಲಿ ತನ್ನ ಕೈಲಿದ್ದ ಚೂರಿಯನ್ನು ತೋರಿಸಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ನಮ್ಮ ತಂಡದ ಪ್ರಕಾಶ್ ಎಂಬ ಪೇದೆಯ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ್ದಾನೆ. ಈ ಸಂದರ್ಭದಲ್ಲಿ ಸಿಸಿಬಿ ಎಸ್ಐ ಸುದೀಪ್ ಅವರು ಕಾಲಿಗೆ ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. ಪ್ರಕಾಶ್ ಅವರನ್ನೂ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಶರಣ್ ಕಾಲಿಗೆ ಗಾಯಗೊಂಡಿದ್ದು ಅಪಾಯ ಏನೂ ಆಗಿಲ್ಲ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.ಆಕಾಶಭವನ್ ಶರಣ್ ಮಂಗಳೂರಿನ ನಟೋರಿಯಸ್ ರೌಡಿಯಾಗಿದ್ದು, 25ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದಾನೆ. ಹಲವು ಕೇಸುಗಳಲ್ಲಿ ಅರೆಸ್ಟ್ ವಾರೆಂಟ್ ಇದ್ದರೂ ಒಂಟಿ ತೋಳದ ರೀತಿ ತಲೆಮರೆಸಿಕೊಂಡು ಓಡಾಡುತ್ತಿದ್ದ. ಸುಳ್ಯದ ಕೆವಿಜಿ ಆಡಳಿತಾಧಿಕಾರಿಯ ಕೊಲೆ ಪ್ರಕರಣದಲ್ಲಿ ಈತನ ಮೇಲಿನ ಆರೋಪ ಸಾಬೀತಾಗಿದ್ದು, ದೋಷಿಯೆಂದು ಕೋರ್ಟ್ ತೀರ್ಪು ನೀಡಿದೆ. ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದರಿಂದ ಶಿಕ್ಷೆಯಿಂದ ಪಾರಾಗಿದ್ದಾನೆ. ಮಂಗಳೂರಿನಲ್ಲಿ ಭೂಗತ ಪಾತಕಿ ವಿಕ್ಕಿ ಶೆಟ್ಟಿಯ ಪರವಾಗಿ ಹಫ್ತಾ ವಸೂಲಿ ಮಾಡುತ್ತಿದ್ದಾನೆ ಎಂದು ಹೇಳಲಾಗಿತ್ತು. ಈ ಬಗ್ಗೆ ಕಮಿಷನರ್ ಬಳಿ ಕೇಳಿದಾಗ, ಅಂಡರ್ ವರ್ಲ್ಡ್ ಸಂಪರ್ಕ ಇರುವ ಮಾಹಿತಿ ಇದೆ. ಆ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದಿದ್ದಾರೆ.

ಪುತ್ತೂರು ನಗರಸಭೆ ಬೈ ಎಲೆಕ್ಷನ್ ಹೊರಬಿತ್ತು ಬಿಜೆಪಿ ಅಭ್ಯರ್ಥಿಗಳ ಹೆಸರು ಎರಡು ವಾರ್ಡ್ ಗಳಿಗೆ ಕಮಲ ಕಲಿಗಳು ಯಾರು?

Posted by Vidyamaana on 2023-12-14 20:49:14 |

Share: | | | | |


ಪುತ್ತೂರು ನಗರಸಭೆ ಬೈ ಎಲೆಕ್ಷನ್  ಹೊರಬಿತ್ತು ಬಿಜೆಪಿ ಅಭ್ಯರ್ಥಿಗಳ ಹೆಸರು ಎರಡು ವಾರ್ಡ್ ಗಳಿಗೆ ಕಮಲ ಕಲಿಗಳು ಯಾರು?

ಪುತ್ತೂರು : ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ ಎಂದು ತಿಳಿದು ಬಂದಿದೆ.ಬಿಜೆಪಿಯಿಂದ ನಗರಸಭೆಯ ವಾರ್ಡ್ 1ರ ಅಭ್ಯರ್ಥಿಯಾಗಿ ಸುನೀತಾ ರನ್ನು., ಅದೇ ರೀತಿ ನಗರಸಭೆಯ ವಾರ್ಡ್ 11ರ ಅಭ್ಯರ್ಥಿಯಾಗಿ ರಮೇಶ್ ರೈ ರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ರವರ ನೇತೃತ್ವದಲ್ಲಿ ರೋಟರಿ ಮನಿಷಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾ ರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.ಡಿ.8 ರಂದು ಜಿಲ್ಲಾಧಿಕಾರಿಗಳು ಅದಿಸೂಚನೆ ಪ್ರಕಟಗೊಳಿಸಲಿದ್ದು, ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ.


