Posted by vidyamaana on 2024-07-24 08:25:31 | Last Updated by Vidyamaana on 2024-07-24 08:25:31
ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಲಾರಿ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ
ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.
Posted by Vidyamaana on 2023-05-06 12:25:24 |
ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮೇ 8ರಂದು ಸಂಜೆ 3.30ಕ್ಕೆ ಬೊಳುವಾರಿನಿಂದ ದರ್ಬೆವರೆಗೆ ರೋಡ್ ಶೋ ನಡೆಯಲಿದ್ದು, ನಟಿ ರಮ್ಯಾ ಭಾಗವಹಿಸಲಿದ್ದಾರೆ ಎಂದು ಅಶೋಕ್ ಕುಮಾರ್ ರೈ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ರೀತಿಯ ರೋಡ್ ಶೋ ವಿಟ್ಲ ಹಾಗೂ ಉಪ್ಪಿನಂಗಡಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ನನ್ನ ಬೂತ್-ನಾನು ಅಭ್ಯರ್ಥಿ
ಕಾಂಗ್ರೆಸ್ ಪಕ್ಷದ ವತಿಯಿಂದ “ನನ್ನ ಬೂತ್-ನಾನು ಅಭ್ಯರ್ಥಿ” ಎಂಬ ಶಿರೋನಾಮೆಯಡಿ ತಾಲೂಕಿನ 220 ಬೂತ್ಗಳಲ್ಲಿ ಮತ ಪ್ರಚಾರ ಕಾರ್ಯಕ್ರಮ ಶನಿವಾರದಿಂದ ಹಮ್ಮಿಕೊಳ್ಳಲಾಗಿದೆ. ಸುಮಾರು 5 ಸಾವಿರ ಕಾರ್ಯಕರ್ತರು ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಹೇಳಿದರು.
ಈಗಾಗಲೇ ಬಿಡುಗಡೆ ಮಾಡಲಾದ ಪ್ರಣಾಳಿಕೆಯಂತೆ 200 ಯೂನಿಟ್ ಉಚಿತ ವಿದ್ಯುತ್, 10 ಕೆ.ಜಿ.ಅಕ್ಕಿ, ಉಚಿತ ಬಸ್ ಪಾಸ್ ನೀಡಿಕೆ ಸಹಿತ ಪುತ್ತೂರಿನಲ್ಲಿ ಬಹುದಿನಗಳ ಬೇಡಿಕೆಯಾದ ಮೆಡಿಕಲ್ ಕಾಲೇಜು ಸ್ಥಾಪನೆ ಮುಂತಾದವುಗಳನ್ನೊಳಗೊಂಡು ಕಾಂಗ್ರೆಸ್ ಹಿಂದೆ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಮನೆ ಮನೆ ತಲುಪಿಸುವ ಕಾರ್ಯ ಮಾಡಲಾಗಿದೆ. ಈಗಾಗಲೇ ಒಲವು ಕಂಡಿದ್ದು, ಬಹುಮತದಿಂದ ನನ್ನನ್ನು ಗೆಲ್ಲಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಅನಿಮಲ್ ಹಬ್:
ಈಗಾಗಲೇ ಕೊಯಿಲದಲ್ಲಿ ಪಶು ವೈದ್ಯಕೀಯ ಕಾಲೇಜು ಕಟ್ಟಡಗಳಿದ್ದು, 240 ಹುದ್ದೆಗಳು ಖಾಲಿ ಇದೆ. ಇವುಗಳನ್ನು ತುಂಬುವುದರ ಜತೆಗೆ ಕೊಯಿಲದಲ್ಲಿ ಕೋಳಿ ಆಡು ಸಾಕಣೆಗೆ ಹೆಚ್ಚಿನ ಒತ್ತು ನೀಡಿ ಎನಿಮಲ್ ಹಬ್ ನ್ನಾಗಿ ಪರಿವರ್ತಿಸಲಾಗುವುದು ಎಂದರು.
ಉಳಿದಂತೆ ಡ್ರೈನೆಜ್ ವ್ಯವಸ್ಥೆ, ಕಟ್ ಕನ್ವರ್ಷನ್, ಸಿಂಗಲ್ ಲೇ ಓಟ್ ಅಪ್ರೂವಲ್ ಸಮಸ್ಯೆಗಳನ್ನು ಸರಿಪಡಿಸಲಾಗುವುದು ಎಂದ ಅವರು, ತಾಲೂಕಿನಲ್ಲಿ ಈಗಾಗಲೇ 3800 94 ಸಿ. ಅಕ್ರಮ-ಸಕ್ರಮ ಕಡತ ವಿಲೇವಾರಿಗೆ ಬಾಕಿಯಿದ್ದು, ಈ ಕುರಿತು ಪ್ರತೀ ಗ್ರಾಮಗಳಲ್ಲಿ ಸಭೆ ನಡೆಸಿ ಹಕ್ಕುಪತ್ರವನ್ನು ಮನೆ ಮನೆ ತಲುಪಿಸುವ ಕಾರ್ಯವನ್ನು ನಾನು ಗೆದ್ದು ಬಂದಲ್ಲಿ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.
ಮಾನನಷ್ಟ ಮೊಕದ್ದಮೆ:
ಈಗಾಗಲೇ ನನ್ನ ಮೇಲೆ ಆರೋಪ ಹೊರಿಸಿರುವ ತಮ್ಮಣ್ಣ ಶೆಟ್ಟಿಯವರ ಮೇಲೆ ಕೇಸು ದಾಖಲಿಸಿದ್ದು, ಮೂರು ಕೋಟಿ ಮಾನನಷ್ಟ ಮೊಕ್ಕದ್ದಮೆ ಹಾಕಲಾಗಿದೆ ಎಂದರು.
ಹೈಕಮಾಂಡ್ ಅಭಿಪ್ರಾಯದಂತೆ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಕುರಿತು ಸೇರಿಸಿದ್ದಾರೆ. ಈ ಕುರಿತು ನಮ್ಮ ವಿಚಾರವನ್ನು ಮುಂದಿನ ದಿನಗಳಲ್ಲಿ ತಿಳಿಸುವ ಕೆಲಸವನ್ನು ನಾವು ಮಾಡುತ್ತೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ವಕ್ತಾರ ಅಮಲ ರಾಮಚಂದ್ರ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ., ಚುನಾವಣಾ ಏಜೆಂಟ್ ಭಾಸ್ಕರ ಗೌಡ ಕೋಡಿಂಬಾಳ ಉಪಸ್ಥಿತರಿದ್ದರು.
Posted by Vidyamaana on 2024-01-13 21:19:22 |
ಬಳ್ಳಾರಿ: ನಗರದ ಕಪ್ಪಗಲ್ಲು ರಸ್ತೆಯಲ್ಲಿ ವಾಣಿಜ್ಯ ಮಳಿಗೆಗಳಲ್ಲಿ ಇಂದು ಬೆಳಗಿನಜಾವ ಕಳ್ಳರು ಸರಣಿಗಳ್ಳತ ನಡೆಸಿ ಸಾವಿರಾರು ರೂ ನಗದನ್ನು ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ.ಈ ರಸ್ತೆಯಲ್ಲಿ ಮೆಡ್ ಪ್ಲಸ್ ನಲ್ಲಿ 24880 ರೂ, ಸಾಯಿ ಇಂದಿರಾ ಮೆಡಿಕಲ್ ಸ್ಟೋರ್ ನಲ್ಲಿ 8000 ರೂ, ಕನಕ ದುರ್ಗಮ್ಮ ಪ್ರಾವಿಷನ್ ಸ್ಟೋರ್ ನಲ್ಲಿ ಒಂದು ಸಾವಿರ ರೂ ಮತ್ತು ವಿಜಯ ರಾಮ ಸೂಪರ್ ಮಾರ್ಕೇಟ್ ನಲ್ಲಿ 17 ಸಾವಿರ ರೂ ನಗದು ದೋಚಿದ್ದಾರೆ.ಈ ಬಗ್ಗೆ ಗಾಂಧಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳರು ಮುಖಕ್ಕೆ ವಾಸ್ಕ್ ಧರಿಸಿಕೊಂಡು, ಬ್ಯಾಟರಿ ಹಿಡಿದುಕೊಂಡು, ಮಳಿಗೆಯ ಷಟರ್ ನಿಂದ ಒಳಗೆ ನುಗ್ಗಿ, ಕ್ಯಾಸ್ ಕೌಂಟರ್ ತೆಗೆದು ಹಣ ಲಪಟಾಯಿಸಿದ್ದಾರೆ.