ಡಿ.27 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರು‌ಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.


ನಗರ ಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್ ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8 ರಿಂದ 30 ರ ತನಕ ಜಾರಿಯಲ್ಲಿರಲಿದೆ.

ಹಳ್ಳಿಗಳಲ್ಲೂ ಕಾಡಿದ ಹುಲಿ ಉಗುರು

Posted by Vidyamaana on 2023-10-26 20:21:57 |

Share: | | | | |


ಹಳ್ಳಿಗಳಲ್ಲೂ ಕಾಡಿದ ಹುಲಿ ಉಗುರು

ಸುಳ್ಯ :ಅ.25: ಸೆಲೆಬ್ರಿಟಿಗಳನ್ನು ಕಾಡುತ್ತಿರುವ ಹುಲಿ ಉಗುರು ಪ್ರಕರಣ ಈಗ ಹಳ್ಳಿಗಳಲ್ಲೂ ಸದ್ದು ಮಾಡತೊಡಗಿದೆ. ಸುಳ್ಯದ ನಗರ ಪಂಚಾಯತ್ ಉದ್ಯೋಗಿ ಮಹಿಳೆಯ ಕೊರಳಲ್ಲಿ ಹುಲಿ ಉಗುರು ಮಾದರಿ ಇದ್ದ ಫೋಟೊಗಳು ವೈರಲ್ ಆಗಿದ್ದು ಅರಣ್ಯಾಧಿಕಾರಿಗಳು ತನಿಖೆ ನಡೆಸಿದ್ದಾರೆ. 


ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ತೆಗೆಸಿಕೊಂಡಿದ್ದ ಪೋಟೋ ಒಂದರಲ್ಲಿ ಅಲ್ಲಿನ ಉದ್ಯೋಗಿಯ ಕೊರಳಿನಲ್ಲಿ ಹುಲಿ ಉಗುರನ್ನು ಹೋಲುವ ಲಾಕೆಟ್ ಇತ್ತು. ಇದರ ಪೋಟೊ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸುಳ್ಯ ಅರಣ್ಯ ಇಲಾಖೆಯವರು ಸುಳ್ಯ ನಗರ ಪಂಚಾಯತ್ ಸಿಬ್ಬಂದಿ   ಅವರನ್ನು ಸಂಪರ್ಕಿಸಿ ಕಚೇರಿಗೆ ಬರುವಂತೆ ಸೂಚಿಸಿದ್ದರು.  ಆ ಲಾಕೆಟ್‌ ನೊಂದಿಗೆ ಸಿಬ್ಬಂದಿ ವಲಯಾರಣ್ಯಾಧಿಕಾರಿಗಳ ಕಚೇರಿಗೆ ತೆರಳಿ ಅದನ್ನು ಅಲ್ಲಿ ಒಪ್ಪಿಸಿದ್ದಾರೆ. 


ಇದು ಅಸಲಿ ಹುಲಿ ಉಗುರಿನ ಲಾಕೆಟ್ ಅಲ್ಲ. ಮಾರಾಟ ಮಾಡಲು ಬಂದವರಿಂದ ನನ್ನ ತಾಯಿ ಖರೀದಿಸಿ, ಧರಿಸುತ್ತಿದ್ದರು. ನಾನು ಕೂಡಾ ಅನೇಕ ವರ್ಷಗಳಿಂದ ಉಪಯೋಗಿಸುತ್ತಿದ್ದೇನೆ. ಫೋಟೋ ವೈರಲ್ ಆಗಿದ್ದರಿಂದ ಅರಣ್ಯ ಇಲಾಖೆಯವರು ಫೋನ್ ಮಾಡಿದಾಗ ಲಾಕೆಟ್ ಕೊಟ್ಟು ಬಂದಿದ್ದೇನೆ ಎಂದು ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ  ಹುಲಿ ಉಗುರು ಧರಿಸಿರುವ ಪೋಟೋ ವೈರಲ್ ಆಗಿರುವುದರಿಂದ ತನಿಖೆ ನಡೆಸಿದ್ದೇವೆ. ಲಾಕೆಟನ್ನು ಪಡೆದಿದ್ದು, ಲ್ಯಾಬ್ ನಲ್ಲಿ ಪರೀಕ್ಷೆ ನಡೆಸುತ್ತೇವೆ. ಒರಿಜಿನಲ್ ಆಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅರಣ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಕಾರ್ಕಳ : ಜ.21 ರಿಂದ 26 ರ ವರೆಗೆ ಅತ್ತೂರು ಜಾತ್ರೆ