ಮಳಿಗೆಗಳ ಷಟರ್ ಗಳನ್ನು ಹಾರೆಗಳಿಂದ ಮೀಟಿ ತೆಗೆಯಲಾಗಿದೆ ಇದೆಲ್ಲ ಸಿಸಿ ಕೆಮೆರಾಗಳಲ್ಲಿ ರೆಕಾರ್ಡ್ ಆಗಿದೆ. ಸ್ಥಳಕ್ಕೆ ಪೊಲೀಸರು ಬಂದು ಹೋಗಿದ್ದಾರೆ. ಕಳ್ಳರನ್ನು ಪತ್ತೆ ಹಚ್ಚಬೇಕಿದೆ.
Posted by Vidyamaana on 2024-05-01 20:56:24 |
ಹುಬ್ಬಳ್ಳಿ: ಲೋಕಸಭಾ ಚುನಾವಣೆ ಕಾರಣಕ್ಕಾಗಿ ನಾವು ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದೇವೆ. ನಾವು ಮಹಿಳೆಯರ ಜೊತೆಗೆ ದೌರ್ಜನ್ಯ ಎಸಗುವವರೊಂದಿಗೆ ಅಲ್ಲ. ಪ್ರಜ್ವಲ್ ರೇವಣ್ಣ ಅವರಿಗೆ ಕಠೋರ ಶಿಕ್ಷೆಯಾಗಬೇಕು. ಅದಕ್ಕೆ ನಾವು ಬೆಂಬಲಿಸುತ್ತೇವೆ ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.ನಗರದಲ್ಲಿ ನಡೆದಂತ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಲೋಕಸಭಾ ಚುನಾವಣೆಗಾಗಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲಾಯಿತು. ಮೈತ್ರಿ ಮಾಡಿಕೊಂಡ ನಂತ್ರ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಹೊರ ಬಂದಿದೆ ಎಂದರು.
Posted by Vidyamaana on 2023-08-19 02:43:09 |
ಪುತ್ತೂರು: ಶಾಂತಿಗೋಡು, ಉಪ್ಪಿನಂಗಡಿ ಎಕ್ಸ್ಪ್ರೆಸ್, ಕಾಂಚನ, ಉಪ್ಪಿನಂಗಡಿ, ರಾಮಕುಂಜ, ಕೆದಿಲ, ಕಬಕ ಮತ್ತು ವಾಟರ್ ಸಪ್ಲೈ ಪೀಡರ್ನಲ್ಲಿ ಆ. 19ರಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಲ್ಲಿ ಯುಜಿ ಕೇಬಲ್ ಕಾಮಗಾರಿ ಹಾಗೂ ವಿದ್ಯುತ್ ಮಾರ್ಗ ನಿರ್ವಹಣೆ ಹಿನ್ನೆಲೆಯಲ್ಲಿ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಶಾಂತಿಗೋಡು, ಉಪ್ಪಿನಂಗಡಿ ಎಕ್ಸ್ಪ್ರೆಸ್, ಕಾಂಚನ, ಉಪ್ಪಿನಂಗಡಿ, ರಾಮಕುಂಜ, ಕೆದಿಲ, ಕಬಕ ಮತ್ತು ವಾಟರ್ ಸಪ್ಲೈ ಪೀಡರ್ನಿಂದ ವಿದ್ಯುತ್ ಸರಬರಾಜಾಗುವ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ.