Posted by Vidyamaana on 2024-01-16 04:43:48 |

Share: | | | | |


ಕಾರ್ಕಳ : ಜ.21 ರಿಂದ 26 ರ ವರೆಗೆ ಅತ್ತೂರು ಜಾತ್ರೆ

ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ 2024 ಜನವರಿ 21, 22, 23, 24, 25 ಹಾಗೂ 26 ರಂದು ಜರಗಲಿರುವುದು. ಈ ಬಗ್ಗೆ ಎಲ್ಲಾ ಪೂರ್ವಭಾವಿ ಸಿದ್ದತೆಗಳು ನಡೆದಿದ್ದು, ಬಸಿಲಿಕದ ವತಿಯಿಂದ ವಾರ್ಷಿಕ ಮಹೋತ್ಸವದ ಆಚರಣೆಗೆ ಸನ್ನದ್ದರಾಗಿದ್ದೇವೆ ಎಂದು ಕ್ಷೇತ್ರದ ನಿರ್ದೇಶಕರಾದ ವಂ| ಆಲ್ಬನ್ ಡಿಸೋಜಾ ಹೇಳಿದರು.ಅವರು ಬಸಿಲಿಕಾದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದಿನಾಂಕ 26-01-2024 ರಂದು ಶುಕ್ರವಾರ ಅಸ್ವಸ್ಥರಿಗಾಗಿ ಹಾಗೂ ಮಕ್ಕಳಿಗಾಗಿ ಬಲಿಪೂಜೆ ಹಾಗೂ ವಿಶೇಷ ಪ್ರಾರ್ಥನೆ ಇರುವುದು. ಅಸ್ವಸ್ಥರು ಅದೇ ದಿವಸದ ಬಲಿಪೂಜೆಗೆ ಬಂದು ನಮ್ಮೊಂದಿಗೆ ಸಹಕರಿಸಬೇಕಾಗಿ ವಿನಂತಿಸಿದರು


ವಾರ್ಷಿಕ ಮಹೋತ್ಸವದ ದಿನಗಳಲ್ಲಿ ಕೊಂಕಣಿ ಭಾಷೆಯಲ್ಲಿ 45 ಹಾಗೂ ಕನ್ನಡ ಭಾಷೆಯಲ್ಲಿ 3 ಹೀಗೆ ಒಟ್ಟು 48 ದಿವ್ಯ ಬಲಿ ಪೂಜೆಗಳನ್ನು ಅರ್ಪಿಸಲಾಗುವುದು. ವಾರ್ಷಿಕ ಮಹೋತ್ಸವದ ದಿನಗಳಲ್ಲಿ, ಬೆಳ್ತಂಗಡಿ, ಪುತ್ತೂರು, ಮಂಗಳೂರು, ಶಿವಮೊಗ್ಗ ಹಾಗೂ ನವಿಮೂ ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ಇಲ್ಲಿಗೆ ಆಗಮಿಸಿ ದಿವ್ಯ ಬಲಿಪೂಜೆಯನ್ನು ಅರ್ಪಿಸುವರು. ಭಕ್ತಾಧಿಗಳ ಸುರಕ್ಷತೆಗಾಗಿ ಬಸಿಲಿಕಾದ ಒಳಗಡೆ ಹಾಗೂ ಬಸಿಲಿಕದ ವಠಾರದಲ್ಲಿ 64 ಸಿ.ಸಿ ಕ್ಯಾಮರಗಳನ್ನು ಅಳವಡಿಸಲಾಗಿದೆ. ಬಸಿಲಿಕದ ಬಲ ಬದಿಯಲ್ಲಿ ಅಂದರೆ ಪವಾಡ ಮೂರ್ತಿ ಪ್ರತಿಷ್ಠಾಪಿಸಿದ ಪಕ್ಕದಲ್ಲಿ ಕಥೋಲಿಕ್ ಕ್ರೈಸ್ತರಿಗೆ ಪಾಪನಿವೇದನೆಗೆ ವ್ಯವಸ್ಥೆ ಮಾಡಲಾಗಿದೆ. ದೇವಾಲಯದ ಒಳಗೆ ಪ್ರಾರ್ಥನೆಗಾಗಿ ಮಾತ್ರ ಅವಕಾಶ ನೀಡಲಾಗಿದೆ ಎಂದರು.


ಭಕ್ತರು ಶ್ರೀಕ್ಷೇತ್ರಕ್ಕೆ ಹೇಳಿಕೊಂಡ ಹಣದ ರೂಪದ ಹರಕೆ, ವಸ್ತು ರೂಪದ ಹರಕೆ, ಮೊಂಬತ್ತಿಗಳ ಹರಕೆಗಳನ್ನು ದೇವಾಲಯದ ಎಡಬದಿಯಲ್ಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಭಕ್ತಾಧಿಗಳಿಗೆ ಕುಡಿಯಲು ಶುದ್ದ ಹಾಗೂ ತಂಪು ನೀರಿನ ವ್ಯವಸ್ಥೆಯನ್ನು ಬಸಿಲಿಕದ ವಠಾರದಲ್ಲಿ ಐದು ಸ್ಥಳದಲ್ಲಿ ಮಾಡಲಾಗುವುದು. ಶಾರೀರಿಕ ಅಗತ್ಯತೆ ಪೂರೈಸಲು ಬಸಿಲಿಕದ ವಠಾರದಲ್ಲಿ ಪೋಲಿಸ್ ಸೇವಾ ಕೇಂದ್ರದ ಪಕ್ಕದಲ್ಲಿ ಸುಮಾರು 40 ಆಧುನಿಕ ಸವಲತ್ತುಗಳುಳ್ಳ ಶೌಚಾಲಯಗಳು, ಗುರುನಿವಾಸದ ಎಡ ಬದಿಯಲ್ಲಿ 20 ಶೌಚಾಲಯಗಳು ಇವೆ. ಅಂಗವಿಕಲರಿಗಾಗಿ ಪ್ರತ್ಯೇಕ ಹಾಗೂ ಹಿರಿಯ ನಾಗರಿಕರಿಗಾಗಿ ಕೊಮೊಡ್ ಮಾದರಿಯ ಶೌಚಾಲಯಗಳಿವೆ. ಎಂದರು.ಕಾನೂನು ಮತ್ತು ಶಿಸ್ತು ಪಾಲನೆಗಾಗಿ ಗರಿಷ್ಟ ಸಂಖ್ಯೆಯ ಪೋಲಿಸ್ ಅಧಿಕಾರಿ ಹಾಗೂ ಪೋಲಿಸ್ ಸಿಬಂಧಿ ಕರ್ತವ್ಯ ನಿರ್ವಹಿಸಲಿದ್ದಾರೆ. ಯಾತ್ರಾರ್ಥಿಗಳ ಸುರಕ್ಷಿತೆಯ ಹೊಣೆ ನಿರ್ವಹಿಸಲಿರುವರು. ಯಾತ್ರಿರ್ಥಿಗಳ ವಾಹನಗಳ ನಿಲುಗಡೆಯ ವ್ಯವಸ್ಥೆಯ ಮೇಲ್ವಿಚಾರಣೆಯನ್ನು ನುರಿತ ಗೃಹರಕ್ಷದಳ ಹಾಗೂ ಇತರ ಸಿಬಂಧಿಗಳು ನಿರ್ವಹಿಸಲಿರುವರು. ಕಾಬೆಟ್ಟು ದ್ವಾರದ ಮೂಲಕ ಬರುವ ವಾಹನಗಳ ದಟ್ಟಣೆಯಿಂದ ಭಕ್ತಾಧಿಗಳಿಗೆ ಆಗುವ ಅಡಚಣೆಯನ್ನು ನಿವಾರಿಸಲು, ಪುಲ್ಕೇರಿಯಿಂದ ದೂಪದಕಟ್ಟೆ ಮೂಲಕ ವಾಹನಗಳನ್ನು ಕಳುಹಿಸಿ ದೂಪದಕಟ್ಟೆ ದ್ವಾರ ಪ್ರವೇಶಿಸುವಾಗ ಎಡಬದಿಗೆ ವಿಸ್ತಾರವಾದ ವಾಹನ ನಿಲುಗಡೆ ಸ್ಥಳ, ಗಾರ್ಡನ್ ಹೌಸ್ ಹತ್ತಿರ ತಿರುವಿನಲ್ಲಿ ಎಡಬದಿಯಲ್ಲಿ, ಹಾಗೂ ಗಾರ್ಡನ್ ಹೌಸ್ ದಾಟಿದ ನಂತರ ಎಡಬದಿಯಲ್ಲಿ ವಾಹನ ನಿಲುಗಡೆಗೆ ಅವಾಕಾಶ ಕಲ್ಪಿಸಲಾಗಿದೆ. ಕೊಡಂಗೆ ಶ್ರೀ ರೋಬರ್ಟ್ ನೊರೋನ್ಹರವರ ತನಕ ರಿಕ್ಷಾ ಸಂಚಾರಕ್ಕೆ ಅವಕಾಶವಿದೆ. ಅದರ ಮುಂದಕ್ಕೆ ವಾಹನಗಳಿಗೆ ಪ್ರವೇಶವಿಲ್ಲ.ಕಾಬೆಟ್ಟು ಕಡೆಯಿಂದ ಬರುವ ವಾಹನಗಳಿಗೆ ಪ್ರಸಾದ್ ಟೈಲರ್ ಜಂಕ್ಷನ್ ದಾಟಿ ಮುಂದೆ ಬರುವಾಗ ಬಲಬದಿಯಲ್ಲಿ ಸಂತ ಲಾರೆನ್ಸ್ ಧರ್ಮಕೇಂದ್ರದ ಆಡಳಿತಕ್ಕೊಳಪಟ್ಟ ಸಂತ ಲಾರೆನ್ಸ್ ಹೈಸ್ಕೊಲ್ ಶಾಲಾ ಆಟದ ವಿಶಾಲವಾದ ಮೈದಾನವನ್ನು ಸಂಪೂರ್ಣವಾಗಿ ವಾಹನ ನಿಲುಗಡೆಗಾಗಿಯೇ ಕಾದಿರಿಸಲಾಗಿದೆ.