ಉಪ್ಪಿನಂಗಡಿ, ಹಿರೇಬಂಡಾಡಿ, ಬಜತ್ತೂರು, ಕೊಯಿಲ, ರಾಮಕುಂಜ, ನೆಕ್ಕಿಲಾಡಿ, ಶಾಂತಿಗೋಡು, ಬಲ್ನಾಡು, ಬನ್ನೂರು, ಕಬಕ, ಪಡ್ನೂರು, ಕೋಡಿಂಬಾಡಿ, ಬೆಳ್ಳಿಪ್ಪಾಡಿ, ಚಿಕ್ಕಮುಡ್ನೂರು, ನರಿಮೊಗರು, ಕೊಡಿಪ್ಪಾಡಿ ಮತ್ತು ಕಸಬಾ ಗ್ರಾಮಗಳ ವಿದ್ಯುತ್ ಬಳಕೆದಾರರು ಗಮನಿಸುವಂತೆ ಪ್ರಕಟಣೆ ತಿಳಿಸಿದೆ.
Posted by Vidyamaana on 2024-05-22 07:33:00 |
ಬೆಳ್ತಂಗಡಿ , ಮೇ.21: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ(Harish Poonja) ವಿರುದ್ದ ಮತ್ತೊಂದು ಎಫ್ಐಆರ್(FIR) ದಾಖಲಾಗಿದೆ. ಮೇ.20ರಂದು ಬೆಳ್ತಂಗಡಿ(Belthang
non
y) ತಾಲೂಕು ಕಚೇರಿ ಎದುರು ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ ಬೆಳ್ತಂಗಡಿ ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ದ. ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆಂದು ಬೆದರಿಕೆ ಹಾಕಿದ್ದರು.ಜೊತೆಗೆ ಬೆಳ್ತಂಗಡಿ ಠಾಣಾ ಪೊಲೀಸ್ ನಿರೀಕ್ಷಕರಿಗೆ ಮತ್ತು ಇತರೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಅವ್ಯಾಚ ಶಬ್ದಗಳಿಂದ ನಿಂದಿಸಿದ್ದರು. ಇದೀಗ ಪೊಲೀಸರಿಗೆ ಜೀವ ಬೆದರಿಕೆ ಒಡ್ಡಿದ ಹಾಗೂ ತಾಲೂಕು ಕಚೇರಿಗೆ ಬರುವ
Posted by Vidyamaana on 2024-02-05 15:54:33 |
ಪುತ್ತೂರು: ಬೊಳುವಾರಿನಲ್ಲಿರುವ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫೆ.6ರಂದು ಸಾಯಂಕಾಲ 5.30ರಿಂದ ಉಚಿತ ಲೇಸರ್ ಸ್ಟೋನ್ ಕ್ಯಾಂಪ್ ನಡೆಯಲಿದೆ.
ಖ್ಯಾತ ಮೂತ್ರಶಾಸ್ತ್ರಜ್ಞ ಡಾ. ಅಭೀಷ್ ಹೆಗ್ಡೆರವರು ತಪಾಸಣೆ ನಡೆಸಲಿದ್ದಾರೆ. ಈ ಆನ್ ಲೈನ್ ನ್ಯೂಸ್ ಸಂದರ್ಭದಲ್ಲಿ ಎಲ್ಲಾ ರೀತಿಯ ಮೂತ್ರ ಕಲ್ಲಿನ ಮತ್ತು ಪ್ರಾಸ್ಟೇಟ್ನ ಲೇಸರ್ ಚಿಕಿತ್ಸೆಗೆ ಸಂಬಂದಪಟ್ಟ ತಪಾಸಣೆ ನಡೆಯಲಿದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನೋಂದಾವಣೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9449991115, 9188656671ಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.