ವೆಹಿಕಲ್ ಪಾಸ್ ಹೊಂದಿದ ವಾಹನ ಚಾಲಕರು ತಮ್ಮ ವಾಹನಗಳನ್ನು ಕಾಬೆಟ್ಟು - ಅತ್ತೂರು ಕ್ವಾನ್ವೆಂಟ್ ಮಾರ್ಗವಾಗಿ ತಂದು ಎಡಬದಿಯ ಪಂಚಾಯತ್ ಶೌಚಾಲಯದ ಬಳಿ ಎಡಕ್ಕೆ ತಿರುಗಿ ಮುಂದೆ ಸಾಗಿ ಬಲಬದಿಯ BSNL MOBILE TOWER ಬಳಿ ಮುಂದೆ ಸಾಗಿ ಎಡಕ್ಕೆ ತಿರುಗಿ V.I.P. ಹಾಗೂ ಇತರ PASS HOLDER ಗಳಿಗಾಗಿ ನಿರ್ಮಿಸಿದ ವಿಶಾಲವಾದ ಪಾರ್ಕಿಂಗ್ ವಠಾರದಲ್ಲಿ ವಾಹನಗಳನ್ನು ನಿಲ್ಲಿಸಲು ವ್ಯವಸ್ಥೆಗೊಳಿಸಲಾಗಿದೆ. ವೆಹಿಕಲ್ ಪಾಸ್ ಹೊಂದಿದ ವಾಹನಗಳು, ನಿಲುಗಡೆ ಮಾಡಿದ ವಾಹನಗಳಿಗೆನಿಲುಗಡೆ ಸ್ಥಳದಿಂದ ಮುಂದೆ ಸಾಗಿ ಏಕಮುಖ ಕಾಂಕ್ರಿಟ್ ರಸ್ತೆಯ ಮೂಲಕ ಕಾರ್ಕಳ-ಪಡುಬಿದ್ರಿ ರಸ್ತೆಗೆ ಸಂಪರ್ಕ ಕಲ್ಪಿಸಲಾಗಿದೆ. ಪೋಲಿಸ್ ಸಿಬಂದಿ ವಾಹನಗಳಿಗೆ ಹಾಗೂ ತುರ್ತು ಚಿಕ್ಸಿತ್ಸಾ ವಾಹನಗಳಿಗೆ ಬಿಟ್ಟರೆ ಬೇರೆ ಯಾವುದೇ ವಾಹನಗಳಿಗೆ ಬಸಿಲಿಕಾದ ವಠಾರಕ್ಕೆ ಪ್ರವೇಶವಿಲ್ಲ.


ಬಸಿಲಿಕದ ವಠಾರದಲ್ಲಿ ಬಸಿಲಿಕದ ಅಧಿಕೃತ ಸ್ಟಾಲ್ನಲ್ಲಿ ಮಾತ್ರ ಮೊಂಬತ್ತಿ ಮಾರಾಟ ಮಾಡಲಾಗಿದೆ. ಬಸಿಲಿಕಾದ ವಠಾರದಲ್ಲಿ ಮೊಂಬತ್ತಿ ಮಾರಟ ಸಂಪೂರ್ಣವಾಗಿ ನಿಷೇದಿಸಲಾಗಿದೆ. ಸಾರ್ವಜನಿಕರ ಹಾಗೂ ಭಕ್ತಾಧಿಗಳ ಸುಗಮ ಸಂಚಾರಕ್ಕಾಗಿ ದೂಪದಕಟ್ಟೆಯಿಂದ ಪ್ರಸಾದ್ ಟೈಲರ್ ಜಂಕ್ಷನ್ವರೆಗೆ ರಸ್ತೆಯ ಎರಡೂ ಕಡೆಯ ಅಂಚಿನಿಂದ ಕ್ರಮವಾಗಿ ಕನಿಷ್ಟ 5 ಅಡಿ ಜಾಗ ಬಿಟ್ಟು ಅಂಗಡಿ ಮುಂಗಟ್ಟು ನಿರ್ಮಿಸುವಂತೆ ಸ್ಥಳೀಯ ನಿಟ್ಟೆ ಗ್ರಾಮ ಪಂಚಾಯತ್ ಆಡಳಿತ ಮಂಡಳಿಗೆ ತಿಳಿಸಲಾಗಿದೆ. ಇದು ಸುರಕ್ಷೆಯ ದೃಷ್ಠಿಯಿಂದ ಹಾಗೂ ರಸ್ತೆಯಲ್ಲಿ ಹಾದುಹೋಗುವ ಯಾವುದೇ ವ್ಯಕ್ತಿಗೆ ದೈಹಿಕ ಕಿರುಕುಳಆಗದಂತೆ ತಡೆಯಲು ಅತೀ ಆವಶ್ಯಕವಾಗಿದೆ.


ಎಕಶಿಲಾ ಕಲ್ಲಿನಿಂದ ಕೆತ್ತಿದ ಸಂತ ಲಾರೆನ್ಸರ ಅತೀ ದೊಡ್ಡ ಹೊಸ ಮೂರ್ತಿಯನ್ನು ಬಸಿಲಿಕದ ಬಲಬದಿಯಲ್ಲಿ ಪ್ರತಿಷ್ಟಾಪಿಸಲಾಗಿದೆ. ಶಿಲಾ ಕಲ್ಲಿನಿಂದ ಕೆತ್ತಿದ ಸಂತ ಲಾರೆನ್ಸರ ಪ್ರತಿಮೆ ಇಟಲಿ ದೇಶದ ರೋಮ್ ಪ್ರಾಂತ್ಯದಲ್ಲಿ ಹಾಗೂ ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾದಲ್ಲಿ ಬಿಟ್ಟರೆ ಬೆರೆಲ್ಲೂ ಕಾಣಸಿಗುವುದಿಲ್ಲ. ಎಕಶಿಲಾ ಕಲ್ಲಿನಿಂದ ಕೆತ್ತಿದ ಸಂತ ಲಾರೆನ್ಸರ ಹೊಸ ಮೂರ್ತಿಯನ್ನು ನವ್ಮಿೂೀ ಸಂತ ಲಾರೆನ್ಸರ ಪುಷ್ಕರಣಿಯಲ್ಲಿ ಪ್ರತಿಷ್ಟಾಪಿಸಲಾಗಿದೆ. ಬಸಿಲಿಕದಲ್ಲಿ ಪುಷ್ಕರಣಿ ಹಾಗೂ ಪುಷ್ಕರಣಿಯಲ್ಲಿ ಸಂತ ಲಾರೆನ್ಸರ ಎಕಶಿಲಾ ಪ್ರತಿಮೆ ಇಲ್ಲಿ ನವ್ಮಿೂ ಅತ್ತೂರು ಸಂತ ಲಾರೆನ್ಸ್ ಬಸಿಲಿಕದಲ್ಲಿ ಬಿಟ್ಟರೆ ಪ್ರಪಂಚದಲ್ಲಿ ಬೇರೆಲ್ಲೂ ಕಾಣಸಿಗುವುದಿಲ್ಲ ಎಂದರು.


ಸುದ್ದಿಗೋಷ್ಠಿಯಲ್ಲಿ ಸಹಾಯಕ ಧರ್ಮಗುರು ವಂ|ಲ್ಯಾರಿ ಪಿಂಟೊ, ಆಧ್ಯಾತ್ಮಿಕ ನಿರ್ದೇಶಕ ಉಪಾಧ್ಯಕ್ಷ ವಂ|ಸಂತೋಷ್ ಡಿಸಿಲ್ವಾ, ಕಾರ್ಯದರ್ಶಿ ರೊನಾಲ್ಡ್ ನೊರೊನ್ಹಾ, ಪದಾಧಿಕಾರಿಗಳಾದವಂದೀಶ್ ಮಥಾಯಸ್, ಪ್ರಕಾಶ್ ಪಿಂಟೊ, ರಿತೇಶ್ ಪಿಂಟೊ, ರೋಶನ್ ಸಾಲಿಸ್ ಉಪಸ್ಥಿತರಿದ್ದರು.

ಕುರಿಯ ಹಿ ಪ್ರಾ ಶಾಲೆ ನೂತನ ವಿವೇಕ ಕೊಠಡಿ ಉದ್ಗಾಟನೆ

Posted by Vidyamaana on 2023-12-26 20:17:28 |

Share: | | | | |


ಕುರಿಯ ಹಿ ಪ್ರಾ ಶಾಲೆ  ನೂತನ ವಿವೇಕ ಕೊಠಡಿ ಉದ್ಗಾಟನೆ

ಪುತ್ತೂರು: ಕುರಿಯ ಸರಕಾರಿ ಹಿ ಪ್ರಾ ಶಾಲೆ ಇಲ್ಲಿ‌ನಿರ್ಮಾಣವಾದ ನೂತನ ವಿವೇಕ ಕೊಠಡಿಯನ್ನು ಶಾಸಕರಾದ ಅಶೋಕ್ ರೈ ಉದ್ಘಾಟಿಸಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಹೆಚ್ಚು ಪ್ರತಿಭಾವಂತರಾಗಿದ್ದು ಸೂಕ್ತ ಅವಕಾಶ ಕಲ್ಪಿಸಿದ್ದಲ್ಲಿ ಅವರು ದೊಡ್ಡ ಸಾಧಕರಾಗಬಹುದು ಎಂದು ಶಾಸಕರು ಹೇಳಿದರು.

ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಣಣವನ್ನು ನೀಡಲಾಗುತ್ತದೆ. ಮಕ್ಕಳಿಗೆ ಶಾಲೆ ಮತ್ತು ಮನೆಯಲ್ಲಿ ಉತ್ತಮ ವಾತಾವರಣ‌ನಿರ್ಮಾಣವಾಗಬೇಕು.ಶಾಲೆಯಲ್ಲಿರುವ ಶಿಕ್ಷಕರು ಸಮನ್ವಯತೆಯಿಂದ ಕೆಲಸವನ್ನು ಮಾಡಬೇಕು. ಸಮನ್ವಯತೆ ಕೊರತೆಯ ಬಗ್ಗೆ ಅನೇಕ‌ದೂರುಗಳು ಕೇಳಿ ಬರುತ್ತಿದ್ದು ಆ ರೀತುಯಾಗದಂತೆ ಶಿಕ್ಷಕರುಗಳು ಎಚ್ಚರವಹಿಸಬೇಕಿದೆ ಎಂದು ಹೇಳಿದರು.


ಗ್ಯಾರಂಟಿ ಯೋಜನೆ ಮಕ್ಕಳ ಶಿಕ್ಣಣಕ್ಕೆ ಬಳಕೆ

ಸರಕಾರದ ಐದು ಗ್ಯಾರಂಟಿ ಯೋಜನೆಯು ಮಕ್ಕಳ ಶಿಕ್ಷಣಕ್ಕೆ ಬಳಕೆಯಾಗುತ್ತಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ. ಮಹಿಳೆಯರ ಕೈ ಗಟ್ಟಿ ಮಾಡುವ ಉದ್ದೇಶ ಈ ಗ್ಯಾರಂಟಿ ಯೋಜನೆಯ ಮೂಲ ಉದ್ದೇಶವಾಗಿದೆ ಎಂದು ಹೇಳಿದರು.

ಗ್ರಾಪಂ ಸದಸ್ಯರಾದ ಬೂಡಿಯಾರ್ ಪುರುಷೋತ್ತಮ ರೈಯವರು ಮಾತನಾಡಿ ಸರಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸುವ ಮೂಲಕ ಸರಕಾರಿ ಶಾಲೆಯನ್ನು ಉಳಿಸುವ ಕೆಲಸವನ್ನು ಮಾಡಬೇಕು. ಮನೆಯೊಂದರಲ್ಲಿ ಆರಂಭವಾದ ಕುರಿಯ ಸರಕಾರಿ ಶಾಲೆ ಆ ಬಳಿಕ ಮುಳಿ ಹುಲ್ಲಿನ ಮಾಡಿನ ಶಾಲೆಯಾಗಿ ರೂಪುಗೊಂಡು ಆ ಬಳಿಕ ಉತ್ತರೋತ್ತರ ಅಭಿವೃದ್ದಿ ಹೊಂದಿದೆ. ಸಾವಿರಾರು ಮಕ್ಕಳು ವಿದ್ಯೆ ಕಲಿತ ಈ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿರುವುದು ಬೇಸರದ ವಿಚಾರವಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಆರ್ಯಾಪು ಗ್ರಾಪಂ ಅಧ್ಯಕ್ಷೆ ಗೀತಾ, ಗ್ರಾಪಂ ಸದಸ್ಯರುಗಳಾದ ಬೂಡಿಯಾರ್ ಪುರುಷೋತ್ತಮ ರೈ, ಯಾಕೂಬ್ ಕುರಿಯ, ನಾಗೇಶ್ ಎಂ, ಕಲಾವತಿ, ಎಸ್ ಡಿ ಎಂ ಸಿ ಅಧ್ಯಕ್ಷ ಅಬ್ದುಲ್ ಜಬ್ಬಾರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್ ,ಕ್ಲಸ್ಟರ್ ಸಿಆರ್ ಪಿ ಪರಮೇಶ್ವರಿ, ನಿವೃತ್ತ ಬ್ಯಾಂಕ್ ಮೆನೆಜರ್ ನಾರಾಯಣ ರೈ, ಶಿಕ್ಷಕಿಯರಾದ  ಮಮತಾ, ರಶ್ಮಿತಾ ,ರಮ್ಯ, ಸಮದ್ ಕುರಿಯಮತ್ತಿತರರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕರಾದ ನವೀನ್ ಕುಮಾರ್ ಕೆ ಸ್ವಾಗತಿಸಿದರು. ಶಿಕ್ಷಕಿ ಕುಮಾರಿ ಕವಿತಾ ವಂದಿಸಿದರು. ದಿವ್ಯಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.

ಅಯೋಧ್ಯಾ ಕರಸೇವಕ ನಟ್ಟೋಜ ಶಿವಾನಂದ ರಾವ್ ಅವರಿಗೆ ಪುತ್ತಿಲ ಪರಿವಾರದಿಂದ ಸನ್ಮಾನ

Posted by Vidyamaana on 2024-01-23 13:57:19 |

Share: | | | | |


ಅಯೋಧ್ಯಾ ಕರಸೇವಕ ನಟ್ಟೋಜ ಶಿವಾನಂದ ರಾವ್ ಅವರಿಗೆ ಪುತ್ತಿಲ ಪರಿವಾರದಿಂದ ಸನ್ಮಾನ

ಪುತ್ತೂರು: ಪುತ್ತೂರಿನ  ಹಿರಿಯ ಅಯೋಧ್ಯಾ ಕರಸೇವಕರಾದ ನಟ್ಟೋಜ ಶಿವಾನಂದ ರಾವ್‌ ಅವರನ್ನು ಪುತ್ತಿಲ ಪರಿವಾರದಿಂದ ಸನ್ಮಾನಿಸಲಾಯಿತು.


ನಟ್ಟೋಜ ಶಿವಾನಂದ ರಾವ್ ಅವರು ಪುತ್ತೂರಿನ ಹಳ್ಳಿ ಹಳ್ಳಿ ತಿರುಗಿ ರಾಮ ಜನ್ಮ ಭೂಮಿಯ ಜಾಗೃತಿ ಮೂಡಿಸಿರುವುದರ ಜತೆಗೆ ಶ್ರೀರಾಮ ಶಿಲಾಪೂಜನ ಸಮಿತಿ ಪುತ್ತೂರು ಪ್ರಖಂಡದ ಮಾಜಿ ಅಧ್ಯಕ್ಷರು, ಪುತ್ತೂರು ನಗರ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷರೂ ಆಗಿದ್ದರು. ಅಯೋಧ್ಯೆ ಈ ಸಂದರ್ಭ ಅವರ ಪುತ್ರ, ಪುತ್ತೂರು ಅಂಬಿಕಾ ವಿದ್ಯಾಲಯದ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ಕಾರ್ಯದರ್ಶಿ ಉಮೇಶ್ ವೀರಮಂಗಲ, ರೂಪೇಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Recent News


Leave a Comment: